ಲೇಖಕ: admin

ಸೋಮವಾರಪೇಟೆ ನ.27 NEWS DESK : ಸೋಮವಾರಪೇಟೆ ತಾಲ್ಲೂಕಿನ ತೋಳೂರುಶೆಟ್ಟಳ್ಳಿ ಡಾ. ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಪ್ರಾಂಶುಪಾಲರಾದ ಚಂದ್ರಶೇಖರ್ ರೆಡ್ಡಿ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಬೋಧಿಸಿದರು. ಈ ಸಂದರ್ಭ ಶಾಲಾ ಶಿಕ್ಷಕರುಗಳಾದ ಶಬರಿ ಗಿರೀಶ್, ಎಂ.ಡಿ.ಭವ್ಯ, ಎಸ್.ಎ.ಶಬಾನ, ಗೌತಮಿ, ರಮ್ಯ, ಪೂಜಾ, ಪುಷ್ಪಲತಾ, ಶೈಲಾ, ಕೀರ್ತಿ ಇದ್ದರು.

Read More

ಸೋಮವಾರಪೇಟೆ ನ.27 NEWS DESK : ಸರ್ಕಾರದ ಶಕ್ತಿ ಯೋಜನೆಯನ್ನು ಕೆಲವರು ಟೀಕಿಸಲು ಕೆಎಸ್‍ಆರ್‍ಟಿಸಿಯ ಕೆಲ ನಿರ್ವಾಹಕರು ಮತ್ತು ಚಾಲಕರೆ ಕಾರಣ ಎಂದು ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತಾರಾಜ್ ಹೇಳಿದರು. ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರೆಂಟಿ ಯೋಜನೆಯ ಮಾಸಿಕ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು, ತಮಗಾದ ಅನುಭವವನ್ನು ಸಭೆಯ ಗಮನಕ್ಕೆ ತಂದರು. ಸಭ್ಯತೆಯನ್ನು ಕಲಿಸುವ ತರಬೇತಿ ಕಾರ್ಯಾಗಾರ ಆಯೋಜಿಸುವ ಅನಿವಾರ್ಯತೆ ಇದೆ ಎಂದರು. ಹಿರಿಯ ನಾಗರಿಕರಿಗೆ ನೀಡುವ ರಿಯಾಯಿತಿ ಹಣವನ್ನು ಸರ್ಕಾರ ಕೆಎಸ್‍ಆರ್‍ಟಿಸಿಗೆ ಭರಿಸುತ್ತದೆ. ಅವರು ಭಿಕ್ಷೆ ಕೊಡುವುದಲ್ಲ ಎಂದು ಹೇಳಿದರು. ತಾ.ಪಂ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ತಮ್ಮ ಅನುಭವವನ್ನು ಹೇಳಿಕೊಂಡರು. ಬಸ್ ತಡವಾಗಿ ಬಂದಿದ್ದಕ್ಕೆ ಸಭ್ಯತೆಯಿಂದಲೇ ಪ್ರಶ್ನಿಸಿದಾಗ, ಇದೇನೂ ಮರ್ಸಿಡಿಸ್ ಬೆಂಜಾ, ಬೇಕಾದ್ರೆ ಹೋಗಿ ಕುತ್ಕೊಳ್ಳಿ ಎಂದು ಅನಾಗರಿಕತೆ ಪ್ರದರ್ಶಿಸಿದ. ನಿರ್ವಾಹಕನೊಂದಿಗೆ ವಾಗ್ವಾದ ಮಾಡಲಿಲ್ಲ. ನೇರವಾಗಿ ಹಿರಿಯ ಅಧಿಕಾರಿಗೆ ಮೇಲ್ ಮೂಲಕ ದೂರು ನೀಡಿದೆ ಎಂದು ಅನುಭವ ಹೇಳಿಕೊಂಡರು. ಮಹಿಳೆಯರು ಬಸ್‍ಗೆ ಕೈ ಅಡ್ಡಹಾಕಿದರೆ…

Read More

ಮಡಿಕೇರಿ ನ.27 NEWS DESK : ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ರೈತರು 2024ರ ಮುಂಗಾರು ಹಂಗಾಮಿನಲ್ಲಿ ಬೆಳೆದಂತಹ ಬೆಳೆಗಳ ವಿವರಗಳನ್ನು ಫೋಟೋ ಸಹಿತ ಖಾಸಗಿ ನಿವಾಸಿಗಳ ಮುಖಾಂತರ ಬೆಳೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ. ರೈತರು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಬೆಳೆದರ್ಶಕ್ 2024 ಅನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ವಿವಿಧ ಪಹಣಿಯಲ್ಲಿ ಯಾವ ಬೆಳೆಯನ್ನು ಬೆಳೆಯಲಾಗಿದೆ ಹಾಗೂ ಯಾವ ಬೆಳೆ ಹೆಸರು ನಮೂದಾಗಿದೆ ಎಂದು ತಿಳಿದುಕೊಳ್ಳಬಹುದು. ಒಂದು ವೇಳೆ ತಾವು ಬೆಳೆದಿರುವ ಬೆಳೆಗೂ ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಬೆಳೆಗೂ ವ್ಯತ್ಯಾಸವಿದ್ದಲ್ಲಿ ಅಥವಾ ಯಾವುದೇ ಬೆಳೆ ಸಮೀಕ್ಷೆಯನ್ನು ಮಾಡದೆ ಇದ್ದಲ್ಲಿ ತಾವುಗಳು ಬೆಳೆ ಸಮೀಕ್ಷೆ ಆಪ್ ಮುಖಾಂತರ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ. ಈ ಆಕ್ಷೇಪಣೆಯನ್ನು ನವೆಂಬರ್, 30 ರೊಳಗೆ ಮಾಡಬೇಕಾಗುತ್ತದೆ. ಒಂದು ವೇಳೆ ಯಾವುದೇ ಆಕ್ಷೇಪಣೆ ಮಾಡದಿದ್ದಲ್ಲಿ ಪ್ರಸ್ತುತ ಸಮೀಕ್ಷೆ ಆಗಿರುವ ಬೆಳೆಯೇ ನಿಮ್ಮ ಪಹಣಿಯಲ್ಲಿ ನಮೂದಾಗುತ್ತದೆ ಅಥವಾ ಯಾವುದೇ ಬೆಳೆ ಸಮೀಕ್ಷೆ ಆಗದೆ ಇದ್ದಲ್ಲಿ ನಿಮ್ಮ ಪಹಣಿಯಲ್ಲಿ ಯಾವುದೇ ಬೆಳೆಯ ವಿವರ…

Read More

ವಿರಾಜಪೇಟೆ ನ.27 NEWS DESK : ಶ್ರೇಷ್ಠವಾದ ರಾಷ್ಟ್ರ ಗ್ರಂಥವಾಗಿರುವ ಭಾರತದ ಸಂವಿಧಾನವೇ ಜನರ ಹಕ್ಕುಗಳಿಗೆ ಮೂಲವಾಗಿದೆ. ದೇಶ ಸ್ವಾತಂತ್ರ್ಯಗೊಂಡು ಮೂರು ವರ್ಷಗಳ ನಂತರ ಗಣರಾಜ್ಯವಾಗಿ ಗುರುತಿಸಿಕೊಂಡು ಪ್ರಪಂಚದ ನಕ್ಷೆಯಲ್ಲಿ ಭಾರತ ತನ್ನದೇ ಆದ ಅಸ್ತಿತ್ವವನ್ನು ಕಾಪಾಡಿಕೊಳ್ಳುವಲ್ಲಿ ದೇಶದ ಸಂವಿಧಾನ ಭದ್ರಬುನಾದಿಯನ್ನು ಕಲ್ಪಿಸಿದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಹೇಳಿದರು. ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ವಿರಾಜಪೇಟೆಯ ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆದ ಸಂವಿಧಾನ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದ ಸಂವಿಧಾನಕ್ಕೆ ವಿಶೇಷವಾದ ಘನತೆಯಿದೆ. ನಮ್ಮ ಸಂವಿಧಾನ ವಿಶ್ವದಲ್ಲೆ ಅತ್ಯಧಿಕ ಹಕ್ಕುಗಳನ್ನು ಆಧರಿಸಿ ರಚನೆಯಾಗಿರುವ ಅತಿ ದೀರ್ಘವಾದ ಲಿಖಿತ ಸಂವಿಧಾನ ಎಂಬ ಗರಿಮೆಗೆ ಪಾತ್ರವಾಗಿದೆ ಎಂದು ಅವರು ಸ್ಮರಿಸಿದರು. ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಒದಗಿಸಿದ ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದ್ದು, ಜಗತ್ತಿನ…

Read More

ಬೆಂಗಳೂರು NEWS DESK ನ.26 : *ಕಳೆದ 15 ವರ್ಷಗಳಲ್ಲಿ ಆದಿವಾಸಿ ಸಮುದಾಯಗಳು-ಸಚಿವರು-ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಮೊದಲ ಸಭೆ* *ಸತತ 200 ನಿಮಿಷಗಳ ಕಾಲ ನಡೆದ ಸಭೆ- ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ* *2 ತಿಂಗಳಲ್ಲಿ ಮತ್ತೆ ಇದೇ ಸಭೆ ಕರೆಯುತ್ತೇನೆ: ಈ ಸಭೆಯ ನಿರ್ಣಯಗಳು ಜಾರಿ ಆಗದೇ ಇದ್ದರೆ ನಾನು ಸಹಿಸಲ್ಲ: ಸಿಎಂ ಎಚ್ಚರಿಕೆ*  ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮoತ್ರಿಯವರು ನೀಡಿದ ಇತರೆ ಸೂಚನೆಗಳು…* ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಜನರಿಗೆ ಮನೆ, ಕುಡಿಯುವ ನೀರು, ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ರಸ್ತೆಗಳ ಅಭಿವೃದ್ಧಿಗೆ ಮತ್ತು ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಯಾವುದೇ ಅಡ್ಡಿ ಉಂಟು ಮಾಡಬಾರದು. ಪ್ರತಿ ಹಾಡಿಯಲ್ಲಿ ಕುಡಿಯುವ ನೀರಿನ ಸoಪರ್ಕ ಕಲ್ಪಿಸಬೇಕು. ಪಡಿತರ ಚೀಟಿ ಹೊoದಿಲ್ಲದ ಬುಡಕಟ್ಟು…

Read More

ಮಡಿಕೇರಿ NEWS DESK ನ.26 : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 34ನೇ ವರ್ಷದ “ಕೊಡವ ನ್ಯಾಷನಲ್ ಡೇ” ಮತ್ತು ಭಾರತದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು 9 ಪ್ರಮುಖ ನಿರ್ಣಯಗಳನ್ನು ಮಂಡಿಸಿದರು. ಭಾರತೀಯ ಸಂವಿಧಾನದಡಿಯಲ್ಲಿ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ನೀಡಬೇಕು. ಅಂತರಾಷ್ಟ್ರೀಯ ಕಾನೂನಿನಡಿ ಕೊಡವರನ್ನು ಸ್ಥಳೀಯ ಕೊಡವ ಬುಡಕಟ್ಟು ಜನರು ಎಂದು ಗುರುತಿಸಬೇಕು. ಸಂವಿಧಾನದ 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ಕೊಡವ ಸಾಂಪ್ರದಾಯಿಕ “ಸಂಸ್ಕಾರ ಗನ್” ಹಕ್ಕಿಗೆ ಸಾಂವಿಧಾನಿಕ ಭದ್ರತೆ ನೀಡಬೇಕು. ಕೊಡವ ಭಾಷೆಯನ್ನು ಭಾರತೀಯ ಸಂವಿಧಾನದ 8ನೇ ಶೆಡ್ಯೂಲ್‌ನಲ್ಲಿ ಸೇರಿಸಬೇಕು. ಕೊಡವ ಜಾನಪದ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯಾಗಿ ಗುರುತಿಸಬೇಕು. ಕಾವೇರಿ ನದಿಯನ್ನು ಕಾನೂನುಬದ್ಧ ವ್ಯಕ್ತಿಯ ಸ್ಥಾನಮಾನದೊಂದಿಗೆ ಜೀವಂತ ಘಟಕವಾಗಿ ಗುರುತಿಸಬೇಕು. ಕೊಡವರ ಅನುಕೂಲಕ್ಕಾಗಿ ನದಿಯ ನೀರಿನ ಸಂಪನ್ಮೂಲದ ಬಳಕೆಗೆ ಮುಕ್ತ ಅವಕಾಶ ನೀಡಬೇಕು.…

Read More

ಮಡಿಕೇರಿ ನ.26 NEWS DESK : ಮಡಿಕೇರಿ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರ ಹೊಮ್ಮುವ ಎಫ್3 ಗದ್ದಿಗೆ ಫೀಡರ್‍ನಲ್ಲಿ ನವೆಂಬರ್, 27 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ರಾಣಿಪೇಟೆ, ಟಿಜಾನ್ ಲೇಔಟ್, ಕಾನ್ವೆಂಟ್ ಜಂಕ್ಷನ್ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ನ.26 NEWS DESK : ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಅವರ ಕಲೆಗೆ ಪ್ರೋತ್ಸಾಹ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭಾ ತಿಳಿಸಿದರು. ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನ ದಿನ ಪ್ರಯುಕ್ತ ಪ್ರತಿಜ್ಞಾ ವಿಧಿ ಬೋಧಿಸಿ, ಮಕ್ಕಳು ತಮ್ಮ ಜೀವನದಲ್ಲಿ ಪ್ರತಿಜ್ಞೆ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದಲೇ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಅಭಿರುಚಿ ಹೊಂದುವಂತೆ ಶಿಕ್ಷಕರು ಮತ್ತು ಪೋಷಕರು ಮಕ್ಕಳನ್ನು…

Read More

ವಿರಾಜಪೇಟೆ ನ.26 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನ.27 ರಂದು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಕಾವೇರಿ ಕಾರ್ನಿವಾಲ್ ಜಿಲ್ಲಾಮಟ್ಟದ ಫೆಸ್ಟ್ ನಡೆಸಲಾಗುವುದು ಎಂದು ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ.ನಾಣಯ್ಯ ತಿಳಿಸಿದರು. ಕಾಲೇಜಿನ ಕೌಸ್ತುಬ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ನಡೆಸಿ ತರಗತಿ, ಪರೀಕ್ಷೆ, ಪಾಠದ ವಿಚಾರದಲ್ಲಿ ಹುದುಗಿ ಹೋಗಿರುವ ವಿದ್ಯಾರ್ಥಿಗಳಿಗೆ ನವೊಲ್ಲಾಸ ನೀಡುವುದರೊಂದಿಗೆ ಜಿಲ್ಲಾದ್ಯಂತ ಪ್ರೌಢಶಾಲಾ ವಿಭಾಗದಲ್ಲಿರುವ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದ್ದು. ಫ್ರೌಡ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಈ ರೀತಿಯ ಫೆಸ್ಟ್ ಗಳು ನಡೆಯುವುದು ತೀರ ಅಪರೂಪಗಿದೆ. ಜಿಲ್ಲಾ ಮಟ್ಟದಲ್ಲಿರುವ ಹೆಚ್ಚಿನ ಪ್ರತಿಭೆಗಳನ್ನು ಒಂದಡೆ ಸೇರಿಸುವ ಹಾಗೂ ವಿದ್ಯಾರ್ಥಿಗಳು ಒತ್ತಡದಿಂದ ಹೊರಬಂದು ಸಂಭ್ರಮದಿಂದ ಪಾಲ್ಗೊಳ್ಳುವಂತೆ ಮಾಡಲು ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜು ಕಳೆದ 5 ವರ್ಷಗಳಿಂದ ಸತತವಾಗಿ ‘ಕಾವೇರಿ ಕಾರ್ನಿವಾಲ್ ಫೆಸ್ಟ್ ನಡೆಸಿಕೊಂಡು ಬರುತ್ತಿದೆ. ಅದರಂತೆ ಈ ವರ್ಷವೂ…

Read More

ಚೆಟ್ಟಳ್ಳಿ ನ.26 NEWS DESK : ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಮಹಿಳಾ ಮೀಸಲಾತಿ ಸ್ಥಾನಕ್ಕೆ ಬಿಜೆಪಿಯ ಬೆಂಬಲಿತ ಅಭ್ಯರ್ಥಿ ಅಯ್ಯಂಡ್ರ ಭಾಗೀರಥಿ ಹೆಚ್ಚಿನ ಮತ ಪಡೆಯುವ ಮೂಲಕ ಗೆಲುವನ್ನು ಸಾಧಿಸಿದ್ದಾರೆ. ಚೆಟ್ಟಳ್ಳಿ ಗ್ರಾ.ಪಂ ಚೇರಳ ಶ್ರೀಮಂಗಲ ವಾರ್ಡಿನ ಸಾಮಾನ್ಯ ಮಹಿಳಾ ಮೀಸಲಾತಿ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಭಾಗೀರಥಿ ಅಯ್ಯಂಡ್ರ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸುಲೋಚನ ಸ್ಪರ್ಧಿಸಿದರು.  ಚುನಾವಣೆಯಲ್ಲಿ 440 ಮತಚಲಾವಣೆ ಗೊಳ್ಳುವ ಮೂಲಕ ಶೇ.43 ಮತದಾನವಾಗಿತ್ತು.  ಕುಶಾಲನಗರದ ತಾಲೂಕು ಕಚೇರಿಯಲ್ಲಿ ನಡೆದ ಮತ ಎಣಿಕಾ ಕಾರ್ಯದಲ್ಲಿ ಸುಲೋಚನಾ 179 ಮತ ಪಡೆದರೆ, ಭಾಗೀರಥಿ ಅಯ್ಯಂಡ್ರ 246 ಮತಪಡೆಯುವ ಮೂಲಕ 67  ಮತಗಳ ಅಂತರದಿಂದ  ಗೆಲುವನ್ನು ಸಾಧಿಸಿದ್ದಾರೆ. ಈ ಸಂದರ್ಭ  ಬಿಜೆಪಿ ತಾಲ್ಲೂಕು ವಕ್ತಾರ ಹಾಗೂ ವಕೀಲ ಬಲ್ಲಾರಂಡ ಕಂಠಿಕಾರ್ಯಪ್ಪ, ಶಕ್ತಿ ಕೇಂದ್ರದ ಅಧ್ಯಕ್ಷ ಎನ್.ಎಸ್.ರವಿ, ಬಿಜೆಪಿಯ ಚೆಟ್ಟಳ್ಳಿ ವಾರ್ಡ್ ಅಧ್ಯಕ್ಷ ಪುತ್ತರಿರ ಶಿವು ನಂಜಪ್ಪ, ಅಯ್ಯಂಡ್ರ ಲೋಹಿತಾಶ್ವ, ಶುಭಾಂಗಿನಿ, ಅಶಾ ಬಾಬು ಹಾಗು ಕಾರ್ಯಕರ್ತರು ಹಾಜರಿದ್ದರು.

Read More