ಮಡಿಕೇರಿ NEWS DESK ನ.15 : ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಮಕ್ಕಂದೂರಿನಲ್ಲಿ ಬಿಜೆಪಿ ಸಂಘಟನಾ ಪರ್ವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಡಿಕೇರಿ ಗ್ರಾಮಾಂತರ ಮಂಡಲ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಭಾಜಪಾ ಸಂಘಟನಾ ಪರ್ವ ಕಾರ್ಯಕ್ರಮಕ್ಕೆ ಗೋ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಕ್ಕಂದೂರು ಬಿಜೆಪಿ ಪ್ರಮುಖರು ಮತ್ತಿತರರು ಹಾಜರಿದ್ದರು.
ಲೇಖಕ: admin
ನಾಪೋಕ್ಲು ನ.15 NEWS DESK : ಬಕ್ಕ ಹಾಗೂ ಕಾರುಗುಂದ ಅಂಗನವಾಡಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಕ್ಕ ಅಂಗನವಾಡಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಸೌಮ್ಯ ದಿನದ ಮಹತ್ವದ ಬಗ್ಗೆ ಮಾತನಾಡಿ, ಮಕ್ಕಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳಿಂದ ಪ್ರಾರ್ಥನೆ, ಅಭಿನಯ ಗೀತೆ ಮತ್ತು ಆಟೋಟ ಸ್ಪರ್ಧೆಯನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಕಾರ್ಯಕರ್ತೆಯರಾದ ಕೃತಿಕಾರಾಣಿ ಹಾಗೂ ಚಲಿತ ಮಧುಮೇಹ ತಪಾಸಣಾ ಶಿಬಿರ ನಡೆಸಿದರು. ಅಂಗನವಾಡಿ ಕಾರ್ಯಕರ್ತೆಯರಾದ ಶೈಲಜಾ, ರೋಹಿಣಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಚೆಟ್ಟಳ್ಳಿ ನ.15 NEWS DESK : ದೇಶವು ಡಿಜಿಟಲೀಕರಣದ ಮೂಲಕ ಆರ್ಥಿಕ ಅಭಿವೃದ್ಧಿಯತ್ತ ಸಾಗುತ್ತಿದ್ದು, ಮುಂದಿನ ಹತ್ತು ವರ್ಷಗಳಲ್ಲಿ ಬಲಿಷ್ಠ ರಾಷ್ಟ್ರದ ಪಟ್ಟಿಯಲ್ಲಿ 3ನೇ ಸ್ಥಾನ ತಲುಪಲಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ ಅಧ್ಯಕ್ಷ ಅಪ್ಪಚಟ್ಟೋಳಂಡ .ಕೆ.ಮನು ಮುತ್ತಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಲ ನಿಯಮಿತ, ಕೊಡಗು ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ, ಮಡಿಕೇರಿ ಸಹಕಾರ ಇಲಾಖೆ, ಕೊಡಗು ಜಿಲ್ಲೆ ಹಾಗೂ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಚೆಟ್ಟಳ್ಳಿಯ ಶ್ರೀ ನರೇಂದ್ರ ಮೋದಿ ಸಹಕಾರ ಭವನದಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಸಹಕಾರ ಚಳುವಳಿಯನ್ನು ಬಲಪಡಿಸುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶವು ಆರ್ಥಿಕತೆಯಲ್ಲಿ ಮುಂದುವರಿದರೆ ದೇಶದ ಅಭಿವೃದ್ಧಿಯ ಜೊತೆಗೆ ಬಡತನ ನಿರ್ಮೂಲನೆ ಆಗಲಿದೆ. ಕೇಂದ್ರ ಸರಕಾರವು ಸಹಕಾರ ಸಚಿವಾಲಯದ ನೂತನ ಪ್ರಯತ್ನಗಳ ಮೂಲಕ ಸಹಕಾರ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುತಿದ್ದು, ಪ್ರಾಥಮಿಕ…
ಮಡಿಕೇರಿ ನ.15 NEWS DESK : ನಂಜರಾಯಪಟ್ಟಣದ ದುಬಾರೆ ಸಾಕಾನೆ ಶಿಬಿರಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು. ಗ್ರಾಮಸ್ಥರು ಆರತಿ ಬೆಳಗಿ ಸಂಸದರನ್ನು ಬರಮಾಡಿಕೊಂಡರು. ಈ ಸಂದರ್ಭ ಆನೆ ಮಾವುತರ ಆಹವಾಲುಗಳನ್ನು ಆಲಿಸಿದ ಸಂಸದರು, ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಿದರು.
ಸುಂಟಿಕೊಪ್ಪ ನ.15 NEWS DESK : ಕೊಡಗು ಜಿಲ್ಲಾ ಆಶೋದಯ ಸಮಿತಿಯ ವತಿಯಿಂದ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಕೆ.ಪ್ರಸಾದ್ ಕುಟ್ಟಪ್ಪ ಮತ್ತು ಕೆ.ಎಂ.ಅಲಿಕುಟ್ಟಿ ಅವರ ನೇತೃತ್ವದಲ್ಲಿ ಬ್ಲೂ ಬಾಯ್ಸ್ ಯುವಕ ಸಂಘದ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಶಿಬಿರವನ್ನು ಉದ್ಯಮಿ ಆನಂದ ಬಸಪ್ಪ ಉದ್ಘಾಟಿಸಿದರು. ಶಿಬಿರದಲ್ಲಿ ಪನ್ಯ ಮತ್ತು ಟಿ.ಸಿ.ಎಲ್ ಸುತ್ತಲಿನ ಸುಮಾರು 200ಕ್ಕೂ ಹೆಚ್ಚು ಜನರು ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಕಣ್ಣು, ರಕ್ತದೊತ್ತಡ(ಬಿಪಿ) ಹಾಗೂ ಮಧುಮೇಹ (ಸಕ್ಕರೆ ಕಾಯಿಲೆ) ಇತ್ಯಾದಿ ಪರೀಕ್ಷೆಗೆ ಮಾಡಿಸಿಕೊಂಡರು. ಅಲ್ಲದೇ ಅಗತ್ಯವಿದ್ದವರಿಗೆ ಕನ್ನಡಕವನ್ನು ವಿತರಣೆ ಮಾಡಲಾಯಿತು. ನಂತರ ಮಾತನಾಡಿದ ಗ್ರಾ.ಪಂ ಸದಸ್ಯರಾದ ಎಂ.ನಾಗರತ್ನ ಸುರೇಶ್, ತೋಟದ ವ್ಯವಸ್ಥಾಪಕರಾದ ಪೊನ್ನಪ್ಪ, ಮಂಜುನಾಥ್, ಆಶೋದಯ ಸೇವಾ ಸಮಿತಿಯ ಕುಶಾಲನಗರ ಆರೋಗ್ಯ ಕೇಂದ್ರದ ಆಪ್ತಸಮಲೋಚಕರಾದ ಮುತ್ತಮ್ಮ, ಕಣ್ಣಿನ ತಜ್ಞರಾದ ಪುಷ್ಪೆಂದ್ರ ಯಾದವ್, ತಂಡದ ಉಸ್ತುವಾರಿ ಅಸೀಸ್, ಆಶೋದಯ ಸಮಿತಿಯ ವಿದ್ಯಾ, ನಾಗರತ್ನ ಹಾಗೂ ಇನ್ನಿತರರು ಹಾಜರಿದ್ದರು.
ಸುಂಟಿಕೊಪ್ಪ,ನ.15 NEWS DESK : ಮಾದಾಪುರದ ಎಸ್ಜೆಎಂ ಶಾಲಾ ವತಿಯಿಂದ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಸಮುದಾಯದ ಸಹಾಯಕರುಗಳಾದ ಆರಕ್ಷಕ ಠಾಣೆ, ಆಸ್ಪತ್ರೆ, ಬ್ಯಾಂಕ್, ಆಟೋ ನಿಲ್ದಾಣ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಅಲ್ಲಿನ ಮಹತ್ವವನ್ನು ತಿಳಿದುಕೊಂಡರು. ಅಲ್ಲದೆ ಸಿಹಿ ಹಂಚಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಎಸ್ಜೆಎಂ ಶಾಲೆಯ ಮುಖ್ಯ ಶಿಕ್ಷಕಿ ಪ್ರಿಯ, ಸಹ ಶಿಕ್ಷಕರುಗಳಾದ ನಿವೇದಿತಾ, ಲವ್ಯ, ಜೋರ, ದೀಪಿಕಾ, ಧನ್ಯ, ಅಂಕಿತ, ಆದಿರಾ, ಸಂಜಯ್ ಮತ್ತಿತರರು ಇದ್ದರು.
ಸುಂಟಿಕೊಪ್ಪ ನ.17 NEWS DESK : ಉತ್ತಮವಾದ ನಾಳೆಗಳನ್ನು ಸೃಷ್ಟಿಸುವ ಜವಾಬ್ದಾರಿ ಮಕ್ಕಳ ಕೈಯಲ್ಲಿದ್ದು, ಮಕ್ಕಳನ್ನು ಚೆನ್ನಾಗಿ ಪೋಷಿಸಿದಾಗ, ಗುಣಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಇದು ಸಾಧ್ಯ ಎಂದು ಹೊಸದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರ, ಕುಶಾಲನಗರ ತಾಲೂಕು ಪತ್ರರ್ತರ ಸಂಘದ ಗೌರವ ಸಲಹೆಗಾರ ಕೆ. ತಿಮ್ಮಪ್ಪ ಅಭಿಪ್ರಾಯಪಟ್ಟರು. ಸುಂಟಿಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪತ್ರರ್ತರ ಸಂಘದಿಂದ ಕೊಡಮಾಡಿದ ಬಹುಮಾನಗಳನ್ನು ವಿತರಿಸಿ ಮಾತನಾಡಿದರು. ಮನೆಯೇ ಮಗುವಿನ ಮೊದಲ ಶಾಲೆ. ಅಲ್ಲಿ ಪೋಷಕರು ಶಿಸ್ತು ಮತ್ತು ಪ್ರಾಮಾಣಿಕತೆಯನ್ನು ಮಕ್ಕಳಲ್ಲಿ ಕಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಈ ಮೌಲ್ಯಗಳನ್ನು ಹೊಂದಿರುವ ಮಕ್ಕಳು ಶಾಲೆ ಮತ್ತು ಜೀವನದಲ್ಲಿ ಯಶಸ್ವಿಯಾಗುತ್ತಾರೆ. ಅವರು ಬಲಿಷ್ಠ ರಾಷ್ಟ್ರವನ್ನು ನರ್ಮಿಸಲು ಶಕ್ತರಾಗುತ್ತಾರೆ. ಇಂದಿನ ಮಕ್ಕಳೇ ನಾಳಿನ ನಾಡಿನ ಶಿಲ್ಪಿಗಳಾಗಿದ್ದು, ಇಡೀ ಜಗತ್ತು ನಿಮ್ಮ ಕೈಯಲ್ಲಿದೆ. ಆದ್ದರಿಂದ, ನಗು, ಆಟದ ಜೊತೆಗೆ ಮನವಿಟ್ಟು ಕಲಿತು ದೇಶದ ಉತ್ತಮ ನಾಗರಿಕರಾಗಬೇಕು. ಕಷ್ಟಪಟ್ಟು…
ಮಡಿಕೇರಿ ನ.14 NEWS DESK : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ ಯೋಜನೆಯನ್ನು 2023ರ ಡಿಸೆಂಬರ್, 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು ಪದವಿ ಹಾಗೂ ಡಿಪ್ಲೋಮಾ ಕೋರ್ಸ್ಗಳನ್ನು 2022-23 ಹಾಗೂ 2023-24 ನೇ ಸಾಲಿನಲ್ಲಿ ತೇರ್ಗಡೆಯಾದ ಕರ್ನಾಟಕ ರಹವಾಸಿಗಳಿಗೆ ನಿರುದ್ಯೊಗಿ ಭತ್ಯೆಯನ್ನು ನೀಡುವ ಖಾತರಿ ಯೋಜನೆಯಾಗಿದೆ. ಯಾವುದೇ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಎಲ್ಲಾ ಪದವೀಧರರಿಗೆ, ಸ್ನಾತಕೋತ್ತರ ಪದವಿ, ಬಿಎಡ್ ಪದವೀಧರರಿಗೆ ಪ್ರತಿ ತಿಂಗಳು ರೂ.3 ಸಾವಿರ ಗಳು ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ…
ಮಡಿಕೇರಿ ನ.14 NEWS DESK : ಸಹಕಾರ ಸಂಘಗಳು ಆರ್ಥಿಕ ಪ್ರಗತಿಯನ್ನು ಮತ್ತಷ್ಟು ವೃದ್ಧಿಸಿಕೊಂಡು, ಕೃಷಿಕರು ಹಾಗೂ ಬಡವರಿಗೆ ಸಾಲ ಸೌಲಭ್ಯ ಕಲ್ಪಿಸಿ ಆರ್ಥಿಕ ಬೆಳವಣಿಗೆಗೆ ಸಹಕರಿಸುವಂತೆ ಹಿರಿಯ ಸಹಕಾರಿ ಹಾಗೂ ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಸಲಹೆ ನೀಡಿದ್ದಾರೆ. ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆವರಣದಲ್ಲಿ ಸಹಕಾರ ಸಪ್ತಾಹದ ಧ್ವಜಾರೋಹಣ ನಂತರ ಪಂದ್ಯಂಡ ಬೆಳ್ಯಪ್ಪ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಸಹಕಾರ ಕ್ಷೇತ್ರದಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಇರಬಾರದು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಇದ್ದಲ್ಲಿ ಸಹಕಾರ ಸಂಘಗಳ ಬಲವರ್ಧನೆ ಸಾಧ್ಯ ಎಂದರು.’ ಸಹಕಾರ ಸಂಘಗಳಿಗೆ ದೇಶದಲ್ಲಿ ತಮ್ಮದೇ ಆದ ಸ್ಥಾನವಿದ್ದು, ಸಂಪತ್ತನ್ನು ಎಲ್ಲರೂ ಹಂಚಿಕೊಂಡು ಸಮಾನವಾಗಿ ಬದುಕುವುದು ಸಹಕಾರದ ಧ್ಯೇಯೋದ್ದೇಶವಾಗಿದೆ ಎಂದು ಎಂ.ಸಿ.ನಾಣಯ್ಯ ತಿಳಿಸಿದರು. ಸಹಕಾರ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆ ಇದ್ದಲ್ಲಿ ಸಹಕಾರ ಸಂಘಗಳನ್ನು ಮತ್ತಷ್ಟು ಬಲಪಡಿಸಬಹುದಾಗಿದೆ. ಆ ನಿಟ್ಟಿನಲ್ಲಿ ಸಹಕಾರ ಸಂಘಗಳು ಪಕ್ಷಾತೀತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಸಹಕಾರ ಸಂಘದಲ್ಲಿ ಲಕ್ಷಾಂತರ ಜನರು…
ಮಡಿಕೇರಿ ನ.14 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿರಾಜಪೇಟೆ ತಾಲೂಕು, ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ , ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್, ವಿರಾಜಪೇಟೆ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಡಾ ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ.ಹೇಮಾವತಿ ವಿ.ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಕುರಿತು ಜಾಗೃತಿ ಹಾಗೂ ಅರಿವು ಮೂಡಿಸುವ ” ಸ್ವಾಸ್ಥ್ಯ ಸಂಕಲ್ಪ ” ಕಾರ್ಯಕ್ರಮ ನಡೆಯಿತು. ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಉಪ ಪ್ರಾಂಶುಪಾಲರಾದ ಎಂ.ಕೆ.ಪದ್ಮಾ, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಸ್ವ ನಿಗ್ರಹದೊಂದಿಗೆ ಹತೋಟಿಗೆ ತಂದುಕೊಳ್ಳುವುದು ಅನಿವಾರ್ಯತೆ ಇದೆ. ವಿದ್ಯಾರ್ಥಿಗಳೇ ಉತ್ತಮ ಸಮಾಜದ ಆಸ್ತಿ ಎಂದು…






