ಸಿದ್ದಾಪುರ ನ.12 NEWS DESK : ಇಕೋ ಫ್ರೆಂಡ್ಸ್ ವತಿಯಿಂದ ಸಿದ್ದಾಪುರದ ಅರೆಕಾಡು ಸರಕಾರಿ ಶಾಲೆ ಮೈದಾನದಲ್ಲಿ ಆಯೋಜಿಸಲಾದ 9ನೇ ವರ್ಷದ ಅರೆಕಾಡು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಇಸ್ಮಾಯಿಲ್ ಮಾಲೀಕತ್ವದ ಟೀಂ ಎಂ.ಎಸ್.ಡಿ. ತಂಡ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ಟೀಮ್ ರೈನ್ಬೋ ವರಿಯರ್ಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಎರಡು ದಿನಗಳ ಕಾಲ ನಡೆದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗ್ರಾಮದ ಸುತ್ತಮುತ್ತಲ 9 ತಂಡಗಳು ಭಾಗಿಯಾಗಿದ್ದವು. ಉತ್ತಮ ಹೊಡೆತ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಮುಸ್ತಫ ಪಡೆದುಕೊಂಡರು. ಫೈನಲ್ ಪಂದ್ಯಾದಲ್ಲಿ ಉತ್ತಮ ಆಟಕ್ಕಾಗಿ ಮ್ಯಾನ್ ಆಫ್ ದಿ ಮ್ಯಾಚ್ ಎಂಎಸ್ಡಿ ತಂಡದ ಸಲಾಂ ಪಡೆದುಕೊಂಡರು. ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಜುನೈದ್ ಪಡೆದುಕೊಂಡರು. ಹೊಸ್ಕೇರಿ ಗ್ರಾ.ಪಂ ಮಾಜಿ ಅಧ್ಯಕ್ಷ ಪ್ರಭುಶೇಖರ್ ಮಾತನಾಡಿ, ಇಂತಹ ಕ್ರೀಡಾಕೂಟಗಳನ್ನು ಆಯೋಜನೆ ಮಾಡುವುದರಿಂದ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಸಹಕಾರಿಯಾಗಿದ್ದು, ಕ್ರೀಡಾ ಸೌಹಾರ್ದದಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದರು. ಅರೆಕಾಡು ರಿವರ್ ಹೋಂ ಸ್ಟೇ…
ಲೇಖಕ: admin
ಮಡಿಕೇರಿ ನ.12 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೊಡಗು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕನ್ನಡ ನಾಡು- ನುಡಿ, ಪರಂಪರೆ, ಇತಿಹಾಸ ಮತ್ತು ಕನ್ನಡ ಸಾಹಿತಿಗಳ ಕುರಿತು ನ.23 ರಂದು ರಸಪ್ರಶ್ನೆ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಮಹದೇವಪೇಟೆಯಲ್ಲಿರುವ ಕ್ರೆಸೆಂಟ್ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರು ಮೊಬೈಲ್ ಸಂಖ್ಯೆ 9606184829, 9113208330ಯನ್ನು ಸಂಪರ್ಕಿಸಿ ನೋಂದಾಯಿಸಿ ಕೊಳ್ಳಬೇಕಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ತಿಳಿಸಿದ್ದಾರೆ.
ಮಡಿಕೇರಿ ನ.12 NEWS DESK : ನಗರದ ಮಾಸ್ಟರ್ ಮೈಂಡ್ ಚೆಸ್ ಸ್ಕೂಲ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ವಿರಾಜಪೇಟೆಯ ಕಾವೇರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಬಿ.ಎಸ್.ಶೌರ್ಯ ಪ್ರಥಮ ಸ್ಥಾನ ಹಾಗೂ 9ನೇ ತರಗತಿ ವಿದ್ಯಾರ್ಥಿನಿ ಬಿ.ಎಸ್.ಸೃಷ್ಟಿ ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಇವರುಗಳು ಬಿ.ಎಸ್.ಸುದೇಶ್ ಹಾಗೂ ಸಹನಾ ದಂಪತಿಗಳ ಮಕ್ಕಳಾಗಿದ್ದು, ಬಿ.ಎಸ್.ಸುದೇಶ್ ಪ್ರಸ್ತುತ ವಿರಾಜಪೇಟೆಯ ಕಾವೇರಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ನ್ಯಾಷನಲ್ ಲೆವೆಲ್ ಚೆಸ್ ಮಾಸ್ಟರಾದ ಮಣಿ ಅವರು ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಪಿ.ಎನ್.ವಿನೋದ್, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯರುಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಅ.12 NEWS DESK : ಕೂಡಿಗೆ ಗ್ರಾ.ಪಂ ವ್ಯಾಪ್ತಿಯ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯುತ್ ಸುರಕ್ಷತೆಯಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಕೂಡಿಗೆ ವಿಭಾಗದ ಸಹಾಯಕ ಲೈನ್ ಮ್ಯಾನ್ ಇಸ್ಮಾಯಿಲ್ ಅತ್ತಾರ ವಿದ್ಯುತ್ ಸುರಕ್ಷತೆಯ ಬಗ್ಗೆ, ವಿದ್ಯುತ್ ನಿಂದ ಆಗುವ ಅನಾಹುತಗಳು ಮತ್ತು ಅವಘಡಗಳ ಬಗ್ಗೆ ಶಾಲಾ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಆಕಸ್ಮಿಕವಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮುಟ್ಟದೆ ಗ್ರಾಮದ ಹಿರಿಯರಿಗೆ, ಶಾಲಾ ಶಿಕ್ಷಕರಿಗೆ ತಿಳಿಸುವ ತಿಳಿಸಬೇಕು ಎಂದರು. ವಿದ್ಯಾರ್ಥಿಗಳು ಮನೆ ಹತ್ತಿರ, ಶಾಲೆ ಆವರಣದಲ್ಲಿ ಅಳವಡಿಸಲಾಗಿರುವ ಟ್ರಾನ್ಸ್ ಫಾರ್ಮರ್ಗಳ ಹತ್ತಿರಕ್ಕೆ ಹೋಗದಂತೆ ಸಲಹೆ ನೀಡಿದರು. ಟ್ರಾನ್ಸ್ ಪಾರ್ಮ ನ ಹತ್ತಿರ ಹಸುಗಳನ್ನು ಕಟ್ಟುವುದು, ವಿದ್ಯುತ್ ತಂತಿಗಳ ಸಮೀಪದಲ್ಲಿ ಬಟ್ಟೆಗಳನ್ನು ಒಣಗಿಸಲು ಹಾಕುವುದು ಸೇರಿದಂತೆ ಸಾಮಾನ್ಯ ಜ್ಞಾನದ ಮೂಲಕ ಸಮಗ್ರವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಗೆಹೊಸೂರು, ಕಣಿವೆ, ಜೇನುಕಲ್ಲು ಬೆಟ್ಟದ ಶಾಲೆ, ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಗಳಿಗೆ ಭೇಟಿ…
ಪೊನ್ನಂಪೇಟೆ ನ.12 NEWS DESK : ಮುಂದಿನ ತಿಂಗಳು ಮಧ್ಯಪ್ರದೇಶದ ಭೂಪಾಲ್ ನಲ್ಲಿ ಜರುಗಲಿರುವ 14 ವರ್ಷದೊಳಗಿನ ಬಾಲಕರ ಮತ್ತು ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ರಾಜ್ಯ ತಂಡಕ್ಕೆ ಕೊಡಗಿನಿಂದ ತಲಾ 10 ವಿದ್ಯಾರ್ಥಿಗಳಂತೆ ಒಟ್ಟು 20 ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಕಳೆದ ಅ. 27ರಿಂದ 30ರವರೆಗೆ ಪೊನ್ನಂಪೇಟೆಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲಾ ತಂಡ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು. ಆಯ್ಕೆಗೊಂಡ ರಾಜ್ಯ ತಂಡದಲ್ಲಿರುವ ವಿದ್ಯಾರ್ಥಿಗಳ ಪೈಕಿ ಬಹುಪಾಲು ಗೋಣಿಕೊಪ್ಪಳಿನ ಲಯನ್ಸ್ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ರಾಜ್ಯ ಬಾಲಕರ ಹಾಕಿ ತಂಡದಲ್ಲಿ ಗೋಣಿಕೊಪ್ಪಲುವಿನ ಲಯನ್ಸ್ ಶಾಲೆಯ ವಿದ್ಯಾರ್ಥಿಗಳಾದ ಬಿ.ಪಿ. ಪೂಣಚ್ಚ, ವಿ. ಎಸ್. ಸೋಹನ್, ಎಂ. ಯು. ಶ್ರುಹಾಲ್ ಸೋಮಣ್ಣ, ಎಂ.ಪಿ. ಚೇತನ್, ಸಿ.ಪಿ. ನಾಚಪ್ಪ, ಕೆ.ಬಿ. ರಿಶಾನ್, ಪೊನ್ನಂಪೇಟೆ ಅಪ್ಪಚ್ಚ ಕವಿ ವಿದ್ಯಾಲಯದ ಆತ್ಮಿಕ್ ದೀಪ್, ಧವನ್ ದೇವಯ್ಯ, ಪೊನ್ನಂಪೇಟೆ ಸಂತ ಅಂತೋಣಿ ಶಾಲೆಯ ತರುಣ್…
ಪುತ್ತೂರು ನ.12 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಆಶ್ರಯದಲ್ಲಿ ಪಿಜಿಸಿಇಟಿ ಅಥವಾ ಕೆಎಂಎಟಿ ಪ್ರವೇಶ ಪರೀಕ್ಷೆಯನ್ನು ಬರೆದು ಎಂಸಿಎ ಸ್ನಾತಕೋತ್ತರ ಪದವಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಎರಡು ವಾರಗಳ ಸೇತುಬಂಧ ತರಗತಿಗಳನ್ನು ಆಯೋಜಿಸಲಾಗಿದೆ. ಪರಿಣಾಮಕಾರಿ ಸಂವಹನ, ಸಮಸ್ಯೆ ಪರಿಹರಿಸುವ ಕೌಶಲ್ಯಗಳು ಮತ್ತು ಪ್ರೋಗ್ರಾಮಿಂಗ್ ಭಾಷೆಗಳಂತಹ ಪ್ರಮುಖ ವಿಷಯಗಳನ್ನು ಕೇಂದ್ರೀಕರಿಸಿ ನಡೆಸಲಾಗುವ ಈ ತರಗತಿಯ ಮೂಲಕ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ನಡುವಿನ ಅಂತರವನ್ನು ಕಡಿಮೆಗೊಳಿಸುವ ಗುರಿಯನ್ನು ಹೊಂದಲಾಗಿದೆ. ಪ್ರಾಯೋಗಿಕ ಪರಿಣತಿಗಾಗಿ ಹ್ಯಾಂಡ್ಸ್ ಆನ್ ಸೆಷನ್ಗಳನ್ನೂ ನಡೆಸಲಾಗುತ್ತದೆ. ಈ ತರಗತಿಗಳನ್ನು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ಶುಭ ಉದ್ಘಾಟಿಸಿ ಶುಭ ಹಾರೈಸಿದರು. ತರಬೇತಿ ಮತ್ತು ನೇಮಕಾತಿ ವಿಭಾಗ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್, ಎಂಸಿಎ ವಿಭಾಗದ ನಿರ್ದೇಶಕಿ ಡಾ. ಕೆ.ಜ್ಯೋತಿಮಣಿ ಉಪಸ್ಥಿತರಿದ್ದರು. ಒಟ್ಟು 33 ಎಂಸಿಎ ಪ್ರವೇಶಾಕಾಂಕ್ಷಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ.
ಮಡಿಕೇರಿ ಅ.12 NEWS DESK : ನಾಪೋಕ್ಲು ಬ್ಲಾಕ್ ನ ಕಕ್ಕಬ್ಬೆಯ ಅಂಬೇಡ್ಕರ್ ವಸತಿ ಶಾಲೆಗೆ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ಏಳಿಗೆಗೆ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದು, ವಿದ್ಯಾರ್ಥಿಗಳ ಉಚಿತ ವಿದ್ಯಾಭ್ಯಾಸ ಹಾಗೂ ವಸತಿಗಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಅಂಬೇಡ್ಕರ್ ವಸತಿ ಶಾಲೆಗಳನ್ನು ತೆರೆಯುತ್ತಿರುವುದಾಗಿ ಹೇಳಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ , ಲವ ಚಿಣ್ಣಪ್ಪ, ಸಂಪನ್ ಅಯ್ಯಪ್ಪ ಮತ್ತಿತರರು ಪ್ರಮುಖರು ಹಾಜರಿದ್ದರು.
ಮಡಿಕೇರಿ ನ.12 NEWS DESK : ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಪ್ರಯುಕ್ತ ಜನಜಾತಿಯ ಗೌರವ ದಿವಸ ಕಾರ್ಯಕ್ರಮವು ನ.15 ರಂದು ಜಮುಯಿ, ಬಿಹಾರ್ನಲ್ಲಿ ಆಯೋಜಿಸಿದ್ದು, ಈ ದಿನದಂದು ಕೊಡಗು ಜಿಲ್ಲೆಯ ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಮರೂರು ತಿತಿಮತಿ ಇಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿತ್ತು. ಆದರೆ ಈ ಗ್ರಾ.ಪಂ.ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜನಜಾತಿಯ ಗೌರವ ದಿವಸ ಕಾರ್ಯಕ್ರಮವು ನವೆಂಬರ್, 15 ರಂದು ಬೆಳಗ್ಗೆ 10.30 ಗಂಟೆಗೆ ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಟ್ಟೂರು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ನಡೆಯಲಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.
ಮಡಿಕೇರಿ ನ.12 NEWS DESK : 220/66/11ಕೆವಿ, 66/11ಕೆವಿ ಮತ್ತು 33/11ಕೆ.ವಿ ಸ್ವೀಕರಣಾ ಕೇಂದ್ರದಿಂದ ನ.13 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನ.13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಶಾಲನಗರ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11ಕೆವಿ ಮಾರ್ಗಗಳ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಕುಶಾಲನಗರ ಪಟ್ಟಣ, ಗೊಂದಿಬಸವನಹಳ್ಳಿ, ಮುಳ್ಳುಸೋಗೆ, ನಂಜರಾಯಪಟ್ಟಣ, ಗುಡ್ಡೆಹೊಸೂರು, ಕೆದಕಲ್, ನಾಕೂರು, ಹೊಸಕೋಟೆ, ಮತ್ತಿಕಾಡು, ಗರ್ಗಂದೂರು, ಮಾದಾಪುರ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಕೂಡಿಗೆ, ಕೂಡುಮಂಗಳೂರು, ದೊಡ್ಡತ್ತೂರು, ಚಿಕ್ಕತ್ತೂರು, ಹೆಬ್ಬಾಲೆ, ತೊರೆನೂರು, ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ದೊಡ್ಡಮಳ್ತೆ, ಮಸಗೋಡು, ಕರ್ಕಳ್ಳಿ, ಹಾನಗಲ್ಲು, ಬೇಳೂರು, ಯಡವಾರೆ, ಕುಂಬೂರು ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ನ.12 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ದೇವಾಲಯದ ರೂಢಿ ಸಂಪ್ರದಾಯದಂತೆ ನ.13 ರಂದು ‘ಉತ್ಥಾನ ದ್ವಾದಶಿ’ ಪ್ರಯುಕ್ತ ‘ತುಳಸಿ ಪೂಜೆಯು ನ.13 ರಂದು ಸಂಜೆ 6.30 ರಿಂದ 7.30 ಗಂಟೆಗೆ ನಡೆಯಲಿದೆ. ನ.15 ರಂದು ಸಂಜೆ 6.30 ಗಂಟೆಯಿಂದ ತೆಪ್ಪೋತ್ಸವ, ಪಲ್ಲಕಿ ಉತ್ಸವ, ದಟ್ಟೋತ್ಸವ ಪೂಜಾ ಕಾರ್ಯಕ್ರಮ ನಡೆಯಲಿದೆ. ಸೇವಾಕರ್ತರು ತಮ್ಮ ಹೆಸರನ್ನು ದೇವಾಲಯದಲ್ಲಿ ನೋಂದಾಯಿಸುವ ಮೂಲಕ ಸೇವೆಯನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ಜರುಗುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಅಣ್ಣಪ್ಪ ಜೆ.ಆರ್.ಮೊ.ಸಂ. 9902290302 ಹಾಗೂ ಕುಶಕುಮಾರ್ ಜೆ.ಎನ್. ಮೊ,ಸಂ. 9845821566 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.






