ಮಡಿಕೇರಿ ನ.21 NEWS DESK : ಕರ್ನಾಟಕ ಒಲಿಂಪಿಕ್ ಸಂಸ್ಥೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಬೆಂಗಳೂರಿನ ಕಂಠೀರವ ಒಳಂಗಾಣ ಕ್ರೀಡಾಂಗಣದಲ್ಲಿ ನಡೆದ ಮಿನಿ ಒಲಿಂಪಿಕ್ ಕ್ರೀಡಾಕೂಟದಲ್ಲಿ ಮಡಿಕೇರಿಯ ಮರ್ಕರ ಟೆಕ್ವಾಂಡೋ ಕ್ಲಬ್ನ ನಾಲ್ವರು ವಿದ್ಯಾರ್ಥಿಗಳು ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಓವರ್ 54 ಕೆ.ಜಿ ವಿಭಾಗದಲ್ಲಿ ಕೊಡಗು ವಿದ್ಯಾಲಯ ಶಾಲೆಯ ಹರ್ಷ್ ಕರುಂಬಯ್ಯ, ಅಂಡರ್ 30 ಕೆ.ಜಿ.ವಿಭಾಗದಲ್ಲಿ ಸಂತ ಮೈಕಲರ ಶಾಲೆಯ ಆರೂಷ್ ಪರ್ವಿನ್, ಅಂಡರ್ 26 ಕೆ.ಜಿ ವಿಭಾಗದಲ್ಲಿ ಸಂತ ಜೋಸೆಫರ ಶಾಲೆಯ ಅನಿಯ ಪರ್ವಿನ್ ಹಾಗೂ ಅಂಡರ್ 24 ಕೆ.ಜಿ ವಿಭಾಗದಲ್ಲಿ ವಿರಾಂಜನ್ ಕೊಡಗನ್ನು ಪ್ರತಿನಿಧಿಸಿ ಕಂಚಿನ ಪದಕ ಗೆದ್ದಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಎಲ್ಲಾ ಕ್ರೀಡಾ ಸೌಲಭ್ಯಗಳು ದೊರೆತ್ತಿದೆ ಎಂದು ಟೆಕ್ವಾಂಡೋ ಕ್ಲಬ್ ನ ಮಾಸ್ಟರ್ ಕುಶಾಲ್ ಕುಮಾರ್ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ನ.21 NEWS DESK : ಭಾಗಮಂಡಲ ನಾಡು ಗೌಡ ಒಕ್ಕೂಟದ ವತಿಯಿಂದ ಗೌಡ ಜನಾಂಗದ ಕುಟುಂಬಗಳ ನಡುವಣ ಪ್ರಥಮ ವರ್ಷದ ಹಗ್ಗಜಗ್ಗಾಟ ಸ್ಪರ್ಧೆ ‘ಹುತ್ತರಿ ಕಪ್-2024’ ನ್ನು ಡಿ.13 ರಂದು ಆಯೋಜಿಸಲಾಗಿದೆಯೆಂದು ಒಕ್ಕೂಟದ ಅಧ್ಯಕ್ಷರಾದ ಕಿಶೋರ್ ಕುದುಕುಳಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಭಾಗಮಂಡಲ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿತ ಹಗ್ಗಜಗ್ಗಾಟ ಸ್ಪರ್ಧೆ ಪುರುಷರು ಮತ್ತು ಮಹಿಳೆಯರ ವಿಭಾಗಗಳಲ್ಲಿ ನಡೆಯಲಿದೆ. ಪುರುಷರ ತಂಡದ ಒಟ್ಟು ತೂಕ 640 ಕೆ.ಜಿ. ಮೀರಬಾರದು ಮತ್ತು ಗರಿಷ್ಠ 10 ಆಟಗಾರರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಹಿಳೆಯರ ವಿಭಾಗದಲ್ಲಿ ತಂಡದ ಒಟ್ಟು ತೂಕ 540 ಕೆ.ಜಿ.ಮತ್ತು ಗರಿಷ್ಠ 10 ಆಟಗಾರರನ್ನು ಮೀರಬಾರದೆಂದು ಆಟದ ನಿಯಮಗಳನ್ನು ವಿವರಿಸಿದರು. ಪುರುಷರ ವಿಭಾಗದ ಹಗ್ಗಜಗ್ಗಾಟ ಸ್ಪರ್ಧೆಯ ವಿಜೇತರಿಗೆ 20 ಸಾವಿರ ರೂ., ಟ್ರೋಫಿ ಮತ್ತು ಪದಕಗಳನ್ನು ನೀಡಲಾಗುತ್ತದೆ. ದ್ವಿತೀಯ 20 ಸಾವಿರ ರೂ., ಟ್ರೋಫಿ ಮತ್ತು ಪದಕ. ಮಹಿಳೆಯರ ವಿಭಾಗದಲ್ಲಿ…
ಸುಂಟಿಕೊಪ್ಪ ನ.21 NEWS DESK : ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪ ಸ್ವಾಮಿ ದೇವಾಲಯ ಸಮಿತಿಯ ವಾರ್ಷಿಕ ಮಹಾಸಭೆಯು ನ.23 ರಂದು ನಡೆಯಲಿದೆ. ಅಂದು ಸಂಜೆ 7 ಗಂಟೆಗೆ ಸಮಿತಿಯ ಅಧ್ಯಕ್ಷರಾದ ಬಿ.ಎಂ.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಕ್ಷೇತ್ರದ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸುವಂತೆ ದೇವಾಲಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಡಿಕೇರಿ ನ.21 NEWS DESK : ಮಡಿಕೇರಿಯಲ್ಲಿರುವ ರಾಜರ ಗದ್ದುಗೆಗೆ ಸೇರಿದ 19.86 ಎಕರೆ ಜಾಗದ ಪೈಕಿ ಒತ್ತುವರಿಯಾಗಿರುವ 1.18 ಎಕರೆ ಜಾಗವನ್ನು ತೆರವುಗೊಳಿಸುವಂತೆ ಸರ್ಕಾರದ ಹೊರಡಿಸಿರುವ ಆದೇಶದನ್ವಯ ಜಿಲ್ಲಾಡಳಿತ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ಒತ್ತುವರಿ ತೆರವುಗೊಳಿಸುವಂತೆ ನ್ಯಾಯಾಲಯ ಆದೇಶ ಮಾಡಿ ಎರಡು ವರ್ಷವೇ ಕಳೆದಿದೆ. ಆದರೆ ಇಲ್ಲಿಯವರೆಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಸ್ವತ: ಸರ್ಕಾರವೇ ಆದೇಶ ಹೊರಡಿಸಿ 28 ಮಂದಿಯಿಂದ ಒತ್ತುವರಿಯಾಗಿರುವ 1.18 ಎಕರೆ ಜಾಗವನ್ನು ತೆರವುಗೊಳಿಸಿ ರಾಜರ ಗದ್ದುಗೆಯ ಜಾಗವನ್ನು ಸಂರಕ್ಷಿಸುವಂತೆ 2024 ನ.4ರಂದು ಜಿಲ್ಲಾಡಳಿತಕ್ಕೆ ಆದೇಶ ನೀಡಿದೆ. ಈ ಆದೇಶದಂತೆ ಜಿಲ್ಲಾಡಳಿತ ತೆರವು ಕಾರ್ಯಾಚರಣೆ ನಡೆಸದಿದ್ದರೆ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸಲು ವೀರಶೈವ ಮಹಾಸಭಾ ಚಿಂತನೆ ನಡೆಸಲಿದೆ ಎಂದರು. ಸರ್ಕಾರದ ಆದೇಶದಲ್ಲಿ 1.18 ಎಕರೆ ಪ್ರದೇಶದ ಒತ್ತುವರಿಯನ್ನು ಮಾತ್ರ ಉಲ್ಲೇಖಿಸಲಾಗಿದೆ. ಆದರೆ…
ನಾಪೋಕ್ಲು ನ.21 NEWS DESK : ಮಡಿಕೇರಿ ತಾಲ್ಲೂಕು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ “ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ” ಎಂಬ ವಿಷಯದ ಕುರಿತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ನಡೆಯಿತು. ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಹಕಾರ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಸಹಕಾರ ಸಂಘಗಳ ಪಾತ್ರ ಹಾಗೂ ಉದ್ದೇಶಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಉತ್ತಮವಾಗಿ ವಿಷಯ ಮಂಡನೆ ಮಾಡಿದರು. ಸ್ಪರ್ಧಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಬಹುಮಾನ ಹಾಗೂ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಅಶೋಕ ಪೆರುಮುಂಡ, ನಿರ್ದೇಶಕರುಗಳಾದ ಪ್ರಮೀಳಾ ಬಂಗಾರಕೋಡಿ, ಪುಷ್ಪಾವತಿ ಯಾಪಾರೆ, ಎನ್.ವಿ.ಶೇಷಪ್ಪ, ಪಿ.ಟಿ.ಜಯರಾಮ, ಗ್ರಾ.ಪಂ ಸದಸ್ಯರಾದ ಉದಯಚಂದ್ರ ಕುಂಬಳಚೇರಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ…
ದೆಹಲಿ ನ.21 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ನಬಾರ್ಡ್ ನೆರವು ಕಡಿತಗೊಳಿಸದಂತೆ ಮನವಿ ಮಾಡಿದರು. ಕಳೆದ ಸಾಲಿನಲ್ಲಿ ನಬಾರ್ಡ್ ನೆರವು 5400 ಕೋಟಿ ರೂ ಗಳಷ್ಟಿದ್ದು, ಈ ಬಾರಿ 2400 ಕೋಟಿ ರೂಗಳಿಗೆ ಕಡಿತಗೊಳಿಸಲಾಗಿದೆ. ಈ ಕುರಿತು ನಿರ್ಮಲಾ ಸೀತಾರಾಮನ್ ಅವರ ಗಮನ ಸೆಳೆದು ಈ ವ್ಯತ್ಯಾಸವನ್ನು ಸರಿಪಡಿಸಲು ಕೋರಿದರು. ಈ ನಿಯೋಗದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಸಚಿವರಾದ ಬೈರತಿ ಸುರೇಶ್, ಚೆಲುವರಾಯಸ್ವಾಮಿ, ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು ಹಾಗೂ ಶಾಸಕರು ಉಪಸ್ಥಿತರಿದ್ದರು.
ನಾಪೋಕ್ಲು ನ.21 NEWS DESK : ಪ್ರತಿಭಾ ಸಂಗಮ ಸ್ಪರ್ಧೆಯಲ್ಲಿ ಮರ್ಕಝುಲ್ ಹಿದಾಯ ಕೊಟ್ಟಮುಡಿ ಮದರಸವು ಪಾಲ್ಗೊಂಡು ಫಸ್ಟ್ ರನ್ನರ್ ಅಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ. ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ ನಾಪೋಕ್ಲು ವಲಯದ ವತಿಯಿಂದ ಕುಂಜಿಲ ಗ್ರಾಮದ ರೌಳತುಲ್ ಉಲೂಂ ಮದರಸದಲ್ಲಿ ನಡೆದ ಪ್ರತಿಭಾ ಸಂಗಮ ಕಾರ್ಯಕ್ರಮದಲ್ಲಿ ಒಟ್ಟು ಹತ್ತು ಮದರಸಗಳ 40 ಸ್ಪರ್ಧೆಗಳಲ್ಲಿ 250ಕ್ಕೂ ಅಧಿಕ ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ನ.21 NEWS DESK : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆದ ಜಿಲ್ಲಾಮಟ್ಟದ ಸಾಂಸ್ಕೃತಿಕ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದೇವಂಗೋಡಿ ಭವಿತ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳ ಸಾಧನೆಗೆ ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ಕಾಲೇಜಿನ ಪ್ರಾಂಶುಪಾಲ ದಾಯನ ರಾಮಕೃಷ್ಣ ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ನ.21 NEWS DESK : ಪತ್ರಕರ್ತ ಹಾಗೂ ಮಾಧ್ಯಮ ಕ್ಷೇತ್ರಕ್ಕೆ ಕಾಲಿಡುವ ತುಡಿತ ಉಳ್ಳವರು ಸಾಮಾಜಿಕ ಬದ್ಧತೆ, ಕಳಕಳಿಯನ್ನು ಹೊಂದಿರುವುದು ಅತ್ಯಗತ್ಯ ಎಂದು ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರ ಪ್ರತಿಪಾದಿಸಿದರು. ನಗರದ ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಎಫ್.ಎಂ.ಕೆ.ಎಂ.ಸಿ. ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಮಾಧ್ಯಮ ಮಾಹಿತಿ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಕಲೆ, ಕೌಶಲ್ಯ, ವಿಶೇಷ ಆಸಕ್ತ್ತಿ ಇದ್ದರೆ ಮಾತ್ರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ನೆಲೆಯೂರಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಾಗಲೇ ಕ್ಷೇತ್ರದ ಕುರಿತು ಅಭಿರುಚಿ ಬೆಳೆಸಿಕೊಳ್ಳಬೇಕು. ನಿತ್ಯ ಪತ್ರಿಕೆ ಓದಬೇಕು. ಸುದ್ದಿ ವಾಹಿನಿಗಳನ್ನು ಗಮನಿಸಬೇಕು. ಜಾಗತಿಕ ವಿದ್ಯಮಾನಗಳ ಬಗ್ಗೆ ಅರಿತುಕೊಳ್ಳಬೇಕು. ಈ ರೀತಿಯ ಕಾರ್ಯಾಗಾರ ಹಾಗೂ ಪ್ರಾಯೋಗಿಕ ಕಲಿಕೆ ವಿದ್ಯಾರ್ಥಿಗಳ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಿಸಿದರು. …
ಗಯಾನಾ ನ.21 NEWS DESK : ಗಯಾನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಯಾನಾ ಅಧ್ಯಕ್ಷರು ಮತ್ತು ಕುಟುಂಬಸ್ಥರೊಂದಿಗೆ ʼತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವʼ (ಏಕ್ ಪೇಡ್ ಮಾ ಕೆ ನಾಮ್) ಅಭಿಯಾನದಲ್ಲಿ ಪಾಲ್ಗೊಂಡರು.






