ಮಡಿಕೇರಿ ನ.13 NEWS DESK : ಗೋಣಿಕೊಪ್ಪಲು ಕಾಫಿ ಮಂಡಳಿ ಹಾಗೂ ಸಕ್ಡೆನ್ ಕಾಫಿ ಇಂಡಿಯಾ ಲಿಮಿಟೆಡ್ ಸಹಯೋಗದಲ್ಲಿ ಸುಸ್ಥಿರ ಕಾಫಿ ಉತ್ಪಾದನೆಗಾಗಿ ಅತ್ಯುತ್ತಮ ಕೃಷಿ ಪದ್ಧತಿಗಳ ಕುರಿತು ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಾಗಾರವು ನಿಟ್ಟೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾಫಿ ಮಂಡಳಿ ವಿಸ್ತರಣಾ ವಿಭಾಗದ ಉಪ ನಿರ್ದೇಶಕರಾದ ಡಾ. ಕೆ.ಶ್ರೀದೇವಿ ಕಾರ್ಯಾಗಾರವನ್ನು ಉದ್ಘಾಟಿಸಿ ಸುಸ್ಥಿರ ಕಾಫಿ ಉತ್ಪಾದನೆಗಾಗಿ ಅತ್ಯುತ್ತಮ ಕೃಷಿ ಪದ್ಧತಿಗಳನ್ನು ಬೆಳೆಗಾರರು ಅಳವಡಿಸಿಕೊಳ್ಳಲು ಪಾಲಿಸಬೇಕಾದ ತಂತ್ರಜ್ಞಾನದ ಬಗ್ಗೆ ಮಾಹಿತಿ ನೀಡಿ, ಅವುಗಳನ್ನು ಅಳವಡಿಸಿಕೊಳ್ಳಲು ಸಲಹೆ ನೀಡಿದರು. ಕಾಫಿ ಮಂಡಳಿಯ ವಿಜ್ಞಾನಿ ಡಾ.ಎಸ್.ಎ.ನದಾಫ್ ಮಾತನಾಡಿ, ಸಮಗ್ರ ಪೋಷಕಾಂಶ ನಿರ್ವಹಣೆ ಕಾಫಿ ಬೆಳೆಯಲ್ಲಿ ಅತಿ ಅವಶ್ಯಕ ಹಾಗೂ ಅದರ ಅವಶ್ಯಕತೆಯ ಬಗ್ಗೆ ವಿವರಿಸಿದರು. ರಸಗೊಬ್ಬರಗಳನ್ನು ಕಾಫಿ ಗಿಡಗಳಿಗೆ ಮಣ್ಣಿನ ಮತ್ತು ಎಲೆಗಳ ಮೇಲೆ ಸಿಂಪಡಣೆ ಮಾಡುವ ಮೂಲಕ ಪೋಷಕಾಂಶಗಳನ್ನೂ ಪೂರೈಸಬಹುದೆಂದು ತಿಳಿಸಿದರು. ಕಾಫಿಯಲ್ಲಿ ಸಸ್ಯಮೂಲ ಸಂವರ್ಧನೆ ಮತ್ತು ಕಾಫಿ ಕಸಿ ಮಾಡುವ ಬಗ್ಗೆ ಡಾ.ನಾಗರಾಜ ಗೋಕಾವಿ ಬೆಳೆಗಾರರಿಗೆ ಮಾಹಿತಿ ನೀಡಿದರು.…
ಲೇಖಕ: admin
ಮಡಿಕೇರಿ ನ.13 NEWS DESK : ಕುಂದಚೇರಿ (ಚೆಟ್ಟಿಮಾನಿ) ಗ್ರಾ.ಪಂ 2024-25ನೇ ಸಾಲಿನ ಗ್ರಾಮಸಭೆ ಚೆಟ್ಟಿಮಾನಿ ಸಮುದಾಯ ಭವನದಲ್ಲಿ ಗ್ರಾ.ಪಂ ಅಧ್ಯಕ್ಷ ಪಿ.ಬಿ.ದಿನೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 66/11 ಕೆವಿ ವಿದ್ಯುತ್ ಉಪಕೇಂದ್ರದ ಅಗತ್ಯತೆ ಮತ್ತು ಮೂಲಭೂತ ಸೌಲಭ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪಂಚಾಯಿತಿ ಸದಸ್ಯ ಹ್ಯಾರೀಸ್ ಮಾತನಾಡಿ, ಪದಕಲ್ಲು ಗ್ರಾಮ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳಿಗೆ ಪಂಚಾಯ್ತಿ ಜಾಗ ಮಂಜೂರಾಗಿದೆ, ಸೋಲಾರ್ ಪ್ಲಾಂಟ್ ಗೆ ಜಾಗದ ಅವಶ್ಯಕತೆ ಇದೆ. ಆದರೆ ಪಂಚಾಯ್ತಿಗೆ ಸೇರಿದ ಜಾಗವನ್ನು ಇತ್ತೀಚೆಗೆ ಹೊರಗಿನ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆಗೆ ಮನವಿ ಸಲ್ಲಿಸಲಾಗಿದೆ, ಶಾಸಕರು ಕೂಡ ಸೂಚನೆ ನೀಡಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಗ್ರಾಮಸ್ಥ ದಬ್ಬಡ್ಕ ಶ್ರೀದರ್ ಮಾತನಾಡಿ, ನಮ್ಮ ಪಂಚಾಯಿತಿ ವ್ಯಾಪ್ತಿಯ ಜಾಗವನ್ನು ಈ ಭಾಗದ ಜನರಿಗೆ ಮತ್ತು ಇಲಾಖೆಗೆ ಮೀಸಲಿಡಬೇಕೆ ಹೊರತು ಹೊರಗಿನವರಿಗೆ ನೀಡಬಾರದು. ತಕ್ಷಣ ಸರ್ವೆ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಕಂದಾಯ…
ಸೋಮವಾರಪೇಟೆ ನ.13 NEWS DESK : ಅಕ್ಕನ ಬಳಗದ ನೂತನ ಅಧ್ಯಕ್ಷರಾಗಿ ಗೀತರಾಜು ಆಯ್ಕೆಯಾಗಿದ್ದಾರೆ. ಪಟ್ಟಣದ ಬೇಳೂರು ರಸ್ತೆಯಲ್ಲಿರುವ ಅಕ್ಕನ ಬಳಗದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಸರಿತಾ ಮಲ್ಲಿಕಾರ್ಜುನ್, ಕಾರ್ಯದರ್ಶಿಯಾಗಿ ಮಾಯಾಗಿರೀಶ್, ಖಜಾಂಚಿಯಾಗಿ ಆಶಾ ಹೂವಯ್ಯ, ನಿರ್ದೇಶಕರುಗಳಾಗಿ -ಜಗದಾಂಬ ಗುರುಪ್ರಸಾದ್, ರಜಿನಿ ಯತೀಶ್, ಮಂಜುಳ ಬಸವರಾಜು, ದಿವ್ಯಾ ದಯಾಕರ್, ಅನುಪಮ ಶಿವರಾಜ, ಸವಿತಾ ನೀಲಕಂಠ ನಂದಿನಿ ಮಹಾಂತೇಶ್ ಆಯ್ಕೆಯಾಗಿದ್ದಾರೆ.
ಸಿದ್ದಾಪುರ ನ.13 NEWS DESK : ಭಾರತೀಯ ನೃತ್ಯ ಕಲಾ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ನೃತ್ಯ ಸಂಭ್ರಮ ಕಾರ್ಯಕ್ರಮ ನ.14 ರಂದು ನಡೆಯಲಿದೆ. ಸಿದ್ದಾಪುರದ ಚರ್ಚ್ ಹಾಲ್ನಲ್ಲಿ ಸಂಜೆ 5 ಗಂಟೆಗೆ ಆಯೋಜಿಸಲಾಗಿರುವ ನೃತ್ಯ ಸಂಭ್ರಮ ಕಾರ್ಯಕ್ರಮವನ್ನು ಗುಹ್ಯದ ನಿವೃತ್ತ ಶಿಕ್ಷಕಿ ಕೃಷ್ಣವೇಣಿ ಉದ್ಘಾಟಿಸಿಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿದ್ದಾಪುರದ ಎಸ್ಎನ್ಡಿಪಿ ಯೂನಿಯನ್ನ ಅಧ್ಯಕ್ಷ ವಿ.ಕೆ.ಲೋಕೇಶ್ ಮತ್ತು ಡಾನ್ಸ್ ಕರ್ನಾಟಕ ಡಾನ್ಸ್ ಸೀಸನ್-5ರ ವಿಜೇತ ರಾಹುಲ್ ರಾವ್ ಆಗಮಿಸಲಿದ್ದಾರೆ. ಭಾರತೀಯ ನೃತ್ಯ ಕಲಾ ಶಾಲೆಯ ಶಿಕ್ಷಕಿ ವಿದುಷಿ ಜಲಜ ನಾಗರಾಜ್ ಅವರ ನೇತೃತ್ವದಲ್ಲಿ ನಡೆಯುವ ಈ ನೃತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ನೃತ್ಯಶಾಲೆಯ 46 ಕಲಾವಿದರು ಭರತ ನಾಟ್ಯ, ಜಾನಪದ, ರಾಮಾಯಾಣ ಮತ್ತು ಮಹಾಭಾರತ ರೂಪಕಗಳಂತಹ ವೈವಿಧ್ಯಮಯ ನೃತ್ಯಗಳನ್ನು ಪ್ರದರ್ಶಿಸಲಿದ್ದಾರೆ. ವರದಿ : ಟಿ.ಸಿ. ನಾಗರಾಜ್, ಮೂರ್ನಾಡು
ಪುತ್ತೂರು ನ.13 NEWS DESK : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024ನೇ ಸಾಲಿನ ಅಂತಿಮ ವರ್ಷದ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಎರಡೂ ವಿಭಾಗಗಳಲ್ಲಿ ಶೇ.100 ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಇದೇ ಆಗಸ್ಟ್ ತಿಂಗಳಿನಲ್ಲಿ ನಡೆದ ಎಂಸಿಎ ವಿಭಾಗದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 60 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ 60 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಅಪೂರ್ವ ಸಾಧನೆಯನ್ನು ಮಾಡಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲಿ ಪೂರ್ಣಗೊಂಡ ಎಂಬಿಎ ವಿಭಾಗದ ಪರೀಕ್ಷೆಗೆ 59 ವಿದ್ಯಾರ್ಥಿಗಳು ಹಾಜರಾಗಿದ್ದು ಅದರಲ್ಲಿ 54 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 5 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ಉತ್ತಮ ಸಂಬಳದೊಂದಿಗೆ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ. ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡ ವಿದ್ಯಾರ್ಥಿಗಳ ಸಾಧನೆಯನ್ನು…
ಚೆಟ್ಟಳ್ಳಿ ನ.13 NEWS DESK : ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಲ ನಿಯಮಿತ, ಕೊಡಗು ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ, ಮಡಿಕೇರಿ ಸಹಕಾರ ಇಲಾಖೆ, ಕೊಡಗು ಜಿಲ್ಲೆ ಹಾಗೂ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ನ.14 ರಂದು 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ ಹಾಗೂ ಸಹಕಾರ ಸಚಿವಾಲಯದ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವ ದಿನಾಚರಣೆ ನಡೆಯಲಿದೆ. ಚೆಟ್ಟಳ್ಳಿಯ ಶ್ರೀ ನರೇಂದ್ರ ಮೋದಿ ಸಹಕಾರ ಭವನದಲ್ಲಿ ಪೂರ್ವಾಹ್ನ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿಯ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ವಹಿಸಲಿದ್ದಾರೆ. ಚೆಟ್ಟಳ್ಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಮಾಜಿ ಅಧ್ಯಕ್ಷ ಬಿದ್ದಂಡ ಎ. ಅಚ್ಚಯ್ಯ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ, ಮಡಿಕೇರಿ…
ಮಡಿಕೇರಿ ನ.13 NEWS DESK : ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್ ದಕ್ಷಿಣ ಪ್ರಾಂತ, ಮಡಿಕೇರಿ ವಿಭಾಗ ಮತ್ತು ಮಡಿಕೇರಿ ಸೇವಾ ಭಾರತಿ ಸಂಯುಕ್ತಾಶ್ರಯದಲ್ಲಿ ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿಯ ಸಹಕಾರದೊಂದಿಗೆ ನ.17ರಂದು ಉಡೋತ್ಮೊಟ್ಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಡೋತ್ ಮೊಟ್ಟೆ ಆಟದ ಮೈದಾನದಲ್ಲಿ ನಡೆಯಲಿರುವ ಶಿಬಿರದಲ್ಲಿ ಬಿಪಿ, ಶುಗರ್, ಬಿಎಂಐ ತಪಾಸಣೆ, ಪೌಷ್ಟಿಕಾಂಶದ ಮೌಲ್ಯಮಾಪನ ಸೇರಿದಂತೆ ಆರೋಗ್ಯ ಮಾಹಿತಿಯನ್ನು ನೀಡಲಾಗುವುದು. ಅಲ್ಲದೇ ಅವಶ್ಯಕತೆ ಇದ್ದವರಿಗೆ ಉಚಿತ ಔಷಧಿಯನ್ನು ವಿತರಿಸಲಾಗುವುದು. ಆಯುಷ್ಮಾನ್ ಕಾರ್ಡ್ ಮಾಡಿಕೊಡಲಾಗುವುದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರ ಪ್ರಯೋಜ ಪಡೆದುಕೊಳ್ಳುವಂತೆ ಉಡೋತ್ ಮೊಟ್ಟೆ ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿ ಕೋರಿದೆ. ಆಯುಷ್ಮಾನ್ ಕಾರ್ಡ್ ಅಗತ್ಯ ಇರುವವರು ಬಿಪಿಎಲ್ ಮತ್ತು ಆಧಾರ್ ಕಾರ್ಡ್ ತರುವುದು ಮನವಿ ಮಾಡಿದೆ.
ನಾಪೋಕ್ಲು ನ.13 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಯ್ಯಂಡಾಣೆ-ನರಿಯಂದಡ ಅಯ್ಯಪ್ಪ ಯುವಕ ಸಂಘದ ಸಹಯೋಗದಲ್ಲಿ ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಅರೆಭಾಷೆ ಗಡಿನಾಡ ಉತ್ಸವ-2024 ದ ಅಂಗವಾಗಿ ಆಯೋಜಿಸಲಾಗಿದ್ದ ಕ್ರೀಡಾಕೂಟದ ಪುರುಷರ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ಬಲಮುರಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಕೆದಮುಳ್ಳೂರು ತಂಡ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಲಮುರಿ ಚಾಂಪಿಯನ್ ಆದರೆ, ನರಿಯಂದಡ ಬೆಡಗಿಯರ ತಂಡ ರನ್ನರ್ಸ್ ಸ್ಥಾನಕ್ಕೆ ಭಾಜನರಾದರು. ಪುರುಷರ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ನಿಡ್ಯಮಲೆ ಮುರಳಿ, ಪೊಕ್ಕೋಳಂಡ್ರ ತನು ಹಾಗೂ ಮರದಾಳು ಪವನ್ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದರು. ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಪೊಕ್ಕೋಳಂಡ್ರ ತ್ರಿಶಾ, ಮಂಜಿರ ಸಹನ, ಕುಟ್ಟನ ತಶ್ವಿತಾ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದರು. ಪುಟಾಣಿ ಮಕ್ಕಳಿಗೆ ಕಾಳು ಹೆಕ್ಕುವುದು, 50 ಮೀಟರ್ ಓಟ, 100ಮೀಟರ್ ಓಟ, ಯುವಕರಿಗೆ ಭಾರದ ಗುಂಡು…
ಮಡಿಕೇರಿ ನ.13 NEWS DESK : ಕೊಡಗು ಜಿಲ್ಲೆಯ ಯುವ ಫುಟ್ಬಾಲ್ ಆಟಗಾರರಿಗೆ ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ದೊರೆತಿದ್ದು, ಹೆಮ್ಮೆಯ ವಿಷಯವಾಗಿದೆ. ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಂಡರ್ 14 ಬಾಲಕ ಮತ್ತು ಬಾಲಕಿಯರ ತಂಡದ ಆಟಗಾರರು ಮಿನಿ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಹಾಪೋಷಕರಾದ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಕರೆ ನೀಡಿದ್ದಾರೆ. ನ.15 ರಿಂದ 18ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಕ್ರೀಡಾಕೂಟಕ್ಕೆ, ಅಮ್ಮತ್ತಿಯ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮೈದಾನದಲ್ಲಿ ನಡೆದ ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕೊಡಗು ತಂಡದ ಬಾಲಕ ಮತ್ತು ಬಾಲಕಿಯರ ತಂಡದ ಆಟಗಾರರಿಗೆ ಫುಟ್ಬಾಲ್ ಕಿಟ್ ವಿತರಿಸಿ ಅವರು ಮಾತನಾಡಿದರು. ಕೊಡಗಿನ ಗ್ರಾಮೀಣ ಪ್ರತಿಭೆಗಳಿಗೆ ಬೆಂಗಳೂರಿನ ಆಡಲು ಅವಕಾಶ ದೊರೆತಿರುವುದು ಒಳ್ಳೆಯ ಅವಕಾಶವಾಗಿದ್ದು,ಗ್ರಾಮೀಣ ಭಾಗದಲ್ಲಿ ಆಡಿ ಬೆಳೆದಿರುವ ಯುವ ಆಟಗಾರರಿಗೆ ತಮ್ಮ ಆಟದ ಕೌಶಲಗಳನ್ನು ಬೆಳೆಸಲು ಮಿನಿ ಒಲಿಂಪಿಕ್ಸ್ ಉತ್ತಮ ವೇದಿಕೆಯಾಗಿದೆ. ಕೊಡಗು ತಂಡವನ್ನು ಪ್ರತಿನಿಧಿಸುತ್ತಿರುವ…
ಸೋಮವಾರಪೇಟೆ ನ.13 NEWS DESK : ಜಿಲ್ಲೆಯ ಕಾಫಿ ಬೆಳೆಗಾರರ 10 ಹೆಚ್ಪಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡುವ ಆದೇಶವನ್ನು ಸರ್ಕಾರ ಕೂಡಲೆ ಹೊರಡಿಸದಿದ್ದರೆ ಪ್ರತಿಭಟನೆ ಅನಿವಾರ್ಯ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಎಚ್ಚರಿಸಿದರು. ಪಟ್ಟಣದ ಸಫಾಲಿ ಸಭಾಂಗಣದಲ್ಲಿ ನಡೆದ ರೈತ ಸಂಘದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಅಕಾಲಿಕ ಮಳೆ, ಹವಮಾನ ವೈಪ್ಯರಿತ್ಯದಿಂದ ಜಿಲ್ಲೆಯಲ್ಲಿ ಕಾಫಿ ಫಸಲು ಹಾನಿಯಾಗಿದೆ. ಕಾಫಿ ಬೆಳೆಯುವ ರೈತರು ಸಂಕಷ್ಟದಲ್ಲಿದ್ದಾರೆ. ಪಂಪ್ಸೆಟ್ಗಳ ಬಾಕಿ ಬಿಲ್ ಮನ್ನಾ ಮಾಡಬೇಕು, ಯಾವುದೇ ಷರತ್ತಿಲ್ಲದೆ ಉಚಿತ ವಿದ್ಯುತ್ ನೀಡಬೇಕು. ಈ ಬಗ್ಗೆ ಜಿಲ್ಲೆಯ ಶಾಸಕರುಗಳು, ಮುಖ್ಯಮಂತ್ರಿಗಳಿಗೆ, ಇಂಧನ ಸಚಿವರಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ ಮನವರಿಕೆಯೊಂದಿಗೆ ಒತ್ತಡ ಹೇರಬೇಕು ಎಂದು ಹೇಳಿದರು. ಈಗಾಗಲೇ ಕಾಫಿ ಬೆಳೆಗಾರರ ಎಲ್ಟಿ4ಸಿ ವಿದ್ಯುತ್ ಸಂಪರ್ಕವನ್ನು ಬಿಲ್ ಪಾವತಿಸದ ನೆಪವೊಡ್ಡಿ ಕಡಿತಗೊಳಿಸಲು ಸೆಸ್ಕ್ ಸಿದ್ದತೆ ಮಾಡಿಕೊಂಡಿದೆ. ಸಂಪರ್ಕ ಕಡಿತಗೊಳಿಸಿದರೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಾರೆ. ಸೆಸ್ಕ್ ದುಸ್ಸಾಹಸಕ್ಕೆ ಮುಂದಾದರೆ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು…






