ಮಡಿಕೇರಿ ಫೆ.10 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಫೆಬ್ರವರಿ, 11 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಫೆ.10 NEWS DESK : 220/66/11 ಕೆ.ವಿ ಕುಶಾಲನಗರ ಹಾಗೂ 66/11 ಕೆ.ವಿ ಸುಂಟಿಕೊಪ್ಪ, ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಫೆಬ್ರವರಿ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಮಾರ್ಗದಿಂದ ಸರಬರಾಜಾಗುವ ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಕಣಿವೆ, ಮಲ್ಲೇನಹಳ್ಳಿ, ಭುವನಗಿರಿ, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕೂಡುಮಂಗಳೂರು, ಶಿರಂಗಾಲ, ಕಾನ್ ಬೈಲು, ಅಂದಗೋವೆ, ನಾಕೂರು, ಹಾದ್ರೆ ಹೊರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಮಾದಾಪುರ, ಪನ್ಯ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಅಭ್ಯತ್ಮಂಗಲ, ನಾಕೂರು ಶಿರಂಗಾಲ. ಹಾಗೆಯೇ 66/11 ಕೆ.ವಿ ಆಲೂರು ಸಿದ್ದಾಪುರ ವಿದ್ಯುತ್ ವಿತರಣಾ ಉಪಕೇಂದ್ರ ಹಾಗೂ 66/33/11 ಕೆವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಸೋಮವಾರಪೇಟೆ ಪಟ್ಟಣ, ಹಾನಗಲ್ಲು, ನಗರೂರು, ದುದ್ದಗಲ್ಲು, ಗಾಧಿನಗರ, ಬಸವೇಶ್ವರ…
ವಿರಾಜಪೇಟೆ NEWS DESK ಫೆ.9: ಮಕ್ಕಳಿಗೆ ಮಹನೀಯರ ಆದರ್ಶವನ್ನು ನೀಡಿ ಉತ್ತಮ ವ್ಯಕ್ತಿತ್ವ ರೂಪಿಸುವ ಜವಾಬ್ದಾರಿ ಪೋಷಕರ ಮೇಲಿದೆ ಎಂದು ವಿರಾಜಪೇಟೆ ಡಿವೈಎಸ್ ಪಿ ಮಹೇಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು . ವಿರಾಜಪೇಟೆ ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವತಿಯಿಂದ ಆಯೋಜಿಸಲಾದ ಸ್ಪೋರ್ಟ್ಸ್ ಸ್ಪೆಕ್ಟ್ರಾ 2026 ಕಾರ್ಯಕ್ರಮವು ನಾಂಗಾಲ ಗ್ರಾಮದಲ್ಲಿರುವ ಎಲ್. ಎಸ್. ಎ. ಯ ನೂತನ ಕ್ಯಾಂಪಸ್ ನಲ್ಲಿ ಜರುಗಿತು. ಕ್ರೀಡಾ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಿವೈಎಸ್ಪಿ ಮಹೇಶ್ ಕುಮಾರ್ ಪ್ರಸ್ತುತ ನಾವು ಪ್ರತಿಷ್ಠೆಯ ಶಿಕ್ಷಣ ವ್ಯವಸ್ಥೆಯಲ್ಲಿದ್ದೇವೆ . ಇಂತಹ ಸಂದರ್ಭದಲ್ಲಿ ಮಕ್ಕಳಿಗೆ ಕೇವಲ ಪಠ್ಯದ ಶಿಕ್ಷಣವನ್ನು ನೀಡಿದರೆ ಸಾಲದು. ಅದರೊಂದಿಗೆ ಸಾತ್ವಿಕ ಶಿಕ್ಷಣವನ್ನು ನೀಡುವಂತಹ ಜವಾಬ್ದಾರಿಯು ಪೋಷಕರ ಮೇಲಿದೆ. ನಮ್ಮ ಸಮಾಜದ ಮೂಲ, ಸಂಪ್ರದಾಯ, ಸಂಸ್ಕೃತಿ, ಸಾಮಾಜಿಕ ಜವಾಬ್ದಾರಿ ,ಇತರರಿಗೆ ತೊಂದರೆಯನ್ನು ನೀಡದಿರುವಂತಹ ರೀತಿ ಬದುಕುವುದನ್ನು ಮಕ್ಕಳಿಗೆ ಕಲಿಸಬೇಕು. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆ ಗಣನೀಯವಾಗಿ…
ಸೋಮವಾರಪೇಟೆ NEWS DESK ಫೆ.9 : ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಐಗೂರು ಗ್ರಾಮದಲ್ಲಿ ಸೋಮವಾರ ನಡೆದ 9ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಐಗೂರು ಕಬ್ಬಿಣ ಸೇತುವೆಯಿಂದ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಿತು. ತೆರೆದ ವಾಹನದಲ್ಲಿ ಸಮ್ಮೇಳನಾಧ್ಯಕ್ಷೆ ಸಾಹಿತಿ ಜಲಜಾ ಶೇಖರ್, ಕ.ಸಾ.ಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್, ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್ ಅವರುಗಳನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು. ಸಾಂಪ್ರದಾಯಿಕ ವಾದ್ಯಗಳು, ಜನಪದ ಕಲಾವಿದರ ನೃತ್ಯ, ಕನ್ನಡ ಧ್ವಜಗಳು ಮತ್ತು ಘೋಷಣೆಗಳೊಂದಿಗೆ ನಡೆದ ಮೆರವಣಿಗೆಗೆ ಗ್ರಾಮಸ್ಥರು ಸಾಕ್ಷಿಯಾದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ ಕುಮಾರ್ ಮೆರವಣಿಗೆಯನ್ನು ಉದ್ಘಾಟಿಸಿದರು. ಕಬ್ಬಿಣ ಸೇತುವೆಯಿಂದ, ಯಡವಾರೆ ಮಾರ್ಗವಾಗಿ ಕಾಜೂರು ಸರ್ಕಾರಿ ಕಾಲೇಜು ಮೂಲಕ ಸಭಾಂಗಣದ ವರೆಗೆ ಮೆರವಣಿಗೆ ಸಾಗಿತು. ಬೆಳಿಗ್ಗೆ 6.30 ಗಂಟೆಗೆ ಶಾಲಾ ಮೈದಾನದಲ್ಲಿ ತಾಲ್ಲೂಕು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ನಂತರ ಕನ್ನಡ ಸಾಹಿತ್ಯ…
ಮಡಿಕೇರಿ NEWS DESK ಫೆ.9 : ಜಿಲ್ಲೆಯಲ್ಲಿನ ಹೊಸ ಹೋಂ ಸ್ಟೇಗಳ ನೋಂದಣಿ ಮತ್ತು ಈಗಾಗಲೇ ಇರುವ ಹೋಂ ಸ್ಟೇಗಳಿಗೆ ಪರವಾನಗಿ ನೀಡುವುದು ಹಾಗೂ ಈಗಾಗಲೇ ನೋಂದಾಯಿಸಿರುವ ಹೋಂಸ್ಟೇಗಳಿಗೆ ನವೀಕರಣವನ್ನು ಮಾರ್ಚ್, 31 ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಆನ್ಲೈನ್ ಮೂಲಕ ಪರವಾನಗಿ ನೋಂದಣಿ ಹಾಗೂ ನವೀಕರಣ ಕಾರ್ಯವು ಸ್ಥಗಿತವಾಗಿದ್ದು, ತಾತ್ಕಾಲಿಕವಾಗಿ ಆಪ್ಲೈನ್ ಮೂಲಕ ಸ್ಥಳ ಪರಿಶೀಲಿಸಿ ಅನುಮೋದನೆ ಮಾಡಬೇಕಿದ್ದು, ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು ಹಾಗೂ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಫೆಬ್ರವರಿ, 07 ರವರೆಗೆ 100 ಹೊಸ ಹೋಂ ಸ್ಟೇಗಳಿಗೆ ಪರವಾನಗಿ ನೀಡಲು ಅರ್ಜಿ ಸಲ್ಲಿಕೆಯಾಗಿವೆ. ಹಾಗೆಯೇ…
ಕುಶಾಲನಗರ NEWS DESK ಫೆ.9 : ಕುಶಾಲನಗರ ರೋಟರಿ ಸಂಸ್ಥೆಗೆ 50 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ರೋಟರಿ ಸಂಸ್ಥೆ ಸುವರ್ಣ ಸಂಭ್ರಮೋತ್ಸವ ಆಚರಿಸುತ್ತಿದೆ. ಇದರ ಅಂಗವಾಗಿ ಶನಿವಾರ ನಗರದ ಕಾವೇರಿ ನದಿ ಸೇತುವೆ ಬಳಿ ನೂತನವಾಗಿ ನಿರ್ಮಿಸಿದ ಪ್ಲಾಸ್ಟಿಕ್ ಬಾಟಲಿ ಮಾದರಿಯ ಬಾಟಲಿಗಳ ಸಂಗ್ರಹಣಾ ತೊಟ್ಟಿಯನ್ನು ರೋಟರಿ 3181 ರ ರಾಜ್ಯಪಾಲ ಪಿ.ಕೆ. ರಾಮಕೃಷ್ಣ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಕೊಡಗು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ಪ್ರವೇಶ ದ್ವಾರದಲ್ಲಿರುವ ಕಾವೇರಿ ನದಿಗೆ ಕೈ ಮುಗಿದು ಜಿಲ್ಲೆಯ ಪರಿಸರಕ್ಕೆ ಹಾನಿಯಾಗದ ಹಾಗೆ ಸ್ವಚ್ಛತೆಯನ್ನು ಮೈಗೂಡಿಸಿ ಹಾಗೆಯೇ ಮರಳಬೇಕೆಂದು ರೋಟರಿ ಸಂಸ್ಥೆ ಅವರಲ್ಲಿ ಮನವಿ ಮಾಡುತ್ತದೆ. ಈ ನಿಟ್ಟಿನಲ್ಲಿ ಸೇತುವೆಯ ಎರಡು ಗೋಡೆಗಳ ಮೇಲೆ ಜನಜಾಗೃತಿ ಮೂಡಿಸುವ ಬರಹಗಳು ಪ್ರವಾಸಿಗರಿಗೆ ಮತ್ತು ಸಾರ್ವಜನಿಕರಿಗೆ ನದಿ – ಪರಿಸರ ಹಾಗೂ ಕೊಡಗಿನ ಸ್ವಚ್ಛತೆಯ ಕುರಿತು ಮಾಹಿತಿಯನ್ನು ಒದಗಿಸುತ್ತಿರುವುದು ಶ್ಲಾಘನೀಯ ಎಂದರು. ಕುಶಾಲನಗರ ರೋಟರಿ ಸಂಸ್ಥೆಯ ಅಧ್ಯಕ್ಷ ಮನು ಪೆಮ್ಮಯ್ಯ ಮಾತನಾಡಿ, ರೋಟರಿ ಸುವರ್ಣ ಸಂಭ್ರಮೋತ್ಸವದ ಸವಿ…
ಮಡಿಕೇರಿ NEWS DESK ಫೆ.9 : ನವ ದೆಹಲಿಯಲ್ಲಿ ರಾಜ್ಯ ಸಭಾ ಸದಸ್ಯ ಅಜಯ್ ಮಖಾನ್ ಅವರನ್ನು ಭೇಟಿಯಾದ ಚೇನಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಪ್ರಮುಖರು ಪೈನಲ್ ಪಂದ್ಯಾಟಕ್ಕೆ ಸಂಸದರನ್ನು ಆಹ್ವಾನಿಸಿದರು. 10 ವಷ೯ಗಳ ಹಿಂದೆಯೇ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಉದ್ದೇಶವನ್ನು ಶ್ಲಾಘಿಸಿ ಕೊಡಗಿನಲ್ಲಿ ಕ್ರೀಡೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದನ್ನು ಸ್ಮರಿಸಿಕೊಂಡ ಅಜಯ್ ಮಖಾನ್. ಈ ಬಾರಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಬರಲು ಸಮ್ಮತಿ ಸೂಚಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ ಸಹಕಾರದಲ್ಲಿ ರಾಜ್ಯ ಸಭಾ ಸದಸ್ಯ ಅಜಯ್ ಮಖಾನ್ ಅವರನ್ನು ನವದೆಹಲಿಯಲ್ಲಿ ಚೇನಂಡ ಕುಟುಂಬಸ್ಥರ ನಿಯೋಗ ಭೇಟಿ ಮಾಡಿತ್ತು. ನಿಯೋಗದಲ್ಲಿ ಚೇನಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಸಮಿತಿ ಅಧ್ಯಕ್ಷರಾದ ಕರುಂಬಯ್ಯ ಸಿ.ಪಿ. ಕಾಯಾ೯ಧ್ಯಕ್ಷ ದೀನಾ ಚೇನಂಡ , ವಿವೇಕ್ ಪೂಣಚ್ಚ, ಬ್ರಿಗೇಡಿಯರ್ ಸಿ.ಎನ್. ಚೀಯಣ್ಣ, ದ್ರೋಣಾಚಾಯ೯ ಪ್ರಶಸ್ತಿ ವಿಜೇತರಾದ ವಿಶುಕುಟ್ಟಪ್ಪ ಹಾಜರಿದ್ದರು.
ಮಡಿಕೇರಿ NEWS DESK ಫೆ.9 : ಮಡಿಕೇರಿಯ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.15 ರಂದು ವಿವಿಧ ಧಾರ್ಮಿಕ ಕೈಂಕರ್ಯಗಳು ಮತ್ತು ಭಕ್ತರ ಮೆರವಣಿಗೆ ನಡೆಯಲಿದೆ ಎಂದು ದೇವಾಲಯದ ಧರ್ಮದರ್ಶಿ ಗೋವಿಂದಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಶಿವರಾತ್ರಿಯಂದು ಬೆಳಿಗ್ಗೆ 9 ಗಂಟೆಯಿಂದ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿರುವ ಕಾಶಿಲಿಂಗಕ್ಕೆ ಕ್ಷೀರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ನಡೆಯಲಿದೆ. ದೇವಾಲಯದಲ್ಲಿ ಸ್ಥಾಪಿಸಲಾಗಿರುವ 52 ಅಡಿ ಎತ್ತರದ ಶಿವನ ವಿಗ್ರಹವನ್ನು 2016ರ ಮಾರ್ಚ್ 4 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಭೂಷಣ, ಕರ್ನಾಟಕ ರತ್ನ ಡಾ.ಶ್ರೀವೀರೇಂದ್ರ ಹೆಗ್ಗಡೆ ಅವರು ಲೋಕಾರ್ಪಣೆಗೊಳಿಸಿದರು. ಗರ್ಭಗುಡಿಯಲ್ಲಿ ಕಾಶಿಲಿಂಗ ಪ್ರತಿಷ್ಠಾಪನೆಯಾಗಿದ್ದು, ವಿಗ್ರಹದ ಸುತ್ತ ಪಂಚಲಿಂಗಗಳು ಮತ್ತು 109 ಲಿಂಗಗಳನ್ನು ಸ್ಥಾಪಿಸಲಾಗಿದೆ. ಈ ಲಿಂಗಗಳಿಗೆ ವಿಶೇಷ ಅಭಿಷೇಕ, ಅಲಂಕಾರ ಮತ್ತು ಪೂಜೆ ನೆರವೇರಲಿದೆ. ಭಕ್ತರಿಗೆ ಪಂಚಲಿಂಗಕ್ಕೆ ಪವಿತ್ರ ಗಂಗಾಜಲ ಅಭಿಷೇಕ ಮತ್ತು ಶಿವನ ಮೂರ್ತಿಗೆ ಪುಷ್ಪಾರ್ಚನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ ನೆರವೇರಲಿದ್ದು,…
ಮಡಿಕೇರಿ NEWS DESK ಫೆ.9 : ಚೇನಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಪೈನಲ್ ಗೆ ಮೇ 2 ರಂದು ಗೆ ನಾಪೋಕ್ಲುವಿಗೆ ಬರಲು ಕೇಂದ್ರ ಕ್ರೀಡಾ ಸಚಿವರಾದ ಡಾ. ಮಾನ್ಸೂಕ್ ಲಕ್ಷ್ಮಣಭಾಯ್ ಮಾಂಡವೀಯ ಸಮ್ಮತಿ ಸೂಚಿಸಿದ್ದಾರೆ. ಚೇನಂಡ ಕೊಡವ ಹಾಕಿ ಪಂದ್ಯಾವಳಿ ಸಮಿತಿಯ ಪ್ರಮುಖರ ನಿಯೋಗ ಇಂದು ನವದೆಹಲಿಯಲ್ಲಿ ಸಂಸದ ಯದುವೀರ್ ಒಡೆಯರ್ ಅವರ ನೇತೖತ್ವದಲ್ಲಿ ಕೇಂದ್ರ ಕ್ರೀಡಾ ಸಚಿವ ಮಾನ್ಸೂಕ್ ಮಾಂಡವೀಯ ಅವರನ್ನು ಭೇಟಿಯಾಗಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಬರುವಂತೆ ಆಹ್ವಾನ ನೀಡಿದ ಸಂದಭ೯, ಇದಕ್ಕೆ ಸಚಿವರು ಸಮ್ಮತಿ ಸೂಚಿಸಿದ್ದಾರೆ. ಕೊಡವ ಕುಟುಂಬಗಳ ನಡುವಿನ 26 ನೇ ವಷ೯ದ ಹಾಕಿ ಪಂದ್ಯಾವಳಿಗೆ ಖಂಡಿತಾ ಬರುವುದಾಗಿ ಹೇಳಿದ ಸಚಿವರು, ಕುಟುಂಬಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಒಗ್ಗಟ್ಟು, ಬೆಸುಗೆಯಾಗಿ ರೂಪಿಸಿರುವುದು ಮಾದರಿಯಾಗಿದೆ ಎಂದು ಹೆಮೆ ವ್ಯಕ್ತಪಡಿಸಿದರು. ಇದೇ ಸಂದಭ೯ ಚೇನಂಡ ಹಾಕಿ ಪಂದ್ಯಾವಳಿಯ ಬ್ರೋಷರ್ ನ್ನೂ ಸಚಿವರಿಗೆ ನೀಡಲಾಯಿತು. ಕೊಡವ ಕೌಟುಂಬಿಕ ಹಾಕಿ ಕ್ರೀಡೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ…
ಮಡಿಕೇರಿ NEWS DESK ಫೆ.9 : ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಫೆ.11 ಮತ್ತು 12ರಂದು ನಾಗದೇವರ ಪುನಃಪ್ರತಿಷ್ಠಾಪನಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಲಿದೆ. ಫೆ.11 ರಂದು ಸಂಜೆ 7 ಗಂಟೆಗೆ ಗುರುಗಣಪತಿ ಪೂಜೆ, ಪುಣ್ಯಾಹ ಸಂಕಲ್ಪ ‘ಆಶ್ಲೇಷಬಲಿ’ ಮಹಾಪೂಜೆ ನಡೆಯಲಿದೆ ಮತ್ತು ತೀರ್ಥಪ್ರಸಾದ ವಿತರಣೆಯಾಗಲಿದೆ. ಫೆ.12 ರಂದು ಬೆಳಗ್ಗೆ 9 ಗಂಟೆಯಿಂದ ಗುರುಗಣಪತಿ ಪೂಜೆ, ಗಣಪತಿ ಹೋಮ, ನವಕ ಪ್ರಧಾನ ಕಲಶ, ನವಕ ಪ್ರಧಾನ ಹೋಮ, ಕಲಶಾಭಿಷೇಕ, ಪವಮಾನ ಪಾರಾಯಣ, ಅಲಂಕಾರ ಪೂಜೆ, ಮಹಾಪೂಜೆ ಮತ್ತು ತೀರ್ಥಪ್ರಸಾದ ವಿತರಣೆ ನಡೆಯಲಿದೆ. ನಾಗದೇವರ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ಟ್ರಸ್ಟ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.






