ಮಡಿಕೇರಿ ನ.23 NEWS DESK : ಜಿಲ್ಲೆಯ ಪ್ರಾಥಮಿಕ ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸುವಂತೆ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಹಕಾರ ಸಂಘಗಳು ಕೃಷಿಕರ ಬೆನ್ನುಲುಬಾಗಿದ್ದು, ಸಹಕಾರ ಸಂಘಗಳನ್ನು ಪ್ರತಿಯೊಬ್ಬರೂ ಬಲಪಡಿಸಲು ಮುಂದಾಗಬೇಕು. ಸಹಕಾರ ಸಂಘಗಳು ಉಳಿದಲ್ಲಿ ಕೃಷಿಕರಿಗೆ ಸಹಕಾರಿಯಾಗಲಿದೆ ಎಂದು ಕೆ.ಎನ್.ರಾಜಣ್ಣ ಹೇಳಿದರು. ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಅವಕಾಶವಿದ್ದು, ಅಗತ್ಯ ಇದ್ದಲ್ಲಿ ಈ ಸಂಬಂಧ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಾಪಿಸಲು ಸೂಕ್ತ ಕ್ರಿಯಾಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸಬಹುದಾಗಿದೆ ಎಂದು ಸಹಕಾರ ಸಚಿವರಾದ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ 74 ಸೇವಾ ಸಹಕಾರ ಸಂಘಗಳಿದ್ದು, ಅದರಲ್ಲಿ 4 ಪ್ರಾಥಮಿಕ ಸೇವಾ ಸಹಕಾರ ಸಂಘಗಳು ನಷ್ಟದಲ್ಲಿರುವ ಬಗ್ಗೆ ಮಾಹಿತಿ ಇದೆ. ಆದ್ದರಿಂದ ಅಂತಹ ಪ್ರಾಥಮಿಕ ಸೇವಾ ಸಹಕಾರ ಸಂಘಗಳನ್ನು ಲಾಭದಲ್ಲಿ ನಡೆಸುವಂತಾಗಲು…
ಲೇಖಕ: admin
ಮಡಿಕೇರಿ ನ.23 NEWS DESK : ರಾಷ್ಟ್ರದಲ್ಲಿ ಶುದ್ಧ ಗಾಳಿ ಮತ್ತು ಪರಿಸರ ಹೊಂದಿರುವ ಪ್ರಮುಖ ನಗರ/ ಪಟ್ಟಣಗಳಲ್ಲಿ ಒಂದಾದ ಮಡಿಕೇರಿಯ ಶುಚಿತ್ವಕ್ಕೆ ಪೌರಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಶ್ಲಾಘಿಸಿದ್ದಾರೆ. ನಗರಸಭೆ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾರ್ವಜನಿಕ ಜೀವನದಲ್ಲಿ ಪೌರಕಾರ್ಮಿಕರನ್ನು ಗೌರವಿಸಬೇಕು. ಪೌರಕಾರ್ಮಿಕರು ಇತರರಂತೆ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಡಾ.ಮಂತರ್ ಗೌಡ ತಿಳಿಸಿದರು. ಪೌರಕಾರ್ಮಿಕರು ಪಟ್ಟಣ, ನಗರ, ಮಹಾನಗರ ಪಾಲಿಕೆಗಳ ಬೆನ್ನುಲುಬು ಎಂದರೆ ತಪ್ಪಾಗಲಾರದು. ರಜೆ ಅವಧಿಯಲ್ಲಿ ರಜೆ ಪಡೆಯದೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡು ನಗರ, ಪಟ್ಟಣ ಅಭಿವೃದ್ಧಿಗೆ ಶ್ರಮಿಸುತ್ತಾರೆ ಎಂದು ಡಾ,ಮಂತರ್ ಗೌಡ ಅವರು ನುಡಿದರು. ಪೌರಕಾರ್ಮಿಕರು ವೃತ್ತಿಯ ಜೊತೆಗೆ ಆರೋಗ್ಯ ಹಾಗೂ ಮಕ್ಕಳ ಶಿಕ್ಷಣ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕರು ಸಲಹೆ ನೀಡಿದರು. ಪೌರಕಾರ್ಮಿಕರ ಒತ್ತಡ ಕಡಿಮೆ ಮಾಡುವಲ್ಲಿ ಮುಂದಿನ ನಗರಸಭೆ ಸಾಮಾನ್ಯ ಸಭೆಯಲ್ಲಿ ಸ್ವಚ್ಛತಾ ಯಂತ್ರಗಳನ್ನು ಖರೀದಿಸುವಂತಾಗಲು…
ಮಡಿಕೇರಿ NEWS DESK ನ.22 : ಭಾರತೀಯ ಸೇನೆಯಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವ ಶ್ರೀವತ್ಸ ಭಟ್ ಎಂಬ ಹೆಸರಿನ ಖಾತೆಯ ಕಿಡಿಗೇಡಿಯನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ನಾಪೋಕ್ಲು ಕೊಡವ ಸಮಾಜ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡವ ಸಮಾಜದ ಅಧ್ಯಕ್ಷ ಎಂ.ಸಿ.ನಾಣಯ್ಯ ಹಾಗೂ ಆಡಳಿತ ಮಂಡಳಿ ಇಡೀ ದೇಶವೇ ಗೌರವದಿಂದ ಕಾಣುವ ಅಪ್ರತಿಮ ವೀರರಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅವಮಾನಿಸಿರುವುದು ಖಂಡನೀಯ. ಭಾರತೀಯ ಸೇನೆಯನ್ನು ಕಟ್ಟಿ ಬೆಳೆಸಿದ ದೇಶಭಕ್ತ ವೀರ ಸೇನಾನಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ದೇಶದ್ರೋಹವಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಿಡಿಗೇಡಿಯ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ದೇಶಸೇವೆಯನ್ನು ಇಡೀ ದೇಶವೇ ಕೊಂಡಾಡುತ್ತಿದೆ. ಇವರ ಬಗ್ಗೆ ತಪ್ಪು ಅಭಿಪ್ರಾಯಗಳನ್ನು ಮೂಡಿಸಿರುವ ವ್ಯಕ್ತಿಗೆ ಕಠಿಣ…
ಮಡಿಕೇರಿ ನ.22 NEWS DESK : ಮಡಿಕೇರಿಯ ಇಂದಿರಾ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿ ಸಾರ್ವಜನಿಕರಿಗೆ ಸಮರ್ಪಿಸಿದರು. ನಗರಸಭೆಯ ಎಸ್ಎಫ್ಸಿ ಅನುದಾನದಲ್ಲಿ ಸುಮಾರು 220 ಮೀಟರ್ ಉದ್ದದ ರಸ್ತೆ ನಿರ್ಮಿಸಲಾಗಿದೆ. ರಸ್ತೆಗೆ ಚರಂಡಿ ನೀರನ್ನು ಬಿಡಬಾರದು. ವಾಹನವನ್ನು ವೇಗವಾಗಿ ಚಲಾಯಿಸಬಾರದು. ರಸ್ತೆ ಉಳಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಹೇಳಿದರು. ಸ್ಥಳೀಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ನಗರಸಭೆ ಸದಸ್ಯರಾದ ಶ್ವೇತಾ, ಸಬಿತಾ, ಮನ್ಸೂರ್, ಜಗದೀಶ್, ನಗರಸಭೆ ಮಾಜಿ ಅಧ್ಯಕ್ಷರಾದ ಜುಲೈಕಾಬಿ, ಎಚ್.ಎಂ.ನಂದಕುಮಾರ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಚಂದ್ರಶೇಖರ್, ಪೌರಾಯುಕ್ತರಾದ ಎಚ್.ಎನ್.ರಮೇಶ್, ನಗರಸಭೆ ಎಂಜಿನಿಯರ್ ಹೇಮಂತ್, ಸತೀಶ್, ಸೆಸ್ಕ್ ಎಇ ಸಂಪತ್ ಕುಮಾರ್ ಇತರರು ಇದ್ದರು.
ಮಡಿಕೇರಿ ನ.22 NEWS DESK : ಸಾಮಾಜಿಕ ಜಾಲತಾಣಗಳಲ್ಲಿ ದೇಶದ ವೀರಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅವಹೇಳನ ಮಾಡಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳು ಈ ದೇಶ ಕಂಡ ಅಪ್ರತಿಮ ಸೇನಾನಿಗಳಾಗಿದ್ದಾರೆ. ಇವರ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಶ್ರೀವತ್ಸ ಭಟ್ ಎಂಬ ಹೆಸರಿನ ಖಾತೆ ಮೂಲಕ ಕಿಡಿಗೇಡಿಯೊಬ್ಬ ವೀರ ಸೇನಾನಿಗಳನ್ನು ಅವಮಾನಿಸಿದ್ದು, ಈತನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಸೇನಾನಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಯನ್ನು ಪೋಸ್ಟ್ ಮಾಡಿರುವುದಲ್ಲದೆ ಕೊಡವರ ಬಗ್ಗೆಯೂ ಅಗೌರವದ ಮಾತುಗಳನ್ನಾಡಿದ್ದಾನೆ. ಭಾರತೀಯ ಸೇನೆಗೆ ಮತ್ತು ದೇಶಕ್ಕೆ ತಮ್ಮ ಶೂರತ್ವದ ಮೂಲಕವೇ ಅಪಾರ ಕೊಡುಗೆಯನ್ನು ನೀಡಿರುವ ವೀರರ ನಾಡು ಕೊಡಗಿನ ಕಣ್ಮಣಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅವಹೇಳನ ಮಾಡಿರುವ ದೇಶದ್ರೋಹಿಯನ್ನು ಪೊಲೀಸರು…
ಮಡಿಕೇರಿ ನ.22 NEWS DESK : ಅಪ್ರತಿಮ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ವಿರುಧ್ಧ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಕೊಡಗು ಬಿಜೆಪಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ದೂರು ನೀಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ನೇತೃತ್ವದಲ್ಲಿ ದೂರು ಸಲ್ಲಿಸಿದ ಬಿಜೆಪಿ ಪ್ರಮುಖರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕಿಡಿಗೇಡಿಯನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಮತ್ತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರರುಗಳಾದ ಬಿ.ಕೆ.ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್ ಮತ್ತಿತರ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಮಡಿಕೇರಿ ನ.22 NEWS DESK : ಹೊಸೂರು ನ್ಯಾಯಾಲಯದ ವಕೀಲರ ಹಲ್ಲೆಯನ್ನು ಖಂಡಿಸಿ ಮಡಿಕೇರಿ ವಕೀಲರ ಸಂಘದಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ನ್ಯಾಯಾಲಯ ಸಂಕೀಣ೯ದ ಮುಂದೆ ಪ್ರತಿಭಟನೆ ನಡೆಸಿದ ವಕೀಲರು ಇಂಥ ಪ್ರಕರಣಗಳು ಮರುಕಳಿಸದಂತೆ ವಕೀಲ ವೃಂದಕ್ಕೆ ಸೂಕ್ತ ಕಾನೂನು ರಕ್ಷಣೆ ನೀಡುವಂತೆ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ಎರಡು ದಿನಗಳ ಹಿಂದೆ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಹೊಸೂರು ನ್ಯಾಯಲಯದ ಆವರಣದಲ್ಲಿ ವಕೀಲ ಕಣ್ಣನ್ ಅವರ ಮೇಲೆ ಹಲ್ಲೆ ಮಾಡಲಾಗಿದೆ, ಇಂದಿನ ದಿನಗಳಲ್ಲಿ ನ್ಯಾಯಾಲಯದ ಅಧಿಕಾರಿಗಳಾಗಿರುವ ವಕೀಲರು ಭಯದ ವಾತವರಣದಲ್ಲಿ ಕೆಲಸ ನಿರ್ವಹಿಸುವಂತ್ತಾಗಿದೆ. ವಕೀಲರಿಗೆ ಸೂಕ್ತ ರಕ್ಷಣೆಯ ಕೊರತೆಯಿಂದಾಗಿ ಇಂತಹ ಘಟನೆಗಳು ಮರುಕಳುಹಿಸುತ್ತಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ವಕೀಲರುಗಳಿಗೆ ಸೂಕ್ತ ರಕ್ಷಣೆಯನ್ನು ನೀಡುವಂತಾಗಬೇಕು. ಕೃತ್ಯ ಎಸಗಿದ ಅಪರಾಧಿಗೆ ಶೀಘ್ರ ನ್ಯಾಯಾಂಗ ವಿಚಾರಣೆಯಾಗಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು. ಮಡಿಕೇರಿ ವಕೀಲರ ಸಂಘದ ಕಾಯ೯ದಶಿ೯ ಡಿ.ಎಂ.ಕೇಶವ, ಉಪಾಧ್ಯಕ್ಷ ಎಂ.ಪಿ.ನಾಗರಾಜ್, ಜಂಟಿ ಕಾಯ೯ದಶಿ೯ ಪವನ್ ಪೆಮ್ಮಯ್ಯ, ಖಜಾಂಜಿ…
ಮಡಿಕೇರಿ ನ.22 NEWS DESK : ಕೊಡಗು “ಜಿಲ್ಲಾ ಮಟ್ಟದ ಯುವಜನೋತ್ಸವ’ ಕಾರ್ಯಕ್ರಮವು ನ.30 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ, ಫೀಲ್ಡ್ ಮಾರ್ಷಲ್ ಕೆಂ.ಎಂ.ಕಾರ್ಯಪ್ಪ ಕಾಲೇಜು ಸಹಯೋಗದೊಂದಿಗೆ ನಗರದ ಫೀಲ್ಡ್ ಮಾರ್ಷಲ್ ಕೆಂ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು, ಆಸಕ್ತರು ನ.28ರ ಸಂಜೆ 5 ಗಂಟೆಯ ಒಳಗೆ ಹೆಸರು ನೊಂದಾಯಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ವಿಷಯಾಧಾರಿತ ಸ್ಪರ್ಧೆ: ವಿಜ್ಞಾನ ಮೇಳ ಗುಂಪು ಸ್ಪರ್ಧೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಧುನಿಕತೆ ವಿಷಯದ ಬಗ್ಗೆ ಪ್ರದರ್ಶನವಿರಬೇಕು. ಇದರಲ್ಲಿ ನಾವಿನ್ಯತೆಗೆ ಪ್ರಾತಿನಿಧ್ಯ ನೀಡಲಾಗುವುದು ಸಕ್ರಿಯ ಮಾದರಿ ತಯಾರಿಕೆಯ ಪ್ರದರ್ಶನವಿರಬೇಕು. (ವಿಶೇಷ ಸೂಚನೆ: ನಿಷ್ಕ್ರಿಯ ಮಾದರಿ ತಯಾರಿಕೆಗೆ ಅವಕಾಶವಿಲ್ಲ ಉದಾಹರಣೆ: ಡ್ಯಾಂ, ಸೋಲಾರ್ ಮಾದರಿ ಸಿಸ್ಟಮ್) ಸ್ಪರ್ಧೆಯ ವಿಜೇತರಿಗೆ ಪ್ರಥಮ ರೂ.…
ಮಡಿಕೇರಿ ನ.22 NEWS DESK : ಕೊಡವಲ್ಯಾಂಡ್ ಹಕ್ಕೊತ್ತಾಯದ ಪ್ರತಿಪಾದನೆಯ ನಿರಂತರತೆಗಾಗಿ ನ.26 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 34ನೇ ವರ್ಷದ “ಕೊಡವ ನ್ಯಾಷನಲ್ ಡೇ” ಮತ್ತು ಭಾರತದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಕೊಡವರು ಪಾಲ್ಗೊಳ್ಳುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಕೊಡವ ಸಮಾವೇಶ ಕೊಡವರ ರಾಜ್ಯಾಂಗದತ್ತ ಹಕ್ಕೊತ್ತಾಯದ ನಿರಂತರ, ಘಟನಾತ್ಮಕ ಅರಾಜಕೀಯ ಪ್ರಯಾಣವನ್ನು ಪುನರುಜ್ಜೀವನಗೊಳಿಸುತ್ತದೆ ಮತ್ತು ಪ್ರತಿಧ್ವನಿಸುತ್ತದೆ. ಭಾರತದ ಸಾರ್ವಭೌಮತ್ವ ಮತ್ತು ಪ್ರಭುತ್ವದಡಿಯಲ್ಲಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ಸಾಧಿಸಲು ಮತ್ತು ವಿಶ್ವರಾಷ್ಟ್ರ ಮಾನ್ಯತೆಯೊಂದಿಗೆ ಆದಿಮಸಂಜಾತ ಕೊಡವರಿಗೆ ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಪರಿಗಣನೆ ಮತ್ತು ಕೊಡವರ ಇತರೆ ಹತ್ತು ಶಾಸನ ಬದ್ಧ ಗುರಿಗಳು ಮತ್ತು ಅಶೋತ್ತರಗಳಿಗಾಗಿ ಸಂವಿಧಾನಿಕ ಹಕ್ಕೊತ್ತಾಯಗಳನ್ನು ಸಿಎನ್ಸಿ ಪ್ರತಿಪಾದಿಸುತ್ತ ಬಂದಿದೆ. ಕೊಡವ ಲೋಕದ…
ಮಡಿಕೇರಿ ನ.22 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆಯು ನ.24 ರಂದು ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ನಡೆಯಲಿರುವ ಸಭೆಗೆ ಸರ್ವ ಸದಸ್ಯರು ಹಾಜರಾಗುವಂತೆ ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿ ಕೋರಿದೆ.






