ಲೇಖಕ: admin

ಮಡಿಕೇರಿ ಡಿ.9 NEWS DESK : ಮೂರ್ನಾಡು ಮಹಿಳಾ ಮಂಡಳಿಯ ವಾರ್ಷಿಕ ಮಹಾಸಭೆ ಡಿ.11ರಂದು ಮಂಡಳಿಯ ಅಧ್ಯಕ್ಷರಾದ ಮೀನಾಕ್ಷಿ ಕೇಶವ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಸಮಾಜದ ಕಟ್ಟಡದಲ್ಲಿ ನಡೆಯಲಿದೆ ಎಂದು ಮಹಿಳಾ ಮಂಡಳಿ ಪ್ರಕಟಣೆ ತಿಳಿಸಿದೆ.

Read More

ಸಿದ್ದಾಪುರ ಡಿ.9 NEWS DESK : ಮುಂಬೈಯಲ್ಲಿ ನಡೆದ ಏಷಿಯನ್ ಪ್ಯಾರಾ ಪಂಜ ಕುಸ್ತಿ ಕ್ರೀಡಾಕೂಟದಲ್ಲಿ ಏಷ್ಯಕ್ಕೆ ಮೂರನೇ ಸ್ಥಾನ ಪಡೆದ ಅರೆಕಾಡು ಗ್ರಾಮದ ವಿಶೇಷಚೇತನರಾದ  ಕೆ.ಎಂ.ಹಸ್ಸನ್ ಅವರನ್ನು ನೆಲ್ಯಹುದಿಕೇರಿ ಪೈಸಾರಿ ಪ್ರೀಮಿಯರ್ ಲೀಗ್ ಕ್ರೀಡಾಕೂಟದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

Read More

ಮಡಿಕೇರಿ ಡಿ.9 NEWS DESK : ಕುಶಾಲನಗರದಲ್ಲಿ ಡಿ.12 ಮತ್ತು 13 ರಂದು ನಡೆಯುವ ಹನುಮ ಜಯಂತಿ ಹಾಗೂ ದಶಮಂಟಪಗಳ ಶೋಭಾಯಾತ್ರೆಗೆ ಮಾಜಿ ಸಚಿವ, ಹಾಲಿ ವಿಧಾನ ಪರಿಷತ್ ಸದಸ್ಯ ಹಾಗೂ ಹಿಂದೂ ವಾಗ್ಮಿ ಸಿ.ಟಿ ರವಿ ಅವರನ್ನು ಕುಶಾಲನಗರ ಹನುಮ ಜಯಂತಿ ಸಮಿತಿ ಸದಸ್ಯರು ಚಿಕ್ಕಮಗಳೂರು ನಿವಾಸಕ್ಕೆ ಭೇಟಿ ನೀಡಿ ಆಹ್ವಾನಿಸಿದರು.

Read More

ಪೊನ್ನಂಪೇಟೆ, ಡಿ.9 NEWS DESK : ದ. ಕೊಡಗಿನ ವಿ. ಬಾಡಗದ ಹೈ ಪ್ಲೈಯರ್ಸ್ ಸಂಸ್ಥೆಯ ವತಿಯಿಂದ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಬಿಟ್ಟಂಗಾಲ, ಬಿ. ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆಗಳನ್ನು ಹೊಂದಿರುವ ಕೊಡವ ಮನೆತನಗಳ ನಡುವಿನ 3ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಫ್ಲೈಯರ್ಸ್ ಕಪ್-2024ರ 3ನೇ ದಿನದ ಪಂದ್ಯಾವಳಿಯಲ್ಲಿ ಕಾದಾಡಿದ ತಂಡಗಳ ಪೈಕಿ 4 ಬಲಿಷ್ಠ ಕುಟುಂಬ ತಂಡಗಳು ಸೆಮಿ ಫೈನಲ್ಸ್ ಪ್ರವೇಶಿಸಿದೆ. ಪಂದ್ಯಾವಳಿಯ ಸೆಮಿ ಫೈನಲ್ಸ್ ಇಂದು (ಡಿ.9) ನಡೆಯಲಿದೆ. 3ನೇ ದಿನದ ಪಂದ್ಯದಲ್ಲಿ ,ಚಂದೂರ, ಚೇಂದಂಡ, ಮುರುವಂಡ ಮತ್ತು ತೀತಮಾಡ ತಂಡಗಳು ವಿಜಯ ಸಾಧಿಸಿ ಪಂದ್ಯಾವಳಿಯ ಸೆಮಿ ಫೈನಲ್ಸ್ ಗೆ ಅರ್ಹತೆ ಪಡೆದುಕೊಂಡಿತು. ಈ ನಾಲ್ಕು ತಂಡಗಳು ಇಂದು ನಡೆಯಲಿರುವ ಸೆಮಿ ಫೈನಲ್ಸ್ ಪಂದ್ಯಾವಳಿಯಲ್ಲಿ ಎದುರಾಳಿಗಳನ್ನು ಮಣಿಸಿ ಚಾಂಪಿಯನ್ ಆಗುವ ಹೆಗ್ಗುರಿಯೊಂದಿಗೆ ಫೈನಲ್ ಪ್ರವೇಶಿಸಲು ತೀವ್ರ ಹೋರಾಟ ನಡೆಸಲಿದೆ. ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ…

Read More

ಮಡಿಕೇರಿ ಡಿ.9 NEWS DESK : ದಕ್ಷಿಣ ಕನ್ನಡ ಹಾಗೂ ಕೊಡಗು ಗೌಡ ಸಮಾಜ ಬೆಂಗಳೂರು ವತಿಯಿಂದ ಸ್ನೇಹಮಿಲನ ಷಷ್ಟ್ಯಾಬ್ಧಿ ಸಂಭ್ರಮ, ಪ್ರತಿಭಾ ಪುರಸ್ಕಾರ, ಸಮಾಜದ ಮಾಜಿ ಅಧ್ಯಕ್ಷರು, ಮಹಿಳಾ ಹಾಗೂ ಯುವ ಘಟಕದ ಮಾಜಿ ಅಧ್ಯಕ್ಷರು ಗಳಿಗೆ, ಕಾರ್ಯದರ್ಶಿಗಳಿಗೆ ಸನ್ಮಾನ ಕಾರ್ಯಕ್ರಮ ಬೆಂಗಳೂರಿನ ಲಗ್ಗೆರೆ ನಮ್ಮನೆ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ಅದ್ದೂರಿಯಾಗಿ ನಡೆಯಿತು. ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮವರು ಸಂಘಟಿತರಾಗಬೇಕು, ಅರೆಭಾಷೆ ಮಾತಾಡುತ್ತಾ ಭಾಷೆಯನ್ನು ಬೆಳೆಸಬೇಕು. ಭಾಷೆ ಬೆಳೆದರೆ ಸಂಸ್ಕೃತಿ ಬೆಳೆದಂತೆ, ಭಾಷೆ ನಶಿಸಿದರೆ ಸಂಸ್ಕೃತಿ ನಶಿಸಿದಂತೆ. ಭಾಷಾ ಸಂಸ್ಕೃತಿ, ಆಚಾರ ವಿಚಾರಗಳಲ್ಲಿ ಎಲ್ಲರೂ ಸಮಾಜದೊಂದಿಗೆ ಕೈಜೋಡಿಸಿ ಉತ್ತಮ ಕಾರ್ಯಗಳನ್ನು ನಡೆಸಲು ಕಾರ್ಯ ಪ್ರವರ್ತ ರಾಗಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ರಾಜ್ಯ ಕನ್ನಡ ಪ್ರಾಧಿಕಾರದ ಅಧ್ಯಕ್ಷ ಡಾಟ ಪುರುಷೋತ್ತಮ ಬಿಳಿಮಲೆ ಮಾತನಾಡಿ, ನಮ್ಮ ಮಾತೃ ಭಾಷೆಯನ್ನು ಸಮಾಜದಲ್ಲಿ ಬೆಳೆಸಬೇಕು, ಅರೆ ಭಾಷೆ ಅರ್ಧ…

Read More

ಮಡಿಕೇರಿ ಡಿ.7 NEWS DESK : ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿನ ಯುದ್ಧ ಸ್ಮಾರಕದ ಆವರಣದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು  ಅರ್ಥಪೂರ್ಣವಾಗಿ ಆಚರಿಸಲಾಯಿತು. ಗ್ರೂಪ್ ಕ್ಯಾಪ್ಟನ್(ನಿವೃತ್ತ) ಬಿ.ಎನ್.ಮನು ಭೀಮಯ್ಯ, ಜಿಲ್ಲಾಧಿಕಾರಿ ಮತ್ತು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಐಪಿಎಸ್ ಪ್ರೊಬೆಷನರಿ ಅಧಿಕಾರಿ ಬೆನಕ ಪ್ರಸಾದ್, ಏರ್ ಮಾರ್ಷಲ್(ನಿ) ನಂದ ಕಾರ್ಯಪ್ಪ, ಏರ್ ಕಮಾಂಡರ್(ನಿ) ದೇವಯ್ಯ, ಕರ್ನಲ್(ನಿ) ಕಾವೇರಪ್ಪ, ಲೆ.ಕರ್ನಲ್(ನಿವೃತ್ತ) ನಾಚಪ್ಪ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಬಿ.ಆರ್.ಶೆಟ್ಟಿ ಹಾಗೂ ನಿವೃತ್ತ ಸೈನಿಕರು, ಎನ್‍ಸಿಸಿ ವಿದ್ಯಾರ್ಥಿಗಳು ಇತರರು ಯುದ್ಧ ಸ್ಮಾರಕಕ್ಕೆ ಪುಷ್ಪ ಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿದರು. ಕರ್ತವ್ಯ ಪಾಲನೆಯಲ್ಲಿ ವೀರ ಮರಣವನ್ನಪ್ಪಿದ ಯೋಧರ ಸ್ಮರಣಾರ್ಥ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು. ಪೊಲೀಸ್ ಇಲಾಖೆಯಿಂದ ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆ ಸಲ್ಲಿಸಿ, ಮೌನಾಚರಿಸಲಾಯಿತು. ಗ್ರೂಪ್ ಕ್ಯಾಪ್ಟನ್ ಬಿ.ಎನ್.ಮನು…

Read More

ಮಡಿಕೇರಿ ಡಿ.7 NEWS DESK : ಪೊನ್ನಂಪೇಟೆ ತಾಲ್ಲೂಕಿನ ನೆಮ್ಮಲೆ ಗ್ರಾಮದ ಕಿತ್ತ್ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ, ಮಹಾಮಂಗಳಾರತಿ ನಡೆಯಿತು. ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಮಡಿಕೇರಿ ಡಿ.7 NEWS DESK : ಹದಿನೆಂಟು ವರ್ಷದೊಳಗಿನ ಮಕ್ಕಳಲ್ಲಿ ಬೌದ್ಧಿಕ, ಮಾನಸಿಕ, ದೈಹಿಕ ಹಾಗೂ ಭಾಷಾ ಬೆಳವಣಿಗೆಗೆ ಹೆಚ್ಚಿನ ಅವಕಾಶವಿದ್ದು, ಈ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರ್ಕಾರಿ ಶುಶ್ರೂಷಕರ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಗರದ ಹೊರವಲಯದಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಬಾಲನ್ಯಾಯ ಕಾಯ್ದೆ (ಮಕ್ಕಳ ಪೋಷಣೆ ಮತ್ತು ರಕ್ಷಣೆ), ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ ಹಾಗೂ ದತ್ತು ಅಧಿನಿಯಮ ಕುರಿತು ‘ನರ್ಸಿಂಗ್ ವಿದ್ಯಾರ್ಥಿಗಳಿಗೆ ಅರಿವು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿರು. ವಯಸ್ಕ…

Read More

ಮಡಿಕೇರಿ ಡಿ.7 NEWS DESK :  ಕೊಡಗಿನ ಬಲ್ಯಮೀದೇರಿರ ಧೃತಿಗೆ ಕನ್ನಡ ವಿಕಾಸ ರತ್ನ ಪ್ರಶಸ್ತಿ ಲಭಿಸಿದೆ.  ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಮೈಸೂರಿನ ಕನ್ನಡ ಸಾಹಿತ್ಯ ಪರಿಷತ್ ಭವನದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆದ ಕನ್ನಡ ಹಬ್ಬ ಆಚರಣೆಯಲ್ಲಿ ಸಾಹಿತಿ ಟಿ. ಸತೀಶ್ ಜವರೇಗೌಡ ಹಾಗೂ ಮೈಸೂರಿನ ಕ.ರಾ.ಒ.ವಿ ವೇದಿಕೆ ರಾಜ್ಯಾಧ್ಯಕ್ಷ ಚ್.ಎಲ್.ಯಮುನಾ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಟಿ. ಶೆಟ್ಟಿಗೇರಿ ರೂಟ್ಸ್ ವಿದ್ಯಾಸಂಸ್ಥೆಯ 9ನೇ ತರಗತಿ ವಿಧ್ಯಾರ್ಥಿನಿಯಾದ ಧೃತಿ ಬಲ್ಯಮೀದೇರಿರ ಬಿ.ಎಂ. ಪೆಮ್ಮಯ್ಯ ಹಾಗೂ ಶಬಾನ ದೇಚಮ್ಮ ದಂಪತಿಯ ಪುತ್ರಿ.

Read More

ಕುಶಾಲನಗರ ಡಿ.7 NEWS DESK : ಹಾರಂಗಿ ಹಾಗೂ ಕಾವೇರಿ ನದಿಗಳ ಸಂಗಮ ಕ್ಷೇತ್ರ ಕೂಡಿಗೆಯಲ್ಲಿರುವ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ರಥೋತ್ಸವವು ಶ್ರದ್ದಾಭಕ್ತಿಯಿಂದ ನೆರವೇರಿತು. ಕೂಡಿಗೆ ಸುತ್ತಮುತ್ತಲ ಹತ್ತಾರು ಗ್ರಾಮಗಳ ಸಹಸ್ರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು. ಬೆಳಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ, ಹೋಮ ಹವನಗಳು ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ವಿಧಿಗಳು ಜರುಗಿದವು. ಬಳಿಕ  ಅಭಿಜಿನ್ ಲಗ್ನದಲ್ಲಿ ಸುಬ್ರಮಣ್ಯ ಸ್ವಾಮಿ ದೇವರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ರಥವು ದೇವಾಲಯದ ಕಿರಿದಾದ ರಸ್ತೆಯ ಮೂಲಕ ಸಾಗಿ ಬಂದು ರಾಜ್ಯ ಹೆದ್ದಾರಿ ಮಾರ್ಗವಾಗಿ  ಕೂಡುಮಂಗಳೂರು ಗ್ರಾಮದ ಸರ್ಕಲ್ ವರೆಗೂ ಸಾಗಿ ಬಳಿಕ ಸ್ವಸ್ಥಾನಕ್ಕೆ ಮರಳಿತು. ರಥೊತ್ಸವದ ಅಂಗವಾಗಿ ಕೂಡಿಗೆ ಹಾಗೂ ಕೂಡುಮಂಗಳೂರು ಹನುಮ ಸೇವಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಚಂಡೆವಾದ್ಯ ಆಕರ್ಷಿಸಿತು. ದೇವಾಲಯ ಸಮಿತಿಯ ವತಿಯಿಂದ  ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ‌ ದೇವಸ್ಥಾನದ ಪ್ರಧಾನ ಅರ್ಚಕ ನವೀನ್ ಭಟ್ ಹಾಗೂ ಅರಕಲಗೂಡಿನ ಶ್ರೀ ಹರಿ ನೇತೃತ್ವದ ತಂಡದಿಂದ ಧಾರ್ಮಿಕ…

Read More