ಮಡಿಕೇರಿ ನ.26 NEWS DESK : ಕುಶಾಲನಗರ ಕೊಡವ ಸಮಾಜದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ವಾ0ಚೀರ ಮನು ನಂಜುಡ ಆಯ್ಕೆಯಾಗಿದ್ದಾರೆ. ಕುಶಾಲನಗರದ ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾಂಚೀರ ಮನು ನಂಜುಂಡ ಅವರು 240 ಮತಗಳನ್ನು ಪಡೆದು ಜಯಶೀಲರಾಗಿರುತ್ತಾರೆ. ಕಾರ್ಯದರ್ಶಿಯಾಗಿ ಐಲಪಂಡ ಸಂಜು ಬೆಳ್ಳಿಯಪ್ಪ, ಜಂಟಿ ಕಾರ್ಯದರ್ಶಿಯಾಗಿ ಮೈಂದಪಂಡ ಜಗ್ಗು , ಜಯಶೀಲರಾಗಿದ್ದಾರೆ. 24 ಸದಸ್ಯರ ಆಡಳಿತ ಮಂಡಳಿಯಲ್ಲಿ ಉಳಿದ ಸದಸ್ಯರುಗಳನ್ನು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಜಾಲಿ ತಿಮ್ಮಯ್ಯ ಮದಂಡ ಸಾಬು ಮೊಣ್ಣಪ್ಪ, ಪಟ್ಟಡ ಕೇಸು ಕಾರ್ಯನಿರ್ವಹಿಸಿದರು.
ಲೇಖಕ: admin
NEWS DESK ಹೌದು, ಹಿಂದೂ ಧರ್ಮಕ್ಕೆ ತನ್ನದೇ ಆದ ಇತಿಹಾಸವಿದೆ. ಅದು ಹಿಂದೆಯು ಉಳಿದಿತು ಇಂದು ಉಳಿದಿದೆ? ಮುಂದೆ ಉಳಿಯುತ್ತದೆಯೋ ಎಂಬ ಸಂಶಯ ನನ್ನ ಮನದಲ್ಲಿ ಮೂಡುತ್ತಿದೆ. ಏಕೆಂದರೆ ಹಿಂದೂ ಧರ್ಮದ ಮೇಲೆ ಇತರ ಧರ್ಮದ ಪ್ರಭಾವವು ಹಿಂದೂ ಧರ್ಮವನ್ನು ನಾಶ ಮಾಡುತ್ತಿದೆ ಎಂಬ ಭಯ ಹಿಂದೂಗಳನ್ನು ಕಾಡುತ್ತಿದೆ. ಆದರೆ ಹಿಂದೂ ಧರ್ಮದ ಅವನತಿಗೆ ನಾವೇ ಕಾರಣ. ಅದರಲ್ಲಿ ಒಂದು ಕಾರಣ ನಮ್ಮ ದೇವಾಲಯಗಳು ಯಾವಾಗ ವ್ಯಾಪಾರ ಕೇಂದ್ರಗಳಾದವೊ ಅಲ್ಲಿಂದ ನಮ್ಮ ಧರ್ಮದ ಅವನತಿ ಆರಂಭವಾಯಿತು. ಧರ್ಮದ ಮೂಲವೇ ದೇವಾಲಯಗಳು. ಶ್ರದ್ಧೆ ಭಕ್ತಿ ಎಲ್ಲಿ ಇರಬೇಕಿತ್ತೋ ಅಲ್ಲಿ ಬೂಟಾಟಿಕೆ ಎದ್ದು ಕಾಣತೊಡಗಿತು. ಹಿಂದೂ ದೇವಾಲಯಗಳು ಪುರಾತನ ಕಾಲದಿಂದಲೂ ಸುಂದರ ಕೆತ್ತನೆ ಕೆಲಸಗಳಿಗೆ ಪ್ರಖ್ಯಾತ ಹೊಂದಿದ್ದವು. ಕೆಲವು ದೇವಾಲಯಗಳು ಇಂದಿಗೂ ವಿಜ್ಞಾನಕ್ಕೆ ಸವಾಲ್ ಆಗಿದ್ದು, ಅಷ್ಟು ವೈಜ್ಞಾನಿಕವಾಗಿ ನಿರ್ಮಾಣವಾಗಿದೆ. ದೇವಸ್ಥಾನದ ಒಳಗಡೆ ಪೂಜೆ ಪುರಸ್ಕಾರ ಅಷ್ಟೇ ಸಂಪ್ರದಾಯಕ್ಕೆ ಪ್ರಾಧ್ಯಾನತೆ ನೀಡಲಾಗುತ್ತಿತ್ತು. ಯಾವಾಗ ಐಟಿ-ಬಿಟಿಯಲ್ಲಿ ರಿಯಲ್ ಎಸ್ಟೇಟ್ ಹಾಗೆ ಇತರ ಮೂಲಗಳಿಂದ ಹಣ ಹರಿದು…
ಮಡಿಕೇರಿ ಸೆ.26 NEWS DESK : ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು ಸಮೂಹ ಮತ್ತು ಕಲಾ ಉತ್ಸವ ಕೊಡಗು-2024ರ ಸಾಧಿಕ್ ಹಂಸ ಅವರ ಸಹಯೋಗದಲ್ಲಿ ಡಿ.15 ರಂದು ವಿರಾಜಪೇಟೆಯಲ್ಲಿ ಚಿತ್ರಕಲಾ ಪ್ರದರ್ಶನ ಗೀತಗಾಯನ ಮತ್ತು ಕಾವ್ಯಗೋಷ್ಠಿ ಕಾರ್ಯಕ್ರಮ ನಡೆಯಲಿದೆ. ವಿರಾಜಪೇಟೆ ನಗರದ “ಶಾನ್ಭಾಗ್ ಸೆಂಟರ್” (ಕೆನರಾ ಬ್ಯಾಂಕ್ ಇರುವ ಕಟ್ಟಡದ ಎರಡನೆಯ ಮಹಡಿಯಲ್ಲಿ) ಬೆಳಗ್ಗೆ 10.30 ಗಂಟೆಗೆ ಕವಿಗೋಷ್ಠಿ ಕಾರ್ಯಕ್ರಮ ನಡೆಯಲಿದ್ದು, ಭಾಗವಹಿಸಲು ಇಚ್ಛಿಸುವವರು ಗಿರೀಶ್ ಕಿಗ್ಗಾಲು +91 91413 95426, ವಿಮಲ ದಶರಥ +91 90086 13729, ಸುಪ್ರೀತ ದಿಲೀಪ್ 96322 02820, ಪುಷ್ಪ ಡಿ.ಹೆಚ್ 97410 00410, ಭಾಗ್ಯವತಿ ಅಣ್ಣಪ್ಪ +91 98454 75153, ವೈಲೇಶ.ಪಿ.ಎಸ್. ಕೊಡಗು.8861405738, ಸಾಧಿಕ್ ಹಂಸ +919845820257 ಸಂಖ್ಯೆಗೆ ಸಂದೇಶಗಳನ್ನು ಕಳುಹಿಸುವ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು ಮತ್ತು ಸಾಹಿತ್ಯ ಸಂವರ್ಧಕ ಬಳಗದ ಸಂಸ್ಥಾಪಕರು ಹಾಗೂ ಪದಾಧಿಕಾರಿಗಳು ಕೋರಿದ್ದಾರೆ.
ಮಡಿಕೇರಿ ನ.26 NEWS DESK : ಪ್ರಸಕ್ತ(2024-25) ಸಾಲಿನ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಮತ್ತು ಅವರ ಅವಲಂಬಿತ ಯುವಕ ಯುವತಿಯರಿಗೆ ಗ್ರಾಫಿಕ್ ಡಿಸೈನಿಂಗ್ ಮತ್ತು ವಿಡಿಯೋ ಎಡಿಟಿಂಗ್, ಸಾಫ್ಟ್ವೇರ್, ಮಲ್ಟಿಮಿಡಿಯಾ ಮತ್ತು ಇಲ್ಯೂಸ್ಟ್ರೇಷನ್ ಕೋರ್ಸ್ಗಳ ತರಬೇತಿ ನೀಡಲು ಕಾರ್ಯಕ್ರಮ ಹಮ್ಮಿಕೊಂಡಿದ್ದು, ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಮತ್ತು ಅವರ ಅವಲಂಬಿತರ ಯುವಕ ಯುವತಿಯರು 18 ಮತ್ತು 35 ವಯಸ್ಸಿನರಾಗಿರಬೇಕು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ರ ಐಡಿ ಕಾರ್ಡ್ ಇರಬೇಕು. ಆಸಕ್ತಿವುಳ್ಳ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಮತ್ತು ಅವರ ಅವಲಂಬಿತ ಯುವಕ, ಯುವತಿಯರು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಹೊಸ ಬಡಾವಣೆ, ರೇಸ್ಕೋರ್ಸ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲಾ ಕಚೇರಿಗೆ ದಾಖಲೆಗಳೊಂದಿಗೆ ಅರ್ಜಿಯನ್ನು ನವೆಂಬರ್, 30 ರೊಳಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-228857…
ಮಡಿಕೇರಿ ನ.26 NEWS DESK : ಪ್ರಸಕ್ತ ಮುಂಗಾರು ಅವಧಿಯಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆ ಹಾಗೂ ಸರ್ಕಾರಿ ಕಟ್ಟಡಗಳು ಹಾನಿಯಾಗಿದ್ದು, ಈ ಸಂಬಂಧ ಕಾಮಗಾರಿ ಕೈಗೊಳ್ಳಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಶೇ.75 ರಷ್ಟು ಹಣ ಬಿಡುಗಡೆ ಮಾಡಲಾಗಿದೆ. ಆದ್ದರಿಂದ 90 ದಿನದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯನ್ನು ವಿಡಿಯೋ ಸಂವಾದದ ಮೂಲಕ ನಡೆಸಿ ಜಿಲ್ಲಾಧಿಕಾರಿ ಅವರು ಮಾತನಾಡಿದರು. ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಸಲ್ಲಿಸಲಾಗಿದ್ದ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆದಿತ್ತು, ಹಣ ಬಿಡುಗಡೆ ಮಾಡಲಾಗಿದೆ. ಕೂಡಲೇ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಮಾನ್ಯ ಮುಖ್ಯಮಂತ್ರಿ ಅವರು ಆ.2 ರಂದು ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಬಳಿ ರಸ್ತೆ ಕುಸಿದಿದ್ದ ಪ್ರದೇಶಕ್ಕೆ ಭೇಟಿ ಹಾಗೂ ವಿರಾಜಪೇಟೆ ತಾಲ್ಲೂಕಿನ ಕೆದಮಳ್ಳೂರು ಗ್ರಾಮದ ಬಳಿ ರಸ್ತೆ ಕುಸಿದು ಹಾನಿ ಆಗಿದ್ದ ಪ್ರದೇಶಕ್ಕೆ ಭೇಟಿ ಸೇರಿದಂತೆ ವಿವಿಧ…
ಮಡಿಕೇರಿ ನ.26 NEWS DESK : ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿಯನ್ನು ನಿಯಮಾನುಸಾರ ನಿಯಂತ್ರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ಲೈಯಿಂಗ್ ಸ್ಕ್ವಾಡ್ನ ಕಾರ್ಯಾಚರಣೆ ತ್ರೈಮಾಸಿಕ ಸಭೆ ನಡೆಯಿತು. ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾವನ್ನು ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗಬೇಕು ಎಂದರು. ಅಕ್ರಮ ಲಾಟರಿ ಮತ್ತು ಮಟ್ಕಾ ದಂಧೆಗಳು ನಡೆಯುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ಸಮಿತಿಯ ಅಧಿಕೃತ ದೂರವಾಣಿ ಸಂಖ್ಯೆ 08272-228678 ಗೆ ಮಾಹಿತಿ ನೀಡಬಹುದಾಗಿದೆ ಎಂದು ಹೇಳಿದರು. ಅಕ್ರಮ ಲಾಟರಿ ಮತ್ತು ಮಟ್ಕಾ ದಂಧೆಯನ್ನು ನಿಯಂತ್ರಿಸಲು ಸಮಿತಿಯು ಪರಿಶೀಲನೆ ನಡೆಸಬೇಕು. ಲಾಟರಿ ಪ್ಲೈಯಿಂಗ್ ಸ್ಕ್ವಾಡ್ ಸಮಿತಿ ಕಾರ್ಯನಿರ್ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು. ವ್ಯಾಪಾರ ಮಳಿಗೆಗಳನ್ನು ಪರಿಶೀಲನೆ ಮಾಡುವ ಸಂದರ್ಭದಲ್ಲಿ ಅಕ್ರಮ ಲಾಟರಿ ಮಾರಾಟ ನಡೆಯುತ್ತಿದೆಯೇ ಎಂಬ ಬಗ್ಗೆ…
ಮಡಿಕೇರಿ ನ.25 NEWS DESK : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ ಸಂಸ್ಥೆಗಳು ಒಟ್ಟಾಗಿ ನವೆಂಬರ್ 01, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ಹೆಸರು ನೋಂದಾಯಿಸಿಕೊಳ್ಳಬಹುದು. ನೋಂದಣಿತರು ಶುಲ್ಕ ಕೊಡಬೇಕಾಗಿಲ್ಲ. ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗಿನ ಅವರ ಕಚೇರಿ ಗೈರು ಹಾಜರಿಯನ್ನು ಅನ್ಯ ಕಾರ್ಯನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿ ದೊರೆಯಲಿದೆ. ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದೆ. ಇವರು ಎಸ್.ಎಸ್.ಎಲ್.ಸಿ…
ಮಡಿಕೇರಿ ನ.25 NEWS DESK : ದುಬೈಯಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ 12ನೇ ಬ್ರೈನೋಬ್ರೈನ್ ಚಾಂಪಿಯನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ (9) ಜೂನಿಯರ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾನೆ. ದುಬೈನ ಶೇಖ್ ರಶೀದ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ 18 ದೇಶಗಳ 2036 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯದಿಂದ ಐವರು ಸ್ಪರ್ಧಿಸಿದ್ದು, ಇವರಲ್ಲಿ ಅಲುಫ್ ಎ.ಆರ್ ಒಬ್ಬರಾಗಿದ್ದರು. ಮಾಪಂಗಡ ಕವಿತಾ ಕರುಂಬಯ್ಯ ಅವರ ಮಡಿಕೇರಿಯ ಬ್ರೈನೋಬ್ರೈನ್ ಅಬಾಕಾಸ್ ಸಂಸ್ಥೆಯಲ್ಲಿ ಅಲುಫ್ ಎ.ಆರ್ ತರಬೇತಿ ಪಡೆಯುತ್ತಿದ್ದಾನೆ. ಈತ ಉದ್ಯಮಿ ರಫೀಕ್ ಹಾಗೂ ಸಬೀನ ದಂಪತಿಯ ಪುತ್ರನಾಗಿದ್ದು, ಮಡಿಕೇರಿಯ ಸಂತ ಮೈಕಲರ ಶಾಲೆಯ 4ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬ್ರೈನೋಬ್ರೈನ್ ಅಂತರಾಷ್ಟ್ರೀಯ ದುಬೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ, ತಾಂತ್ರಿಕ ನಿರ್ದೇಶಕ ಅರುಳ್ ಸುಬ್ರಹ್ಮಣ್ಯಂ ಉಪಸ್ಥಿತರಿದ್ದು, ಅಲುಫ್ ಸಾಧನೆಗೆ ಶ್ಲಾಘನೆ ವ್ಯಕ್ತಪಡಿಸಿದರು.
ಮಡಿಕೇರಿ ನ.25 NEWS DESK : ದೇಶದ ಅಭಿವೃದ್ಧಿಯು ಯುವಜನರನ್ನು ಅವಲಂಬಿಸಿದೆ. ಆದ್ದರಿಂದ ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಜನರಲ್ಲಿ ಕನಸು ಇರಬೇಕು. ಅದನ್ನು ಸಾಕಾರಗೊಳಿಸಲು ಪ್ರಯತ್ನಿಸಬೇಕು. ದುಶ್ಚಟಗಳಿಗೆ ಬಲಿಯಾಗಬಾರದು. ಯುವ ಜನರು ಉತ್ತಮ ರೀತಿಯಲ್ಲಿ ಬದುಕು ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಸಂಕಲ್ಪ ಇರಬೇಕು ಎಂದರು. ‘ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾತನಾಡಿ ತಂಬಾಕು ಉಪಯೋಗಿಸುವುದರಿಂದ ಕ್ಯಾನ್ಸರ್, ಹೃದ್ರೋಗಕ್ಕೆ ಹಾಗೂ ನರರೋಗಕ್ಕೆ ತುತ್ತಾಗಬೇಕಾಗುತ್ತದೆ. ಜೊತೆಗೆ ಗ್ಯಾಂಗ್ರಿನ್ ಬರುವ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡದರು.…
ಮಡಿಕೇರಿ ನ.25 NEWS DESK : ಇಂದಿನ ಯುವಪೀಳೆಗೆ ಕ್ರಿಕೆಟ್ ಸೇರಿದಂತೆ ಇತರ ಕ್ರೀಡೆಗಳಲ್ಲಿಯೂ ಆಸಕ್ತಿ ತಾಳಿ ಉತ್ತಮ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಬೇಕು ಎಂದು ನಿವೃತ್ತ ಏರ್ ಮಾಷ೯ಲ್ ಕೆ.ಸಿ.ಕಾಯ೯ಪ್ಪ ಕರೆ ನೀಡಿದ್ದಾರೆ. ನಗರದ ಕೊಡಗು ವಿದ್ಯಾಲಯ ವತಿಯಿಂದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ 10ನೇ ವಷ೯ದ ಪ್ರೌಢಶಾಲಾ ವಿದ್ಯಾಥಿ೯ಗಳಿಗಾಗಿನ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾಕ್ಷೇತ್ರದಲ್ಲಿ ಹಿಂದಿನ ದಿನಗಳಿಗೆ ಹೋಲಿಸಿದರೆ ಈಗ ಅವಕಾಶಗಳು ವಿಸ್ತಾರವಾಗಿದ್ದು, ತಮ್ಮಲ್ಲಿನ ಕ್ರೀಡಾ ಪ್ರತಿಭೆಯನ್ನು ತೋರಲು ಯುವಪೀಳಿಗೆ ಬೆಟ್ಟದಷ್ಟು ಅವಕಾಶ ಇದೆ. ಕ್ರಿಕೆಟ್ ನಂತೆಯೇ ಇತರ ಕ್ರೀಡೆಗಳಲ್ಲಿಯೂ ಯುವಪೀಳಿಗೆ ಹೆಚ್ಚಿನ ಆಸಕ್ತಿ ತಾಳಿದರೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪ್ರತಿಭೆಗಳು ದೇಶಕ್ಕೆ ದೊರಕಲು ಸಾಧ್ಯವಿದೆ ಎಂದೂ ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಅಭಿಪ್ರಾಯಪಟ್ಟರು. ಜಾನಪದ ಪರಿಷತ್ ಜಿಲ್ಲಾ ಪ್ರಧಾನ ಕಾಯ೯ದಶಿ೯ ಎಸ್.ಐ.ಮುನೀರ್ ಅಹಮ್ಮದ್ ಮಾತನಾಡಿ, ವಿದ್ಯಾಥಿ೯ಗಳಿಗೆ ತಮ್ಮ ಜೀವನದ ಬಗ್ಗೆ ನಿದಿ೯ಷ್ಟ ಗುರಿಯಿರಬೇಕು. ದೂರದ ಬೆಟ್ಟದಲ್ಲಿ ಕಾಣುವ…






