ಲೇಖಕ: admin

ಮಡಿಕೇರಿ NEWS DESK  ಡಿ.10 : ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಗೌರವ ತೋರಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಡಗು ಬಂದ್ ಗೆ ಕರೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ ಶಾಂತಿ ಮತ್ತು ಸಹಬಾಳ್ವೆಗೆ ಹೆಸರಾಗಿದ್ದ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಜಾತೀಯ ಮತ್ತು ಮತೀಯ ಸಂಘರ್ಷ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಂಡು ಬರುತ್ತಿದೆ. ಇಂದು ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ಪೀಳಿಗೆ ಕೊಡಗಿನಲ್ಲಿ ಕೇವಲ ದ್ವೇಷ ಮತ್ತು ಅಸೂಯೆಯ ವಾತಾವರಣದಲ್ಲಿ ಬದುಕಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗುವ ಸಂಭವವಿದೆ. ಈ ರೀತಿಯ ಪರಿಸ್ಥಿತಿ ಪುನರಾವರ್ತನೆಯಾಗಬಾರದು ಎನ್ನುವ ಉದ್ದೇಶದಿಂದ ಎಲ್ಲಾ ಜಾತಿ ಜನಾಂಗದವರನ್ನು ಒಗ್ಗೂಡಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟವನ್ನು ರಚಿಸಿದ್ದು, ಇದರ ಮೂಲಕ ಒಗ್ಗಟ್ಟಿನ ಹೋರಾಟವನ್ನು…

Read More

ವಿರಾಜಪೇಟೆ ಡಿ.9 NEWS DESK : ಪೊಂಬೊಳ್ಚ ಕೂಟದ ಮಹಾಸಭೆಯು ವಿರಾಜಪೇಟೆಯ ಬೊರೆಗೌಡ ಕಟ್ಟಡದಲ್ಲಿನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ನಂತರ ಭಾರತ ದೇಶದ ವೀರಾಸೇನಾನಿಯಾಗಿ ಸೇವೆಯಲ್ಲಿ ಇರುವ, ಕೊಡವ ಪಾಜೆಯ ಹೆಸರಾಂತ ಸಾಹಿತಿ ಪೊಂಬೊಳ್ಚ ಕೂಟದ ಸದಸ್ಯ ಕ್ಯಾಪ್ಟನ್ ಬಿದ್ದಂಡ ನಾಣಿ ದೇವಯ್ಯ, ಪೊಂಬೊಳ್ಚ ಕೂಟದ ಅಧ್ಯಕ್ಷರೂ ಮತ್ತು ಹಿರಿಯ ಹಾಕಿ ಆಟಗಾರರಾದ ಮಾಳೇಟಿರ ಶ್ರೀನಿವಾಸ್ ಹಾಗೂ ಪೊಂಬೊಳ್ಚ ಕೂಟವನ್ನು ಸ್ಥಾಪನೆ ಮಾಡಿದ ಸ್ಥಾಪಕ ಅಧ್ಯಕ್ಷ ಮತ್ತು ಸಾಹಿತಿ ಕೋಟೆರ ಪೂಣಚ್ಚ ಅವರನ್ನು ಕೂಟದ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನ ಮಾಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಹಲವ ಸಾಹಿತಿಗಳನ್ನು ಗುರುತಿಸಿ ಅವರಿಗೆ ಕೂಟದ ವತಿಯಿಂದ ಕಿರು ಕಾಣಿಕೆ ನೀಡಿ ಗೌರವಿಸಲಾಯಿತು.

Read More

ಬೆಂಗಳೂರು ಡಿ.10 NEWS DESK : ಕರ್ನಾಟಕ ಕಂಡ ಅಪರೂಪದ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಎಸ್‌ಎಂ ಕೃಷ್ಣ ( 92) ವಿಧಿವಶರಾಗಿದ್ದಾರೆ. ಮಾಜಿ ಕೇಂದ್ರ ಸಚಿವರೂ ಆಗಿದ್ದ ಅವರು ಬೆಂಗಳೂರಿನ ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ನಸುಕಿನ 2.45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಸದಾಶಿವನಗರದ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ (ಡಿ.11) ಅಂತ್ಯಕ್ರಿಯೆ ನಡೆಯಲಿದೆ. ಎಸ್‌ಎಂ ಕೃಷ್ಣ ಅವರು ಪತ್ನಿ ಪ್ರೇಮಾ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ರಾಜ್ಯದಲ್ಲಿ 3 ದಿನ ಶೋಕಾಚರಣೆ :: ಎಸ್​ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ…

Read More

ಸೋಮವಾರಪೇಟೆ ಡಿ.10 NEWS DESK : ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗೌಡಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಿತು. ಶ್ರೀ ನವದುರ್ಗ ಪರಮೇಶ್ವರಿ ದೇವಾಲಯ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಕರುಂಬಯ್ಯ ಉದ್ಘಾಟಿಸಿದರು. ಆರೋಗ್ಯವಂತರು ನಿಯಮಿತ ರಕ್ತದಾನದಿಂದ ಉತ್ತಮ ಆರೋಗ್ಯ ವೃದ್ಧಿಸುತ್ತದೆ. ದೇಹದಲ್ಲಿ ಕಬ್ಬಿಣಾಂಶ ಸಮತೋಲನದಲ್ಲಿಡುತ್ತದೆ. ಹೃದಯಾಘಾತದಿಂದ ಪಾರಾಗಬಹುದು ಎಂದು ಹೇಳಿದರು. ರಕ್ತದಾನದ ಮಹತ್ವದ ಬಗ್ಗೆ ಗ್ರಾಮೀಣ ಜನರಲ್ಲೂ ಜಾಗೃತಿ ಮೂಡಿದೆ. ಗ್ರಾಮೀಣ ಭಾಗದಲ್ಲೂ ರಕ್ತದಾನ ಶಿಬಿರಗಳು ನಡೆಯುತ್ತಿವೆ ಎಂದು ಹೇಳಿದರು. ರಕ್ತದಾನದಿಂದ ಇನ್ನೊಂದು ಜೀವ ಉಳಿಸುವುದರ ಜೊತೆಗೆ ದಾನಿಗಳ ದೇಹದಲ್ಲಿ ಹೊಸ ಜೀವಕೋಶಗಳು ಉತ್ಪತ್ತಿಯಾಗಲು ಸಹಾಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯಾಧಿಕಾರಿ ಧರಣೇಶ್ ಇದ್ದರು. 20 ಮಂದಿ ರಕ್ತದಾನ ಮಾಡಿದರು.

Read More

ಮಡಿಕೇರಿ NEWS DESK ಡಿ.9 : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್ ಗಳಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ಕುಂಜಿಲ ಗ್ರಾಮದ ನಿವಾಸಿ ಮೊಹಮ್ಮದ್ ರಿಜ್ವಾನ್.ಕೆ.ಎ (35) ಬಂಧಿತ ಆರೋಪಿಯಾಗಿದ್ದಾನೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ 8 ಚಿನ್ನದ ಬಳೆಗಳನ್ನು ಅಡಮಾನ ಮಾಡಿ ಸಾಲ ಪಡೆದುಕೊಳ್ಳುವ ಸಂದರ್ಭ ಆಭರಣವನ್ನು ಪರಿಶೀಲಿಸಿದಾಗ ನಕಲಿ ಆಭರಣ ಎಂದು ತಿಳಿದು ಬಂದಿದೆ. ಆದ್ದರಿಂದ ಮೊಹಮ್ಮದ್ ರಿಜ್ವಾನ್.ಕೆ.ಎ ಈ ಹಿಂದೆ ಇದೇ ಶಾಖೆಯಲ್ಲಿ ಆಡಮಾನ ಮಾಡಿರುವ ಆಭರಣಗಳನ್ನು ಮತ್ತೊಮ್ಮೆ ಪರಿಶೀಲಿಸಿದಾಗ ಎಲ್ಲಾ ಆಭರಣಗಳು ನಕಲಿಯಾಗಿರುವುದು ಕಂಡು ಬಂದಿದೆ. ಜಿಲ್ಲೆಯಲ್ಲಿನ ವಿವಿಧ ಕೆಡಿಸಿಸಿ ಬ್ಯಾಂಕ್ ಶಾಖೆಗಳಲ್ಲಿ ಈತ ಅಡಮಾನ ಮಾಡಿರುವ ಚಿನ್ನವನ್ನು ಪರಿಶೀಲಿಸಿದ್ದು, ವಿರಾಜಪೇಟೆ, ಕಡಂಗ, ಭಾಗಮಂಡಲ ಮತ್ತು ಮಡಿಕೇರಿ ಕಾಲೇಜು…

Read More

ಮಡಿಕೇರಿ ಡಿ.9 NEWS DESK : ಭಾಗಮಂಡಲ ನಾಡು, ಕುಂದಚೇರಿ ಗ್ರಾಮದ ಪೊನ್ನೆಟ್ಟಿ ದಿ.ಸುಂದರೇಶ್  ಅವರ ಪತ್ನಿ ಪಾರ್ವತಿ (83-ತವರು ಮನೆ ನಿಡ್ಯಮಲೆ) ಇಂದು ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಡಿ.10 ರಂದು ಮಡಿಕೇರಿ ಗೌಡ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಮಡಿಕೇರಿ ಡಿ.9 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಕಾರದಲ್ಲಿ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ನಗರದ ಸಂತ ಜೋಸೆಫರ ವಿದ್ಯಾಸಂಸ್ಥೆಯಲ್ಲಿ ಚಾಲನೆ ದೊರೆಯಿತು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ 1-19 ವರ್ಷದೊಳಗಿನ ಮಕ್ಕಳಿಗೆ ಆಲ್‍ಬೆಂಡಜೋಲ್- 400 ಎಂಜಿ ಮಾತ್ರೆಯನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಾಲಾ ಮಕ್ಕಳ ಆರೋಗ್ಯ ಕಾರ್ಯಕ್ರಮದಲ್ಲಿ ಸರ್ಕಾರವು ಜಂತುಹುಳು ನಿವಾರಣಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು. ಆರೋಗ್ಯ ಇಲಾಖೆ ವತಿಯಿಂದ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಮಾತನಾಡಿ ಜಂತುಹುಳು ನಿವಾರಣಾ ಮಾತ್ರೆಯನ್ನು 19 ವರ್ಷದೊಳಗಿನ ಮಕ್ಕಳು ಪಡೆದುಕೊಳ್ಳಬೇಕು. ಇದರಿಂದ ಹೊಟ್ಟೆನೋವು ಕಡಿಮೆಯಾಗುತ್ತದೆ. ಜೊತೆಗೆ ಜೀರ್ಣಶಕ್ತಿ ಹೆಚ್ಚಿಸುತ್ತದೆ. ಹಾಗೆಯೇ ರಕ್ತಹೀನತೆ ತಡೆಯಬಹುದು…

Read More

ಮಡಿಕೇರಿ ಡಿ.9 NEWS DESK : ಹೆಬ್ಬಾಲೆ ಗ್ರಾ.ಪಂ ವ್ಯಾಪ್ತಿಯ  ಮರೂರು, ಹುಲುಸೆ ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ಫಸಲು ನಷ್ಟವಾಗುತ್ತಿರುವ ಹಿನ್ನೆಲೆ ರೈತರು ಕಂಗಾಲಾಗಿದ್ದಾರೆ. ಗ್ರಾಮದ ಬೆಳೆಗಾರರಾದ ಕಪಿನಪ್ಪ, ರಾಜಶೇಖರ, ಶಿವಕುಮಾರ್, ಶಿವರುದ್ರಪ್ಪ, ಗಣೇಶ್, ಸೇರಿದಂತೆ 10ಕ್ಕೂ ಹೆಚ್ಚು ರೈತರ ಜಮೀನುಗಳಿಗೆ ನುಗ್ಗಿದ ಕಾಡಾನೆಗಳು ಭತ್ತ, ತೆಂಗು, ಸಹಿ ಗೆಣಸು ಹಾಗೂ ಬಾಳೆ ಸೇರಿದಂತೆ ಇನ್ನಿತರ ಬೆಳೆಗಳನ್ನು ತುಳಿದು ನಾಶಪಡಿಸಿವೆ. ಬಾಣಾವರ ಮೀಸಲು ಅರಣ್ಯ ಮತ್ತು ಜೇನುಕಲ್ಲು ಬೆಟ್ಟದ ಕಡೆಯಿಂದ ಕಾಡಾನೆಗಳು ಗದ್ದೆ, ತೋಟಗಳಿಗೆ ಇಡುತ್ತಿದ್ದು, ಸಂಬಂಧಪಟ್ಟ ಅರಣ್ಯ ಇಲಾಖೆ ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸಬೇಕು. ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಧಳಕ್ಕೆ ಹೆಬ್ಬಾಲೆ ಉಪ ವಲಯ ಅರಣ್ಯಾಧಿಕಾರಿ ಭರತ್ ತಂಡ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಹಾರವನ್ನು ನೀಡುವ ಭರವಸೆ ನೀಡಿದ್ದಾರೆ.

Read More

ಮಡಿಕೇರಿ ಡಿ.9 NEWS DESK : ಕೊಡಗು ಜಿಲ್ಲೆಯಲ್ಲಿರುವ ನಿವೇಶನ ರಹಿತ ಪರಿಶಿಷ್ಟರಿಗೆ ನಿವೇಶನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕ ದಕ್ಷಿಣ ಕೊಡಗಿನ ಹೈಸೊಡ್ಲೂರುವಿನಿಂದ ಪೊನ್ನಂಪೇಟೆ ವರೆಗೆ ಭೂಮಿಗಾಗಿ ಕಾಲ್ನಡಿಗೆ ಜಾಥ ಹೋರಾಟವನ್ನು ನಡೆಸಿತು. ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ವರೆಗೆ ಸುಮಾರು 15 ಕಿ.ಮೀ ದೂರ ಕ್ರಮಿಸಿದ ಪ್ರತಿಭಟನಾಕಾರರು ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು. ಸರಕಾರಿ ಜಮೀನನ್ನು ಒತ್ತುವರಿ ಮಾಡಿ ಕೃಷಿ ಚಟುವಟಿಕೆ ನಡೆಸುತ್ತಿರುವ ಶ್ರೀಮಂತರಿಗೆ ಗುತ್ತಿಗೆ ಆಧಾರದಲ್ಲಿ ಭೂಮಿಯನ್ನು ನೀಡಬಾರದು. ಮೇಲ್ವರ್ಗದ ಮಂದಿಯನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬಾರದು. ನಿವೇಶನವಿಲ್ಲದೆ ಸಂಕಷ್ಟದ ಬದುಕು ಸಾಗಿಸುತ್ತಿರುವ ಪರಿಶಿಷ್ಟರಿಗೆ ಕೃಷಿಭೂಮಿ ಮತ್ತು ನಿವೇಶನ ನೀಡಬೇಕು. ಹಕ್ಕುಪತ್ರ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ದಲಿತರ ಮೇಲೆ ನಡೆಯುತಿರುವ ದೌರ್ಜನ್ಯದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸಂಘಟನೆಯ ರಾಜ್ಯ ಸಂಚಾಲಕ ಡಿ.ಆರ್.ಪಾಂಡುರಂಗ ಸ್ವಾಮಿ, ರಾಜ್ಯ ಸಂಘಟನಾ ಸಂಚಾಲಕ…

Read More

ಮಡಿಕೇರಿ ಡಿ.9 NEWS DESK : ಮೂರ್ನಾಡು 33/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್.ಎಸ್ ಹೊದ್ದೂರು ಮತ್ತು ಎಫ್2 ನಾಪೋಕ್ಲು ಫೀಡರ್‍ನಲ್ಲಿ ಡಿಸೆಂಬರ್, 10 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಹೊದ್ದೂರು, ಕಬಡಗೇರಿ, ಕುಂಬಳದಾಳು, ಕಕ್ಕಬೆ, ಕೊಳಕೇರಿ, ಕುಂಜಿಲ, ಯುವಕಪಾಡಿ, ನಾಲಡಿ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ಕಿಯಲಕೇರಿ, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಬೇತು, ಚೆರಿಯಪರಂಬು, ಹಳೆತಾಲ್ಲೂಕು, ಚೋನೆಕೆರೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್  ಕೋರಿದ್ದಾರೆ.

Read More