ಸೋಮವಾರಪೇಟೆ NEWS DESK ನ.19 : ಸೋಮವಾರಪೇಟೆ ಪಟ್ಟಣದಲ್ಲಿ ಸ್ಥಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಇಂದಿರಾಗಾಂಧಿ ಅಭಿಮಾನಿಗಳ ಸಂಘದಿಂದ ಶಾಸಕರ ಕಚೇರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇದೀಗ ಮತ್ತೆ ನೆನೆಗುದಿಗೆ ಬಿದ್ದಿದ್ದು, ತಕ್ಷಣ ಕೆಲಸ ಆರಂಭಿಸಬೇಕೆಂದು ಸಂಘದ ಅಧ್ಯಕ್ಷ ಎಚ್.ಎ. ನಾಗರಾಜ್ ಒತ್ತಾಯಿಸಿದರು. ಈ ಸಂದರ್ಭ ಉಪಾಧ್ಯಕ್ಷ ಅಜಯ್, ಕಾರ್ಯದರ್ಶಿ ಎಚ್.ಬಿ. ರಾಜಪ್ಪ, ಸಲಹೆಗಾರ ಪಳನಿಸ್ವಾಮಿ, ಮಂಜು, ಮೊಹಿದ್ದೀನ್, ಮೋಹನ್, ನಾಗರಾಜು, ರಾಜೇಶ್, ಸಂಗಮೇಶ್, ಕಂಬಳ್ಳಿ ಲೋಕೇಶ್, ಶಿವ ಸೇರಿದಂತೆ ಇತರರು ಇದ್ದರು.
ಲೇಖಕ: admin
ಸೋಮವಾರಪೇಟೆ NEWS DESK ನ.19 : ಕೊಡಗು ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಶಿಕ್ಷಣ ಫೌಂಡೇಶನ್ ಗ್ರಾಮ ಡಿಜಿ ವಿಕಸನ ಸಂಸ್ಥೆ ವತಿಯಿಂದ ಗ್ರಾಮ ಪಂಚಾಯಿತಿ ಅರಿವು ಕೇಂದ್ರದ ಗ್ರಂಥಾಲಯ ಮೇಲ್ವಿಚಾರಕರಿಗೆ ‘ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿ’ ತರಬೇತಿ ಕಾರ್ಯಾಗಾರ ಮಡಿಕೇರಿಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಕಾರ್ಯಾಗಾರ ಉದ್ಘಾಟಿಸಿದರು. ಶಿಕ್ಷಣ ಫೌಂಡೇಶನ್ ತರಬೇತುದಾರ ರಕ್ಷಿತ್ ಮಾತನಾಡಿ, ಅರಿವು ಕೇಂದ್ರದ ಗ್ರಂಥಾಲಯದಲ್ಲಿರುವ ಲಾಪ್ಟಾಪ್ಗಳಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ಆ್ಯಪ್ ಗಳನ್ನು ಅಳವಡಿಸಿದ್ದು, 8, 9, 10, 12ನೇ ತರಗತಿಗಳ ಪಠ್ಯ ಹಾಗೂ ಹಿಂದಿನ ಪ್ರಶ್ನೆ ಪತ್ರಿಕೆಗಳು ಸಿಗಲಿದ್ದು, ವಿದ್ಯಾರ್ಥಿಗಳಿಗೆ ಮೇಲ್ವಿಚಾರಕರು ಮನವರಿಗೆ ಮಾಡಿಕೊಡಬೇಕು ಎಂದು ಹೇಳಿದರು. ಡಿಜಿಟಲ್ ಸಾಕ್ಷರತೆ ಮಹಿಳೆಯರ ಬದುಕಿಗೆ ಸಹಕಾರಿಯಾಗಲಿದೆ. ವಾಟ್ಸ್ಆಪ್ ಬಿಸಿನೆಸ್ ಮಾಡಬಹುದು. ಆರ್ಡಿಪಿಆರ್ ಸೌಲಭ್ಯಗಳು ಹಾಗು ಡಿಜಿಟಲ್ ಡಿವೈಸ್ ಮೂಲಕ ಹಣದ ವ್ಯವಹಾರದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಉಪಕಾರ್ಯದರ್ಶಿ ಧನರಾಜು, ಸಹಾಯಕ ಯೋಜನಾಧಿಕಾರಿ ಜೀವನ್ಕುಮಾರ್, ಗ್ರಂಥಾಲಯ…
ಸೋಮವಾರಪೇಟೆ NEWS DESK ನ.19 : ಸೋಮವಾರಪೇಟೆಯ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮ ದಿನವನ್ನು ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಪುಟ್ಟಪ್ಪ ವೃತ್ತದಲ್ಲಿ ಆಚರಿಸಲಾಯಿತು. ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ಎಚ್.ಬಿ.ರಾಜಪ್ಪ ಹಾಗೂ ಪದಾಧಿಕಾರಿಗಳು ಇದ್ದರು.
ಸುಂಟಿಕೊಪ್ಪ NEWS DESK ನ.19 : ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಿದರೆ ಪೋಷಕರಿಗೆ ದಂಡ ಮತ್ತು ಜೈಲುಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು ಶಿರಂಗಾಲ ಕಾನ್ಬೈಲ್, ತಲಕಾವೇರಿ ಜ್ಞಾನ ವಿಕಾಸ ಸಮಿತಿ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಮಂಜಿಕೆರೆ ಸಮುದಾಯ ಭವನದಲ್ಲಿ ವಾಹನ ಚಾಲಕರಿಗಾಗಿ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತಾ ಕಾರ್ಯಾಗಾರ ನಡೆಯಿತು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಮುಖ್ಯ ಸಿಬ್ಬಂದಿ ವಿವೇಕ್ ಮಾತನಾಡಿ ಪೋಷಕರು ಅಪ್ರಾಪ್ತರಿಗೆ ವಾಹನಗಳನ್ನು ಚಾಲನೆ ಮಾಡಲು ಅವಕಾಶ ನೀಡಬಾರದು. ಅಪ್ರಾಪ್ತರು ವಾಹನ ಚಾಲನೆ ಮಾಡಿದರೆ ಪೋಷಕರಿಗೆ ರೂ.25 ಸಾವಿರ ದಂಡ ಮತ್ತು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದರು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿರಬೇಕು. ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ಹೊಂದಿ ವಾಹನವನ್ನು ಸುರಕ್ಷಿತವಾಗಿ ಚಾಲನೆ ಮಾಡಬೇಕು. ಎಲ್ಲಾ ವಾಹನ ಚಾಲಕರು ವಾಹನಕ್ಕೆ ಸಂಬAಧಿಸಿದ ದಾಖಲೆಗಳು ಮತ್ತು ಪರವಾನಗಿಯನ್ನು…
ಮಡಿಕೇರಿ ನ.19 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ (ಐಟಿಐ) ಕಾಲೇಜಿನಲ್ಲಿ ನವೆಂಬರ್, 22 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆವರೆಗೆ ‘’ಉದ್ಯೋಗಮೇಳ’’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ರಾಣಿ ಮದ್ರಾಸ್, ಮೈಸೂರು, ಅಟೋಮೇಟೇಕ್ಸಿಲ್ ಮೈಸೂರು, ಇಬ್ಬನಿ ರೆಸಾರ್ಟ್ಸ್, ಮಡಿಕೇರಿ, ಅಪೋಲೋ ಫಾರ್ಮಸಿ, ಬೆಂಗಳೂರು, ಈಕ್ವಲೈಸರ್ ಆರ್.ಸಿ. ಮೈಸೂರು, ಯುವ ಸ್ಪಂದನ, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್ಎಸ್ಎಲ್ಸಿ ಕ್ಕಿಂತ ಕಡಿಮೆ, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ…
ಮಡಿಕೇರಿ ನ.19 NEWS DESK : ಸೋಮವಾರಪೇಟೆ ಉಪವಿಭಾಗದ ಶಾಂತಳ್ಳಿ 11ಕೆ.ವಿ ಫೀಡರ್ನಲ್ಲಿ ನವೆಂಬರ್, 20 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಮಾರ್ಗಗಳ ಹಾಗೂ ಪರಿವರ್ತಕಗಳ ನಿರ್ವಹಣೆ ಹಮ್ಮಿಕೊಂಡಿದ್ದು, ಶಾಂತಳ್ಳಿ 11 ಕೆ.ವಿ ಫೀಡರ್ ಹಾದುಹೋಗುವ ಸ್ಥಳಗಳಾದ ಶಾಂತಳ್ಳಿ, ಯಡೂರು, ತೋಳೂರು, ಶೆಟ್ಟಳ್ಳಿ, ಕೂತಿ, ತಾಕೇರಿ, ಕಿರಗಂದೂರು, ಬೆಟ್ಟದಹಳ್ಳಿ, ಕುಮಾರಳ್ಳಿ, ಕುಂಬಾರಗಡಿಗೆ, ಕಿಕ್ಕರಳ್ಳಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ನ.19 NEWS DESK : ನಗರದ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ, ಛದ್ಮವೇಶ, ಸೀಮಂತ ಕಾರ್ಯಕ್ರಮ ಮತ್ತು ಸಮವಸ್ತ್ರ ವಿತರಣಾ ಕಾರ್ಯಕ್ರಮ ನೆರವೇರಿತು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತಾ ಕೀರ್ತನ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆ ಚೈತ್ರ, ಸಹಾಯಕಿ ಜ್ಯೋತಿ ಸಮುದಾಯದ ಸಹಕಾರ ಪಡೆದು ಸಮವಸ್ತ್ರ ವಿತರಣೆಗೆ ಕ್ರಮ ಕೈಗೊಂಡಿರುವುದು ಶ್ಲಾಘನೀಯ. ಇದು ಮಕ್ಕಳಲ್ಲಿ ಸಮಾನತೆ ಮೂಡಿಸಲು ಇದು ಸಹಕಾರವಾಗುತ್ತದೆ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಮತ್ತು ಸಮುದಾಯದ ಸಹಕಾರ ಪಡೆದು ಅಂಗನವಾಡಿ ಕೇಂದ್ರವನ್ನು ಮಾದರಿ ಅಂಗನವಾಡಿ ಕೇಂದ್ರವನ್ನಾಗಿ ಮಾಡಲು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲಹೆ ಮಾರ್ಗದರ್ಶನ ನೀಡಿದರು. ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರಲ್ಲಿ ಅಂಗನವಾಡಿ ಕೇಂದ್ರಕ್ಕಾಗಿ ಹಲವಾರು ಬೇಡಿಕೆಗಳನ್ನು ಸಲ್ಲಿಸಲಾಯಿತು. ಛದ್ಮವೇಶದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಬಹುಮಾನ, ವಿತರಿಸಲಾಯಿತು. ಪೋಷಣ್ ಅಭಿಯಾನ ಯೋಜನೆಯಡಿ ಮೂರು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಮಾಡಲಾಯಿತು. ಮಕ್ಕಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮವು ನೆರವೇರಿತು. ಕಾರ್ಯಕ್ರಮದಲ್ಲಿ ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ…
ಮಡಿಕೇರಿ ನ.19 NEWS DESK : ರಾಷ್ಟ್ರೀಯ ಐಕ್ಯತಾ ಪ್ರತಿಜ್ಞಾ ವಿಧಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಬೋಧಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ, ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತೇನೆ ಎಂದು ಶ್ರದ್ಧಾ ಪೂರ್ವಕವಾಗಿ ಪ್ರಮಾಣ ಮಾಡುತ್ತೇನೆ ಎಂದು ಬೋಧಿಸಿದರು. ಅಲ್ಲದೆ ಎಂದಿಗೂ ಹಿಂಸಾಚಾರದಲ್ಲಿ ತೊಡಗುವುದಿಲ್ಲ, ಮತ, ಭಾಷೆ, ಪ್ರದೇಶ, ಅಥವಾ ಇತರ ರಾಜಕೀಯ, ಆರ್ಥಿಕ ಕುಂದುಕೊರತೆಗಳ ಬಗೆಗಿನ ಭಿನ್ನಾಭಿಪ್ರಾಯಗಳನ್ನು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಹಾಗೂ ಸಂವಿಧಾನತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಪ್ರಯತ್ನ ಮುಂದುವರೆಸುತ್ತೇನೆ ಎಂದು ಪ್ರತಿಜ್ಞಾವಿಧಿ ಬೋಧಿಸಿದರು. ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇತರರು ಇದ್ದರು.
ಮಡಿಕೇರಿ ನ.19 NEWS DESK : ವಿಶ್ವ ಪ್ರತಿಜೀವಕ ನಿರೋಧಕ ಜಾಗೃತಿ ಸಪ್ತಾಹ ಪ್ರಯುಕ್ತ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ಸಂಸ್ಥೆಯ ವಿದ್ಯಾರ್ಥಿಗಳು ರಾಜಾಸೀಟ್ ಮಾರ್ಗವಾಗಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆ ವರೆಗೆ ಜಾಥಾ ನಡೆಸಿದರು. ಪ್ರತಿ ಜೀವಕಗಳನ್ನು ಸಾಮಾನ್ಯವಾಗಿ ಸೋಂಕು ನಿವಾರಣೆಗೆ ಬಳಸುತ್ತಾರೆ. ಆದರೆ ಇದರ ದುರ್ಬಳಕೆಯಿಂದ ಸೋಂಕು ಉಂಟುಮಾಡುವ ಸೂಕ್ಷ್ಮಜೀವಾಣುಗಳಿಗೆ ಈ ಔಷಧಿಗಳ ಮೇಲೆ ನಿರೋಧಕಶಕ್ತಿ ಬರುತ್ತದೆ. ಇದರಿಂದ ಔಷಧಿಯು ರೋಗ ನಿವಾರಣೆಯಲ್ಲಿ ವಿಫಲವಾಗುತ್ತದೆ. ನಮ್ಮ ದೇಶದಲ್ಲಿ ಪ್ರತಿಜೀವಕಗಳನ್ನು ವೈದ್ಯರ ಸಲಹಾ ಚೀಟಿ ಇಲ್ಲದೆಯೂ ಉಪಯೋಗಿಸುವುದರಿಂದ ಈ ಸಮಸ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗೆ ಅಸಮರ್ಪಕವಾಗಿ ಅಪೂರ್ಣವಾಗಿ ಈ ಔಷಧಿಗಳನ್ನು ತೆಗೆದುಕೊಳ್ಳುವುದು ಹಾಗೂ ಅನಗತ್ಯವಾಗಿ ಉಪಯೋಗಿಸುವುದರ ವಿರುದ್ಧ ಜಾಗೃತಿ ಮೂಡಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಇಎನ್ಟಿ ವಿಭಾಗದ ಮುಖ್ಯಸ್ಥರಾದ ಡಾ.ಶ್ವೇತಾ, ಡಾ.ಶಾಮಲ, ಡಾ.ಶ್ರೀದೇವಿ, ರವಿಕಿರಣ್, ಶ್ರುಶ್ರೂಷಕ ವಿಭಾಗದ ವಸಂತ, ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ಮತ್ತು ಪದವಿ ವಿದ್ಯಾರ್ಥಿಗಳು ಜಾಥಾದಲ್ಲಿ…
ಮಡಿಕೇರಿ ನ.19 NEWS DESK : ವಿ.ಬಾಡಗ ಹೈ ಪ್ಲೆಯರ್ಸ್ ವತಿಯಿಂದ ಡಿ.4 ರಿಂದ 8ರವೆಗೆ ಮೂರನೇ ವರ್ಷದ ಕೊಡವ ಕುಟುಂಬಗಳ ಹಾಕಿ ಪಂದ್ಯಾವಳಿ ಹೈ ಪ್ಲೆಯರ್ಸ್ ಕಪ್-2024 ನಡೆಯಲಿದೆ ಎಂದು ಹೈ ಪ್ಲೆಯರ್ಸ್ನ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿ.ಬಾಡಗ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಆಸಕ್ತ ತಂಡಗಳು ನ.22ರ ಒಳಗೆ ಹೆಸರು ನೊಂದಾಯಿಸಿಕೊಳ್ಳುವಂತೆ ತಿಳಿಸಿದರು. ಕಳೆದ ಎರಡು ವರ್ಷದಲ್ಲಿ ನಡೆದ ಪಂದ್ಯಾವಳಿಯಲ್ಲಿ ಬೇರಳೆನಾಡು ಮತ್ತು ಕುತ್ತುನಾಡಿನಲ್ಲಿ ಐನ್ಮನೆ ಹೊಂದಿರುವ ಕೊಡವ ಕುಟುಂಬಗಳಿಗೆ ಭಾಗವಹಿಸಲು ಅವಕಾಶಕಲ್ಪಿಸಿದ್ದು, ಈ ಬಾರಿ ಬಿಟ್ಟಂಗಾಲ-ಬಿ.ಶೆಟ್ಟಿಗೇರಿ-ಹಾತೂರು ಗ್ರಾ.ಪಂ ವ್ಯಾಪ್ತಿಯ ಐನ್ಮನೆ ಹೊಂದಿರುವ ಕೊಡವ ಕುಟುಂಬಗಳಿಗಳಿಗೆ ಪಂದ್ಯಾವಳಿ ನಡೆಯಲಿದ್ದು, ಪ್ರತಿ ಕುಟುಂಬದ ತಂಡಗಳಿಗೆ 4 ಕೊಡವ ಅತಿಥಿ ಆಟಗಾರರನ್ನು ಸೇರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ರಂಜು ಪೂಣಚ್ಚ ಮಾಹಿತಿ ನೀಡಿದರು. ಕಾರ್ಯದರ್ಶಿ ಪ್ರವೀಣ್ ತಿಮ್ಮಯ್ಯ ಮಾತನಾಡಿ, ಈ ಪಂದ್ಯಾವಳಿಗೆ ಒಟ್ಟು 30 ತಂಡಗಳು ನೊಂದಾಯಿಸಿಕೊಳ್ಳುವ ನಿರೀಕ್ಷೆ ಇದ್ದು, ವಿಜೇತ…






