ಲೇಖಕ: admin

ಮಡಿಕೇರಿ ನ.18 NEWS DESK : ನದಿ ತಟಗಳ ಸಂರಕ್ಷಣೆಯೊಂದಿಗೆ ಸ್ವಚ್ಛತೆಗಾಗಿ ಪ್ರತಿಯೊಬ್ಬರೂ ಜಾಗೃತರಾಗಬೇಕಾಗಿದೆ ಎಂದು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಕರೆ ನೀಡಿದ್ದಾರೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ಮಹಾ ಆರತಿ ಬಳಗ ಆಶಯದಲ್ಲಿ ಸ್ಥಳೀಯ ಮಹಿಳಾ ಭಜನಾ ಮಂಡಳಿ ಸಹಯೋಗದೊಂದಿಗೆ ನಡೆದ 166ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಸಕ್ತ ಶುದ್ಧ ನೀರಿಗಾಗಿ ಹಣ ನೀಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಪ್ರಕೃತಿದತ್ತ ಜಲಮೂಲಗಳನ್ನು ಸಂರಕ್ಷಿಸಿ ಕಾಪಾಡುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದರು. ಕಳೆದ ಹಲವು ವರ್ಷಗಳಿಂದ ನದಿ ಮೂಲಗಳ ಸಂರಕ್ಷಣೆಗಾಗಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೋರಾಟ ನಡೆಸುತ್ತಿರುವ ಬಳಗದ ಕಾರ್ಯಕ್ರಮಗಳ ಬಗ್ಗೆ ನಾಗೇಂದ್ರ ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಅರ್ಚನೆ ಅಷ್ಟೋತ್ತರ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ನಡೆಸಿ ನದಿಗೆ ಸಾಮೂಹಿಕವಾಗಿ ಆರತಿ ಕಾರ್ಯಕ್ರಮ ನೆರವೇರಿಸಿದರು. ಕಾರ್ತಿಕ ಹುಣ್ಣಿಮೆ ಅಂಗವಾಗಿ ನದಿ…

Read More

ಮಡಿಕೇರಿ NEWS DESK ನ.17 : ಮಾದಕ ವಸ್ತು ಎಂಡಿಎಂಎ ಮತ್ತು ಗಾಂಜಾ ಸಾಗಾಟ ಸಾಗಾಟ ಮಾಡುತ್ತಿದ್ದ ಆರೋಪದಡಿ ಕೇರಳದ ಮೂವರು ಸೇರಿ ಐವರನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಿರುವಂಗಾಡು ಗ್ರಾಮದ ಸುಜೇಶ್ ಎಂ.ಕೆ (44), ವಿರಾಜಪೇಟೆಯ ಮರೂರು ಗ್ರಾಮದ ಜಬ್ಬರ್.ಯು.ವೈ (38), ವರ್ಷ, ಮೊಹಮ್ಮದ್ ಕುಂಞ (48) ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪಿಣರಾಯಿಯ ಜಂಶೀರ್ (37) ಹಾಗೂ ತಲಚೇರಿ ಜಿಲ್ಲೆಯ ಎರನ್ನೋಳಿ ಗ್ರಾಮದ ಶಮ್ಯಾಸ್.ಸಿ.ವಿ (32) ಬಂಧಿತ ಆರೋಪಿಗಳು. ಬಂಧಿತರ ಬಳಿಯಿಂದ 84 ಎಂಡಿಎಂಎ, 7 ಗ್ರಾಂ ಗಾಂಜಾ, ಒಂದು ಕಾರು, ಡಿಜಿಟಲ್ ತೂಕದ ಯಂತ್ರ ಮತ್ತು ಮಾದಕ ವಸ್ತು ಸೇವನೆಗೆ ಬಳಸುವ ಉಪಕರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಜಿ ಗ್ರಾಮದ ಕಿರುಮಕ್ಕಿ-ಕಂಡಿಮಕ್ಕಿ ಜಂಕ್ಷನ್‌ನಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಮೋಹನ್ ಕುಮಾರ್, ವೃತ್ತ ನಿರೀಕ್ಷಕ ಅನೂಪ್…

Read More

ಮಡಿಕೇರಿ NEWS DESK ನ.17 : ರಾಷ್ಟ್ರೀಕೃತ ಬ್ಯಾಂಕಿನ ಮಾದರಿಯ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ಗ್ರಾಹಕ ಸ್ನೇಹಿ ಸೌಲಭ್ಯಗಳನ್ನು ಸಹಕಾರಿ ಕ್ಷೇತ್ರದ ಬ್ಯಾಂಕುಗಳು ಶೀಘ್ರಗತಿಯಲ್ಲಿ ಅಭಿವೃದ್ಧಿಪಡಿಸಿಕೊಳ್ಳಬೇಕೆಂದು ಮೂಡಬಿದಿರೆಯ ಕೆಐಸಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ಯಾಮಲಾ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಸಹಕಾರ ನಿಯಮಿತ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ ಕೊಡುಗು ಜಿಲ್ಲೆ ಹಾಗೂ ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಗುಡ್ಡೆ ಹೊಸೂರಿನಲ್ಲಿ ಸಮುದಾಯ ಭವನದಲ್ಲಿ ಜರುಗಿದ ಸಹಕಾರಿ ಉದ್ಯಮಗಳ ಪರಿವರ್ತನಾ ಸಮಾರಂಭದಲ್ಲಿ ಭಾಗವಹಿಸಿದ್ದರು.  2047 ರಲ್ಲಿ ಜಗತ್ತಿನ ಮೂರನೇ ಅತಿ ದೊಡ್ಡ  ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಸಹಕಾರಿ ಕ್ಷೇತ್ರದ ಪಾಲು ಅತ್ಯಗತ್ಯ ಎಂದು ಅವರು ತಿಳಿಸಿದರು. ಸಮಾರಂಭ ಉದ್ಘಾಟಿಸಿ ಹಾಲು ಉತ್ಪಾದಕ  ಕುರಿತು ವಿವರ ನೀಡಿದ ಕೊಡಗು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಮನು ಮುತ್ತಪ್ಪನವರು ಮಾತನಾಡಿ, ದೇಶದಲ್ಲಿ ಸುಮಾರು 8.5 ಲಕ್ಷ ಹಾಲು ಶೇಖರಣ ಕೇಂದ್ರಗಳು  31 ಕೋಟಿಗೊ…

Read More

ಮಡಿಕೇರಿ NEWS DESK ನ 17 :  14ನೇ ಹಾಕಿ ಇಂಡಿಯಾ ಸಬ್ ಜೂನಿಯರ್ ಮಹಿಳಾ ನ್ಯಾಷನಲ್ ಚಾಂಪಿಯನ್ ಶಿಪ್-2024 ನ.26ರಿಂದ ತೆಲಂಗಾಣ ರಾಜ್ಯದ ಹೈದರಾಬಾದ್ ನಲ್ಲಿ ನಡೆಯಲಿದ್ದು, ನ್ಯಾಷನಲ್ ಸಬ್ ಜೂನಿಯರ್ ಮಹಿಳಾ ಹಾಕಿ ತಂಡದ ಸೆಂಟರ್ ಫಾರ್ವರ್ಡ್ ಆಟಗಾರ್ತಿ ಆಗಿ ಮಡಿಕೇರಿಯ ಅಕ್ಷರ ತಿಮ್ಮಯ್ಯ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಸಾಯಿ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿನಿಯಾಗಿರುವ ಅಕ್ಷರ ತಿಮ್ಮಯ್ಯ, ಮಡಿಕೇರಿಯ ಸರ್ಕಾರಿ ಪದವಿಪೂರ್ವ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿನಿ. ಅಕ್ಷರ , ಮಡಿಕೇರಿ ನಗರ ಸಭೆ ಸದಸ್ಯೆ ಕುಟ್ಟನ ಶ್ವೇತ ಮತ್ತು ಪ್ರಶಾಂತ್ ಕೆ ಟಿ ದಂಪತಿ ಅವರ ಪುತ್ರಿಯಾಗಿದ್ದಾಳೆ.

Read More

ಸೋಮವಾರಪೇಟೆ NEWS DESK ನ.17 : ಅಪ್ಪು ಅಭಿಮಾನಿಗಳ ಬಳಗದಿಂದ ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಹೆಸರು ದಾಖಲಿಸಿದ ಪ್ರೇಕ್ಷಾ, ದುಂಡಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ, ಆಟೋ ಚಾಲಕ ಮುನೀರ್, 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಾದ ಧೃವ, ಲಿಸ್ಮಾ, ಮೋಹನ್ ಅವರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಪ್ಪು ಅಭಿಮಾನಿಗಳ ಬಳಗದ ಅಧ್ಯಕ್ಷ ಅಬ್ಬೂರುಕಟ್ಟೆ ರವಿಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ್, ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ವಿನೋದ್‌ಕುಮಾರ್, ಸದಸ್ಯ ಶಿವದಾಸ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ, ಜೇಸಿ ಮಾಜಿ ಅಧ್ಯಕ್ಷೆ ಎಂ.ಎ. ರುಬೀನಾ, ಮಾಜಿ ಸೈನಿಕ ಗಣೇಶ್ ಮತ್ತಿತರರು ಇದ್ದರು.

Read More

ಸೋಮವಾರಪೇಟೆ NEWS DESK ನ.17 : ಸೋಮವಾರಪೇಟೆ ಪಟ್ಟಣದ ಕಕ್ಕೆಹೊಳೆ ಜಂಕ್ಷನ್‌ನ ಬಿ.ಎಸ್. ಮಂಜುನಾಥ್(45) ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಹಾನಗಲ್ಲು ಬಾಣೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು.

Read More

ಮಡಿಕೇರಿ NEWS DESK ನ.17 : ಮಡಿಕೇರಿ ಕಾಲೇಜು ಬಳಿಯ ಅಂಗನವಾಡಿ ಕೇಂದ್ರದಲ್ಲಿ ನಡೆದ “ಬಾಲಮೇಳ”ದಲ್ಲಿ ವಿವಿಧ ವೇಷಧಾರಿಗಳಾಗಿ ಪುಟಾಣಿಗಳು ಮಿಂಚಿದರು. ರಾಧೆ, ಕೃಷ್ಣ, ಕೊಡವತಿ, ಆಂಜನೇಯ, ಶಕುಂತಲೆ, ಜೇನುನೊಣ, ಸೈನಿಕ, ಹುಲಿ, ಒನಕೆ ಓಬವ್ವ, ಪ್ರಿನ್ಸೆಸ್, ಗಾಂಧೀಜಿ, ನೆಹರು ವೇಷತೊಟ್ಟು ಗಮನ ಸೆಳೆದರು. ಹಳೆಯ ವಿದ್ಯಾರ್ಥಿಗಳಾದ ಚರಿಷ್ಮಾ ಹಾಗೂ ಚಶ್ಮಿತಾ ಅವರಿಂದ ನಡೆದ ನೃತ್ಯ ಕಾರ್ಯಕ್ರಮ ಆಕರ್ಷಿಸಿತು. ಅಂಗನವಾಡಿ ಕಾರ್ಯಕರ್ತೆ ನೀತು ಹಾಗೂ ಸಹಾಯಕಿ ದಿವ್ಯ ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸಿದರು. ಅಂಗನವಾಡಿ ಕೇಂದ್ರವನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜು ಈ ರೀತಿಯ ಕಾರ್ಯಕ್ರಮಗಳು ಮಕ್ಕಳ ಕೌಶಲ್ಯವನ್ನು ಹೆಚ್ಚಿಸುತ್ತದೆ, ಮಕ್ಕಳ ಮಾನಸಿಕ ಬೆಳವಣಿಗೆಗೆ ಸಹಕರಿಸುತ್ತದೆ, ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುತ್ತದೆ ಎಂದು ತಿಳಿಸಿದರು. ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ  ಸವಿತಾ ಕೀರ್ತನ್, ಪೊಲೀಸ್ ಇಲಾಖೆಯ ಚಕ್ರಶಾಲಿ, ಮಾನ್ಯತ್, ಅಲಂಕಾರಕ್ಕೆ ಸಹಕರಿಸಿದ ಭರತ್, ಬಾಲ ವಿಕಾಸ ಸಮಿತಿಯ ಸದಸ್ಯರಾದ ಮೀನಾ…

Read More

ಮಡಿಕೇರಿ NEWS DESK ನ.17 : ಮಕ್ಕಳ ದಿನಾಚರಣೆಯ ಪ್ರಯುಕ್ತ ಮಡಿಕೇರಿ ನಗರದ ಮಹದೇವಪೇಟೆಯ ಎಸ್‌ಎಸ್ ಆಸ್ಪತ್ರೆ ವತಿಯಿಂದ ಎಲ್‌ಕೆಜಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಿತು. ಆಸ್ಪತ್ರೆಯ ಸಮೀಪದಲ್ಲಿರುವ ಕ್ರೆಸೆಂಟ್ ಸ್ಕೂಲ್ ಆವರಣದಲ್ಲಿ ನಡೆದ ಸ್ಪರ್ಧೆಯಲ್ಲಿ ಪಾಲ್ಗೊಂಡ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ತಮ್ಮ ಕಲ್ಪನೆಯ ಚಿತ್ರಕಲಾ ಪ್ರತಿಭೆಗೆ ಸಾಕ್ಷಿಯಾದರು. ಮೂರು ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಬಹುಮಾನಕ್ಕಾಗಿ ಸ್ಪರ್ಧಿಗಳು ತೀವ್ರ ಪೈಪೋಟಿ ನೀಡಿದರು. ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್‌ಎಸ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಶಿಲ್ಪ ಸತೀಶ್, ಮಕ್ಕಳು ಆರೋಗ್ಯವಂತರಾಗಿ ಲವಲವಿಕೆಯಿಂದಿರಲು ಈ ರೀತಿಯ ಕ್ರಿಯಾಶೀಲತೆಯ ಸ್ಪರ್ಧೆಗಳ ಅಗತ್ಯವಿದೆ. ಇದೇ ಕಾರಣದಿಂದ ಆಸ್ಪತ್ರೆಯ ವತಿಯಿಂದ ಪ್ರತಿವರ್ಷ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಇದನ್ನು ಮುಂದಿನ ವರ್ಷಗಳಲ್ಲಿ ಮತ್ತಷ್ಟು ಅರ್ಥಪೂರ್ಣಗೊಳಿಸಲಾಗುವುದು ಎಂದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ.ದೇವದಾಸ್, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ಹಾಕಲು ಚಿತ್ರಕಲಾ ಸ್ಪರ್ಧೆ ಸೂಕ್ತವಾಗಿದ್ದು, ರಾಜ್ಯ ಮತ್ತು…

Read More

ಮಡಿಕೇರಿ NEWS DESK ನ.17 : ಪುಟ್ಟ ಮಕ್ಕಳಲ್ಲಿ ಭಾರತ ದೇಶದ ಭವಿಷ್ಯವನ್ನು ಕಂಡ ಮಹಾನ್ ನೇತಾರ, ಮುತ್ಸದಿ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಬಣ್ಣಿಸಿದ್ದಾರೆ. ಮಡಿಕೇರಿಯ ಹಿಂದೂಸ್ತಾನಿ ಶಾಲೆಯ ಅಂಗನವಾಡಿಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನೆಹರೂ ಅವರು ದೂರದೃಷ್ಟಿಯುಳ್ಳ ನಾಯಕರಾಗಿದ್ದು, ಸ್ವಾತಂತ್ರ್ಯ ಪಡೆದ ಸಮಯದಲ್ಲಿ ದೇಶದ ಉಜ್ವಲ ಭವಿಷ್ಯಕ್ಕಾಗಿ ಮಕ್ಕಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿದರು. ಮಕ್ಕಳ ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಮಹತ್ವ ನೀಡಿ ಹಲವು ಯೋಜನೆಗಳನ್ನು ರೂಪಿಸಿದ ಪರಿಣಾಮ ದೇಶದ ಅಭಿವೃದ್ಧಿ ಸಾಧ್ಯವಾಯಿತು ಎಂದರು. ಮಕ್ಕಳ ಬಗ್ಗೆ ನೆಹರು ಅವರಿಗೆ ಇದ್ದ ಅತೀ ಕಾಳಜಿಯನ್ನು ಗಮನಿಸಿ ದೇಶ ಅವರ ಜನ್ಮ ದಿನಾಚರಣೆಯನ್ನು ಮಕ್ಕಳ ದಿನಾಚರಣೆ ಎಂದು ಆಚರಿಸುವ ಮೂಲಕ ಗೌರವಿಸುತ್ತಿದೆ. ಇಂತಹ ಗೌರವ ಜಗತ್ತಿನ ಯಾವ ನಾಯಕರಿಗೂ ಲಭಿಸಿಲ್ಲ. ನೆಹರು ಅವರ ಆದರ್ಶಗಳನ್ನು ಮಕ್ಕಳಿಗೆ ಮನದಟ್ಟು…

Read More

ಮಡಿಕೇರಿ NEWS DESK ನ.16 : ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ವಿವಿಧ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ 208 ಕೋಟಿ ರೂ. ವಿನಿಯೋಗ ಮಾಡಲಾಗುತ್ತದೆ ಎಂದು ಹೇಳಿದರು. ಸೋಮವಾರಪೇಟೆ, ಮಾದಾಪುರ, ಮೂರ್ನಾಡು, ಹುದಿಕೇರಿ, ಬಾಳೆಲೆ, ಸಿದ್ದಾಪುರ, ಕೂಡಿಗೆ, ಕೋಪಟ್ಟಿ, ಸಂಪಾಜೆ, ಕೊಡ್ಲಿಪೇಟೆ, ಕಾಟಕೇರಿ, ಕಳತ್ಮಾಡು, ಮರುಗೋಡು ಕೇಂದ್ರಗಳಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಮುಂದಾಗಲಾಗಿದೆ. ಆ ನಿಟ್ಟಿಲ್ಲಿ ಈಗಾಗಲೇ ಹಲವು ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಟೆಂಡರ್ ಆಹ್ವಾನಿಸಲಾಗಿದೆ ಎಂದರು. ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲಾ ಕುಗ್ರಾಮಗಳಿಗೂ ಸಹ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಸೆಸ್ಕ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ ನಿರ್ವಹಿಸುವಂತೆ ಸಚಿವರು ಸೂಚಿಸಿದರು. ಸರ್ಕಾರ ವಿವಿಧ ಕಡೆಗಳಲ್ಲಿ 6…

Read More