ಲೇಖಕ: admin

ಮಡಿಕೇರಿ ನ.27 NEWS DESK : ದೇಶ ಕಂಡ ಮಹಾನ್ ಚೇತನಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಪದ್ಮಭೂಷಣ ಕೆ.ಎಸ್.ತಿಮ್ಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವ ಆರೋಪಿಯನ್ನು ಮುಂದಿನ ಒಂದು ವಾರದೊಳಗೆ ಗಡಿಪಾರು ಮಾಡದಿದ್ದರೆ ತೀವ್ರ ರೀತಿಯ ಹೋರಾಟವನ್ನು ರೂಪಿಸುವುದಾಗಿ ವಿವಿಧ ಕೊಡವ ಸಂಘಟನೆಗಳು ಎಚ್ಚರಿಕೆ ನೀಡಿವೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕೊಡವ ಸಮಾಜದ ಕಾರ್ಯದರ್ಶಿ ಕೀತಿಯಂಡ ವಿಜಯಕುಮಾರ್, ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ, ಕಾರ್ಯದರ್ಶಿ ಕುಂಞರ ಗಿರೀಶ್ ಭೀಮಯ್ಯ, ಕನೆಕ್ಟಿಂಗ್ ಕೊಡವಾಸ್ ಸಂಚಾಲಕ ಶಾಂತೆಯಂಡ ನಿರನ್ ನಾಚಪ್ಪ, ಒಡಿಯಂಡ ನವೀನ್ ತಿಮ್ಮಯ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಚೊಟ್ಟೆಯಂಡ ಸಂಜುಕಾವೇರಪ್ಪ ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು. ವೀರ ಸೇನಾನಿಗಳಿಗೆ ಅಪಮಾನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರ ಕಾರ್ಯ ಕ್ಷಮತೆಯನ್ನು ಅಭಿನಂದಿಸುತ್ತೇವೆ, ಈ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ ಗಡಿಪಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇವೆ. ಆರೋಪಿಯನ್ನು ಅಮಾನತು ಮಾಡಿದ ವಕೀಲರ ಸಂಘವನ್ನು ಕೂಡ ಅಭಿನಂದಿಸುವುದಾಗಿ ಹೇಳಿದರು.…

Read More

ಪುತ್ತೂರು ನ.27 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ವಿದ್ಯಾರ್ಥಿಗಳು ಅಂತರ್ ವಿಶ್ವವಿದ್ಯಾನಿಲಯ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸುವುದಕ್ಕೆ ಆಯ್ಕೆಯಾಗಿದ್ದಾರೆ. ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ವರ್ಷಿತಾ.ಪಿ.ಆಳ್ವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕಬಡ್ಡಿ ತಂಡಕ್ಕೆ ಆಯ್ಕೆಗೊಂಡಿದ್ದಾರೆ. ತಮಿಳ್ನಾಡಿನ ಕಾರೈಕುಡಿಯ ಅಳಗಪ್ಪ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ನ.29 ರಿಂದ ಡಿ.2 ರ ವರೆಗೆ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪಂದ್ಯಾಟದಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ. ಪುರುಷರ ವಿಭಾಗದ ಭಾರ ಎತ್ತುವ ತಂಡಕ್ಕೆ ಕಾಲೇಜಿನ ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಭುವನ್‍ರಾಮ್ ಭಂಡಾರಿ ಆಯ್ಕೆಯಾಗಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ನಾಗಾರ್ಜುನ ನಗರದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನ.30 ರಿಂದ ಡಿ.3 ರ ವರೆಗೆ ನಡೆಯುವ ನೈರುತ್ಯ ವಿಭಾಗದ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ…

Read More

ವಿರಾಜಪೇಟೆ ನ.27 NEWS DESK : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದಿಂದ ವಿರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟ ಮತ್ತು ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಸಭಾ ಕಾರ್ಯಕ್ರಮ ಉದ್ಘಾಟಿಸಿ ಮತನಾಡಿದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ಕ್ರೀಡಾಕೂಟ ಹಮ್ಮಿಕೊಂಡು ಇಳಿವಯಸ್ಸಿನಲ್ಲಿಯೂ ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ಒದಗಿಸಿರುವುದು ಶ್ಲಾಘನೀಯ. ಸೈನಿಕರ ತ್ಯಾಗ, ಬಲಿದಾನ, ಸೇವಾ ಮನೋಭಾವನೆಯಿಂದಾಗಿ ದೇಶ ಸ್ವತಂತ್ರವಾಗಿ ಅಭಿವೃದ್ಧಿಯತ್ತ ದಾಪುಗಾಲಿಡುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಯೋಧನಿಗೂ ಗೌರವ ಸಲ್ಲಿಸಬೇಕು. ಯೋಧರ ಈ ತ್ಯಾಗಕ್ಕೆ ಗೌರವ ಸಲ್ಲಿಸಬೇಕೇ ಹೊರತು ಅಸಡ್ಡೆ, ತಪ್ಪು ಕಲ್ಪನೆ ಇಟ್ಟುಕೊಳ್ಳಬಾರದೆಂದು ಸಲಹೆ ನೀಡಿದರು. ಅಲ್ಲದೆ ವೈಯುಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ ಎಂದು ಹೇಳಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ,…

Read More

ವಿರಾಜಪೇಟೆ ನ.27 NEWS DESK : ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದ ಭಾರದ  ಗುಂಡು ಎಸೆತ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪಿ.ಶಿಪ್ರಾ ಕಾಳಪ್ಪ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಸ್ಪರ್ಧಿಸಿದ್ದಾಳೆ. ಇವಳು ವಿರಾಜಪೇಟೆ ತಾಲೂಕಿನ ಮೀನು ಪೇಟೆಯ ನಿವಾಸಿ ಮನಯೆಪಂಡ ಕಾಳಪ್ಪ ಹಾಗೂ ವಿರಾಜಪೇಟೆಯ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾದ ದೇಚಮ್ಮ ಕಾಳಪ್ಪ ದಂಪತಿಯ ಪುತ್ರಿ. ದೈಹಿಕ ಶಿಕ್ಷಕಿ ಮೋನಿಕಾ ಕಾವೇರಿ ಅವರೊಂದಿಗೆ ತರಬೇತಿ ಪಡೆಯುತ್ತಿರುವ ಪಿ.ಶಿಪ್ರಾಗೆ ಶಾಲಾ ಆಡಳಿತ ಮಂಡಳಿಯವರು, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿಯರುಗಳು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಮಡಿಕೇರಿ NEWS DESK ನ.27 : ಅಮ್ಮತ್ತಿ- ಪಾಲಿಬೆಟ್ಟ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ದುರಸ್ತಿ ಕಾರ್ಯ ಕೈಗೊಳ್ಳದ ಆಡಳಿತ ವ್ಯವಸ್ಥೆಯ ನಿರ್ಲಕ್ಷö್ಯವನ್ನು ಖಂಡಿಸಿ ಆಟೋ ಚಾಲಕರು ಪ್ರತಿಭಟನೆ ನಡೆಸಿದರು. ಆಟೋ ಮಾಲೀಕರ ಮತ್ತು ಚಾಲಕರ ಸಂಘದ ವತಿಯಿಂದ ಅಮ್ಮತ್ತಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಆಟೋ ಚಾಲಕರು ಹದಗೆಟ್ಟ ರಸ್ತೆಯನ್ನು ತಕ್ಷಣ ಡಾಂಬರೀಕರಣಗೊಳಿಸಿ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿದರು. ಕಳೆದ ಅನೇಕ ತಿಂಗಳುಗಳಿAದ ರಸ್ತೆ ತುಂಬಾ ಹೊಂಡ ಗುಂಡಿಗಳಾಗಿ ವಾಹನ ಸಂಚಾರ ಅಸಾಧ್ಯವಾಗಿದ್ದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆAದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆ ದುರಸ್ತಿಗೆ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read More

ನಾಪೋಕ್ಲು ನ.27 NEWS DESK : ಸರ್ವ ಸದಸ್ಯರು ಒಗ್ಗೂಡಿದರೆ ಮಾತ್ರ ಸಂಘದ ಬೆಳವಣಿಗೆ ಸಾಧ್ಯ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕೊಂಡಿರ ನಾಣಯ್ಯ ಹೇಳಿದರು. ನಾಪೋಕ್ಲು ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಸಂಘದಿಂದ ಎಲ್ಲರಿಗೂ ಪ್ರಯೋಜನವಾಗಬೇಕು. ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಬೇಕಾದರೆ ಎಲ್ಲಾ ಸದಸ್ಯರು ಒಗ್ಗೂಡಬೇಕು. ಹೋಬಳಿ ವ್ಯಾಪ್ತಿಯಲ್ಲಿ 200ಕ್ಕೂ ಅಧಿಕ ಮಾಜಿ ಸೈನಿಕರಿದ್ದಾರೆ. ಆದರೆ ಮಹಾಸಭೆಯಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಬಹಳ ಕಡಿಮೆ. ಹೆಚ್ಚಿನ ಸದಸ್ಯರು ಸಭೆಯಲ್ಲಿ ಪಾಲ್ಗೊಂಡರೆ ಸೈನಿಕರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ ಎಂದರು. ಸಂಘದ ಕಾರ್ಯದರ್ಶಿ ಕೇಟೋಳಿರ ಅಚ್ಚಪ್ಪ, ಖಜಾಂಚಿ ಕರೀಂ ಮಾತನಾಡಿ ವಾರ್ಷಿಕ ಲೆಕ್ಕ ಪತ್ರ ಮತ್ತು ಇತರ ವಿಷಯಗಳ ಬಗ್ಗೆ ಸದಸ್ಯರ ಪ್ರಶ್ನೆಗೆ ಉತ್ತರಿಸಿ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ಸಾಧಕ ಬಾಧಕಗಳನ್ನು ಚರ್ಚಿಸಲಾಯಿತು ಮತ್ತು ಮಹಾಸಭೆಯಲ್ಲಿ ಸದಸ್ಯರು ಪಾಲ್ಗೊಳ್ಳುವಂತೆ ಎಲ್ಲ ಸದಸ್ಯರಿಗೆ ತಿಳುವಳಿಕೆ ನೀಡಿ ಕಡ್ಡಾಯವಾಗಿ ಹಾಜರಾಗುವಂತೆ ಮಾಡಿ ಎಂದು ಸದಸ್ಯರು ಸಲಹೆ…

Read More

ವಿರಾಜಪೇಟೆ ನ.27 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳಿಂದ ‘ಸಂವಿಧಾನ ದಿನ’ ದ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾ ನಡೆಯಿತು. ವಿರಾಜಪೇಟೆ ಪಟ್ಟಣದಲ್ಲಿ ಕಾಲೇಜು ವಿದ್ಯಾರ್ಥಿಗಳು ಸಂವಿಧಾನ ಪ್ರಸ್ತಾವನೆಯ ಗೀತೆಯ ನೃತ್ಯದ ಜಾಗೃತಿ ಮೂಡಿಸಿದರು. ವಿರಾಜಪೇಟೆಯ ಗಡಿಯಾರ ಕಂಬದ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ದಯಾನಂದ ಸಂವಿಧಾನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕ ಡಾ.ಕೆ.ಬಸವರಾಜು, ಎನ್‍ಎಸ್‍ಎಸ್ ಅಧಿಕಾರಿ ರುದ್ರ, ಕನ್ನಡ ಸಹಾಯಕ ಪ್ರಾಧ್ಯಾಪಕ ರಘುರಾಜು, ಕನ್ನಡ ಉಪನ್ಯಾಸಕ ಡಾ.ಪ್ರಭು ಹಾಗೂ ಪಟ್ಟಣ ಠಾಣೆಯ ಉಪನೀರಿಕ್ಷಕರು ಹಾಜರಿದ್ದು ಕಾಲೇಜಿನ 150 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಖಾಸಗಿ ಬಸ್ ನಿಲ್ದಾಣದಲ್ಲಿ ಸಂವಿಧಾನ ಪ್ರಸ್ತಾವನೆ ಗೀತೆಗೆ ಅದ್ಭುತ ನೃತ್ಯ ಮಾಡಿದರು.  

Read More

ಪೊನ್ನಂಪೇಟೆ, ನ.27 NEWS DESK  : ಬಿಳುಗುಂದ ಗ್ರಾ.ಪಂ ವ್ಯಾಪ್ತಿಯ ಹೊಸಕೋಟೆ ಗ್ರಾಮದ ಕಾಫಿ ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು ಬೆಳೆಯನ್ನು ಸಂಪೂರ್ಣ ನಾಶ ಮಾಡಿದೆ. ಇದರಿಂದ ಫಸಲಿಗೆ ಬಂದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ, ಅಡಿಕೆ, ಬಾಳೆ, ತೆಂಗು ಬೆಳೆಗಳು ನಾಶವಾಗಿದ್ದು, ಬೆಳಗಾರರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ ಎಂದು ಹೊಸಕೋಟೆ ಗ್ರಾಮದ ಬೆಳೆಗಾರರು ದೂರಿದ್ದಾರೆ. ಗ್ರಾಮದಂಚಿನ ಕಾಡು ಮತ್ತು ಪಾಳುಬಿಟ್ಟ ಕಾಫಿ ತೋಟಗಳಿಂದ ಬರುತ್ತಿರುವ ಕಾಡಾನೆಗಳು ಈ ಭಾಗದಲ್ಲಿ ರೈತರ ಬೆಳೆಗಳ ಮೇಲೆ ನಿರಂತರ ದಾಳಿ ನಡೆಸುತ್ತಿದೆ. ಇದರಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಆನೆ ಹಾವಳಿ ತಡೆಗೆ ಹಲವು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ಬೆಳಗಾರರು ಆರೋಪಿಸಿದ್ದಾರೆ. ವರ್ಷವಿಡೀ ಕಷ್ಟಪಟ್ಟು ದುಡಿದ ಫಲವಾಗಿ ದೊರೆಯುವ ವಿವಿಧ ಬೆಳೆಗಳ ಫಸಲನ್ನು ಉಳಿಸಿಕೊಳ್ಳುವುದೇ ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ಇದಕ್ಕೆ ಕಾಡಾನೆಗಳ ನಿರಂತರ ಹಾವಳಿಯೇ ಪ್ರಮುಖ ಕಾರಣ. ಆನೆಗಳು ತೋಟಗಳಿಗೆ ನುಗ್ಗದಂತೆ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡರೂ…

Read More

ಸೋಮವಾರಪೇಟೆ ನ.27 NEWS DESK : ಸೋಮವಾರಪೇಟೆ ಜೆಎಂಎಫ್‍ಸಿ ನ್ಯಾಯಾಲಯ, ವಕೀಲರ ಸಂಘ ಮತ್ತು ಸಂತಜೋಸೆಫರ ಪದವಿ ಕಾಲೇಜಿನ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ನಡೆಯಿತು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಓದಿದರು. ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ, ಪ್ರಾಂಶುಪಾಲ ಹರೀಶ್ ಇದ್ದರು.

Read More

ಸೋಮವಾರಪೇಟೆ ನ.27 NEWS DESK : ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾರತದ ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಜಿ.ಎಂ. ಕಾಂತರಾಜು ಮತ್ತು ಸದಸ್ಯರು, ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್ ಮತ್ತು ಅನುಷ್ಠಾನ ಇಲಾಖಾಧಿಕಾರಿಗಳು ಇದ್ದರು.

Read More