ಲೇಖಕ: admin

ಮಡಿಕೇರಿ ನ.12 NEWS DESK : ತಲಕಾವೇರಿಯಲ್ಲಿ ನ.16 ರಂದು ಕಿರು ಸಂಕ್ರಮಣ(ವೃಶ್ಚಿಕ ಸಂಕ್ರಮಣ) ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.  

Read More

ಮಡಿಕೇರಿ ನ.12 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ‘ಯುವ ಸ್ಪಂದನ’ ಯೋಜನೆ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ವಿರಾಜಪೇಟೆ, ಸೋಮವಾರಪೇಟೆ, ಮಡಿಕೇರಿ, ಪೊನ್ನಂಪೇಟೆಯಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟ ವಿದ್ಯಾಭ್ಯಾಸ ಮಾಡಿರುವ, ಕನ್ನಡ ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ನವೆಂಬರ್, 26 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ…

Read More

ಮಡಿಕೇರಿ ನ.12 NEWS DESK : ವಿದ್ಯಾರ್ಥಿ ನಿಲಯಗಳ ಅಡುಗೆ ಕೋಣೆಯಲ್ಲಿ ಸ್ವಚ್ಛತೆ, ಆಹಾರ ದಾಸ್ತಾನು ಉಗ್ರಾಣದಲ್ಲಿ ಇಲಿ, ಹೆಗ್ಗಣ ಸೇರದಂತೆ ಗಮನಹರಿಸುವುದು. ವೈಯಕ್ತಿಕ ಪರಿಸರ ಶುಚಿತ್ವ ಕಾಪಾಡುವುದು ಹಾಗೂ ಶುದ್ಧ ಕುಡಿಯುವ ನೀರು ಪೂರೈಸುವುದು, ಆಹಾರ ತಯಾರಿಕೆ ವಿಧಾನ, ನೈರ್ಮಲ್ಯಕ್ಕೆ ಆದ್ಯತೆ ನೀಡುವುದು ಹೀಗೆ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಅಂಕಿತ ಅಧಿಕಾರಿ ಅನಿಲ್ ಧಾವನ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಕಾರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ನಿಲಯ ಪಾಲಕರು, ನಿಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳಿಗೆ ನಗರದ ಗಾಂಧಿ ಭವನದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡುವ ಕುರಿತು ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿ ನಿಲಯಗಳಲ್ಲಿ ಕರ್ತವ್ಯ ನಿರ್ವಹಿಸುವವರು ದೈಹಿಕ ಶುಚಿತ್ವ ಮತ್ತು ಆರೋಗ್ಯದ ಕಡೆ ಗಮನಹರಿಸಬೇಕು. ತಯಾರಿಸಿದ ಆಹಾರವನ್ನು ಮುಚ್ಚಿಡುವುದು, ಕ್ರಿಮಿಕೀಟಗಳಿಂದ ಆಹಾರ ಕಲುಷಿತವಾಗದಂತೆ ಗಮನಹರಿಸುವುದು. ತಯಾರಿಸಿದ ಆಹಾರವನ್ನು ನಿರ್ದಿಷ್ಟ ಅವಧಿಯಲ್ಲಿ ಮಾತ್ರ ಬಳಸುವುದು, ಪ್ಯಾಕ್ ಮಾಡಿದ…

Read More

ಕುಶಾಲನಗರ ನ.12 NEWS DESK : ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿರುವ ಅಮೃತ ವಿಘ್ನೇಶ್ವರ ದೇವರ ವಾರ್ಷಿಕ ಪೂಜಾ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ ನೆರವೇರಿತು.  ಕೈಗಾರಿಕಾ ಬಡಾವಣೆಯ ಕಾವೇರಿ ನದಿ ದಂಡೆಯ ಅಮೃತ ಕಾಫಿ ಸಂಸ್ಕರಣಾ ಘಟಕದ ಬಳಿ ಪ್ರತಿಷ್ಠಾಪಿಸಿರುವ ಸಾರ್ವಜನಿಕ ಗಣಪತಿ ದೇಗುಲದಲ್ಲಿ ದೇವರಿಗೆ ಗಣಪತಿ ಹೋಮ, ಧನ್ವಂತ್ರಿ ಹೋಮ, ವಿಷ್ಣು ಸಹಸ್ರ ನಾಮಾರ್ಚನೆ ಮೊದಲಾದ ಮಹಾ ಪೂಜೆಗಳು ನೆರವೇರಿದವು. ಇದಕ್ಕೂ ಮುನ್ನಾ ಬೆಳಗ್ಗೆ ದೇವರಿಗೆ ವಿವಿಧ ಅಭಿಷೇಕಗಳು ನೆರವೇರಿದವು.  ತಮಿಳುನಾಡಿನ ತ್ರಿಕೋಟದಲ್ಲಿನ ಸೌಮ್ಯ ನಾರಾಯಣ ಸ್ವಾಮಿ ದೇವಾಲಯದ ಅರ್ಚಕ ಮಾಧವನ್ ಅಯ್ಯಂಗಾರ್ ನೇತೃತ್ವದ ವಟುಗಳಿಂದ ಪೂಜಾ ವಿಧಿಗಳು ನಡೆದವು.  ಪೂಜೋತ್ಸವದಲ್ಲಿ ಕೂಡ್ಲೂರು ಕೈಗಾರಿಕಾ ಬಡಾವಣೆಯ ವಿವಿಧ ಕಾಫಿ ಸಂಸ್ಕರಣಾ ಘಟಕಗಳ ಮಾಲೀಕರು ಹಾಗೂ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.  ಮಧ್ಯಾಹ್ನ ದೇವರಿಗೆ ಬಗೆ ಬಗೆಯ ಪುಷ್ಪಗಳಿಂದ ಅಲಂಕಾರ ಗೈದು ಮಹಾಮಂಗಳಾರತಿ ನೆರವೇರಿಸಲಾಯಿತು.  ನಂತರ ನೆರೆದ ಭಕ್ತಗಣಕ್ಕೆ ಪ್ರಸಾದ ಹಾಗೂ ಅನ್ನಸಂತರ್ಪಣೆ ನೆರವೇರಿತು.  ಅಮೃತ ವಿಘ್ನೇಶ್ವರ ದೇಗುಲದ ಧರ್ಮದರ್ಶಿ ಸುಂದರಂ ರಾಮಸ್ವಾಮಿ,…

Read More

ಮಡಿಕೇರಿ ನ.12 NEWS DESK : ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ತಾಲ್ಲೂಕು ಸಂಘಗಳ ಸಹಭಾಗಿತ್ವದಲ್ಲಿ ತೃತೀಯ ವರ್ಷದ ‘ವಿಪ್ರ ಕ್ರೀಡೋತ್ಸವ’ವನ್ನು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪ್ರ ಕ್ರೀಡೋತ್ಸವದ ಸಂಚಾಲಕರಾದ ಗೋಪಾಲಕೃಷ್ಣ ಅವರು, ಡಿ.1 ರಂದು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಗ್ಗೆ 9.30 ಗಂಟೆಗೆ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಪಂದ್ಯಾವಳಿ ನಡೆಯಲಿದೆ.ಇದರಲ್ಲಿ ಪ್ರಮುಖವಾಗಿ ಪುರುಷರ ಸಿಂಗಲ್ಸ್ ಮತ್ತು ಡಬಲ್ಸ್, ಮಹಿಳೆಯರ ವಿಭಾಗದ ಸಿಂಗಲ್ಸ್ ಮತ್ತು ಡಬಲ್ಸ್ ಹಾಗೂ ಬಾಲಕ-ಬಾಲಕಿಯರ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದೆಯೆಂದು ತಿಳಿಸಿದರು. ಡಿ.8 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಇದರಲ್ಲಿ ಪಾಲ್ಗೊಳ್ಳುವ ತಂಡಗಳು ನ.30ರ ಒಳಗಾಗಿ ಬಿ.ಕೆ. ಜಗದೀಶ್ ಮೊ.9448206688, ಗೋಪಾಲಕೃಷ್ಣ ಮೊ.9448119993 ಇವರನ್ನು ಸಂಪರ್ಕಿಸಬಹು. ಅಂದು ಮಧ್ಯಾಹ್ನ 3.30 ಗಂಟೆಗೆ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಸ್ಪರ್ಧೆ ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ನಡೆಯಲಿದೆ…

Read More

ಮಡಿಕೇರಿ ನ.12 NEWS DESK : ವಕ್ಫ್ ಆಸ್ತಿ ಎಂದು ಹೇಳಿಕೊಂಡು ಕುಶಾಲನಗರ ಸಮೀಪದ ಮಹಿಳೆಯೊಬ್ಬರಿಗೆ ಬೆದರಿಕೆ ಒಡ್ಡಿದ್ದಾರೆ ಎನ್ನುವ ಪ್ರಕರಣ ಪೊಲೀಸರ ತನಿಖೆಯಿಂದ ಸುಳ್ಳೆಂದು ಸಾಬೀತಾಗಿದೆ. ಈ ಪ್ರಕರಣದ ಹಿಂದಿರುವ ಪ್ರಭಾವಿಗಳನ್ನು ಕೊಡಗು ಪೊಲೀಸರು ಪತ್ತೆಹಚ್ಚಿ ಸತ್ಯಾಂಶವನ್ನು ಬಯಲಿಗೆಳೆಯಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರ ವ್ಯಾಪ್ತಿಯ ನಿವಾಸಿ ಆರೋಪದ ಹಿನ್ನೆಲೆ ತನಿಖೆ ನಡೆಸಿದಾಗ ಪ್ರಕರಣದಲ್ಲಿ ಸತ್ಯಾಂಶವಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇಂತಹ ಸುಳ್ಳುಗಳ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನವನ್ನು ಬಿಜೆಪಿ ಹಾಗೂ ಕೆಲವು ಪ್ರಭಾವಿಗಳು ಮಾಡಿರುವ ಸಾಧ್ಯತೆಗಳಿದೆ ಎಂದು ಆರೋಪಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ನಿಯೋಗ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ಪ್ರಕರಣದ ಕುರಿತು ಮನವರಿಕೆ ಮಾಡಿಕೊಡಲಿದೆ ಮತ್ತು ಸಮಗ್ರ ತನಿಖೆಗೆ ಆಗ್ರಹಿಸಲಿದೆ ಎಂದರು. “ವಕ್ಫ್” ಹೆಸರನ್ನು ಬಳಸಿಕೊಂಡು ಬಿಜೆಪಿಯು ಸಮಾಜದ ಕೋಮು ಸಾಮರಸ್ಯವನ್ನು ಹದಗೆಡಿಸುವ ಷಡ್ಯಂತ್ರ ರೂಪಿಸುತ್ತಿದೆ. ಇದರ ಭಾಗವಾಗಿ…

Read More

ಮಡಿಕೇರಿ ನ.12 NEWS DESK : ಕರ್ನಾಟಕ ಐಕೆಸಿ ಕುಂಗ್ ಫೂ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಕೆನರಾ ಪ್ರೌಢಶಾಲೆಯಲ್ಲಿ ನಡೆದ ಮೊದಲನೇ ರಾಜ್ಯಮಟ್ಟದ ಐಕೆಸಿ ಕುಂಗ್ ಫೂ ಚಾಂಪಿಯನ್‍ಶಿಪ್ ನ ಸಾಂಡಾ ವಿಭಾಗದಲ್ಲಿ ಐಗೂರು ಕುಂಗ್ ಫೂ ಸಂಸ್ಥೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ವಿವಕ್ರ ಚೋಂದಮ್ಮ, ಸಾದ್ವಿ ಆನಂದ್, ಕೌಶಿಕ್ ಕುಮಾರ್, ಎಬೆನ್ ಚಿನ್ನದ ಪದಕ, ಮನ್ವಿತ್ ಮೋಹನ್ ಬೆಳ್ಳಿ ಹಾಗೂ ಕಲ್ಪಿತ್ ಮೋಹನ್, ಅನರ್ಘ್ಯ ಪೂವಯ್ಯ, ಸಿಂಚನ ಪ್ರಭಾಕರ್, ಶರಣ್ಯ ಎ.ಶೆಟ್ಟಿ, ಜೆ.ಯಶಸ್, ಲವಿನ್, ಬಿ.ಡಿ.ಹರ್ಷಿತ್ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಇವರಿಗೆ ರಾಜ್ಯ ಐಕೆಸಿ ಕುಂಗ್ ಫೂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ತರಬೇತಿದಾರ ಎನ್.ಸಿ.ಸುದರ್ಶನ್ ತರಬೇತಿ ನೀಡಿದ್ದಾರೆ. ರಾಷ್ಟ್ರೀಯ ಕ್ರೀಡಾಕೂಟ ನ.30 ಮತ್ತು ಡಿ.1 ರಂದು ಒಡಿಸ್ಸಾದ ಪುರಿಯಲ್ಲಿ ನಡೆಯಲಿದ್ದು, ಕೌಶಿಕ್ ಕುಮಾರ್ ಹಾಗೂ ಮನ್ವಿತ್ ಮೋಹನ್ ಭಾಗವಹಿಸಲಿದ್ದಾರೆ.  

Read More

ಮಡಿಕೇರಿ ನ.12 NEWS DESK : ಕೊಡವ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೊಡವ ಪ್ರೀಮಿಯರ್ ಲೀಗ್ ನ 3ನೇ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೂರ್ಗ್ ಟೈಟಾನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಎಂಟಿಬಿ ರಾಯಲ್ಸ್ ತಂಡ ರನ್ನರ್ಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಐ.ಪಿ.ಎಲ್ ಲೀಗ್ ಮಾದರಿಯಲ್ಲಿ ಆಯೋಜಿಸಲಾಗಿದ್ದ ಪಂದ್ಯಾಟದಲ್ಲಿ ಒಟ್ಟು 12 ತಂಡಗಳು ಭಾಗವಹಿಸಿದ್ದವು. ಮೈಸೂರು ಮಕ್ಕ, ಕೊಡವ ಟ್ರೈಬ್ಸ್, ಕೊಡವ ರಾಯಲ್ಸ್, ಬೆಂಗಳೂರು ಬಬ್ಬಂಗಾ, ಕೂರ್ಗ್ ಟೈಟಾನ್ಸ್, ಕೊಡವು ವಾರಿಯರ್ಸ್, ಅಂಜಿಗೇರಿ ನಾಡ್ ಕೂಟ, ನಾಪೋಕ್ಲು ನರಿಯಾ, ಬೆಂಗಳೂರು ಟಸ್ಕರ್ಸ್ಸ್, ಎಂ.ಟಿ.ಬಿ. ರಾಯಲ್ಸ್, ಕೊಡವಾಮೆ ಕಟ್ಸ್ ಮತ್ತು ಕರವಲೆ ಭಗವತಿ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಿದವು. ಮೂರು ದಿನಗಳು ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಕೊನೆಯ ಹಂತಕ್ಕೆ 4 ತಂಡಗಳು ಪದಾರ್ಪಣೆ ಮಾಡಿದವು. ಅಂಜಿಗೇರಿ ನಾಡ್ ಕೂಟ ತಂಡ ಮತ್ತು ಕೊಡವು ವಾರಿಯರ್ಸ್ ತಂಡದ ನಡುವೆ ನಡೆದ ಮೊದಲ ಎಲಿಮಿನೆಟ್ ಪಂದ್ಯಾಟದಲ್ಲಿ ಅಂಜಿಗೇರಿ ನಾಡ್ ಕೂಟ…

Read More

ಕುಶಾಲನಗರ, ನ.12 NEWS DESK :  ಕೊಡಗು ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಕಲೋತ್ಸವ: 2024 ವು ಗಮನ ಸೆಳೆಯಿತು. ಸ್ಪರ್ಧೆಯಲ್ಲಿ ಮಕ್ಕಳು ಪ್ರದರ್ಶಿಸಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಗಮನ ಸಳೆಯಿತು. ವಿದ್ಯಾರ್ಥಿಗಳು ತಮ್ಮ ಕಲಾ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಮಾತನಾಡಿ, ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಸ್ಪರ್ಧೆಯು ಒಂದು ವಿನೂತನ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆಯನ್ನು ಒದಗಿಸುತ್ತದೆ. ಮಕ್ಕಳ ಇಂತಹ ಕಲಾ ಪ್ರತಿಭಾ ಸ್ಪರ್ಧೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು. ವಿದ್ಯಾರ್ಥಿಗಳು ಇಂತಹ ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ…

Read More

ಮಡಿಕೇರಿ ನ.12 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇದೇ ಪ್ರಥಮ ಬಾರಿಗೆ ಏರ್ಪಡಿಸಲಾಗಿದ್ದ ಕೊಡಗು ಪೊಲೀಸ್ ಕ್ರಿಕೆಟ್ ಲೀಗ್ ಪಂದ್ಯಾವಳಿಯ ಸೌಹಾರ್ದ ಪಂದ್ಯಾವಳಿಯಲ್ಲಿ ಕೊಡಗು ಪೊಲೀಸ್ -11 ಹಾಗೂ ಕೊಡಗು ಪತ್ರಕರ್ತರ ಸಂಘದ ಕೊಡಗು ಪ್ರೆಸ್ ರಾಕರ್ಸ್ ತಂಡಗಳು ಗೆಲುವು ಸಾಧಿಸಿದವು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯ ಪ್ರಥಮ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಮೀಡಿಯಾ ವಾರಿಯರ್ಸ್ ತಂಡ 5 ಓವರ್‍ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 45 ರನ್ ಕಲೆಹಾಕಿತು. ಉತ್ತರವಾಗಿ ಆಡಿದ ಕೊಡಗು ಪೊಲೀಸ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಗೆಲುವು ಸಾಧಿಸಿತು. ಪೊಲೀಸ್ ತಂಡದ ಮನು ಪಂದ್ಯ ಪುರುಷ ಪ್ರಶಸ್ತಿ ಪಡೆದರು. ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಡಗು ಪತ್ರಕರ್ತರ ಸಂಘದ ಕೊಡಗು ಪ್ರೆಸ್ ರಾಕರ್ಸ್ ತಂಡ 5 ಓವರ್‍ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು 67 ರನ್‍ಗಳನ್ನು ಕಲೆಹಾಕಿತು. ಉತ್ತರವಾಗಿ…

Read More