ಮಡಿಕೇರಿ ನ 18 NEWS DESK : ಬ್ರಹ್ಮಗಿರಿ ಸಹೋದಯ ಅಥ್ಲೆಟಿಕ್ ಪಂದ್ಯಾವಳಿಯಲ್ಲಿ ನಗರದ ಕೊಡಗು ವಿದ್ಯಾಲಯ ತಂಡವು ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ನಗರದ ಕೊಡಗು ವಿದ್ಯಾಲಯದ ಮೈದಾನದಲ್ಲಿ ನಡೆದ ಬ್ರಹ್ಮಗಿರಿ ಸಹೋದಯ ಅಥ್ಲೆಟಿಕ್ ಪಂದ್ಯಾವಳಿಯಲ್ಲಿ 8 ಸಿಬಿಎಸ್ಇ ಶಾಲೆಗಳ ಒಟ್ಟು 300 ಕ್ರೀಡಾಪಟುಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಸೈನಿಕ್ ಶಾಲೆ ಕೂಡಿಗೆ, ಜ್ಞಾನಗಂಗಾ ರೆಸಿಡೆನ್ಷಿಯಲ್ ಶಾಲೆ ಕುಶಾಲನಗರ, ನ್ಯಾಷನಲ್ ಅಕಾಡೆಮಿ ಗೋಣಿಕೊಪ್ಪ, ಎಸ್ಎಮ್ಎಸ್ ವಿದ್ಯಾಪೀಠ ಅರಮೇರಿ, ಅಂಕೂರು ಪಬ್ಲಿಕ್ ಶಾಲೆ ನಾಪೋಕ್ಲು, ಕುರುಂಜಿ ವೆಂಕಟರಮಣ ಪಬ್ಲಿಕ್ ಶಾಲೆ ಸುಳ್ಯ, ಕ್ರೆಸೆಂಟ್ ಶಾಲೆ ಮಡಿಕೇರಿ ಮತ್ತು ಆತಿಥೇಯ ಶಾಲೆ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಿದವು. ಪಂದ್ಯಾಟವನ್ನು ಭಾರತೀಯ ಕ್ರೀಡಾ ಪ್ರಾಧಿಕಾರದ ಸಹಾಯಕ ನಿರ್ದೇಶಕಿ ಮಿನ್ನಿ ಉಣ್ಣಿರಾಜ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಕೆ.ಎಸ್. ಸುಮಿತ್ರಾ, ಆಡಳಿತ ವ್ಯವಸ್ಥಾಪಕ ಪಿ.ರವಿ, ಶಿಕ್ಷಕರು ಮತ್ತು ತಂಡದ ಕೋಚ್ಗಳು ಹಾಜರಿದ್ದರು. ಕೊಡಗು ವಿದ್ಯಾಲಯವು ಪಂದ್ಯಾವಳಿಯಲ್ಲಿ ಚಾಂಪಿಯನ್ ಶಿಪ್ ಅನ್ನು ಗೆಲ್ಲುವ ಮೂಲಕ ಕ್ರೀಡಾ ಕೌಶಲ್ಯವನ್ನು ನಿರೂಪಿಸಿತು. ಪಂದ್ಯಾವಳಿಯ…
ಲೇಖಕ: admin
ಬೆಂಗಳೂರು NEWS DESK ನ.18 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಮತ್ತು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಿದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಶಾಸಕರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಬೆಂಗಳೂರು ನ.18 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಣಮಶ್ರೀ ಪ್ರತಿಷ್ಠಾನ ಆಯೋಜಿಸಿದ್ದ 19ನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ, ಪ್ರಶಸ್ತಿ ವಿಜೇತ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಮಡಿಕೇರಿ ನ.18 NEWS DESK : ಅನ್ನದ ವ್ಯಾಮೋಹದ ಬಲೆಯಲ್ಲಿ ನಮ್ಮನ್ನು ನಾವು ಸಿಕ್ಕಿಸಿ ಹಾಕಿಕೊಂಡಿದ್ದೇವೆ. ಕನ್ನಡ ನೆಲದ ನೀರನ್ನು ಕುಡಿಯುತ್ತೇವೆ. ಕನ್ನಡ ಅನ್ನದ ಭಾಷೆಯಾಗಬೇಕು. ಉದ್ಯೋಗದ ಭಾಷೆಯಾಗಬೇಕು ಆಗ ಮಾತ್ರ ಕನ್ನಡ ಉಳಿಯಲು ಸಾಧ್ಯ. ಉದ್ಯೋಗಕ್ಕಾಗಿ ಆಂಗ್ಲ ಭಾಷೆಯನ್ನು ಮೆಚ್ಚಿಕೊಳ್ಳುವುದು ಅವಶ್ಯವಾಗಿದೆ ಎಂದು ಮಡಿಕೇರಿಯ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಪ್ರಸನ್ನ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ, ಸಹಯೋಗದಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಆಂಗ್ಲ ಭಾಷೆ ಇಂದು ಉದ್ಯೋಗ ಕ್ಷೇತ್ರವನ್ನು ಮಾತ್ರವಲ್ಲದೆ ಎಲ್ಲರ ಮನೆಯನ್ನು ಕೂಡ ಅಕ್ರಮಿಸಿಕೊಂಡಿದೆ. ನಮ್ಮ ಮನೆಯಲ್ಲಿ ನಾವು ನಮ್ಮ ಮಾತೃಭಾಷೆಯನ್ನು ಮಾತನಾಡಬೇಕು. ವ್ಯವಹಾರಕ್ಕೆ ಮಾತ್ರ ಆಂಗ್ಲ ಭಾಷೆಯನ್ನು ಉಪಯೋಗಿಸಿದರೆ ನಮ್ಮ ಭಾಷೆಯ ಉಳಿವು ಮತ್ತು ಬೆಳವಣಿಗೆ ಸಾಧ್ಯ ಎಂದರು. ಕಾರ್ಯಕ್ರಮದ ಮುಖ್ಯ…
ಸೋಮವಾರಪೇಟೆ ನ.18 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಪ್ರದೀಪ್ ಪುನರಾಯ್ಕೆಯಾದರು. ಸೋಮವಾರಪೇಟೆ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ಸಮಿತಿ ನಿರ್ದೇಶಕರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ಖಜಾಂಚಿಯಾಗಿ ಮಹೇಶ್, ರಾಜ್ಯ ಪರಿಷತ್ ಸದಸ್ಯರಾಗಿ ತನುಜ ಆಯ್ಕೆಯಾದರು.
ಸೋಮವಾರಪೇಟೆ ನ.18 NEWS DESK : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಕಾರ್ತಿಕ ಪೌರ್ಣಿಮೆ ಅಂಗವಾಗಿ ಹೊನ್ನಮ್ಮನ ಕೆರೆ ದೇವಾಲಯದಲ್ಲಿ ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ ಕಾರ್ಯಕ್ರಮ ನಡೆಯಿತು. ಸಮಿತಿ ಪದಾಧಿಕಾರಿ ಪ್ರದೀಪ್ ಕುಮಾರ್ ಮಾತನಾಡಿ, ಈ ಕಾರ್ಯಕ್ರಮದ ಪ್ರಯುಕ್ತ ದೇವಸ್ಥಾನ ಮತ್ತು ಮನೆಗಳಲ್ಲಿ ದೀಪವನ್ನು ಬೆಳಗಿಸಲಾಗುತ್ತದೆ. ದೇಶಾದ್ಯಂತ ದೇವಸ್ಥಾನಗಳಲ್ಲಿ ಸಾಲು ದೀಪಗಳನ್ನು ಬೆಳಗಿಸಲಾಯಿತು. ಹಿಂದೂ ರಾಷ್ಟ್ರದ ಸಂಕಲ್ಪವನ್ನು ಹಿಂದುಗಳು ಹೊಂದಬೇಕು ಎಂದು ಹೇಳಿದರು. ಸಮಿತಿಯ ಸದಸ್ಯರಾದ ಸತೀಶ್, ಪಿ.ಮಧು, ಮಂಜುನಾಥ ಆಚಾರ್ಯ, ವೀರಯ್ಯ ಹಿರೇಮಠ್, ಬಿ.ಹೆಚ್.ಹರೀಶ್, ಉದಯ ಇದ್ದರು.
ಮಡಿಕೇರಿ ನ.18 NEWS DESK : ಅಜಿಲ ಯಾನೆ ನಲಿಕೆ ಸಮಾಜ ಸೇವಾ ಸಮಿತಿಯ 9ನೇ ವಾರ್ಷಿಕೋತ್ಸವವು ಆನ್ಯಾಳದ ದ್ವಾಕ್ರ ಭವನದ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಹಿರಿಯರಾದ ಚಂದಪ್ಪ ಕಾಂತುಬೈಲು ಉದ್ಘಾಟಿಸಿದರು. ವೇದಿಕೆಯಲ್ಲಿ ಸಮಿತಿಯ ಅಧ್ಯಕ್ಷ ದೇವಪ್ಪ ಕೊಯನಾಡು, ಉಪಾಧ್ಯಕ್ಷ ಚಂದಪ್ಪ ಆನ್ಯಾಳ, ಅತಿಥಿಗಳಾಗಿ ಕೆನರಾ ಬ್ಯಾಂಕ್ ಉದ್ಯೋಗಿ ಕುಮಾರ ಕಲ್ಲುಗುಂಡಿ, ಹಿರಿಯರಾದ ಬಾಬು ಚಟ್ಟೆಕಲ್ಲು ಹಾಜರಿದ್ದರು. ವಾರ್ಷಿಕೋತ್ಸವದ ಪ್ರಯುಕ್ತ ಮಕ್ಕಳಿಗೆ ಗಾಯನ ಮತ್ತು ಲಕ್ಕಿಗೇಮ್, ಮಹಿಳೆಯರಿಗೆ ಗಾಯನ ಮತ್ತು ಹಗ್ಗಜಗ್ಗಾಟ, ಪುರುಷರಿಗೆ ಲಕ್ಕಿಗೇಮ್ ಮತ್ತು ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಿತು. ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಪಾಣರ, ಅಜಿಲ ಯಾನೆ ನಲಿಕೆ ಸೇವಾ ಸಮಿತಿಯ ಮಾಜಿ ಅಧ್ಯಕ್ಷರಾದ ಸುಬ್ರಾಯ ಕಲ್ಮಂಜ, ಪುತ್ತೂರು ತಾಲೂಕು ನಲಿಕೆ ಸೇವಾ ಸಮಿತಿಯ ಅಧ್ಯಕ್ಷರಾದ ರವಿ ಎಂಡೆಸಾಗು ಇವರು ಅತಿಥಿಗಳಾಗಿ ಭಾಗವಹಿಸಿದ್ದರು. ಸಾಧಕರಿಗೆ ಗೌರವಾರ್ಪಣೆ: ಚಾಪೆ ಹೆಣೆದು ಜೀವನ ಕಂಡುಕೊಂಡ ಹಿರಿಯರಾದ ದೇವಕಿ ಆನ್ಯಾಳ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಸಾಧನೆ ಮಾಡಿದ…
ಮಡಿಕೇರಿ ನ.18 NEWS DESK : ರಾಜ್ಯ ಒಲಿಂಪಿಕ್ ಸಂಸ್ಥೆ, ರಾಜ್ಯ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಂಡರ್ 14 ಬಾಲಕರ ತಂಡವು ಇದೇ ಮೊದಲ ಬಾರಿಗೆ ಫೈನಲ್ ಗೆ ಲಗ್ಗೆಯಿಟ್ಟು, ಹೊಸ ಇತಿಹಾಸ ಸೃಷ್ಟಿಸಿದೆ. ಬೆಂಗಳೂರಿನ ರಾಜ್ಯ ಫುಟ್ಬಾಲ್ ಸಂಸ್ಥೆಯ ಮೈದಾನದಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಬಾಲಕರ ತಂಡವು ಮೊದಲ ಪಂದ್ಯವನ್ನು 3-1 ಗೋಲುಗಳ ಅಂತರದಿಂದ ಮೈಸೂರು ತಂಡವನ್ನು ಮಣಿಸಿತು. ದ್ವಿತೀಯ ಪಂದ್ಯವನ್ನು ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು 3-1 ಗೋಲುಗಳ ಅಂತರದಿಂದ ಸೋಲಿಸಿತು. ಮೂರನೇ ಪಂದ್ಯದಲ್ಲಿ ದಾವಣಗೆರೆ ಜಿಲ್ಲಾ ತಂಡವನ್ನು 4-1 ಗೋಲುಗಳ ಅಂತರದಿಂದ ಮಣಿಸಿ ಬಾಲಕರ ಎ ಗುಂಪಿನಲ್ಲಿ ಪ್ರಥಮ ಸ್ಥಾನಗಳಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಫೈನಲ್ ಪಂದ್ಯದಲ್ಲಿ ಕೊಡಗು ತಂಡವು ಹಾಸನ ತಂಡವನ್ನು ಎದುರಿಸಲಿದೆ.ಕೊಡಗು ಬಾಲಕರ ತಂಡದ ತರಬೇತುದಾರರಾಗಿ ಮಡಿಕೇರಿಯ…
ಮಡಿಕೇರಿ ನ.18 NEWS DESK : ಎಸ್.ಕೆ.ಎಸ್.ಎಸ್.ಎಫ್ ಸಿದ್ದಾಪುರ ವಲಯ ಮಟ್ಟದ ಇಸ್ಲಾಮಿಕ್ ಕಲೋತ್ಸವದಲ್ಲಿ ಸಿದ್ದಾಪುರ ಯೂನಿಟ್ ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿದೆ. ನೆಲ್ಲಿಹುದಿಕೇರಿಯಲ್ಲಿ ನಡೆದ ಸಿದ್ದಾಪುರ ವಲಯ ಮಟ್ಟದ ಇಸ್ಲಾಮಿಕ್ ಕಲೋತ್ಸವದಲ್ಲಿ ಸಿದ್ದಾಪುರ ಯೂನಿಟ್ 337 ಅಂಕಗಳೊಂದಿಗೆ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡರು. ದ್ವಿತೀಯ ಸ್ಥಾನವನ್ನು 319 ಅಂಕಗಳೊಂದಿಗೆ ನೆಲ್ಲಿಹುದಿಕೇರಿ ಯೂನಿಟ್ ಪಡೆದುಕೊಂಡಿತ್ತು. ಕೇವಲ ಏಳು ಪ್ರತಿಭೆಗಳು ಭಾಗವಹಿಸಿ ಕಂಡಕರೆ ಯೂನಿಟ್ 151 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆಯಿತು. ಒಟ್ಟು ಆರು ಯೂನಿಟ್ ಗಳು ಭಾಗವಹಿಸಿದ್ದ ಇಸ್ಲಾಮಿಕ್ ಕಲೋತ್ಸವದಲ್ಲಿ ಸಬ್ ಜೂನಿಯರ್,ಜನರಲ್ ಜೂನಿಯರ್, ಜನರಲ್ ಸೀನಿಯರ್ ,ಜನರಲ್ ಸೂಪರ್ ಸೀನಿಯರ್ ಹಾಗೂ ಜನರಲ್ ವಿಭಾಗಗಳಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು. ಒಟ್ಟು 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿದ್ದಾಪುರ ವಲಯ ಮಟ್ಟದ ಇಸ್ಲಾಮಿಕ್ ಕಲೋತ್ಸವದಲ್ಲಿ ಭಾಗವಹಿಸಿದ್ದರು. ಸಬ್ ಜೂನಿಯರ್ ವಿಭಾಗದಲ್ಲಿ ನೆಲ್ಲಿಹುದಿಕೇರಿ ಯೂನಿಟ್,ಜನರಲ್ ಜೂನಿಯರ್ ವಿಭಾಗದಲ್ಲಿ ಸಿದ್ದಾಪುರ, ಜನರಲ್ ಸೀನಿಯರ್ ವಿಭಾಗದಲ್ಲಿ ನೆಲ್ಲಿಹುದಿಕೇರಿ, ಜನರಲ್ ಸೂಪರ್ ಸೀನಿಯರ್ ವಿಭಾಗದಲ್ಲಿ ಸಿದ್ದಾಪುರ ಹಾಗೂ ಜನರಲ್ ಗ್ರೂಪ್…
ಮಡಿಕೇರಿ ನ.18 NEWS DESK : ಪೊನ್ನಂಪೇಟೆಯಲ್ಲಿ ನಡೆದ ಮಹಿಳೆಯರ ಸಬ್ ಜ್ಯೂನಿಯರ್ ರಾಜ್ಯ ಹಾಕಿ ತಂಡದ ತರಬೇತಿ ಶಿಬಿರದಲ್ಲಿ ಕೊಡಗು ವಿದ್ಯಾಲಯದ 10ನೇ ತರಗತಿ ವಿದ್ಯಾಥಿ೯ನಿ ಪರ್ಲಿನ್ ಪೊನ್ನಮ್ಮ ಭಾಗವಹಿಸಿ ಕರ್ನಾಟಕ ಹಾಕಿ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ನ.22 ರಿಂದ ಡಿ.2 ರವರೆಗೆ ಹೈದರಾಬಾದ್ ನಲ್ಲಿ ನಡೆಯಲಿರುವ 14ನೇ ಹಾಕಿ ತಂಡ ಸಬ್ ಜ್ಯೂನಿಯರ್ ಮಹಿಳೆಯರು ರಾಷ್ಟ್ರೀಯ ಚಾಂಪಿಯನ್ ಶಿಪ್ 2024 ರಲ್ಲಿ ತಂಡದ ನಾಯಕಿಯಾಗಿ ಪಲಿ೯ನ್ ಭಾಗವಹಿಸಲಿದ್ದಾರೆ. ಈಕೆ ಮಡಿಕೇರಿ ವಕೀಲರಾದ ಅಚ್ಚಪಂಡ ಗಿರಿ ಹಾಗೂ ಪದ್ಮ ದಂಪತಿ ಪುತ್ರಿ.






