ಮಡಿಕೇರಿ NEWS DESK ಜ.4 : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಜಿಲ್ಲಾ ಸಶಸ್ತ್ರ ದಳ, ಶ್ವಾನ ದಳ ಮತ್ತು ಪೊಲೀಸ್ ಕ್ಯಾಂಟೀನ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಕಚೇರಿಗಳನ್ನು ಪರಿಶೀಲಿಸಿ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದರು. ಅಗತ್ಯ ಕ್ರಮಗಳಿಗೆ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಲೇಖಕ: admin
ಬೆಂಗಳೂರು NEWS DESK ಜ.4 : ವೈಮಾನಿಕ ಅಭಿವೃದ್ಧಿ ಸಂಸ್ಥೆ (ADA) ಆಯೋಜಿಸಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ‘ಏರೋನಾಟಿಕ್ಸ್ 2047’ ಬೆಂಗಳೂರಿನ ಸೆಂಟರ್ ಫಾರ್ ಏರ್ಬೋರ್ನ್ ಸಿಸ್ಟಮ್ಸ್ (CABS) ನಲ್ಲಿ ಪ್ರಾರಂಭವಾಯಿತು. ಈ ವಿಚಾರ ಸಂಕಿರಣವನ್ನು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ ಸಿಂಗ್ ಉದ್ಘಾಟಿಸಿದರು. ತಮ್ಮ ಭಾಷಣದಲ್ಲಿ, ವಾಯುಪಡೆಯ ಮುಖ್ಯಸ್ಥರು, ಲಘು ಯುದ್ಧ ವಿಮಾನ (LCA) ತೇಜಸ್ ಹಾರಾಟದ 25 ವರ್ಷಗಳನ್ನು ಪೂರ್ಣಗೊಳಿಸಿದ್ದಕ್ಕಾಗಿ ವೈಮಾನಿಕ ಅಭಿವೃದ್ಧಿ ಸಂಸ್ಥೆಯನ್ನು ಅಭಿನಂದಿಸಿದರು. ಮತ್ತು ನಿರಂತರವಾಗಿ ವಿಕಸನಗೊಳ್ಳುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾರತೀಯ ವಾಯುಪಡೆಯನ್ನು (IAF) ಯಾವುದೇ ಸಂದರ್ಭದಲ್ಲಿ ಕಾರ್ಯಾಚರಣೆಗೆ ಸಿದ್ಧವಾಗುವಂತೆ ರೂಪಿಸಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮತ್ತು ಡಿಆರ್ಡಿಒ ಅಧ್ಯಕ್ಷ ಡಾ. ಸಮೀರ್ ವಿ. ಕಾಮತ್, ವಿಕಸಿತ ಭಾರತ@2047 ರ ದೃಷ್ಟಿಕೋನವನ್ನು ಅರಿತುಕೊಂಡು, ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸ್ಥಳೀಯ ಅತ್ಯಾಧುನಿಕ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಮಹತ್ವವನ್ನು ಒತ್ತಿ…
ಮಡಿಕೇರಿ NEWS DESK ಜ.4 : ಸರಕಾರದ ಕಾರ್ಯಕ್ರಮಗಳು ಯಶಸ್ವಿಯಾಗಲು ಮತ್ತು ಜನರಿಗೆ ಸೌಲಭ್ಯಗಳು ತಲುಪಲು ನೌಕರರ ಪಾತ್ರ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರಾಜಪೇಟೆ ಘಟಕದ ಮಹಾಸಭೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೊಂದು ಸಂಘವು ಅದರ ಸದಸ್ಯರ ಏಳಿಗೆಗಾಗಿ ಶ್ರಮಿಸಬೇಕು. ಇಂದು ಸರಕಾರ ತನ್ನ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ಕೈಗೊಳ್ಳಲು ನೌಕರರ ಪಾತ್ರ ದೊಡ್ಡದಾಗಿದೆ. ಇದನ್ನು ಪ್ರತಿಯೊಬ್ಬರು ಅರಿತುಕೊಂಡು ತಮ್ಮ ಜವಾಬ್ದಾರಿಯನ್ನು ಪರಿಪೂರ್ಣವಾಗಿ ನಿಭಾಯಿಸಬೇಕು ಎಂದು ಸಲಹೆ ನೀಡಿದರು. ಸಾರ್ವಜನಿಕ ಸೇವೆ ಕೇವಲ ಉದ್ಯೋಗವಲ್ಲ, ಅದು ಸಮಾಜ ಸೇವೆ. ಇಂದಿನ ಕಾರ್ಯಕ್ರಮದಲ್ಲಿ ನೌಕರರನ್ನು ಪ್ರೋತ್ಸಾಹಿಸುವ ಜೊತೆಗೆ, ಅವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದ್ದು, ಇದು ಸಾರ್ಥಕತೆ ಮೂಡಿಸುತ್ತದೆ ಎಂದರು. ಜಿಲ್ಲಾ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ನೌಕರರ…
ಮಡಿಕೇರಿ NEWS DESK ಜ.4 : ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲುಸೆ ಗ್ರಾಮದಲ್ಲಿ ಬೀದಿ ನಾಯಿಗಳ ಸಂರಕ್ಷಣಾ ಕೇಂದ್ರ ನಿರ್ಮಾಣ ಯೋಜನೆ ಅನುಷ್ಠಾನ ಉದ್ದೇಶದಿಂದ ಕೈಗೊಂಡಿದ್ದ ಸಮತಟ್ಟು ಕಾರ್ಯಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ ತಡೆಯೊಡ್ಡಿದ್ದಾರೆ. ಹುಲುಸೆಯಲ್ಲಿ ಬೀದಿ ನಾಯಿಗಳ ಸಂರಕ್ಷಣಾ ಕೇಂದ್ರಕ್ಕೆ ಕಂದಾಯ ಇಲಾಖೆಯಿಂದ ಸ್ಥಳ ಗುರುತಿಸಲಾಗಿದೆ. ಗ್ರಾಮಸ್ಥರ ವಿರೋಧದ ನಡುವೆಯೂ ದಿಢೀರನೆ ಬೆಟ್ಟ ಅಗೆದು ಸಮತಟ್ಟು ಮಾಡುವ ಕಾರ್ಯ ಕೈಗೊಳ್ಳಲಾಗಿತ್ತು. ಈ ಸಂದರ್ಭ ಸ್ಥಳೀಯರು ಕಾಮಗಾರಿಗೆ ತಡೆಯೊಡ್ಡಿದರು. ಬೆಟ್ಟಅಗೆಯುವ ಕಾಮಗಾರಿ ಪ್ರಾರಂಭಿವಾಗಿರುವ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಹಕ್ಕೆ, ಮರೂರು ಗ್ರಾಮಸ್ಥರು ಹಿಟಾಚಿ ತಡೆಹಿಡಿದು ಕಾಮಗಾರಿ ನಿಲ್ಲಿಸಿದರು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿ ಪರಿಶೀಲಿಸಿದರು. ಹುಲುಸೆಯಲ್ಲಿ ನಾಯಿಗಳ ಸಂರಕ್ಷಣಾ ಕೇಂದ್ರ ಸ್ಥಾಪಿಸಲು ಅರಣ್ಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನುಮತಿ ಪಡೆದಿಲ್ಲ. ಕಾಮಗಾರಿ ಕಾರಣ ಅಪಾರ ಪ್ರಮಾಣದಲ್ಲಿ ಮರಗಳ ಹನನ ನಡೆಯಲಿದೆ, ಪರಿಸರಕ್ಕೆ ಹಾನಿ ಉಂಟಾಗಲಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.…
ಮಡಿಕೇರಿ NEWS DESK ಜ.4 : ವಿರಾಜಪೇಟೆ ನಗರ ಠಾಣೆ ಮತ್ತು ವಿರಾಜಪೇಟೆ ಗ್ರಾಮಾಂತರ ಠಾಣೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ, ಅಪರಾಧ ತಡೆಗಟ್ಟುವ ಕುರಿತು ಚರ್ಚಿಸಿ ಸೂಚನೆಗಳನ್ನು ನೀಡಿದರು.
ಮಡಿಕೇರಿ NEWS DESK ಜ.4 : ಮಾನವ ಕಳ್ಳ ಸಾಗಾಣಿಕೆ ತಡೆ, ಮಕ್ಕಳ ಹಕ್ಕುಗಳು ಮತ್ತು ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಸೂಚನೆ ನೀಡಿದ್ದಾರೆ. ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದ ಅವರು ಮಾನವ ಕಳ್ಳ ಸಾಗಾಣಿಕೆ, ಮಕ್ಕಳ ಹಕ್ಕುಗಳು ಮತ್ತು ರಕ್ಷಣೆ ಮುಂತಾದ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಶುಭಾ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಉಪಸ್ಥಿತರಿದ್ದರು.
ಮಡಿಕೇರಿ NEWS DESK ಜ.4 : ಮಡಿಕೇರಿಯ ಇಂದಿರಾನಗರದ ನಿವಾಸಿ, ಶ್ರೀಮಾರಿಯಮ್ಮ ದೇವಾಲಯದ ಪೂಜಾರಿ ಹೆಚ್.ಕೆ.ವಸಂತ(47) ಅವರು ಡಿ.27ರಂದು ನಿಧನ ಹೊಂದಿದರು. ಇಂದಿರಾನಗರದ ಶ್ರೀಮಾರಿಯಮ್ಮ ದೇವಾಲಯ ಸಮಿತಿ ಹಾಗೂ ಇತರ ಸಂಘಗಳು ಸಂತಾಪ ಸೂಚಿಸಿವೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸುಂಟಿಕೊಪ್ಪ NEWS DESK ಜ.4 : ಅನಾರೋಗ್ಯ ಪೀಡಿತ ಪುತ್ರನೊಂದಿಗೆ ಆಶ್ರಯವಿಲ್ಲದೆ ಅತಿ ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ವಯೋವೃದ್ಧೆಯೊಬ್ಬರಿಗೆ ಜಿ.ಪಂ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಪಿ.ಎಂ.ಲತೀಫ್ ಅವರು ಮನೆ ನಿರ್ಮಿಸಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಳೆಗಾಲದ ಮಹಾಮಳೆಗೆ ಸೋಮವಾರಪೇಟೆ ತಾಲ್ಲೂಕಿನ ಗರಗಂದೂರು ಗ್ರಾಮದ ಮಲ್ಲಿಕಾರ್ಜುನ ಕಾಲೋನಿಯ ನಿವಾಸಿ ಬೈರಿ ಅಜ್ಜಿ ತಮ್ಮ ಪುಟ್ಟ ಮನೆಯನ್ನು ಕಳೆದುಕೊಂಡಿದ್ದರು. ಮಳೆಯ ತೀವ್ರತೆಗೆ ಮನೆ ನೆಲಸಮಗೊಂಡ ನಂತರ ಅತಂತ್ರ ಸ್ಥಿತಿಗೆ ಸಿಲುಕಿಕೊಂಡ ಬೈರಿ ಅಜ್ಜಿ ಪ್ಲಾಸ್ಟಿಕ್ ಹೊದಿಕೆಯ ಗುಡಿಸಿನಲ್ಲಿ ಜೀವನ ಸಾಗಿಸಲು ಆರಂಭಿಸಿದರು. ಇಳಿ ವಯಸ್ಸಿನ ಬೈರಿ ಹಾಗೂ ಅನಾರೋಗ್ಯ ಪೀಡಿತ ಪುತ್ರ ವಿಶ್ವನಾಥ್ ಸಂಕಷ್ಟದ ಬದುಕು ಸಾಗಿಸುತ್ತಿರುವ ಚಿತ್ರಣ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಯಿತು. ಇದನ್ನು ಗಮನಿಸಿದ ಜಿ.ಪಂ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಪಿ.ಎಂ.ಲತೀಫ್ ಅವರು ಮಲ್ಲಿಕಾರ್ಜುನ ಕಾಲೋನಿಗೆ ಭೇಟಿ ನೀಡಿದರು. ಬೈರಿ ಅಜ್ಜಿಯ ಸ್ಥಿತಿಯನ್ನು ಕಂಡು ಬೇಸರ ವ್ಯಕ್ತಪಡಿಸಿದರು. ಕಣ್ಣೀರು ಹಾಕಿದ ಅಜ್ಜಿಗೆ ಧೈರ್ಯ ತುಂಬಿದ…
ಮಡಿಕೇರಿ ಜ.3 NEWS DESK : ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ ಅಂಗವಾಗಿ ರಾಜ್ಯ ಚಿತ್ರಕಲಾ ಪರಿಷತ್, ಅರಣ್ಯ ಇಲಾಖೆಯ ಸಹಯೋಗದಲ್ಲಿ ಕನ್ನಡಪ್ರಭ ಪತ್ರಿಕೆ ವತಿಯಿಂದ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ “ಪರಿಸರ ಜಾಗೃತಿ, ವನ್ಯಜೀವಿ” ವಿಷಯದಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಿತು. ಮಡಿಕೇರಿಯ ಗಾಂಧಿ ಭವನದಲ್ಲಿ ನಡೆದ ಪ್ರೌಢ ವಿಭಾಗದ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳಾದ ಹನಿಯ ಎ ಪ್ರಥಮ ಹಾಗೂ ಆರ್ನವ್ ವಿ ತೃತೀಯ ಸ್ಥಾನವನ್ನುಗಳಿಸುವುದರ ಮೂಲಕ ಪ್ರಶಸ್ತಿ ಫಲಕ ಹಾಗೂ ನಗದು ಬಹುಮಾನವನ್ನು ಪಡೆದುಕೊಂಡರು. ಕಿರಿಯ ಪ್ರಾಥಮಿಕ ವಿಭಾಗದ ಸ್ಪರ್ಧೆಯಲ್ಲಿ ಚೋಳಂಡ ಜಿಯಾ ಅಕ್ಕಮ್ಮ ಸಮಾಧಾನಕರ ಪ್ರಶಸ್ತಿ ಪತ್ರ ಪಡೆದುಕೊಂಡರು. ಈ ಸಂದರ್ಭ ಸಹ ಶಿಕ್ಷಕಿ ಲೀನಾ ಸಿ.ಡಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಸುದೇಶ್ ಬಿ.ಎಸ್, ಕಾರ್ಯದರ್ಶಿ ವಿನೋದ್ ಪಿ.ಎನ್, ಮುಖ್ಯ ಶಿಕ್ಷಕಿ ಪಾರ್ವತಿ ಪಿ.ಯು, ಸಂಯೋಜಿಕಿ ಅಮೃತ ಅರ್ಜುನ್, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು…
ಮಡಿಕೇರಿ ಜ.3 NEWS DESK : ಆರ್ಬಿಎಸ್ಕೆ ತಂಡದಿಂದ ನಗರದ ಪುಟಾಣಿನಗರ ಅಂಗನವಾಡಿ ಕೇಂದ್ರದಲ್ಲಿ ಅನೀಮಿಯ ಹಾಗೂ ಆರೋಗ್ಯ ತಪಾಸಣೆ ನಡೆಯಿತು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅನಿಮಿಯ ತಪಾಸಣೆ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ಜನವರಿ 2026 ರಿಂದ ವರ್ಷದಲ್ಲಿ ಎರಡು ಬಾರಿ ಅಂಗನವಾಡಿ ಕೇಂದ್ರದ ವ್ಯಾಪ್ತಿಗೆ ಒಳಪಡುವ ಆರು ತಿಂಗಳಿಂದ 5 ವರ್ಷದವರೆಗಿನ ಮಕ್ಕಳಿಗೆ ಅನಿಮಿಯ ತಪಾಸಣೆಯನ್ನು ಮಾಡಿ ರಕ್ತಹೀನತೆ ತಡೆಗಟ್ಟುವ ಪ್ರಯತ್ನವನ್ನು ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಕಾರದೊಂದಿಗೆ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. ಐವತ್ತೊಂಭತ್ತು ತಿಂಗಳ ವಯಸ್ಸಿನ ಮಕ್ಕಳಲ್ಲಿ ಹಿಮೋಗ್ಲೋಬಿನ್ ಸಾಂದ್ರತೆ ಕಡಿಮೆ ಇದ್ದರೆ ರಕ್ತಹೀನತೆ ಎಂದು ಪರಿಗಣಿ ಈ ಬಗ್ಗೆ ಪೋಷಕರಿಗೆ ಸಭೆಯ ಮೂಲಕ ತಿಳುವಳಿಕೆ ಮೂಡಿಸಿ, ನಂತರ ಮಗುವಿನ ಆಹಾರ ಪದ್ಧತಿ ಮಾಹಿತಿ ಪಡೆದು ಸ್ಕ್ರೀನಿಂಗ್ ಮಾಡಲಾಗುವುದು ಎಂದು ಹೇಳಿದರು. ರಕ್ತಹೀನತೆಗೆ ಒಳಗಾಗಿದ್ದ ಮಕ್ಕಳ ಚಿಕಿತ್ಸೆ, 6-12 ತಿಂಗಳ ಮಕ್ಕಳಿಗೆ ಪ್ರತಿದಿನ 1…






