ಲೇಖಕ: admin

ಮಡಿಕೇರಿ ನ.11 NEWS DESK : ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಯ ದೂರದೃಷ್ಟಿಯಿಂದ ಹಿರಿಯರು ಕಟ್ಟಿ ಬೆಳೆಸಿದ ದಕ್ಷಿಣ ಕೊಡಗಿನ ಮಾಯಮುಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 100 ಫಲಪ್ರದವಾದ ವರ್ಷಗಳನ್ನು ಪೂರೈಸಿದ್ದು, ಶಾಲೆಯ ಶತಮಾನೋತ್ಸವ ಸಮಾರಂಭ ನ.16 ಮತ್ತು 17 ರಂದು ಆಯೋಜಿತವಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾಯಮುಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿಯ ಪ್ರಮುಖರು ಹಾಗೂ ಗ್ರಾಮ ಪಂಚಾಯ್ತಿ ಅಧ್ಯಕ್ಷರೂ ಆಗಿರುವ ಟಾಟು ಮೊಣ್ಣಪ್ಪ ಈ ಬಗ್ಗೆ ಮಾಹಿತಿ ನೀಡಿ, 1924 ರಲ್ಲಿ ಆರಂಭಗೊಂಡ ಶಾಲೆ ಪ್ರಸ್ತುತ ಶತಮಾನೋತ್ಸವ ಸಂಭ್ರಮದಲ್ಲಿದೆ. ಈ ಹಿನ್ನೆಲೆ ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆಯೆಂದು ತಿಳಿಸಿದರು. ಕ್ರೀಡಾ ಚಟುವಟಿಕೆ :: ಶತಮಾನೋತ್ಸವ ಹಿನ್ನೆಲೆಯಲ್ಲಿ ನ.15 ರಂದೆ ಪೊನ್ನಂಪೇಟೆ ತಾಲ್ಲೂಕು ಮಟ್ಟದ ವಾಲಿಬಾಲ್, ಪುರುಷರು ಮತ್ತು ಮಹಿಳೆಯರ ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಪಂದ್ಯಾವಳಿ ನಡೆಯಲಿದೆಯೆಂದು ತಿಳಿಸಿದರು. ನ.16 ರಂದು ಬೆಳಗ್ಗೆ 10 ಗಂಟೆಗೆ ವಿಧಾನ ಪರಿಷತ್‍ನ ಮಾಜಿ ಸದಸ್ಯರಾದ ಚೆಪ್ಪುಡಿರ ಅರುಣ್ ಮಾಚಯ್ಯ…

Read More

ಮಡಿಕೇರಿ ನ.11 NEWS DESK : ಚೆಟ್ಟಳ್ಳಿಯ ಚೇರಳ ಗೌಡ ಸಂಘದ 16ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಅಯ್ಯಂಡ್ರ ರಾಘವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಪೂರ್ಣಗೊಂಡಿರುವ ಸಮಾಜದ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಲು ಸಭೆ ನಿರ್ಣಯ ಕೈಗೊಂಡಿತು. ಅಯ್ಯಂಡ್ರ ರಾಘವಯ್ಯ ಅವರು ಮಾತನಾಡಿ 10 ಕುಟುಂಬ 18 ಗೋತ್ರದ ಅಪೂರ್ಣಗೊಂಡಿರುವ ಸಂಘದ ಕಟ್ಟಡವನ್ನು ಸರ್ಕಾರದ ಅನುದಾನ ಮತ್ತು ಸಂಘದ ಸದಸ್ಯರುಗಳ ಸಹಕಾರ ಪಡೆದು ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ಈ ಹಿಂದೆ ನಡೆಸಿದಂತೆ ಕಾಲ್ಚೆಂಡು ಪಂದ್ಯಾವಳಿಯನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. 2023- 24ನೇ ವಾರ್ಷಿಕ ವರದಿಯನ್ನು ಸಂಘದ ಕಾರ್ಯದರ್ಶಿ ಆಜೀರ ಧನಂಜಯ ಹಾಗೂ ಲೆಕ್ಕ ಪರಿಶೋಧನೆಯನ್ನು ಸಮಾಜದ ಉಪ ಖಜಾಂಚಿ ಪೇರಿಯನ ಉದಯ ಮಂಡಿಸಿದರು. ಖಜಾಂಚಿ ಮುಕ್ಕಾಟಿ ಪಳಂಗಪ್ಪ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಪೇರಿಯನ ಪೂಣಚ್ಚ ವಂದಿಸಿದರು. ಕುಮಾರಿ ಪೇರಿಯನ ರಿಧಿ ಹಾಗೂ ಪೇರಿಯನ ಜೀವಿತ ಪ್ರಾರ್ಥಿಸಿದರು. ಉಪಾಧ್ಯಕ್ಷ ಹೊಸಮನೆ ಪೂವಯ್ಯ, ಆಡಳಿತ ಮಂಡಳಿಯ…

Read More

ಮಡಿಕೇರಿ ನ.11 NEWS DESK : ಕನ್ನಡ ಉಪ ಭಾಷೆಯಾದ ಅರೆಭಾಷೆ ಉಳಿಸಿ ಬೆಳೆಸುವಂತಾಗಲು ಕನ್ನಡ ಭಾಷೆ ಜೊತೆಗೆ ಅರೆಭಾಷೆಯನ್ನೂ ಕಲಿಯಬೇಕು ಎಂದು ಗಣ್ಯರು ಪ್ರತಿಪಾದಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಯ್ಯಂಡಾಣೆಯ ನರಿಯಂದಡ ಅಯ್ಯಪ್ಪ ಯುವಕ ಸಂಘ ಸಹಕಾರದಲ್ಲಿ ಚೆಯ್ಯಂಡಾಣೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ನಡೆದ ‘ಅರೆಭಾಷೆ ಗಡಿನಾಡ ಉತ್ಸವ’ ಕಾರ್ಯಕ್ರಮದಲ್ಲಿ ಗಣ್ಯರು ಮಾತನಾಡಿದರು. ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಾಷ್ಟ್ರದಲ್ಲಿ ಅನೇಕ ಭಾಷೆ ಮತ್ತು ಉಪ ಭಾಷೆಗಳಿದ್ದು, ಕನ್ನಡದ ಉಪ ಭಾಷೆಯಲ್ಲಿ ಅರೆಭಾಷೆಯೂ ಒಂದಾಗಿದೆ. ಕನ್ನಡ ಭಾಷೆ ಜೊತೆಗೆ ಅರೆಭಾಷೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಕನ್ನಡ ನಾಡಿನಲ್ಲಿ ಕನ್ನಡ ಭಾಷೆ ಜತೆಗೆ ಅರೆಭಾಷೆಯನ್ನು ಪ್ರೋತ್ಸಾಹಿಸಬೇಕಿದೆ ಎಂದು ಸಂಸದರು ಹೇಳಿದರು. ಭಾರತದಲ್ಲಿ ಅನೇಕ ಭಾಷೆಗಳಿದ್ದು, ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಜೊತೆಗೆ ಜೊತೆಗೆ ಅರೆಭಾಷೆಯನ್ನು ಮಾತನಾಡುವಂತಾಗಬೇಕು…

Read More

ಮಡಿಕೇರಿ ನ.11 NEWS DESK : ಮುಂದೆ ಕೊಡಗಿನಲ್ಲು ಒಂದು ಗ್ರಾಮದಿಂದ ಇನ್ನೂಂದು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಧಾನ ಮಂತ್ರಿ ಗ್ರಾಮ ಸಡಕ್ ರಸ್ತೆಗಳನ್ನು ಯೋಜನೆಗೆ ಸೇರಿಸಿ ಗ್ರಾಮದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುವುದು ಎಂದು ಕೊಡಗು-ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಭಾರತೀಯ ಜನತಾ ಪಾರ್ಟಿ ಬಿಜೆಪಿ ಮಂಡಲದ ವತಿಯಿಂದ ಪೊನ್ನಂಪೇಟೆ ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಡಿಸೆಂಬರ್ ನಿಂದ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಒಂದಾದ ಜಲಜೀವನ್ ಮಿಷನ್ ಗ್ರಾಮ‌ಮಟ್ಟದಲ್ಲಿ ಆರಂಭಗೊಳ್ಳಲಿದೆ ಎಂದರು. ಈಗಾಗಲೇ ಶುರುವಾಗಿರುವ ರಾಷ್ಟ್ರೀಯ ಹೆದ್ದಾರಿ ಕುಶಾಲನಗರ – ಶ್ರೀರಂಗಪಟ್ಟಣ ರಸ್ತೆ ಕಾಮಗಾರಿ ತ್ವರಿತವಾಗಿ ಮುಗಿಸಿ ಕೊಡಗಿನ ಭಾಗದ ಸಾರ್ವಜನಿಕರಿಗೆ ಮುಕ್ತವಾಗಿ ಓಡಾಡಲು ಅನುಕೂಲ ಮಾಡಲಾಗುವುದು ಎಂದು ಭರವಸೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಶುರುವಾದ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಎಲ್ಲ ಭೂತ್ ಮಟ್ಟದಲ್ಲಿ ತ್ವರಿತವಾಗಿ ಪೂರ್ಣಗೊಳಿಸಲು ಕಾರ್ಯಕರಿಗೆ ಕರೆ ನೀಡಿದರು.  

Read More

ಪೊನ್ನಂಪೇಟೆ, ನ.11 NEWS DESK : ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿರುವ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡಾ ಶೂಗಳನ್ನು ಕೊಡುಗೆಯಾಗಿ ನೀಡಲಾಯಿತು. ಕೋಲಾರದಲ್ಲಿ ಜರುಗಲಿರುವ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯನ್ನು ಅಥ್ಲೆಟಿಕ್ಸ್ ವಿಭಾಗದಲ್ಲಿ ಪ್ರತಿನಿಧಿಸಲಿರುವ ತಂಡದಲ್ಲಿ ಸ್ಥಾನ ಪಡೆದಿರುವ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸ್ಥಳೀಯ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ವತಿಯಿಂದ  ಕ್ರೀಡಾ ಶೂಗಳನ್ನು ವಿತರಿಸಲಾಯಿತು. ತಿತಿಮತಿ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ಸಿ.ಎಂ.ರಾಮಕೃಷ್ಣ ಅವರ ನಿರ್ದೇಶನದಂತೆ ಶಾಲೆಗೆ ತೆರಳಿದ ಸಂಘದ ನಿರ್ದೇಶಕ ಎಂ.ಎ.ಮಂಜುಳಾ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್. ಚಂದ್ರಕಲಾ ಮತ್ತು ಸಿಬ್ಬಂದಿ ನೇತ್ರ  ವಿದ್ಯಾರ್ಥಿಗಳಿಗೆ ಖುದ್ದಾಗಿ ಸಂಘದ ಕೊಡುಗೆಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎ.ಪಿ.ಮಂಗಳ, ಶಿಕ್ಷಕ ಸಿ.ಎಂ. ರಾಘವೇಂದ್ರ ಸೋಮಶೇಖರ್ ಪ್ರಸಾದ್, ಚೆನ್ನಯ್ಯ, ನವೀನ್ ಬಾಸಿತ್ ಹಾಗೂ ಶರತ್ ಕುಮಾರ್ ಹಾಜರಿದ್ದರು.

Read More

ಗೋಣಿಕೊಪ್ಪಲು ನ.11 NEWS DESK : ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸ್ವಚ್ಚತಾ ಹೈ ಸೇವಾ ಕಾರ್ಯಕ್ರಮ ಅಡಿಯಲ್ಲಿ ಸ್ವಚ್ಚತಾ ಶ್ರಮದಾನ ನಡೆಯಿತು.  ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಸುಮಾರು 150 ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಕಾಲೇಜಿನ ಕ್ಯಾಂಟೀನ್ ಹಾಗೂ  ಮಹಿಳಾ ವಸತಿ ಗೃಹದ ಸುತ್ತ ಮುತ್ತ ಬೆಳೆದಿದ್ದ ಕಾಡು ಗಿಡಗಳನ್ನು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಕಾವೇರಿ ಕಾಲೇಜು ಎನ್.ಎಸ್.ಎಸ್ ಯೋಜನಾಧಿಕಾರಿ ಎಂ.ಎನ್. ವನಿತ್ ಕುಮಾರ್ ಮಾತನಾಡಿ, ನಮ್ಮ ಮನೆ ಸುತ್ತಮುತ್ತಲೂ ನಾವು ಸ್ವಚ್ಛ ಮಾಡಿಕೊಳ್ಳಬೇಕು ಆಗ ಮಾತ್ರ ನಮ್ಮ ಪರಿಸರ ಸ್ವಚ್ಛವಾಗಿರುತ್ತದೆ. ಸ್ವಚ್ಚತೆ ಇದ್ದರೆ ಮನಸ್ಸು ಹಗುರವಾಗುತ್ತದೆ ಇದರಿಂದ ಜ್ಞಾನ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ಎನ್.ಎಸ್.ಎಸ್ ಯೋಜನಾಧಿಕಾರಿ ಎನ್.ಪಿ.ರೀತಾ ಮಾತನಾಡಿ, ಶ್ರಮದಾನ ಮಾಡುವ ಮೂಲಕ ನಮ್ಮ ದೇಹವನ್ನು ಸದೃಢವಾಗಿಸಲು ಸಾಧ್ಯವಾಗುತ್ತದೆ. ಆದ್ದರಿಂದ ವಿದ್ಯಾರ್ಥಿ ಜೀವನದಲ್ಲಿಯೇ ದೇಹವನ್ನು ಮಣಿಸಬೇಕು ಎಂದು ತಿಳಿಸಿದರು. ಎನ್.ಎಸ್.ಎಸ್ ಹಿರಿಯ ನಾಯಕರಾದ ಸೃಜನ್, ರೀಶು ಕಾವೇರಪ್ಪ, ಸಿಂಚನ್…

Read More

ಮಡಿಕೇರಿ NEWS DESK ನ.10 : ಅಖಿಲ ಭಾರತ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಕನ್ನಡ ಜ್ಯೋತಿ ಹೊತ್ತ ರಥ ಯಾತ್ರೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಭಾನುವಾರ ಬರಮಾಡಿಕೊಂಡರು. ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ನೆರವೇರಿಸಿ ರಥವನ್ನು ಸ್ವಾಗತಿಸಿದರು. ಹಾಸನ ಜಿಲ್ಲೆಯ ಕಲಾತಂಡಗಳು ರಣಕಹಳೆ ಊದುವ ಮೂಲಕ ಹಾಗೂ ಚೆಟ್ಟಿಮೇಳ ವಾದ್ಯ ನುಡಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ತ್ರೀಶಕ್ತಿ ಗುಂಪಿನವರು ಪೂರ್ಣಕುಂಭ ಸ್ವಾಗತದೊಂದಿಗೆ ತಾಯಿ ಭುವನೇಶ್ವರಿ ಹೊತ್ತ ರಥವನ್ನು ಸ್ವಾಗತಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಹಶೀಲ್ದಾರರ ಕಚೇರಿ, ತಾಲ್ಲೂಕು ಪಂಚಾಯತ್ ಕಚೇರಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಹಾಗೂ ತಾಲ್ಲೂಕು ಘಟಕ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕಂದಾಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಎಲ್ಲರೂ ತಾಯಿ ಭುವನೇಶ್ವರಿ ರಥವನ್ನು ಬರ ಮಾಡಿಕೊಂಡರು. ಬಳಿಕ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗೇರಿರ ಮುತ್ತಣ್ಣ ವೃತ್ತದ…

Read More

ಸುಂಟಿಕೊಪ್ಪ NEWS DESK ನ.10 : ಅತ್ತೂರು ನಲ್ಲೂರು ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಮಧ್ಯ ರಾತ್ರಿ ಕಳ್ಳತನ ನಡೆದಿರುವ ಬಗ್ಗೆ ವರದಿಯಾಗಿದೆ. ಕಂಬಿಬಾಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರ ಕೊಠಡಿಯಿಂದ ರೂ.2 ಸಾವಿರ ನಗದು ಕಳ್ಳತನವಾಗಿದೆ. ಕೊಠಡಿಯಿಂದ ಟೇಬಲ್ ಕ್ಲಾತ್ ನ್ನು ಹೊರತಂದಿರುವ ಚೋರರು ಮಲಗಿ ಹೋಗಿರುವ ಕುರುಹುಗಳು ಕಂಡು ಬಂದಿದೆ. ಶಾಲೆಯ ಅಕ್ಷರದಾಸೋಹ ಅಡುಗೆ ಕೋಣೆಯ ಬೀಗ ಮುರಿಯಲು ಪ್ರಯತ್ನಿಸಿದ್ದಾರೆ. ಕಂಬಿಬಾಣೆ ಶಾಲಾ ಮುಖ್ಯೋಪಾಧ್ಯಾಯಿನಿ ನೀಡಿದ ದೂರಿನನ್ವಯ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್, ಅಪರಾಧ ವಿಭಾಗದ ಭಾರತಿ, ಶ್ವಾನದಳ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಸುಂಟಿಕೊಪ್ಪ NEWS DESK ನ.10 : ಸುಂಟಿಕೊಪ್ಪ ಮಲಯಾಳಿ ಸಮಾಜದ ವತಿಯಿಂದ 17ನೇ ವರ್ಷದ ಓಣಂ ಆಚರಣೆಯ ಪ್ರಯುಕ್ತ ಸ್ಥಳೀಯ ಜಿಯಂಪಿ ಶಾಲಾ ಮೈದಾನದಲ್ಲಿ ಭಾನುವಾರ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಾಡಿಸಲಾಗಿತ್ತು. ಗ್ರಾಮೀಣಾ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಮಕ್ಕಳಿಗೆ ಬೆಲೂನ್ ಹೊಡೆಯುವುದು, ಬೆಲೂನ್ ಕಾಲಿನಲ್ಲಿ ಕಟ್ಟಿ ಓಟದ ಸ್ಪರ್ಧೆ, ಕಾಳು ಹೆಕ್ಕುವುದು, ಓಟದ ಸ್ಪರ್ದೆಗಳು, ಪುರುಷರ ಮತ್ತು ಮಹಿಳೆಯರಿಗಾಗಿ ಹಗ್ಗಾಜಗ್ಗಾಟ ಸ್ಪರ್ದೆಗಳು ನಡೆದವು. ಮದ್ಯಾಹ್ನದ ನಂತರ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ದೆಗಳನ್ನು ಏರ್ಪಾಡಿಸಲಾಗಿತ್ತು. ಮಹಿಳೆಯರಿಗೆ ವಿವಿಧ ರೀತಿಯ ಮನೋರಂಜನ ಆಟೋಟ ಸ್ಪರ್ದೆಗಳು ನಡೆದವು. ವಿಜೇತರಿಗೆ ನ.18 ರಂದು ನಡೆಯುವ ಓಣಂ ಆಚರಣೆಯ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಅಧ್ಯಕ್ಷ ಶಶಿಕುಮಾರ್ ತಿಳಿಸಿದರು. ಸಂಘದ ಅಧ್ಯಕ್ಷ ಶಶಿಕುಮಾರ್, ಪದಾಧಿಕಾರಿಗಳಾದ ವಾಸುದೇವ, ಕನೀಸ್, ಶಿವಮಣಿ, ಅನಿಲ್ ಕುಮಾರ್ ಸೇರಿದಂತೆ ಪದಾಧಿಕಾರಿಗಳು ಇದ್ದರು.

Read More

ಸೋಮವಾರಪೇಟೆ NEWS DESK ನ.10 : ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಮತ್ತು ಜಿಲ್ಲಾ ಶಿಕ್ಷಣ ಇಲಾಖೆ ವತಿಯಿಂದ ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಮತ್ತು ಪದವಿ ಪೂರ್ವ ಕಾಲೇಜು ಬಾಲಕ, ಬಾಲಕಿಯರ ಕರಾಟೆ ಪಂದ್ಯಾವಳಿಯಲ್ಲಿ ಸೋಮವಾರಪೇಟೆಯ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದಲ್ಲಿ ಕುಶಾಲ್ ಹಾಗೂ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಪ್ರತೀಕ್ಷಾ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Read More