ಮಡಿಕೇರಿ ನ.15 NEWS DESK : ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ, ಜೇಡ್ಲ ಗೋಶಾಲೆಯಿಂದ ಪ್ರಥಮ ವರ್ಷದ “ಜೇಡ್ಲ ಗೋಕುಲ ತಿಲಕ” ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ರಾಮಚಂದ್ರಾಪುರ ಮಠ, ಹೊಸನಗರದ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ, ಜೇಡ್ಲ, ಸಂಪಾಜೆ ಗೋಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ: 07-12-2024 ರಂದು ಆಯ್ದ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 5 ದೇಶೀ ಗೋ ಪಾಲಕರಿಗೆ “ಜೇಡ್ಲ ಗೋಕುಲ ತಿಲಕ-24” ಎಂಬ ಬಿರುದಿನೊಂದಿಗೆ ಪ್ರೋತ್ಸಾಹ ಧನ ಹಾಗೂ ಪ್ರಶಂಸನಾ ಪತ್ರ ನೀಡಲಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅರ್ಹ ದೇಶೀ ಗೋ ಪಾಲಕರು 22-11-24 ರ ಮೊದಲು ಅರ್ಜಿಯನ್ನು ಸಲ್ಲಿಸಲು ಪ್ರಕಟಣೆ ತಿಳಿಸಿದೆ. ವಿವರಗಳಿಗಾಗಿ:9886266120 ಅಥವಾ 9481979526 ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.
ಲೇಖಕ: admin
ಮಡಿಕೇರಿ ನ.15 NEWS DESK : ಕುಶಾಲನಗರ- ಶ್ರೀರಂಗಪಟ್ಟಣ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದ್ದು, ಕೊಡಗಿನ ಜನರಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಭರವಸೆ ನೀಡಿದ್ದಾರೆ. ಮಡಿಕೇರಿ ತಾಲ್ಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕೊಡಗು ಜಿಲ್ಲೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸದಾ ಶ್ರಮಿಸುವುದಾಗಿ ತಿಳಿಸಿದರು. ಕುಶಾಲನಗರದವರೆಗಿನ ರೈಲು ಮಾರ್ಗದ ಕಾಮಗಾರಿ ಕೂಡ ಸಧ್ಯದಲ್ಲೇ ಆರಂಭಗೊಳ್ಳಲಿದೆ. ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯ ಕುರಿತು ದೂರುಗಳು ಕೇಳಿ ಬಂದಿದೆ. ಜಿಲ್ಲೆಯಾದ್ಯಂತ ಟವರ್ ಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ, ಶೀಘ್ರ ನೆಟ್ವರ್ಕ್ ಸಮಸ್ಯೆ ಬಗೆಹರಿಯಲಿದೆ. ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು, ರಸ್ತೆ, ತಡೆಗೋಡೆ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲು ಬದ್ಧನಾಗಿರುವುದಾಗಿ ತಿಳಿಸಿದರು. ::: ಮಾವುತರ ಸಮಸ್ಯೆಗೆ ಸ್ಪಂದನೆ ::: ದುಬಾರೆ ಸಾಕಾನೆ ಶಿಬಿರಕ್ಕೆ ಭೇಟಿ ನೀಡಿದ್ದ ಸಂಸದ ಯದುವೀರ್ ಅವರು ಮಾವುತರು ಹಾಗೂ ಕಾವಡಿಗರ ಸಮಸ್ಯೆಗಳನ್ನು ಆಲಿಸಿದರು. ಮನವಿಯನ್ನು ಸ್ವೀಕರಿಸಿದ…
ಮಡಿಕೇರಿ ನ.15 NEWS DESK : ಮಡಿಕೇರಿಯ ಗ್ರಾಮಾಂತರ ಮಂಡಲದ ಹಾಕತ್ತೂರು-ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾಜಪಾ ಸಂಘಟನಾ ಪರ್ವ ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸಿದರು. ನಂತರ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾರ 150ನೇ ಜನ್ಮದಿನದ ಶುಭ ಹಾರೈಸಿ, ಪಕ್ಷವನ್ನು ತಳಮಟ್ಟದಿಂದ ಕಟ್ಟುವ ಕೆಲಸಕ್ಕೆ ಕೈ ಜೋಡಿಸಿ ಸಶಕ್ತ ಭಾರತ ನಿರ್ಮಾಣ ಮಾಡಲು ಕಾರ್ಯಕರ್ತರಿಗೆ ಕರೆ ನೀಡಿದರು. ಇದೇ ಸಂದರ್ಭ ಗ್ರಾಮಸ್ಥರ ಅಹವಾಲು ಸ್ವೀಕರಿಸಿ, ಸಮಸ್ಯೆಗಳನ್ನು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮಡಿಕೇರಿ ನ.15 NEWS DESK : ಕೊಡವಲ್ಯಾಂಡ್ ಹಕ್ಕೊತ್ತಾಯದ ಪ್ರತಿಪಾದನೆಯ ನಿರಂತರತೆಗಾಗಿ ನ.26 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 34ನೇ ವರ್ಷದ “ಕೊಡವ ನ್ಯಾಷನಲ್ ಡೇ” ಮತ್ತು ಭಾರತದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಕೊಡವರು ಪಾಲ್ಗೊಳ್ಳುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಕೊಡವ ಸಮಾವೇಶ ಕೊಡವರ ರಾಜ್ಯಾಂಗದತ್ತ ಹಕ್ಕೊತ್ತಾಯದ ನಿರಂತರ, ಘಟನಾತ್ಮಕ ಅರಾಜಕೀಯ ಪ್ರಯಾಣವನ್ನು ಪುನರುಜ್ಜೀವನಗೊಳಿಸುತ್ತದೆ ಮತ್ತು ಪ್ರತಿಧ್ವನಿಸುತ್ತದೆ. ಭಾರತದ ಸಾರ್ವಭೌಮತ್ವ ಮತ್ತು ಪ್ರಭುತ್ವದಡಿಯಲ್ಲಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ಸಾಧಿಸಲು ಮತ್ತು ವಿಶ್ವರಾಷ್ಟ್ರ ಮಾನ್ಯತೆಯೊಂದಿಗೆ ಆದಿಮಸಂಜಾತ ಕೊಡವರಿಗೆ ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಪರಿಗಣನೆ ಮತ್ತು ಕೊಡವರ ಇತರೆ ಹತ್ತು ಶಾಸನ ಬದ್ಧ ಗುರಿಗಳು ಮತ್ತು ಅಶೋತ್ತರಗಳಿಗಾಗಿ ಸಂವಿಧಾನಿಕ ಹಕ್ಕೊತ್ತಾಯಗಳನ್ನು ಸಿಎನ್ಸಿ ಪ್ರತಿಪಾದಿಸುತ್ತ ಬಂದಿದೆ. ಕೊಡವ ಲೋಕದ…
ನಾಪೋಕ್ಲು ನ.15 NEWS DESK : ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಕ್ಕಳಿಗೆ ಆಟೋಟಗಳು ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಕ್ಕಳು ಹಾಡು, ನೃತ್ಯ, ಛದ್ಮವೇಷ ಪ್ರದರ್ಶಿಸಿ ಸಂಭ್ರಮಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಬಿ.ಎಂ.ಶಾರದ ಮಾತನಾಡಿ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಜವಾಲಾಲ್ ನೆಹರು ಅವರ ಹುಟ್ಟು ಹಬ್ಬವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು. ಶಿಕ್ಷಕಿ ಎಂ.ಬಿ ಭಾಗೀರಥಿ ಮಾತನಾಡಿ, ನೆಹರು ಅವರಿಗೆ ಮಕ್ಕಳೆಂದರೆ ಬಹಳ ಮಮತೆ. ಈ ಹಿನ್ನೆಲೆಯಲ್ಲಿ ಅವರ ಹುಟ್ಟು ಹಬ್ಬವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು. ಶಾಲಾ ನಾಯಕಿ ವಿಶಾಲಾಕ್ಷಿ ದಿನದ ಮಹತ್ವದ ಕುರಿತು ಮಾತನಾಡಿದರು. ಶಾಲಾ ಸಾಂಸ್ಕೃತಿಕ ನಾಯಕಿ ಬಿ.ಬಿ.ಶ್ರೀಶಾನ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ನಾಯಕರುಗಳಾದ ಬಿ.ಬಿ.ತ್ರಿಶಾನ, ಕೆ.ಆಕಾಶ್, ಪಿ.ಎಂ.ದೇವಯ್ಯ, ಡಿ.ಪಿ.ಕೃಪಾ, ಟಿ.ಎಂ.ನಂಜಪ್ಪ ಹಾಜರಿದ್ದರು. ಕಿರೀಟ್ ಸೋಮಯ್ಯ ವಂದಿಸಿದರು. ವರದಿ…
ಚೆಟ್ಟಳ್ಳಿ ನ.15 NEWS DESK : ನಂಜರಾಯಪಟ್ಟಣದ ಪುರಾತನ ವೀರಭದ್ರ ದೇವಾಲಯಕ್ಕೆ ಕೊಡಗು- ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ವೀರಭದ್ರ ದೇವಾಲಯ ಸಮಿತಿ ಅಧ್ಯಕ್ಷ ರತಿಷ್ , ಖಜಾಂಚಿ ಕೊಳಂಬೆ ವಿನು, ಸಮಿತಿಯ ಎಲ್ಲ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ನಾಪೋಕ್ಲು ನ.15 : ಕಕ್ಕಬ್ಬೆ ಗ್ರಾ.ಪಂ ವತಿಯಿಂದ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕುಂಜಿಲ ಗ್ರಾಮದ ಆಕ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಕ್ಕಬೆ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸರಕಾರಿ ಮತ್ತು ಖಾಸಗಿ ಶಾಲೆಗಳು ಸೇರಿದಂತೆ ಒಟ್ಟು ಒಂಭತ್ತು ಶಾಲೆಗಳ ವಿದ್ಯಾರ್ಥಿಗಳು ಒಂದೆಡೆ ಸೇರಿದರು. ಎಲ್ಲಾ ಶಾಲೆಯ ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಅಲ್ಲದೆ ಎಲ್ಲಾ ಶಾಲೆಯ ಮಕ್ಕಳಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಿ, ವಿಜೇತ ಮಕ್ಕಳಿಗೆ ಗಣ್ಯರು ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು. ಪಂಚಾಯಿತಿ ಅಧ್ಯಕ್ಷೆ ಶಿಲ್ಪ ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಬೀನ ಸುಚಿತ್ರ, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರಾದ ಸಂಪನ್ ಅಯ್ಯಪ್ಪ, ಚೋಯಮಾಡಾಂಡ ಹರೀಶ್ ಮೊಣ್ಣಪ್ಪ, ಅಹಮ್ಮದ್ ಬಷೀರ್, ತುಕ್ಕಡಿ ಕೆ.ಆರ್. ಸಫಿಯ, ಲೀಲಾವತಿ, ಇಂದಿರಾ, ಶೈಲಾ ತಿಮ್ಮಯ್ಯ, ಕುಂಡಂಡ ರಝಕ್ ಹಾಗೂ ಪಿಡಿಒ ಅಶೋಕ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕರು ಮತ್ತು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರು ಶೇಖರ್ ಮತ್ತು ಆಕ್ಸ್ಫರ್ಡ್…
ಪುತ್ತೂರು ನ.15 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲ್ಲಿ ಒಂದು ಚಿನ್ನ ಹಾಗೂ ಒಂದು ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್ರಾಮ್ ಜಗದೀಶ್ ಭಂಡಾರಿ 73 ಕೆಜಿ ವಿಭಾಗದಲ್ಲಿ ಒಟ್ಟು 190 ಕೆಜಿ ಭಾರ ಎತ್ತುವುದರ ಮೂಲಕ ಚಿನ್ನದ ಪದಕದ ಸಾಧನೆಯನ್ನು ಮಾಡಿದ್ದಾರೆ. ಇದೇ ಕ್ರೀಡಾಕೂಟದ 61 ಕೆಜಿ ವಿಭಾಗದಲ್ಲಿ ದ್ವಿತೀಯ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ವಿಭಾಗದ ಸ್ಕಂದ ಪ್ರಸಾದ್ ಒಟ್ಟು 151 ಕೆಜಿ ಭಾರವನ್ನು ಎತ್ತಿ ರಜತ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ…
ಮಡಿಕೇರಿ ನ.15 NEWS DESK : ಕೆ.ನಿಡುಗಣೆ ಗ್ರಾಮ ಪಂಚಾಯಿತಿ ಹಾಗೂ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಾಜಪಾ ಸಂಘಟನಾ ಪರ್ವ ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಂಡಿದ್ದರು. ಈ ಸಂದರ್ಭ ಮಾತನಾಡಿದ ಅವರು, ಪಕ್ಷ ಕಟ್ಟುವ ಮೂಲಕ ಸಶಕ್ತ ಭಾರತ ನಿರ್ಮಾಣ ಮಾಡಲು ಕಾರ್ಯಕರ್ತರಿಗೆ ಕರೆ ನೀಡಿದರು. ನಂತರ ಗ್ರಾಮಸ್ಥರ ಬೇಡಿಕೆಗಳನ್ನು ಆಲಿಸಿ ಅಹವಾಲು ಸ್ವೀಕರಿಸಿದರು.
ಮಡಿಕೇರಿ ನ.15 NEWS DESK : ಕೊಡಗು- ಕೇರಳ ಗಡಿಭಾಗದ ಕರಿಕೆ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಚಿರತೆ ನಿರಂತರವಾಗಿ ದಾಳಿ ಮಾಡುತ್ತಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಚಿರತೆ ಸೆರೆಗೆ ಆಗ್ರಹಿಸಿ ಕರಿಕೆ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಮಡಿಕೇರಿಯ ಅರಣ್ಯ ಭವನದಲ್ಲಿ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚೆಪಿಲಾವ್, ದೊಡ್ಡಚೇರಿ, ಪಳ್ಳಿಕಳ ಮತ್ತಿತರ ಕಡೆ ಕಳೆದ ಒಂದು ತಿಂಗಳಿನಿಂದ ಚಿರತೆ ಸಂಚಾರ ಕಂಡು ಬಂದಿದೆ. ಆರಕ್ಕೂ ಹೆಚ್ಚು ಸಾಕು ನಾಯಿಗಳನ್ನು ಚಿರತೆ ತಿಂದು ಹಾಕಿದ್ದು, ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಾರ್ವಜನಿಕರು ವಾಸಿಸುವ ಪ್ರದೇಶದ ಸಾಕು ನಾಯಿಗಳನ್ನೇ ಗುರಿ ಮಾಡಿ ಚಿರತೆ ದಾಳಿ ನಡೆಸುತ್ತಿದೆ. ಈ ಬೆಳವಣಿಗೆಯಿಂದ ಜನ ಆತಂಕಗೊಂಡಿದ್ದು, ಮನೆಯಿಂದ ಹೊರಗೆ ಬರುವುದೇ ಕಷ್ಟವಾಗಿದೆ. ಗ್ರಾಮಸ್ಥರು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ ಎಂದು ಬಾಲಚಂದ್ರನ್ ನಾಯರ್ ಅರಣ್ಯಾಧಿಕಾರಿಗಳಿಗೆ ವಿವರಿಸಿದರು. ತಾವು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಹಾಗೂ ಸ್ಥಳೀಯ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ…






