ಮಡಿಕೇರಿ ನ.14 NEWS DESK : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹತ್ತು-ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ನಿಟ್ಟಿನಲ್ಲಿ ಸರಕಾರಿ ಶಾಲೆಗಳಿಗೆ ಸದುಪಯೋಗವಾಗಲಿ ಎಂಬ ಆಶಾಭಾವನೆಯಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಮುದಾಯ ವಿಭಾಗದಿಂದ ರಾಜ್ಯದ 507 ಶಾಲೆಗಳಿಗೆ 2.74 ಕೋಟಿ ವೆಚ್ಚದಲ್ಲಿ 4044 ಜೊತೆ ಡೆಸ್ಕ್ ಬೆಂಚು ವಿತರಣೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊಡಗು ಜಿಲ್ಲೆಯ 98 ಸರಕಾರಿ ಶಾಲೆಗಳಿಗೆ ರೂ.72.25ಲಕ್ಷ ಮೌಲ್ಯದ 850 ಜೊತೆ ಡೆಸ್ಕ್ ಬೆಂಚು ವಿತರಣೆ ಮಾಡಲು ಸಿದ್ದತೆಯಾಗಿದೆ. ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಎಸ್.ಅನಿಲ್ ಕುಮಾರ್ ಮಾತನಾಡಿ ಪ್ರಸಕ್ತ ವರ್ಷ 1030 ಜ್ಷಾನದೀಪ ಅಥಿತಿ ಶಿಕ್ಷಕರನ್ನು ಸರಕಾರಿ ಶಾಲೆಗಳಲ್ಲಿ ನೇಮಿಸಲಾಗಿದೆ. ಕಳೆದ ವರ್ಷ 45 ಸಾವಿರ, ಪ್ರಸಕ್ತ ವರ್ಷ 65 ಸಾವಿರ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಿಸಲಾಗಿದೆ ಎಂದು ತಿಳಿಸಿದರು. ಹೇಮಾವತಿ ವಿ.ಹೆಗ್ಗಡೆ ದ.ಕ ಜಿ.ಪಂ ಸಿಇಓ ಕೆ.ಆನಂದ ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ನ.14 NEWS DESK : ಪೊನ್ನಂಪೇಟೆಯ ಕೂರ್ಗ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ “ಅವಿನ್ಯಂ” ವಿದ್ಯಾರ್ಥಿ ಒಕ್ಕೂಟದ 2024-25ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸಂಭ್ರಮದಿಂದ ನಡೆಯಿತು. ಬೆಂಗಳೂರು ಹೆಚ್ಪಿ ಕಂಪನಿಯ ಹಿರಿಯ ತಂತ್ರಜ್ಞ ಡಾ. ಎಂ.ಆರ್.ಚಂಗಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಕೃತಕ ಬುದ್ಧಿಮತ್ತೆಯ ಬಳಕೆ ಮತ್ತು ಅದರಿಂದ ತಾಂತ್ರಿಕ ಸಂಸ್ಥೆಗಳು ದೈನಂದಿನ ಚಟುವಟಿಕೆಗಳನ್ನು ಸುಧಾರಿಸುತ್ತಿರುವ ಕುರಿತು ಸಂದೇಶ ನೀಡಿದರು. “ಸ್ಥಿರ ಭವಿಷ್ಯಕ್ಕಾಗಿ ಬದಲಾವಣೆಯ ಒಕ್ಕೂಟ ಮತ್ತು ವಿಕೇಂದ್ರೀಕೃತ ವಿಧಾನಗಳು” ಎಂಬ ವಿಷಯದ ಕುರಿತು ತಾಂತ್ರಿಕ ಉಪನ್ಯಾಸ ನೀಡಿ, ಮುಂದಿನ ಪೀಳಿಗೆಗೆ ಬದಲಾವಣೆಯ ಅವಶ್ಯಕತೆಯ ಬಗ್ಗೆ ವಿವರಿಸಿದರು. ಪ್ರಾಂಶುಪಾಲರಾದ ಡಾ.ಎಂ.ಬಸವರಾಜ್ ಮಾತನಾಡಿ, ವಿದ್ಯಾರ್ಥಿ ಒಕ್ಕೂಟವು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹಾರೈಸಿದರು. ಕೊಡವ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ರಾಕೇಶ್ ಪೂವಯ್ಯ “ಸಂವಿದ್-2.0” ವಾರ್ಷಿಕ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿ, ಕೃತಕ ಬುದ್ಧಿಮತ್ತೆಯು ಹೇಗೆ ನಮ್ಮ ಸಮಾಜದಲ್ಲಿ ಬದಲಾವಣೆಯನ್ನು ತರುತ್ತಿದೆ ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ…
ಮಡಿಕೇರಿ ನ.14 NEWS DESK : ವಿಶ್ವ ಹಿಂದು ಪರಿಷದ್ ವತಿಯಿಂದ ನ.15 ರಂದು ಭಾಗಮಂಡಲದಲ್ಲಿ ಕಾವೇರಿ ಆರತಿ ನಡೆಯಲಿದೆ. ಸಂಜೆ 5 ಗಂಟೆಗೆ ಭಾಗಮಂಡಲದ ಕಾವೇರಿ, ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಭಜನೆ, ವೇದಘೋಷಗಳೊಂದಿಗೆ ಕಾವೇರಿ ತಾಯಿಗೆ ಆರತಿಯಾಗಲಿದೆ. ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿಯ ವಿಹೆಚ್ಪಿ ಜೇಷ್ಠ ಪ್ರಚಾರಕರಾದ ಸು.ರಾಮಣ್ಣ ಪಾಲ್ಗೊಳ್ಳಲಿದ್ದು, ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಉಪಸ್ಥಿತರಿರುವರು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಾತೆ ಕಾವೇರಿಗೆ ಆರತಿ ಬೆಳಗುವಂತೆ ವಿಶ್ವ ಹಿಂದು ಪರಿಷದ್ ನ ಕೊಡಗು ಜಿಲ್ಲಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ಬೆಂಗಳೂರು, ನ.14 NEWS DESK : ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಬಳಿ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರ್ಲಾಲ್ ನೆಹರೂರವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ನೆಹರೂ ಅವರಿಗೆ ಮಕ್ಕಳ ಬಗ್ಗೆ ಬಹಳ ಪ್ರೀತಿಯಿದ್ದುದ್ದರಿಂದ ಅವರನ್ನು ಚಾಚಾ ನೆಹರೂ ಎಂದು ಕರೆಯಲಾಗುತ್ತಿತ್ತು ಎಂದರು. ಸುಮಾರು 17 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶದಲ್ಲಿ ಮಿಕ್ಸಡ್ ಎಕಾನಮಿ ಜಾರಿ ಮಾಡಿದರು. ಸಮಾಜವಾದಿಯಾಗಿದ್ದ ನೆಹರೂ ಕಾಂಗ್ರೆಸ್ ಪಕ್ಷವನ್ನು ಸಮಾಜವಾದಿಯಾಗಿಸಿದ ರೂವಾರಿ. ನೆಹರೂ, ಲೋಹಿಯಾ ಮೊದಲಾದವರು ಸೇರಿ ಸೋಷಿಯಲಿಸ್ಟ್ ಕಾಂಗ್ರೆಸ್ ಕಟ್ಟಿದರು. 17 ವರ್ಷಗಳಲ್ಲಿ ದೇಶದ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು. ಬೃಹತ್ ಕೈಗಾರಿಕೆ, ಅಣೆಕಟ್ಟು, ನೀರಾವರಿ,…
ಮಡಿಕೇರಿ ನ.14 NEWS DESK : ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರೇ ಮಾತ್ರ ಏಡ್ಸ್ ತಡೆಗಟ್ಟಲು ಸಾಧ್ಯ ಎಂದು ಡಾ. ಎಂ.ಬಿ.ಕಾವೇರಿಯಪ್ಪ ಅಭಿಪ್ರಾಯಪಟ್ಟರು. ಗೋಣಿಕೊಪ್ಪಲು ಕಾವೇರಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ, ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಗೋಣಿಕೊಪ್ಪಲು ಕಾವೇರಿ ಕಾಲೇಜು ರೆಡ್ ರಿಬ್ಬನ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಗೋಣಿಕೊಪ್ಪಲಿನಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಚ್.ಐ.ವಿ/ ಏಡ್ಸ್ ಎಂದರೇನು, ಅದು ಹೇಗೆ ಬರುತ್ತದೆ ಅದನ್ನು ತಡೆಗಟ್ಟಲು ಏನು ಮಾಡಬೇಕು ಎಂದು ಜನರಿಗೆ ತಿಳಿಸಬೇಕು ಇದರಿಂದ ಏಡ್ಸ್ ತಡೆಗಟ್ಟಲು ಸಾಧ್ಯವಾಗುತ್ತದೆ. ಏಡ್ಸ್ ತಡೆಗಟ್ಟಲು ಜಾಗೃತಿ ಒಂದೇ ಉತ್ತಮ ಮಾರ್ಗ ಎಂದು ತಿಳಿಸಿದರು. ಗೋಣಿಕೊಪ್ಪಲು ಸಮುದಾಯದ ಅರೋಗ್ಯ ಕೇಂದ್ರ ಐ.ಟಿ.ಟಿ.ಸಿ ಆಪ್ತ ಸಮಾಲೋಚಕ ಚಂದ್ರಶೇಖರ್ ಮಾತನಾಡಿ, ಹೆಚ್.ಐ.ವಿ ಏಡ್ಸ್ ತಡೆಗಟ್ಟಲು ಸಮುದಾಯ ಆರೋಗ್ಯ ಕೇಂದ್ರ ಭೇಟಿ ನೀಡಿ ಮಾಹಿತಿ ನೀಡಬಹುದು. ಇದನ್ನು…
ಮಡಿಕೇರಿ ನ.14 NEWS DESK : ವಕ್ಫ್ ನೋಟಿಸ್ ವಿಚಾರದಲ್ಲಿ ಬಿಜೆಪಿ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಡಿರುವ ಆರೋಪಗಳಲ್ಲಿ ಸತ್ಯಾಂಶಗಳಿಲ್ಲ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವೇ ಈ ಗೊಂದಲಗಳಿಗೆ ನೇರ ಹೊಣೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ವಕ್ಫ್ ನೋಟಿಸ್ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಅಶಾಂತಿ ಮೂಡಿಸುತ್ತಿದೆ ಎಂದು ಕಾಂಗ್ರೆಸ್ ಹೇಳುತ್ತಿದೆ, ವಕ್ಫ್ ಸಚಿವ ಜಮೀರ್ ಅಹಮ್ಮದ್ ಅವರು ಬಿಜೆಪಿ ಸಚಿವರೇ ಎಂದು ಪ್ರಶ್ನಿಸಿದರು. ಬಡವರ ಹಾಗೂ ರೈತರ ಪರ ಬಿಜೆಪಿ ಸದಾ ಹೋರಾಟ ನಡೆಸುತ್ತದೆ. ಇನ್ನು ಮುಂದೆಯೂ ಹೋರಾಟವನ್ನು ನಡೆಸಲಿದೆ, ಜನರಿಂದ ಕಾಂಗ್ರೆಸ್ ಪಕ್ಷ ತಿರಸ್ಕರಿಸಲ್ಪಡುತ್ತಿರುವುದರಿಂದ ಹತಾಶಗೊಂಡಿರುವ ಕಾಂಗ್ರೆಸ್ಸಿಗರು ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ವಕ್ಫ್ ನೋಟೀಸ್ ನೀಡಿರುವುದು ಅಧಿಕಾರಿಗಳು, ಸರ್ಕಾರದ ತಪ್ಪಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸಮಜಾಯಿಷಿಕೆ ನೀಡಿದ್ದಾರೆ. ಹಾಗಾದರೆ ಅಧಿಕಾರಿಗಳು ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿ…
ಮಡಿಕೇರಿ ನ.14 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಸಂಘದ ನೂತನ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ನೇತೃತ್ವದಲ್ಲಿ ಕಾಲೇಜಿನ ಆವರಣದಲ್ಲಿ ಬಟರ್ ಫ್ರೂಟ್, ಕಿತ್ತಳೆ ಸೇರಿದಂತೆ ಕೊಡಗಿನಲ್ಲಿ ಅಳಿವಿನಂಚಿನಲ್ಲಿರುವ ಕಾಡು ಜಾತಿಯ ಹಣ್ಣುಗಳ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೇಜರ್ ಬಿ.ರಾಘವ, ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯಾದ ಮೇಲೆ ನಡೆಯುತ್ತಿರುವ ಮೊದಲ ಕಾರ್ಯಕ್ರಮ ಇದಾಗಿದ್ದು, ಗಿಡಗಳನ್ನ ನೆಡುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಈ ಒಂದು ನೂತನ ಆಡಳಿತ ಮಂಡಳಿ ಬಹಳ ಉತ್ಸಾಹದಿಂದ ಮುಂದಿನ ದಿನಗಳಲ್ಲೂ ಕಾಲೇಜಿನ ಅಭಿವೃದ್ಧಿಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಕಾಲೇಜಿನ ಹಳೆ ವಿದ್ಯಾರ್ಥಿ ಕೋಳಿಮಾಡು ಪ್ರಶಾಂತ್ ಮುತ್ತಣ್ಣ ಮಾತನಾಡಿ, ಕೊಡಗಿನಲ್ಲಿ ಕಾಡು ಜಾತಿಯ ಹಣ್ಣುಗಳು ಕಡಿಮೆಯಾಗಿದ್ದು, ಅಳಿವಿನಂಚಿಗೆ ತಲುಪುತ್ತಿದೆ. ಹೀಗಾಗಿ ಕೊಡಗಿನ ಕಾಡು ಜಾತಿಯ ಹಣ್ಣಿನ ಗಿಡಗಳನ್ನ ನೆಟ್ಟು…
ನಾಪೋಕ್ಲು ನ.14 NEWS DESK : ಅಂಗಾಂಗಗಳನ್ನು ದಾನ ಮಾಡುವುದರಿಂದ ಒಬ್ಬ ವ್ಯಕ್ತಿಯ ಜೀವ ಉಳಿಸಬಹುದು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯ ಸಹ ಪ್ರಾಧ್ಯಾಪಕ ಡಾ.ಶಶಾಂಕ್ ಹೇಳಿದರು. ನಾಪೋಕ್ಲು ಮಹಿಳಾ ಸಮಾಜ, ನಾಪೋಕ್ಲು ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್ ಸಹೋಗಲದಲ್ಲಿ ನಾಪೋಕ್ಲು ಮಹಿಳಾ ಸಮಾಜದಲ್ಲಿ ನಡೆದ ದೇಹ ಮತ್ತು ಅಂಗಾಂಗ ದಾನದ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಆರೋಗ್ಯವಂತ ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡಬಹುದು. ಹೃದಯ ಸೇರಿದಂತೆ ದೇಹದ ವಿವಿಧ ಅಂಗಗಳನ್ನು ದಾನ ಮಾಡಲು ಸಾಧ್ಯವಿದೆ. ಇದಕ್ಕಾಗಿ ನೋಂದಣಿ ಮಾಡಬೇಕು. ನುರಿತ ವೈದ್ಯರ ತಂಡ ಕಾರ್ಯನಿರ್ವಹಿಸುತ್ತದೆ. ಅಂಗಾಂಗ ದಾನ ಮಾಡುವ ಮಂದಿ ವೈದ್ಯರ ಸಹಕಾರದಿಂದ ವ್ಯಕ್ತಿಗಳ ಜೀವ ಉಳಿಸಲು ಸಾಧ್ಯ ಎಂದು ಹೇಳಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಮೇರಿಚಿಟ್ಟಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಪೋಕ್ಲು ಮಹಿಳಾ ಸಮಾಜದ ಅಧ್ಯಕ್ಷ ರೇಷ್ಮಾ ಉತ್ತಪ್ಪ, ಭಗವತಿ ಮಹಿಳಾ ಸಮಾಜದ ಅಧ್ಯಕ್ಷ ಬೊಳ್ಳಮ್ಮ ನಾಣಯ್ಯ, ಗಾಯತ್ರಿ ಸಂಘದ ಅಧ್ಯಕ್ಷ…
ಮಡಿಕೇರಿ ನ.14 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕನ್ನಡ ವಿಭಾಗ, ಮಡಿಕೇರಿ ಇವರ ಸಹಯೋಗದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನ.16 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪಿ.ಕೆ.ವೆಂಕಟೇಶ್ವರ ಪ್ರಸನ್ನ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಮಡಿಕೇರಿ ತಾಲ್ಲೂಕು ಕ.ಸಾ.ಪ ನಿಕಟಪೂರ್ವ ಅಧ್ಯಕ್ಷ ಅಂಬೆಕಲ್ಲು ನವೀನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕಾವೇರಿ ಪ್ರಕಾಶ್, ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೆರವಂಡ ಉಮೇಶ್, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಸುನಿಲ್…
ಮಡಿಕೇರಿ ನ.14 NEWS DESK : ಮಡಿಕೇರಿ ಕರ್ನಾಟಕ ಇನ್ ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ಸಂಸ್ಥೆಯ ವತಿಯಿಂದ ಕುಶಾಲನಗರ ಕನ್ನಡ ಭಾರತಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸಹಕಾರ ಕ್ಷೇತ್ರದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರುದ್ರಪ್ಪ ಕಾರ್ಯಕ್ರಮದ ಬಗ್ಗೆ ಪರಿಚಯಿಸಿ ಕಾರ್ಯಾಗಾರದ ಮಹತ್ವವನ್ನು ತಿಳಿಸಿದರು. ನಂತರ ಕೆಐಸಿಎಂ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಆರ್.ಎಸ್.ರೇಣುಕಾ ಸಹಕಾರ ಕ್ಷೇತ್ರದಲ್ಲಿನ ಉದ್ಯೋಗವಕಾಶಗಳು ಹಾಗೂ ಸಹಕಾರ ಕ್ಷೇತ್ರ ಮತ್ತು ಡಿಸಿಎಂ ತರಬೇತಿಯ ಬಗ್ಗೆ ಮಾಹಿತಿಯನ್ನು ನೀಡಿದರು.






