ಸಿದ್ದಾಪುರ ಜ.7 NEWS DESK : ಮಾಲ್ದಾರೆ ಗ್ರಾಮ ಪಂಚಾಯತ್ಯಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆಯು ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷೆ ಮಾಲತಿ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅಂಗವಿಕಲರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಸರ್ಕಾರದಿಂದ ಅಂಗವಿಕಲರಿಗೆ ಸ್ವಾವಲಂಬಿಗಳಾಗಿ ಬದುಕಲು ಸಾಕಷ್ಟು ಯೋಜನೆಗಳಿವೆ. ಎಲ್ಲರೂ ಸೌಲಭ್ಯಗಳ ಬಗ್ಗೆ ತಿಳಿದುಕೊಂಡು, ಅವುಗಳ ಪ್ರಯೋಜನ ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಹೇಳಿದರು. ಗ್ರಾಮ ಪಂ. ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ಮಾತನಾಡಿ, ವಿಶೇಷ ಚೇತನರಿಗೆ ಇಲಾಖೆಯಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ಕುಞಂಣ್ಣ, ಮಾಜಿ ಅಧ್ಯಕ್ಷ ಸಮೀರ್, ಸದಸ್ಯರಾದ ಮಹಮ್ಮದ್ ಅಲಿ, ವಿದ್ಯಾ ಮತ್ತು ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.
ಲೇಖಕ: admin
ಮಡಿಕೇರಿ ಜ.7 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಬೆಂಗಳೂರು ಕೊಡವ ಸಮಾಜ ಸಹಯೋಗದಲ್ಲಿ ಜ.26 ರಂದು ರಾಜ್ಯ ಮಟ್ಟದ ಕೊಡವ ವಿಚಾರ ಸಂಕಿರಣ ನಡೆಯಲಿದೆ. ಬೆಂಗಳೂರು ಕೊಡವ ಸಮಾಜದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿರುವ ವಿಚಾರ ಸಂಕಿರಣವನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕೇಂದ್ರ ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಅಧ್ಯಕ್ಷ ಚಂದ್ರಶೇಖರ ಬಿ. ಕಂಬಾರ ಉದ್ಘಾಟಿಸಲಿದ್ದಾರೆ. ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ಮಾನಸ, ಕೇಂದ್ರ ವರಮಾನ ತೆರಿಗೆ ಇಲಾಖೆಯ ಜಂಟಿ ಆಯುಕ್ತರಾದ ದೇವಣಿರ ಪ್ರೀತ್ ಗಣಪತಿ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಕರೋಟಿರ ಟಿ. ಪೆಮ್ಮಯ್ಯ, ನಿವೃತ್ತ ಎಸಿಪಿ ಬಿದ್ದಂಡ ಬಿ. ಅಶೋಕ್ ಕುಮಾರ್, ರಾಜ್ಯ ಉಚ್ಛ ನ್ಯಾಯಾಲಯದ ವಕೀಲೆ ಪುಲಿಯಂಡ ಅನು ಚಂಗಪ್ಪ, ಡ್ಯಾಫೋಡಿಲ್ಸ್ ವಿದ್ಯಾಸಂಸ್ಥೆಯ ಮುಖ್ಯಸ್ಥೆ ನೆರವಂಡ ಮಾಧುರಿ…
ಸೋಮವಾರಪೇಟೆ ಜ.7 NEWS DESK : ಗೌಡಳ್ಳಿ ಗ್ರಾಮ ಪಂಚಾಯಿತಿ, ಸಿ.ಎಂ.ಸಿ.ಎ ಹಾಗೂ ನಾವು ಪ್ರತಿಷ್ಠಾನ ಸಂಸ್ಥೆಯ ಸಹಯೋಗದಲ್ಲಿ ಗೌಡಳ್ಳಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಮಕ್ಕಳು ಮತ್ತು ಮಹಿಳೆಯರ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಸಮಸ್ಯೆಗಳ ಸರಮಾಲೆಯನ್ನು ಬಿಚ್ಚಿಟ್ಟರು. ಶುಂಠಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪ್ರೇಮ್ ಕುಮಾರ್ ಮಾತನಾಡಿ, ಮೇಲ್ಚಾಚವಣಿಯ ಮರಗಳು ಗೆದ್ದಲು ಹಿಡಿದಿದ್ದು, ತರಗತಿಯಲ್ಲಿ ಕುಳಿತುಕೊಳ್ಳುವುದಕ್ಕೆ ಭಯವಾಗುತ್ತದೆ. ಮೈದಾನದಲ್ಲಿ ಕಾಡು ಬೆಳೆದಿರುವುದರಿಂದ ಕೆಲವೊಮ್ಮೆ ಹಾವುಗಳ ಬರುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ. ನಂದಿಗುಂದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಜಿ.ಎಸ್.ಧ್ರುವ, ಕಾರ್ತಿಕ್, ಮೋಕ್ಷ ತಮ್ಮ ಶಾಲೆಯ ಸಮಸ್ಯೆಗಳನ್ನು ಬಿಚ್ಚಿಟ್ಟರು. ಶೌಚಾಗೃಹಕ್ಕೆ ಬಾಗಿಲು ಇಲ್ಲ. ಹೊಸ ಶೌಚಗೃಹ ಬೇಕು. ಕ್ರೀಡಾಸಾಮಾಗ್ರಿಗಳು ಬೇಕು. ಕೊಠಡಿಗೆ ಗಾರೆ ಹಾಕಿಸಿಕೊಡಿ ಎಂದು ಮನವಿ ಮಾಡಿದರು. ಗೌಡಳ್ಳಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಲೋಕೇಶ್, ಮನ್ವಿತ್, ವಿದ್ಯಾ, ಪ್ರಿಯಾಂಕ, ಪ್ರಜ್ವಲ್, ಶ್ರಾಧ್ಯ ಮಾತನಾಡಿ, ಶಾಲಾ ಮೈದಾನ ಒತ್ತುವರಿಯಾಗುತ್ತಿದೆ. ಟ್ರಂಚ್ ನಿರ್ಮಿಸಿ ಹದ್ದು ಬಸ್ತು ಗುರುತಿಸಿ ಮೈದಾನವನ್ನು ಉಳಿಸಿಕೊಳ್ಳಬೇಕು.…
ವಿರಾಜಪೇಟೆ ಜ.7 NEWS DESK : ಕೇರಳದ ಕಣ್ಣನೂರಿನ ಪೆರಿಂತಟ್ಟ ಊರಿನ ಕಾಲಕಟ್ಟಿಲಂ ದೇವಾಲಯದಲ್ಲಿ ಜ.10 ರಿಂದ 12ರ ವರೆಗೆಕಾಳೇಘಾಟ್ ಕಳಿಯಾಟ್ ಮಹೋತ್ಸವ ಜರುಗಲಿದೆ. ಜ.10 ರಂದು ಬೆಳಿಗ್ಗೆ ಗಣಹೋಮ, ಉಷಾಪೂಜೆ, ಉಚ್ಚಪೂಜೆ, ದೀಪಾರಾಧನೆ, ಅತ್ತಾಳಪೂಜೆ ನಡೆಯಲಿದ್ದು, ಮಧ್ಯರಾತ್ರಿ 12 ಗಂಟೆಗೆ ಮಹಾಗುರುತಿ ಪೂಜೆ ನಡೆಯಲಿದೆ. ಜ.11 ರಂದು ಕರಿಕುಟ್ಟಿಚಾತನ್ ತೆರೆ ಹಾಗೂ ಜ.12 ರಂದು ಸಮಾರೋಪ ಪೂಜೆಯೊಂದಿಗೆ ಉತ್ಸವ ತೆರೆಕಾಣಲಿದೆ. ಈ ಉತ್ಸವವು ಒಟ್ಟು ಹದಿನೈದು ವಿಧದ ತೆರೆಗಳಿಂದ ಕೂಡಿರುತ್ತದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂ. 9947213899 ನ್ನು ಸಂಪರ್ಕಿಸಬಹುದಾಗಿದೆ.
ಮಡಿಕೇರಿ NEWS DESK ಜ.6 : ಮಸೀದಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ನಗರದ ಸುಣ್ಣದ ಬೀದಿಯ ನಿವಾಸಿ ಮಹಮ್ಮದ್ ಶೋಯಲ್ (32) ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ ಧ್ವನಿವರ್ಧಕಕ್ಕೆ ಅಳವಡಿಸುವ ಸಾಧನ, ಅದರ ಸಲಕಲರಣೆಗಳು ಮತ್ತು ರೂ.3 ಸಾವಿರ ನಗದನ್ನು ವಶಪಡಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 19-12-2024 ರಂದು ಇಂದಿರಾ ಬಡಾವಣೆಯ ಮಸೀದಿಯಲ್ಲಿಟ್ಟಿದ್ದ ಕಾಣಿಕೆ ಹುಂಡಿಯನ್ನು ಮತ್ತು ಮಸೀದಿಯ ಧ್ವನಿ ವರ್ಧಕಕ್ಕೆ ಅಳವಡಿಸುವ ಸಾಧನ ಮತ್ತು ಉಪಕರಣವನ್ನು ಕಳ್ಳತನ ಮಾಡಿರುವ ಕುರಿತು ಕುಶಾಲನಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಪೊಲೀಸ್ ಠಾಣೆಯ ಪಿಐ ಪ್ರಕಾಶ್.ಬಿ.ಜಿ, ಪಿಎಸ್ಐ ಗೀತಾ, ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು. ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಬಂಧಿತ ಆರೋಪಿ ಮಡಿಕೇರಿ ಮತ್ತು ಪಿರಿಯಾಪಟ್ಟಣದ ಮಸೀದಿಗಳಲ್ಲಿ…
ಮಡಿಕೇರಿ NEWS DESK ಜ.6 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡುವಿನ ಶ್ರೀ ಮಹಾ ಮೃತ್ಯುಂಜಯ ದೇವಾಲಯ ಸಮಿತಿಯು ವಸ್ತç ಸಂಹಿತೆ ಕುರಿತು ಜ.5 ರಂದು ನಡೆಸಿದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದ ಕಾರಣ ನಮಗೆ ಮತ್ತಷ್ಟು ಸಮಯಾವಕಾಶ ಬೇಕೆಂದು ಸಮಿತಿ ಕೋರಿರುವ ಹಿನ್ನೆಲೆಯಲ್ಲಿ ಫೆ.10ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ದೇವಾಲಯ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಜ.5ರಂದು ನಡೆದ ಸಭೆಯ ವರದಿಯನ್ನು ಮಂಡಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದೆ ಇರುವುದಕ್ಕೆ ಕಾರಣಗಳನ್ನು ನೀಡಿದರು. ಗೊಂದಲ ನಿವಾರಣೆಗೆ ಒಂದು ತಿಂಗಳ ಕಾಲಾವಕಾಶಬೇಕೆಂದು ಕೋರಿದ ಹಿನ್ನೆಲೆಯಲ್ಲಿ ಫೆ.10ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಅವಧಿಯವರೆಗೆ ಕಳೆದ ಏಳು ದಿನಗಳಿಂದ ದೇವಾಲಯ ವ್ಯಾಪ್ತಿಯಲ್ಲಿ ಇದ್ದ ಪರಿಸ್ಥಿತಿಯೇ ಮುಂದುವರೆಯಲಿದೆ. ಸೆಕ್ಷನ್ 163 ಅಡಿಯಲ್ಲಿ ವಿಧಿಸಲಾಗಿರುವ ನಿರ್ಬಂಧದ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ದೇವಾಲಯದ ನಿತ್ಯ ಪೂಜೆಗೆ ಹಾಗೂ ಭಕ್ತರಿಗೆ ತೊಂದರೆಯಾಗದ ರೀತಿಯಲ್ಲಿ ದೇವಾಲಯ…
ಮಡಿಕೇರಿ ಜ.6 NEWS DESK : ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಗ್ರಾಮದಲ್ಲಿ ಗುಂಡೇಟಿಗೆ ಬಲಿಯಾದ ಕಾರ್ಮಿಕ ಪಣಿಎರವರ ಪೊನ್ನು ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ ಮಾಕ್ರ್ಸ್ವಾದಿಯ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪಕ್ಷದ ಪ್ರಮುಖರು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ರಮೇಶ್ ಮಾತನಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ. ಆದರೆ ಪ್ರಭಾವಕ್ಕೆ ಮಣಿದು ಪ್ರಕರಣವನ್ನು ಸಡಿಲಗೊಳಿಸಬಾರದು, ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಾವಿಗೀಡಾದ ಪೊನ್ನುವಿನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು, ನಿವೇಶನ ಮಂಜೂರು ಮಾಡಿ ಸರಕಾರವೇ ಮನೆ ನಿರ್ಮಿಸಿಕೊಡಬೇಕು. ಕುಟುಂಬದ ಸದಸ್ಯರೊಬ್ಬರಿಗೆ ಸರಕಾರಿ ನೌಕರಿ ನೀಡಬೇಕು ಮತ್ತು ನಿರಂತರವಾಗಿ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಬುಡಕಟ್ಟು ಜನಾಂಗದ ರಕ್ಷಣೆಗಾಗಿ ಕಠಿಣ ಕಾನೂನು ಕ್ರಮ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಪಕ್ಷದ ಮುಖಂಡ ಪಿ.ಆರ್.ಭರತ್ ಮಾತನಾಡಿ ಕೊಡಗಿನ ನಿವಾಸಿಗಳಾದ ಎರವರು,…
ಮಡಿಕೇರಿ ಜ.6 NEWS DESK : ಕೈಪಡ್ಕ ಶ್ರೀ ಕೊರಗಜ್ಜ ಸ್ವಾಮಿ ಸನ್ನಿಧಿಯಲ್ಲಿ ಫೆ.1 ರಂದು ಸ್ವಾಮಿ ಕೊರಗಜ್ಜ ಮತ್ತು ಗುಳಿಗ ದೈವದ ನೇಮೋತ್ಸವ ನಡೆಯಲಿದ್ದು, ಅದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭ ದೈವಸ್ಥಾನದ ಗೌರವಾಧ್ಯಕ್ಷ ಸುರೇಶ್ ಕದಿಕಡ್ಕ, ಅಧ್ಯಕ್ಷ ರವಿಚಂದ್ರ ಬಿಳಿಯಾರು, ಕಾರ್ಯದರ್ಶಿ ರಮೇಶ್, ಖಜಾಂಚಿ ಚಂಗಪ್ಪ ಕೈಪಡ್ಕ, ಶ್ರೀಧರ ದುಗ್ಗಳ, ರಾಜಗೋಪಾಲ, ಲೋಕ್ಯಾನಾಯ್ಕ್, ಪಿ.ಆರ್.ನಾಗೇಶ್, ಯೋಗೇಶ್ವರ ಕೈಪಡ್ಕ, ಪ್ರಶಾಂತ್ ಹಾಗೂ ಸದಸ್ಯರು, ಭಕ್ತಾಧಿಗಳು ಹಾಜರಿದ್ದರು. ನೇಮೋತ್ಸವ :: ಫೆ.1 ರಂದು ಬೆಳಿಗ್ಗೆ 6 ಗಂಟೆಗೆ ಗಣಹೋಮ ಮತ್ತು ಸ್ಥಳಶುದ್ಧಿ, 7 ಗಂಟೆಗೆ ದೀಪಾರಾಧನೆ ನಡೆಯಲಿದ್ದು, ಸಂಜೆ 6 ಗಂಟೆಗೆ ಎಣ್ಣೆ ಕೊಡುವುದು, 7 ಗಂಟೆಗೆ ಗುಳಿಗ ದೈವದ ಕೋಲ, ರಾತ್ರಿ 8.30 ಗಂಟೆಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ರಾತ್ರಿ 8.45 ರಿಂದ ಶ್ರೀ ಕೊರಗಜ್ಜ ದೈವದ ನೇಮೋತ್ಸವ, ಕೊರಗಜ್ಜ ದೈವದ ಹರಕೆಯ ಕೋಲ, ನಂತರ ಪ್ರಸಾದ ವಿತರಣೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ…
ಮಡಿಕೇರಿ ಜ.6 NEWS DESK : ಮ್ಯಾನ್ಸ್ ಕಾಂಪೌಂಡ್ ಕ್ಲಬ್(ಎಂಸಿಸಿ) ವತಿಯಿಂದ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದ ಫುಟ್ಬಾಲ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಮೂರನೇ ವರ್ಷದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಸತತ ಮೂರನೇ ಬಾರಿಗೆ ಜಯಗಳಿಸಿ ಹ್ಯಾಟ್ರಿಕ್ ಸಾಧನೆಯೊಂದಿಗೆ ಟೀಂ ಭಗವತಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಸಂಗಂ ಎಫ್ಸಿ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಕಳೆದ ಎರಡು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಅಂತಿಮ ಸುತ್ತಿಗೆ ಪ್ರವೇಶಿಸಿದ ಭಗವತಿ ಹಾಗೂ ಸಂಗಂ ತಂಡಗಳ ನಡುವೆ ರೊಚಕತೆಯಿಂದ ಪಂದ್ಯಾಟ ನಡೆಯಿತು. ಉಭಯ ತಂಡಗಳು ಪೈಪೋಟಿಯೊಂದಿಗೆ ಸೆಣೆಸಾಟ ನಡೆಸಿದರೂ ಬಲಿಷ್ಠವಾಗಿದ್ದ ಭಗವತಿ ತಂಡ ಸಂಗಂ ತಂಡವನ್ನು 5-1 ಗೋಲುಗಳಿಂದ ಮಣಿಸಿ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿತು. ಸಂಗಂ ತಂಡ ಎರಡನೇ ಸ್ಥಾನಕ್ಕೆ ತೃಪ್ತಿಕೊಟ್ಟುಕೊಳ್ಳಬೇಕಾಯಿತು. ಸಂಜೆ ನಡೆದ ಅಂತಿಮ ಪಂದ್ಯಾವಳಿಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಆಟಗಾರರನ್ನು ಪರಿಚಯಿಸಿಕೊಳ್ಳುವದರ ಮೂಲಕ ಉದ್ಘಾಟಿಸಿದರು. ನಂತರ ಎಂಸಿಸಿ ಅಧ್ಯಕ್ಷ ಎಂ.ಎ.ಕ್ರಿಸ್ಟೋಫರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ…






