ಲೇಖಕ: admin

ಮಡಿಕೇರಿ ಜ.6 NEWS DESK  : ಸಮರ್ಥ ಕನ್ನಡಿಗರು ಸಂಸ್ಥೆಯ ವತಿಯಿಂದ ಫೆ.1 ರಂದು ಮಡಿಕೇರಿಯ ಲಯನ್ಸ್ ಹಾಲ್ ನಲ್ಲಿ ಮೂರರಿಂದ ಹನ್ನೆರಡು (3- 12) ವರ್ಷದವರೆಗಿನ ಮಕ್ಕಳಿಗೆ ಕಥೆ ಹೇಳುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧಿಗಳು ಸ್ವಚ್ಛ ಕನ್ನಡ ಭಾಷೆಯಲ್ಲಿಯೇ ಕಥೆ ಹೇಳಬೇಕು, ಮೂರು ನಿಮಿಷ ಕಾಲಾವಕಾಶ ನೀಡಲಾಗುವುದು, ಕಥೆಯ ಕೊನೆಗೆ ಕಥೆಯ ನೀತಿಯನ್ನು ಹೇಳಬೇಕು, ವಯಸ್ಸಿನ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್ ತರಬೇಕು,  ಮೂರರಿಂದ ಏಳು ವರ್ಷ( 3 – 7 ) ಮತ್ತು ಏಳರಿಂದ ಹನ್ನೆರಡು ವರ್ಷ ( 7 – 12 ) ಎಂದು ಸ್ಪರ್ಧೆಯನ್ನು ಎರಡು ವಿಭಾಗಗಳಲ್ಲಿ ನಡೆಸಲಾಗುವುದು. ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳ ಜೊತೆಗೆ ಭಾಗವಹಿಸುವ ಎಲ್ಲ ಮಕ್ಕಳಿಗೂ ಪ್ರಶಂಸನಾ ಪತ್ರವನ್ನು ನೀಡಲಾಗುವುದು ಎಂದು ಆಯೋಜರು ತಿಳಿಸಿದ್ದಾರೆ. ಭಾಗವಹಿಸುವ ಮಕ್ಕಳು ಆ ದಿನ ಬೆಳಗ್ಗೆ 9.30ಕ್ಕೆ ಹಾಜರಿರಬೇಕು. ಸ್ಪರ್ಧೆಗೆ ಹೆಸರು ನೋಂದಾಯಿಸಲು ಜ.22 ಕೊನೆ ದಿನ.  ನೋಂದಣಿಗಾಗಿ  8762574584 – ಸೌಮ್ಯ ಸಂತೋಷ್, …

Read More

ಮಡಿಕೇರಿ NEWS DESK ಜ.6 : ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ನ ಕೋಶಾಧಿಕಾರಿ ಪಿ.ಮನೋಹರ್(64) ಅವರು ಇಂದು ಬೆಳಗ್ಗೆ ಪೊನ್ನಂಪೇಟೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವರ್ತಕರಾಗಿರುವ ಪಿ.ಮನೋಹರ್ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸುನಿಲ್ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ನೆಲ್ಲಿತ್ತಾಯ ಮತ್ತಿತರ ಪ್ರಮುಖರು ಮನೋಹರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Read More

ಮಡಿಕೇರಿ ಜ.6 NEWS DESK : ಕೊಡಗು ಜಿಲ್ಲಾ ವಿದ್ಯಾ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮ ಜ.11 ರಂದು ಮಡಿಕೇರಿ ಗೌಡ ಸಮಾಜದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಆಹ್ವಾನಿಸಲಾಯಿತು. ಶಾಸಕರ  ಗೃಹದ ಕಚೇರಿಯಲ್ಲಿ ಸಂಘದ ಅಧ್ಯಕ್ಷರಾದ ಹೆಚ್.ಎಸ್ ಚೇತನ್ ಹಾಗೂ ನಿರ್ದೇಶಕರು ಸನ್ಮಾನಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

Read More

ನಾಪೋಕ್ಲು ಜ.6 NEWS DESK : ಇನ್ನೊಬ್ಬರ ಕಷ್ಟದಲ್ಲಿ ಭಾಗಿಯಾಗುವ ಇನ್ನೊಬ್ಬರ ದುಃಖವನ್ನು ಶಮನಗೊಳಿಸುವ ಇನ್ನೊಬ್ಬರ ಜೀವನದಲ್ಲಿ ನಗುವನ್ನು ತರಿಸುವ ಜವಾಬ್ದಾರಿಯನ್ನು ನಾವು ನಿರ್ವಹಿಸಬೇಕಿದೆ ಎಂದು ರೊಟೇರಿಯನ್ ಮಾಜಿ ರಾಜ್ಯಪಾಲ (ಜಿಲ್ಲಾ ಗವರ್ನರ್) ಅಭಿನಂದನ್ ಬಿ.ಶೆಟ್ಟಿ ಹೇಳಿದರು. ಲಯನ್ಸ್ ಕ್ಲಬ್ ನಾಪೋಕ್ಲು ವತಿಯಿಂದ ಸ್ಥಳೀಯ ಕೊಡವ ಸಮಾಜದ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಲಯನ್ಸ್ ರೀಜನ್ ಮೀಟ್ “ಬೆಸುಗೆ” ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿವಿಧ ಉದ್ದೇಶಗಳನ್ನು ಹೊತ್ತು ಸಂಘಟನೆಯಲ್ಲಿ ಸದಸ್ಯರು ತೊಡಗಿಸಿಕೊಳ್ಳುತ್ತಾರೆ. ಕೆಲವರು ಒಡನಾಟಕ್ಕಾಗಿ ಕೆಲವರು ಸಮಯ ನಿರ್ವಹಣೆಗಾಗಿ ಇನ್ನು ಕೆಲವರು ಸೇವೆಗಾಗಿ ಸಂಘ ಸಂಸ್ಥೆಗಳನ್ನು ಸೇರುತ್ತಾರೆ. ಸೇವೆ ಎಂಬುದು ಲಯನ್ಸ್ ಸಂಸ್ಥೆಯ ದ್ಯೇಯೋದ್ದೇಶ. ಜೀವನದಲ್ಲಿ ಉತ್ತಮ ಗುರಿಯೊಂದಿಗೆ ಸದ್ದುದ್ದೇಶದೊಂದಿಗೆ ಹಾಗೂ ಸ್ಪೂರ್ತಿಯೊಂದಿಗೆ ಸಾಮಾಜಿಕ ಸೇವೆಗಳನ್ನು ಕೈಗೊಳ್ಳಬೇಕಾಗಿದೆ ಎಂದರು. ಜಪಾನ್ ದೇಶ ಶತ್ರು ರಾಷ್ಟ್ರಗಳಿಂದ ದಾಳಿಗೊಳಗಾಗಿ ಸಂಕಷ್ಟವನ್ನು ಅನುಭವಿಸಿತು. ಅದೇ ಸೋಲನ್ನು ಸವಾಲಾಗಿ ಸ್ವೀಕರಿಸಿ ಇದೀಗ ಆರ್ಥಿಕವಾಗಿ ಸದೃಢ ದೇಶವಾಗಿದೆ. ಜಪಾನಿನ ನಾಗರಿಕರು ಸದೃಢ ದೇಶ ನಿರ್ಮಾಣದ ಪಣತೊಟ್ಟಿದ್ದಾರೆ. ಉತ್ತಮ…

Read More

ಮಡಿಕೇರಿ ಜ.6 NEWS DESK : ಜಗದ ಕವಿ, ಯುಗದ ಕವಿ, ದಾರ್ಶನಿಕ ಕವಿ ಶ್ರೀಕುವೆಂಪು ಅವರು ಸಾಹಿತ್ಯ ಕ್ಷೇತ್ರದಲ್ಲಿ ಆಧ್ಯಾತ್ಮಿಕ ಕಾಣಿಕೆಯನ್ನು, ವೈಚಾರಿಕತೆಯನ್ನೂ ಬಿತ್ತಿದ ಮಹಾನ್‌ಚೇತನ. ಅಪ್ಪಟ ಅಧ್ಯಾತ್ಮ ಜೀವಿಯಾಗಿದ್ದ ಕುವೆಂಪು ಅವರು ರೂಪಿಸಿದ ‘ವಿಶ್ವಮಾನವ ಸಂದೇಶ‘ ಸಾರ್ವಕಾಲಿಕ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಅಶೋಕ ಸಂಗಪ್ಪ ಆಲೂರ ಅವರು ಅಭಿಪ್ರಾಯಿಸಿದರು.  ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಆವರಣದ ಹಾರಂಗಿ ಸಭಾಂಗಣದಲ್ಲಿ ಕನ್ನಡಸಿರಿ ಸ್ನೇಹ ಬಳಗ, ಹಾಗೂ ನಾಡಪ್ರಭು ಪತ್ತಿನ ಸಹಕಾರ ಸಂಘ, ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ವಿಶ್ವಮಾನವ ಕುವೆಂಪುರವರ ಜನ್ಮೋತ್ಸವ ಮತ್ತು -ಸಮಗ್ರ ಸಾಹಿತ್ಯದ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಜನಿಸಿ ಹೋಗಿದ್ದಾರೆ. ಅವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊಂಡು ಕಡೆಗೆ ಮತವಾಗಿ ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆಂಬ ಉದ್ದೇಶದಿಂದ ಹುಟ್ಟಿಕೊಂಡ ವಿಶ್ವಮಾನವ ಸಂದೇಶದ…

Read More

ಮಡಿಕೇರಿ NEWS DESK ಜ.5 : ವಿದ್ಯಾರ್ಥಿನಿಯರೇ ಭಯ ಬೇಡ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಕೊಡಗು ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅಭಯ ನೀಡಿದ್ದಾರೆ.  ವಿದ್ಯಾರ್ಥಿನಿಯರು, ಮಹಿಳೆಯರ ಮತ್ತು ಮಕ್ಕಳ ರಕ್ಷಣೆ, ಕಾನೂನು ಅರಿವು, ಜಾಗೃತಿ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರದ ಮಹತ್ವದ ಯೋಜನೆಯಾದ ‘ಅಕ್ಕ ಪಡೆ’ಗೆ ಇಂದು ಜಿಲ್ಲಾ ಪೊಲೀಸ್ ಕಚೇರಿ‌ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿನಿಯರು ಹಾಗೂ ಮಹಿಳೆಯರು ಹಾಜರಿದ್ದರು.

Read More

ಮಡಿಕೇರಿ NEWS DESK ಜ.5 : ಮಡಿಕೇರಿ ನಗರದ ನಿವಾಸಿ, ನಿವೃತ್ತ ಕ್ಯಾಪ್ಟನ್ ಕೊಂಗೇಟಿರ ದೇವಯ್ಯ ಅವರ ಪತ್ನಿ ನಿವೃತ್ತ ತಹಶೀಲ್ದಾರ್ ಅಕ್ಕಮ್ಮ (ಅಕ್ಕಿ 85) ನಿಧನ ಹೊಂದಿದ್ದಾರೆ. ಮೃತರು ಪುತ್ರ ಕೊಂಗೇಟಿರ ದರ್ಶನ್ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಜ.6 ರಂದು ಮಡಿಕೇರಿಯಲ್ಲಿ ನಡೆಯಲಿದೆ.

Read More

ಮಡಿಕೇರಿ NEWS DESK ಜ.5 : ಕೊಡವ ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆ ತ್ವರಿತವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕೊಡವ ಭಾಷೆಗೆ ಭಾರತದ ಸಂವಿಧಾನದಡಿ ಭದ್ರತೆ ಒದಗಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಕೊಡವ ಭಾಷಿಕ ಸಮುದಾಯಗಳ ಕೂಟ ಒತ್ತಾಯಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಇಂದು ವಿರಾಜಪೇಟೆಯಲ್ಲಿ ಭೇಟಿಯಾದ ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ನೇತೃತ್ವದ ನಿಯೋಗ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತು. ಈ ಸಂದರ್ಭ ಮಾತನಾಡಿದ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ‘ಕೊಡವ ಭಾಷೆ’ ಮಾತನಾಡುವ 21 ಸಮುದಾಯಗಳ ತಾಯಿ ಭಾಷೆ ಕೊಡವ ಭಾಷೆಯಾಗಿದೆ. ಈ ಭಾಷೆಗೆ ಸುಮಾರು 2 ಸಾವಿರ ವರ್ಷಗಳ ಪ್ರಾಚೀನ ಇತಿಹಾಸವಿದ್ದು, ಕೊಡಗಿನ ಆಡುಭಾಷೆ ಮತ್ತು ವ್ಯವಹರಿಸುವ ಭಾಷೆಯಾಗಿ ಉಳಿದುಕೊಂಡಿದೆ ಎಂದರು. ಆದರೆ 2010 ರಲ್ಲಿ ಯುನೆಸ್ಕೋ ಸಂಸ್ಥೆ ಬಿಡುಗಡೆಗೊಳಿಸಿರುವ ಅಧಿಕೃತ ಮಾಹಿತಿಯ ಪ್ರಕಾರ ಭಾರತದ 99 ಭಾಷೆಗಳು ಅಳಿವಿನಂಚಿನಲ್ಲಿವೆ.…

Read More

ಮಡಿಕೇರಿ ಜ.5 NEWS DESK : 66/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ 33/11 ಕೆ.ವಿ ಸಿದ್ದಾಪುರ ವಿವಿ ಕೇಂದ್ರದಲ್ಲಿ ಜನವರಿ, 06 ರಂದು ಬೆಳಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ 5ಎಂವಿಎ ಪರಿವರ್ತಕ ಅಳವಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ, ಸಿದ್ದಾಪುರ, ಕರಡಿಗೋಡು, ಅವರೆಗುಂದ, ಕೆಸವಿನಹಳ್ಳ, ಟೀಕ್‍ವುಡ್, ಆರೆಂಜ್‍ಕೌಂಟಿ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಜ.5 NEWSDESK : ಕೊಡವ ಭಾಷೆಯನ್ನು ಭಾರತ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡುವ ಕುರಿತು ಸರ್ಕಾರದಿಂದ ವರದಿ ಕೇಳಲಾಗಿದ್ದು, ಈ ಸಂಬಂಧ ಉಪ ಸಮಿತಿಗಳ ತಂಡವನ್ನು ರಚಿಸಿಕೊಂಡು ಕಾನೂನಾತ್ಮಕ ಮಾನದಂಡದನ್ವಯ ವರದಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸಲಹೆ ಮಾಡಿದ್ದಾರೆ. ಕೊಡವ ಭಾಷೆಯನ್ನು ಭಾರತ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರ್ಪಡೆ ಕುರಿತು ವಿರಾಜಪೇಟೆಯ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅವರು ಮಾತನಾಡಿದರು. ಕೊಡವ ಭಾಷೆಯನ್ನು ಭಾರತ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡಬೇಕೆಂದು ಹಲವು ದಶಕಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದೆ. ಈಗಾಗಲೇ 2 ಸಲ ವರದಿ ಸಲ್ಲಿಸಲಾಗಿದೆ. ಹಾಗಾಗಿ ಕೊಡವ ಭಾಷೆ ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆ ಪ್ರಕ್ರಿಯೆಯನ್ನು ಶಿಸ್ತುಬದ್ಧವಾಗಿ ನಿಯಮಾನುಸಾರದಂತೆ ನಡೆಸಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ಎ.ಎಸ್.ಪೊನ್ನಣ್ಣ ಅವರು ಮನವಿ ಮಾಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಜೊತೆಗೆ ಕೊಡವ…

Read More