ಲೇಖಕ: admin

ಮಡಿಕೇರಿ ಡಿ.7 NEWS DESK : ಆರೋಗ್ಯಯುತ ಸಮಾಜದೆಡೆಗೆ ಮುನ್ನಡೆಯಲು ನಮಗುಳಿದಿರುವ ಏಕೈಕ ಹಾದಿಯಾಗಿರುವ ಸಂವಿಧಾನದ ಪರವಾದ ಧ್ವನಿ ಮೊಳಗಿದಾಗ ಮಾತ್ರ ಸಮಾನತೆ ಮತ್ತು ಭಾತೃತ್ವವನ್ನು ಉಳಿಸಲು ಸಾಧ್ಯವೆಂದು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ‘ಸಂವಿಧಾನ ಓದು ಅಧ್ಯಯನ ಶಿಬಿರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ಲಿಷ್ಟಕರ ಸನ್ನಿವೇಶಗಳಲ್ಲಿ ಸರಿಯಾದ ನಿರ್ಧಾರಗಳನ್ನು ತಳೆಯಲು ಸಂವಿಧಾನದ ಅರಿವು ನಮಗೆ ಬೇಕಾಗಿದೆ. ಬದುಕಿನಲ್ಲಿ ಕಾನೂನಿನ ಪರಿಜ್ಞಾನದೊಂದಿಗೆ ಮೌಲ್ಯಗಳು ಅತ್ಯವಶ್ಯವೆಂದು ಹೇಳಿದರು. ::: ಜಿಲ್ಲೆಗೆ 100 ಮಂದಿ ::: ಶಾಂತಿಯುತವಾದ, ಭಾತೃತ್ವದ ಸಮಾನತೆಯ ಸಮ ಸಮಾಜದ ನಿಮಾಣಕ್ಕೆ ‘ಸಂವಿಧಾನ’ ಒಂದೇ ಹಾದಿಯಾಗಿದ್ದು, ಈ ನಿಟ್ಟಿನಲ್ಲಿ ಸಂವಿಧಾನದ ಪರವಾದ ಧ್ವನಿಗಳನ್ನು ಹುಟ್ಟು ಹಾಕಲು ಸಂವಿಧಾನದ ಓದು ಶಿಬಿರಗಳನ್ನು ರಾಜ್ಯವ್ಯಾಪಿ ಆಯೋಜಿಸಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಸಂವಿಧಾನದ ಮೂಲ ಆಶಯಗಳನ್ನು ಆಳವಾಗಿ ಅರಿತ ನೂರು ಮಂದಿಯನ್ನು ಸಜ್ಜುಗೊಳಿಸುವುದು ಕಾರ್ಯಕ್ರಮದ ಮೂಲ ಉದ್ದೇಶವೆಂದರು. ಸಂವಿಧಾನವನ್ನು ಅರಿತು ಬದುಕನ್ನು ಹಸನಾಗಿಸಿಕೊಳ್ಳುವುದರೊಂದಿಗೆ ಸವಾಲುಗಳನ್ನು ಮೆಟ್ಟಿ ನಿಲ್ಲೋಣವೆಂದು ಕರೆ ನೀಡಿದ ನಾಗಮೋಹನ್…

Read More

ಸೋಮವಾರಪೇಟೆ ಡಿ.7 NEWS DESK : ಸೋಮವಾರಪೇಟೆಯ ವಿವಿದ ದೇವಾಲಯಗಳಲ್ಲಿ ವಿವಿಧ ದೇವಾಲಯಗಳಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ನಡೆಯಿತು. ಕರ್ಕಳ್ಳಿಯ ಕಟ್ಟೆ ಬಸವೇಶ್ವರ ದೇವಾಲಯ ಹಾಗೂ ದೇವಾಲಯದ ಸಮೀಪವಿರುವ ನಾಗಬನದಲ್ಲಿ ಅರ್ಚಕರಾದ ವಿರುಪಾಕ್ಷ ಪುರೋಹಿತ್ವದಲ್ಲಿ ಅರ್ಚನೆ, ವಿಶೇಷ ಪೂಜೆ, ಮಹಾಮಂಗಳಾರತಿ ನೆರವೇರಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗದೇವರಿಗೆ ಹಾಲು, ಎಳನೀರು, ಅರಿಶಿನ ಅಭಿಷೇಕ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದ ಸೋಮೇಶ್ವರ ದೇವಾಲಯ, ಅಯ್ಯಪ್ಪಸ್ವಾಮಿ ದೇವಾಲಯ, ಮಸಗೂಡು ಗ್ರಾಮದ ದೇವಾಲಯಗಳಲ್ಲಿ ಷಷ್ಟಿಯ ವಿಶೇಷ ಪೂಜೆ ನೆರವೇರಿತು.

Read More

ಕುಶಾಲನಗರ, ಡಿ.7 NEWS DESK :  ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಕೊಡಗು ಜಿಲ್ಲಾ ಘಟಕ ಹಾಗೂ ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಕುಶಾಲನಗರ ಸಂಗಮ ಟಿ.ವಿ. ಹಾಗೂ ವಂಶಿ ನ್ಯೂಸ್ ಸಹಯೋಗದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಕುಶಾಲನಗರ ತಾಲ್ಲೂಕು ತಾಹಶೀಲ್ದಾರ್ ಕಿರಣ್ ಜಿ ಗೌರಯ್ಯ  ಕಾರ್ಯಕ್ರಮ ಉದ್ಘಾಟಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷರು ಸಂಗಮ ಟಿವಿ ಮತ್ತು ವಂಶಿನ್ಯೂಸ್ ಪ್ರಧಾನ ಸಂಪಾದಕ ಹೆಚ್.ಎಂ.ರಘುಕೋಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕ ಸದಾಶೀವ ಪಲ್ಲೇದ್, ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್ ಕಾನೂನು ಸಲಹೆಗಾರ ಆರ್.ಕೆ. ನಾಗೇಂದ್ರ ಬಾಬು, ಉದ್ಯಮಿ ಬಿ.ಎಸ್. ಸದಾಶಿವಶೆಟ್ಟಿ, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನಾಗೇಶ, ಜಿಲ್ಲಾ ಪದವಿಪೂರ್ವ ಉಪನ್ಯಸಂಘದ ಅಧ್ಯಕ್ಷ…

Read More

ಮಡಿಕೇರಿ ಡಿ.6 NEWS DESK : ನಗರದ ಕೋಟೆ ಮಾರಿಯಮ್ಮ ದೇವಾಲಯದ ನಾಗಬನದಲ್ಲಿ ಸುಬ್ರಹ್ಮಣ್ಯ ಷಷ್ಟಿ ಪ್ರಯುಕ್ತ ವಿಶೇಷ ಪೂಜೆ ಪೂಜೆ ನಡೆಯಿತು. ನಾಗದೇವರಿಗೆ ಎಳನೀರು ಅಭಿಷೇಕ, ಹಾಲಿನ ಅಭಿಷೇಕ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಮಡಿಕೇರಿ ಡಿ.7 NEWS DESK : ದಕ್ಷಿಣ ಕೊಡಗು ವ್ಯಾಪ್ತಿಯಲ್ಲಿ ಆದಿವಾಸಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಇದನ್ನು ನಿಯಂತ್ರಿಸದಿದ್ದಲ್ಲಿ ಕರ್ನಾಟಕ ಆದಿವಾಸಿಗಳ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಸಮಿತಿಯ ಜಿಲ್ಲಾಧ್ಯಕ್ಷ ವೈ.ಕೆ.ಗಣೇಶ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೌರ್ಜನ್ಯ ಪ್ರಕರಣಗಳ ಕುರಿತು ಆಯಾ ಪೊಲೀಸ್ ಠಾಣೆಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆಡಳಿತ ವ್ಯವಸ್ಥೆ ಹಣವಂತರ ಪರವಾಗಿದೆ, ಸಮಾಜದಲ್ಲಿ ಸಮಾನತೆ ಇಲ್ಲದಾಗಿದೆ. ಸಂವಿಧಾನದ ಆಶಯಗಳು ಈಡೇರುತ್ತಿಲ್ಲವೆಂದು ಟೀಕಿಸಿದರು. ಪೊಲೀಸ್ ಠಾಣೆಗಳಲ್ಲಿ ಕ್ರಮ ಕೈಗೊಳ್ಳದೆ ಇದ್ದಾಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದೇವೆ. ಆದರೆ ಯಾವುದೇ ಸ್ಪಂದನೆ ಸಿಗುತ್ತಿಲ್ಲ ಮತ್ತು ತಪ್ಪಿತಸ್ಥರಿಗೆ ಶಿಕ್ಷಯಾಗುತ್ತಿಲ್ಲ. ಜಾತಿ ನಿಂದನೆ ಮಾಡಿದವರು ಕಾನೂನು ಕ್ರಮಕ್ಕೆ ಒಳಗಾಗದೆ ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಆದಿವಾಸಿಗಳು ನಿತ್ಯ ದೌರ್ಜನ್ಯಕ್ಕೆ ಒಳಗಾಗುತ್ತಿದ್ದು, ಭಯದ ವಾತಾವರಣದಲ್ಲಿ ಜೀವನ ಸಾಗಿಸುತ್ತಿದ್ದಾರೆ. ದೌರ್ಜನ್ಯ ನಡೆಸಿದವರು ಬೆದರಿಕೆವೊಡ್ಡುತ್ತಿರುವುದರಿಂದ ಅನ್ಯಾಯಕ್ಕೊಳಗಾದವರು ದೂರು…

Read More

ಮಡಿಕೇರಿ ಡಿ.7 NEWS DESK : ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪರಿನಿರ್ವಾಣದ ಅಂಗವಾಗಿ ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಶಾಖೆ ವತಿಯಿಂದ ಶನಿವಾರಸಂತೆಯ ಮಾದ್ರೆ ಗ್ರಾಮದ ಸಾರ್ವಜನಿಕ ಸ್ಮಶಾನದಲ್ಲಿ ಮೌಢ್ಯ ಮುಕ್ತ ಸಮಾಜಕ್ಕಾಗಿ ಪರಿವರ್ತನಾ ದಿನಾಚರಣೆಯನ್ನು ಆಚರಿಸಲಾಯಿತು. ಸ್ಮಶಾನದಲ್ಲೇ ಅಡುಗೆ ಮಾಡಿ ಊಟ ಮಾಡುವ ಮೂಲಕ ಮೂಢ ನಂಬಿಕೆಯಿಂದ ಎಲ್ಲರೂ ಹೊರ ಬರಬೇಕೆಂದು ಕರೆ ನೀಡಲಾಯಿತು. ಮಾದ್ರೆ ಗ್ರಾಮದ ಸ್ಮಶಾನ ಜಾಗದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್, ಮಾನವ ಬಂಧುತ್ವ ವೇದಿಕೆಯು ಕರ್ನಾಟಕದಲ್ಲಿ ವೈಚಾರಿಕ ಕ್ರಾಂತಿಯನ್ನು ಎಲ್ಲರಲ್ಲಿ ಮೂಡಿಸುತ್ತಿದೆ ಎಂದರು. ಅಜ್ಞಾನದಿಂದ ವಿಜ್ಞಾನದ ಕಡೆಗೆ ಹಾಗೂ ಮೂಢನಂಬಿಕೆ, ಕಂದಾಚಾರಗಳನ್ನು ಹೋಗಲಾಡಿಸುವ ಸಲುವಾಗಿ ರಾಜ್ಯಾದ್ಯಂತ ಕಾರ್ಯಕ್ರಮ ನಡೆಯುತ್ತಿದೆ. ಜನಪ್ರತಿನಿಧಿ ಸತೀಶ್ ಜಾರಕಿಹೊಳಿ ಅವರು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ ವೈಚಾರಿಕ ಕ್ರಾಂತಿಯನ್ನೇ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೊಡಗು ಮಾನವ ಬಂಧುತ್ವ ವೇದಿಕೆಯಿಂದಲೂ ಮಾದ್ರೆ ಗ್ರಾಮದ ಸ್ಮಶಾನ ಜಾಗದಲ್ಲಿ ಅಡುಗೆ ಮಾಡಿ ಊಟ ಮಾಡುವ ಮೂಲಕ…

Read More

ಮಡಿಕೇರಿ ಡಿ.7 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಷಷ್ಠಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಎರಡು ದಿನಗಳ ಕಾಲ ಮುಂಜಾನೆಯಿಂದ ಗಣಪತಿ ಹೋಮ, ಕಳಸ ಪೂಜೆ, ಮಹಾ ಸುದರ್ಶನ ಹೋಮ, ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷವಾಗಿ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಸೇವೆಗಳು ಹಾಗೂ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನಡೆಯಿತು. ಮಧ್ಯಾಹ್ನ ಶ್ರೀ ಸುಬ್ರಮಣ್ಯ ದೇವರ ಕ್ಷೇತ್ರ ಪ್ರದಕ್ಷಿಣೆ, ಮಹಾಮಂಗಳಾರತಿ ನಂತರ ನೆರೆದಿದ್ದವರಿಗೆ ಅನ್ನಸಂತರ್ಪಣೆ ನಡೆಯಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 8 ಗಂಟೆಗೆ ಮಹಾಪೂಜೆಯ ನಂತರ ಪ್ರಸಾದ ವಿತರಣೆಯಾಗಲಿದೆ.

Read More

ಮಡಿಕೇರಿ ಡಿ.7 NEWS DESK : ಕೇಂದ್ರ ಸರಕಾರದಿಂದ ಕೊಡಮಾಡುವ ಪ್ರತಿಷ್ಠಿತ ದೀನ್ ದಯಾಳ್ ಪಂಚಾಯತ್ ವಿಕಾಸ್ ಪುರಸ್ಕಾರಕ್ಕೆ ರಾಜ್ಯದಿಂದ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ಆಯ್ಕೆಯಾಗುವ ಮೂಲಕ ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದ ರಾಜ್ಯದ ಏಕೈಕ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಡತನ ನಿರ್ಮೂಲನೆ, ಜಿವನೋಪಾಯ ಅಭಿವೃದ್ಧಿ ಅಂಶದಡಿ ಈ ಪುರಸ್ಕಾರವನ್ನು ಗಾಳಿಬೀಡು ಗ್ರಾ.ಪಂ ಪಡೆದುಕೊಂಡಿದ್ದು, ಡಿ.11 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪಂಚಾಯತ್ ರಾಜ್ ಸಚಿವಾಲಯ ಅಧಿಕೃತವಾಗಿ ತಿಳಿಸಿದೆ. ಗಾಳಿಬೀಡು ಗ್ರಾ.ಪಂ ಗ್ರಾಮಸ್ಥರ ಜೀವನಮಟ್ಟ ಸುಧಾರಣೆಗೆ ಅನೇಕ ಕಾರ್ಯಕ್ರಮ ಕೈಗೊಂಡಿದೆ. ಮೂಲಭೂತ ಸೌಕರ್ಯವನ್ನು ಸಮರ್ಪಕವಾಗಿ ಒದಗಿಸಿ ಜೀವನೋಪಾಯ ಅಭಿವೃದ್ಧಿಗೊಳಿಸಿದೆ. ಶಾಲೆಯಲ್ಲಿ ಉದ್ಯಾನ, ಶೌಚಾಲಯ ವ್ಯವಸ್ಥೆ, ಸರೋವರ ನಿರ್ಮಾಣದ ಮೂಲಕ ಪ್ರವಾಸೋದ್ಯಮದ ಅಭಿವೃದ್ದಿ, ಜನರಿಗೆ ಅಗತ್ಯ ದಾಖಲೆ, ಫಲಾನುಭವಿಗಳಿಗೆ ಪಿಂಚಣಿ ವ್ಯವಸ್ಥೆ, ಅಂಗನವಾಡಿ ಮಕ್ಕಳಿಗೆ ಪೌಷ್ಠಿಕಾಂಶ ಆಹಾರ ವಿತರಣೆ, ಸ್ವಸಹಾಯ ಸಂಘಕ್ಕೆ ಆರ್ಥಿಕ ನೆರವು…

Read More

ಮಡಿಕೇರಿ ಡಿ.7 NEWS DESK : ನಗರದ  ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ  “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ನಾಗಬನದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಸುಂಟಿಕೊಪ್ಪ ಡಿ.7 : ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಶ್ರೀ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Read More