ಸೋಮವಾರಪೇಟೆ NEWS DESK ಡಿ.29 : ಸರ್ಕಾರದ ಆದೇಶದಂತೆ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿರುವವರಿಗೆ ಜಮೀನುಗಳನ್ನು ಗುತ್ತಿಗೆ ನೀಡುವ ಸಂಬಂಧ ಅರ್ಜಿಗಳನ್ನು ನೀಡಲು ಕಾಲಾವಕಾಶವನ್ನು ವಿಸ್ತಿರಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕಾಫಿ ಬೆಳೆಗಾರರ ಸಂಘ ಕಂದಾಯ ಮಂತ್ರಿಗಳಿಗೆ ಮನವಿ ಮಾಡಿದೆ. 1.1.2005 ರ ಪೂರ್ವದಲ್ಲಿ ಸರ್ಕಾರಿ ಜಮೀನನನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿರುವ ರೈತರಿಗೆ ಆ ಜಮೀನು ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸುವುದು ರೈತರಿಗೆ ಉಪಯೋಗವಾಗಿದೆ. ಅರ್ಜಿ ಸ್ವೀಕರಿಸುವ ಕಾಲಾವಕಾಶ 31.12.2024ರಂದು ಮುಕ್ತಾಯಗೊಳ್ಳಲಿದ್ದು, ದಿನಾಂಕವನ್ನು ವಿಸ್ತರಿಸಲು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರಿಗೆ ಮನವಿ ಸಲ್ಲಿಸಿದ್ದಾರೆ. ಜಿಲ್ಲಾದ್ಯಂತ ಅರೇಬಿಕಾ ಹಾಗು ರೋಬಸ್ಟ ಕಾಫಿ ಮತ್ತು ಭತ್ತ ಕಟಾವು ಕೆಲಸ ನಡೆಯುತ್ತಿದೆ. ಅಕಾಲಿಕ ಮಳೆಯ ಭಯದಿಂದ ರೈತರು ಕೃಷಿ ಭೂಮಿಯಲ್ಲಿ ಕೆಲಸದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆ ತಾಲ್ಲೂಕು ಕಚೇರಿಗೆ ಬಂದು ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಇವೆಲ್ಲಾ ಕಾರಣದಿಂದ ದಿನಾಂಕವನ್ನು ವಿಸ್ತರಿಸಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಕಳೆದ ಐದಾರು ವರ್ಷಗಳಿಂದ ಅಕಾಲಿಕ ಮಳೆ, ಅತೀವೃಷ್ಟಿ, ಅನಾವೃಷ್ಟಿಯಿಂದ ಕಾಫಿ…
ಲೇಖಕ: admin
ಮಡಿಕೇರಿ NEWS DESK ಡಿ.29 : ಲಾರಿಯೊಂದು ಅಗ್ನಿಗಾಹುತಿಯಾದ ಘಟನೆ ಮಡಿಕೇರಿ ಸಮೀಪ ಜೋಡುಪಾಲ ಹೆದ್ದಾರಿಯಲ್ಲಿ ನಡೆದಿದೆ. ಹೆಚ್ ಡಿ ಕೋಟೆಯಿಂದ ಉಡುಪಿಗೆ ಭತ್ತವನ್ನು ಕೊಂಡೊಯ್ಯುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಹಾಗೂ ಕ್ಲೀನರ್ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಶನಿವಾರ ರಾತ್ರಿ ನಡೆದಿದೆ.
ಮೈಸೂರು NEWS DESK ಡಿ.29 : ಮೈಸೂರಿನಲ್ಲಿ ಹನುಮ ಜಯಂತಿಯ ಪ್ರಯುಕ್ತ ಮೈಸೂರು ಹನುಮಂತೋತ್ಸವ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 6ನೇ ವರ್ಷದ ಹನುಮ ಹಬ್ಬ ಹಾಗೂ ಶ್ರೀ ಆಂಜನೇಯಸ್ವಾಮಿಯ ಭವ್ಯ ಮೆರವಣಿಗೆಯ ಕಾರ್ಯಕ್ರಮದಲ್ಲಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಪಾಲ್ಗೊಂಡರು. ವಿಶೇಷ ಪೂಜೆ ಸಲ್ಲಿಸಿದ ಅವರು ಯುವ ಸಮೂಹದೊಂದಿಗೆ ಹೆಜ್ಜೆ ಹಾಕಿದರು.
ನವದೆಹಲಿ NEWS DESK ಡಿ.29 : ತಾಲಿಬಾನ್ ಯೋಧರು ಇಂದು ಮುಂಜಾನೆ ಅಫ್ಘಾನಿಸ್ತಾನ-ಪಾಕ್ ಗಡಿಯಲ್ಲಿ ದಾಳಿ ನಡೆಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನಿ ವಾಯುಪಡೆ ನಡೆಸಿದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ತಾಲಿಬಾನಿಗಳು ಫಿರಂಗಿಗಳು ಮತ್ತು ಮೆಷಿನ್ ಗನ್ ಗಳ ಮೂಲಕ ದಾಳಿ ನಡೆಸಿದಾಗ ಸುಮಾರು 19 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಹೇಳಿಕೊಂಡಿದೆ. ಡ್ಯುರಾಂಡ್ ಲೈನ್ ಬಳಿಯ ಪಕ್ತಿಯಾ ಮತ್ತು ಖೋಸ್ಟ್ ಪ್ರದೇಶಗಳಲ್ಲಿ ಈ ಸಂಘರ್ಷ ನಡೆದಿದೆ ಎಂದು ತಾಲಿಬಾನ್ ರಕ್ಷಣಾ ಸಚಿವಾಲಯ ತಿಳಿಸಿದೆ.
ಸಿಯೋಲ್ NEWS DESK ಡಿ.29 : ರನ್ವೇಯಲ್ಲಿ ವಿಮಾನ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಕಾರಣ ಸುಮಾರು 85 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ನಡೆದಿದೆ. 181 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್ವೇಯಲ್ಲಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿತು. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 85ಕ್ಕೇರಿದೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ.
ನವದೆಹಲಿ NEWS DESK ಡಿ.29 : ತಾಲಿಬಾನ್ ಯೋಧರು ಇಂದು ಮುಂಜಾನೆ ಅಫ್ಘಾನಿಸ್ತಾನ-ಪಾಕ್ ಗಡಿಯಲ್ಲಿ ದಾಳಿ ನಡೆಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನಿ ವಾಯುಪಡೆ ನಡೆಸಿದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ತಾಲಿಬಾನಿಗಳು ಫಿರಂಗಿಗಳು ಮತ್ತು ಮೆಷಿನ್ ಗನ್ ಗಳ ಮೂಲಕ ದಾಳಿ ನಡೆಸಿದಾಗ ಸುಮಾರು 19 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಹೇಳಿಕೊಂಡಿದೆ. ಡ್ಯುರಾಂಡ್ ಲೈನ್ ಬಳಿಯ ಪಕ್ತಿಯಾ ಮತ್ತು ಖೋಸ್ಟ್ ಪ್ರದೇಶಗಳಲ್ಲಿ ಈ ಸಂಘರ್ಷ ನಡೆದಿದೆ ಎಂದು ತಾಲಿಬಾನ್ ರಕ್ಷಣಾ ಸಚಿವಾಲಯ ತಿಳಿಸಿದೆ.
ಕುಶಾಲನಗರ NEWS DESK ಡಿ.29 : ಮರಗೋಡಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಜಾತ್ರಾ ಮಹೋತ್ಸವದ ಸಂದರ್ಭ ವಸ್ತç ಸಂಹಿತೆ ಕುರಿತು ನಡೆದ ಭಿನ್ನಾಭಿಪ್ರಾಯವನ್ನು ನೆಪ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಬರಹ ಪೋಸ್ಟ್ ಮಾಡುತ್ತಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕುಶಾಲನಗರ ಗೌಡ ಸಮಾಜ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಾವಶ್ಯಕ ಹೇಳಿಕೆಗಳನ್ನು ನೀಡಿ ಜಿಲ್ಲೆಯಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತಿದೆ. ಇಬ್ಬರು ವ್ಯಕ್ತಿಗಳು ಪ್ರಚೋದನಕಾರಿ ಬರಹದ ಮೂಲಕ ಘರ್ಷಣೆಗೆ ಅವಕಾಶ ಕಲ್ಪಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತಕ್ಷಣ ಇವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್, ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ಗೌಡ ಸಮಾಜಗಳ ಒಕ್ಕೂಟದ ಪ್ರಮುಖ ಕರಂದ್ಲಾಜೆ ಆನಂದ್, ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಚೆರಿಯಮನೆ ರಷಿ ಹರೀಶ್, ಪದ್ಮಾವತಿ ಗೌಡ…
ಕುಶಾಲನಗರ ಡಿ.28 NEWS DESK : ಕಾವೇರಿ ನದಿ ಸ್ವಚ್ಛತೆ ಬಗ್ಗೆ ಜನರಿಗೆ ಅರಿವು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಯುವ ಬ್ರಿಗೇಡ್ ಕಾರ್ಯಕರ್ತರ ‘ಕಾವೇರಿ ನಮನ’ ಬೈಕ್ ರ್ಯಾಲಿ ತಂಡ ಇಂದು ಜಿಲ್ಲೆಗೆ ಆಗಮಿಸಿತು. ಯುವ ಬ್ರಿಗೇಡ್ ಮಾರ್ಗದರ್ಶಕರಾದ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಶ್ರೀರಂಗಪಟ್ಟಣದಿಂದ ಚಾಲನೆಗೊಂಡ ಸುಮಾರು 100ಕ್ಕೂ ಅಧಿಕ ಸ್ವಯಂಸೇವಕರು 50ಕ್ಕೂ ಅಧಿಕ ಬೈಕ್ ಗಳಲ್ಲಿ ರಾಮನಾಥಪುರ ಮೂಲಕ ಕುಶಾಲನಗರಕ್ಕೆ ಸಂಜೆ ಆಗಮಿಸಿದರು. ಈ ಸಂದರ್ಭದಲ್ಲಿ ಕುಶಾಲನಗರ ಗಡಿಭಾಗದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖರು ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳ ಪ್ರಮುಖರು, ಕಾರ್ಯಕರ್ತರು ಬರಮಾಡಿಕೊಂಡರು. ಕುಶಾಲನಗರ ಕೊಪ್ಪ ಬಳಿ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದ ನಂತರ ಯುವ ಬ್ರಿಗೇಡ್ ಮಾರ್ಗದರ್ಶಕರು ಹಾಗೂ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕುಶಾಲನಗರ ವಿವೇಕಾನಂದ ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ನಂತರ ತಂಡ ಮಡಿಕೇರಿ ಮೂಲಕ ಭಾಗಮಂಡಲಕ್ಕೆ ತೆರಳಿತು. ಭಾಗಮಂಡಲದಲ್ಲಿ ಸಂಜೆ ಸಂಗಮದಲ್ಲಿ ಆರತಿ…
12 ರಾಶಿಗಳ ರಾಶಿಗಳ 2025 ರ ವರ್ಷ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429) ಮೇಷ ರಾಶಿ :: ಈ ರಾಶಿಯವರಿಗೆ ಮಿಶ್ರಫಲ ಕೊಡಲಿದೆ. ಉದ್ಯೋಗದಲ್ಲಿ ಕಿರಿಕಿರಿ, ಮಾನಸಿಕ ಒತ್ತಡ, ಶನಿ ಪ್ರಭಾವ ಇರಲಿದೆ. ಸಾಡೆಸಾತ್ ಶನಿ ಆರಂಭವಾಗುವುದು, ಗುರು ಬಲವು ಮೇ ತಿಂಗಳವರೆಗೆ ಇರುವುದರಿಂದ ಯಾವುದೇ ಕೆಲಸ ಕಾರ್ಯಗಳನ್ನು ಮತ್ತು ಹಣಕಾಸಿನ ವ್ಯವಹಾರವನ್ನು ಮಾಡುವುದಾದರೆ ಮೇ ತಿಂಗಳ ಒಳಗೆ ಮಾಡಿಕೊಳ್ಳಬೇಕು. ಅನಾರೋಗ್ಯ, ಕೌಟುಂಬಿಕ ಕಲಹ ಆಗಲಿದೆ. :: ಪರಿಹಾರ :: ಶಿವ ದೇವರ ಆರಾಧನೆಯನ್ನು ಮಾಡಿ. ಶುಭ ಸಂಖ್ಯೆ :; 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ಈ ರಾಶಿಯವರಿಗೆ ಈ ವರ್ಷ ಉತ್ತಮ ಯೋಗವಿದ್ದು, ಅವಿವಾಹಿತರಿಗೆ ವಿವಾಹ ಯೋಗ, ಮನೆ ಕಟ್ಟುವವರಿಗೆ ಮನೆ ಸಂಪೂರ್ಣವಾಗಿ ಕಟ್ಟುವ ಯೋಗ, ಹಣ ಯೋಗ, 11ನೇ ಸ್ಥಾನದಲ್ಲಿ ಶನಿ ಇರುವುದರಿಂದ ಸ್ಥಾನಮಾನ ಪ್ರಾಪ್ತಿ, ಸನ್ಮಾನ, ಶತ್ರುನಾಶ, ಕೋರ್ಟು ಕಚೇರಿ ಕೆಲಸದಲ್ಲಿ…
ಮಡಿಕೇರಿ ಡಿ.28 NEWS DESK : ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು ಹಾರಿಸಿದ ಪರಿಣಾಮ ಆತ ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಪಣಿಎರವರ ಪೊನ್ನು (21) ಎಂಬುವವರೇ ಮೃತ ಕಾರ್ಮಿಕ. ಗುಂಡು ಹೊಡೆದ ಆರೋಪದಡಿ ವಿರಾಜಪೇಟೆಯ ಬ್ಯಾಂಕ್ ವೊಂದರ ಭದ್ರತಾ ಸಿಬ್ಬಂದಿ ಪೊರ್ಕಂಡ ಚಿಣ್ಣಪ್ಪ ಎಂಬಾತನನ್ನು ಬಂಧಿಸಲಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲಿಸರು ಆರೋಪಿಯ ಬಳಿಯಿಂದ ಕೃತ್ಯಕ್ಕೆ ಬಳಸಿದ್ದ ಕೋವಿಯನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಮಿಕ ದಂಪತಿ ಪಣಿಎರವರ ಪೊನ್ನು ಹಾಗೂ ಗೀತಾ ಕೆಲವು ತಿಂಗಳ ಹಿಂದೆ ಚೆಂಬೆಬೆಳ್ಳೂರು ಗ್ರಾಮದ ತೋಟದ ಮಾಲೀಕರೊಬ್ಬರ ಲೈನ್ ಮನೆಗೆ ಬಂದು ನೆಲೆಸಿದ್ದರು. ಡಿ.27 ರಂದು ಸಂಜೆ ಕಾರ್ಮಿಕ ದಂಪತಿ ಪಕ್ಕದಲ್ಲೇ ಇದ್ದ ಆರೋಪಿ ಚಿಣ್ಣಪ್ಪ ಅವರ ತೋಟದ ಅಂಚಿನಲ್ಲಿದ್ದ ಹಲಸಿನ ಮರದ ಬಳಿಗೆ ತೆರಳಿದ್ದರು. ಈ ಸಂದರ್ಭ ಪೊನ್ನು ಹಲಸಿನ ಮಿಡಿ ಕೊಯ್ಯಲು ಮರವೇರಿದ್ದರು. ಇದೇ ಸಂದರ್ಭ ಸ್ಥಳಕ್ಕೆ ಬಂದ ಚಿಣ್ಣಪ್ಪ, ಹಲಸಿನ ಮರವೇರಿದ ಪೊನ್ನವನ್ನು ನಿಂದಿಸಿ…






