ಮಡಿಕೇರಿ ಡಿ.9 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ “ಕೊಡವ ಕಥೆ ಜೊಪ್ಪೆ”ಯನ್ನು ಹೊರತರಲು ಸೂಕ್ತ ಕತೆಗಳನ್ನು ಆಹ್ವಾನಿಸಿದೆ. ಸುಮಾರು 25 ರಿಂದ 30ರಷ್ಟು ಕತೆಗಳನ್ನು ಒಂದೇ ಪುಸ್ತಕದಲ್ಲಿ ಪ್ರಕಟಿಸಲಾಗುವುದು. ಕತೆಗಳನ್ನು ಎ 4 ಅಳತೆಯ ಕಾಗದದಲ್ಲಿ ಸ್ಪುಟವಾಗಿ ಬರೆದಿದ್ದು 5-6 ಪುಠಗಳನ್ನು ಮೀರುವಂತಿಲ್ಲ. ಕಥಾವಸ್ತು ಕತೆಗಾರರ ಕಲ್ಪನೆಗೆ ಬಿಟ್ಟಿದ್ದು. ಕತೆಗಳು ಪ್ರತ್ಯಕ್ಷ-ಪರೋಕ್ಷವಾಗಿ ಯಾರದ್ದು ತೇಜೋವಧೆಯಾಗಲಿ, ಜಾತಿ-ಧರ್ಮಗಳ ಭಾವನೆಗಳಿಗೆ ಘಾಸಿ ಉಂಟು ಮಾಡುವುದಾಗಿರಕೂಡದು. ಅಂತಿದ್ದಲ್ಲಿ ಅದರ ಸಾಧಕ-ಭಾದಕಗಳಿಗೆ ಕತೆಗಾರರೇ ಭಾದ್ಯಸ್ಥರಾಗುವುದು. ಕತೆಗಳು ಸಾಧ್ಯವಾದಷ್ಟು ಕೊಡವ ಸಂಸ್ಕೃತಿ-ಪದ್ಧತಿ, ಮೂಲತನಕ್ಕೆ ಒತ್ತುಕೊಡುವಂತಿದ್ದು ಸಾರ್ವಕಾಲಿಕವಾಗಿರಲಿ. ಪ್ರಕಟಿತ ಕಥೆಗಳಿಗೆ ಅಕಾಡೆಮಿ ಗೊತ್ತು ಪಡಿಸಿರುವಂತೆ ಸಂಭಾವನೆ ನೀಡಲಾಗುವುದು. ಕಥೆಗಾರರು ತಮ್ಮ ಸ್ವಪರಿಚಯವನ್ನು 4-5 ವಾಕ್ಯಗಳಿಗೆ ವೀರದಂತೆ ಬರೆದು ಕೊಡುವುದು. ಪ್ರತಿಯೊಬ್ಬ ಕಥೆಗಾರರು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಲಗತ್ತಿಸುವುದು. ಕತೆಗಳನ್ನು ಕಳುಹಿಸಿಕೊಡಲು ಅಂತಿಮ ದಿನಾಂಕ 05.01.2025. ಕಥೆಯನ್ನು ಪ್ರಕಟಿಸುವ ಅಂತಿಮ ತೀರ್ಮಾನ ಅಕಾಡೆಮಿಯದ್ದಾಗಿರುತ್ತದೆ. ಕೊಡವ ಕಥೆ ಜೊಪ್ಪೆಗೆ ನಿಮ್ಮ ಕಥೆಗಳನ್ನು…
ಲೇಖಕ: admin
ಮಡಿಕೇರಿ ಡಿ.9 NEWS DESK : ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ಸಮೂಹದ ಅಭ್ಯುದಯದ ಕುರಿತು ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೇರಿದ ನಂತರ ಈಡೇರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ಕೇವಲ ಮೌಖಿಕ ಹೇಳಿಕೆಗಳಿಗಷ್ಟೇ ಸರ್ಕಾರ ಸೀಮಿತವಾಗಿದೆ ಎಂದು ಆರೋಪಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ, ಈ ಸಂಬಂಧ ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹಿಸಿ ಡಿ.10 ರಂದು ಉಡುಪಿಯಿಂದ ‘ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ’ವನ್ನು ಆಯೋಜಿಸಲಾಗಿದೆ ಎಂದು ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳವಾರದಿಂದ ಆರಂಭಗೊಳ್ಳುವ ಜಾಥಾ ಆರು ದಿನಗಳ ಕಾಲ ಸಾಗಿ ಬೆಳಗಾವಿಯಲ್ಲಿ ಮುಕ್ತಾಯಗೊಳ್ಳಲಿದೆ. ಈ ಸಂದರ್ಭ ಸರ್ಕಾರದ ಮುಂದೆ ನಮ್ಮ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದರು. ಜಾಥಾವು ಉಡುಪಿಯಿಂದ ಆರಂಭಗೊಂಡು ದಕ್ಷಿಣ ಕನ್ನಡ, ಬೆಂಗಳೂರು, ಶಿವಮೊಗ್ಗ, ದಾವಣಗೆರೆ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಹುಬ್ಬಳ್ಳಿ, ಧಾರಾವಾಡ ಮಾರ್ಗವಾಗಿ ಬೆಳಗಾವಿಗೆ ತೆರಳಲಿದೆ ಎಂದು ಹೇಳಿದರು. ಕಳೆದ ವಿಧಾನಸಭಾ ಚುನಾವಣಾ ಹಂತದಲ್ಲಿ ಕಾಂಗ್ರೆಸ್ ಪಕ್ಷವು, ಈ ಹಿಂದಿನ ಬಿಜೆಪಿ ಸರ್ಕಾರ…
ಮಡಿಕೇರಿ ಡಿ.9 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಡಗು ಜಿಲ್ಲಾ ಶಾಖೆಗೆ ಮಡಿಕೇರಿಯಲ್ಲಿ ಮಂಜೂರಾಗಿರುವ 40 ಸೆಂಟ್ಸ್ ಜಾಗದಲ್ಲಿ ಸುಮಾರು ರೂ.5ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ಸಂಘದ ನೂತನ ಜಿಲ್ಲಾಧ್ಯಕ್ಷ ಮುಕ್ಕಾಟಿರ ಸಿ.ಅರುಣ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ 40 ಸೆಂಟ್ಸ್ ಜಾಗವನ್ನು ಹಿಂದಿನ ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದಾರೆ. ಈ ಜಾಗದಲ್ಲಿ ಸುಮಾರು 5 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣಮಾಡುವ ಉದ್ದೇಶವನ್ನು ನೂತನ ಆಡಳಿತ ಮಂಡಳಿ ಹೊಂದಿದೆ. ಇದಕ್ಕಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಹಂತದ ಎಲ್ಲಾ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಂದ ವಂತಿಗೆ ಮತ್ತು ಸಹಕಾರ ಪಡೆಯಲು ಹಾಗೂ ಸಾರ್ವಜನಿಕರ ಬೆಂಬಲ ಮತ್ತು ಆರ್ಥಿಕ ಸಹಾಯ ಪಡೆಯಲು ಉದ್ದೇಶಿಸಿರುವುದಾಗಿ ತಿಳಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಡಗು ಜಿಲ್ಲಾ ಶಾಖೆಯ 2024-29ನೇ ಸಾಲಿನ ನೂತನ ಆಡಳಿತ ಮಂಡಳಿ ರಚನೆಯಾಗಿದ್ದು, ಅಧ್ಯಕ್ಷನಾಗಿ ನಾನು…
ಮಡಿಕೇರಿ ಡಿ.9 NEWS DESK : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಪ್ರಪ್ರಥಮ ಬಾರಿಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಪತ್ರಕರ್ತರಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಟೀಂ ಚೀತಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಟೀಂ ಚೀತಾ ಮತ್ತು ಟೀಂ ಸ್ಮಾಷರ್ಸ್ ನಡುವಿನ ಜಿದ್ದಜಿದ್ದಿನ ಫೈನಲ್ ಪಂದ್ಯದಲ್ಲಿ ಟೀಂ ಚೀತಾ ತಂಡ ನೇರ ಸೆಟ್ಗಳಿಂದ ಟೀಂ ಸ್ಮಾಷರ್ಸ್ ತಂಡವನ್ನು ಮಣಿಸಿತು. ಪರಿಣಾಮ ಪೇಮ್ಕುಮಾರ್ ನಾಯಕ್ವದ ಟೀಂ ಚೀತಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಇಸ್ಮಾಯಿಲ್ ಕಂಡಕೆರೆ ನಾಯಕತ್ವದ ಟೀಂ ಸ್ಮಾಷರ್ಸ್ ತಂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿ ಪಟ್ಟುಕೊಂಡಿತು. ಇದಕ್ಕೂ ಮೊದಲು 5 ತಂಡಗಳ ನಡುವೆ ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ ಟೀಂ ಜಂಪರ್ಸ್, ಟೀಂ ಪವರ್ ಪಂಚರ್ಸ್, ಟೀಂ ಹಂಟರ್ಸ್, ಟೀಂ ಚೀತಾ, ಟೀಂ ಸ್ಮಾಷರ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಿದರು. ಟೇಬಲ್ ಟಾಪರ್ ಟೀಂ ಚೀತಾ ತಂಡ ನೇರವಾಗಿ ಫೈನಲ್ ಪ್ರವೇಶ ಪಡೆಯಿತು. ಸೆಮಿಫೈನಲ್ ಪಂದ್ಯದಲ್ಲಿ…
ಮಡಿಕೇರಿ ಡಿ.9 NEWS DESK : ದಕ್ಷಿಣ ಕನ್ನಡದ ಮಂಗಳೂರು ಶ್ರೀನಿವಾಸ್ ವಿಶ್ವವಿದ್ಯಾನಿಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಮಡಿಕೇರಿಯ ಡಾ.ನಮ್ರೀನ್ ಆಸಿಫ್ ವಿ.ಎ ಅವರು “ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿಯ ಪ್ರಭಾವದ ಕುರಿತು ಅಧ್ಯಯನ” ಎಂಬ ವಿಷಯದಲ್ಲಿ ಪಿಎಚ್ಡಿ ಪೂರ್ಣಗೊಳಿಸಿದ್ದಾರೆ. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮ್ಮ ವಿಶ್ವವಿದ್ಯಾನಿಲಯದ ಡಾ.ಗಣೇಶ್ ಎಸ್.ಆರ್, ಮಂಗಳೂರು ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಸಂಶೋಧನಾ ನಿರ್ದೇಶಕ ಹಾಗೂ ಸಹ ಪ್ರಾಧ್ಯಾಪಕ ಡಾ.ಪ್ರವೀಣ್ ಹಾಗೂ ಸಂಶೋಧನಾ ಸಂಯೋಜಕರಾದ ಡಾ.ಶೈಲಶ್ರೀ ವಿ.ಟಿ ಅವರ ಮಾರ್ಗದರ್ಶನದಲ್ಲಿ ಪಿಎಚ್ಡಿ ಯನ್ನು ಪೂರ್ಣಗೊಳಿಸಿದರು. ಡಾ.ನಮ್ರೀನ್ ಆಸಿಫ್ ಅವರು ಮಡಿಕೇರಿಯ ಕೊಹಿನೂರು ರಸ್ತೆ ನಿವಾಸಿ ವಿ.ಎಸ್.ಮೊಹಮ್ಮದ್ ಆಸಿಫ್ ಹಾಗೂ ವಿ.ಎಸ್.ನಸೀಮಾ ದಂಪತಿಯ ಪುತ್ರಿ.
ಮಡಿಕೇರಿ, ಡಿ.9 NEWS DESK : ವಿದ್ಯಾರ್ಥಿಗಳು ಶಿಸ್ತಿನೊಂದಿಗೆ ಮುನ್ನಡೆದರೆ ಸಾಧನೆ ಸಾಧ್ಯವಾಗುತ್ತದೆ ಎಂದು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಸಲಹೆ ನೀಡಿದರು. ಮಂಗಳೂರು ಮತ್ತು ಕೊಡಗು ವಿಶ್ವವಿದ್ಯಾಲಯ ಅಧೀನದ ಫೀ.ಮಾ. ಕೆ.ಎಂ.ಕಾರ್ಯಪ್ಪ ಕಾಲೇಜಿನ 2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘವನ್ನು ಕಾಲೇಜು ಸಭಾಂಗಣದಲ್ಲಿ ಉದ್ಘಾಟಿಸಿ, ಅವರು ಮಾತನಾಡಿದರು. ಭವ್ಯ ಇತಿಹಾಸವನ್ನು ಫೀ.ಮಾ. ಕಾರ್ಯಪ್ಪ ಕಾಲೇಜು ಹೊಂದಿದ್ದು, ವಿದ್ಯಾಸಂಸ್ಥೆಗೆ ಅಗೌರವ ತರುವ ಯಾವುದೇ ಕೆಲಸ ವಿದ್ಯಾರ್ಥಿಗಳು ಮಾಡಬಾರದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ವಿದ್ಯಾರ್ಥಿ ಸಂಘದ ನಾಯಕರು ತಮ್ಮ ಜವಾಬ್ದಾರಿ ಅರಿತು ಮುನ್ನಡೆಯಬೇಕು. ರಾಷ್ಟ್ರದ ಅಭಿವೃದ್ಧಿಯಲ್ಲಿ ಯುವಪಡೆಯ ಪಾತ್ರ ಮಹತ್ತರವಾಗಿದೆ ಎಂದು ಹೇಳಿದರು. ಸಂಘದ ಸಲಹೆಗಾರ ಬಿ.ಹೆಚ್.ತಳವಾರ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಪ್ರೊ.ತಿಪ್ಪೇಸ್ವಾಮಿ, ಮಹಿಳಾ ಕ್ಷೇಮಾಭಿವೃದ್ಧಿ ಘಟಕ ಸಂಚಾಲಕಿ ಡಾ.ನಯನ ಕಾಶ್ಯಪ್, ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಚಂದನ್ ನಂದರುಬೆಟ್ಟು, ಪ್ರಮುಖರಾದ ಡಾ.ಮಹದೇವಯ್ಯ, ಡಾ.ಶೃಂಗಾರ್,…
ಕುಶಾಲನಗರ ಡಿ.9 NEWS DESK : ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಆಗ ಮಾತ್ರ ಆತ್ಮವಿಶ್ವಾಸ ವೃದ್ಧಿಸಲು ಸಾಧ್ಯ ಎಂದು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ, ಸಾಹಿತಿ ಮಿಲನಾ ಭರತ್ ಅಭಿಪ್ರಾಯಪಟ್ಟರು. ಕುಶಾಲನಗರ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಘಟಕದ ವತಿಯಿಂದ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆದ ದಿ. ಸೀತಾಭಾಯಿ ಮತ್ತು ರಾಮಚಂದ್ರ ಕಾಮತ್ ದತ್ತಿ ನಿಧಿ ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ಕುರಿತು ಉಪನ್ಯಾಸ ನೀಡಿದರು. ಶಿಕ್ಷಣದ ಜೊತೆಗೆ ಶಿಸ್ತು, ಸಂಯಮ, ಸಮಯ ಪಾಲನೆಯನ್ನು ಮೈಗೂಡಿಸಿಕೊಂಡಾಗ ಮಾತ್ರ ನಾವು ಕಲಿತ ವಿದ್ಯೆಗೆ ಬೆಲೆ ಸಿಗುತ್ತೆ ಎಂದರು. ಈಗಿನ ಕಾಲಮಾನದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣದ ಅವಶ್ಯಕತೆಯಿದೆ. ಕಲಿತ ಜ್ಞಾನವನ್ನು ಸರಿಯಾದ ಮಾರ್ಗದಲ್ಲಿ ಸದ್ಬಳಕೆ ಮಾಡಿಕೊಂಡರೆ ಮಾತ್ರ ಗೌರವ ದೊರೆಯುತ್ತದೆ. ಹೆಣ್ಣು ಮಕ್ಕಳು ಕೇವಲ ಮನೆ, ಗಂಡ ಮಕ್ಕಳು ಎನ್ನದೇ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು ಎಂದು ಕರೆ ನೀಡಿದರು. ಶ್ರೇಷ್ಠ ಗುರಿ ಇಟ್ಟುಕೊಳ್ಳಿ,…
ಮಡಿಕೇರಿ ಡಿ.9 NEWS DESK : ಮೈಷುಗರ್ ಫ್ರೌಡಶಾಲೆಯ ಅಮೃತಮಹೋತ್ಸವದ ಪ್ರಯುಕ್ತ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ ಅಂಡರ್ 17 ಕಾಲ್ಚೆಂಡು ಪಂದ್ಯಾವಳಿಯಲ್ಲಿ ನಕ್ಷತ್ರ ಎಫ್.ಸಿ ಕೊಡಗು ತಂಡವು ದ್ವಿತೀಯ ಸ್ಥಾನ ಪಡೆದಿದೆ. ಜಿದ್ದಾಜಿದ್ದಿನಿಂದ ಕೂಡಿದ್ದ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಬೆಂಗಳೂರು ತಂಡದ ವಿರುದ್ಧ ನಿಗದಿತ ಸಮಯದಲ್ಲಿ 1-1 ಗೋಲುಗಳಿಂದ ಸಮಬಲ ಸಾಧಿಸಿತು. ಅಂತಿಮವಾಗಿ ಪೆನಾಲ್ಟಿ ಶೂಟೌಟ್ ನಲ್ಲಿ ಕೊಡಗು ತಂಡವು 4-3 ಗೋಲುಗಳ ಅಂತರದಿಂದ ಸೆಮಿಫೈನಲ್ ಪಂದ್ಯ ಗೆದ್ದಿತ್ತು. ಫೈನಲ್ ಪಂದ್ಯದಲ್ಲಿ ನಕ್ಷತ್ರ ಎಫ್.ಸಿ ಕೊಡಗು ತಂಡದ ವಿರುದ್ಧ ಡಿಯುಎಫ್ಎ ಹಾವೇರಿ ತಂಡವು ಗೆಲುವು ಸಾಧಿಸಿತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ ನಕ್ಷತ್ರ ಎಫ್.ಸಿ ಕೊಡಗು ತಂಡವು ಪೀಪಲ್ ಟ್ರೀ ಬಳ್ಳಾರಿ ತಂಡದ ವಿರುದ್ಧ 5-1 ಗೋಲುಗಳ ಅಂತರದಿಂದ ಗೆಲುವು ಸಾಧಿಸಿತು. ದ್ವಿತೀಯ ಪಂದ್ಯದಲ್ಲಿ ಟಿಸಿಎಫ್ಎ ಹುಬ್ಬಳ್ಳಿ ತಂಡದ ವಿರುದ್ಧ 2-2 ಗೋಲುಗಳ ಸಮಬಲ ಸಾಧಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದು ಸೆಮಿಫೈನಲ್ ಪ್ರವೇಶಿಸಿತು.ನಕ್ಷತ್ರ ಎಫ್.ಸಿ ಕೊಡಗು ತಂಡದ ಮುಖ್ಯ ತರಬೇತುದಾರರಾಗಿ…
ಸುಂಟಿಕೊಪ್ಪ NEWS DESK : ಸಂತ ಅಂತೋಣಿ ಶಾಲೆಯ ನಿವೃತ್ತ ಶಿಕ್ಷಕಿ ಹಾಗೂ ಸಂತ ಕ್ಲಾರ ಕಾನ್ವೆಂಟಿನ ಕನ್ಯಾ ಭಗಿನಿ ಎಸ್.ಆರ್.ಸ್ಟೆಲಾ ಎಸ್.ಸಿ.ಪೆರ್ನಾಂಡಿಸ್ ಸಿಸ್ಟರ್ (ಮೆರ್ಲಿನ್-89) ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಡಿ.10 ರಂದು ಮೈಸೂರಿನಲ್ಲಿ ನಡೆಯಲಿದೆ.
ಸುಂಟಿಕೊಪ್ಪ ಡಿ.9 NEWS DESK : ಸಂತ ಅಂತೋಣಿ ದೇವಾಲಯದಲ್ಲಿ ಅಮಲೋದ್ಭವ ಮಾತೆಯ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂತ ಅಂತೋಣಿ ದೇವಾಲಯದ ಧರ್ಮ ಗುರುಗಳಾದ ವಂ. ಫಾಧರ್ ವಿಜಯಕಮಾರ್ ಮಂಜಿಕೆರೆಯ ಗದ್ದೆಯಲ್ಲಿ ವಿಶೇಷ ಪ್ರಾರ್ಥನೆ, ಭತ್ತದ ಫೈರನ್ನು ಕೊಯ್ದು ಮೆರವಣಿಗೆಯ ಮೂಲಕ ತರಲಾಯಿತು. ಈ ಸಂದರ್ಭ ಸಂತ ಕ್ಲಾರ ಕನ್ಯಾಸ್ತ್ರಿ ಮಠದ ಕನ್ಯಾಸ್ತ್ರಿಯರು ಹಾಗೂ ಕ್ರೈಸ್ತ ಬಾಂಧವರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು. ನಂತರ ಧರ್ಮಗರುಗಳು ವಿಜಯಕುಮಾರ್ ಹಾಗೂ ಮಡಿಕೇರಿ ವಲಯ ಶ್ರೇಷ್ಠ ಗುರು ಹಾಗೂ ಮಡಿಕೇರಿ ಸಂತ ಮೈಕಲರ ದೇವಾಲಯದ ಧರ್ಮಗುರುಗಳಾದ ದೀಪಕ್ ಅಡಂಬರ ದಿವ್ಯ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆಯನ್ನು ನೆರವೇರಿಸಿದರು. ನೂರಾರು ಸಂಖ್ಯೆಯಲ್ಲಿ ನೆರದಿದ್ದ ಕ್ರೈಸ್ತ ಬಾಂಧವರಿಗೆ ಭತ್ತದ ತೆನೆಗಳನ್ನು ವಿತರಿಸಿದರು.






