ಲೇಖಕ: admin

ಕುಶಾಲನಗರ, ಜ.5 NEWS DESK : ಸಮಾಜದಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸುವುದರೊಂದಿಗೆ ಸಮಾಜದಲ್ಲಿ ಸರ್ವರಿಗೂ ಸಮ ಬಾಳು, ಸರ್ವರಿಗೂ ಸಮಪಾಲು ಸಿಗಬೇಕು ಎಂದು ಹಂಬಲಿಸಿದ ಕನ್ನಡದ ಮೇರು ಕವಿ ಕುವೆಂಪು ಎಂದು ಸಾಹಿತಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪುರಸ್ಕೃತರಾದ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ ಜೆ.ಸೋಮಣ್ಣ ತೊರೆನೂರಿನಲ್ಲಿ ಬಣ್ಣಿಸಿದರು. ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದ ರೇವೇಗೌಡನಕೊಪ್ಪಲಿನ ಶನೇಶ್ವರ ದೇವಸ್ಥಾನದ ಆವರಣದಲ್ಲಿ “ಕಣಿವೆ ಕಟ್ಟೆ” ಕೊಡಗು ಬಳಗದ ವತಿಯಿಂದ ಭಾನುವಾರ ರಾಷ್ಟ್ರಕವಿ ಕುವೆಂಪು ಅವರ ವಿಶ್ವ ಮಾನವ ಸಂದೇಶದ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಿ, ಕುವೆಂಪು ಅವರು ವೈಚಾರಿಕತೆ ನೆಲಗಟ್ಟೆಯಲ್ಲಿ ತಮ್ಮ ಸಾಹಿತ್ಯ ರಚಿಸುವ ಮೂಲಕ ಜನರಲ್ಲಿ ವೈಚಾರಿಕತೆ ಬಗ್ಗೆ ಬೆಳಕು ಚೆಲ್ಲಿದ್ದಾರೆ ಎಂದರು. ಹುಟ್ಟುವ ಪ್ರತಿ ಮಗುವು ವಿಶ್ವಮಾನವನೇ! ಆ ನಂತರ ಆ ಮಗುವನ್ನು “ಜಾತಿ,ಮತ”ದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ. ಹಾಗಾಗ ಬಾರದು ಎಂದರು. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ…

Read More

ಮಡಿಕೇರಿ ಜ.5 NEWS DESK : ನಮ್ಮೊಳಗಿನ ‘ದೌರ್ಬಲ್ಯ’ವನ್ನು ಬಳಸಿಕೊಂಡು, ಆಧುನಿಕ ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ‘ಸೈಬರ್ ಕ್ರೈಂ’, ‘ಡಿಜಿಟಲ್ ಅರೆಸ್ಟ್’ ಮೊದಲಾದ ಆರ್ಥಿಕ ವಂಚನೆ ಪ್ರಕರಣಗಳ ಬಗ್ಗೆ ಸದಾ ಜಾಗೃತರಾಗಿರಿ ಮತ್ತು ಇತರರಲ್ಲಿ ಅರಿವು ಮೂಡಿಸಿ ಎಂದು ಕೊಡಗು ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಕರೆ ನೀಡಿದ್ದಾರೆ. ನಗರದ ಪೊಲೀಸ್ ಮೈತ್ರಿ ಭವನದಲ್ಲಿ ನಡೆದ ಮಡಿಕೇರಿ ಉಪ ವಿಭಾಗದ ‘ಜನ ಸಂಪರ್ಕ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಸಾಮಾಜಿಕ ಜಾಲತಾಣಗಳ ಮೂಲಕ ಹಣಕಾಸಿನ ವಂಚನೆ ಪ್ರಕರಣಗಳು, ಪ್ರಮುಖವಾಗಿ ಹಿರಿಯರು, ನಿವೃತ್ತ ಉದ್ಯೋಗಿಗಳನ್ನೆ ಗುರಿಯಾಗಿಸಿಕೊಂಡು ನಡೆಯುತ್ತಿದೆ. ತಮ್ಮನ್ನು ಸಂಪರ್ಕಿಸುವ ವಂಚಕರು ಹಣವನ್ನು ದುಪ್ಪಟ್ಟು ಮಾಡಿಕೊಡುವ ಆಮಿಷವನ್ನೊಡ್ಡಿ, ಆರಂಭಿಕ ಹಂತದಲ್ಲಿ ಸಣ್ಣ ಮೊತ್ತವನ್ನು ನೀವು ಅದರಲ್ಲಿ ತೊಡಗಿಸಿದಲ್ಲಿ ಹೆಚ್ಚಿನ ಮೊತ್ತವನ್ನು ನೀಡುತ್ತಾರೆ. ನಂತರದ ದಿನಗಳಲ್ಲಿ ನಿಮ್ಮಲ್ಲಿ ವಿಶ್ವಾಸವನ್ನು ಮೂಡಿಸುವ ಮೂಲಕ ದೊಡ್ಡ ಮೊತ್ತದ ಹಣವನ್ನು ಹೂಡುವಂತೆ ಪ್ರೇರೇಪಿಸಿ ವಂಚಿಸುತ್ತಾರೆ ಎಂದು ಎಚ್ಚರಿಕೆಯ ಮಾತುಗಳನ್ನಾಡಿದರು. ನಿಮ್ಮಲ್ಲಿನ ದೌರ್ಬಲ್ಯಗಳನ್ನೆ ಬಳಸಿಕೊಂಡು…

Read More

ಮಡಿಕೇರಿ ಜ.5 NEWS DESK : ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರು ವಿನ್ಯಾಸಗೊಳಿಸಿರುವ ಶ್ರೀ ಓಂಕಾರೇಶ್ವರ ದೇವಾಲಯದ ಐತಿಹಾಸಿಕ ಚಿತ್ರಕಥಾ ಪುಸ್ತಕ ಇಂದು ಲೋಕಾರ್ಪಣೆಗೊಂಡಿತು. ಶ್ರೀಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಅರ್ಪಿಸಿದ ನಂತರ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಶ್ರೀ ಓಂಕಾರೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅಪ್ಪನೆರವಂಡ ಚುಮ್ಮಿ ದೇವಯ್ಯ ಅವರು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಮೂಡಿಬಂದಿರುವ ಚಿತ್ರಕಥಾ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು. ಮಡಿಕೇರಿ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಶ್ರೀ ಓಂಕಾರೇಶ್ವರ ದೇವಸ್ಥಾನ ಸಮಿತಿಯ ಮಾಜಿ ಅಧ್ಯಕ್ಷ ಕೊಂಗಂಡ ಎಸ್.ದೇವಯ್ಯ ಅವರು ಅತಿಥಿಗಳಾಗಿ ಪಾಲ್ಗೊಂಡು ಪ್ರಥಮ ಕೃತಿಯನ್ನು ಸ್ವೀಕರಿಸಿದರು. 16ನೇ ಶತಮಾನದಲ್ಲಿ ಕೊಡಗನ್ನು ಆಳಿದ ಹಾಲೇರಿ ವಂಶದ ರಾಜ ಮನೆತನದ ಲಿಂಗರಾಜೇಂದ್ರ ಒಡೆಯರ್ 1820ರಲ್ಲಿ ನಿರ್ಮಿಸಿರುವ ಶ್ರೀಓಂಕಾರೇಶ್ವರ ದೇವಾಲಯದ ಐತಿಹಾಸಿಕ ಚಿತ್ರಕಥೆ ಕೊಡಗಿನ ಕಲಾವಿದ ಬಿ.ಕೆ.ಗಣೇಶ್ ರೈ ಅವರ ಪರಿಕಲ್ಪನೆಯಲ್ಲಿ ಡಿಜಿಟಲ್ ಗ್ರಾಫಿಕ್ಸ್ ಚಿತ್ರದೊಂದಿಗೆ ವಿನ್ಯಾಸಗೊಂಡಿದೆ. ಪುಸ್ತಕ ಲೋಕಾರ್ಪಣೆಗೊಂಡ ನಂತರ ಮಾತನಾಡಿದ ಬಿ.ಕೆ.ಗಣೇಶ್ ರೈ ಮಡಿಕೇರಿಯನ್ನು…

Read More

ವಿರಾಜಪೇಟೆ ಜ.5 NEWS DESK : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿ ಹಾಗೂ ಕಾಲೇಜಿನ ಪ್ರಾಂಶುಪಾಲೆಯಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಅವರನ್ನು ಕಾಲೇಜಿನ ವತಿಯಿಂದ ಬೀಳ್ಕೊಡುಗೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚಿಲ್ಲವಂಡ ಕಾವೇರಪ್ಪ, ಪ್ರಾಂಶುಪಾಲರ ಶಿಸ್ತು ಹಾಗೂ ಕರ್ತವ್ಯ ನಿಷ್ಠೆ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿಯನ್ನು ಹಾಕಿದೆ. ಅವರ ಮಾರ್ಗದರ್ಶನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊಂಡಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಾಂಶುಪಾಲೆ ಜ್ಯೋತಿ ಪ್ರಕಾಶ್, ತಮ್ಮ ಸುದೀರ್ಘವಾದ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಂಡು ಸಹೋದ್ಯೋಗಿಗಳ ಸಹಕಾರ ಹಾಗೂ ವಿದ್ಯಾರ್ಥಿಗಳ ಪ್ರೀತಿಯನ್ನು ಸ್ಮರಿಸಿ ಭಾವುಕರಾದರು. ಪ್ರಾಂಶುಪಾಲೆ  ಜ್ಯೋತಿ ಅವರ ತಾಯಿ ನಾಮೇರ ಜಾನಕಿ ಕುಟ್ಟಪ್ಪ, ಕುಟುಂಬಸ್ಥರು, ಸಹ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  ಉಪನ್ಯಾಸಕ ರೈಮಂಡ್ ಸ್ವಾಗತಿಸಿದರು, ಉಪನ್ಯಾಸಕಿ ಚೈತ್ರ ನಿರೂಪಿಸಿದರು, ಉಪನ್ಯಾಸಕಿ ಗಾಯತ್ರಿ…

Read More

ವಿರಾಜಪೇಟೆ ಜ.5 NEWS DESK : ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದ ಬಿ.ಬಿ.ರವಿನಂದನ್ ಬೋರ್ಕರ್ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಜರ್ನಲಿಸಂ ಹಾಗೂ ಮಾಸ್ ಕಮ್ಯುನಿಕೇಷನ್ ವಿಭಾಗದ ಪ್ರಾಧ್ಯಾಪಕಿ ಪ್ರೊ.ಸಪ್ನಾ ಎಂ.ಎಸ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ integrity and Teaching Data Journalisam in Indian Universities: An empirical study of status,challenges and strategies ಎಂಬ ಮಹಾ ಪ್ರಬಂಧದಕ್ಕೆ ಬಿ.ಬಿ.ರವಿನಂದನ್ ಬೋರ್ಕರ್ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಡಾ.ಬಿ. ಬಿ.ರವಿನಂದನ್ ಬೋರ್ಕರ್ ರವರು ಬೆಂಗಳೂರಿನ ಸೆಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಜರ್ನಲಿಸಂ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಪ್ರಸ್ತುತ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಇವರು ವಿರಾಜಪೇಟೆ ಬೇಟೋಳಿ ಗ್ರಾಮದ ನಿವೃತ್ತ ಸೈನಿಕರಾದ ಬಿ.ಎನ್. ಬಾಲಕೃಷ್ಣ ಬೋರ್ಕರ್ ಹಾಗೂ ಸುಲೋಚನ ಬೋರ್ಕರ್ ದಂಪತಿಗಳ ಪುತ್ರ.

Read More

ಮಡಿಕೇರಿ ಜ.5 NEWS DESK : ಕರ್ನಾಟಕದ ರಾಜ್ಯ ಸರ್ಕಾರವು ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಜಾರಿಗೊಳಿಸಿರುವ ‘ಅಕ್ಕಪಡೆ’ ವಿಶೇಷ ಯೋಜನೆಯನ್ನು ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದು ಮಣಿ ಉದ್ಘಾಟಿಸಿದರು.  ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ.ದಿನೇಶ್ ಕುಮಾರ್, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಗೃಹರಕ್ಷಕರು, ಸೇಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.

Read More

ಮೈಸೂರು ಜ.5 NEWS DESK : ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮುರಿಯಲಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ಅರಸು ರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ ಎಂದರು. :: ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ :: ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು…

Read More

ಮಡಿಕೇರಿ ಜ.5 NEWS DESK : ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಭವನ ಸಂಘಟನೆಯು ಜ.18 ರಂದು ರಜತ ಮಹೋತ್ಸವ ಆಚರಿಸುತ್ತಿದ್ದು, ಈ ಸಂದರ್ಭ ಹಲವು ರಾಜ್ಯಗಳ ಕನ್ನಡ ಹರಿಕಾರರು, ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ವಾಮನ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ. ಪ್ರತಿಷ್ಠಿತ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಗೆ ಶಕ್ತಿಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಅವರನ್ನು ಆಯ್ಕೆ ಮಾಡಲಾಗಿದೆ. ಹಲವು ಪ್ರಶಸ್ತಿಗಳಿಗೆ ಭಾಗಜರಾಗಿರುವ ಬಿ.ಜಿ.ಅನಂತಶಯನ ಅವರನ್ನು ಆಯ್ಕೆ ಮಾಡಲಾಗಿದೆ. “ಕನ್ನಡ ಪಯಶ್ವಿನಿ” ಅಂತರರಾಜ್ಯ ಪ್ರಶಸ್ತಿಯನ್ನು ಕೊಡಗಿನ ಹಿರಿಯ ಸಾಹಿತಿ, ನಿವೃತ್ತ ಸೇನಾನಿ ಕಿಗ್ಗಾಲು ಗಿರೀಶ್, ಸಾಹಿತಿ ಭಾರಧ್ವಜ್ ಕೆ.ಆನಂದತೀರ್ಥ ಬರಹ ಮತ್ತು ಸಿನಿಆ ಕ್ಷೇತ್ರಗಳಲ್ಲಿ ಪ್ರಶಸ್ತಿಗಳಿಗೆ ಭಾಜನರಾಗಿರುವ ಈರಮಂಡ ಹರಿಣಿ ವಿಜಯ್, ಲೇಖಕಿ, ನಿರೂಪಕಿ, ಪ್ರಾಧ್ಯಾಪಕಿ ಪ್ರತಿಮಾ ರೈ, ಗೌರಮ್ಮ ಪ್ರಶಸ್ತಿ ವಿಜೇತೆ ಸಾಹಿತಿ ಸಂಗೀತ ರವಿರಾಜ್ ಅವರುಗಳಿಗೆ ನೀಡಿ ಗೌರವಿಸಲಾಗುತ್ತಿದೆ. ಜಿಲ್ಲೆಯ ಮಾಧ್ಯಮ ಹಾಗೂ ಇತರ ಕ್ಷೇತ್ರಗಳಲ್ಲಿರುವ…

Read More

ಮಡಿಕೇರಿ ಜ.5 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಏ.27 ರಿಂದ ಮೇ 17ರವರೆಗೆ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟ ಮತ್ತು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕೊಡಗು ಗೌಡ ಯುವ ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಶಿತ್ ಮಾದಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌಡ ಜನಾಂಗದ ಒಗ್ಗಟ್ಟು, ಅಭಿವೃದ್ಧಿ, ಹಕ್ಕೊತ್ತಾಯ, ಕ್ರೀಡೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗಾಗಿ ಕಳೆದ ಹಲವು ವರ್ಷಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಇದೀಗ ಬಾಳಾಡಿ ಮನೋಜ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಗೌಡ ವೇದಿಕೆಯ ನೂತನ ಸಮಿತಿ ರಚನೆಯಾಗಿದ್ದು, ಈ ಸಮಿತಿ ವತಿಯಿಂದ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದರು. 10 ಕುಟುಂಬ 18 ಗೋತ್ರದ ಗೌಡ ಜನಾಂಗದ 27ನೇ ವರ್ಷದ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟವು ಏ.27 ರಿಂದ ಮೇ 17ರವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ ಕುಟುಂಬವಾರು ಟೆನ್ನಿಸ್…

Read More

ಮಡಿಕೇರಿ ಜ.5 NEWS DESK : ಮಡಿಕೇರಿಯಲ್ಲಿ ‘ನೀನಾಸಂ ತಿರುಗಾಟ’ ನಾಟಕ ಪ್ರದರ್ಶನವನ್ನು ಜ.9 ಮತ್ತು 10 ರಂದು ನಗರದ ಓಂಕಾರೇಶ್ವರ ದೇವಾಲಯ ರಸ್ತೆಯಲ್ಲಿನ ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದಲ್ಲಿ ಆಯೋಜಿಸಲಾಗಿದೆ.  ಶುಕ್ರವಾರ ಸಂಜೆ 6.30 ಕ್ಕೆ ಬಾನು ಮುಷ್ತಾಕ್ ಅವರ ಕಥೆಯನ್ನು ಆಧರಿಸಿದ ರಂಗಪ್ರಸ್ತುತಿ ‘ಹೃದಯದ ತೀರ್ಪು’ ಪ್ರದರ್ಶನ ಇದ್ದು ರಂಗರೂಪಕ್ಕೆ ಡಾ. ಎಂ ಗಣೇಶ್ ನಿರ್ದೇಶನ ಇದೆ. ಜ.10 ರಂದು ಸಂಜೆ 6.30 ಗಂಟೆಗೆ ಜಿ. ಶಂಕರ ಪಿಳ್ಳೆ ರಚನೆಯ, ದಾಮೋದರ ಶೆಟ್ಟಿ ಕನ್ನಡಕ್ಕೆ ಅನುವಾದಿಸಿರುವ ಶಂಕರ ವೆಂಕಟೇಶ್ವರನ್ ನಿರ್ದೇಶನದ ಅವತರಣಮ್ ಭ್ರಾಂತಾಲಯಮ್ ನಾಟಕ ಪ್ರದರ್ಶನ ಇದೆ. ಎರಡೂ ನಾಟಕಗಳಿಗೂ ಉಚಿತ ಪ್ರವೇಶ ಇರುತ್ತದೆ ಎಂದು ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ಕಾರ್ಯದರ್ಶಿ ಬಾಲಾಜಿ ಕಶ್ಯಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More