ನಾಪೋಕ್ಲು ಡಿ.28 NEWS DESK : ಪಟ್ಟಣದಲ್ಲಿ ಆಟೋ ಚಾಲಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಪರಿಹಾರಕ್ಕಾಗಿ ಪಂಚಾಯಿತಿ ಇತರ ಇಲಾಖೆಗಳಿಗೆ ಮನವಿ ಸಲ್ಲಿಸಿದರು. ಆದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ಆರೋಪಿಸಿರುವ ಆಟೋ ಚಾಲಕರು ಡಿ.30 ರಂದು ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಆಟೋ ಚಾಲಕರ ಸಂಘದ ಅಧ್ಯಕ್ಷ ಟಿ.ಪಿ.ಸುಕುಮಾರ್ ಹೇಳಿದರು. ಸ್ಥಳಿಯ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಳಿಗ್ಗೆ 10.30ಕ್ಕೆ ಗ್ರಾಮ ಪಂಚಾಯಿತಿ ಎದುರು ಆಟೊಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಲಾಗುವುದೆಂದರು. ಪಟ್ಟಣದಲ್ಲಿ ಆಟೋ ಚಾಲಕರು ಸೂಕ್ತ ನಿಲ್ದಾಣ ಇಲ್ಲದೆ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಲ್ಲಿನ ಅಪ್ಪಚ ಕವಿ ರಸ್ತೆಯಲ್ಲಿ ಆಟೋ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಅಲ್ಲಿ ಖಾಸಗಿ ವಾಹನಗಳು ನಿಲುಗಡೆ ಮಾಡುತ್ತಿರುವುದರಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ಹೇಳಿದರು. ಆಟೋಗಳ ನಿಲುಗಡೆಗಾಗಿ ನಾಪೋಕ್ಲು-ಮಡಿಕೇರಿ ಮುಖ್ಯರಸ್ತೆಯಲ್ಲಿ 120 ಮೀಟರ್ ಅಂತರದ ಸ್ಥಳ ಅವಕಾಶ ಕಲ್ಪಿಸಿ ಕೊಡುವಂತೆ ಈ ಹಿಂದೆ…
ಲೇಖಕ: admin
ದೆಹಲಿ ಡಿ.28 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಭಾರತದ ಆರ್ಥಿಕ ಸುಧಾರಣೆಗಳ ಹರಿಕಾರ, ಮುತ್ಸದ್ದಿ ನಾಯಕ, ಮಾಜಿ ಪ್ರಧಾನಿ ದಿವಂಗತ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸಿದರು.
ವಿರಾಜಪೇಟೆ ಡಿ.28 NEWS DESK : ಆರ್ಜಿ ಗ್ರಾಮದ ಶ್ರೀ ಸ್ವಾಮಿ ಅಯ್ಯಪ್ಪ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ಸ್ಪಾಮಿಯ ವಾರ್ಷಿಕ ಮಂಡಲ ಪೂಜಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಮುಂಜಾನೆಯಿಂದಲೇ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜೆ ಹಾಗೂ ಭಜನೆ ಜರುಗಿತು. ಮಧ್ಯಾಹ್ನ ಮಹಾಪೂಜೆ ಬಳಿಕ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಸಂಜೆ ಭಜನಮಂದಿರಲ್ಲಿ ದೀಪಾರಾಧನೆ ನಡೆಯಿತು. ಶ್ರೀ ಸ್ವಾಮಿಯ ಭಾವಚಿತ್ರವಿರಿಸಿದ ಪಲ್ಲಕ್ಕಿಯೊಂದಿಗೆ ಅಯ್ಯಪ್ಪ ಮಾಲದಾರಿಗಳು ಭಜನ ಮಂದಿರದಿಂದ ಮೆರವಣಿಗೆಯಲ್ಲಿ ಸಾಗಿದರು. ಮೆರವಣಿಗೆಯಲ್ಲಿ ಮಹಿಳೆಯರು ಸೇರಿದಂತೆ ಮಕ್ಕಳು ದೀಪ ಹೊತ್ತು ಮೆರವಣಿಗೆಗೆ ಮೆರಗು ನೀಡಿದರು. ಶ್ರೀ ಅಯ್ಯಪ್ಪ ಸ್ವಾಮಿ ಬೇಟೆಗೆ ಹೊರಡುವ ವಿರಾಟ್ ರೂಪದ ಸ್ತಬ್ಧ ಚಿತ್ರ ಶೋಭ ಯಾತ್ರೆಯ ಪ್ರಮುಖ ಆಕರ್ಷಣೆಯಾಗಿತ್ತು. ಈ ಸಂದರ್ಭ ಶ್ರೀ ಸ್ವಾಮಿ ಅಯ್ಯಪ್ಪ ಭಜನಾ ಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ಉಮೇಶ್, ಕಾರ್ಯದರ್ಶಿ ಶಿವಪ್ಪ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಪೆರುಂಬಾಡಿ, ಆರ್ಜಿ ಗ್ರಾಮ ಬಾಳುಗೋಡು, ಬಿಟ್ಟಂಗಾಲ ಸೇರಿದಂತೆ ನಗರದ…
ಕುಶಾಲನಗರ NEWS DESK ಡಿ.27 : ದ್ವಿಚಕ್ರ ವಾಹನ ಮತ್ತು ಟಿಟಿ ನಡುವೆ ಡಿಕ್ಕಿ ಸಂಭವಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ- ಹಾರಂಗಿ ರಸ್ತೆಯಲ್ಲಿ ನಡೆದಿದೆ. ಕುಶಾಲನಗರ ಪುರಸಭೆ ವ್ಯಾಪ್ತಿಯ ಶ್ರೀರಾಮ್ ಬಡಾವಣೆಯ ಜೈರಾಮ್ ಹಾಗೂ ಸವಿತ ದಂಪತಿಯ ಕಿರಿಯ ಪುತ್ರ ಕವಿರತ್ನ(20) ಮೃತ ಯುವಕ. ಕುಶಾಲನಗರದ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಮತ್ತು ಎದುರಿನಿಂದ ಬರುತ್ತಿದ್ದ ಟಿಟಿ ನಡುವೆ ಅಪಘಾತ ಸಂಭವಿಸಿದೆ. ಮೃತ ಕವಿರತ್ನ ಸೇರಿದಂತೆ ಸ್ಕೂಟರ್ ನಲ್ಲಿ ಮೂವರು ಯುವಕರಿದ್ದರು ಎಂದು ಹೇಳಲಾಗಿದೆ. ಇಬ್ಬರು ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೃತ ಕವಿರತ್ನ ಇಬ್ಬರು ಸಹೋದರಿಯರು ಹಾಗೂ ಪೋಷಕರನ್ನು ಅಗಲಿದ್ದಾನೆ. ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ NEWS DESK ಡಿ.27: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಡಿ.24ರ ಸಂಜೆ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರದ ನಿವಾಸಿ ದಿವಂಗತ ಪ್ರಕಾಶ್-ಜಯ ದಂಪತಿ ಪುತ್ರ ದಿವಿನ್(28) ಗಾಯಗೊಂಡಿರುವ ಯೋಧ. ದಿವಿನ್ ಸ್ಥಿತಿ ಚಿಂತಾಜನಕವಾಗಿದ್ದು, ಶ್ರೀನಗರ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಭಾರತೀಯ ಸೇನೆಯಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ದಿವಿನ್ ತಾಯಿ ಜಯ ಅವರು ಗುರುವಾರ ಸಂಜೆ ಶ್ರೀನಗರಕ್ಕೆ ತೆರಳಿದ್ದಾರೆ. ಇನ್ನಷ್ಟೇ ದಿವಿನ್ ಆರೋಗ್ಯದ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ದಿವಿನ್ ತನ್ನ ತಾಯಿಗೆ ಏಕೈಕ ಆಸರೆಯಾಗಿದ್ದು, 10 ವರ್ಷದ ಹಿಂದೆ ಸೇನೆಗೆ ಸೇರಿದ್ದರು. ಇತ್ತೀಚೆಗೆ ನಿಶ್ಚಿತಾರ್ಥ ಕೂಡ ನೆರವೇರಿದ್ದು, 2025ರ ಫೆಬ್ರವರಿಯಲ್ಲಿ ವಿವಾಹ ನಿಶ್ಚಿಯವಾಗಿತ್ತು. ಆಮಂತ್ರಣ ಪತ್ರವೂ ಮುದ್ರಣಗೊಂಡಿದೆ.
ಕಣಿವೆ ಡಿ.27 NEWS DESK : ಆರಕ್ಷಕ ಉಪನಿರೀಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ನಾಕೂರು ಶಿರಂಗಾಲ ಗ್ರಾಮದ ಲಿತೇಶ್ ರಾಜ್ಯ ಮಟ್ಟದಲ್ಲಿ 24 ನೇ ರ್ಯಾಂಕ್ ಗಳಿಸಿ ವಿಶೇಷ ಸಾಧನೆ ತೋರಿದ್ದಾರೆ. ಇವರು ಸುಂಟಿಕೊಪ್ಪ ಬಳಿಯ ನಾಕೂರು ಶಿರಂಗಾಲ ಗ್ರಾಮದ ನಿವಾಸಿ ಕೃಷಿಕ ರಾಮಯ್ಯ ಹಾಗೂ ತಿಲಕ ದಂಪತಿಗಳ ಪುತ್ರ .
ಕೊಡ್ಲಿಪೇಟೆ ಡಿ.27 NEWS DESK : ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಸಮೀಪದ ಶಾಲಾ ಆವರಣದಲ್ಲಿರುವ ಕಿರಿಕೊಡ್ಲಿ ಮಠದ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಕ್ಷೇತ್ರ ಕಿರಿಕೊಡ್ಲಿ ಮಠದ ಪೂಜ್ಯರಾದ ಲಿಂಗೈಕ್ಯ ಶ್ರೀ ಗುರುಸಿದ್ದ ಸ್ವಾಮಿಯ ಸಂಸ್ಮರಣ ಧಾರ್ಮಿಕ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಲೋಕಕಲ್ಯಾಣಾರ್ಥವಾಗಿ ರುದ್ರಾಭಿಷೇಕ, ಗಣಪತಿ ಹೋಮ, ರುದ್ರ ಹೋಮ,ಸಹಸ್ರ ಬಿಲ್ವಾರ್ಚನ ಕಾರ್ಯಕ್ರಮ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯ ನಡೆಯಿತು. ಕಿರಿಕೊಡ್ಲಿ ಮಠದ ಮಠಾಧ್ಯಕ್ಷ ಸದಾಶಿವ ಸ್ವಾಮೀಜಿಗಳ ನೇತೃತ್ವದಲ್ಲಿ ಹಲವು ಮಠಾಧೀಶರುಗಳು ಚರ ಮೂರ್ತಿಗಳು ಪಾಲ್ಗೊಂಡು ಧಾರ್ಮಿಕ ಕೈಂಕೈರ್ಯಗಳನ್ನು ನೆರವೇರಿಸಿದರು. ಸ್ವಸ್ತಿ ಶ್ರೀ ವಿಜಯ ಅಭ್ಯುದಯ ಶಾಲಿವಾಹನ ಶಕ1946 ನೇನೇ ಕ್ರೋಧಿನಾಮ ಸಂವತ್ಸರ ದಕ್ಷಿಣ ಯಾಣೆ ಹೇಮಂತ ಋತು ಮಾರ್ಗಶಿರ ಮಾಸ ಕೃಷ್ಣ ಪಕ್ಷ ದ್ವಾದಶಿ ತಿಥಿ ಶುಕ್ರವಾರ ವಿಶಾಖ ನಕ್ಷತ್ರ ದೃಥಿನಾಮ ಯೋಗ ಅಂಗವಾಗಿ ಬೆಳಿಗ್ಗೆ ಗಂಗಾ ಪೂಜೆ ಹಾಗೂ ಗಣಪತಿ ಪೂಜೆಯೊಂದಿಗೆ ಸ್ವಾಮಿಗೆ ರುದ್ರಾಭಿಷೇಕ ನಡೆಯಿತು. ದೇವರಿಗೆ ವಿವಿಧ ಧಾರ್ಮಿಕ ಪೂಜೆಗಳೊಂದಿಗೆ ಧಾನ್ಯಗಳನ್ನು ಇಟ್ಟು…
ಭಾಗಮಂಡಲ ಡಿ.27 NEWS DESK : ಚೇರಂಗಾಲ ಗ್ರಾಮದ ಶ್ರೀ ಈಶ್ವರ ಭಗವತಿ ದೇವಾಲಯದ ವಾರ್ಷಿಕ ಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ದೇವರಿಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ನಂತರ ವಿಶೇಷ ಮಹಾಪೂಜೆ ನೆರವೇರಿತು. ಪೂಜಾ ಕಾರ್ಯವು ರವಿ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಬಳಿಕ ತಕ್ಕರಾದ ಶಿರಕಜೆ ಸುಂದರ ಅವರ ನೇತೃತ್ವದಲ್ಲಿ ಗ್ರಾಮಸ್ಥರಿಂದ ಕೋಲಾಟ ನಡೆಯಿತು. ಭಾಗಮಂಡಲದ ಶ್ರೀ ಕಾವೇರಿ ಆಟೋ ಚಾಲಕರ ಸಂಘದ ಸದಸ್ಯರಿಂದ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಾಲಯದ ಅಧ್ಯಕ್ಷರು ಹೊಸೂರು ಸತೀಶ್ ಕುಮಾರ್, ಕಾರ್ಯದರ್ಶಿ ಮತ್ತಾರಿ ರಾಜ, ಗ್ರಾ.ಪಂ ಸದಸ್ಯ ಶಿರಕಜೆ ನಾಗೇಶ್, ಸಂಘದ ಸದಸ್ಯರಾದ ಶಿರಕಜೆ ಟಿ.ಭವನ್ ಕುಮಾರ್, ಕುಂಬನ ರವಿಂದ್ರ, ಮೂಲೆಮಜಲು ಸುದಿ, ಪರಿವಾರ ಸಂತೋಷ್, ಶಿರಕಜೆ ತನುರಾಜ್, ಶಿರಕಜೆ ಪವನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ 7 ದಿನಗಳ ಕಾಲ ಶೋಕಾಚರಣೆ ಇರುವುದರಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಕಾರದಲ್ಲಿ ಹಾಗೂ ಕೊಡಗು ಗೌಡ ವಿದ್ಯಾ ಸಂಘ ವತಿಯಿಂದ ಇದೇ ಡಿ.29 ರಂದು ನಡೆಯಬೇಕಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮವು ಜನವರಿ 12 ಕ್ಕೆ ಮುಂದೂಡಲಾಗಿದೆ ಎಂದು ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ತಿಳಿಸಿದ್ದಾರೆ.
ಮಡಿಕೇರಿ ಡಿ.27 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ಜಾತ್ರೋತ್ಸವದ ವಿಶೇಷ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿತು. ಮುಂಜಾನೆಯಿಂದಲೇ ಕವಾಟ ಪೂಜೆ, ತೈಲಾಭ್ಯಂಜನ, ಪಂಚಾಮೃತ ಅಭಿಷೇಕ, ಮಧ್ಯಾಹ್ನ ಧ್ವಜಸ್ತಂಭ ಪೂಜೆ, ಮಹಾಪೂಜೆ ಹಾಗೂ ತೀರ್ಥಪ್ರಸಾದ ವಿತರಣೆ ಜರುಗಿತು. ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಸಂಜೆ ನಂದಿಪಾರೆ ಕಾವೇರಿಯಲ್ಲಿ ದೇವರ ಜಳಕ ನಡೆಯಿತು. ಸಂಜೆ 6 ಗಂಟೆಗೆ ದೇವಾಲಯದ ಹೊರಾಂಗಣದಲ್ಲಿ ದೇವರ ನೃತ್ಯಬಲಿ, ನಡೆಭಂಡಾರ, 7.30 ಗಂಟೆಗೆ ಧ್ವಜಾವರೋಹಣ, ರಾತ್ರಿ 8.30 ಗಂಟೆಗೆ ಮಹಾಪೂಜೆ, ತೀರ್ಥಪ್ರಸಾದ ವಿತರಣೆ, 9 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಡಿ.28 ರಂದು ಬೆಳಿಗ್ಗೆ 10.30 ಗಂಟೆಗೆ ನವಕ ಕಲಶ ಪೂಜೆ, ಅಭಿಷೇಕ, ಪಂಚಾಮೃತ ಅಭಿಷೇಕ, ಮಧ್ಯಾಹ್ನ 12.15 ಗಂಟೆಗೆ ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ಮಂತ್ರಾಕ್ಷತೆ, 1 ಗಂಟೆಗೆ ಅನ್ನಸಂರ್ಪಣೆ ನೆರವೇರಲಿದೆ ದೇವಾಲಯ ಸಮಿತಿಯ ಅಧ್ಯಕ್ಷ ಶಶಿ ಜನಾರ್ಧನ ಮಾಹಿತಿ ನೀಡಿದ್ದಾರೆ.






