ವಿರಾಜಪೇಟೆ ನ.21 NEWS DESK : ಕನ್ನಡ ಕಾರ್ಯಕ್ರಮಗಳು ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೆ ಪ್ರತಿದಿನ ಕನ್ನಡ ಪರವಾದ ಕಾರ್ಯಕ್ರಮಗಳು ಜರುಗಬೇಕು. ಕನ್ನಡವನ್ನು ಅಭಿವೃದ್ದಿಪಡಿಸುವಂತಾಗಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ ಸಂಗಪ್ಪ ಅಲೂರ ಅಭಿಪ್ರಾಯ ವ್ಯಕ್ತಪಡಿಸಿದರು. ಸೈಂಟ್ ಆನ್ಸ್ ಪದವಿ ಕಾಲೇಜು ಕನ್ನಡ ಭಾಷಾ ವಿಭಾಗ ಸಾಹಿತ್ಯ ಸಂಘ ಕನ್ನಡ ವಿದ್ಯಾರ್ಥಿ ಬಳಗ ಮತ್ತು ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜು ಸಭಾಂಗಣದಲ್ಲಿ ನಡೆದ ನುಡಿನೃತ್ಯ ಸಂಭ್ರಮ -24 ಮತ್ತು ಪುರಾತನ ವಸ್ತುಗಳ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಸಾವಿರಾರು ವರ್ಷಗಳ ಇತಿಹಾಸ ಇರುವ ಕನ್ನಡ ಭಾಷೆಯು ಧೀಮಂತ ಭಾಷೆಯಾಗಿದೆ. ಕನ್ನಡ ಭಾಷೆಗೆ ಹಲವಾರು ಖ್ಯಾತನಾಮ ಕವಿಗಳು ತಮ್ಮದೇಯಾದ ಶೈಲಿಯಲ್ಲಿ ಭಾಷೆಯನ್ನು ಧೀಮಂತಗೊಳಿಸಿದ್ದಾರೆ. ಅದೇ ರೀತಿ ಕನ್ನಡ ಸಾಹಿತ್ಯಕ್ಕೆ ವಿಶ್ವ ಮನ್ನಣೆಯನ್ನು ಗಳಿಸಿಕೊಟ್ಟಿದ್ದಾರೆ. ಪ್ರಸ್ತುತವಾಗಿ ರಾಜ್ಯದ ಬೃಹತ್ ನಗರಗಳಲ್ಲಿ ಕನ್ನಡ ಭಾಷೆಯನ್ನಾಡಲು ಹಿಂಜರಿಕೆ ವ್ಯಕ್ತವಾಗುತ್ತಿದೆ. ಕಾರಣ…
ಲೇಖಕ: admin
ಮಡಿಕೇರಿ ನ.21 NEWS DESK : ಪ್ರಸಕ್ತ (2024-25) ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ನ.29 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.
ಮಡಿಕೇರಿ ನ.21 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.5 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://bcwd.karnataka.gov.in/ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಪ್ರವರ್ಗ-2ಎ, 3ಎ, 3ಬಿ ರೂ. 8 ಲಕ್ಷ ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಹಾಗೂ ಷರತ್ತು ನಿಬಂಧನೆಗೆ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಿ ಕಚೇರಿ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ.
ಮಡಿಕೇರಿ ನ.21 NEWS DESK : ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯು ನೆರವಂಡ ಉಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಮಿತಿಗೆ ಒಟ್ಟು 17 ಕಡತಗಳನ್ನು ಮಂಡಿಸಿದ್ದು, ಈ ಪೈಕಿ 16 ಕಡತಗಳನ್ನು ಮಂಜೂರಾತಿಗೆ ಶಿಫಾರಸ್ಸು ಮಾಡಿ ಆಕ್ಷೇಪಣೆ ಅವಧಿಗೆ ಸಲ್ಲಿಸಲಾಯಿತು. ಸದಸ್ಯರಾದ ತುಳಸಿ ಗಾಂಧಿ ಪ್ರಸಾದ್, ಕೇಟೋಳಿ ಮೋಹನ್ ರಾಜ್, ಎಚ್.ಬಿ.ರಘು, ಸದಸ್ಯ ಕಾರ್ಯದರ್ಶಿಯಾದ ತಹಶೀಲ್ದಾರ್ ಪ್ರವೀಣ್ ಕುಮಾರ್ ಪಿ.ಸಿ., ಜಿಲ್ಲಾ ಭೂಮಿ ಸಮಾಲೋಚಕರು ಹಾಗೂ ಕಂದಾಯ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ನ.20 NEWS DESK : ನವೆಂಬರ್ 19 ರಿಂದ ಡಿಸೆಂಬರ್ 05 ರವರೆಗೆ ಜಿಲ್ಲೆಯಾದ್ಯಂತ ‘ನಮ್ಮ ಶೌಚಾಲಯ ನಮ್ಮ ಗೌರವ’ ವಿಶೇಷ ಆಂದೋಲನ ನಡೆಯಲಿದೆ ಎಂದು ಕೊಡಗು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಚ್ಛ ಭಾರತ್ ಮಿಷನ್(ಗ್ರಾ.) ಯೋಜನೆಯಡಿಯಲ್ಲಿ ಈ ಆಂದೋಲನ ಜಿಲ್ಲೆಯಾದ್ಯಂತ ನಡೆಯಲಿದೆ ಎಂದರು. ಪ್ರತಿ ನಾಗರಿಕರು ಸಹ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ದೈನಂದಿನ ಜೀವನದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜೊತೆಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು. ಗ್ರಾಮೀಣ ಜನರಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವದ ಬಗ್ಗೆ ಅರಿವು ಮೂಡಿಸಿ ಪ್ರತಿಯೊಬ್ಬರು ಶೌಚಾಲಯ ಬಳಸುವಂತೆ ಪ್ರೇರೇಪಿಸಲು ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಸಹಕಾರಿಯಾಗಲಿದೆ ಎಂದರು. ಜಿಲ್ಲೆಯಲ್ಲಿ ಶೌಚಾಲಯ ರಹಿತ ಕುಟುಂಬಗಳಿದ್ದರೆ ಅವರನ್ನು ಗುರುತಿಸಿ ಅರ್ಹ ಫಲಾನುಭವಿಗಳಿಗೆ ಶೌಚಾಲಯ…
ಮಡಿಕೇರಿ ನ.20 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಜಿಲ್ಲೆಯ ನಾಲ್ವರಿಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆಯಿಂದ ಕರ್ನಾಟಕ ಇನ್ಸ್ಸಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಹಾಗೂ ಸ್ಥಳೀಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಲಭವನದಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ನಂದಿನೆರವಂಡ ರವಿ ಬಸಪ್ಪ, ಕಾಯಪಂಡ ಟಾಟ ಚಂಗಪ್ಪ, ಪಾಸುರ ಎನ್.ಉತ್ತಪ್ಪ, ಹಾಗೂ ಶ್ರೇಷ್ಠ ಮಹಿಳಾ ಸಹಕಾರಿ ಮೊಳ್ಳೆರ ಸರಸು ಪೊನ್ನಪ್ಪ ಅವರಿಗೆ ‘ಶ್ರೇಷ್ಠ ಸಹಕಾರಿ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಅಧ್ಯಕ್ಷರಾದ ಎ.ಕೆ.ಮನುಮುತ್ತಪ್ಪ, ಹಿರಿಯ ಸಹಕಾರಿಗಳು ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಸಹಕಾರ ಸಂಘಗಳ ಉಪ ನಿಬಂಧಕರಾದ ಜಿ.ಆರ್.ವಿಜಯ್, ಕೆಐಸಿಎಂನ ನಿವೃತ್ತ ಪ್ರಾಂಶುಪಾಲರಾದ ಎಂ.ಎಂ.ಶ್ಯಾಮಲ ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಉಪಾಧ್ಯಕ್ಷರಾದ ಪಟ್ಟಡ ಮನು…
ಮಡಿಕೇರಿ ನ.20 NEWS DESK : ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಇರಬಾರದು ಎಂದು ಹೇಳುತ್ತಾರೆ. ಆದರೆ ಸಹಕಾರ ಕ್ಷೇತ್ರ ಸೇರಿದಂತೆ ಪ್ರತಿಯೊಂದು ರಂಗದಲ್ಲಿಯೂ ಸಹ ಜಾತಿ, ಸಮಾಜ, ರಾಜಕಾರಣ ಇದ್ದೇ ಇದೆ. ಇದರ ನಡುವೆಯೂ ಹಿಂದಿನವರು ಕಟ್ಟಿಕೊಂಡು ಬಂದಿರುವ ಸಹಕಾರ ಕ್ಷೇತ್ರವನ್ನು ಬಲಪಡಿಸುವುದು ಅತ್ಯವಶ್ಯಕ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಅಧ್ಯಕ್ಷರಾದ ಎ.ಕೆ.ಮನುಮುತ್ತಪ್ಪ ಪ್ರತಿಪಾದಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆಯಿಂದ ಕರ್ನಾಟಕ ಇನ್ಸ್ಸಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಹಾಗೂ ಸ್ಥಳೀಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಲಭವನದಲ್ಲಿ 71 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಪ್ರಾಯೋಜಿತ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಹಕಾರ ಕ್ಷೇತ್ರದಲ್ಲಿ ಯಾರೂ ಸಹ ಮೂಗು ತೂರಿಸಬಾರದು ಎಂದು ಹೇಳುತ್ತಾರೆ. ಆದರೆ ಎಲ್ಲಾ ರಂಗದಲ್ಲಿಯೂ ಒಂದಲ್ಲ ಒಂದು ರೀತಿಯ…
ಮಡಿಕೇರಿ ನ.20 NEWS DESK : ಪುಸ್ತಕಗಳ ಅಧ್ಯಯನದಿಂದ ಜ್ಞಾನ ವಿಸ್ತಾರ ಹೆಚ್ಚಾಗಲಿದೆ. ಆದ್ದರಿಂದ ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ. ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಪ್ರಯುಕ್ತ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತಿಹಾಸ ತಿಳಿಯಬೇಕಿದ್ದಲ್ಲಿ ಪುಸ್ತಕಗಳ ಅಧ್ಯಯನ ಅತ್ಯಗತ್ಯ. ರಾಜ್ಯ, ರಾಷ್ಟ್ರ, ಅಂತರ ರಾಷ್ಟ್ರೀಯ, ವಿಜ್ಞಾನ, ತಂತ್ರಜ್ಞಾನ, ಆಧುನಿಕತೆ ಹೀಗೆ ಪ್ರತಿಯೊಂದು ವಿಚಾರಗಳನ್ನು ತಿಳಿದುಕೊಳ್ಳುವಂತಾಗಲು ಪುಸ್ತಕಗಳ ಅಧ್ಯಯನ ಅತ್ಯಗತ್ಯ ಎಂದು ಹೇಳಿದರು. ಯುವ ಜನರಲ್ಲಿ ಓದಿನ ಬಗ್ಗೆ ಹಂಬಲ ಇರಬೇಕು. ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್ ಲೈಬ್ರರಿ ಸಹ ಇದ್ದು, ಇವುಗಳನ್ನು ಬಳಸಿಕೊಳ್ಳಬೇಕು. ಪುಸ್ತಕ ಅಧ್ಯಯನ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಆರ್.ಐಶ್ವರ್ಯ ಸಲಹೆ ನೀಡಿದರು. ಗಂಧದ ಮರದ ಮಹತ್ವ ಗೊತ್ತಿದ್ದಲ್ಲಿ ಯಾವುದಕ್ಕೆ ಬಳಸಬೇಕು ಎಂದು ತಿಳಿಯುತ್ತದೆ. ಇಲ್ಲದಿದ್ದರೆ ಕಟ್ಟಿಗೆಗೆ ಬಳಸಬೇಕಾಗುತ್ತದೆ.…
ಮಡಿಕೇರಿ ನ.20 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗ, ಮಡಿಕೇರಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ನವಜಾತ ಶಿಶು ಆರೈಕೆ ಸಪ್ತಾಹ ಕಾರ್ಯಕ್ರಮವು “ನವಜಾತ ಶಿಶುಗಳಲ್ಲಿ ಆಂಟಿ ಮೈಕ್ರೋಬಿಯಲ್ ಪ್ರತಿರೋಧಕವನ್ನು ತಡೆಗಟ್ಟಲು ಆಂಟಿ ಮೈಕ್ರೋಬಿಯಲ್ ಔಷಧಗಳನ್ನು ಸಮರ್ಪಕವಾಗಿ ಬಳಸುವುದು” ಎಂಬ ಘೋಷವಾಕ್ಯದೊಂದಿಗೆ ನಡೆಯಿತು. ನವೆಂಬರ್-15 ರಿಂದ ನವೆಂಬರ್-21 ರವರೆಗೆ ವಿಶ್ವದಾದ್ಯಂತ ನವಜಾತ ಶಿಶು ಆರೈಕೆ ಸಪ್ತಾಹ ಆಚರಿಸಲಾಗುತ್ತಿದೆ. ಶಿಶುಗಳ ಉಳಿವು ಮತ್ತು ಅಭಿವೃದ್ಧಿಗೆ ನವಜಾತ ಶಿಶುವಿನ ಆರೈಕೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು, ಆರೈಕೆ ಮೂಲಕ ಶಿಶು ಮರಣವನ್ನು ತಡೆಗಟ್ಟುವುದು ಇದರ ಮುಖ್ಯ ಉದ್ದೇಶವಾಗಿದೆ. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಮಧುಸೂಧನ್ ಮಾತನಾಡಿ, ನವಜಾತ ಅವಧಿಯು ಮಕ್ಕಳ ಉಳಿವಿನ ನಿರ್ಣಾಯಕ ಅವಧಿಯಾಗಿದೆ. ಆರೋಗ್ಯವಂತ ನವಜಾತ ಶಿಶುಗಳು, ಆರೋಗ್ಯವಂತ ವಯಸ್ಕರಾಗಿ ಬೆಳೆದು ಸಮುದಾಯ ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಉತ್ತಮ ಕೊಡುಗೆ ಆಗಬಹುದು.…
ಮಡಿಕೇರಿ ನ.20 NEWS DESK : ಕೃಷಿ ಟುವಟಿಕೆಗಳ ಮೂಲಕ ಬದುಕು ಕಟ್ಟಿಕೊಂಡಿರುವ ರೈತ ಸಮುದಾಯದ ಬದುಕಿಗೆ ಆತಂಕ ಮೂಡಿಸಿರುವ ಕರಾಳ “ವಕ್ಫ್ ಕಾಯ್ದೆ”ಯನ್ನು ಹಿಂಪಡೆಯಬೇಕು ಮತ್ತು ಹಗರಣಗಳಲ್ಲಿ ಮುಳುಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ನ.22 ರಂದು ಕೊಡಗು ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ದಿನಪೂರ್ತಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ನಗರದ ಶ್ರೀ ಚೌಡೇಶ್ವರಿ ದೇಗುಲದ ಬಳಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು, ನಗರದ ಹಳೇ ಖಾಸಗಿ ಬಸ್ ನಿಲ್ದಾಣ, ಜ.ತಿಮ್ಮಯ್ಯ ವೃತ್ತವನ್ನು ಹಾದು ಜಿಲ್ಲಾಧಿಕಾರಿಗಳ ಕಚೇರಿ ತಲುಪಲಿದೆ. ಬಳಿಕ ಸಂಜೆ 5 ಗಂಟೆಯವರೆಗೆ ಧರಣಿ ಮುಷ್ಕರ ನಡೆಸಲಾಗುವುದು ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಒಂದಿಲ್ಲ ಒಂದು ಹಗರಣಗಳು ನಡೆಯುತ್ತಲೆ ಇದೆ. ಒಂದು ಸಮುದಾಯದ ಓಲೈಕೆಗಾಗಿ…






