ಮಡಿಕೇರಿ ಮೇ 1 NEWS DESK : ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದಲ್ಲಿ ಮೇ 3 ರಿಂದ ಮೇ 6ರ ವರಗೆ ಶ್ರೀ ಮಾರಿಯಮ್ಮ ಕರಗೋತ್ಸವ ನಡೆಯಲಿದೆ. ಮೇ 3 ರಂದು ಪಂಪಿನ ಕೆರೆಯಿಂದ ಶ್ರೀ ಕಂಚಿ ಕಾಮಾಕ್ಷಿಯಮ್ಮ, ಶ್ರೀ ಮುತ್ತು ಮಾರಿಯಮ್ಮ ಬೇವಿನ ಸೊಪ್ಪಿನ ಕರಗಗಳು ಶೃಂಗಾರಗೊಂಡು ಸಂಜೆ ಅಲ್ಲಿಂದ ವಿಶೇಷ ಪೂಜೆಯ ನಂತರ ಮೆರವಣಿಗೆ ಮೂಲಕ ಹೊರಟು ಮುಖ್ಯಬೀದಿಗಾಗಿ ದೇವಾಲಯ ಸೇರಲಿದೆ. ಮೇ 4 ಮತ್ತು 5 ರಂದು ದೇವಾಲಯದಲ್ಲಿ ಶ್ರೀ ಮಾರಿಯಮ್ಮ ಕರಗಗಳಿಗೆ ವಿಶೇಷ ಪೂಜೆ ನಡೆಯಲಿದ್ದು, ಮೇ 6 ರಂದು ಬುಧವಾರ ಕರಗಗಳ ವಿಸರ್ಜನೋತ್ಸವ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವಂತೆ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ಸಮಿತಿ ಮನವಿ ಮಾಡಿದೆ. ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಹಿಂದಿನ ಕಾಲದಿಂದಲೂ ಆಚರಿಸಿಕೊಂಡು ಬರುತ್ತಿದ್ದ ಶ್ರೀ ಮಾರಿಯಮ್ಮ ಬೇವಿನ ಸೊಪ್ಪಿನ ಕರಗೋತ್ಸವ ನಾಡಿನಲ್ಲಿ ಭೀಕರ ಸಾಂಕ್ರಾಮಿಕ ರೋಗಗಳನ್ನು ತಡೆಕಟ್ಟಲು ಈ…
ಲೇಖಕ: admin
ಮಡಿಕೇರಿ ಮೇ 1 NEWS DESK : ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಕೊಡವ ಕುಟುಂಬಗಳ ನಡುವೆ ಮೂರ್ನಾಡಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜಿತ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ಯ ಫೈನಲ್ಸ್ ಪಂದ್ಯದಲ್ಲಿ ಚೆಕ್ಕೇರ ತಂಡ 9ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಮಹಿಳಾ ಕ್ರಿಕೆಟ್ನಲ್ಲಿ ಹರಿಹರ ಮುಕ್ಕಾಟಿರ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಇದೇ ಮೊದಲ ಬಾರಿಗೆ ಫೈನಲ್ ಹಂತ ಪ್ರವೇಶಿಸಿದ ಕೆದಮಳ್ಳೂರು ಮಾಳೇಟಿರ ಕುಟುಂಬದ ಪುರುಷರ ತಂಡ ಹಾಗೂ ಮಣವಟ್ಟಿರ ಕುಟುಂಬದ ಮಹಿಳಾ ತಂಡ ರನ್ನರ್ಸ್ ಸ್ಥಾನವನ್ನು ತಮ್ಮದಾಗಿಸಿಕೊಂಡವು. *ರೋಚಕ ಪಂದ್ಯಾಟ* ಬೆಳಗೆ ನಡೆದ ಮಹಿಳಾ ತಂಡದ ಫೈನಲ್ ಪಂದ್ಯದಲ್ಲಿ ಮೊದಲಿಗೆ ಟಾಸ್ ಗೆದ್ದ ಮಣವಟ್ಟಿರ ತಂಡ ಬ್ಯಾಟಿಂಗ್ ಅಯ್ದುಕೊಂಡಿತು. ಆರಂಭದಲ್ಲೇ ಅತ್ಯುತ್ತಮ ಹೋರಾಟಕ್ಕೆ ಇಳಿದ ಮಣವಟ್ಟಿರ ಮಹಿಳಾ ಆಟಗಾರರು ನಿಗಧಿತ 6 ಓವರ್ ಮುಕ್ತಾಯಕ್ಕೆ ರನ್ ಔಟ್ನಲ್ಲಿ 1 ವಿಕೆಟ್ ಕಳೆದುಕೊಂಡು 41 ರನ್ ಗಳಿಸಿ, ಎದುರಾಳಿ ಹರಿಹರ ಮುಕ್ಕಾಟಿರ…
ಗೋಣಿಕೊಪ್ಪ ಮೇ 1 NEWS DESK : ಕೃಷಿ ವಿಜ್ಞಾನ ಕೇಂದ್ರದಲ್ಲಿ ವೈಜ್ಞಾನಿಕ ಆಧಾರಿತ ಪೋಷಕಾಂಶ ಕುರಿತು ಕಾಫಿ ಬೆಳೆಗಾರರಿಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಭಾಗವಹಿಸಿದ 62 ಕಾಫಿ ಬೆಳೆಗಾರರಿಗೆ ಮತ್ತು ರೈತರಿಗೆ ವೈಜ್ಞಾನಿಕ ಆಧಾರಿತ ರಸಗೊಬ್ಬರ ಬಳಕೆಯ ಮಹತ್ವವನ್ನು, ಮಣ್ಣಿನ ಆರೋಗ್ಯ ಸುಧಾರಣೆ, ಸಸ್ಯಗಳ ರೋಗನಿರೋಧಕ ಶಕ್ತಿ ಹೆಚ್ಚಳ, ಉತ್ಪಾದಕತೆ ವೃದ್ಧಿ ಹಾಗೂ ಆಮದು ಅವಲಂಬನೆ ಕಡಿತ ಸಾಧ್ಯವಾಗುವುದನ್ನು ತಜ್ಞರು ವಿವರಣೆ ನೀಡಿದರು. ವಿಶೇಷವಾಗಿ ಜೈವಿಕ ಗೊಬ್ಬರಗಳ ಬಳಕೆ ಮತ್ತು ವರ್ಮಿಕಂಪೋಸ್ಟ್, ಜೀವಾಮೃತ, ಪಂಚಗವ್ಯ, ನೀಂ ಕೇಕ್, ಹೊಂಗೆ ಕೇಕ್, ಟ್ರೈಕೋಡರ್ಮಾ ಇವುಗಳನ್ನು ಬಳಸಿ ಮಣ್ಣಿನ ಆರ್ಗಾನಿಕ್ ಕಾರ್ಬನ್, ಜೀವ ವೈವಿಧ್ಯತೆಯನ್ನು ಹೆಚ್ಚಿಸಬಹುದು ಎಂದು ತಿಳಿಸಲಾಯಿತು. ಸೂಕ್ಷ್ಮ ಪೋಷಕಾಂಶಗಳ ಮಹತ್ವವನ್ನು ವಿವರಿಸಿ, “ಹಿಡನ್ ಹಂಗರ್” ಸಮಸ್ಯೆಯನ್ನುತಪ್ಪಿಸಲು ಮತ್ತು ಸಮತೋಲನ ಪೋಷಣೆಯನ್ನುಒದಗಿಸಲು ಮಾಹಿತಿ ನೀಡಲಾಯಿತು. ಪೊನ್ನಂಪೇಟೆತಾಲೂಕು ಸಹಾಯಕ ಕೃಷಿ ನಿರ್ದೇಶಕದೊರೈರಾಜ್, ಕೊಡಗು ಕೃಷಿ ಇನ್ಪುಟ್ಡೀಲರ್ಸ್ ಸಂಘದಅಧ್ಯಕ್ಷ ನಂದಕುಮಾರ್, ಸೇರಿದಂತೆಕೇಂದ್ರದ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಇದ್ದರು.
ಮಡಿಕೇರಿ ಮೇ 1 NEWS DESK : ಪ್ರಾಚೀನ ಕೊಡವ ಸಾಂಪ್ರದಾಯಿಕ ಆವಾಸಸ್ಥಾನದ ಪ್ರಾದೇಶಿಕ ಮಿತಿಯೊಳಗೆ ಪ್ರತ್ಯೇಕ ಕೊಡವ ಪಾರ್ಲಿಮೆಂಟ್ ಮತ್ತು ಅಸೆಂಬ್ಲಿ ಕ್ಷೇತ್ರಗಳ ಸ್ಥಾಪನೆ, ಅಥವಾ ಪರ್ಯಾಯವಾಗಿ ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ” ಚುನಾವಣಾ ಕ್ಷೇತ್ರದ ಮಾದರಿಯಲ್ಲಿ ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ ಕೊಡವರಿಗಾಗಿ ಪ್ರತ್ಯೇಕ ಅಮೂರ್ತ ಕೊಡವ ಪಾರ್ಲಿಮೆಂಟ್ ಮತ್ತು ಅಸೆಂಬ್ಲಿ ಕ್ಷೇತ್ರಗಳನ್ನು ರಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯಲು ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಿಂದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಅಭಿಯಾನವನ್ನು ಆರಂಭಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ತಲಕಾವೇರಿಯಲ್ಲಿ ಧಾರ್ಮಿಕ ಪ್ರಾರ್ಥನೆ ಸಲ್ಲಿಸಿ ಕೊಡವರ ಸಾಂವಿಧಾನಿಕ ಉದ್ದೇಶಕ್ಕಾಗಿ ದೈವಿಕ ಆಶೀರ್ವಾದವನ್ನು ಕೋರಿದ ಸದಸ್ಯರು ಮಾನವ ಸರಪಳಿ ಮೂಲಕ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಸಿಎನ್ಸಿ ಬೇಡಿಕೆಗಳ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆಯಲು ಮೇ 12 ರಿಂದ 48 ಗಂಟೆಗಳ ಹಗಲು-ರಾತ್ರಿ ಶಾಂತಿಯುತ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಎನ್.ಯು.ನಾಚಪ್ಪ ತಿಳಿಸಿದರು.…
ಮಡಿಕೇರಿ NEWS DESK ಮೇ 1 : ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಜಂಬೂರು ಗ್ರಾಮದ ಶ್ರೀ ಮುತ್ತಪ್ಪನ್ ಸೇವಾ ಸಮಿತಿ ವತಿಯಿಂದ ಮೇ 2 ರಂದು ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ) ಜರುಗಲಿದೆ. ಸಂಜೆ 4 ಗಂಟೆಗೆ ಮುತ್ತಪ್ಪ ದೇವರ ಮಲೆ ಇಳಿಸುವುದು, 6 ಗಂಟೆಗೆ ಮುತ್ತಪ್ಪ ದೇವರ ವೆಳ್ಳಾಟಂ (ಕೋಲ) ಹಾಗೂ 8 ಗಂಟೆಗೆ ಅನ್ನದಾನ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಎನ್.ಸಿ.ಸುದರ್ಶನ್ ತಿಳಿಸಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳುವಂತೆ ಮನವಿ ಮಾಡಿದ್ದಾರೆ.
ಕುಶಾಲನಗರ ಏ.30 NEWS DESK : ಆರ್ಯವೈಶ್ಯ ಕುಲದೇವತೆ ಶ್ರೀಮದ್ ವಾಸವಿ ಕನ್ನಿಕಾಪರಮೇಶ್ವರಿ ದೇವಿಯ ಜಯಂತಿಯ ಅಂಗವಾಗಿ ವಾಸವಿ ಮಾತೆಗೆ 13 ದಂಪತಿಗಳು ಪುಷ್ಪಾರ್ಚನೆ ನೆರವೇರಿಸಿದರು. ಕುಶಾಲನಗರದ ರಥಬೀದಿಯಲ್ಲಿ ಇರುವ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಕಾರ್ಯಕ್ರಮ ವಾಸವಿ ದೀಕ್ಷಾ ಸಮಿತಿ ನೇತೃತ್ವದಲ್ಲಿ ಜರುಗಿತು. ಇದೇ ವೇಳೆ ದೀಕ್ಷಾ ಸಮಿತಿ ಅಧ್ಯಕ್ಷ ಕೆ.ಜೆ.ಚಿನ್ನಸ್ವಾಮಿ ಮಾತನಾಡಿ, ಪ್ರತಿ ವರ್ಷವೂ ಕುಶಾಲನಗರದ ಎಲ್ಲ ಆರ್ಯವೈಶ್ಯ ಕುಲಭಾಂದವರು ತಮ್ಮ ವ್ಯಾಪಾರ ವಹಿವಾಟು ಬಂದ್ ಮಾಡಿ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡುತ್ತೇವೆ. 7 ದಿನಗಳು ದೇವಿಗೆ ವಿಶೇಷ ಪೂಜೆಯನ್ನು ಮಾಡಲಾಗುತ್ತದೆ. ಅದೇ ರೀತಿ ನಮ್ಮ ಸಮಿತಿಯಿಂದ ದೇವಿಗೆ ದಂಪತಿಗಳಿಂದ ವಿಶೇಷ ಪೂಜೆ ಸಲ್ಲಿಸಲಾಗಿದೆ. ಇದಕ್ಕೆ ಆರ್ಯವೈಶ್ಯ ಮಂಡಳಿ ಮತ್ತು ಇತರೇ ಸಂಘಗಳ ಪದಾಧಿಕಾರಿಗಳು ಸಹಕಾರ ನೀಡಿದ್ದಾರೆ. ವಾಸವಿ ದೀಕ್ಷಾ ಸಮಿತಿಯ ಕಾರ್ಯದರ್ಶಿ ಬಿ.ಎಲ್.ಸತೀಶ್, ಖಾಜಾಂಚಿ ವಾಣಿಶ್ರೀ, ನಿರ್ದೇಶಕರಾದ ಡಿ.ಎಸ್.ರಮೇಶ್, ವಿ.ಆರ್. ಮಂಜುನಾಥ್, ಎಸ್.ಎಂ.ಸತೀಶ್, ಬಿ.ಪಿ.ಕೃಷ್ಣಮೂರ್ತಿ, ಕೆ.ಎಸ್.ನಾಗೇಶ್, ನಾಗಮಣಿ ಮತ್ತು ಕುಲಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು, ಏ.30 NEWS DESK : ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ ಅದಾಲತ್ನ್ನು ಆಗಸ್ಟ್ 21, 22 ಮತ್ತು 23 ರಂದು ಮೂರು ದಿನಗಳ ಕಾಲ ಹಮ್ಮಿಕೊಂಡಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಸಿವರಾಮನ್ ತಿಳಿಸಿದರು. ಇಂದು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸುಪ್ರೀಂ ಕೋರ್ಟ್ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಒಟ್ಟು 4,328 ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಸಂಧಾನಕ್ಕಾಗಿ ಗುರುತಿಸಿ ಈ ವಿಶೇಷ ಲೋಕ ಅದಾಲತ್ ಆಯೋಜಿಸಿದ್ದು, ಆಸಕ್ತಿವುಳ್ಳವರು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ನೋಂದಣಿಗೆ ಸಹ ಅವಕಾಶ ಕಲ್ಪಿಸಲಾಗಿದೆ. ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸುವ ಮೂಲಕ ಸಾರ್ವಜನಿಕರು ತಮ್ಮ…
ಮಡಿಕೇರಿ ಏ.30 NEWS DESK : ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರ ಪೋನ್ಇನ್ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಗುರುವಾರ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ಒಂದು ಗಂಟೆಗಳ ಕಾಲ ನಡೆದ ನೇರ ಪೋನ್ಇನ್ ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತ 16 ಕ್ಕೂ ಹೆಚ್ಚು ಜನ ದೂರವಾಣಿ ಮೂಲಕ ಕರೆ ಮಾಡಿ ಭೂಮಿ ದುರಸ್ತಿ, ರಸ್ತೆ ಸರಿಪಡಿಸುವುದು, ಕುಡಿಯುವ ನೀರು ಪೂರೈಕೆ, ಬೀದಿ ದೀಪ ಅಳವಡಿಕೆ, ಮತ್ತಿತರ ಮೂಲ ಸೌಲಭ್ಯ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಒಳಗೊಂಡ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಆರಂಭದಲ್ಲಿ ಕರೆ ಮಾಡಿದ ವಿರಾಜಪೇಟೆ ತಾಲ್ಲೂಕಿನ ಕೋತೂರು ಗ್ರಾಮದ ಗಣೇಶ್ ಕುಮಾರ್ ಅವರು ಎಫ್ಐಡಿ ಗುರುತಿನ ಚೀಟಿ ಇಲ್ಲದೆ ರಸಗೊಬ್ಬರ ಖರೀದಿಸಲು ತೊಂದರೆಯಾಗಿದೆ. ಆದ್ದರಿಂದ ಆರ್ಟಿಸಿ ಒದಗಿಸುವಂತಾಗಬೇಕು ಎಂದು ಕೋರಿದರು. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಅವರು ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಿಲ್ಲ. ಆತಂಕ ಪಡುವ ಅಗತ್ಯವೂ ಇಲ್ಲ ಎಂದರು. ಸುಂಟಿಕೊಪ್ಪ ಬಳಿಯ ಏಳನೇ ಹೊಸ ಕೋಟೆಯ…
ನಾಪೋಕ್ಲು ಏ.30 NEWS DESK : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವದ ಸಮ್ಮಿಲನ 2026 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ ಮಡಿಕೇರಿಯ ಶ್ರೀ ಕೋಟೆ ಗಣಪತಿ ದೇವಾಲಯದಲ್ಲಿ ನಡೆಯಿತು. ಕೊಡಗು ಜಿಲ್ಲಾ ಕುಲಾಲ ಕುಂಬಾರ ಬಾಂಧವರಿಗೆ ಕ್ರೀಡೋತ್ಸವ ಕೊಡಗು ಜಿಲ್ಲಾ (ಕುಂಬಾರ)ರ ಸಂಘ (ರಿ)ಮಡಿಕೇರಿ ಇದರ ನೇತೃತ್ವದಲ್ಲಿ ಜಿಲ್ಲಾ ಯುವ ಘಟಕ ಮತ್ತು ಜಿಲ್ಲಾ ಮಹಿಳಾ ಘಟಕದ ಸಹಯೋಗದೊಂದಿಗೆ ಮೇ 16 , 17 ದಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡಿನ ಕೆಳಗಿನ ಮೈದಾನದಲ್ಲಿ ಆಯೋಜಿಸಲಾಗಿದೆ. ಆಮಂತ್ರಣ ಪತ್ರಿಕೆಗೆ ಬಿಡುಗಡೆ ಮಾತನಾಡಿದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಅಧ್ಯಕ್ಷರಾದ ಲಯನ್ ಕೆ.ಕೆ.ದಾಮೋದರ್ ಅವರು ಮಾತನಾಡಿ, ಕೊಡಗು ಜಿಲ್ಲೆಯ ಕುಲಾಲ ಕುಂಬಾರ ಬಾಂಧವರ ಇದು ಎರಡನೇ ವರ್ಷದ ಕಾರ್ಯಕ್ರಮವಾಗಿದೆ. ಈ ವರ್ಷವೂ ಬಹಳ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗುವುದು. ತಾರೀಕು 16ರಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಓಂಕಾರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕ್ರೀಡಾ ಜ್ಯೋತಿಯೊಂದಿಗೆ ಮೈದಾನಕ್ಕೆ ಕಾಲ್ನಡಿಗೆಯ ಮೂಲಕ ಸಾಗಿ ಗಣ್ಯರ ಸಮ್ಮುಖದಲ್ಲಿ…
ಭಾಗಮಂಡಲ ಏ.20 NEWS DESK : ನವೀಕರಣಗೊಂಡ ಭಾಗಮಂಡಲ, ತಾವುರೂ ಗ್ರಾಮದ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು. ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ಏ.25ರಿಂದ ಪ್ರಾರಂಭವಾದ ದೇವಸ್ಥಾನದ ಜೀರ್ಣೋದ್ಧಾರದ ಕಲಶೋೀತ್ಸವದಲ್ಲಿ, ಬೆಟ್ಟದಿಂದ ದೇವರು ತರುವುದು, ಗ್ರಾಮ ಸಂಸ್ಕøತಿ ಕುರಿತು ಮಕ್ಕಳಿಂದ ಹೀಲಿಯಾಟ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ ಪ್ರಸಾದ, ಶುದ್ದಿ ವಾಸ್ತು ರಣೋಜ್ಞ ಹೋಮ, ವಾಸ್ತು ಬಲಿ, ಗಣಪತಿ ಹೋಮ,ಬಿಂಬಶುದ್ದಿ, ಕಲಶಾಭಿಷೇಕ, ದ್ವಾರಪ್ರಾಯಶ್ಚಿತ ಹೋಮ, ಹೋಮ ಕಲಶಾಭಿಷೇಕ, ದುರ್ಗಾ ನಮಸ್ಕಾರ ಪೂಜೆ, ಲಲಿತ ಸಹಸ್ರನಾಮ ಪಾರಾಯಣ, ಶಾಂತಿ ಹೋಮಗಳು, ಬ್ರಹ್ಮಕಲಶ, ಮಂಟಪ ಸಂಸ್ಕಾರ, ಕುಂಬೇಶ ಕರ್ಕರಿ ಕಲಶಪೂಜೆ, ಅಧಿವಾಸ ಹೋಮ, ಪರಿಕಲಶ ಪೂಜೆ, ತತ್ವ ಕಲಶ ಪೂಜೆ, ತತ್ವ ಹೋಮ, ತತ್ವ ಕಲಸಾಭಿಷೇಕ,, ಅನುಜ್ಞಾ ಕಲಶಾಭಿಷೇಕ, ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ,, ಬ್ರಹ್ಮಕಲಶಾಭಿಷೇಕ,, ಮಂತ್ರಾಕ್ಷತೆ, ಶ್ರೀ ಬಲಿ ಸೇವಾ ಸುತ್ತುಗಳು, ನೃತ್ಯಬಲಿ, ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ಐದು ದಿನಗಳ…






