ನಾಪೋಕ್ಲು ನ.25 NEWS DESK : ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ ನಲ್ಲಿ ಮೂರ್ನಾಡು ಪದವಿ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿ ಶಶಾಂಕ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಐಎಫ್ಸಿಸಿ-2024 ಆಯೋಜಿಸಿದ ಫಿಲ್ಟರ್ ಕಾಫಿ ತಯಾರಿಕೆಯ ಚಾಂಪಿಯನ್ ಸ್ಪರ್ಧೆಯಲ್ಲಿ ಬಹು ಸಂಖ್ಯೆಯ ಸ್ಪರ್ಧಿಗಳು ಭಾಗವಹಿಸಿದ್ದರು. ಶಶಾಂಕ್ ಅಗಸ್ತ್ಯ ಕಾಫಿಯಲ್ಲಿ ತನ್ನ ವಿದ್ಯಾಭ್ಯಾಸದೊಂದಿಗೆ ಅರೆಕಾಲಿಕ ಉದ್ಯೋಗವನ್ನು ಮಾಡುತ್ತಿದ್ದು, ಡಿಸೆಂಬರ್ ನಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾನೆ ಎಂದು ಮೂರ್ನಾಡು ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ರೇಖಾ ಚಿಣ್ಣಪ್ಪ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ಲೇಖಕ: admin
ಮಡಿಕೇರಿ ನ.25 NEWS DESK : ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದ ಕನ್ನಡ ಭಾಷೆ, ನಾಡು, ನುಡಿ, ಅತಿ ಉತ್ಕೃಷ್ಟವಾದದ್ದು. ಕನ್ನಡ ಸಾಹಿತ್ಯ ಲೋಕದಲ್ಲಿ ದಾಸ ಸಾಹಿತ್ಯ, ವಚನ ಸಾಹಿತ್ಯ, ಶಿಶು ಸಾಹಿತ್ಯ, ಜಾನಪದ ಸಾಹಿತ್ಯ, ಪ್ರೇಮ ಸಾಹಿತ್ಯ, ದಾಂಪತ್ಯ ಸಾಹಿತ್ಯ ಈ ಹಲವಾರು ವಿಭಾಗಗಳಿದ್ದು ಎಲ್ಲವೂ ಅತ್ಯುನ್ನತ ಪರಂಪರೆ ಹೊಂದಿದೆ ಎಂದು ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್ ನ ಉಪಾಧ್ಯಕ್ಷ ಎಂ.ಬಿ.ನಾಸಿರ್ ಅಹಮದ್ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎ.ಎಲ್.ಜಿ ಕ್ರೆಸೆಂಟ್ ಶಾಲೆ, ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್ ಹಾಗೂ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ವತಿಯಿಂದ ಮಡಿಕೇರಿಯ ಕ್ರೆಸೆಂಟ್ ಶಾಲಾ ಸಭಾಂಗಣದಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ…
*CODAVA NATIONAL COUNCIL (CNC)* The Codava National Council, the irrepressible voice, ever-sustainable force, and conscience of the indigenous Codava community, will observe its 34th Annual CODAVA NATIONAL DAY on 26th November 2024. This event coincides with Indian Constitution Day. The esteemed Codava gathering rejuvenates and amplifies the sustained and eventful apolitical journey of the CNC, which has been peacefully striving to achieve *CodavaLand* Geo-Political Autonomy under the suzerainty of India. It also seeks UN recognition for the aboriginal indigenous Codavas under international law, the restoration of ancestral properties confiscated and mortgaged to external business tycoons by foreign rulers, and the realization…
ಮಡಿಕೇರಿ ನ.25 NEWS DESK :ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಶಿಶುಸಾಹಿತ್ಯದ ಪಿತಾಮಹ, ಕೊಡಗಿನ ಹುತ್ತರಿ ಹಾಡಿನ ಜನಕ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸುವ ಕುರಿತು ಪೂರ್ವಭಾವಿ ಸಭೆಯು ಮಡಿಕೇರಿಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ನಡೆಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಶಾಲಾ-ಕಾಲೇಜು ಮುಖ್ಯೋಪಾಧ್ಯಾಯರನ್ನು ಸಭೆಗೆ ಕರೆಯಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ಮಡಿಕೇರಿಯ ಸೆಂಟ್ರಲ್ ಹೈಸ್ಕೂಲ್ ನಲ್ಲಿ 22 ವರ್ಷಗಳ ಕಾಲ ಶಾಲಾ ಇನ್ಸಪೆಕ್ಟರ್, ಶಿಕ್ಷಕರಾಗಿ, ಮುಖ್ಯೋಪಾದ್ಯಾಯರಾಗಿ ಆಗಿ ಸೇವೆಸಲ್ಲಿಸಿ, ನಾಡಿಗೆ ಕೀರ್ತಿ ತಂದಿದ್ದಾರೆ. ಕೊಡಗಿನ ಗ್ರಾಮೀಣ ಬದುಕನ್ನು ಪರಿಸರವನ್ನು ಅನುಭವಿಸಿ ಕಥೆ, ಕಾದಂಬರಿ, ಕವನಗಳನ್ನು ರಚಿಸಿದ್ದರು ಅವು ಇಂದಿಗೂ ಪ್ರಸ್ತುತ. ಸಣ್ಣಕತೆಗಳ ಜನಕ ಎಂದೇ ಪ್ರಖ್ಯಾತರಾಗಿದ್ದ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆಯನ್ನು ಆಚರಿಸುವುದು ಕೊಡಗಿನ ಎಲ್ಲ ಸಾಹಿತ್ಯ, ಶೈಕ್ಷಣಿಕ ಸಂಸ್ಥೆಗಳು, ಜಿಲ್ಲೆಯ ನಾಗರೀಕ ಸಮಾಜ…
ಚೆಟ್ಟಳ್ಳಿ ನ.25 NEWS DESK : ಕಾಲೇಜಿನ ಒಂದೇ ಬ್ಯಾಚ್ ನಲ್ಲಿ ಕಲಿತ ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಸ್ನೇಹಮಿಲನ ಕಾರ್ಯಕ್ರಮದ ಮೂಲಕ 25ನೇ ವರ್ಷದ ಸವಿನೆನಪಿಗೆ ಸಾಕ್ಷಿಯಾದರು. 1999ರಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದವರು. ಓದು ಮುಗಿದು ಉದ್ಯೋಗ, ಸಾಂಸಾರಿಕ ಬದುಕನ್ನು ಕಟ್ಟಿಕೊಂಡರು. ಆದರೆ ತಮ್ಮ ಕಾಲೇಜಿನ ಸ್ನೇಹಬಳಗವನ್ನು ಮರೆಯದೇ 25ನೇ ಸವಿನೆನಪನ್ನು ಹಂಚಿಕೊಳ್ಳಲು ಸುಂಟಿಕೊಪ್ಪದ ಕೂರ್ಗ್ ರಿವರ್ ಟರ್ನ್ ಹೋಮ್ ಸ್ಟೇನಲ್ಲಿ ಸೇರಿ ಕಾಲೇಜು ಜೀವನದ ಹಳೆಯ ನೆನಪುಗಳು, ಕೇಕ್ ಕತ್ತರಿಸುವುದು, ವಿವಿಧ ಕ್ರೀಡೆ, ಸೆಲ್ ಫೀ ಫೊಟೊ ಶೂಟ್, ನೆನಪಿನ ಕಾಣಿಕೆಯನ್ನು ಪರಸ್ಪರ ಹಂಚಿಕೊಂಡದ್ದು ವಿಶೇಷವಾಗಿತ್ತು. ಕ್ರೀಡೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಧ್ಯಮ ಹಾಗೂ ಸಂಘಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇದೇ ಬ್ಯಾಚ್ ನ ಹಳೆವಿದ್ಯಾರ್ಥಿ ಪುತ್ತರಿರ ಕರುಣ್ ಕಾಳಯ್ಯ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ವಿರಾಜಪೇಟೆ ನ.25 NEWS DESK : ಹೆಗ್ಗಳ ಗ್ರಾಮದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಾಲಯದ ವಾರ್ಷಿಕ ಮಹಾಪೂಜೆಯು ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ದೇವರಿಗೆ ವಿಶೇಷ ಪೂಜೆ, ಅಲಂಕಾರ ಸೇವೆ, ಹಾಲಿನ ಹಾಗೂ ಸೀಯಾಳ ಅಭಿಷೇಕ ಸೇವೆಗಳು ಸೇರಿದಂತೆ ವಿವಿಧ ದೇವಸ್ಥಾನದ ಅರ್ಚಕರಾದ ವೇಣುಗೋಪಾಲ್ ಭಟ್ ರವರು ಪೂಜಾ ಸೇವೆಯನ್ನು ನೆರವೇರಿಸಿದರು. ಅರ್ಚಕರು ಬೆಳಿಗ್ಗೆಯಿಂದಲೇ ಧಾರ್ಮಿಕ ವಿಧಿ ವಿಧಾನಗಳು ಜರುಗಿತು. ಭಕ್ತರು ಹರಕೆಯ ಹಸು ಮತ್ತು ಕರುವಿನ ಮೂರ್ತಿಗಳನ್ನು ಸಮರ್ಪಿಸಿದರು. ಮಹಾ ಮಂಗಳಾರತಿ ಸೇವೆಯ ಬಳಿಕ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ದೇವಾಲಯದ ಆಡಳಿತ ಮಂಡಳಿಯವರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನಂತರ ಆಡಳಿತ ಮಂಡಳಿಯ ಸಭೆಯು ನಡೆಯಿತು.
ಸೋಮವಾರಪೇಟೆ ನ.25 NEWS DESK : ನಗರಳ್ಳಿ ಗ್ರಾಮದ ಕೂತಿನಾಡು ಶ್ರೀ ಸಬ್ಬಮ್ಮ ದೇವಿ ದೇವಾಲಯದ ಜೀರ್ಣೋದ್ಧಾರ ಮಾಡಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ನಗರಳ್ಳಿ ಗ್ರಾಮದ ದೇವರ ಬನದಲ್ಲಿ ಪ್ರತಿಷ್ಠಾಪನೆ ಬಗ್ಗೆ ಆರೋಡ ತಾಂಬೂಲ ಪ್ರಶ್ನೆ ಕಾರ್ಯಕ್ರಮ ನಡೆಯಿತು. ಮಂಗಳೂರಿನ ಕದ್ರಿ ದೇವಾಲಯದ ತಂತ್ರಿ ಎಸ್. ಶ್ರೀರಂಗ ಐತಾಳ್ ನೇತೃತ್ವದಲ್ಲಿ ನಡೆದ ತಾಂಬೂಲ ಪ್ರಶ್ನೆ ಕಾರ್ಯಕ್ರಮದಲ್ಲಿ ದೇವಸ್ಥಾನದ ದೈನಂದಿನ ಪೂಜೆ, ಆಚರಣೆಗಳು, ಮುಂದೆ ಯಾವ ರೀತಿಯಲ್ಲಿ ಮುಂದುವರೆಯಬೇಕು ಎಂದು ಅವರು ತಿಳಿಸಿದರು. ಕೂತಿ ನಾಡು ಶ್ರೀ ಸಬ್ಬಮ್ಮ ದೇವಿಯ ಉತ್ಸವಕ್ಕೆ ಸಂಬಂಧಿಸಿದ ಕೂತಿ, ನಗರಳ್ಳಿ, ಹೆಮ್ಮನಗದ್ದೆ, ಕುಂದಳ್ಳಿ, ಕನ್ನಳ್ಳಿ, ಬೇಕನಳ್ಳಿ, ಹಳ್ಳಿಯೂರು, ಬೆಟ್ಟದಳ್ಳಿ, ಬೆಟ್ಟದ ಕೊಪ್ಪ, ಜಕ್ಕನಳ್ಳಿ, ಇನಕನಳ್ಳಿ, ಕೊತ್ತನಳ್ಳಿ, ಕುಡಿಗಾಣ, ಬೆಂಕಳ್ಳಿ, ಬೀಕಳ್ಳಿ, ನಾಡ್ನಳ್ಳಿ, ತಡ್ಡಿಕೊಪ್ಪ, ಸಕಲೇಶಪುರ ತಾಲ್ಲೂಕಿನ ಓಡಳ್ಳಿ ಗ್ರಾಮಗಳ ಪ್ರಮುಖ ದೇವತೆಯಾಗಿದ್ದು, ಬಹಳ ಹಿಂದಿನಿಂದಲೂ ಇಲ್ಲಿ ಶ್ರದ್ಧಾ ಭಕ್ತಿಯಿಂದ ಪೂಜೆಗಳು ನಡೆದುಕೊಂಡು ಬರುತ್ತಿದೆ. ಈಗಿನ ದೇವಾಲಯವನ್ನು ಜೀರ್ಣೋದ್ಧಾರ ಮಾಡಲು ಸಮಿತಿ ತೀರ್ಮಾನಿಸಿದ್ದು, ತಾಂಬೂಲ ಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ…
ಮಡಿಕೇರಿ ನ.25 NEWS DESK : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವನ್ನು ಆಚರಿಸಲಾಯಿತು. ಪದ್ಮಭೂಷಣ ಜನರಲ್ ತಿಮ್ಮಯ್ಯನವರ ಪ್ರತಿಮೆಗೆ ಪುಷ್ಪಾರ್ಚನೆಯನ್ನು ಮಾಡಿ, ಅತಿಥಿಗಳಿಂದ ಧ್ವಜಾರೋಹಣ ನೆರವೇರಿತು. ನಂತರ ಆಯಾಯ ಗುಂಪಿನ ನಾಯಕರುಗಳ ನೇತೃತ್ವದಲ್ಲಿ ಪಥಸಂಚಲವನ್ನು ಮಾಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರೊ.ಕಂಬೆಯಂಡ ಸಿ.ಬೆಳ್ಯಪ್ಪ, ಮಕ್ಕಳ ಸತತ ಪ್ರಯತ್ನದಿಂದ ಮುಂದೆ ಬರಬೇಕು ಹಾಗೂ ಮಾತೃಭಾಷೆಯು ತುಂಬಾ ಪ್ರಮುಖವಾಗಿದ್ದು, ಸಂವಹನೆಗೆ ಆಂಗ್ಲ ಭಾಷೆ ಹಾಗೂ ಇತರ ಭಾಷೆಯನ್ನು ಆಲಿಸುವುದು ಮತ್ತು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಕೊಡವ ಸಮಾಜ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಮಕ್ಕಳ ವಿದ್ಯಾಭ್ಯಾಸದೊಂದಿಗೆ ಇತರ ಚಟುವಟಿಕೆಗಳಲ್ಲಿ ಅವರ ಪ್ರಗತಿ ಹಾಗೂ ಸಾಧನೆ ಹೇಗಿದೆ, ಮುಂದೆ ಹೇಗಿರಬೇಕು ಎನ್ನುವುದನ್ನು ಮನದಟ್ಟು ಮಾಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾದ ತಾರಾ ಬೆಳ್ಯಪ್ಪ, ಶಾಲಾ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಕೇಕಡ ಎ.ದೇವಯ್ಯ, ಶಾಲಾ ಆಡಳಿತಾಧಿಕಾರಿ…
ಕುಶಾಲನಗರ, ನ.25 NEWS DESK : ಭವಿಷ್ಯದ ಬೆಳಕಾಗಿರುವ ವಿದ್ಯಾರ್ಥಿಗಳು ಜ್ಞಾನಾರ್ಜನೆ ಜತೆಗೆ ದೇಶಾಭಿಮಾನ ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಚಿಂತಕ ಬಸವಕುಮಾರ್ ಪಾಟೀಲ್ ಹೇಳಿದರು. ಬೀದರ್ ನ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ: 50 ರ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅಕ್ಷರ ಜ್ಯೋತಿಯಾತ್ರೆಯ ವತಿಯಿಂದ. ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ( ಎನ್.ಎಸ್.ಎಸ್.) ಘಟಕ ಹಾಗೂ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಮತ್ತು ಉತ್ತಮ ವ್ಯಕ್ತಿತ್ವ ಬೆಳವಣಿಗೆ ಹಾಗೂ ಪರೀಕ್ಷಾ ಫಲಿತಾಂಶದ ಸಫಲತೆಯ ಮಾರ್ಗೋಪಾಯಗಳು ಕುರಿತು ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಮಾಲೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹುಟ್ಟಿಸಿ, ಉನ್ನತ ಕನಸುಗಳನ್ನು ಬಿತ್ತಿ, ವಿದ್ಯಾರ್ಥಿಗಳಿಗೆ ಪ್ರೇರಣೆ, ಸ್ಪೂರ್ತಿ ನೀಡುವುದರ ಮೂಲಕ ಉನ್ನತ ಸಾಧನೆಯ ಛಲ ಮೂಡಿಸುವುದು. ವಿದ್ಯಾರ್ಥಿಗಳಲ್ಲಿರುವ ಕೀಳರಿಮೆ ಕಿತ್ತು…
ವಿರಾಜಪೇಟೆ ನ.25 NEWS DESK : ಕಡಂಗ ಅರಪಟ್ಟು ಗ್ರಾಮದ ದೇವರಕಾಡಿನಲ್ಲಿ ನೆಲೆಸಿರುವ ನೆಲ್ಯಾಳು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ವಾರ್ಷಿಕ ಮಹಾಪೂಜಾ ಸೇವೆಯು ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ಶ್ರೀ ಅಯ್ಯಪ್ಪ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ, ಅಲಂಕಾರ ಸೇವೆ, ವಿಶೇಷ ಕರ್ಪೂರ ಆರತಿಯನ್ನು ಮಾಡಿ ಪ್ರಾರ್ಥಿಸಿದರು. ಗ್ರಾಮಸ್ಥರು ಹರಕೆ ವಸ್ತುಗಳಾದ ಹುಲಿ, ನಾಯಿ, ಹಂದಿ, ಹಸು ಮೊದಲಾದ ಸಾಕು ಪ್ರಾಣಿಗಳ ಮಣ್ಣಿನ ಮೂರ್ತಿಗಳನ್ನು ಸಮರ್ಪಿಸಿದರು. ದೇವಾಲಯದ ಅರ್ಚಕರಾದ ರಾಮ್ ಪ್ರಸಾದ್ ಭಟ್ ಪೂಜಾ ವಿಧಾನಗಳನ್ನು ನೆರವೇರಿಸಿದರು. ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನೆಲ್ಯಾಳು ಕುಟುಂಭಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪ್ರತಿವರ್ಷ ನ.16 ರಿಂದ ಡಿ.15 ರ ತನಕ ಈ ದೇವಾಲಯದಲ್ಲಿ ಪ್ರತಿದಿನ ನಿತ್ಯ ಪೂಜೆಯು ನಡೆಯುತ್ತದೆ.






