ಮಡಿಕೇರಿ ಮೇ 26 NEWS DESK : ಕುಶಾಲನಗರ ತಾಲೂಕಿನಲ್ಲಿ ನಮ್ಮೂರ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ. `ನಮ್ಮೂರ ಶಾಲೆ ನಮ್ಮದು ನಮ್ಮೂರಲ್ಲೆ ಉಳಿಯಲಿ’ ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಎಐಡಿಎಸ್ಓ ನೇತೃತ್ವದಲ್ಲಿ ಚಿಕ್ಕತ್ತೂರು, ಮದಲಾಪುರ ಶಾಲೆಗಳ ಮುಂದೆ ಬ್ಯಾನರ್ ಕಟ್ಟಿ ಶಾಲೆ ಮುಚ್ಚುವ ಕ್ರಮಕ್ಕೆ ಪ್ರತಿರೋಧ ವ್ಯಕ್ತಪಡಿಸಿದರು. ಈ ಸಂದರ್ಭ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಸಂಚಾಲಕಿ ಸ್ವಾತಿ ಮಾತನಾಡಿ, ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ಸರ್ಕಾರಿ ಶಾಲೆ ಉಳಿಸಿ ಎಂದು ಹೋರಾಟ ಮಾಡುವ ದುಸ್ಥಿತಿ ಬಂದಿದೆ. ಕರ್ನಾಟಕ ಯಾವುದೇ ಪಕ್ಷದ ಶಾಸಕರು ಸರ್ಕಾರಿ ಶಾಲೆ ಮುಚ್ಚುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸಿಲ್ಲ. ಸದನದಲ್ಲಿ ಒಂದೇ ಒಂದು ಮಗು ಇದ್ದರೂ ಶಾಲೆ ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಒಂದೇ ಒಂದು ಮಗು ಇರುವ ಶಾಲೆಗಳ ಪಟ್ಟಿಯನ್ನು ಸರ್ಕಾರ ನೀಡಲಿ. ತಾಲೂಕಿನ ಕೆಲ ಗ್ರಾಮಗಳಲ್ಲಿ ಮೋಸದಿಂದ ಸರ್ಕಾರಿ ಶಾಲೆಗಳನ್ನು…
ಲೇಖಕ: admin
ಮಡಿಕೇರಿ ಮೇ 26 NEWS DESK : ಕೊಡಗು ಜಿಲ್ಲೆಯಲ್ಲಿರುವ ಸುಮಾರು 60 ಸಾವಿರಕ್ಕೂ ಅಧಿಕ ನಿವೇಶನ ರಹಿತ ಬಡವರಿಗೆ ತಲಾ 5 ಸೆಂಟ್ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿ ಮೇ 29 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಕೆ.ಮೊಣ್ಣಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅವರು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಮತ್ತು ನವ ಕರ್ನಾಟಕ ನಿರ್ಮಾಣ ಆಂದೋಲನ ಸಮಿತಿ ವತಿಯಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಹಳೇ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೇಡಿಕೆಗಳನ್ನು ಮಂಡಿಸಲಾಗುವುದು ಎಂದರು. ಪ್ರತಿಭಟನೆಯಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ರಾಜ್ಯ ಸಂಯೋಜಕ ಗೋಪಿನಾಥ್, ಖಜಾಂಚಿ ಆರ್.ಮುನಿಯಪ್ಪ, ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ, ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಹೆಚ್.ಡಿ.ಬಸವರಾಜು,…
ಮಡಿಕೇರಿ NEWS DESK ಮೇ 26 : ದೇವಟ್ ಪರಂಬ್ ನಲ್ಲಿ ವಂಚನೆಯಿoದ ಹತ್ಯೆಗೊಳಗಾದ ಕೊಡವ ಯೋಧರಿಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಗೌರವ ಅರ್ಪಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ಭೇಟಿ ನೀಡಿದ ಪ್ರಮುಖರು ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿ ಇತಿಹಾಸದ ದುರ್ಘಟನೆಗೆ ವಿಷಾದ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು ದೇವಟ್ ಪರಂಬು ಹತ್ಯಾಕಾಂಡವು ಕೊಡವರ ಇತಿಹಾಸದಲ್ಲಿ ಒಂದು ಮರೆಯಲಾಗದ ಮತ್ತು ಕ್ಷಮಿಸಲಾಗದ ದುರಂತವಾಗಿದೆ. ಘಟನೆಗೆ ಸಾಂತ್ವನವಾಗಿ ದೇವಟ್ಪರಂಬ್ ನಲ್ಲಿ ಅಂತರಾಷ್ಟ್ರೀಯ ಹೋಲೋಕಾಸ್ಟ್ ಸ್ಮಾರಕವನ್ನು ನಿರ್ಮಿಸಬೇಕು ಮತ್ತು ಕೊಡವ ಜನಾಂಗೀಯ ಹತ್ಯೆಯನ್ನು ಯುಎನ್ಒ ಅಂತರರಾಷ್ಟಿçÃಯ ಹೋಲೋಕಾಸ್ಟ್ ಸ್ಮರಣಾರ್ಥ ಪಟ್ಟಿಯಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದರು. ಈ ಮಹಾನ್ ಮಾನವ ಹಾನಿಗಳನ್ನು ಸರಿದೂಗಿಸಲು, ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರಗಳು) ಸೂಕ್ತ ಶಾಸಕಾಂಗ ವ್ಯವಸ್ಥೆಯ ಮೂಲಕ ಸಾಂವಿಧಾನಿಕ ಪರಿಹಾರವನ್ನು ಆರಂಭಿಸಬೇಕು. ವಿಶ್ವಪ್ರಸಿದ್ಧ ಅರ್ಥಶಾಸ್ತçಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಂದೆ ಸಲ್ಲಿಸಿರುವ ಅರ್ಜಿಯಲ್ಲಿ ಪ್ರತಿಪಾದಿಸಿರುವಂತೆ “ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ”ಯಾಗಿ…
ಸುಂಟಿಕೊಪ್ಪಮೇ 25 NEWS DESK : ಸುಂಟಿಕೊಪ್ಪದಲ್ಲಿ ವರ್ಕ್ ಶಾಪ್ ಮಾಲೀಕರ ಸಂಘದ ವತಿಯಿಂದ ಹಿರಿಯ ಪತ್ರಕರ್ತರು, ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಸಿ.ದಿನೇಶ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಸುಂಟಿಕೊಪ್ಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು.
ಮಡಿಕೇರಿ ಮೇ 25 NEWS DESK : ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆಯು ಸೋಮವಾರಪೇಟೆಯಲ್ಲಿ ನಡೆಯಿತು. ಸೋಮವಾರಪೇಟೆಯ ಖಾಸಗಿ ಸಭಾಂಗಣದಲ್ಲಿ, ಸಂಘದ ಅಧ್ಯಕ್ಷರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘವು ಪುನಃಶ್ಚತನಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಾಫಿ ಮತ್ತು ಇತರೆ ಪ್ಲಾಂಟೇಷನ್ ಬೆಳೆ ಉತ್ಪನ್ನಗಳ ಮೌಲ್ಯವೃದ್ಧೀಕರಣದಲ್ಲಿ ಸಂಘದ ಪಾತ್ರ ಮತ್ತು ಚಟುವಟಿಕೆಗಳನ್ನು ನಿರ್ಧರಿಸುವ ಬಗ್ಗೆ ವಿಚಾರ ಸಂಕೀರ್ಣ ನಡೆಸುವ ಬಗ್ಗೆ ತೀರ್ಮಾನ ಕೈಗೊಂಡು, ಇಂದಿನ ದಿನಗಳಲ್ಲಿ ಸಂಘವು ಮತ್ತಷ್ಟು ಲಾಭ ಹಾಗೂ ಯಶಸ್ಸಿನೊಂದಿಗೆ ಮುಂದುವರೆಯಲು ಕಾರ್ಯತಂತ್ರ ಹಾಗೂ ಯೋಜನೆಗಳನ್ನು ರೂಪಿಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ, ಉಪಾಧ್ಯಕ್ಷರು ಪ್ರಭುದೇವ, ಸದಸ್ಯರು, ನಿರ್ದೇಶಕರು, ವಿಚಾರ ಸಂಕೀರ್ಣದ ವೇದಿಕೆ ಅಧ್ಯಕ್ಷರು ಶ್ರೀ ಎನ್. ಬೋಸ್ ಮಂದಣ್ಣ, ಪ್ರಮುಖರು ಚಂದ್ರಕಲಾ, ಯಾಕೂಬ್, ಕಾಫಿ…
ಮಡಿಕೇರಿ ಮೇ 25 NEWS DESK : ಕೊಡಗು ಜಿಲ್ಲೆಯ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾಮದ ಅಯ್ಯಪ್ಪ ಭದ್ರಕಾಳಿ ದೇವಸ್ಥಾನದಲ್ಲಿ ಮೇ, 27 ಮತ್ತು 28 ರಂದು ನಡೆಯುವ ಬೇಡು ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಮೇ, 28 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವರಪುರ ಗ್ರಾಮದ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.
ಮಡಿಕೇರಿ ಮೇ 26 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್ನಲ್ಲಿ ಮೇ, 26 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಮುತ್ತಾರ್ಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕುಶಾಲನಗರ ಮೇ 26 NEWS DESK : ಜೂನ್ ತಿಂಗಳ ತಾ.23 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಹಮ್ಮಿಕೊಂಡಿರುವ ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಗಳನ್ನು ಸಮ್ಮೇಳನಾಧ್ಯಕ್ಷರಾದ ವಿರಾಜಪೇಟೆ ತಾಲ್ಲೂಕು ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅರಮೇರಿ ಮಠದ ಆವರಣದಲ್ಲಿ ಬಿಡುಗಡೆ ಮಾಡಿದರು. ಶರಣ ಸಾಹಿತ್ಯ ಸಮ್ಮೇಳನ ಜಿಲ್ಲೆಯ ಸರ್ವಜನರ ಸಮ್ಮೇಳನ ವಾಗಿ ರೂಪುಗೊಳ್ಳಬೇಕಿದೆ. ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಆಗಮಿಸುತ್ತಿರುವ ಕಾರಣ ಸಮ್ಮೇಳನಕ್ಕೆ ಹೆಚ್ಚು ಭಕ್ತರು ಆಗಮಿಸುವ ಮೂಲಕ ಇಡೀ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಬೇಕಿದೆ. ಈ ನಿಟ್ಟಿನಲ್ಲಿ ಸಮ್ಮೇಳನ ಸಮಿತಿ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು. ಈ ಸಂದರ್ಭ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಶರಣ ಸಾಹಿತ್ಯ ಸಮ್ಮೇಳನ ಜಿಲ್ಲೆಯ ಎಲ್ಲಾ ಜನಸಮುದಾಯದ ಸಮ್ಮೇಳನವಾಗಲಿದೆ. ಈ ದಿಸೆಯಲ್ಲಿ ಎಲ್ಲಾ ಸಮುದಾಯ ಸಂಘಟನೆಗಳ ಸಹಭಾಗಿತ್ವ ಕೋರಲಾಗುತ್ತಿದೆ ಎಂದರು. ಪ್ರಧಾನ ಕಾರ್ಯದರ್ಶಿ…
ಮಡಿಕೇರಿ ಮೇ 25 NEWS DESK : ಕೊಡಗು ಪತ್ರಕತ೯ರ ಸಂಘದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನಿಸಲಾಗಿದೆ. ಸಂಘದಿಂದ 8 ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ, ರಾಜಕೀಯ, ಕೃಷಿ ಹಾಗೂ ಗ್ರಾಮೀಣ ವರದಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಸಂಘದ ಹಿರಿಯ ಸಲಹೆಗಾರರಾದ ಶಕ್ತಿ ದಿನ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ತಮ್ಮ ತಾಯಿ ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿ, ಗ್ರಾಮೀಣ ವರದಿ – ಕೊಡಗು ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಬಿ.ಆರ್. ನಾಗೇಂದ್ರಪ್ರಸಾದ್ ಮತ್ತು ಪುತ್ರ ಬಿ.ಎನ್. ಅಂಜನ್ ಅವರು ದಿವಂಗತ ಬಿ.ಆರ್.ಶಶಿರಮ್ಮ ಮತ್ತು ದಿವಂಗತ ಬಿ.ಟಿ. ರಾಮದಾಸ ಶೆಟ್ಟಿ ಅವರ ಜ್ಞಾಪಕಾಥ೯ ಸ್ಫಾಪಿಸಿರುವ ದತ್ತಿ ಪ್ರಶಸ್ತಿ. ಕೖಷಿ ವರದಿ – ಶ್ರೀಮತಿ ಕಾಂತಿ ಸತೀಶ್ ಅವರು ನೀಡಿರುವ ದತ್ತಿ ಪ್ರಶಸ್ತಿ, ಕ್ರೀಡಾವರದಿ – ದಿ.ಕೆ.ಬಿ. ಮಹತೇಂಶ್ ಸ್ಮರಣಾಥ೯ ಅವರ ಪತ್ನಿ ಭಾಗೀರಥಿ ಅವರು ನೀಡಿರುವ ಪ್ರಶಸ್ತಿ, ರಾಜಕೀಯ ವರದಿಗಾಗಿ ನಾಪಂಡ…
ಮಡಿಕೇರಿ ಮೇ 25 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಸರ್ಕಾರಕ್ಕೆ ಮೂರು ವರ್ಷ ಪೂರ್ಣಗೊಂಡಿದ್ದು, ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಭೂ ಗ್ಯಾರಂಟಿ ಯೋಜನೆಯನ್ನು ಸಹ ಜಾರಿಗೊಳಿಸಿದ್ದು, ಸರ್ಕಾರದ ಗ್ಯಾರಂಟಿ ಯೋಜನೆ ತಲುಪಿಸುವಲ್ಲಿ ಇನ್ನಷ್ಟು ಪ್ರಯತ್ನ ಮಾಡಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಸೂಚಿಸಿದ್ದಾರೆ. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆ ಸಂಬಂಧ ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿದಿ ಹಾಗೆಯೇ ಭೂ ಒಡೆತನ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಪ್ರಗತಿಯತ್ತ ಸಾಗುತ್ತಿದೆ. ಜೊತೆಗೆ ಬಡ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡುತ್ತಿದ್ದು, ಆ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳು ತಲುಪುವಂತಾಗಲು ಅಧಿಕಾರಿಗಳ ಕರ್ತವ್ಯ ಮಹತ್ತರ ಎಂದು ಧರ್ಮಜ ಉತ್ತಪ್ಪ ಅವರು ನುಡಿದರು. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ.…






