ಮಡಿಕೇರಿ NEWS DESK ನ.16 : ಕೊಡಗು ಚೆಸ್ಕಾಂನಲ್ಲಿ ಖಾಲಿ ಇರುವ ಅಧಿಕಾರಿಗಳು ಹಾಗೂ ಲೈನ್ ಮೆನ್ಗಳ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗಿನಲ್ಲಿ ಖಾಲಿ ಇರುವ ಲೈನ್ ಮೆನ್ಗಳ ಹುದ್ದೆ ಭರ್ತಿ ಮಾಡುವ ಸಂದರ್ಭ ರಾಜ್ಯದ ವಿವಿಧ ಭಾಗಗಳಿಂದ ಅಭ್ಯರ್ಥಿಗಳು ಆಯ್ಕೆಯಾಗುತ್ತಾರೆ. ಆ ಬಳಿಕ ಕೆಲವೇ ವರ್ಷಗಳಲ್ಲಿ ಅಧಿಕಾರಿಗಳ ಸಹಿತ ಲೈನ್ಮೆನ್ಗಳು ವರ್ಗಾವಣೆ ಪಡೆದು ಬೇರೆಡೆಗಳಿಗೆ ತೆರಳುತ್ತಾರೆ. ಈ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಗ್ರಾಮೀಣ ಭಾಗದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕೂಡ ಕ್ರಮ ವಹಿಸಲಾಗುತ್ತದೆ. ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಮನೆಗಳಿಗೆ ಸೋಲಾರ್ ದೀಪದ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಕಾಫಿ ಬೆಳೆಗಾರರಿಗೆ 10 ಹೆಚ್.ಪಿ. ಮೋಟಾರ್ ಪಂಪ್ ಸೆಟ್ಗಳಿಗೆ ಉಚಿತ ವಿದ್ಯುತ್ ನೀಡುವ ಸಂಬಂಧ ಮುಂದಿನ ದಿನಗಳಲ್ಲಿ…
ಲೇಖಕ: admin
ಕುಶಾಲನಗರ NEWS DESK ನ.16 : ಕುಶಾಲನಗರದ ಮಹಾ ಗಣಪತಿ ದೇವಾಲಯಕ್ಕೆ ದಾನಿಗಳು ಬೆಳ್ಳಿ ಕವಚ ಮತ್ತು ಪೂಜಾ ಸಾಮಾಗ್ರಿಗಳನ್ನು ನೀಡಿದರು. ಉದ್ಯಮಿ ವೇಣು ಬಿಳಿಮಗ್ಗ ಹಾಗೂ ಕುಟುಂಬದ ಸದಸ್ಯರು ಗಣಪತಿಯ ಬೆಳ್ಳಿಯ ಅವತಾರ, ರಥ ಬೀದಿಯ ಉದ್ಯಮಿ ವಿ.ವಿ.ತಿಲಕ್ ಹಾಗೂ ಕುಟುಂಬ ಸದಸ್ಯರು ನಾಗದೇವರ ಬೆಳ್ಳಿ ಕವಚ ಮತ್ತು ಟಿಬೆಟಿಯನ್ ಮಹಿಳೆ ನಾಮಗೆಲ್ ಹಾಗೂ ಕುಟುಂಬ ಸದಸ್ಯರು ಬೆಳ್ಳಿಯ ಪೂಜಾ ಸಾಮಾಗ್ರಿಗಳನ್ನು ದೇವಸ್ಥಾನದ ಆಡಳಿತ ಆಡಳಿತ ಮಂಡಳಿ ಪ್ರಮುಖರಿಗೆ ಹಸ್ತಾಂತರ ಮಾಡಿದರು. ದೇವಾಲಯದ ಅರ್ಚಕ ರಾಘವೇಂದ್ರ ಭಟ್ ಹಾಗೂ ತಂಡದಿಂದ ವಿಶೇಷ ಪೂಜೆ ಮತ್ತು ಹೋಮ ನಡೆಯಿತು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎಂ.ಕೆ.ದಿನೇಶ್, ಪ್ರಧಾನ ಅರ್ಚಕ ಆರ್.ಕೆ.ನಾಗೇಂದ್ರ ಬಾಬು, ಸಹ ಕಾರ್ಯದರ್ಶಿ ಕೆ.ಎನ್.ದೇವರಾಜ್, ನಿರ್ದೇಶಕ ಚಂದ್ರು, ವ್ಯವಸ್ಥಾಪಕ ಶ್ರೀನಿವಾಸ್ ರಾವ್ ಹಾಗೂ ಕುರುಹಿನ ಶೆಟ್ಟಿ ಸಂಘದ ಪ್ರಮುಖರು, ಕುಟುಂಬ ಸದಸ್ಯರು ಇದ್ದರು.
ಮಡಿಕೇರಿ ನ.16 NEWS DESK : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಪ್ರಯುಕ್ತ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ IQAC ಮತ್ತು ಗ್ರಂಥಾಲಯ ವಿಭಾಗದ ವತಿಯಿಂದ “ಡಿಜಿಟಲ್ ಗ್ರಂಥಾಲಯದ ಮೂಲಕ ಜ್ಞಾನದ ಸಶಕ್ತೀಕರಣ” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮಂಗಳೂರಿನ ಎಡೈಸ್ ಸಂಸ್ಥೆಯ ವ್ಯವಸ್ಥಾಪಕ ಎಸ್. ದೀರಜ್ ಡಿಜಿಟಲ್ ಗ್ರಂಥಾಲಯಗಳ ಮಹತ್ವವನ್ನು ಪ್ರಸ್ತಾಪಿಸಿ, ಜ್ಞಾನವನ್ನು ಸವಲಾಗಿ ಬಳಕೆ ಮಾಡಲು ಮತ್ತು ಪ್ರಸ್ತುತ ಡಿಜಿಟಲ್ ಕ್ಷೇತ್ರದಲ್ಲಿ ಉಂಟಾಗುತ್ತಿರುವ ಮಹತ್ವದ ಬದಲಾವಣೆಯ ಹಾಗೂ ಬೆಳವಣಿಗೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮವನ್ನು ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕ ಡಾ. ಕೆ.ಬಸವರಾಜು ಉದ್ಘಾಟಿಸಿದರು. ಅತಿಥಿ ಗ್ರಂಥಪಾಲಕರಾದ ಡಾ. ಇ.ರೂಪ ದಿನದ ಮಹತ್ವದ ಕುರಿತು ಮಾತನಾಡಿದರು. ಗ್ರಂಥಾಲಯ ಮೇಲ್ವಿಚಾರಕರೂ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಎಂ.ಬಿ. ದಿವ್ಯ ಹಾಜರಿದ್ದರು. ದ್ವಿತೀಯ ಬಿ.ಎ.ವಿದ್ಯಾರ್ಥಿನಿ ಸುಹೈರ ಸ್ವಾಗತಿಸಿದರೆ, ದ್ವಿತೀಯ ಬಿ.ಎ ವಿದ್ಯಾರ್ಥಿನಿ ವಂದನಾರ್ಪಣೆಯನ್ನು ನೆರವೇರಿಸಿದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿ ಕೀರ್ತನ ನಿರೂಪಿಸಿದರು.
ಮಡಿಕೇರಿ ನ.16 NEWS DESK : ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಿದವರು ತಾವು ವಿದ್ಯೆ ಕಲಿತ ಶಾಲೆಯ ಅಭ್ಯುದಯಕ್ಕಾಗಿ ತಮ್ಮ ಆದಾಯದ ಶೇ.1 ಭಾಗವನ್ನಾದರೂ ಮೀಸಲಿಡಬೇಕೆಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಕರೆ ನೀಡಿದ್ದಾರೆ. 2023-24ನೇ ಸಾಲಿನ ಪರೀಕ್ಷೆಯಲ್ಲಿ ಮಡಿಕೇರಿ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹೆಚ್ಚು ಪ್ರತಿಭಾನ್ವಿತರಾಗಿರುತ್ತಾರೆ. ಶೈಕ್ಷಣಿಕ ಸಾಧನೆಯ ಮೂಲಕ ಜೀವನದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ. ಸರ್ಕಾರಿ ಶಾಲೆಯಲ್ಲಿ ಓದಿದವರು ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ತಮಗೆ ವಿದ್ಯೆ ನೀಡಿದ ಶಾಲೆಯನ್ನು ಹಾಗೂ ಶಿಕ್ಷಕರನ್ನು ಮರೆಯದೆ ಗೌರವಿಸಬೇಕು. ತಾವು ಸಂಪಾದಿಸಿದ ಆದಾಯದ ಒಂದು ಭಾಗವನ್ನು ಶಾಲೆಗಾಗಿ ಮೀಸಲಿಟ್ಟರೆ ಶಾಲೆ ಅಭಿವೃದ್ಧಿಯಾಗುವುದಲ್ಲದೆ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ…
ಮಡಿಕೇರಿ ನ.16 NEWS DESK : ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯ ಕಾನೂನು ಸಲಹೆಗಾರರಾಗಿ ಹಾಗೂ ಕೊಡಗು ಜಿಲ್ಲಾಧ್ಯಕ್ಷರಾಗಿ ವಕೀಲ ಡಾ.ಯಾಲದಾಳು ಮನೋಜ್ ಬೋಪಯ್ಯ ಆಯ್ಕೆಯಾಗಿದ್ದಾರೆ. ನಗರದಲ್ಲಿ ವೇದಿಕೆಯ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಕಾರ್ಯಾಧ್ಯಕ್ಷರಾಗಿ ರಜಿತ್ ಪಾಲ್ತಾಡು ದೇವಪ್ಪ, ಉಪಾಧ್ಯಕ್ಷರಾಗಿ ಕಿಶನ್ ತಿಮ್ಮಯ್ಯ ಹಾಗೂ ಇಬ್ರಾಹಿಂ ನೇಮಕಗೊಂಡರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವಕೀಲ ಎಂ.ಎ.ಶಹಬಾಜ್ ಅಲಿ, ಎಂ.ಟಿ.ಕಿಶನ್ ತಿಮ್ಮಯ್ಯ, ವಸಂತ್ ಸಿದ್ದಾಪುರ, ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಪಿ.ಎಸ್.ಭರತ್ ಕುಮಾರ್ ಹಾಗೂ ಜೀವನ್ ನಾರ್ಕೋಡು ಅವರನ್ನು ಆಯ್ಕೆ ಮಾಡಲಾಯಿತು.ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾಗಿ ವಕೀಲ ಬಿ.ಪಿ.ರಾಘವೇಂದ್ರ ಹಾಗೂ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷರಾಗಿ ವಕೀಲ ಮಹಮ್ಮದ್ ರಾಫಿ ಎಮ್ಮೆಮಾಡು ಅವರನ್ನು ನೇಮಕ ಮಾಡಲಾಯಿತು.ನೂತನ ಪದಾಧಿಕಾರಿಗಳ ಆಯ್ಕೆ ಸಂದರ್ಭ ವೇದಿಕೆಯ ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮೇಷ ರಾಶಿ : ಈ ವಾರ ದೂರ ಪ್ರಯಾಣ ಮಾಡುವಿರಿ. ಹಿರಿಯರ ಆರೋಗ್ಯಕ್ಕೆ ತುಂಬಾ ಖರ್ಚಾಗಲಿದೆ. ಹಳೇ ಸಾಲ ವಸೂಲಿ ಆಗಿ ನಿಮ್ಮ ಹಣ ನಿಮ್ಮ ಕೈಗೆ ಬರಲಿದೆ. :: ಶುಭ ಸಂಖ್ಯೆ :: 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ. ವೃಷಭ ರಾಶಿ : ಈ ವಾರ ತುಂಬಾ ಶುಭಯೋಗ. ಹಳೇ ಸಾಲವನ್ನು ತೀರಿಸುವಿರಿ. ದೂರದ ನೆಂಟರ ಭೇಟಿಯಾಗುವಿರಿ. ಹಣ ತುಂಬಾ ಖರ್ಚಾಗಲಿದೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ : ಈ ವಾರ ನಿಮ್ಮ ರಾಶಿಯಲ್ಲಿ ನೀಚ ಗ್ರಹ ಪ್ರವೇಶದಿಂದ ಅನಾರೋಗ್ಯ, ಸುತ್ತಾಟಗಳು, ಕಲಹ, ಹಣ ವ್ಯಯ. :: ಪರಿಹಾರ :: ಗುರುವಾರ ಶ್ರೀ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ. :: ಶುಭ ಸಂಖ್ಯೆ :: 3, 5, 6 :: ಶುಭ ಬಣ್ಣ…
ಮಡಿಕೇರಿ ನ.16 NEWS DESK : 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ, “ಉತ್ತಮ ವಿಶ್ವ ನಿರ್ಮಾಣ ಹಾದಿಗಾಗಿ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ದಿನಾಚರಣೆ ಮತ್ತು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಪ್ರಾಯೋಜಿತ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನ.20 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಇಲಾಖೆ, ಕರ್ನಾಟಕ ಇನ್ ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಮಡಿಕೇರಿ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಗರದ ಬಾಲಭವನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದಾರೆ ಎಂದರು. ::: ಸಹಕಾರ ರತ್ನ…
ಮಡಿಕೇರಿ ನ.16 NEWS DESK : ವಿಶ್ವ ಹಿಂದೂ ಪರಿಷತ್ ವತಿಯಿಂದ ಭಾಗಮಂಡಲದ ಕಾವೇರಿ, ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಭಜನೆ, ವೇದಘೋಷಗಳೊಂದಿಗೆ ಕಾವೇರಿ ತಾಯಿಗೆ ಆರತಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಹುಬ್ಬಳ್ಳಿಯ ಜೇಷ್ಠ ಪ್ರಚಾರಕ ಸು.ರಾಮಣ್ಣ, ಪವಿತ್ರ ದೀಪೋತ್ಸವದ ಸಂದರ್ಭದಲ್ಲಿ ಕಾವೇರಿ ಮಾತೆ ನಮ್ಮೆಲ್ಲರ ಅಂತರಂಗದಲ್ಲಿ ಭಾರತೀಯತೆಯನ್ನು ಬೆಳೆಗಿಸಲಿ. ಹಿಂದುತ್ವದ ಬೆಳಕು ಎಂದು ಆರದಿರಲಿ ಎಂದು ಹೇಳಿದರು. ಈ ಸಂದರ್ಭ ದಕ್ಷಿಣ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ವಿಶ್ವ ಹಿಂದೂ ಪರಿಷತ್ತಿನ ಪದಾಧಿಕಾರಿಗಳು ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ NEWS DESK ನ.16 : ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕರಾದ ಬೊಳ್ಳಮ್ಮ ಪಿ.ಕೆ ಅವರು ಮಂಡಿಸಿದ “Status of news consumption with the advent of mobile based news distribution a study in Kodagu District” (ಮೊಬೈಲ್ ಆಧಾರಿತ ಸುದ್ದಿ ವಿತರಣೆಯ ಆರಂಭದೊ0ದಿಗೆ ಸುದ್ದಿ ಬಳಕೆಯ ಸ್ಥಿತಿಗತಿ : ಕೊಡಗು ಜಿಲ್ಲೆಯಲ್ಲೊಂದು ಅಧ್ಯಯನ) ಎಂಬ ಪ್ರೌಢಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್ ಡಿ ನೀಡಿದೆ. ಬೊಳ್ಳಮ್ಮ ಅವರಿಗೆ ವಿದ್ಯುನ್ಮಾನ ಮಾಧ್ಯಮ ವಿಭಾಗದ ಸಹ ಪ್ರಾಧ್ಯಾಪಕರಾದ, ಡಾ.ಶ್ರೀಪತಿ ಟಿ. ಅವರು ಮಾರ್ಗದರ್ಶನ ಮಾಡಿದರು.
ಮಡಿಕೇರಿ ನ.16 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯದ ರೂಢಿ ಸಂಪ್ರದಾಯದಂತೆ ದೇವಾಲಯ ಮುಂಭಾಗದ ಕಲ್ಯಾಣಿಯಲ್ಲಿ ತೆಪ್ಪೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಪುಷ್ಪಾಲಂಕೃತ ತೆಪ್ಪದ ಮೇಲೆ ಬೆಳ್ಳಿ ಮೂರ್ತಿಯನ್ನು ಕೂರಿಸಿ ತೆಪ್ಪೋತ್ಸವ ಮಾಡಲಾಯಿತು. ಇದಕ್ಕೂ ಮೊದಲು ದೇವಾಲಯದಲ್ಲಿ ವಿವಿಧ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಯಿತು. ಪಲ್ಲಕ್ಕಿಯಲ್ಲಿ ಕೂರಿಸಿ ದೇವಾಲಯದ ಆವರಣದಲ್ಲೇ ಪಲ್ಲಕ್ಕಿ ಉತ್ಸವ ಮಾಡಲಾಯಿತು. ನಂತರ ಅದೇ ಪಲ್ಲಕ್ಕಿಯಲ್ಲಿ ಈಶ್ವರನ್ನು ಕರೆತಂದು ತೆಪ್ಪದಲ್ಲಿ ಕೂರಿಸಿ ಕಲ್ಯಾಣಿಯಲ್ಲಿ ಉತ್ಸವ ಮಾಡಲಾಯಿತು. ಬೃಹತ್ ಕಲ್ಯಾಣಿಯಲ್ಲಿ ಮೂರು ಸುತ್ತು ತೆಪ್ಪೋತ್ಸವ ಮಾಡಲಾಯಿತು. ವರ್ಷಕ್ಕೊಮ್ಮೆ ನಡೆಯುವ ಈ ತೆಪ್ಪೋತ್ಸವಕ್ಕೆ ನೂರಾರು ಭಕ್ತರು ಆಗಮಿಸಿ ತೆಪ್ಪೋತ್ಸವವನ್ನು ಕಣ್ತುಂಬಿಕೊಂಡರು.






