ಮಡಿಕೇರಿ ನ.19 NEWS DESK : ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್ ಕೊಡಗು ಮತ್ತು ಸೇವಾ ಭಾರತಿ ಕೊಡಗು ಸಂಯುಕ್ತ ಆಶ್ರಯದಲ್ಲಿ ಉಡೋತ್ ಮೊಟ್ಟೆ ಸೇರಿದಂತೆ ಒಂದೇ ದಿನ ಏಕಕಾಲದಲ್ಲಿ ಜಿಲ್ಲೆಯ 43 ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಉಡೋತ್ ಮೊಟ್ಟೆಯಲ್ಲಿ ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿ ಸಹಕಾರದೊಂದಿಗೆ ನಡೆದ ಶಿಬಿರವನ್ನು ಶ್ರೀ ಆದಿಶಕ್ತಿ ದೇವಸ್ಥಾನ ಧರ್ಮದರ್ಶಿ ಎಲ್ಯಣ್ಣ ಉದ್ಘಾಟಿಸಿದರು. ಕಾವೇರಿ ಸ್ವಾಸ್ಥ್ಯ ಯಾತ್ರೆ ಆರೋಗ್ಯ ಶಿಬಿರದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಹಾಗೂ ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಚಂದ್ರ ಉಡೋತ್ ಮಾಹಿತಿ ನೀಡಿದರು. ವೇದಿಕೆಯಲ್ಲಿ ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್ ಮತ್ತು ಕೊಡಗು ಮೆಡಿಕಲ್ ಕಾಲೇಜಿನ ವೈದ್ಯರುಗಳಾದ ಡಾ.ಮೋನಿಶ್, ಡಾ.ಲಾವಣ್ಯ ಉಪಸ್ಥಿತರಿದ್ದರು. ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿ ಕಾರ್ಯದರ್ಶಿ ಕೇಶಿನಿ ಸ್ವಾಗತಿಸಿ, ವಂದಿಸಿದರು. ಸಮಿತಿ ಪದಾಧಿಕಾರಿಗಳಾದ ದಿವ್ಯ ಮಂಜುನಾಥ್, ಸುಮಿತ ತಿರುಮಲ, ದಿನೇಶ್, ಗ್ರಾ ಪಂ ಸದಸ್ಯ ಗೋಪಾಲ್ ಹಾಗೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು…
ಲೇಖಕ: admin
ಮಡಿಕೇರಿ ನ.19 NEWS DESK : ಕೊಡಗು ವಿಶ್ವವಿದ್ಯಾಲಯ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಹಾಗೂ ಕಾಲೇಜಿನ ದೈಹಿಕ ವಿಭಾಗದ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಅಂತರ್ ಕಾಲೇಜು ಗುಡ್ಡ-ಗಾಡು ಓಟ ಸ್ಪರ್ಧೆ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಬೆಟಾಲಿಯನ್ ಕಮಾಂಡಿಂಗ್ ಆಫೀಸರ್ 19 ಕರ್ನಲ್ ರೆಜಿತ್ ಮುಕುಂದನ್, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ ಮತ್ತು ಮಾನಸಿಕವಾಗಿ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಗುಡ್ಡ ಗಾಡು ಓಟ ಬಹಳ ಕಷ್ಟಕರವಾದ ಕ್ರೀಡೆ. ವಿದ್ಯಾರ್ಥಿಗಳು ದೈಹಿಕ ದೃಢತೆಯನ್ನು ಹೆಚ್ಚಿಸಕೊಳ್ಳಬೇಕು ಎಂದರು. ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೈಹಿಕ ಶಿಕ್ಷಣ ವಿಭಾಗದ ಪರಿವೀಕ್ಷಕ, ಅಂತರ್ ಕಾಲೇಜು ಗುಡ್ಡ-ಗಾಡು ನಿರ್ದೇಶಕ ರೋಡ್ರಿಗಸ್ ಮಾತನಾಡಿ, ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾಸ್ಪೂರ್ತಿ ಮೆರೆಯುವುದು ದೊಡ್ಡ ಸಾಧನೆ. ಕ್ರೀಡಾಪಟುಗಳು ಮುಖ್ಯವಾಗಿ ಶಿಸ್ತನ್ನು ಅಳವಡಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿದ್ದು, ಗುರಿ ಸಾಧನೆಗೆ ಪಣ ತೊಡಬೇಕು ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್…
ಮಡಿಕೇರಿ ನ.19 NEWS DESK : ಸಾಮಾಜಿಕ ಕಳಕಳಿಯೊಂದಿಗೆ ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟ ಸಂಘಟನೆ ನ.24ರಂದು ದಾಖಲೆಯ 100ನೇ ಪುಸ್ತಕವನ್ನು ಲೋಕಾರ್ಪಣೆ ಮಾಡುತ್ತಿದೆ ಎಂದು ಕೂಟದ ಪ್ರಧಾನ ಕಾರ್ಯದರ್ಶಿ ಹಾಗೂ “100ನೇ ಮೊಟ್ಟ್” ಪುಸ್ತಕದ ಸಂಪಾದಕ ಪುತ್ತರಿರ ಕರುಣ್ ಕಾಳಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು “100ನೇ ಮೊಟ್ಟ್” ಪುಸ್ತಕದೊಂದಿಗೆ ಕೊಡವ ಮಕ್ಕಡ ಕೂಟದ 101ನೇ ಪುಸ್ತಕ ಬರಹಗಾರ್ತಿ ತೆನ್ನೀರ ಟೀನಾ ಚಂಗಪ್ಪ ಬರದಿರುವ “ಮನಸ್ರ ಮರೆಲ್”, 102ನೇ ಪುಸ್ತಕ ಪೇರಿಯಂಡ ಯಶೋಧ ರಚಿಸಿರುವ “ಮನಸ್ರ ಜರಿ” 103ನೇ ಕರವಂಡ ಸೀಮಾ ಗಣಪತಿ ಬರೆದಿರುವ “ಮನಸ್ರ ತಕ್ಕ್” ಹಾಗೂ 104ನೇ ಪುಸ್ತಕವಾಗಿ ಐಚಂಡ ರಶ್ಮಿ ಮೇದಪ್ಪ ರಚಿಸಿರುವ ಕೊಡವಡ ನಮ್ಮೆನಾಳ್ (ನಾಟಕ ರೂಪತ್ಲ್) ಕೂಡ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. “100ನೇ ಮೊಟ್ಟ್” ಕೊಡವ ಮಕ್ಕಡ ಕೂಟದ ಮಹತ್ವಾಕಾಂಕ್ಷೆಯ ಪುಸ್ತಕವಾಗಿದ್ದು, ಕೊಡವ, ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ 45 ಕ್ಕೂ ಹೆಚ್ಚು ಲೇಖನಗಳಿವೆ.…
ಮಡಿಕೇರಿ ನ.19 NEWS DESK : ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಐ ಕ್ಯೂ ಎಸಿ ವತಿಯಿಂದ ಡಿಜಿಟಲ್ ಲೈಬ್ರರಿ ಪೋರ್ಟಲ್ ಉದ್ಘಾಟಿಸಲಾಯಿತು. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಡಿಜಿಟಲ್ ಲೈಬ್ರರಿ ಪೋರ್ಟಲ್ ಅನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಸಮಯವನ್ನು ಹೆಚ್ಚಾಗಿ ಕಳೆಯುತ್ತಿದ್ದರು. ಆದರೆ ಪ್ರಸ್ತುತದಿನಗಳಲ್ಲಿ ಗ್ರಂಥಾಲಯಕ್ಕೆ ಬಂದು ಓದುವ ಹಾವ್ಯಸ ಕಡಿಮೆಯಾಗಿದ್ದು, ವಿದ್ಯಾರ್ಥಿಗಳು ಡಿಜಿಟಲ್ ಲೈಬ್ರರಿ ಪೋರ್ಟಲ್ ನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಹೆಚ್ಚು ಸಮಯವನ್ನು ಕಳೆದಷ್ಟು ಜೀವನದಲ್ಲಿ ಜ್ಞಾನದ ಅಭಿವೃದ್ಧಿಯನ್ನು ಹೊಂದಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಲೈಬ್ರೆರಿಯನ್ ಪ್ರೊಫೆಸರ್ ವಿಜಯಲತಾ ಡಿಜಿಟಲ್ ಲೈಬ್ರರಿಯ ಮಹತ್ವವನ್ನು ತಿಳಿಸಿದರು. E Edwise…
ಕುಶಾಲನಗರ NEWS DESK ನ.19 : ಕುಶಾಲನಗರ ಐತಿಹಾಸಿಕ ದೇವಾಲಯ ಶ್ರೀ ಗಣಪತಿ ದೇವರ ರಥೋತ್ಸವ ಸಾವಿರಾರು ಸಂಖ್ಯೆಯ ಭಕ್ತಾದಿಗಳ ಉಪಸ್ಥಿತಿಯಲ್ಲಿ ಭಕ್ತಿ ಭಾವದಿಂದ ಜರುಗಿತು. ಕಾರ್ತಿಕ ಮಾಸ ಕೃಷ್ಣ ಪಕ್ಷದಲ್ಲಿ ನಡೆಯುವ ದೇವಾಲಯದ ರಥೋತ್ಸವ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಬೆಳಗಿನಿಂದಲೇ ದೇವರಿಗೆ ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ ಪುಷ್ಪಾಲಂಕಾರ ರಥ ಪೂಜೆ ರಥ ಬಲಿ ನಂತರ ಗಣಪತಿ ದೇವರನ್ನು ರಥದಲ್ಲಿ ಪ್ರತಿಷ್ಠಾಪಿಸಿ ಭಕ್ತಾದಿಗಳು ರಥ ಬೀದಿಯ ಮೂಲಕ ಆಂಜನೇಯ ದೇವಾಲಯ ತನಕ ಘೋಷಣೆಗಳೊಂದಿಗೆ ಭಕ್ತಿಭಾವದಿಂದ ಎಳೆದರು. ದೇವಾಲಯದ ಪ್ರಧಾನ ಅರ್ಚಕರಾದ ಆರ್ ಕೆ ನಾಗೇಂದ್ರ ಬಾಬು, ರಾಘವೇಂದ್ರ ಭಟ್ ಮತ್ತು ಅರ್ಚಕರ ತಂಡದಿಂದ ಪೂಜಾ ವಿಧಿ ವಿಧಾನಗಳು ಜರಗಿದವು. ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ಜಾತ್ರೋತ್ಸವ ಅಂಗವಾಗಿ ದೇವಾಲಯದ ಒಳ ಆವರಣವನ್ನು ವಿಶೇಷವಾಗಿ ಹೂಗಳಿಂದ ಸಿಂಗರಿಸಲಾಗಿತ್ತು. ಅಯ್ಯಪ್ಪ ಸ್ವಾಮಿ ದೇವರ ಮಾಲಾಧಾರಿಗಳು ರಥದ ಮುಂದೆ ಕರ್ಪೂರ ಆರತಿ ಬೆಳಗಿ ಅಯ್ಯಪ್ಪ ಸ್ವಾಮಿ ಘೋಷಣೆ ಕೂಗಿದರು. …
ಸುಂಟಿಕೊಪ್ಪ,ನ.19 NEWS DESK : ಮಕ್ಕಳ ದಿನಾಚರಣೆ ಅಂಗವಾಗಿ ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಕವಾಯತ್ ನಡೆಸಲು ಉಪಯುಕ್ತವಾದ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಪಂಚಾಯಿತಿ ಸದಸ್ಯೆ ನಾಗರತ್ನ, ಸಮಾಜ ಸೇವಕ ಇಚ್ಚಾ ರಶೀದ್ ಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳಿಗೆ ಕವಾಯತ್ ನಡೆಸಲು ಬೇಕಾದ ಡಂಬಲ್ಸ್, ಲೇಜಿಮ್ಸ್ ಹಾಗೂ ರಿಂಗ್ಗಳನ್ನು ಶಾಲೆಯ ಮುಖ್ಯೋಪಾದ್ಯಾಯನಿ ಹೇಮಕುಮಾರಿ, ಸಹಶಿಕ್ಷಕರುಗಳಾದ ಅನಿತಾ, ಮೀನಾಕುಮಾರಿ ಅವರಿಗೆ ನೀಡಿದರು.
ಸುಂಟಿಕೊಪ್ಪ ನ.19 NEWS DESK : ಕೊಡಗು ಜಿಲ್ಲಾ ಎಸ್.ಡಿ.ಟಿ.ಯು ಸಮಿತಿ ವತಿಯಿಂದ ಸುಂಟಿಕೊಪ್ಪ ಠಾಣಾಧಿಕಾರಿ ಚಂದ್ರಶೇಖರ ಮತ್ತು ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಲಾಯಿತು. ಅಂತರಾಜ್ಯದ ವ್ಯಕ್ತಿಯೊಬ್ಬರನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣಾ ಅಧಿಕಾರಿಗಳನ್ನು ಮತ್ತು ತಂಡವನ್ನು ಕೊಡಗು ಜಿಲ್ಲಾ ಸೋಶಿಯಲ್ ಡೆಮೊಕ್ರೆಟಿಕ್ ಟ್ರೇಡ್ ಯೂನಿಯನ್ ತಂಡದ ಪ್ರಮುಖರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಎಸ್.ಡಿ.ಟಿ.ಯು ಜಿಲ್ಲಾಧ್ಯಕ್ಷ ಅಣ್ಣ ಶರೀಫ್, ಉಪಾಧ್ಯಕ್ಷ ಇಬ್ರಾಹಿಂ ಹೊಸತೋಟ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎ.ಅಬ್ದುಲ್ ರಜಾಕ್, ಸಂಘಟನಾ ಕಾರ್ಯದರ್ಶಿ ಲತೀಫ್ ಸುಂಟಿಕೊಪ್ಪ, ಸದಸ್ಯರಾದ ಆಲಿ, ಪಿರೋಜ್ ಸೇರಿದಂತೆ ಕೂಡಿಗೆ ಯೂನಿಯನ್ ಸದಸ್ಯರು ಹಾಜರಿದ್ದರು.
ಮಡಿಕೇರಿ NEWS DESK ನ.19 : ಮದ್ರಾಸ್ ಎಂಜಿನಿಯರಿOಗ್ ಆರ್ಮಿ ಗ್ರೂಪ್ನ ಬೈಕ್ ರ್ಯಾಲಿ ಮಡಿಕೇರಿ ನಗರದಲ್ಲಿ ನಡೆಯಿತು. ಬೆಳಗಾವಿಯಿಂದ ಹೊರಟ ಬೈಕ್ ರ್ಯಾಲಿ ಧಾರವಾಡ, ಹುಬ್ಬಳ್ಳಿ ಮೂಲಕ ಮಡಿಕೇರಿಗೆ ತಲುಪಿತು. ನಗರದ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಿತು. ಮಾಜಿ ಸೈನಿಕರ ಸಂಘದ ಅಧ್ಯಕ್ಷ ಪಿ.ಕೆ.ಕುಟ್ಟಪ್ಪ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು ನ.19 NEWS DESK : ಸಂಬಾರ ಪದಾರ್ಥಗಳ ರಾಣಿ ಎಂದೇ ಕರೆಯಲ್ಪಡುವ ಘಮ ಘಮಿಸುವ ಏಲಕ್ಕಿ ಯ ಬೆಲೆ ದಿನೇ ದಿನೇ ಏರುಮುಖವಾಗಿ ಸಾಗುತ್ತಿದೆ. ಕಳೆದ ಮೂರು ತಿಂಗಳಿನಲ್ಲಿ ಕಿಲೋಗೆ 500 ರೂಪಾಯಿ ಏರಿಕೆ ದಾಖಲಿಸಿರುವ ಏಲಕ್ಕಿ ಈಗ ದೇಶೀ ಮಾರುಕಟ್ಟೆಯಲ್ಲಿ ಉತ್ತಮ ದರ್ಜೆಯದಕ್ಕೆ ಕಿಲೋಗೆ 2500 ರೂಪಾಯಿಗಳಿಂದ 2800 ರೂಪಾಯಿಗಳವರೆಗೂ ಮಾರಾಟವಾಗುತ್ತಿದೆ. ಆದರೆ ಈ ವರ್ಷ ವಿಶ್ವದ ಮೂರನೇ ಅತೀ ದೊಡ್ಡ ಏಲಕ್ಕಿ ಉತ್ಪಾದಕ ದೇಶ ಆಗಿರುವ ಗ್ವಾಟೆಮಾಲಾದಲ್ಲಿ ಪ್ರತೀಕೂಲ ಹವಾಮಾನದ ಕಾರಣದಿಂದಾಗಿ ಉತ್ಪಾದನೆ ಶೇಕಡಾ 40 ರಿಂದ 50 ರಷ್ಟು ಕುಸಿಯಲಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಸರಬರಾಜಿನ ಕೊರತೆ ಇರುವುದರಿಂದ ಸಹಜವಾಗಿಯೇ ಏರಿಕೆ ಆಗುತಿದ್ದು ಜನವರಿ-ಮಾರ್ಚ್ ವೇಳೆಗೆ ಕಿಲೋಗೆ 3500 ಮೀರಲಿದೆ ಎಂದು ಮಾರುಕಟ್ಟೆ ತಜ್ಞರು ಆಭಿಪ್ರಾಯಿಸಿದ್ದಾರೆ. ವಿಶ್ವದ ಒಟ್ಟು ಏಲಕ್ಕಿ ಉತ್ಪಾದನೆ ಸುಮಾರು 1.90 ಲಕ್ಷ ಟನ್ ಗಳಷ್ಟಿದ್ದು ಭಾರತ ಏಲಕ್ಕಿ ಉತ್ಪಾದನೆಯಲ್ಲಿ (41,000 ಟನ್ ) ವಿಶ್ವದಲ್ಲೇ ಮೊದಲ ಸ್ಥಾನದಲ್ಲಿ…
ನಾಪೋಕ್ಲು ನ.19 NEWS DESK : ಬಲ್ಲಮಾವಟಿಯ ಭಜರಂಗಿ ಯೂಥ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಮೂರನೇ ವರ್ಷದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಪ್ರಶಸ್ತಿಯನ್ನು ಕಟ್ಟೆಮಾಡುವಿನ ಬ್ಯಾಕ್ ಈಗಲ್ಸ್ ತಂಡ ಮುಡಿಗೇರಿಸಿಕೊಂಡಿತು. ಮೂರ್ನಾಡಿನ ಎನ್.ಸಿ.ಡಿ ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಅಂತಿಮ ಪಂದ್ಯದಲ್ಲಿ ಎಂ.ಎಸ್.ಡಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ ಎಂಟು ಓವರ್ ಗಳಲ್ಲಿ 42 ರನ್ ಗಳಿಸಿತು. ಇದನ್ನು ಬೆನ್ನಟ್ಟಿದ ಬ್ಲ್ಯಾಕ್ ಈಗಲ್ಸ್ ತಂಡ 6.5 ನಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿ ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ತಂಡಕ್ಕೆ ರಾಟೆ ದೇವಸ್ಥಾನದ ಅಪ್ಪಣ್ಣ ಪ್ರಾಯೋಜಿಸಿದ ಟ್ರೋಫಿ ಹಾಗೂ 33,333 ನಗದು ಬಹುಮಾನಗಳನ್ನು ವಿತರಿಸಲಾಯಿತು. ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ಎಡಿಕೇರಿ ಜಗನ್ನಾಥ್ ಪ್ರಾಯೋಜಿಸಿದ ಟ್ರೋಫಿ ಹಾಗೂ 22,222 ರೂ.ನಗದು ನೀಡಿ ಪುರಸ್ಕರಿಸಲಾಯಿತು. ಭಜರಂಗಿ ಯೂತ್ ಕ್ಲಬ್ ಅಧ್ಯಕ್ಷ ಎಡಿಕೇರಿ ಪ್ರಸನ್ನ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ನೇತಾಜಿ…






