ಗೋಣಿಕೊಪ್ಪ ಏ.28 NEWS DESK : ಭಗತ್ಸಿಂಗ್ ಯುವಕ ಸಂಘ ಮೇ ತಿಂಗಳಲ್ಲಿ ನಡೆಸಲಿರುವ 6ನೇ ಆವೃತ್ತಿಯ ಜಿಸಿಎಲ್ ಕ್ರಿಕೆಟ್ ಪಂದ್ಯಾಟದ ಬಿಡ್ಡಿಂಗ್ ಕಾರ್ಯಕ್ರಮ ನಡೆಯಿತು. ಗೋಣಿಕೊಪ್ಪ ಸ್ವಾತಂತ್ಯ್ರ ಹೋರಾಟಗಾರರ ಭವನದಲ್ಲಿ ಭಗತ್ ಸಿಂಗ್ ಯುವಕ ಸಂಘದ ಅಧ್ಯಕ್ಷ ಸತೀಶ್ ಸಿಂಗಿ ಅಧ್ಯಕ್ಷತೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಭಗತ್ಸಿಂಗ್ ದೇಶಕ್ಕೆ ಸ್ವ್ವಾತಂತ್ರ್ಯ ತಂದು ಕೊಡುವಲ್ಲಿ ತನ್ನದೇ ಆದ ಹೋರಾಟದ ಮೂಲಕ ಗಮನ ಸೆಳೆದಿದ್ದಾರೆ. ಕೆಚ್ಚೆದೆಯ ವೀರ, ಹೋರಾಟಗಾರರ ಹೆಸರಿನಲ್ಲಿ ಸಂಘ ಸ್ಥಾಪಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯ ಹೋರಾಟಗಾರರ ಭವನ ಸಂಚಾಲಕ ಕೊಳ್ಳಿಮಾಡ ಅಜಿತ್ಅಯ್ಯಪ್ಪ ಮಾತನಾಡಿ, ದೇಶ ಸೇವೆ ಮಾಡಿರುವ ಮಹಾನ್ ವ್ಯಕ್ತಿಯ ಹೆಸರಿನಲ್ಲಿ ಸಂಘ ಕಾರ್ಯ ನಿರ್ವಹಣೆ ಮಾಡುತ್ತಿರುವುದು ಬಹಳ ಹೆಮ್ಮೆಯ ವಿಚಾರ.ಇದರ ಜತೆಗೆಕ್ರೀಡಾಚಟುವಟಿಕೆಯಲ್ಲಿಯೂ ತೊಡಗಿಸಿಕೊಳ್ಳುವ ಮೂಲಕ ಸಂಘದ ಸೇವೆ ವಿಸ್ತರಣೆಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಯುವಕರು ಈ ಮೂಲಕ…
ಲೇಖಕ: admin
ಮಡಿಕೇರಿ NEWS DESK ಏ.28 : ಕೊಡಗು ಬಂಟರ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯ ಬಳಿ ಕೊಡಗು ಬಂಟರ ಭವನ ನಿರ್ಮಾಣ ಕಾಮಗಾರಿಗೆ ಮೇ 1 ರಂದು ಶಂಕುಸ್ಥಾಪನೆ ನೆರವೇರಲಿದೆ ಎಂದು ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 12 ರಿಂದ 15 ಕೋಟಿ ರೂ. ವೆಚ್ಚದಲ್ಲಿ ಬಂಟರ ಭವನ ನಿರ್ಮಾಣಗೊಳ್ಳಲಿದೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿಯ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪುತ್ತೂರು ಶಾಸಕ ಅಶೋಕ ಕುಮಾರ್ ರೈ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು…
ಮಡಿಕೇರಿ NEWS DESK ಏ.28 : ಕೊಡಗು ಜಿಲ್ಲೆಯಲ್ಲಿ ಬ್ಯಾರಿ ಸಮುದಾಯ ಭವನ ನಿರ್ಮಾಣಕ್ಕೆ ಒಂದು ಕೋಟಿ ರೂ. ಒದಗಿಸಲಾಗುವುದು. ಆ ನಿಟ್ಟಿನಲ್ಲಿ ಜಾಗ ಗುರುತಿಸುವಂತೆ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ ಮಡಿಕೇರಿ ಇವರ ಸಹಯೋಗದಲ್ಲಿ ನಗರದ ಕಾವೇರಿ ಹಾಲ್ನಲ್ಲಿ ಮಂಗಳವಾರ ನಡೆದ ಕೊಡಗು ಜಿಲ್ಲಾ ಬ್ಯಾರಿ ಪ್ರಥಮ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯ ಸ್ಥಳೀಯ ಶಾಸಕರಾದ ಡಾ.ಮಂತರ್ಗೌಡ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಸಹಕಾರದಿಂದ ಒಟ್ಟು ಒಂದು ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ವಿಧಾನಸಭೆಯ ಸಭಾಧ್ಯಕ್ಷರು ಭರವಸೆ ನೀಡಿದರು. ಬ್ಯಾರಿ ಸಂಸ್ಕೃತಿ, ಸಾಹಿತ್ಯ, ಪರಂಪರೆಗೆ ತನ್ನದೇ ಇತಿಹಾಸ ಇದ್ದು, ಬ್ಯಾರಿ ಸಂಸ್ಕೃತಿ, ಸಾಹಿತ್ಯ, ಪರಂಪರೆ ಉಳಿಸಿ ಬೆಳೆಸಲು ಶ್ರಮಿಸಬೇಕು ಎಂದು ಕರೆ ನೀಡಿದರು. ಬ್ಯಾರಿ ಸಾಹಿತ್ಯ ಸಮ್ಮೇಳನದಿಂದ ಬ್ಯಾರಿ…
ಮಡಿಕೇರಿ ಏ.28 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.29ರ ಸೆಮಿಫೈನಲ್ ಪಂದ್ಯಗಳು. *ಮೈದಾನ 1* ಪುರುಷರ ಸೆಮಿಫೈನಲ್ (ಲಾಲು ಮುದ್ದಯ್ಯ ಮೈದಾನ) ಬೆಳಿಗ್ಗೆ 9.30 ಗಂಟೆಗೆ ಚೆಕ್ಕೇರ ಮತ್ತು ಪಂದ್ಯಂಡ 11 ಗಂಟೆಗೆ ಮಾಳೇಟಿರ (ಕೆದಮುಳ್ಳೂರು) ಮತ್ತು ಪಾರುವಂಡ *ಮಹಿಳೆಯರ ಸೆಮಿಫೈನಲ್* ಮಧ್ಯಾಹ್ನ 1 ಗಂಟೆಗೆ ಅರಮಣಮಾಡ (ಬೆಸಗೂರು) ಮತ್ತು ಮಣವಟ್ಟಿರ 2ಕ್ಕೆ ಮುಕ್ಕಾಟಿರ (ಹರಿಹರ ) ಮತ್ತು ಚೆಕ್ಕೇರ
ಮಡಿಕೇರಿ ಏ.28 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.28 ರಂದು ನಡೆದ ಪುರುಷರ ಕ್ವಾರ್ಟರ್ ಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಚೆಕ್ಕೇರ ಮತ್ತು ಮಲ್ಲಜ್ಜಿರ ತಂಡಗಳ ನಡುವಿನ ಪಂದ್ಯದಲ್ಲಿ ಚೆಕ್ಕೇರ 64 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆಕ್ಕೇರ 8 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 100 ರನ್ ಗಳ ಸಾಧನೆ ಮಾಡಿತು. ಮಲ್ಲಜ್ಜಿರ 8 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 36 ರನ್ ಗಳನ್ನಷ್ಟೇ ಸೇರಿಸಿ ಸೋಲೊಪ್ಪಿಕೊಂಡಿತು. ಚೆಕ್ಕೇರ ಆಕರ್ಷ್ 47 ರನ್ ಗಳನ್ನು ಗಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಮಲ್ಲಜ್ಜಿರ ಪರ ರೋಷನ್ 2 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮೋಟನಾಳಿರ ಮತ್ತು ಪಂದ್ಯಂಡ ನಡುವಿನ ಪಂದ್ಯದಲ್ಲಿ ಪಂದ್ಯಂಡ…
ಮಡಿಕೇರಿ ಏ.28 NEWS DESK : ಕಾಡಾನೆ ದಾಳಿಯಿಂದ ಗಬ್ಬದ ಹಸುವೊಂದು ಸಾವನ್ನಪ್ಪಿರುವ ಘಟನೆ ನೆಲ್ಯಹುದಿಕೇರಿ ಗ್ರಾಮದ ನಾಲ್ಕನೇ ವಿಭಾಗದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಶೇಖರ್ ಅವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವನ್ನು ಸೋಮವಾರ ಮಧ್ಯರಾತ್ರಿ ಕಾಡಾನೆ ತುಳಿದು ಕೊಂದು ಹಾಕಿದೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಹೈನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿರುವ ರೈತ ಕುಟುಂಬಕ್ಕೆ ತಕ್ಷಣ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾಡಾನೆ ಸಂಚಾರದಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತಕ್ಷಣ ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಅಟ್ಟಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಮಡಿಕೇರಿ NEWS DESK ಏ.28 : ಕ್ಷೇತ್ರ ಪುನರ್ ವಿಂಗಡಣೆಯ ಸಂದರ್ಭ ಕೊಡವರಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಮತ್ತು ವಿಧಾನಸಭಾ ಕ್ಷೇತ್ರವನ್ನು ಘೋಷಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೇ 1 ರಿಂದ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೇ 1 ರಂದು ಬೆಳಿಗ್ಗೆ 9 ಗಂಟೆಗೆ ಕೊಡವರ ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಆದಿಮಸಂಜಾತ ಮೂಲನಿವಾಸಿ, ಏಕ-ಜನಾಂಗೀಯ, ಪ್ರಕೃತಿ ಆರಾಧಕ-ಅನಿಮಿಸ್ಟಿಕ್ ಕೊಡವರಿಗಾಗಿ ಕೊಡವ ಪ್ರದೇಶದ ಗಡಿಗಳನ್ನು ಬದಲಾಯಿಸದೆ ಕೊಡವ ಸಾಂಪ್ರದಾಯಿಕ ನೆಲೆಯಲ್ಲೇ ಪ್ರತ್ಯೇಕ ಕೊಡವ ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರಗಳನ್ನು ರಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೊಡವಲ್ಯಾಂಡ್ ನ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವಯಂ-ಆಡಳಿತ, ಆಂತರಿಕ ಸ್ವಯಂ-ನಿರ್ಣಯದ ಹಕ್ಕುಗಳು, ಕೊಡವರನ್ನು ಬುಡಕಟ್ಟು ಪಟ್ಟಿಗೆ ವರ್ಗೀಕರಿಸುವುದು, ವಿಧಾನಸಭೆ ಮತ್ತು ಸಂಸತ್ತಿನಲ್ಲಿ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡುವುದು, ವಿಶ್ವಸಂಸ್ಥೆಯಿoದ ಆದಿಮಸಂಜಾತ ನಿವಾಸಿಗಳೆಂದು ಮಾನ್ಯತೆ ಪಡೆಯಲು…
ಮಡಿಕೇರಿ ಏ.27 NEWS DESK : ಮಹಿಳಾ ಮೀಸಲಾತಿಯ “ನಾರಿ ಶಕ್ತಿ ವಂದನ್” ವಿಧೇಯಕವನ್ನು ಪ್ರಸ್ತುತ ಇರುವ ಲೋಕಸಭಾ ಸ್ಥಾನಗಳಿಗೆ ಅನ್ವಯಿಸಿ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸುವ ಸಹಿ ಅಭಿಯಾನಕ್ಕೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಅವರು, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿತ ಸರಳ ಕಾರ್ಯಕ್ರಮದಲ್ಲಿ, ಬೋರ್ಡ್ನಲ್ಲಿ ಸಹಿ ಮಾಡುವ ಮೂಲಕ ಅಭಿüಯಾನಕ್ಕೆ ಚಾಲನೆಯನ್ನಿತ್ತರು. ಕೇಂದ್ರದ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ಮಹಿಳೆಯರಿಗೆ ಮೀಸಲಾತಿ ನೀಡುವ ವಿಧೇಯಕದೊಂದಿಗೆ ಕ್ಷೇತ್ರ ಪುನರ್ವಿಂಗಡಣೆಯನ್ನು ಸೇರ್ಪಡೆಮಾಡಿರುವುದನ್ನು ವಿರೋಧಿಸಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ, ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಿಗೆ ಸಂಬಂಧಿಸಿದಂತೆ ಮಹಿಳಾ ಮೀಸಲಾತಿಯನ್ನು ಅನ್ವಯಿಸಿ ಜಾರಿಗೆ ತರುವಂತೆ ಕೇಂದ್ರವನ್ನು ಒತ್ತಾಯಿಸಿದರು. ಸಹಿ ಅಭಿಯಾನದಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಶೀಲಾ ಡಿಸೋಜ, ಮಹಿಳಾ ಕಾಂಗ್ರೆಸ್ ಸದಸ್ಯರು ಹಾಗೂ ಜಿಪಂ ಮಾಜಿ ಸದಸ್ಯರಾದ ಸುನೀತ, ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುಬೀನಾ…
ವಿರಾಜಪೇಟೆ ಏ.27 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಬೆಂಗಳೂರು ಇದರ ರಾಜ್ಯ ಮಟ್ಟದ ಪದಗ್ರಹಣ ಸಮಾರಂಭ ಧಾರವಾಡದ ವಿದ್ಯಾವರ್ಧಕ ಸಂಘ ಪಾಟೀಲ್ ಪುಟ್ಟಪ್ಪ ಭವನದಲ್ಲಿ ಜರುಗಿತು. ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಉಪನಿರ್ದೆೇಶಕರ ಕಛೇರಿಯ ಸೂಪರಿಡೆಂಟ್ ಹಾಗೂ ಭರತನಾಟ್ಯ ಕಲಾವಿದ ಎಸ್.ಕೆ.ಕಿರಣ್ ಅವರಿಗೆ ಕಾಯಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭ ರಾಜ್ಯ ಅಧ್ಯಕ್ಷರಾದ ರಮಾ , ಬಸವರಾಜು ಗುರಿಕಾರ್ , ಮೇಲ್ಮನೆ ಸಭಾಪತಿ ಬಸವರಾಜ್ ಹೊರಟ್ಟಿ, ರಾಜ್ಯ ಕಾರ್ಯದರ್ಶಿ ಪರ್ವಿನ್ ಬಾನು ಬೊಳ್ಳಣ್ಣವರ್ ಹಾಗೂ ರಾಜ್ಯದ ಎಲ್ಲ ಪದಾಧಿಕಾರಿಗಳು ಮತ್ತು ರಾಜ್ಯದ ಪ್ರತಿಯೊಂದು ಜಿಲ್ಲೆಯ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಜರಿದ್ದರು. ವೇದಿಕೆಯಲ್ಲಿ ಎಸ್.ಕೆ.ಕಿರಣ್ ಅವರಿಂದ ಭರತನಾಟ್ಯ ಪ್ರದರ್ಶನ ಮೂಡಿ ಬಂದಿತು. ಕರ್ನಾಟಕ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷರಾದ ಕಮಲಮ್ಮ ಕೆ. ಎನ್ ಹಾಗೂ ಪ್ರಧಾನ ಕಾರ್ಯದ ರ್ಶಿ ನೀಲಮ್ಮ ಕೆ.ಪಿ.…
ವಿರಾಜಪೇಟೆ ಏ.27 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಹಾಗೂ ಸಾಹಿತ್ಯ ಪರಿಷತ್ತುನ ರಾಜ್ಯ ಹಾಗೂ ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮವು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಟೀಲ್ ಪುಟ್ಟಪ್ಪ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಪರಿಷತ್ತಿನ ರಾಜ್ಯ ಉಪಾಧ್ಯಕ್ಷರಾಗಿ ವಿರಾಜಪೇಟೆ ಉಪ ಖಜಾನೆಯ ಅಧೀಕ್ಷಕ ಗಣೇಶ್ ನಿಲವಾಗಿಲು ಅವರು ಅಧಿಕಾರ ಸ್ವೀಕರಿಸಿದರು. ಸಾಹಿತ್ಯ, ಚಿತ್ರಕಲೆ, ಸಂಗೀತ, ನಾಟಕ, ನೃತ್ಯ ಹಾಗೂ ಮೊದಲಾದ ಲಲಿತ ಕಲೆಗಳ ಸಮಾರಂಭ, ಕಾರ್ಯಾಗಾರ ಹಾಗೂ ಸಾಂಸ್ಕೃತಿಕ ಸಮ್ಮೇಳನಗಳನ್ನು ರಾಜ್ಯವಾರು ಹಮ್ಮಿಕೊಳ್ಳಲು ಮತ್ತು ಸಮಾಜಮುಖಿ ಕಾರ್ಯನಿರ್ವಹಣೆಗೆ ಆದೇಶದಲ್ಲಿ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಗಣೇಶ್ ಅವರನ್ನು ಉಪಸ್ಥಿತರಿದ್ದ ಗಣ್ಯರು ಅಭಿನಂದಿಸಿದರು.






