ಮಡಿಕೇರಿ ನ.20 NEWS DESK : ರಾಜ್ಯದ ವಿವಿಧೆಡೆ ರೈತರ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಪ್ರತಿಬಿಂಬಿಸಲ್ಪಟ್ಟಿರುವ ವಕ್ಫ್ ನೋಟೀಸ್ ನಿಂದಾಗಿ ಕೃಷಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಪ್ರಕರಣದಿಂದಲಾದರೂ ಕೊಡಗಿನ ಬೆಳೆಗಾರರು ಎಚ್ಚೆತ್ತುಕೊಂಡು ಜಮ್ಮಾ ಜಾಗದ ಮೇಲಿನ ತಮ್ಮ ಹಕ್ಕನ್ನು ಗಟ್ಟಿಗೊಳಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಬಿಜೆಪಿಯ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಕ್ಫ್ ಆಸ್ತಿ ಎಂಬ ನೋಟೀಸ್ ಎಚ್ಚರಿಕೆಯ ಗಂಟೆಯಾಗಿದ್ದು, ಉತ್ತರ ಕರ್ನಾಟಕದ ಹಲವು ಭಾಗಗಳ ರೈತರು ಆತಂಕದಲ್ಲಿದ್ದಾರೆ. ಇನ್ನಾದರೂ ಕೊಡಗಿನ ಬೆಳೆಗಾರರು ಜಾಗೃತರಾಗಲೇಬೇಕಾಗಿದೆ. ಭೂಮಿಯ ಹಕ್ಕಿನ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಮುಂದೊಂದು ದಿನ ಜಮ್ಮಾ ಜಾಗದ ಮೇಲೆ ಮತ್ಯಾರೋ ಅಧಿಕಾರ ಚಲಾಯಿಸಬಹುದಾದ ಸಾಧ್ಯತೆಗಳಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ತಲೆತಲಾಂತರಗಳಿಂದ ಕೊಡಗು ಜಿಲ್ಲೆಯ ಎಲ್ಲಾ ಜಾತಿ, ಜನಾಂಗ, ಧರ್ಮದವರು ಜಮ್ಮಾಭೂಮಿಯನ್ನು ಅನುಭವಿಸಿಕೊಂಡು ಬರುತ್ತಿದ್ದಾರೆ. ಕೃಷಿ ಕಾರ್ಯ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಜಮ್ಮಾಭೂಮಿಯ ಕುರಿತು ಇರುವ ಗೊಂದಲಗಳು ಇಲ್ಲಿಯವರೆಗೆ ಸರ್ಕಾರದ ಮಟ್ಟದಲ್ಲಿ ಬಗೆಹರಿದಿಲ್ಲ. ರಾಜ್ಯದಲ್ಲಿ…
ಲೇಖಕ: admin
ಮಡಿಕೇರಿ ನ.20 NEWS DESK : ಶಿಶು ಅಭಿವೃದ್ದಿ ಯೋಜನೆ ಇಲಾಖೆ ವತಿಯಿಂದ ವಿಶ್ವ ವಿಶೇಷಚೇತನರ ದಿನಾಚರಣೆ ಅಂಗವಾಗಿ ಮಡಿಕೇರಿ ತಾಲ್ಲೂಕಿನ ವಿಶೇಷ ಚೇತನರಿಗೆ ನಗರದ ಗಾಂಧಿ ಮೈದಾನದಲ್ಲಿ ನ.22 ರಂದು ಬೆಳಗ್ಗೆ 10 ಗಂಟೆಗೆ ಆಟೋಟ ಸ್ಪರ್ಧೆ ನಡೆಯಲಿದೆ. ಮಡಿಕೇರಿ ತಾಲ್ಲೂಕಿನ ಎಲ್ಲಾ ವಿಶೇಷಚೇತನರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೋರಿದ್ದಾರೆ.
ಮಡಿಕೇರಿ ನ.20 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಜೆಸಿಐ ಪೊನ್ನಂಪೇಟೆ ನಿಸರ್ಗದ ಸಂಯುಕ್ತಾಶ್ರಯದಲ್ಲಿ ಡಿ.8 ರಂದು ಮಾಯಮುಡಿ ಶಾಲಾ ಮೈದಾನದಲ್ಲಿ “ತೋಕ್ ನಮ್ಮೆ” ಪ್ರಯುಕ್ತ ರಾಜ್ಯ ಮಟ್ಟದ “ಕೋಕನಟ್ ಶೂಟಿಂಗ್” ಸ್ಪರ್ಧೆಯನ್ನು ಆಯೋಜಿಸಲಾಗಿದೆಯೆಂದು ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕೊಡವ ಸಮುದಾಯದಲ್ಲಿ ತೋಕ್ ಇಲ್ಲವೆ ಕೋವಿಗೆ ಪೂಜನೀಯ ಸ್ಥಾನವನ್ನು ನೀಡಲಾಗಿದೆಯಲ್ಲದೆ, ಧಾರ್ಮಿಕ ಆಚರಣೆಗಳಲ್ಲು ಕೋವಿ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಈ ಹಿನ್ನೆಲೆ ಅಕಾಡೆಮಿ ವತಿಯಿಂದ ಪ್ರಥಮ ಬಾರಿಗೆ ಜೆಸಿಐ ಸೇವಾ ಸಂಸ್ಥೆಯ ಸಹಕಾರದೊಂದಿಗೆ ಶೂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆಯೆಂದು ತಿಳಿಸಿದರು. ಶೂಟಿಂಗ್ ಸ್ಪರ್ಧೆ .22 ಬಂದೂಕು, ಟುವೆಲ್ತ್ ಬೋರ್ ಬಂದೂಕು ಮತ್ತು ಏರ್ ಗನ್ ವಿಭಾಗಗಳಲ್ಲಿ ನಡೆಯಲಿದೆ. ಮೊದಲ ಎರಡು ಸ್ಪರ್ಧೆಗಳು 18 ವರ್ಷ ಮೇಲ್ಪಟ್ಟವರಿಗೆ ನಡೆಯಲಿದೆ. ಏರ್ ಗನ್ ಸ್ಪರ್ಧೆ ಮುಕ್ತವಾಗಿರಲಿದೆ. ಈಗಾಗಲೆ 150 ಕ್ಕೂ ಹೆಚ್ಚಿನ ಸ್ಪರ್ಧಿಗಳು ಹೆಸರನ್ನು ನೋಂದಾಯಿಸಿಕೊಂಡಿದ್ದು, 400 ಸ್ಪರ್ಧಿಗಳು…
ಸೋಮವಾರಪೇಟೆ ನ.20 NEWS DESK : ಮನುಷ್ಯ ಸಾಮಾಜಿಕ ಸ್ವಾಸ್ಥ್ಯದೊಂದಿಗೆ ಸುಂದರವಾದ ಜೀವನ ನಡೆಸಲು ವಚನ ಸಾಹಿತ್ಯ ದೀವಿಗೆ ಇದ್ದಂತೆ ಎಂದು ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಶಿಕ್ಷಕರೂ ಹಾಗೂ ವಾಗ್ಮಿ ಮೆ.ನಾ.ವೆಂಕಟನಾಯಕ್ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ತೋಳೂರು ಶೆಟ್ಟಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ ನಡೆದ “ಶರಣ ಸಂಸ್ಕೃತಿ” ವಿಚಾರ ಗೋಷ್ಠಿಯಲ್ಲಿ ಪ್ರವಚನ ನೀಡಿದ ಅವರು, ಹನ್ನೆರಡನೇ ಶತಮಾನದಲ್ಲಿ ಕನ್ನಡದ ನೆಲದಲ್ಲಿ ನಡೆದ ಶರಣರ ಕ್ರಾಂತಿ ಸಮಾಜದಲ್ಲಿ ಸಾಮಾಜಿಕ ಬದಲಾವಣೆಗೆ ಕಾರಣವಾಯಿತು. ಅಂದಿನ ಸಮಾಜದಲ್ಲಿ ತಾಂಡವವಾಡುತ್ತಿದ್ದ ಸಾಮಾಜಿಕ ಸಂಘರ್ಷಗಳನ್ನು ತಡೆಗಟ್ಟಲು ವಚನಕಾರರು ಕಲ್ಯಾಣದ ಅನುಭವ ಮಂಟಪದಲ್ಲಿ ಮೊಳಗಿಸಿದ ವಿಚಾರ ಲಹರಿಗಳ ಕಹಳೆ ಇಂದಿಗೂ ಹಾಗೂ ಎಂದೆಂದಿಗೂ ಚಿರಸ್ಥಾಯಿ. ಅಂದಿನ ಶರಣರ ಶ್ರೇಷ್ಠ ಚಿಂತನೆಗಳು ಇಂದು ನೊಂದವರು, ದೀನ ದಲಿತರು ಹಾಗೂ ಜನಸಾಮಾನ್ಯರ ಪಾಲಿಗೆ ಆಶಾಕಿರಣಗಳಾಗಿವೆ ಎಂದರು. ಸ್ವಾತಂತ್ರ್ಯಾನಂತರ ದೇಶದಲ್ಲಿ ಜಾರಿಗೆ ಬಂದ ಸಮಾನತೆ, ಮಹಿಳಾ ಸ್ವಾತಂತ್ರ್ಯ ಹಾಗೂ ವಾಕ್ ಸ್ವಾತಂತ್ರ್ಯದ ಮೂಲ ಕಾರಣಿಕರೇ ಅಂದಿನ ಶರಣರು.…
ವಿರಾಜಪೇಟೆ ನ.20 NEWS DESK : ಮೈಸೂರಿನ ಬನ್ನೂರು ಮುಖ್ಯರಸ್ತೆಯಲ್ಲಿರುವ ಟೆರೇಸಿಯನ್ ಕಾಲೇಜು ಒಳಾಂಗಣ ಸಭಾಂಗಣದಲ್ಲಿ ನಡೆದ 4ನೇ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024ರಲ್ಲಿ ರೋಟರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಕಟಾ ವಿಭಾಗದಲ್ಲಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ವಿಸ್ಮಯಿ ದ್ವಿತೀಯ ಮತ್ತು ಕಟಾ, ಕುಮುಟೆ ವಿಭಾಗದಲ್ಲಿ 3ನೇ ತರಗತಿಯ ವಿದ್ಯಾರ್ಥಿನಿ ಲಿಶ್ಮಿತಾ ತೃತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಮೂರ್ನಾಡು ನ.20 NEWS DESK : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಮೂರ್ನಾಡು ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಮೂರ್ನಾಡು ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಚಾಂಪಿಯನ್ಶಿಪ್ ಪಡೆದುಕೊಂಡಿದೆ. ಈ ವಿಜೇತ ತಂಡವು ಮುಂದೆ ಕೋಲಾರದಲ್ಲಿ ನಡೆಯುವ ರಾಜ್ಯಮಟ್ಟದ ಫುಟ್ಬಾಲ್ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದೆ. ವಿಜೇತ ತಂಡದ ಜೊತೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕ್ಕಿ ಕಾಲೇಜಿನ ದೈಹಿಕ ನಿರ್ದೇಶಕ ಕೋರನ ಮಂಜುನಾಥ್ ಹಾಗೂ ಉಪನ್ಯಾಸಕ ವೃಂದದವರು ಹಾಜರಿದ್ದರು. ವರದಿ : ಟಿ.ಸಿ.ನಾಗರಾಜ್, ಮೂರ್ನಾಡು
ವಿರಾಜಪೇಟೆ ನ.20 NEWS DESK : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿರಾಜಪೇಟೆಯ ಬಿಳುಗುಂದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ರಹಿಯಾನ ದ್ವಿತೀಯ ಸ್ಥಾನ ಪಡೆದಿದ್ದಾರೆ. ‘ಬಾಪೂಜಿ ಮತ್ತುವಿಜ್ಞಾನ ಮತ್ತು ಟೆಕ್ನಾಲಜಿ” ಎಂಬ ವಿಷಯದ ಬಗ್ಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ದ್ವಿತೀಯ ಸ್ಥಾನಕ್ಕೆ ರೂ. 2000 ನಗದು ಒಳಗೊಂಡಿದೆ. ದ್ವಿತೀಯ ಸ್ಥಾನ ಲಭಿಸಿದ್ದು ಸರಕಾರಿ ನಮ್ಮ ಶಾಲೆಗೆ ಹೆಮ್ಮೆ ತಂದಿದೆ ಎಂದು ಶಾಲೆಯ ಮುಖ್ಯಶಿಕ್ಷಕ ಡಾ.ಆರ್.ರವಿ ತಿಳಿಸಿದ್ದಾರೆ.
ನಾಪೋಕ್ಲು ನ.20 NEWS DESK : ಕೆನರಾ ಬ್ಯಾಂಕ್ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ 119ನೇ ಜನ್ಮದಿನಾಚರಣೆ (ಸಂಸ್ಥಾಪಕರ ದಿನಾಚರಣೆ) ಯನ್ನು ನಾಪೋಕ್ಲು ಶಾಖೆಯಲ್ಲಿ ಆಚರಿಸಲಾಯಿತು. ಖಾಸಗಿ ಶಾಲೆಯ ಮುಖ್ಯ ಶಿಕ್ಷಕಿ ಮೈನ ಕುಮಾರಿ ಮತ್ತು ಶಾಖೆಯ ವ್ಯವಸ್ಥಾಪಕ ಬಿ.ಎ.ಹಂಸ ಅಮ್ಮೆಂ ಬಾಲ್ ಸುಬ್ಬರಾವ್ ಪೈ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಶಾಖೆಯ ವ್ಯವಸ್ಥಾಪಕ ಬಿ.ಎ.ಹಂಸ ದಿನದ ಮಹತ್ವದ ಬಗ್ಗೆ ಮಾತನಾಡಿದರು. ನಾಪೋಕ್ಲು ಶಾಖೆಯ ಸಿಬ್ಬಂದಿಗಳಾದ ಪ್ರವೀಣ್, ಅಜಿತ್, ಕಣ್ಣ ಬಾಬು, ದೇವಪ್ಪ ಬಿ.ಆರ್.ಥಾಮಸ್ ಕುಟ್ಟಿ, ಅನು, ಶೈನಿ ಮತ್ತು ಸುಧಾ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗ್ರಾಹಕರು ಹಾಜರಿದ್ದರು. ಶಾಖೆಯ ನಿವೃತ ಸಿಬ್ಬಂದಿ ಪೌಲಸ್ ಅವರನ್ನು ಶಾಖೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಹಕರಿಗೆ ಸಿಹಿ ಹಂಚಲಾಯಿತು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ನ.20 NEWS DESK : ವಕ್ಫ್ ಮಂಡಳಿಯ ನೀತಿಯನ್ನು ಖಂಡಿಸಿ ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ನ.22 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ “ನಮ್ಮ ಭೂಮಿ, ನಮ್ಮ ಹಕ್ಕು” ಎಂಬ ಘೋಷವಾಕ್ಯದೊಂದಿಗೆ ನಗರದ ಶ್ರೀ ಚೌಡೇಶ್ವರಿ ದೇವಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ನಂತರ ಸಂಜೆ 5 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜ್ಯದ ಪ್ರಮುಖರು, ಸಂಸದರು ಹಾಗೂ ಜಿಲ್ಲೆಯ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಪ್ರಮುಖರು ಭಾಗವಹಿಸಲಿದ್ದು, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಿಜೆಪಿಯ ಜನಪರ ಹೋರಾಟಕ್ಕೆ ಬೆಂಬಲ ಸೂಚಿಸುವಂತೆ ನಾಪಂಡ ರವಿ ಕಾಳಪ್ಪ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್, ಪ್ರಧಾನ…
ಮಡಿಕೇರಿ ನ.20 NEWS DESK : ವಿಶ್ವ ಶೌಚಾಲಯ ದಿನಾಚರಣೆಯ ಅಂಗವಾಗಿ ಕೊಡಗು ಜಿಲ್ಲಾ ಪಂಚಾಯಿತಿಯಲ್ಲಿ ಸ್ವಚ್ಛ ಭಾರತ್ ಮಿಷನ್-ಗ್ರಾ ಯೋಜನೆಯಡಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮುಖ್ಯಕಾರ್ಯನಿರ್ವಾಹಣಾ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಿದರು. ಜಿಲ್ಲಾ ಸಮಾಲೋಚಕರಾದ ಹರ್ಷಿತಾ ಪ್ರತಿಜಾವಿಧಿಯನ್ನು ಬೋಧಿಸಿದರು. ಇದೇ ಸಂದರ್ಭ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಅಭಿಯಾನದ ರೂಪು ರೇಷೆಯ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾನೋಡಲ್ ಅಧಿಕಾರಿ, ಕಾರ್ಯಪಾಲಕ ಅಭಿಯಂತರರು, ಡಿಹೆಚ್ಒ, ಡಿಡಿಪಿಐ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ, ಜಿಲ್ಲಾ ಸಮಾಲೋಚಕರು, ಜೆಜೆಎಂ ತಂಡದವರು ಹಾಜರಿದ್ದರು.






