ಲೇಖಕ: admin

ಮಡಿಕೇರಿ ಏ.30 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ 2025 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದವರು ಮಾತ್ರ ವರದಿ ಸಲ್ಲಿಸಬಹುದಾಗಿದ್ದು ಮೇ 10 ರೊಳಗೆ ತಮ್ಮ ವರದಿಯನ್ನು ಪತ್ರಿಕಾಭವನಕ್ಕೆ ತಲುಪಿಸಬೇಕಾಗಿದೆ. ನಂತರ ಬಂದ ವರದಿಗಳನ್ನು ಸ್ವೀಕರಿಸಲಾಗುವುದಿಲ್ಲ. ವರದಿಗಳು 2025 ರ ಜನವರಿಯಿಂದ 2025 ಡಿಸೆಂಬರ್ 31 ರೊಳಗೆ ಪ್ರಕಟವಾಗಿರಬೇಕು. ಪ್ರಶಸ್ತಿಗೆ ವರದಿ ಸಲ್ಲಿಸುವವರು ಮೂರು ಪ್ರತಿಗಳನ್ನು ತಪ್ಪದೇ ನೀಡಬೇಕು. ದೃಶ್ಯಮಾಧ್ಯಮದವರು ತಮ್ಮ ಚಾನಲ್ ಗಳಲ್ಲಿ ಪ್ರಸಾರವಾದ ವರದಿಯ ಸಿಡಿ ಯನ್ನು ಸಲ್ಲಿಸಬೇಕು. ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ,  ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿ, ಸಂಘದ ಉಪಾಧ್ಯಕ್ಷರಾಗಿದ್ದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವೀಡಿಯೋಗ್ರಫಿ ಪ್ರಶಸ್ತಿ, ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೊನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿ, ಕೋವರ್ ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ…

Read More

ಸೋಮವಾರಪೇಟೆ ಏ.30 NEWS DESK : ಮಣ್ಣು ಪರೀಕ್ಷೆ ಮಾಡದೇ ಕಾಫಿ ತೋಟಗಳಿಗೆ ರಸಾಯನಿಕ ಅಥವಾ ಸಾವಯವ ಗೊಬ್ಬರಗಳನ್ನು ಅಜಾಗರೂಕವಾಗಿ ಬಳಸುವುದರಿಂದ ಬೆಳೆಗಾರರು ಅನಾವಶ್ಯಕ ಖರ್ಚು ಮಾಡಿಕೊಳ್ಳುತ್ತಿದ್ದಾರೆ ಎಂದು ಕಾಫಿ ಮಂಡಳಿಯ ಉಪ ನಿರ್ದೇಶಕರಾದ ಡಾ.ಚಂದ್ರಶೇಖರ್ ಎಚ್ಚರಿಸಿದರು. ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘ, ಕಾಫಿ ಬೆಳೆಗಾರರ ಸಂಘ ಹಾಗೂ ಭಾರತೀಯ ಕಾಫಿ ಮಂಡಳಿ ಮತ್ತು ಸಂಶೋಧನಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಒಕ್ಕಲಿಗರ ಸಮುದಾಯಭವನದಲ್ಲಿ ಏರ್ಪಡಿಸಿದ್ದ ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಪ್ರತಿ ತೋಟದ ಮಣ್ಣಿನ ಗುಣಲಕ್ಷಣಗಳು ವಿಭಿನ್ನವಾಗಿರುತ್ತವೆ. ಅದರ ಪ್ರಕಾರವೇ ಗೊಬ್ಬರದ ಪ್ರಮಾಣ ಮತ್ತು ಪ್ರಕಾರವನ್ನು ಆಯ್ಕೆ ಮಾಡಬೇಕು. ಇಲ್ಲವಾದರೆ ಉತ್ಪಾದನೆ ಕುಸಿಯುವುದರ ಜೊತೆಗೆ ಹಣವೂ ವ್ಯರ್ಥವಾಗುತ್ತದೆ ಎಂದರು. ಮಣ್ಣಿನ ಪೋಷಕಾಂಶಗಳ ಸಮತೋಲನ ಕಾಪಾಡಿಕೊಳ್ಳುವುದು ಉತ್ತಮ ಇಳುವರಿಗೆ ಪ್ರಮುಖ ಅಂಶ ಎಂದು ಅವರು ತಿಳಿಸಿದರು. ಕಾರ್ಯಾಗಾರದಲ್ಲಿ ವಿಜ್ಞಾನಿ ನಾಡಾಫ್ ಮಣ್ಣಿನ ರಚನೆ, ಅದರ ಆರೋಗ್ಯ ಮತ್ತು ಪೋಷಕಾಂಶಗಳ ಬಗ್ಗೆ ಮಾಹಿತಿ ನೀಡಿದರು. ಡಾ. ನಾಗರಾಜ್ ಗಿಡ ಸಂರಕ್ಷಣಾ…

Read More

ಸೋಮವಾರಪೇಟೆ ಏ.30 NEWS DESK : ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಸೋಮವಾರಪೇಟೆಯ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಮೇ 7 ರಿಂದ 10ರವರೆಗೆ ಆಯೋಜಿಸಿರುವ ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟದ, ಆತಿಥೇಯ ಯಿಫಾ ತಂಡದ ಜರ್ಸಿಗಳನ್ನು ಶಾಸಕ ಡಾ. ಮಂತರ್ ಗೌಡ ಅವರು ಶಾಸಕರ ಕಚೇರಿ ಆವರಣದಲ್ಲಿ ಅನಾವರಣ ಮಾಡಿದರು.  ನಂತರ ಮಾತನಾಡಿದ ಶಾಸಕರು, ಯುವ ಜನಾಂಗಕ್ಕೆ ಹಾಕಿ ಕ್ರೀಡೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜಿಸಿರುವುದು ಶ್ಲಾಘನೀಯ. ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯಿಫಾ ಸಂಘಟನೆ ಇದೇ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಆಟಗಾರರನ್ನು ಒಳಗೊಂಡಂತೆ ಹಾಕಿ ಪಂದ್ಯಾವಳಿ ಆಯೋಜಿಸಿದ್ದು, ಪಂದ್ಯಾವಳಿಯ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು. ಹಾಕಿ ಕ್ರೀಡೆಗಳು ನಿರಂತರವಾಗಿ ನಡೆಯಬೇಕು. ಎಲ್ಲಾ ಜಾತಿ, ಜನಾಂಗ, ಪಕ್ಷದವರನ್ನು ಒಂದುಗೂಡಿಸಲು ಕ್ರೀಡೆಯಿಂದ  ಮಾತ್ರ ಸಾಧ್ಯ ಎಂದು ಅಭಿಪ್ರಾಯಿಸಿದ ಅವರು, ಪ್ರಸ್ತುತ ಸಮಾಜದಲ್ಲಿ ಹಲವಷ್ಟು ಯುವಕರು ದಾರಿ ತಪ್ಪುತ್ತಿದ್ದಾರೆ. ದುಶ್ವಟಗಳಿಗೆ ಒಳಗಾಗಿ ಜೀವನವನ್ನು ನರಕಸದೃಶ ಮಾಡಿಕೊಳ್ಳುತ್ತಿದ್ದಾರೆ.…

Read More

ಮಡಿಕೇರಿ ಏ.29 NEWS DESK : ಫಲಾನುಭವಿಗಳ ಹಿತರಕ್ಷಣೆ ಅಧಿಕಾರಿಗಳ ಆದ್ಯ ಕರ್ತವ್ಯ ಆಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕರ್ತವ್ಯ ನಿರ್ವಹಿಸುವ ಮೂಲಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ಸಮರ್ಪಕವಾಗಿ ತಲುಪಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಹೇಳಿದ್ದಾರೆ. ನಗರದ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ಬುಧವಾರ ನಡೆದ ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 38,270 ಪಡಿತರ ಚೀಟಿ ಇದ್ದು, 1,20,974 ಒಟ್ಟು ಫಲಾನುಭವಿಗಳಿದ್ದಾರೆ. ಅದರಲ್ಲಿ 1902 ಎಎವೈ ಪಡಿತರ ಚೀಟಿ ಇದ್ದು, 7569 ಎಎವೈ ಫಲಾನುಭವಿಗಳು ಇದ್ದಾರೆ. 21,697 ಪಿಹೆಚ್‍ಹೆಚ್ ಪಡಿತರ ಚೀಟಿ ಇದ್ದು, 70,196 ಫಲಾನುಭವಿಗಳು, 14,671 ಎನ್‍ಪಿಹೆಚ್‍ಹೆಚ್ ಪಡಿತರ ಚೀಟಿ ಇದ್ದು, 43,206 ಫಲಾನುಭವಿಗಳಿದ್ದಾರೆ ಎಂದು ಆಹಾರ ನಿರೀಕ್ಷಕರಾದ ವಿ.ಪಿ.ವೀಣಾ ಅವರು ಸಭೆಗೆ ಮಾಹಿತಿ ನೀಡಿದರು. ಅಲ್ಲದೇ ಮಡಿಕೇರಿ ತಾಲ್ಲೂಕಿನಲ್ಲಿರುವ…

Read More

ಮಡಿಕೇರಿ ಏ.29 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಇದರ ವತಿಯಿಂದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗೋಧೂಳಿ ಲಗ್ನದಲ್ಲಿ ನೆರವೇರಿತು. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ 106 ಜೋಡಿಗಳು ಸತಿಪತಿಗಳಾಗಿ ಹೊಸ ಜೀವನಕ್ಕೆ ಕಾಲಿರಿಸಿದರು. ಈ ವೇಳೆ ಹೇಮಾವತಿ ವಿ ಹೆಗ್ಗಡೆ, ಹರ್ಷೇಂದ್ರ ಕುಮಾರ್, ಶ್ರದ್ದಾ ಅಮಿತ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

Read More

ಮೈಸೂರು ಏ.29 NEWS DESK : ತಂಬಾಕು ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು, ಹರಾಜು ಕಾರ್ಯ ವಿಧಾನದಲ್ಲಿ ಸುಧಾರಣೆ ತರಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ ಎಂದು *ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಕೇಂದ್ರ ವಾಣಿಜ್ಯ ಸಚಿವರಾದ ನವದೆಹಲಿಯಲ್ಲಿ ಪಿಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ನಂತರ ಯದುವೀರ್‌ ಒಡೆಯರ್‌ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಪ್ರಸಕ್ತ ಋತುವಿನಲ ಸಮಗ್ರ ಅವಲೋಕನ, ರೈತರು ಎದುರಿಸುತ್ತಿರುವ ಸವಾಲುಗಳಿಗೆ ದೀರ್ಘಾವಧಿಯ ರಚನಾತ್ಮಕ ಪರಿಹಾರ ಒದಗಿಸಲು ತುರ್ತು ಕ್ರಮ, ಏಕಸ್ವಾಮ್ಯ ನಿಯಂತ್ರಣ ತಪ್ಪಿಸುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ. *ಹೊಸ ಯೋಜನೆಗಳಿಗೆ ಚಿಂತನೆ ಅಗತ್ಯ* ಹರಾಜು ಪ್ರಕ್ರಿಯೆಯಲ್ಲಿ ವಿದೇಶಿ ಖರೀದಿದಾರರ ವ್ಯಾಪಕ ಭಾಗವಹಿಸುವಿಕೆಯನ್ನು ಅನುಮತಿಸುವ ಪ್ರಾಮುಖ್ಯತೆ ಬಗ್ಗೆ ಗಮನ ಸೆಳೆಯಲಾಯಿತು. ಹೊಸ ಯೋಜನೆಗಳಿಗೆ ಚಿಂತನೆ ಅಗತ್ಯವಿದೆ. ರೈತರಿಗೆ ಪಾರದರ್ಶಕತೆ, ನ್ಯಾಯಯುತ…

Read More

ಮಡಿಕೇರಿ ಏ 29 NEWS DESK : ಜಿಲ್ಲಾ ಪೊಲೀಸ್ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಮ್.ಕಾರ್ಯಪ್ಪ ಕಾಲೇಜ್ ಹಾಗೂ ಎನ್ ಎಸ್ ಎಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ “ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ವೃತ್ತ ನಿರೀಕ್ಷಕರಾದ ಪಿ.ಕೆ.ರಾಜು, ಮದ್ಯ/ಮಾದಕ ವಸ್ತುಗಳ ಬಳಕೆ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳು ತುರ್ತು ಸಂದರ್ಭಗಳಲ್ಲಿ ಬಳಸಿಕೊಳ್ಳಬಹುದಾದ ವಿವಿಧ ಸಹಾಯವಾಣಿ ಸಂಖ್ಯೆಗಳನ್ನು ಹಾಗೂ KSP ಆಪ್ ಸಂಬಂಧಿತ ಮಾಹಿತಿಯನ್ನು ನೀಡಿದರು.  ಅದೇ ಸಂದರ್ಭದಲ್ಲಿ “ಸಮ್ಮಿತ್ರಾ ಆಪ್” ಕುರಿತು ಮಾಹಿತಿ ನೀಡಿ, ಮಾದಕ ವಸ್ತುಗಳನ್ನು ದುರುಪಯೋಗಪಡಿಸುವವರ ಬಗ್ಗೆ ವಿವರಗಳನ್ನು ನೀಡುವ ಮೂಲಕ ಸಮಾಜದಲ್ಲಿ ಈ ಸಮಸ್ಯೆಯನ್ನು ನಿರ್ಮೂಲಗೊಳಿಸಲು ವಿದ್ಯಾರ್ಥಿಗಳು ಸಹಕರಿಸಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ ಬಿ. ನಮ್ಮ ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆಯಾಗಿಸಲು ಎಲ್ಲರೂ ಒಟ್ಟಾಗಿ ಕೆಲಸ…

Read More

ಮಡಿಕೇರಿ NEWS DESK ಏ.29 : 2025-26 ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಇತ್ತೀಚೆಗಷ್ಟೇ ಹೊರ ಬಿದ್ದಿದ್ದು ಕೊಡಗು ಜಿಲ್ಲೆಯು ಉತ್ತಮ ಫಲಿತಾಂಶವನ್ನು ಕಾಯ್ದುಕೊಂಡಿದೆ. ವಿಶೇಷವಾಗಿ ಇತ್ತೀಚಿನ ವರ್ಷಗಳಲ್ಲಿ ಸರಕಾರಿ ಶಾಲೆಗಳು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸುತ್ತಿದೆ. ಇಂತಹ ಸಾಧನೆಯ ಹಾದಿಯಲ್ಲಿರುವ ಶಾಲೆ ಎಂದರೆ ಸರಕಾರಿ ಪ್ರೌಢಶಾಲೆ ಮೂರ್ನಾಡು. ಕಳೆದ ಆರು ವರ್ಷಗಳಿಂದ ಶೇಕಡ ನೂರರಷ್ಟು ಫಲಿತಾಂಶ ದಾಖಲಿಸಿದ ಗಮನಾರ್ಹ ಸಾಧನೆ ಈ ಶಾಲೆಯದಾಗಿದೆ. ಮೂರ್ನಾಡುವಿನ ಸ್ಥಳೀಯರ, ವಿದ್ಯಾಭಿಮಾನಿಗಳ, ಹಿತೈಷಿಗಳ ನಿರಂತರ ಬೇಡಿಕೆಯ ಫಲವಾಗಿ 2007ರಲ್ಲಿ ಕೇವಲ ಒಂಬತ್ತು ವಿದ್ಯಾರ್ಥಿಗಳೊಂದಿಗೆ ಹಳೆಯ ಕಟ್ಟಡ ಒಂದರಲ್ಲಿ ಪ್ರಾರಂಭವಾದ ಈ ಶಾಲೆ ಇಂದು ಅತ್ಯುತ್ತಮವಾದ ಕಟ್ಟಡ, ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಸೈನ್ಸ್ ಲ್ಯಾಬ್, ಗ್ರಂಥಾಲಯ, ಸ್ಮಾರ್ಟ್ ಕ್ಲಾಸ್, ಪ್ರೊಜೆಕ್ಟರ್, ವಿಶಾಲ ಆಟದ ಮೈದಾನ ಹಾಗೂ ಉತ್ತಮ ಬೋಧಕ ವೃಂದದವರನ್ನು ಹೊಂದಿದೆ. ನೋಡುವವರಿಗೆ ಇದು ಒಂದು ಖಾಸಗಿ ಶಾಲೆ ಎಂಬ ಭಾವನೆಯನ್ನು ಮೂಡಿಸುತ್ತದೆ. ಸರ್ಕಾರಿ ಶಾಲೆಯ ಸಮಸ್ಯೆಗಳು ಖಾಸಗಿ ಶಾಲೆಗಳಿಗಿಂತ ವಿಭಿನ್ನವಾಗಿರುತ್ತದೆ. ಅದು…

Read More

ಮಡಿಕೇರಿ ಏ.29 NEWS DESK : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಜಾಬೀರ್ (21), ಒರಿಸ್ಸಾ ರಾಜ್ಯದ ಕಂದನಮಾಲ್ ಜಿಲ್ಲೆಯ ಕಳಿಂಗ ಗ್ರಾಮದ ಸುಲ್ತಾನ್ ಪ್ರಧಾನ್ (55) ಹಾಗೂ ಇದೇ ರಾಜ್ಯದ ಮದಿನಂಜು ಗ್ರಾಮದ ಸ್ವರ್ಣಲತಾ ನಾಯಕ್ (35) ಬಂಧಿತ ಆರೋಪಿಗಳಾಗಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನವಳವಾಡಿ ಗ್ರಾಮದ ಸಿಂಕೋನದಿಂದ ಮಕ್ಕಂದೂರು ಕಡಗೆ ಹೋಗುವ ರಸ್ತೆಯಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳ ಬಳಿಯಿಂದ 15.903 ಕೆ.ಜಿ ಗಾಂಜಾ ಮತ್ತು 3 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಜಿಲ್ಲಾ ಡಿಎಸ್‍ಬಿ ಪಿಐ ಮೇದಪ್ಪ ಐ.ಪಿ,, ಗ್ರಾಮಾಂತರ ಠಾಣಾ ಪಿಐ ಚಂದ್ರಶೇಖರ್ ಹೆಚ್.ವಿ, ಎಎಸ್‍ಐ ಚರ್ಮಣ ಸಿ.ಯು, ಸಿಬ್ಬಂದಿಗಳಾದ ಮಹೇಶ್ ಎಂ.ಕೆ, ಉದಯ್ ಕುಮಾರ್ ಜಿ.ಆರ್, ನಿರಂಜನ ಎಂ.ಎನ್, ಪ್ರವೀಣ್ ಬಿ.ಕೆ, ರಾಜೇಶ್ ಸಿ.ಕೆ, ಶರತ್ ರೈ ಬಿ.ಜೆ, ರುದ್ರಪ್ಪ ಜಿ…

Read More