ಕುಶಾಲನಗರ NEWS DESK ಡಿ.12 : ಕಾಂಗರೂ ಕೇರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಫರ್ಟಿಲಿಟಿ ಸೆಂಟರ್ ವತಿಯಿಂದ ಕುಶಾಲನಗರದಲ್ಲಿ ಔಟ್ರೀಚ್ ಕ್ಲಿನಿಕ್ ಸ್ಥಾಪಿಸುವ ಮೂಲಕ ಶೀಘ್ರದಲ್ಲೇ ಸೇವೆ ಒದಗಿಸಲಾಗುವುದು ಎಂದು ಕಾಂಗರೂ ಕೇರ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ನ ಫೌಂಡರ್ ಹಾಗೂ ಸಿಇಒ ಕೂಡ ಆದ ಮಕ್ಕಳ ತಜ್ಞ ಡಾ.ಶೇಖರ್ ಸುಬ್ಬಯ್ಯ ತಿಳಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಚಿಕಿತ್ಸೆಗಾಗಿ ಸ್ಥಾಪಿಸಿರುವ ಆಸ್ಪತ್ರೆ ಬೆಂಗಳೂರು, ರಾಮನಗರ ಹಾಗೂ ಮೈಸೂರಿನಲ್ಲಿ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಮೈಸೂರು ಸುತ್ತಮುತ್ತಲ ವ್ಯಾಪ್ತಿಯಲ್ಲಿ ಸೇವೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಕುಶಾಲನಗರದ ಮುಖ್ಯ ರಸ್ತೆಯಲ್ಲಿರುವ ಮೆಡಿ ಪ್ಲೆಕ್ಸ್ ಡಯಗ್ನಾಸ್ಟಿಕ್ ಲ್ಯಾಬ್ ಕೇಂದ್ರದಲ್ಲಿ ಔಟ್ ರೀಚ್ ಕ್ಲಿನಿಕ್ ಮುಂದಿನ ವಾರದಿಂದ ಕಾರ್ಯಾರಂಭ ಮಾಡಲಿದೆ. ಕೊಡಗು ಜಿಲ್ಲೆಯ ವಿವಿಧೆಡೆಗಳಿಂದ ಹಾಗೂ ಗಡಿಭಾಗದಿಂದ ಮೈಸೂರಿಗೆ ಆಗಮಿಸುವವರಿಗೆ ಕುಶಾಲನಗರದಲ್ಲಿ ಔಟ್ ರೀಚ್ ಕ್ಲಿನಿಕ್ ಸ್ಥಾಪನೆಯಿಂದ ಅತ್ಯಂತ ಅನುಕೂಲ ಒದಗಲಿದೆ. ಮೈಸೂರಿನಿಂದ ತಜ್ಞ ವೈದ್ಯರು ತಪಾಸಣೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಲಿದ್ದಾರೆ. ಕೊಡಗು…
ಲೇಖಕ: admin
ಮಡಿಕೇರಿ NEWS DESK ಡಿ.12 : ದೇವಟ್ ಪರಂಬು ಹತ್ಯಾಕಾಂಡದ 239ನೇ ವರ್ಷಾಚರಣೆ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಹಿರಿಯರಿಗೆ ಶ್ರದ್ಧಾಂಜಲಿ ಸಲ್ಲಿಸಿತು. ಕೊಡವ ನರಮೇಧ ಸ್ಮಾರಕ ಸಮಾಧಿಯಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಹಿರಿಯರಿಗೆ ಗೌರವ ಅರ್ಪಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯ ಹಕ್ಕುಗಳೊಂದಿಗೆ ಕೊಡವ ಸ್ವಯಂ ಆಡಳಿತ ಲ್ಯಾಂಡ್ ಅನ್ನು ರೂಪಿಸಬೇಕೆಂದು ಒತ್ತಾಯಿಸಿದರು. ಅಂತರಾಷ್ಟ್ರೀಯ ಕಾನೂನಿನ ಪ್ರಕಾರ ಆದಿಮಸಂಜಾತ ಕೊಡವರನ್ನು ಗುರುತಿಸಿ ಮತ್ತು ವಿದೇಶಿ ಆಡಳಿತಗಾರರು ಹಿಂದೆ ವಶಪಡಿಸಿಕೊಂಡ ಅಥವಾ ಅಡಮಾನ ಇಟ್ಟಿರುವ ಅವರ ಆನುವಂಶಿಕ ಭೂಮಿಯನ್ನು ಪುನಃಸ್ಥಾಪಿಸಬೇಕು. ದೇವಾಟ್ಪರಂಬ್ನಲ್ಲಿ ಅಂತರಾಷ್ಟ್ರೀಯ ಕೊಡವ ಜನಾಂಗೀಯ ಹತ್ಯೆಯ ಸ್ಮಾರಕವನ್ನು ನಿರ್ಮಿಸಬೇಕು. ವಿಶ್ವಸಂಸ್ಥೆ (ಯುಎನ್ಒ) ಮತ್ತು ಭಾರತ ಸರ್ಕಾರವು ದೇವಾಟ್ಪರಂಬ್ ದುರಂತ ಮಡಿಕೇರಿ ಕೋಟೆ, ನಾಲ್ನಾಡು ಅರಮನೆಯಲ್ಲಿ ನಡೆದ ಕೊಡವ ಜನಾಂಗದ ರಾಜಕೀಯ ಹತ್ಯೆಗಳನ್ನು ಜಂಟಿಯಾಗಿ ಖಂಡಿಸಬೇಕು. ವಿಶ್ವರಾಷ್ಟ್ರ ಸಂಸ್ಥೆ (UNO) ದ ಅಂತರರಾಷ್ಟ್ರೀಯ…
ಮಡಿಕೇರಿ ಡಿ.12 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಆಶ್ರಯದಲ್ಲಿ 30ನೇ ವರ್ಷದ ಸಾರ್ವತ್ರಿಕ ಪುತ್ತರಿ ನಮ್ಮೆಯನ್ನು ಸಕಲ ಕೊಡವ ಜನಪದ ಪರಂಪರೆಯಂತೆ ರೋಹಿಣಿ ನಕ್ಷತ್ರದ ಆರಂಭದಲ್ಲಿ ಡಿ.14 ರಂದು ಪೂರ್ವಹ್ನ 10 ಗಂಟೆಗೆ ಬಾಳೆಲೆ ಹೋಬಳಿಯ ಪತ್ತ್ಕಟ್ ನಾಡ್ನ ಬಿಳೂರು ಗ್ರಾಮದ ಕಾಂಡೇರ ಸುರೇಶ್ರವರ ಭತ್ತದ ಗದ್ದೆಯಲ್ಲಿ ಕದಿರು ತೆಗೆಯುವ ಮೂಲಕ ಆಚರಿಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಸಾರ್ವತ್ರಿಕವಾಗಿ ಕೊಡವರ ಎಲ್ಲಾ ಹಬ್ಬ ಹರಿದಿನಗಳನ್ನು ಕಳೆದ ಮೂರು ದಶಕಗಳಿಂದ ಸಿಎನ್ಸಿ ಆಚರಿಸುತ್ತ ಬರುವ ಉದ್ದೇಶ ಅತೀ ಸಣ್ಣ ಕೊಡವ ಸಮುದಾಯದ ಜನ್ಮಭೂಮಿ ಹಾಗೂ ಪೂರ್ವಾರ್ಜಿತ ಭೂಮಿ, ಭಾಷೆ, ಸಂಸ್ಕೃತಿ, ಪರಂಪರೆ, ಜನಪದ ಮತ್ತು ಸ್ವಯಂ ನಿರ್ಣಯ ಹಕ್ಕುಗಳಿಗೆ ಸಂವಿಧಾನದ 14, 19, 21, 51ಎ(ಎಫ್), 29, 30, 25, 26, 347, 350 ಇವುಗಳ ಅನ್ವಯ 6 ಮತ್ತು 8ನೇ ಶೆಡ್ಯೂಲ್ ಒಳಗೊಂಡಂತೆ ರಾಜ್ಯಾಂಗದತ್ತ ಹಕ್ಕುಗಳ ಮಂಡನೆಗೆ ಪೂರಕವಾಗಿ ಮತ್ತು ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು…
ಮಡಿಕೇರಿ ಡಿ.12 NEWS DESK : ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಮಡಿಕೇರಿಯಲ್ಲಿ ಒಂದು ಗ್ರೂಪ್-ಡಿ ಹುದ್ದೆ ಖಾಲಿ ಇದ್ದು, ಹೊರಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ ಎಸ್ಎಸ್ಎಲ್ಸಿ ತೇರ್ಗಡೆ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಡಿಸೆಂಬರ್, 18 ರಂದು ಬೆಳಗ್ಗೆ ನಡೆಯಲಿರುವ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಇಚ್ಛೆ ಇರುವ ಅಭ್ಯರ್ಥಿಗಳು ಆಯೋಗದ ದೂ.ಸಂ.08272-229852 ಅಥವಾ ಖುದ್ದಾಗಿ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಹಾಗೂ ಸಹಾಯಕ ರಿಜಿಸ್ಟ್ರಾರ್ ತಿಳಿಸಿದ್ದಾರೆ.
ಸೋಮವಾರಪೇಟೆ ಡಿ.12 NEWS DESK : ಕೊಡಗಿನ ವೀರ ಸೇನಾನಿಗಳನ್ನು ಅವಮಾನ ಮಾಡಿದ ವ್ಯಕ್ತಿಯನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಡಗು ಸರ್ವ ಜನಾಂಗದ ಒಕ್ಕೂಟದಿಂದ ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಕರೆ ನೀಡಿದ್ದ ಕೊಡಗು ಬಂದ್ಗೆ ಸೋಮವಾರಪೇಟೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟದಣದಲ್ಲಿ ಖಾಸಗಿ ಬಸ್ ಗಳ ಸಂಚಾರವಿಲ್ಲದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ಪರದಾಡುವಂತಾಯಿತು. ಪಟ್ಟಣದಲ್ಲಿ ಬೆರಳಣಿಕೆಯ ಹೊಟೇಲ್ಗಳು ಮುಚ್ಚಲ್ಪಟಿದ್ದವು. ಉಳಿದಂತೆ ಎಂದಿನಂತೆ ವ್ಯಾಪಾರ ವಹಿವಾಟು ನಡೆಯಿತು. ಶಾಲಾ-ಕಾಲೇಜು ವಾಹನಗಳಲ್ಲಿ ವಿದ್ಯಾರ್ಥಿಗಳು ಬೆಳಿಗ್ಗೆ ತೆರಳಿದರು. ಎಂದಿನಂತೆ ಆಟೋ ಸಂಚಾರವಿತ್ತು. ತಾಲ್ಲೂಕು ಕಚೇರಿ, ಸಹಕಾರ ಹಾಗು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಎಂದಿನಂತೆ ಕೆಲಸ ಕಾರ್ಯಗಳು ನಡೆದವು.
ಮಡಿಕೇರಿ ಡಿ.12 NEWS DESK : ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಡಿ.29 ರಂದು ವಿಶ್ವಮಾನವ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ಈ ಸಂಬಂಧ ನಗರದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕುವೆಂಪು ಅವರ ಕುರಿತು ಉಪನ್ಯಾಸ, ಕವನವಾಚನ, ಗಮಕ ವಾಚನ ಏರ್ಪಡಿಸುವುದು, ಗೀತಾಗಾಯನ ಮತ್ತಿತರ ಕಾರ್ಯಕ್ರಮವನ್ನು ಆಚರಿಸುವುದರ ಜೊತೆಗೆ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು. ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳನ್ನು ಆಹ್ವಾನಿಸುವುದರ ಜೊತೆಗೆ ಹಲವು ಕಾರ್ಯಕ್ರಮ ಆಯೋಜಿಸುವ ಸಂಬಂಧ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರ…
ಮಡಿಕೇರಿ ಡಿ.12 NEWS DESK : ಶ್ರೀ ಹನುಮಸೇನಾ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಕುಶಾಲನಗರದಲ್ಲಿ ನಡೆಯುವ ಹನುಮ ಜಯಂತೋತ್ಸವದಲ್ಲಿ ಕೂಡಿಗೆ ಕೂಡುಮಂಗಳೂರು ಸಮಿತಿಯಿಂದ ನಡೆಯುವ 3ನೇ ವರ್ಷದ ಶೋಭಯಾತ್ರೆಯಲ್ಲಿ ಈ ಬಾರಿ ಅಯೋಧ್ಯೆಯ ಬಾಲ ರಾಮಮಂದಿದ ಮಾದರಿ ಶೋಭಯಾತ್ರೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ. ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಿಂದ ಅತ್ಯಾಕರ್ಷಕ ಡಿ.ಜೆ.ವಾದ್ಯವೃಂದದೊಂದಿಗೆ ಹಾಗೂ ಆಕರ್ಷಕ ವಿವಿಧ ಕಲಾ ತಂಡದ ಪ್ರದರ್ಶನಗಳೊಂದಿಗೆ ಹೊರಡುವ ಶೋಭಯಾತ್ರೆಯು ಹಾಸನ ಹೆದ್ದಾರಿಯ ಮೂಲಕ ಹೊರಟು ಕೂಡಿಗೆ- ಕೂಡುಮಂಗಳೂರು ಮತ್ತು ಕೂಡ್ಲೂರು ಮಾರ್ಗವಾಗಿ ಪ್ರಮುಖ ರಾಜ್ಯ ಹೆದ್ದಾರಿ ಬೀದಿಯ ಮೂಲಕ ಸಾಗಿ ಕುಶಾಲನಗರದಲ್ಲಿ ನಡೆಯುವ ಅದ್ದೂರಿ ಹನುಮ ಜಯಂತೋತ್ಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ. ಶೋಭಯಾತ್ರೆಯ ಅಂಗವಾಗಿ ಸಮಿತಿಯ ನೂರಾರು ಯುವಕ ತಂಡದವರಿಂದ ಕೂಡಿಗೆ, ಕೂಡುಮಂಗಳೂರು, ಕೂಡ್ಲೂರು ಗ್ರಾಮ ವರೆಗಿನ ಹೆದ್ದಾರಿಯ ಎರಡೂ ಬದಿಗಳಲ್ಲಿ ಕೇಸರಿ ಬಣ್ಣದ ಬಂಟಿಂಗ್ಸ್ ಗಳಿಂದ ಗ್ರಾಮವನ್ನು ಸಿಂಗಾರ ಮಾಡಲಾಗಿದೆ. ಶೋಭಯಾತ್ರೆಗೆ ಸಂಬಂಧಿಸಿದ ಬೃಹತ್ ಕಲಾಕೃತಿಯ ವಿಗ್ರಹದ…
ಗೋಣಿಕೊಪ್ಪ ಡಿ.12 NEWS DESK : ತಿತಿಮತಿ ಶ್ರೀರಾಮ ಸೇವಾ ಸಮಿತಿ ವತಿಯಿಂದ 13 ರಿಂದ 16 ರವರೆಗೆ ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹನುಮ ಜಯಂತಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಹನುಮ ಜಯಂತಿ ಆಚರಣೆ ಸಮಿತಿಯ ಅಧ್ಯಕ್ಷ ಚೆಕ್ಕೆರ ಮನುಕಾವೇರಪ್ಪ ತಿಳಿಸಿದ್ದಾರೆ. ಸದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.13 ರಂದು ಗಣಪತಿ ಹೋಮ ಮಾಡುವ ಮೂಲಕ ಬಾಳುಮನೆ ಗಣಪತಿ ದೇವಸ್ಥಾನದ ಬಳಿ ಹನುಮನ ಮೂರ್ತಿಯ ಪ್ರತಿಷ್ಠಾಪನೆ ಮಾಡಿ ಆರಾಧಿಸಲಾಗುತ್ತದೆ ಎಂದರು. ಡಿ.14 ರಂದು ಭಜನೆ, ಹನುಮಾನ್ ಚಾಲೀಸಾ ಪಠಣ, 15 ರಂದು ಸ್ಥಳೀಯ ಜನರಿಗೆ ಕ್ರೀಡಾ ಸ್ಪರ್ಧೆಗಳಾಗಿ ಭಾರದ ಗುಂಡು ಎಸೆಯುವುದು, ಹಗ್ಗ ಜಗ್ಗಾಟ, ಇನ್ನಿತರ ಕ್ರೀಡೆಗಳು ನಡೆಯಲಿದೆ. ಜೊತೆಗೆ ಸಂಜೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಸಂಜೆ ಮತ್ತು ದಿಪೋತ್ಸವ ನಡೆಯಲಿದೆ. ಡಿ.16 ರಂದು ಬೆಳಗ್ಗೆ 10 ಗಂಟೆಗೆ ಬಾಳುಮನೆ ಗಣಪತಿ ದೇವಸ್ಥಾನದಿಂದ ಹನುಮನ ಮೂರ್ತಿ ಹೊತ್ತು ವಿವಿಧ ಕಲಾ ಪ್ರಕಾರಗಳ ಪ್ರದರ್ಶನದೊಂದಿಗೆ ಬೃಹತ್ ಮೆರವಣಿಗೆ ನಡೆಯಲಿದೆ. ನಂತರ…
ಮಡಿಕೇರಿ ಡಿ.12 NEWS DESK : ಮೈಸೂರಿನ ಮಣಿಪಾಲ ಆಸ್ಪತ್ರೆ ಸುಧಾರಿತ ಹೃದಯ ಆರೈಕೆಗೆ ಬದ್ಧವಾಗಿದ್ದು, ಎರಡು ಗಮನಾರ್ಹವಾದ ಪ್ರಗತಿಗಳೊಂದಿಗೆ TAVI ಟ್ರಾನ್ಸ್ ಕ್ಯಾಥೆಟರ್ ಮಹಾಪಧಮನಿಯ ಕವಾಟ ಮತ್ತು ಲೀಡ್ಲೆಸ್ ಪೇಸ್ ಮೇಕರ್ ಅಳವಡಿಕೆಯಂತಹ ಪರಿವರ್ತಕ ಹೃದಯ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ ಎಂದು ಮಣಿಪಾಲ ಆಸ್ಪತ್ರೆಯ ಖ್ಯಾತ ಹೃದಯ ತಜ್ಞ ಡಾ.ಶರತ್ ಬಾಬು ಎನ್.ಎಂ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ತಂತ್ರಜ್ಞಾನ ತೆರೆದ ಶಸ್ತ್ರಚಿಕಿತ್ಸೆಯ ಅಗತ್ಯವನ್ನು ನಿವಾರಿಸುವುದಲ್ಲದೆ ವೇಗವಾಗಿ ಚೇತರಿಸಿಕೊಳ್ಳಲು, ರೋಗಿಗಳಿಗೆ ಕನಿಷ್ಠ ಅಪಾಯ ಮತ್ತು ಆಸ್ಪತ್ರೆಯ ವಾಸ್ತವ್ಯವನ್ನು ಕಡಿಮೆ ಮಾಡಲು ಅನುಕೂಲ ಕಲ್ಪಿಸುತ್ತದೆ. ಅಲ್ಲದೆ ಇದು ಸಾಂಪ್ರದಾಯಿಕ ಹೃದಯ ಶಸ್ತ್ರಚಿಕಿತ್ಸೆಯ ತುಲನೆಯಲ್ಲಿ ಸುರಕ್ಷಿತ ಮತ್ತು ಕನಿಷ್ಠ ಆಘಾತಕಾರಿ ಪರ್ಯಾಯಗಳಾಗಿವೆ. ಪರಿಧಮನಿಯ ಮತ್ತು ಬಾಹ್ಯ ರಕ್ತ ಸಂಚಲನ ವ್ಯವಸ್ಥೆಯ ಆಂಜಿಯೋಪ್ಲಾಸ್ಸಿ, ಜನ್ಮಜಾತ ಹೃದಯ ದೋಷಗಳಿಗೆ ಸಾಧನ ಮುಚ್ಚುವಿಕೆ, ಮಿಟ್ರಲ್ ಮತ್ತು ಪಲ್ಮನರಿ ಕವಾಟಗಳಿಗೆ ಬಲೂನ್ ವಾಲ್ಟೋಟಮಿ ಸೇರಿದಂತೆ ಇತರ ಹೃದಯ ಮಧ್ಯಸ್ಥಿಕೆಗಳನ್ನು ಒದಗಿಸುತ್ತೇವೆ ಎಂದರು. ಹೃದಯ ರೋಗ ನಿವಾರಣೆ ಮತ್ತು…
ಪುತ್ತೂರು ಡಿ.12 NEWS DESK : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಹೊಸ ಸಭಾಂಗಣದ ಆವಶ್ಯಕತೆಯನ್ನು ಮನಗಂಡಂತಹ ಮಾತೃ ಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘವು ಸುಮಾರು 3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹವಾನಿಯಂತ್ರಿತ ಸಾವರ್ಕರ್ ಸಭಾಂಗಣವನ್ನು ನಿರ್ಮಿಸಿಕೊಟ್ಟಿದೆ. ಇದರ ಉದ್ಘಾಟನೆಯು ಡಿ.14 ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ. 1 ಮಾರ್ಚ್ 1916 ರಲ್ಲಿ ಪ್ರಾರಂಭವಾದ ವಿವೇಕಾನಂದ ವಿದ್ಯಾವರ್ಧಕ ಸಂಘವು ಶಿಶುಮಂದಿರದಿಂದ ತೊಡಗಿ ಸ್ನಾತಕೋತ್ತರ ಶಿಕ್ಷಣ ಸಂಸ್ಥೆಯವರೆಗೆ ಒಟ್ಟು 78ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿದೆ. ವಿದ್ಯಾಭಾರತಿಯ ಪರಿಕಲ್ಪನೆಯಂತೆ ತನ್ನೆಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ನಡೆಸಲ್ಪಡುವ ಸಂಸ್ಥೆಗಳಲ್ಲಿ ಕರಾವಳಿ ಕರ್ನಾಟಕದ ಉತ್ತಮ ತಾಂತ್ರಿಕ ಶಿಕ್ಷಣ ಸಂಸ್ಥೆ ಎಂದು ಹೆಸರಾಗಿರುವ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯೂ ಒಂದು. ಆರು ಪದವಿ ವಿಭಾಗಗಳು ಮತ್ತು ಎರಡು ಸ್ನಾಕೋತ್ತರ ವಿಭಾಗಗಳಲ್ಲಿ ಸುಮಾರು 2000 ವಿದ್ಯಾರ್ಥಿಗಳು ವಿದ್ಯಾರ್ಜನೆಯನ್ನು ಮಾಡುತ್ತಿದ್ದಾರೆ. ಇಲ್ಲಿ ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ…






