ಲೇಖಕ: admin

ಮಡಿಕೇರಿ ನ.19 NEWS DESK : ಮಾದಾಪುರ ಜಂಬೂರು ಬಾಣೆಯ ನಿವಾಸಿ ವಿಜಯ ಕುಮಾರ್ (ಬಾಬು) ಅವರು ನಿಧನರಾದರು. ಮೃತರ ಅಂತ್ಯಕ್ರಿಯೆ ಇಂದು (ನ.19) ಮಡಿಕೇರಿಯ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಚೆಟ್ಟಳ್ಳಿ ನ.19 NEWS DESK : ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಕೇಂದ್ರದಲ್ಲಿ ಮೂರುದಿನಗಳ ಕಾಲ ಜೇನುಕೃಷಿ ತರಬೇತಿ ಕಾರ್ಯಕ್ರಮ ನಡೆಯಿತು. ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಕೇಂದ್ರದಲ್ಲಿ ಪ್ರಾರಂಭಗೊಂಡು ನಂತರ ಪೊನ್ನಂಪೇಟೆಯ ಅರಣ್ಯ ಕಾಲೇಜಿನಲ್ಲಿ ಜೇನುಕೃಷಿ ಪ್ರಾತ್ಯಕ್ಷಿಕಾ ತರಬೇತಿಯನ್ನು ಕಾಲೇಜಿನ ಮುಖ್ಯಸ್ಥರಾದ ಡಾ.ಕೆಂಚಾರೆಡ್ಡಿ ನೀಡಿದರು. ನ.14ರಂದು ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಕೇಂದ್ರದಲ್ಲಿ ಸಮಾರೋಪ ನೆರವೇರಿತು.  ಕಾರ್ಯಾಗಾರದಲ್ಲಿ  ಕೇಂದ್ರದ ಮುಖ್ಯಸ್ಥ ಡಾ. ರಾಜೇಂದ್ರನ್, ಹಣ್ಣಿನ ವಿಜ್ಞಾನಿಗಳಾದ ಡಾ.ಮುರುಳಿದರ್, ಡಾ.ನಯನ್ ದೀಪಕ್.ಜಿ, ಡಾ.ಎ.ಟಿರಾಣಿ ಹಾಜರಿದ್ದರು. ಕಾರ್ಯಕ್ರಮದಲ್ಲಿ ಗೋಣಿಕೊಪ್ಪ ಕಾಫಿಮಂಡಳಿಯ ವಿಸ್ತರಣಾ ಉಪನಿರ್ದೇಶಕರಾದ ಡಾ.ಶ್ರೀದೇವಿ, ಕೊಡಗು ಜಿಲ್ಲಾ ಜೇನುಕೃಷಿಕರ ಸಂಘದ ಮುಖ್ಯಸ್ಥ ಎನ್.ಸಿ.ಸುಬ್ಬಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಐಐಹೆಚ್ಆರ್ ಗೀತೆಯೊಂದಿಗೆ ಕಾರ್ಯಾಗಾರ ಪ್ರಾರಂಭಗೊಂಡು ಕೀಟ ವಿಜ್ಞಾನಿ ಡಾ. ಎ.ಟಿ.ರಾಣಿ ಸ್ವಾಗತಿಸಿದರು. ವಿಜ್ಞಾನಿ ಡಾ. ಬಿ.ಎಂ‌.ಮುರುಳಿಧರ್ ವಂದಿಸಿದರು. ಚೈತ್ರ ನಿರೂಪಿಸಿದರು. ಕಾರ್ಯಾಗಾರದ ಮೇಲ್ವಿಚಾರಕ ಕೇಂದ್ರದ ಕೀಟ ವಿಜ್ಞಾನಿ ಡಾ.ರಾಣಿ ಜೇನು ಕೃಷಿಯ ಬಗ್ಗೆ ತರಬೇತಿ ನೀಡಿದರು.  

Read More

ಮಡಿಕೇರಿ ನ.19 NEWS DESK : ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ, ಕೊಳಕೇರಿ ವಿವಿಧೊದ್ಧೇಶ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ‘ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವ’ ದಿನಾಚರಣೆಯನ್ನು ವೆಸ್ಟ್ ಕೊಳಕೇರಿಯ ಭಗವತಿ ದೇವಸ್ಥಾನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ, 1905 ರಲ್ಲಿ ಗದಗಿನ ಕಣಗಿನಹಾಳ ಗ್ರಾಮದಲ್ಲಿ ಶಿದ್ದನಗೌಡ ಸಂಣರಾಮನಗೌಡ ಪಾಟೀಲರು ಪ್ರಪ್ರಥಮ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸುವುದರ ಮೂಲಕ ಪ್ರಾರಂಭಗೊಂಡ ಕ್ರಾಂತಿ ಇಂದು ಎಲ್ಲಾ ವಿಧಧ ಸಹಕಾರ ಸಂಘವನ್ನು ಸ್ಥಾಪಿಸುವಷ್ಟರ ಮಟ್ಟಿಗೆ ಬೆಳೆದಿದೆ. ಅದಕ್ಕೆ ಸಾಕ್ಷಿ ಎಂಬಂತೆ ಕೊಳಕೇರಿ ಸಹಕಾರ ದವಸ ಭಂಡಾರವು ಸಹಕಾರ ಸಪ್ತಾಹವನ್ನು ಆಚರಿಸುತ್ತಿರುವುದಕ್ಕೆ ಅಭಿನಂದನೆಗಳನ್ನು ತಿಳಿಸಿದರು. ಸಹಕಾರ ದವಸ ಭಂಡಾರವನ್ನು ಭತ್ತದ ರೂಪದಲ್ಲಿ ಕಾರ್ಯನಿರ್ವಹಿಸುವ ಉದ್ದೇಶದಿಂದ ಪ್ರಾರಂಭಿಸಲಾಯಿತು. ಅಂದು ತುತ್ತು ಅನ್ನಕ್ಕೂ ಕ್ಷಾಮ ತಲೆದೋರಿದ ಸಂದರ್ಭದಲ್ಲಿ…

Read More

ಮಡಿಕೇರಿ ನ.19 NEWS DESK : ರಾಜ್ಯ ಒಲಿಂಪಿಕ್ ಸಂಸ್ಥೆ, ರಾಜ್ಯ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನಲ್ಲಿ ನಡೆದ ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಂಡರ್ 14 ಬಾಲಕರ ತಂಡವು ಫೈನಲ್ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟ ನಡೆಸಿ ಹಾಸನ ತಂಡದ ವಿರುದ್ಧ 1-0 ಗೋಲುಗಳ ಅಂತರದಿಂದ ಪರಾಭವಗೊಂಡು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಬೆಂಗಳೂರಿನ ರಾಜ್ಯ ಫುಟ್ಬಾಲ್ ಸಂಸ್ಥೆಯ ಮೈದಾನದಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಬಾಲಕರ ತಂಡವು ಮೊದಲ ಪಂದ್ಯವನ್ನು 3-1 ಗೋಲುಗಳ ಅಂತರದಿಂದ ಮೈಸೂರು ತಂಡವನ್ನು ಮಣಿಸಿತು. ದ್ವಿತೀಯ ಪಂದ್ಯವನ್ನು ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು 3-1 ಗೋಲುಗಳ ಅಂತರದಿಂದ ಸೋಲಿಸಿತು.  ಮೂರನೇ ಪಂದ್ಯದಲ್ಲಿ ದಾವಣಗೆರೆ ಜಿಲ್ಲಾ ತಂಡವನ್ನು 4-1 ಗೋಲುಗಳ ಅಂತರದಿಂದ ಮಣಿಸಿ ಬಾಲಕರ ಎ ಗುಂಪಿನಲ್ಲಿ ಪ್ರಥಮ ಸ್ಥಾನಗಳಿಸಿ ಫೈನಲ್ ಗೆ ಲಗ್ಗೆ ಇಟ್ಟಿತ್ತು.ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್…

Read More

ನಾಪೋಕ್ಲು ನ.19 NEWS DESK : ಬಲ್ಲಮಾವಟಿ ಗ್ರಾಮದ ಭಜರಂಗಿ ಯೂತ್ ಕ್ಲಬ್ ವತಿಯಿಂದ ನೇತಾಜಿ ಪ್ರೌಢಶಾಲಾ ಆಟದ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ವರ್ಷದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯು ಕ್ರೀಡಾ ಪ್ರೇಮಿಗಳಿಗೆ ಅತ್ಯಂತ ಕುತೂಹಲವನ್ನು ಕೆರಳಿಸಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೋರಂಗಲ ಜ್ಞಾನೋದಯ ಶಾಲೆಯ ಮುಖ್ಯಸ್ಥೆ ಶ್ವೇತಾ ಚಂಗಪ್ಪ, ಚಿಯಕ್‍ಪೂವಂಡ ಮಿಥುನ್ ಚಂಗಪ್ಪ, ನೇತಾಜಿ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹಾಗೂ ಭಜರಂಗಿ ಯೂತ್ ಕ್ಲಬ್ ನ ಅಧ್ಯಕ್ಷ ಪ್ರಸನ್ನ ಹಾಗೂ ಕ್ರೀಡಾಪಟುಗಳನ್ನು ಪರಿಚಯಿಸಿಕೊಂಡು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ NEWS DESK ನ.18 : ಕೊಡಗು ಜಿಲ್ಲೆಯ ವಿವಿಧ ದೇವಾಯಗಳಲ್ಲಿ ಕಳ್ಳತನ ಮಾಡಿದ ಆರೋಪದಡಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನ ಶನಿವಾರಸಂತೆ ಪಟ್ಟಣದ ಪೇಟೆ ರಾಮ ಮಂದಿರ ದೇವಸ್ಥಾನ ಮತ್ತು ತ್ಯಾಗರಾಜ ಕಾಲೋನಿಯ ವಿಜಯ ವಿನಾಯಕ ದೇವಸ್ಥಾನಗಳಲ್ಲಿ ಹುಂಡಿಯ ಹಣವನ್ನು ಕಳ್ಳತನ ಮಾಡಿದ ಆರೋಪದಡಿ ಅಂತರ್ ಜಿಲ್ಲಾ ಆರೋಪಿ ಹಾಸನ ನಗರದ ತಣ್ಣಿರುಹಳ್ಳ-ವಿಜಯನಗರ ನಿವಾಸಿ ಮುಬಾರಕ್ ಪಾಷ (34) ಎಂಬಾತನನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆಯ ಶನಿವಾರವಾರಸಂತೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಿವಿಧ ದೇವಸ್ಥಾನಗಳ ಹುಂಡಿಯ ಹಣವನ್ನು ಕಳವು ಮಾಡಿದ ಪ್ರಕರಣ ದಾಖಲಾಗಿತ್ತು. ಡಿವೈಎಸ್‌ಪಿ ಗಂಗಾಧರಪ್ಪ ಆರ್.ವಿ, ಶನಿವಾರಸಂತೆ ಪೊಲೀಸ್ ಠಾಣೆಯ ಅಧಿಕಾರಿಗಳಾದ ರಾಜೇಶ್.ಕೆ, ಹೆಚ್.ಸಿ.ಗೋವಿಂದರಾಜು, ಚಂದ್ರ.ಹೆಚ್.ವೈ ಹಾಗೂ ಠಾಣೆಯ ಅಪರಾಧ ಪತ್ತೆ ದಳದ ಸಿಬ್ಬಂದಿಗಳು, ತಾಂತ್ರಿಕ ಸಿಬ್ಬಂದಿಗಳ ತನಿಖಾ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಲಾಯಿತು. ಆರೋಪಿ ಮುಬಾರಕ್ ಪಾಷನನ್ನು   ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಕೃತ್ಯಕ್ಕೆ ಬಳಸಿದ್ದ…

Read More

ಮಡಿಕೇರಿ NEWS DESK ನ.18 : ದಾಸಶ್ರೇಷ್ಠ, ಸಂತಕವಿ ಕನಕದಾಸರು  ತಮ್ಮ ಕೀರ್ತನೆಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದಾರೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜದಲ್ಲಿನ ಅಸಮಾನತೆ, ಕಂದಾಚಾರ ಹಾಗೂ ಮೌಢ್ಯವನ್ನು ಕೀರ್ತನೆಗಳ ಮೂಲಕ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದು ಡಾ.ಮಂತರ್‌ ಗೌಡ ಅವರು ವಿವರಿಸಿದರು.     ಕನಕದಾಸರ ಕೀರ್ತನೆಗಳು ಸಾರ್ವಕಾಲಿಕವಾಗಿದ್ದು, ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಕನಕದಾಸರ ಕೀರ್ತನೆಗಳು ಮತ್ತು ಮಾರ್ಗದರ್ಶನವನ್ನು ಅಳವಡಿಸಿಕೊಳ್ಳು ವಂತಾಗಬೇಕು ಎಂದು ಡಾ.ಮಂತರ್ ಗೌಡ ಅವರು ಪ್ರತಿಪಾದಿಸಿದರು.       ಕನಕದಾಸರು ಸಮಾಜದಲ್ಲಿರುವ ತಾರತಮ್ಯ ಹೋಗಲಾಡಿಸಲು ಪ್ರಯತ್ನಿಸಿದ್ದಾರೆ. ಎಲ್ಲರೂ ಸಮಾನವಾಗಿ ಬದುಕಬೇಕು ಎಂಬುದನ್ನು ಒತ್ತಿ ಹೇಳಿದ್ದಾರೆ ಎಂದು ಶಾಸಕರು ನುಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಕನಕದಾಸರ ಪ್ರಸಿದ್ಧ ಕೀರ್ತನೆಯಾದ ಕುಲ-ಕುಲವೆಂದು ಹೊಡೆದಾಡದಿರಿ ನಿಮ್ಮ…

Read More

ಮಡಿಕೇರಿ NEWS DESK ನ.18 : 1965ರ ಇಂಡೋ-ಪಾಕಿಸ್ತಾನ ಯುದ್ದದಲ್ಲಿ ವೀರಮರಣನಪ್ಪಿದ ನಾಯಕ್ ಕೂಕಂಡ ಎನ್. ಪೊನ್ನಪ್ಪ ಅವರ ಹೆಸರನ್ನು ಸ್ಮರಣೆಗಾಗಿ ಪೊನ್ನಂಪೇಟೆಯ ಜೋಡುಬೀಟಿ- ಕುಂದ ಸಂಪರ್ಕ ರಸ್ತೆಗೆ ಇಡಲಾಗಿದೆ. ನೂತನ ನಾಮಕರಣದ ರಸ್ತೆ ಉದ್ಘಾಟನೆ ಮಾಡಿ ಮಾತನಾಡಿದ ಅಖಿಲ ಕರ್ನಾಟಕ ಮಾಜಿ ಯೋಧರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಕೊಟ್ಟುಕತ್ತಿರ ಸೋಮಣ್ಣ ಅದೆಷ್ಟೋ ವೀರಯೋಧರು ದೇಶಕ್ಕಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಹುತಾತ್ಮರಾಗಿದ್ದಾರೆ. ಎಲ್ಲೆಡೆ ವೀರಯೋಧರಿಗೆ ಗೌರವ ಸಲ್ಲಿಸುವ ಕಾರ್ಯವಾಗಬೇಕೆಂದರು. ಕೂಕಂಡ ಪೊನ್ನಪ್ಪ ಅವರು ಯುದ್ದದಲ್ಲಿ ಶತ್ರುಪಡೆ‌ಯೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದರು. ಅವರ ದೇಶಪ್ರೇಮ ಶ್ಲಾಘನೀಯವೆಂದರು. ಮಾಜಿ ಸೈನಿಕರ ಸಂಘದ ಪೊನ್ನಂಪೇಟೆ ಅಧ್ಯಕ್ಷ ಐನಂಡ ಸುಬ್ರಮಣಿ ಮಂದಣ್ಣ ಮಾತನಾಡಿ ವೀರಯೋಧ ಕೂಕಂಡ ಪೊನ್ನಪ್ಪ ಸ್ಮಾರಕ ಭವನ ನಿರ್ಮಿಸುವ ಬಗ್ಗೆ ಪ್ರಸ್ತಾಪಿಸಿದರು. ಊರಿನ ಹಿರಿಯರು, ಸಮಾಜ ಸೇವಕರು ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ  ಸದಸ್ಯರಾದ ಮೂಕಳೆರ ಕುಶಾಲಪ್ಪ ಮಾತನಾಡಿ ಕೂಕಂಡ ಪೊನ್ನಪ್ಪ ಅವರ ಸಾಹಸ ಹಾಗೂ ಸೇನಾ ಸೇವೆಯ ಬಗ್ಗೆ ವಿವರಿಸಿದರು. ಹಳ್ಳಿಗಟ್ಟು ದೇವಾಲಯ ಸಮಿತಿ ಅಧ್ಯಕ್ಷ ಚಮ್ಮಟ್ಟಿರ ಪ್ರವೀಣ್ ಉತ್ತಪ್ಪ‌ ಮಾತನಾಡಿ…

Read More

ವಿರಾಜಪೇಟೆ NEWS DESK ನ.18 : ವಿರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಗ್ಗಳಕ್ಕೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯು ಲಭಿಸಿದೆ. ಕರ್ನಾಟಕ ಚಲನಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ, ಧಾರವಾಡ ಹಾಗೂ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್, ಚೇತನ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸಹಭಾಗಿತ್ವದೊಂದಿಗೆ ಶಾಲೆಯ ಪ್ರಗತಿಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಭಾನುವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ನ ಶ್ರೀ ಕೃಷ್ಣರಾಜ ಪರಿಷನ್ ಮಂದಿರದಲ್ಲಿ ಜರುಗಿದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಶಾಲೆಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಕಮಲಮ್ಮ ಅವರು ಪ್ರಶಸ್ತಿಯನ್ನು ಪಡೆದುಕೊಂಡರು. ಗ್ರಾಮಸ್ಥರು, ಪೋಷಕರು, ಇಲಾಖೆ ಹಾಗೂ ದಾನಿಗಳ ಸಹಕಾರದಿಂದ ಶಾಲೆ ಅಭಿವೃದ್ಧಿ ಕಂಡಿದ್ದು, ಶಾಲೆಗೆ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ ಎಂದು ಕಮಲಮ್ಮ ಪ್ರತಿಕ್ರಿಯೆ ಹರ್ಷ ವ್ಯಕ್ತಪಡಿಸಿದರು.

Read More

ಮಡಿಕೇರಿ NEWS DESK ನ.18 : ಮದ್ರಾಸ್ ಎಂಜಿನಿಯರಿಂಗ್ ಆರ್ಮಿ ಗ್ರೂಪ್‌ನ ಬೈಕ್ ರ್ರಾಲಿಯು ನ.19 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತಕ್ಕೆ ಆಗಮಿಸಲಿದೆ. ಈಗಾಗಲೇ ಬೆಳಗಾವಿಯಿಂದ ಹೊರಟು ಧಾರವಾಡ, ಹುಬ್ಬಳ್ಳಿ ಮೂಲಕ  ನವೆಂಬರ್ 19 ರಂದು ಬೆಳಿಗ್ಗೆ 9:30 ಗಂಟೆಗೆ ಮಡಿಕೇರಿಗೆ ತಲುಪಲಿದೆ. ನಂತರ ನಗರದ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಮಾಜಿ ಸೈನಿಕ ಸಂಘದ ಅಧ್ಯಕ್ಷ ಪಿ.ಕೆ.ಕುಟ್ಟಪ್ಪ ಅವರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

Read More