ಮಡಿಕೇರಿ ಡಿ.10 NEWS DESK : ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್.ಎಂ ಕೃಷ್ಣ ರವರು ನಿಧನ ಹೊಂದಿರುವ ಹಿನ್ನೆಲೆ ದಿವಂಗತರ ಗೌರವಾರ್ಥವಾಗಿ ಡಿಸೆಂಬರ್, 11 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿರುವುದರಿಂದ ಕುಶಾಲನಗರ ಹಾಗೂ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಸೆಸ್ಕ್ ವತಿಯಿಂದ ನಿಗದಿಪಡಿಸಲಾಗಿರುವ ಜನಸಂಪರ್ಕ ಸಭೆಯನ್ನು ಮುಂದೂಡಲಾಗಿದೆ ಎಂದು ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಡಿ.10 NEWS DESK : ಸಮಾಜದಲ್ಲಿ ಪ್ರತಿಯೊಬ್ಬರನ್ನು ಗೌರವಿಸುವ ಮೂಲಕ ಮಾನವ ಹಕ್ಕುಗಳನ್ನು ಸಂರಕ್ಷಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕರೆ ನೀಡಿದ್ದಾರೆ. ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ‘ಮಾನವ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಮನುಷ್ಯ ಜಾತಿ ತಾನೊಂದೇ ವಲಂ’ ಪಂಪ ಹೇಳಿರುವಂತೆ ಯಾವುದೇ ಜಾತಿ, ಧರ್ಮ, ಅಸಮಾನತೆ ಇಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುವ ಮೂಲಕ ಮಾನವ ಹಕ್ಕುಗಳನ್ನು ಉಳಿಸಿ ವಿಶ್ವ ಮಾನವರಾಗಬೇಕು ಎಂದು ಅವರು ಹೇಳಿದರು. ‘ಮಹಿಳೆಯರ ಮತ್ತು ಮಕ್ಕಳ ಶೋಷಣೆ, ಜಾತಿ ಹೆಸರಿನಲ್ಲಿ ನಿಂದನೆ ಮಾಡುವುದು ಮಾನವ ಹಕ್ಕು ಉಲ್ಲಂಘನೆ ಮಾಡಿದಂತೆ. ಆದ್ದರಿಂದ ಮಾನವ ಹಕ್ಕುಗಳನ್ನು ರಕ್ಷಿಸುವ ಮೂಲಕ ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನರು ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.’ ಶರಣರು, ದಾಸರು ಸೇರಿದಂತೆ ಎಲ್ಲರೂ ಮಾನವ ಹಕ್ಕುಗಳ ಉಳಿವಿಗಾಗಿ ಹೋರಾಡಿದ್ದಾರೆ. ಜಾತಿ ಪದ್ಧತಿ ಮತ್ತು ಮೌಢ್ಯತೆ ನಿರ್ಮೂಲನೆಗೆ ಶ್ರಮಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಹ ಸಂವಿಧಾನದಲ್ಲಿ ಮಾನವ ಹಕ್ಕುಗಳಿಗಾಗಿ…
ಮಡಿಕೇರಿ NEWS DESK ಡಿ.10 : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ನಾಪಂಡ ಮುತ್ತಪ್ಪ ಸಂತಾಪ ಸೂಚಿಸಿದ್ದಾರೆ. ಓರ್ವ ಅಭಿವೃದ್ಧಿಶೀಲ, ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡ ಬಗ್ಗೆ ನಮಗೆ ದು:ಖವಿದೆ. ಹಲವು ಸಂದರ್ಭಗಳಲ್ಲಿ ಎಸ್.ಎಂ.ಕೃಷ್ಣ ಅವರೊಂದಿಗೆ ಒಡನಾಡುವ ಸದಾವಕಾಶ ದೊರೆತದ್ದು ನನ್ನ ಬದುಕಿನ ಅಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ಬೆಂಗಳೂರನ್ನು ವಿಶ್ವದ ಗಮನ ಸೆಳೆದ ನಗರವನ್ನಾಗಿ ರೂಪಿಸಿದ ಹೆಗ್ಗಳಿಕೆ ಕೃಷ್ಣ ಅವರದ್ದಾಗಿದೆ ಎಂದು ಶ್ಲಾಘಿಸಿರುವ ಅವರು, ತಮ್ಮ ಕೆಲಸ ಮತ್ತು ಸಮಯ ಪರಿಪಾಲನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದ ಅಪರೂಪದ ರಾಜಕಾರಣಿಗೆ ತೀವ್ರ ಸಂತಾಪ ಸೂಚಿಸುವುದಾಗಿ ತಿಳಿಸಿದ್ದಾರೆ.
ಮಡಿಕೇರಿ ಡಿ.10 NEWS DESK : ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿದ ವ್ಯಕ್ತಿಯ ಗಡಿಪಾರಿಗೆ ಆಗ್ರಹಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಕರೆ ನೀಡಿರುವ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗಿನ ಕೊಡಗು ಬಂದ್ ಗೆ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಬೆಂಬಲ ಸೂಚಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ ಅವರು, ಭಾರತೀಯ ಸೇನೆಯ ಪಿತಾಮಹ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ಗಳ ಜನರಲ್ ಖ್ಯಾತಿಯ ಜನರಲ್ ತಿಮ್ಮಯ್ಯ ಅವರನ್ನು ಅವಮಾನಿಸಿರುವುದು ಖಂಡನೀಯ. ಈ ಪ್ರಕರಣ ಕೊಡಗು ಮಾತ್ರವಲ್ಲದೆ ಇಡೀ ದೇಶದ ಜನರಿಗೆ ನೋವನ್ನುಂಟು ಮಾಡಿದೆ. ದೇಶ ಕಂಡ ಅಪ್ರತಿಮ ವೀರ ಸೇನಾನಿಗಳಿಗೆ ಅಗೌರವ ತೋರಿದ ವ್ಯಕ್ತಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಕರೆ ನೀಡಲಾಗಿರುವ ಬಂದ್ ಗೆ ಅಸೋಸಿಯೇಷನ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಸಮಸ್ತ ಜನತೆ…
ಕುಶಾಲನಗರ ಡಿ.10 NEWS DESK : ವಿದ್ಯಾರ್ಥಿಗಳು ಮೊಬೈಲ್ ಗಳ ದಾಸರಾಗದೇ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಮೂಲಕ ತಮ್ಮಲ್ಲಿನ ಮಸ್ತಕದ ಜ್ಞಾನವನ್ನು ಹೆಚ್ಚಿಸಿಕೊಂಡು ಸಮಾಜದಲ್ಲಿ ಆದರ್ಶ ಪ್ರಾಯರಾಗಬೇಕೆಂದು ಚಿಕ್ಕೋಡಿಯ ಕುಸುಮಾವತಿ ಮಿರಜಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಹೊಂಬಯ್ಯ ಹೊನ್ನಲಗೆರೆ ಕರೆ ನೀಡಿದರು. ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಭಾಷಣ ಮಾಡಿದ ಅವರು, ಇಂದು ಜಗತ್ತು ಬೆರಳ ತುದಿಯಲ್ಲಿದ್ದರೂ ಕೂಡ ಸಾಧಕರಾಗುವಲ್ಲಿ ವಿದ್ಯಾರ್ಥಿಗಳು ಹಿಂದುಳಿಯುತ್ತಿದ್ದಾರೆ. ವಿಶ್ವಾಸ, ಆಸಕ್ತಿ ಹಾಗೂ ದೃಢ ಸಂಕಲ್ಪಗಳ ಕೊರತೆಯಿಂದಾಗಿ ತಂತ್ರಜ್ಞಾನಗಳನ್ನು ಒಳಿತಿಗೆ ಬಳಸಿಕೊಳ್ಳುವಲ್ಲಿ ವಿದ್ಯಾರ್ಥಿಗಳು ವಿಫಲರಾಗುತ್ತಿದ್ದಾರೆ ಎಂದು ವಿಷಾದಿಸಿದ ಅವರು, ಶಾಲೆ, ಕುಟುಂಬ, ಸಮಾಜ ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯಗಳನ್ನು ಕಟ್ಟಿಕೊಡುತ್ತವೆ ಎಂದು ಡಾ.ಹೊಂಬಯ್ಯ ಹೇಳಿದರು. ಮೈಸೂರು ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ.ಪುಷ್ಪಲತಾ ಮಾತನಾಡಿ, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಸಲುವಾಗಿ ಹೆತ್ತವರು ಎದುರಿಸುತ್ತಿರುವ ಸಂಕಷ್ಟಗಳನ್ನು ವಿದ್ಯಾರ್ಥಿಗಳು ಅರಿಯಬೇಕು. ಸ್ಪಷ್ಟವಾದ ಗುರಿಯೊಂದಿಗೆ ಮುಂದೆ…
ಮಡಿಕೇರಿ NEWS DESK ಡಿ.10 : ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಮತ್ತು ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ತೀವ್ರ ಸಂತಾಪ ಸೂಚಿಸಿದ್ದಾರೆ. ಅಭಿವೃದ್ಧಿಪರ ಕಾಳಜಿ ಹೊಂದಿದ್ದ ಮತ್ತು ರಾಜ್ಯವನ್ನು ಪ್ರಗತಿಪಥದತ್ತ ಕೊಂಡೊಯ್ದಿದ್ದ ಅಪರೂಪದ ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಡಿ.10 NEWS DESK : ನಾಲ್ಕುನಾಡು ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಫೆ.8 ರಿಂದ 13 ರ ವರೆಗೆ ನಾಪೋಕ್ಲುವಿನ ಚೆರಿಯಪರಂಬುವಿನಲ್ಲಿ ಪ್ರಥಮ ವರ್ಷದ ಕೊಡಗು ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಕಪ್ ಪಂದ್ಯಾವಳಿ ನಡೆಯಲಿದೆ ಎಂದು ಅಸೋಸಿಯೇಷನ್ ಪದಾಧಿಕಾರಿ ಪರವಂಡ ಸಿರಾಜ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲು ಸಮೀಪದ ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ 6 ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಗೆ ಫೆ.8 ರಂದು ಬೆಳಿಗ್ಗೆ 10 ಗಂಟೆಗೆ ಚಾಲನೆ ದೊರೆಯಲಿದ್ದು, ರಾಜಕೀಯ ವಲಯದ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು. ಪಂದ್ಯಾವಳಿಯು ನಾಕೌಟ್ ಮಾದರಿಯಲ್ಲಿ ನಡೆಯಲಿದೆ. ಒಂದು ತಂಡದಲ್ಲಿ ಒಂದು ಜಮಾಅತ್ತಿಗೆ ಒಳಪಟ್ಟ ಕ್ರೀಡಾಪಟುಗಳಿಗೆ ಮಾತ್ರ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ವರ್ಷ ಈ ನಿಯಮ ಮುಂದುವರೆಯಲಿದೆ ಎಂದು ಸಿರಾಜ್ ಹೇಳಿದರು. ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನ ರೂ.55,555 ನಗದು ಮತ್ತು ಆಕರ್ಷಕ ಪಾರಿತೋಷಕ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ.33,333 ನಗದು ಮತ್ತು ಆಕರ್ಷಕ…
ಮಡಿಕೇರಿ NEWS DESK ಡಿ.10 : ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಗೌರವ ತೋರಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಡಗು ಬಂದ್ ಗೆ ಕರೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ ಶಾಂತಿ ಮತ್ತು ಸಹಬಾಳ್ವೆಗೆ ಹೆಸರಾಗಿದ್ದ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಜಾತೀಯ ಮತ್ತು ಮತೀಯ ಸಂಘರ್ಷ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಂಡು ಬರುತ್ತಿದೆ. ಇಂದು ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ಪೀಳಿಗೆ ಕೊಡಗಿನಲ್ಲಿ ಕೇವಲ ದ್ವೇಷ ಮತ್ತು ಅಸೂಯೆಯ ವಾತಾವರಣದಲ್ಲಿ ಬದುಕಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗುವ ಸಂಭವವಿದೆ. ಈ ರೀತಿಯ ಪರಿಸ್ಥಿತಿ ಪುನರಾವರ್ತನೆಯಾಗಬಾರದು ಎನ್ನುವ ಉದ್ದೇಶದಿಂದ ಎಲ್ಲಾ ಜಾತಿ ಜನಾಂಗದವರನ್ನು ಒಗ್ಗೂಡಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟವನ್ನು ರಚಿಸಿದ್ದು, ಇದರ ಮೂಲಕ ಒಗ್ಗಟ್ಟಿನ ಹೋರಾಟವನ್ನು…
ವಿರಾಜಪೇಟೆ ಡಿ.10 NEWS DESK : ವಿರಾಜಪೇಟೆ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವತಿಯಿಂದ ನಾಟಿ ವೈದ್ಯ ಬಿ.ಜಿ.ನಟರಾಜ್ ಬೋರ್ಕರ್ ಅವರಿಗೆ ಭಾರತ ಭೂಷಣ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಕೃಷಿ ಹಾಗೂ ನಾಟಿ ವೈದ್ಯ ಕ್ಷೇತ್ರದಲ್ಲಿ ಸೇವೆಯನ್ನು ಗುರುತಿಸಿ ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಮೂಲತಃ ಬೇಟೋಳಿ ಗ್ರಾಮದ ರಾಮನಗರದ ನಿವಾಸಿಯಾಗಿರುವ ಬಿ. ಜಿ. ನಟರಾಜ್ ಬೋರ್ಕರ್ ಪ್ರಗತಿಪರ ಕೃಷಿಕರಾಗಿದ್ದು, ನಾಟಿ ವೈದ್ಯ ಸೇವೆಯನ್ನು ನೀಡುತ್ತಿದ್ದಾರೆ. ಅದರಲ್ಲೂ ಬಡವರಿಗೆ ಉಚಿತ ಸೇವೆಯನ್ನು ಹಲವಾರು ವರ್ಷಗಳಿಂದ ಸಲ್ಲಿಸುತ್ತಾ ಬಂದಿರುತ್ತಾರೆ. ಇವರು ಕೊಡಗು ಬಾಲವಲೀಕಾರ್ ಉತ್ತಮ ಜೀವನ ಸಹಕಾರ ಸಂಘದ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಬೆಂಗಳೂರು ಡಿ.10 NEWS DESK : ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶ ಹಿನ್ನೆಲೆಯಲ್ಲಿ ಡಿ.11 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿ.10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.






