ಮಡಿಕೇರಿ NEWS DESK ನ.28 : ಸಾಮಾಜಿಕ ಜಾಲತಾಣಗಳಲ್ಲಿ ದೇಶದ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳಿಗೆ ಅಗೌರವ ತೋರಿದ ಪ್ರಕರಣವನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕೆಂದು ಮಡಿಕೇರಿಯ ಉದ್ಯಮಿ ಹಾಗೂ ಭಗವಾನ್ ಸಂಸ್ಥೆಯ ಮಾಲೀಕರಾದ ಬಿ.ಡಿ.ಮಂಜುನಾಥ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭಾರತೀಯ ಸೇನಾ ಕ್ಷೇತ್ರದ ಮಹಾನ್ ಚೇತನಗಳ ಬಗ್ಗೆ ಸಮಾಜಕ್ಕೆ ತಪ್ಪು ಅಭಿಪ್ರಾಯ ಮೂಡಿಸಲಾಗಿದೆ. ಅಪ್ರತಿಮ ವೀರರಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳಿಗೆ ಮಾಡಿದ ಅಪಮಾನ ಇಡೀ ಕೊಡಗಿನ ಜನರಿಗೆ ತೋರಿದ ಅಗೌರವವಾಗಿದೆ. ದೇಶಭಕ್ತಿ ಮತ್ತು ಸೇನಾಶಕ್ತಿಯ ಮೇಲಿನ ಭಾವನೆಗೆ ಚ್ಯುತಿ ತರುವ ಕಿಡಿಗೇಡಿ ಕೃತ್ಯವಾಗಿದೆ ಎಂದು ಆರೋಪಿಸಿದ್ದಾರೆ. ಇದು ಅತ್ಯಂತ ಗಂಭೀರ ಪ್ರಕರಣವಾಗಿದ್ದು, ಗೃಹ ಇಲಾಖೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ದೇಶದ್ರೋಹ ಸೇರಿದಂತೆ ಸೂಕ್ತ ಪ್ರಕರಣಗಳನ್ನು ದಾಖಲಿಸಿ ಆರೋಪಿ ಶಿಕ್ಷೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಬೇಕು ಮತ್ತು ಗಡಿಪಾರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸೇನೆಗೆ ಸೇರುವ ಯುವ ಸಮೂಹಕ್ಕೆ ಪ್ರೇರಣೆಯಾಗಿರುವ ಇಬ್ಬರು ವೀರಸೇನಾನಿಗಳ…
ಲೇಖಕ: admin
ಮಡಿಕೇರಿ ನ.28 NEWS DESK : ಬಾಳುಗೋಡುವಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಾಂಸ್ಕೃತಿಕ ಕೇಂದ್ರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ “ಕೊಡವ ನಮ್ಮೆ” ಕೊಡವ ಸಮಾಜಗಳ ನಡುವಿನ ಹಾಕಿ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಚಾಮುಂಡಿ ದೇವಾಲಯ ಮತ್ತು ಮೈದಾನದಲ್ಲಿ ಪೂಜೆ ನೆರವೇರಿದ ಶಾಸಕರು, ನಂತರ ಆಟಗಾರರಿಗೆ ಶುಭಹಾರೈಸಿದರು. ಈ ಸಂದರ್ಭ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಮತ್ತು ಕೊಡವ ಸಮಾಜಗಳ ಒಕ್ಕೂಟ ಸಮಿತಿ ಸದಸ್ಯರು, ಆಯೋಜಕರು ಮತ್ತು ಪ್ರಮುಖರು ಹಾಜರಿದ್ದರು.
ಸುಂಟಿಕೊಪ್ಪ ನ.28 NEWS DESK : ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಎನ್ಸಿಸಿ ದಿನಾಚರಣೆಯ ಅಂಗವಾಗಿ ಸ್ಥಳೀಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ಧರ್ಮಗುರು ರೆ.ಫಾ.ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಎನ್ಸಿಸಿ ಕೆಡೆಟ್ಗಳು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್, ಕಸ ಕಡ್ಡಿಗಳು, ಇನ್ನಿತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿದರು. ಅಲ್ಲದೇ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವದ ಕುರಿತು ಅರಿವು ಮೂಡಿಸಿದರು. ಈ ಸಂದರ್ಭ ಪ್ರಾಚಾರ್ಯರಾದ ಸೆಲ್ವರಾಜ್, ಸಿಟಿ ಓ ಹಮೀದ್ ಹಾಗೂ ಶಿಕ್ಷಕರು ಇದ್ದರು.
ಬೆಂಗಳೂರು ನ.28 NEWS DESK : ನೂರಾರು ಚಲನಚಿತ್ರಗಳಿಗೆ ಪೋಸ್ಟರ್ ಡಿಸೈನ್ ಮೂಲಕವೆ ಜೀವಕಳೆ ತುಂಬಿ ಪ್ರೇಕ್ಷಕರನ್ನು ಸೆಳೆದು ಚಿತ್ರಗಳ ಯಶಸ್ಸಿಗೆ ಕಾರಣರಾಗುತ್ತಿರುವ ತೆರೆಮರೆಯ ಚಲನಚಿತ್ರ ಪ್ರಚಾರ ಕಲಾವಿದರಾದ ‘ದೇವು’ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೂಲತಃ ಹಾಸನ ಜಿಲ್ಲೆಯವರಾದದೇವು ಚಲನಚಿತ್ರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಬೆಂಗಳೂರಿನ ಕಲಾಭೂಮಿ ಪ್ರತಿಷ್ಠಾನ, ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಮಾಡಿದ್ದು, ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಭವನದಲ್ಲಿ ನ.29 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನ ತಿಳಿಸಿದೆ. ಇದಕ್ಕಾಗಿ ದೇವು ಆಪ್ತರು, ಹಿತೈಸಿಗಳು, ಚಲನಚಿತ್ರ ಪತ್ರಕರ್ತರಾದ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ ಮೊದಲಾದವರು ಅಭಿನಂದಿಸಿದ್ದಾರೆ.
ಮಡಿಕೇರಿ ನ.28 NEWS DESK : ಕೊಡಗು ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆಯು ನಗರದ ಮಯೂರ ವ್ಯಾಲಿ’ ಹೊಟೇಲು ಸಭಾಂಗಣದಲ್ಲಿ ನಡೆಯಿತು. ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಜರುಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕೆಲವು ಸುತ್ತೋಲೆಗಳಿಂದ ಖಾಸಗಿ ಶಾಲೆಗಳಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಚರ್ಚಿಸಲಾಯಿತು. ಖಾಸಗಿ ಶಾಲೆಗಳ ನಿಯಮಾನುಸಾರ, ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟದ ಜೊತೆ ನಿಕಟ ಸಂಪರ್ಕ ಇಟ್ಟುಕೊಂಡು ಸರ್ಕಾರದೊಂದಿಗೆ ರಾಜ್ಯಮಟ್ಟದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಿರ್ಮಾನಿಸಲಾಯಿತು. ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಲ್ಯಾಣ ನಿಧಿಗಳಿಂದ ನೀಡಲಾಗುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸೂಚಿಸಲಾಯಿತು. ಶಾಲೆಗಳ ಕಟ್ಟಡ ಸುರಕ್ಷತೆ, ಅಗ್ನಿ ಸುರಕ್ಷತೆಯ ನಿಯಮಾವಳಿಗಳಲ್ಲಿ ಸಡಲಿಕೆ ಮಾಡಿರುವುದರಿಂದ ಶಾಲೆಗಳು ಮಕ್ಕಳ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ತಿಳಿಸಲಾಯಿತು. ಸದಸ್ಯರಾದ ಜಿ.ಹೆಚ್. ಮೊಹಮದ್ ಹನೀಫ್ ಸೂಚಿಸಿದ…
ಮಡಿಕೇರಿ ನ.28 NEWS DESK : ವಿರಾಜಪೇಟೆಯ ವಿದ್ಯಾನಗರ ಮತ್ತು ವಿಜಯ ನಗರ 3ನೇ ಹಂತ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಇಲಾಖೆ ಅನುದಾನದಲ್ಲಿ ನೂತನ ರಸ್ತೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ರಂಜಿ ಪೂಣಚ್ಚ, ಮದಂಡ ತಿಮಯ್ಯ ಪುರಸಭೆ ಅಧ್ಯಕ್ಷರು ದೇಚಮ್ಮ ಕಾಳಪ್ಪ ಉಪಅಧ್ಯಕ್ಷರು, ಪುರಸಭೆ ಸದಸ್ಯರಾದ ಮೊಹಮ್ಮದ್ ರಾಫಿ,ಮತಿನ್ ಪ್ರಮುಖರು ಹಾಜರಿದ್ದರು.
ಮಡಿಕೇರಿ ನ.28 NEWS DESK : ಕಲ್ಲಿಕೋಟೆಯ ಐ.ಸಿ.ಎ.ಆರ್ ಭಾರತೀಯ ಸಂಬಾರ ಬೆಳೆಗಳ ಸಂಶೋಧನ ಸಂಸ್ಥೆ ಸುವರ್ಣ ಮಹೋತ್ಸವದ ಅಂಗವಾಗಿ ಅಪ್ಪಂಗಳದಲ್ಲಿ ಐ.ಸಿ.ಎ.ಆರ್ ಭಾರತೀಯ ಸಂಬಾರ ಬೆಳೆಗಳ ಸಂಶೋಧನ ಸಂಸ್ಥೆಯ ಪ್ರಾದೇಶಿಕ ಕೇಂದ್ರದಲ್ಲಿ “ಕರಿಮೆಣಸಿನ ಸುಧಾರಿತ ಮತ್ತು ಸುಸ್ಥಿರ ಕೃಷಿ ತಂತ್ರಜ್ಞಾನಗಳು” ಎಂಬ ವಿಷಯದ ಕುರಿತು ಬೆಳೆಗಾರರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪ್ರಗತಿಪರ ರೈತ ಶ್ಶ್ಯಾಮ್ ಅಯ್ಯಪ್ಪ ಉದ್ಘಾಟಿಸಿ ತಮ್ಮ ಕೃಷಿ ಅನುಭವವನ್ನು ಹಂಚಿಕೊಂಡರು. ಅಪ್ಪಂಗಳ ಐ.ಸಿ.ಎ.ಆರ್.ಐ.ಐ. ಎಸ್.ಆರ್, ಪ್ರಾದೇಶಿಕ ಕೇಂದ್ರದ ಮುಖ್ಯಸ್ಥರಾದ ಡಾ. ಎಸ್.ಜೆ.ಅಂಕೆಗೌಡ ಮಾತಾನಾಡಿ ಐ. ಐ. ಎಸ್. ಆರ್. ಪ್ರಾದೇಶಿಕ ಕೇಂದ್ರದ ಕಾಳುಮೆಣಸಿನ ಸಂಶೋಧನ ಕಾರ್ಯಗಳ ಬಗ್ಗೆ ಮತ್ತು ಕರ್ನಾಟಕದಲ್ಲಿ ಕಾಳುಮೆಣಸಿನ ಉತ್ಪಾದನೆಯ ಬಗ್ಗೆ ಮಾಹಿತಿ ನೀಡಿದರು. ತರಬೇತಿ ಕಾರ್ಯಾಗಾರದಲ್ಲಿ ಕಾಳುಮೆಣಸಿನ ತಳಿ ವೈವಿಧ್ಯತೆ, ಗುಣಮಟ್ಟದ ಸಸ್ಯಾಭಿವೃದ್ದಿ ವಿಧಾನಗಳು, ವೈಜ್ಞಾನಿಕ ಕೃಷಿ ಪದ್ಧತಿಗಳು, ರೋಗ ಮತ್ತು ಕೀಟ ನಿರ್ವಹಣೆ ಬಗ್ಗೆ ಐ.ಸಿ.ಎ.ಆರ್.-ಐ.ಐ.ಎಸ್.ಆರ್, ಪ್ರಾದೇಶಿಕ ಕೇಂದ್ರದ ವಿಜ್ಞಾನಿಗಳು ಮಾಹಿತಿ ನೀಡಿದರು. ತರಬೇತಿ ಕಾರ್ಯಾಗಾರವನ್ನು ಐ.ಸಿ.ಎ.ಆರ್.…
ಮಡಿಕೇರಿ ನ.28 NEWS DESK : ಮಡಿಕೇರಿ ನಗರ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಆಟೋ ಚಾಲಕ-ಮಾಲೀಕರ ಸಂಘದ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಸಭೆ ನಡೆಯಿತು. ಸಂಚಾರಿ ಠಾಣಾಧಿಕಾರಿ ಶ್ರೀಧರ್, ಎಸ್.ಐ.ತಮ್ಮಯ್ಯ, ಎ.ಎಸ್.ಐ. ಐಪಿ ನಂದ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚಾಲಕರ ವಿವಿಧ ಸಮಸ್ಯೆಗಳನ್ನು ಆಲಿಸಲಾಯಿತು. ಅಲ್ಲದೆ ಇಲಾಖೆ ಮೂಲಕವೂ ಅಗತ್ಯ ಸೂಚನೆ ನೀಡಲಾಯಿತು. ಸಂಘದ ಅಧ್ಯಕ್ಷ ಮೇದಪ್ಪ ಅರುಣ, ಕಾರ್ಯದರ್ಶಿ ಬಾರನ ದಿನೇಶ್, ಸುಲೇಮಾನ್, ಮತ್ತಿತರರು ಹಾಜರಿದ್ದರು.
ಮಡಿಕೇರಿ ನ.27 NEWS DESK : ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಸಮೀಪದ ಮಜ್ಜಿಗೆಹಳ್ಳ ನರ್ಸರಿ ಬಳಿ ನಡೆದಿದೆ. ಸ್ಥಳೀಯ ನಿವಾಸಿ ರವಿ ಹಾಗೂ ಸಿಂಧು ದಂಪತಿ ಪುತ್ರಿ ಗಾನವಿ(6) ಮೃತ ದುರ್ದೈವಿ. ಈಕೆ ಮಜ್ಜಿಗೆಹಳ್ಳ ಪರಂಬು ಶಾಲೆಯ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗೋಣಿಕೊಪ್ಪ ಕಡೆಯಿಂದ ಹುಣಸೂರು ಕಡೆಗೆ ತೆರಳುತ್ತಿದ್ದ ಲಾರಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಗಾನವಿಗೆ ಡಿಕ್ಕಿ ಹೊಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕ ಕನಕಪುರ ಮೂಲದ ಹರೀಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾರಿ ಡಿಕ್ಕಿ ಹೊಡೆದ ಸಂದರ್ಭ ಗಂಭೀರ ಗಾಯಗೊಂಡಿದ್ದ ಗಾನವಿಯನ್ನು ಸಾರ್ವಜನಿಕರು ಆಟೋ ರಿಕ್ಷಾದಲ್ಲಿ ತಿತಿಮತಿ ವಿವೇಕಾನಂದ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಳು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಗೋಣಿಕೊಪ್ಪ ವೃತ್ತನಿರೀಕ್ಷಕ ಶಿವರಾಜ್ ಆರ್.ಮುಧೋಳ್, ಠಾಣಾಧಿಕಾರಿ ಪ್ರದೀಪ್ ಕುಮಾರ್, ಎಎಸ್ಐ ದೇವರಾಜ್ ಸಿಬಂದಿಗಳಾದ ನೆಹರು, ಸೀರಿಲ್, ಭರತ್ ರಾಘವೇಂದ್ರ ಹಾಗೂ ಶುಭ…
ಮಡಿಕೇರಿ ನ.27 NEWS DESK : 2023-24ನೇ ಸಾಲಿನ ಶೈಕ್ಷಣಿಕ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಯು.ಅದವಿಯಾ ಕನ್ನಡ ಮಾಧ್ಯಮದಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಸಂಬಂಧ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡಮಾಡುವ ಟಿ.ಪಿ.ರಮೇಶ್ ದತ್ತಿ ನಿಧಿ ಪ್ರಶಸ್ತಿಗೆ ಭಾಜನರಾಗಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಈಕೆ ಉಮ್ಮರ್ ಸಿ.ಎಂ. ಮತ್ತು ಅಮೀನಾ ಕೆ.ಎ.(ಶಿಕ್ಷಕರು) ದಂಪತಿಯ ಪುತ್ರಿ. ಎಂದು ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.






