ಲೇಖಕ: admin

ವಿರಾಜಪೇಟೆ ನ.29 NEWS DESK :  ಕೊಡವ ಸಮಾಜಗಳ ಒಕ್ಕೂಟದಿಂದ ಬಾಳುಗೋಡುವಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಾಂಸ್ಕೃತಿಕ ಕೇಂದ್ರದಲ್ಲಿ ಆಯೋಜಿತ ವಾರ್ಷಿಕ ‘ಕೊಡವ ನಮ್ಮೆ’ಗೆ ಗುರುವಾದ ವಿದ್ಯುಕ್ತ ಚಾಲನೆ ನೀಡಲಾಯಿತು. ಮುಂದಿನ ಮೂರು ದಿನಗಳ ಕಾಲ ಬಾಳೂಗೋಡುವಿನಲ್ಲಿ ಕೊಡವ ನಮ್ಮೆ ಪ್ರಯುಕ್ತ ಕೊಡವ ಸಮಾಜಗಳ ನಡುವಣ ಹಾಕಿ ಪಂದ್ಯಾವಳಿ, ಹಗ್ಗಜಗ್ಗಾಟ ಸ್ಪರ್ಧೆ, ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ, ಕೊಡವ ಆಟ್ ಪಾಟ್ ಪೈಪೋಟಿಗಳು ನಡೆಯಲಿವೆ. ‘ಕೊಡವ ನಮ್ಮೆ’ಯ ಪ್ರಯುಕ್ತ ಆಯೋಜಿತ ಹಾಕಿ ಪಂದ್ಯಾವಳಿಗೆ, ಚಾಮುಂಡಿ ದೇವಸ್ಥಾನ ಮತ್ತು ಮೈದಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ, ಸ್ಟಿಕ್‍ನಿಂದ ಚೆಂಡನ್ನು ತಳ್ಳುವ ಮೂಲಕ ಶಾಸಕರು ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ, ಕೊಡವ ಸಮುದಾಯ ಸಂಘಟನೆಯ ಮೂಲಕ ಒಗ್ಗಟ್ಟನ್ನು ಕಂಡುಕೊಳ್ಳುವ ಮೂಲಕ ಮುನ್ನಡೆಯಬೇಕು, ಇಂತಹ ಕ್ರೀಡಾ ಚಟುವಟಿಕೆಗಳು ಸಮುದಾಯ ಬಾಂಧವರೆಲ್ಲರು ಒಂದಾಗಿ ಬೆರೆಯಲು ಸಹಕಾರಿಯಾಗಿದೆ. ಕೊಡವ ಸಮಾಜಗಳ ಒಕ್ಕೂಟವು ಸಮುದಾಯ ಬಾಂಧವರೆಲ್ಲರನ್ನು ಒಟ್ಟಾಗಿಸುವ ಮೂಲಕ ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ…

Read More

ಮಡಿಕೇರಿ ನ.28 NEWS DESK : ಕೃಷಿ ಯಾಂತ್ರೀಕರಣ ಯೋಜನೆಯಡಿ ಸಹಾಯಧನದಲ್ಲಿ ವಿತರಿಸಲಾಗುವ ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, 5 ಎಚ್.ಪಿ ಡೀಸೆಲ್ ಎಂಜಿನ್, ಕಳೆಕೊಚ್ಚುವ ಯಂತ್ರ, ಎಚ್‍ಟಿಪಿ ಸಿಂಪರಣಾ ಯಂತ್ರ ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹೆಚ್.ಡಿ.ಪಿ.ಇ ಪೈಪ್‍ಗಳನ್ನು ರೈತ ಫಲಾನುಭವಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ಅವರು ವಿರಾಜಪೇಟೆಯಲ್ಲಿ ಗುರುವಾರ ವಿತರಿಸಿದರು. ಬಳಿಕ ಮಾತನಾಡಿದ ಅವರು, ಕೃಷಿ ಇಲಾಖೆಯ ವತಿಯಿಂದ ರೈತರಿಗೆ ಸಹಾಯಧನದಲ್ಲಿ ಕೃಷಿ ಯಂತ್ರೋಪಕರಣ ಪಡೆಯಲು ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಕೃಷಿಗೆ ಅಗತ್ಯವಾಗಿರುವ ಉಪಕರಣಗಳನ್ನು ಸಹಾಯಧನದಲ್ಲಿ ಪಡೆದುಕೊಳ್ಳುವಂತೆ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಬಳಸುವುದರಿಂದ ರೈತರಿಗೆ ಕಡಿಮೆ ವೆಚ್ಚದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಹಾಗೂ ಕೂಲಿ ಕಾರ್ಮಿಕರ ಅಭಾವವನ್ನು ನೀಗಿಸುವಲ್ಲಿ ಸಹಕಾರವಾಗುವುದು ಎಂದು ತಿಳಿಸಿದರು. ವಿತರಿಸಲಾದ ಕೃಷಿ ಉಪಕರಣಗಳ ವಿವರ ಇಂತಿದೆ: ಪವರ್ ಟಿಲ್ಲರ್ 4, 5 ಹೆಚ್.ಪಿ ಡೀಸೆಲ್ ಎಂಜಿನ್ 10,…

Read More

ಮಡಿಕೇರಿ ನ.28 NEWS DESK  : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಆರ್.ಸಿ.ಹೆಚ್ ವಿಭಾಗ ಮಡಿಕೇರಿ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದ ಸಂಯುಕ್ತ ಆಶ್ರಯದಲ್ಲಿ “ನ್ಯುಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಜಿಲ್ಲಾ ಮಟ್ಟದ ಸಾಮಾಜಿಕ ಜಾಗೃತಿ ಮತ್ತು ಕ್ರಿಯಾ ಅಭಿಯಾನವು ನಗರದ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ನಡೆಯಿತು. ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಮಧುಸೂಧನ್ ಅವರು ಎಸ್‍ಎಎಎನ್‍ಎಸ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ, ನವೆಂಬರ್, 12 ರಿಂದ 2025 ರ ಫೆಬ್ರವರಿ, 28 ರವರೆಗೆ ವಿಶ್ವದಾದ್ಯಂತ ವಿಶ್ವ ನ್ಯೂಮೋನಿಯಾ ದಿನವನ್ನು (SAANS)ಆಚರಿಸಲಾಗುತ್ತಿದೆ. ಎಸ್‍ಎಎಎನ್‍ಎಸ್ 3 ತಿಂಗಳ ಅರಿವು ಕಾರ್ಯಕ್ರಮವಾಗಿದೆ. ನ್ಯುಮೋನಿಯಾ ಎಂಬುದು ಬ್ಯಾಕ್ಟೀರಿಯಾ, ವೈರಸ್‍ಗಳು ಅಥವಾ ಶಿಲೀಂದ್ರಗಳಿಂದ ಉಂಟಾಗುವ ಶ್ವಾಸಕೋಶದ ಸೋಂಕು. ಈ ಸೋಂಕಿಗೆ ಪ್ರತಿರಕ್ಷಣಾ ವ್ಯವಸ್ಥೆಯ ಪ್ರತಿಕ್ರಿಯೆಯು ಶ್ವಾಸಕೋಶದ ಗಾಳಿಯ ಚೀಲಗಳು ಕೀವು ಮತ್ತು ದ್ರವಗಳಿಂದ ತುಂಬಲು ಕಾರಣವಾಗುತ್ತದೆ. ಎಸ್‍ಎಎಎನ್‍ಎಸ್‍ವು ಉಸಿರಾಟ. ದೇಹಕ್ಕೆ ಉಸಿರಾಟ ಎಷ್ಟು…

Read More

ಮಡಿಕೇರಿ ನ.28 NEWS DESK : ಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ವಿವಿಧ ಇಲಾಖೆಗಳಡಿ ಅಲ್ಪಸಂಖ್ಯಾತರಿಗಾಗಿ ಇರುವ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ನಿರ್ದೇಶನ ನೀಡಿದರು. ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ತಂತ್ರಜ್ಞಾನ ತರಬೇತಿ ಮೂಲಕ ಕೌಶಲ್ಯ ಕಾರ್ಯಕ್ರಮ ತಲುಪಿಸುವುದು, ಆರ್ಥಿಕ ಚಟುವಟಿಕೆ ಬಲಪಡಿಸಲು ಸಾಲ ಸೌಲಭ್ಯ ಕಲ್ಪಿಸುವುದು, ನಾಗರಿಕ ಸೇವೆಗಳ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು, ವಸತಿ ಯೋಜನೆ, ಅಲ್ಪಸಂಖ್ಯಾತರ ಜೀವನ ಮಟ್ಟ ಸುಧಾರಿಸಲು ವಸತಿ ಯೋಜನೆ ಕಲ್ಪಿಸುವುದು, ಹೀಗೆ ಹಲವು ಕಾರ್ಯಕ್ರಮಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು ಅವರು ಮಾಹಿತಿ ನೀಡಿ ಇಲಾಖೆಯಿಂದ ಪೂರಕ ಪೌಷ್ಠಿಕ ಆಹಾರ ಕಲ್ಪಿಸುವುದು, ಪ್ರಧಾನಮಂತ್ರಿ ಅವರ ಮಾತೃವಂದನಾ ಯೋಜನೆ ತಲುಪಿಸುವುದು ಸೇರಿದಂತೆ…

Read More

ಮಡಿಕೇರಿ ನ.28 NEWS DESK : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಶಿಶು ಮತ್ತು ತಾಯಿ ಮರಣ ನಿಯಂತ್ರಣ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಶಿಶು ಮತ್ತು ತಾಯಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇರಬೇಕು. ಉತ್ತಮ ಆರೋಗ್ಯವಿದ್ದಲ್ಲಿ ಕುಟುಂಬ ನಿರ್ವಹಣೆ ಚೆನ್ನಾಗಿರುತ್ತದೆ. ಇದರಿಂದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲೆಡೆ ಆರೋಗ್ಯ ಮತ್ತು ಶುಚಿತ್ವ ಬಗ್ಗೆ ಜಾಗೃತಿ ಮೂಡಿಸಬೇಕು. 5 ವರ್ಷದೊಳಗಿನ ಮಕ್ಕಳಿಗೆ ಕಾಲಕಾಲಕ್ಕೆ ಚುಚ್ಚುಮದ್ದು ಕೊಡಿಸುವಂತಾಗಲು ಅರಿವು ಮೂಡಿಸಬೇಕು. ಹಾಗೆಯೇ ಗರ್ಭಿಣೀಯರು ಸಹ ಕಾಲ ಕಾಲಕ್ಕೆ ಆರೋಗ್ಯ ಪರಿಶೀಲಿಸಿಕೊಳ್ಳಬೇಕು ಎಂದರು. ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಜುಲೈ ಮಾಹೆಯಿಂದ ಅಕ್ಟೋಬರ್ ಅಂತ್ಯದವರೆಗೆ 5 ವರ್ಷದೊಳಗಿನ…

Read More

*Prime commercial property in Heart of Madikeri City College Road with 3 floors RCC building and  top floor having roofing done with jindal sheets totaling 4 floors. Each floor having 1000 sq ft  totalling 4000 sq ft. Ground floor rented  to Sangeetha mobiles with a rent of Rs 80000 per month.  The first floor is rented to a restaurant and chats centre with a rent of 20000. The second floor is vacant currently and few enquiries have been received. Third floor roofing done with jindal SS material as part of waterproofing. Can be let out also. Total covered  area in 4 floors 4000 sq ft.*…

Read More

ಮಡಿಕೇರಿ ನ.28 NEWS DESK : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ನ.30 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುವ ಕೊಡಗು ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ(ಕೆಡಿಪಿ) ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಸುಂಟಿಕೊಪ್ಪ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Read More

ರಾಂಚಿ ನ.28 NEWS DESK : ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ಗುರುವಾರ ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಂಚಿಯ ಮೊರಾಬಾಡಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು 49 ವರ್ಷದ ಬುಡಕಟ್ಟು ನಾಯಕ ಸೊರೆನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ರಾಂಚಿಯಲ್ಲಿ ನಡೆದ ಈ ಭವ್ಯ ಸಮಾರಂಭದಲ್ಲಿ ಇಂಡಿಯಾ ಬ್ಲಾಕ್ ನಾಯಕರು ಸಹ ಭಾಗವಹಿಸಿದ್ದರು.

Read More

ಮಂಡ್ಯ NEWS DESK ನ.28 : ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಡಿಂಕಾ ಗ್ರಾಮದಲ್ಲಿ ಸೀಮೆ ಹಸುವೊಂದು ಮೂರು ಕರುಗಳಿಗೆ ಜನ್ಮ ನೀಡಿದೆ. ಗ್ರಾಮಸ್ಥ ಕಂಠಿ ಶಿವಣ್ಣ (ಚಂದ್ರು) ಎಂಬುವವರಿಗೆ ಸೇರಿದ ಹಸು ಇದಾಗಿದೆ. ಮೂರೂ ಹೆಣ್ಣು ಕರುಗಳಾಗಿದ್ದು, ಹಸು ಹಾಗೂ ಕರುಗಳು ಆರೋಗ್ಯವಾಗಿವೆ.

Read More