ಮಡಿಕೇರಿ NEWS DESK ಫೆ.4 : ಕೊಡಗು ಜಿಲ್ಲೆಯ ಕುಶಾಲನಗರದ ಗುಮ್ಮನಕೊಲ್ಲಿ, ಗ್ರಾಮದ ನಿವಾಸಿ ವಿಶಾಲಾಕ್ಷಮ್ಮ ಅವರ ಪುತ್ರಿ ಹೇಮಲತ ಜಿ. ಎಂ. ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ. ಹೇಮಲತ ಅವರು ದಾವಣಗೆರೆ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಶ್ವನಾಥ್ ಹೆಚ್. ಅವರ ಮಾರ್ಗದರ್ಶನದಲ್ಲಿ “ವೀಣಾ ಶಾಂತೇಶ್ವರ ಮತ್ತು ದು. ಸರಸ್ವತಿಯವರ ಸಾಹಿತ್ಯದಲ್ಲಿ ಪ್ರತಿಭಟನಾತ್ಮಕ ನೆಲೆಗಳು” ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲರ ಉಪಸ್ಥಿತಿಯಲ್ಲಿ ಹೇಮಲತ ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು.
ಲೇಖಕ: admin
ಸೋಮವಾರಪೇಟೆ NEWS DESK ಫೆ.4 : ಬಿಜೆಪಿ ಶಾಸಕರು 25 ವರ್ಷಗಳಲ್ಲಿ ಮಾಡದ ಅಭಿವೃದ್ಧಿ ಕಾಮಗಾರಿಗಳನ್ನು ಹಾಲಿ ಶಾಸಕರಾದ ಡಾ.ಮಂತರ್ಗೌಡ ಅವರು ಎರಡೂವರೆ ವರ್ಷಗಳಲ್ಲಿ ಮಾಡಿದ್ದಾರೆ ಎಂದು ಬ್ಲಾಕ್ ಅಧ್ಯಕ್ಷ ಬಿ.ಬಿ.ಸತೀಶ್ ಹೇಳಿದರು. ಡಾ.ಮಂತರ್ಗೌಡ ಅವರ ಅಭಿವೃದ್ಧಿ ಕೆಲಸವನ್ನು ಕಂಡು ಬಿಜೆಪಿ ಭ್ರಮನಿರಸನಗೊಂಡು, ಪ್ರತಿಭಟನೆ ನೆಪದಲ್ಲಿ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಸಂತೋಷ ಪಡುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಬಿಜೆಪಿ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿಬೇಕು, ಚುನಾವಣೆ ಸಂದರ್ಭದಲ್ಲಿ ಮಾತ್ರ ಅವಶ್ಯಕತೆ ಇದ್ದಷ್ಟು ರಾಜಕೀಯ ಮಾಡಿದರೆ, ವ್ಯವಸ್ಥೆಗೂ ಒಳ್ಳೆಯದು ಎಂದು ಹೇಳಿದ ಅವರು, ಕ್ಷೇತ್ರದ ಜನರು ಬಿಜೆಪಿಯನ್ನು ಮರೆಯುತ್ತಿದ್ದಾರೆ ಎಂಬ ಆತಂಕದಿAದ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ ಎಂದು ದೂರಿದರು. ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿಯ ಹೆಚ್ಚಿನ ಬೂತ್ಗಳಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳು ಬೀಳುತ್ತಿವೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯವಾಗಿದೆ. ಆದರೂ ಕಳೆದ 25 ವರ್ಷಗಳಿಂದ ತೋಳೂರುಶೆಟ್ಟಳ್ಳಿ, ಕೂತಿ ಮಾರ್ಗದ ರಸ್ತೆ ಅಭಿವೃದ್ಧಿಗೆ ಅಂದಿನ ಬಿಜೆಪಿ ಶಾಸಕರು ಅನುದಾನ ಕೊಡಲಿಲ್ಲ. ರಸ್ತೆ ಮಾಡಲು ಕಾಂಗ್ರೆಸ್…
ಸೋಮವಾರಪೇಟೆ NEWS DESK ಫೆ.4 : ಸನಾತನ ಹಿಂದೂ ಧರ್ಮ-ಪರಂಪರೆ, ಸಂಸ್ಕೃತಿಯ ರಕ್ಷಣೆಗೆ ಒಗ್ಗಟ್ಟು ಅವಶ್ಯ. ಈ ನಿಟ್ಟಿನಲ್ಲಿ ಹಿಂದೂಗಳು ಸಂಘಟಿತರಾಗಬೇಕು. ಹಾಗಾದಾಗ ಹಲವಷ್ಟು ಸಮಸ್ಯೆಗಳು ತನ್ನಿಂತಾನೇ ಬಗೆಹರಿಯುತ್ತವೆ. ಮನೆ ಹಾಗೂ ಮನಗಳಲ್ಲಿ ಧರ್ಮ ಇರಬೇಕು. ಎಲ್ಲರೂ ಸಂಸ್ಕಾರವಂತರಾಗಿ ಬಾಳಬೇಕು ಎಂದು ಯಸಳೂರು ತೆಂಕಲಗೋಡು ಮಠಾಧೀಶರಾದ ಶ್ರೀ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು. ಹಿಂದೂ ಸಂಗಮ ಆಯೋಜನಾ ಸಮಿತಿಯ ವತಿಯಿಂದ ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ದೇವಾಲಯದ ಮುಂಭಾಗ ಆಯೋಜಿಸಿದ್ದ ಹಿಂದೂ ಸಂಗಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ವಿಶ್ವದಲ್ಲಿಯೇ ಭಾರತಕ್ಕೆ ವಿಶೇಷ ಸ್ಥಾನಮಾನವಿದೆ. ಪವಿತ್ರವಾದ ನಾಡಿನಲ್ಲಿ ನಾವೆಲ್ಲರೂ ಬದುಕುತ್ತಿದ್ದೇವೆ. ಕಣಕಣದಲ್ಲೂ ಶಕ್ತಿ, ಭಕ್ತಿ, ಧರ್ಮವನ್ನು ಈ ಮಣ್ಣು ಒಳಗೊಂಡಿದೆ. ಇತರ ಎಲ್ಲಾ ಧರ್ಮದವರಿಗೆ ಜೀವಿಸಲು ಸಾಕಷ್ಟು ರಾಷ್ಟ್ರಗಳಿವೆ. ಆದರೆ ಹಿಂದೂಗಳಿಗೆ ತಮ್ಮ ಧರ್ಮದ ಅನುಸಾರ ಜೀವನ ನಡೆಸಲು ಇರುವುದೊಂದೇ ಹಿಂದೂಸ್ಥಾನ. ಇದನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು. ಮನೆ, ಆಸ್ತಿಗಳನ್ನು ಭದ್ರಗೊಳಿಸುವ ನಾವುಗಳು ತಾಯಿ ಭಾರತಾಂಭೆಯನ್ನೂ ರಕ್ಷಿಸಬೇಕು. ದೇಶ, ಧರ್ಮ ರಕ್ಷಣೆಯಾದರೆ…
ಮಡಿಕೇರಿ NEWS DESK ಫೆ.4 : ಐಗೂರಿನಲ್ಲಿ ನಡೆಯುವ ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಸಮಾರೋಪ ಸಮಾರಂಭದಲ್ಲಿ ದತ್ತಿ ದಾನಿಗಳಾದ ಹೆಚ್.ಬಿ.ಜಯಮ್ಮ ಶನಿವಾರಸಂತೆ, ಸ್ನೇಹಾ ಬಸಮ್ಮ ಕೊಡ್ಲಿಪೇಟೆ,ಎಸ್.ಪಿ. ಪ್ರಸನ್ನ ಸೋಮವಾರಪೇಟೆ, ಜೆ.ಸಿ. ಶೇಖರ್ ಅವರನ್ನು ಸನ್ಮಾನಿಸಲಾಗುತ್ತದೆ. ಸಮಾಜ ಸೇವೆಯಲ್ಲಿ ಶಾರದ ಮಂದಣ್ಣ, ಕೆ.ಪಿ.ಚಂದ್ರಕಲಾ, ಎ.ಆರ್.ಮುತ್ತಣ್ಣ, ಎಸ್.ಎಂ.ಚಂಗಪ್ಪ, ಡಿ.ಎಸ್.ನಿರ್ವಾಣಪ್ಪ, ಕೇಶವಮೂರ್ತಿ, ಶಿಕ್ಷಣ ಕ್ಷೇತ್ರದಲ್ಲಿ ಪಿ.ಕೆ.ಸೋಮಯ್ಯ, ಡಾ.ಕೆ.ಎ. ಮುಸ್ತಾಪ, ಕುಮಾರಿ ತಾನ್ಯ ಮುರಳೀಧರ್, ಕು.ಮನ್ವಿತ್ ಮೋಹನ್ ಎಂ., ವೈದ್ಯಕೀಯ ಕ್ಷೇತ್ರದಲ್ಲಿ ಎಸ್.ಎಂ.ಡಿಸಿಲ್ವಾ, ಡಾ.ಸತ್ತಾರ್ ಖಾನ್, ಡಾ.ಮೋನಿಶ್, ಜೇನುಕುರುಬರ ಸೀತಜ್ಜಿ, ಕೆ.ಪಿ.ಪಾರ್ವತಿ, ರಜಿನ, ಸಹಕಾರ ಕ್ಷೇತ್ರದಲ್ಲಿ ಜಯೇಂದ್ರ ಬಿ.ಇ., ಶ್ರೀಜಿತ್ ವಿ.ಕೆ., ದರ್ಶನ್ ಕೆ.ಎಂ. ಕೃಷಿ ಕ್ಷೇತ್ರದಲ್ಲಿ ಕೆ.ಪಿ.ದಿನೇಶ್, ಸೃಜನ್ ಬಿ.ಎಂ., ರಕ್ಷಣಾ ಕ್ಷೇತ್ರದಲ್ಲಿ ಅಂತೋಣಿ ಡಿಸೋಜ, ಲಿಂಗರಾಜು, ಮೊಗಪ್ಪ ಆರ್.ಎನ್., ಹುತಾತ್ಮ ಪಳಂಗೋಟು ದಿವಿನ್, ಕ್ರೀಡಾ ಕ್ಷೇತ್ರದಲ್ಲಿ ಕೆ.ಪಿ.ರಾಯ್, ಕು.ಕೌಶಿಕ್ ಯು.ಸಿ., ಪತ್ರಿಕಾ ಕ್ಷೇತ್ರದಲ್ಲಿ ಡಿ.ಪಿ. ಲೋಕೇಶ್, ವಿಜಯ್ ಹಾನಗಲ್, ಸುಕುಮಾರ್ ಎಂ.ಎ.,…
ಮಡಿಕೇರಿ NEWS DESK ಜ.4 : ಕನ್ನಡಾಂಬೆಗೆ ಕನ್ನಡದ ಅಕ್ಷರಗಳ ಪುಷ್ಪಮಾಲೆಯನ್ನು ತೊಡಿಸಿ ಸಂಭ್ರಮಿಸುವ ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಐಗೂರಿನಲ್ಲಿ ಭರದ ಸಿದ್ಧತೆಗಳು ನಡೆಯುತ್ತಿದ್ದು, ಫೆ.9ರಂದು ಸಮ್ಮೇಳನ ಸಂಭ್ರಮದಿಂದ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎ.ಪಿ. ಕೇಶವ ಕಾಮತ್ ಅವರು ಮಾತನಾಡಿ, ಐಗೂರಿನಲ್ಲಿ ಆಯೋಜಿತವಾಗಿರುವ 9ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ತನ್ನನ್ನು ಒಳಗೊಂಡಂತೆ ಗೌರವಾಧ್ಯಕ್ಷರಾಗಿರುವ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ತಾಲ್ಲೂಕು ಕಸಾಪ ಅಧ್ಯಕ್ಷ ಎಸ್.ಡಿ.ವಿಜೇತ್ ಅವರ ನೇತೃತ್ವದಲ್ಲಿ ವಿವಿಧ ಹನ್ನೊಂದು ಉಪಸಮಿತಿಗಳನ್ನು ರಚಿಸಿಕೊಂಡು, ಕನ್ನಡದ ನುಡಿ ಹಬ್ಬವನ್ನು ಯಶಸ್ವಿಗೊಳಿಸಲು ಗ್ರಾಮಸ್ಥರ ಸಹಕಾರದೊಂದಿಗೆ ಶ್ರಮಿಸಲಾಗುತ್ತಿದೆಯೆಂದು ತಿಳಿಸಿದರು. ಜಲಜಾ ಶೇಖರ್ ಸಭಾಧ್ಯಕ್ಷತೆಯಲ್ಲಿ ಸಮ್ಮೇಳನ – ಸಾಹಿತಿ ಜಲಜಾ ಶೇಖರ್ ಅವರ ಸರ್ವಾಧ್ಯಕ್ಷತೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಫೆ.9 ರಂದು ಬೆಳಗ್ಗೆ 8.50 ಕ್ಕೆ ಐಗೂರು ಕಬ್ಬಿಣ ಸೇತುವೆ ಬಳಿಯಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳನ್ನು ಒಳಗೊಂಡಂತೆ ಜನಾಕರ್ಷಕವಾಗಿ ನಡೆಯಲಿದೆಯೆಂದು…
ಮಡಿಕೇರಿ NEWS DESK ಫೆ.4 : ತಮ್ಮ ರಚನೆಯ ಹಲವು ಲೇಖನಗಳ “ಬಹುರೂಪಿ”ಯನ್ನು ಹಿರಿಯ ರಾಜಕಾರಣಿ ಹಾಗೂ ವಿಚಾರವಾದಿಗಳಾಗಿದ್ದ ದಿವಂಗತ ಎ.ಕೆ.ಸುಬ್ಬಯ್ಯ ಅವರಿಗೆ ಅರ್ಪಣೆ ಮಾಡುತ್ತಿದ್ದು, ಪುಸ್ತಕ ಅನಾವರಣ ಕಾರ್ಯಕ್ರಮ ಫೆ.5ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ಕೃತಿಯ ಲೇಖಕ ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 56 ಲೇಖನಗಳನ್ನು ಒಳಗೊಂಡ, 300 ಪುಟಗಳ ಬಹುರೂಪಿ ಪುಸ್ತಕದಲ್ಲಿ, ಎ.ಕೆ.ಸುಬ್ಬಯ್ಯ ಅವರು 2018ರಲ್ಲಿ ತಮಗೆ ಬರೆದು ಕೊಟ್ಟಿರುವ ವಿಚಾರವನ್ನು ಪುಸ್ತಕದ ಆರಂಭದಲ್ಲೆ ಬಳಸಿಕೊಳ್ಳಲಾಗಿದೆ. ಪುಸ್ತಕದ ಮುನ್ನಡಿಯನ್ನು ಕನ್ನಡ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ತಂಬAಡ ವಿಜು ಪೂಣಚ್ಚ ಅವರು ಬರೆದಿದ್ದಾರೆ, ಬೆನ್ನುಡಿಯನ್ನು ವಿಮರ್ಶಕರು ಹಾಗೂ ಅನುವಾದಕರಾದ ಒ.ಎಲ್.ನಾಗಭೂಷಣ ಸ್ವಾಮಿ ಅವರು ಬರೆದಿದ್ದಾರೆಂದು ಮಾಹಿತಿಯನ್ನಿತ್ತರು. ಎ.ಕೆ.ಎಸ್. ಪುತ್ರನಿಗೆ ಮೊದಲ ಪ್ರತಿ- ಪುಸ್ತಕ ಅನಾವರಣ ಸಮಾರಂಭದಲ್ಲಿ ಬಹುರೂಪಿಯ ಮೊದಲ ಪ್ರತಿಯನ್ನು ಎ.ಕೆ.ಸುಬ್ಬಯ್ಯ ಅವರ ಪುತ್ರ ಅಜ್ಜಿಕುಟ್ಟೀರ ನರೇಶ್ ಅವರಿಗೆ ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ಎಕೆಎಸ್ ಅವರ ಮತ್ತೋರ್ವ ಪುತ್ರರಾದ ಶಾಸಕರು…
ಮಡಿಕೇರಿ NEWS DESK ಫೆ.4 : ಸರ್ಕಾರದ ಪ್ರಮುಖ ಗ್ಯಾರಂಟಿಯಲ್ಲಿ ಒಂದಾದ ಯುವನಿಧಿ ಯೋಜನೆಯು ಜಾರಿಗೊಂಡು ಡಿಸೆಂಬರ್ ತಿಂಗಳಿಗೆ ಎರಡು ವರ್ಷ ಪೂರ್ಣಗೊಂಡಿದೆ. 2026 ಜನವರಿ ಅಂತ್ಯಕ್ಕೆ ಒಟ್ಟು 2,116 ಮಂದಿ ಹೆಸರು ನೋಂದಾಯಿಸಿದ್ದು, ಇವರಲ್ಲಿ 2,079 ಪದವಿ ಮತ್ತು 37 ಮಂದಿ ಡಿಪ್ಲೋಮಾ ಪದವೀದರರು ಒಳಗೊಂಡಿದ್ದಾರೆ. ಹಾಗೆಯೇ ಇವರಲ್ಲಿ 877 ಯುವಕರು ಹಾಗೂ 1239 ಮಂದಿ ಯುವತಿಯರು ಹೆಸರು ನೋಂದಾಯಿಸಿದ್ದಾರೆ. ಹೆಸರು ನೋಂದಾಯಿತ 2,116 ಯುವ ಜನರಲ್ಲಿ 1649 ಮಂದಿಗೆ ಡಿಬಿಟಿ ಮೂಲಕ ಪ್ರತೀ ತಿಂಗಳು ಹಣ ಪಾವತಿಯಾಗುತ್ತಿದೆ. ತಾಲ್ಲೂಕುವಾರು ಗಮನಿಸಿದಾಗ ಮಡಿಕೇರಿ 575 ಮಂದಿ ಹೆಸರು ನೋಂದಾಯಿಸಿದ್ದಾರೆ. ಕುಶಾಲನಗರ 339, ಪೊನ್ನಂಪೇಟೆ 237, ವಿರಾಜಪೇಟೆ 356 ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ 609 ಮಂದಿ ಹೆಸರು ನೋಂದಾಯಿಸಿದ್ದಾರೆ. ಇವರಲ್ಲಿ ಮಡಿಕೇರಿ ತಾಲ್ಲೂಕಿನ 443 ಮಂದಿ, ಕುಶಾಲನಗರ 272, ಪೊನ್ನಂಪೇಟೆ 172, ಸೋಮವಾರಪೇಟೆ 480 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 282 ಮಂದಿಗೆ ಒಟ್ಟು 1649 ಮಂದಿಗೆ ಯುವನಿಧಿ ಯೋಜನೆ ಸೌಲಭ್ಯ ದೊರೆಯುತ್ತಿದೆ.…
ಮಡಿಕೇರಿ NEWS DESK ಫೆ.4 : ಸತತ 9ನೇ ಬಾರಿಗೆ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ ಯುವಶಕ್ತಿಗೆ ಆದ್ಯತೆ, ನಾರಿಶಕ್ತಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ವೇಗವನ್ನು ಒದಗಿಸಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಯಾವುದೇ ತೆರಿಗೆ ಹೊರೆ ಹಾಕದೆ ಜನಸಾಮಾನ್ಯರ ಬದುಕಿಗೆ ಸಹಕಾರಿಯಾಗಬಲ್ಲ ಬಜೆಟ್ ನ್ನು ಮಂಡಿಸಲಾಗಿದೆ. ಭವಿಷ್ಯದ ಭಾರತಕ್ಕಾಗಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಪರಿಕಲ್ಪನೆಯಡಿ ಸರ್ವರ ಪ್ರಗತಿಯ ಅಂಶಗಳು ಇದರಲ್ಲಿ ಅಡಕವಾಗಿದೆ. ರಾಜ್ಯಗಳಿಗೆ 1.4 ಲಕ್ಷ ಕೋಟಿ ರೂ. ತೆರಿಗೆ ಪಾಲು ಹಂಚಿಕೆ ಮಾಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ತಿಳಿಸಿದ್ದಾರೆ. ದೇಶದ ಭದ್ರತೆಯ ಹಿತದೃಷ್ಟಿಯಿಂದ ರಕ್ಷಣೆಗೆ ದಾಖಲೆಯ ಅನುದಾನ ಮೀಸಲಿಡಲಾಗಿದೆ. ಕ್ಯಾನ್ಸರ್ ಔಷಧಿಗಳಿಗೆ ಸುಂಕ ವಿನಾಯಿತಿ ನೀಡಿರುವುದು ಜನಸಾಮಾನ್ಯರ ಮೇಲೆ ಕೇಂದ್ರ ಸರಕಾರಕ್ಕಿರುವ ಕಾಳಜಿಯನ್ನು ತೋರಿದೆ. ಏಳು ಹೈಸ್ಪೀಡ್…
ಮಡಿಕೇರಿ NEWS DESK ಫೆ.3 : ಮೈ ಭಾರತ್ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಚೇರಿ, ಭಾರತ ಸರ್ಕಾರದ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಲಯ ಆಶ್ರಯದಲ್ಲಿ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ (NDRF) ಹಾಗೂ ರಾಜ್ಯ ವಿಪತ್ತು ಪ್ರತಿಕ್ರಿಯಾ ಪಡೆ (SDRF) ಮತ್ತು ಕೊಡಗು ಜಿಲ್ಲಾ ಯುವ ಒಕ್ಕೂಟದ ಸಹಯೋಗದಲ್ಲಿ, ಯುವ ಆಪತ್ ಮಿತ್ರ ಯೋಜನೆಯಡಿಯಲ್ಲಿ 7 ದಿನಗಳ ವಸತಿ ಸಹಿತ ಶಿಬಿರವನ್ನು ಆಯೋಜಿಸಲಾಗಿದೆ. ಈ ತರಬೇತಿ ಶಿಬಿರವು ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ 18 ರಿಂದ 40 ವರ್ಷದ ಯುವ ಸ್ವಯಂಸೇವಕರಿಗೆ ಅವಕಾಶ ಕಲ್ಪಿಸುತ್ತದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಮಂಗಳೂರಿನ ಪಿಲಿಕುಳದ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ ಇದೇ ಫೆ.23ರಿಂದ ಮಾ.1 ರವರೆಗೆ ಶಿಬಿರ ನಡೆಯಲಿದೆ. ಆಯ್ಕೆಯಾದ 250 ಅಭ್ಯರ್ಥಿಗಳಿಗೆ ರೂ.10 ಸಾವಿರ ಮೌಲ್ಯದ ತುರ್ತು ನೆರವು ಕಿಟ್, 3 ವರ್ಷಗಳ ಜೀವ ಹಾಗೂ…
ಮಡಿಕೇರಿ NEWS DESK ಫೆ.2 : ದೃಢ ನಿರ್ಧಾರ ಹಾಗೂ ಸತತ ಪರಿಶ್ರಮದಿಂದ ಮಾತ್ರ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ನ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ಅವರು ತಿಳಿಸಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಮೂರ್ನಾಡುವಿನ ಕೋಡಂಬೂರು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ವತಿಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗಾಗಿ ವಿರಾಜಪೇಟೆಯ ಮಲೆತಿರಿಕೆ ಬೆಟ್ಟದಲ್ಲಿ ನಡೆದ ಚಾರಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಲ್ಲಿ ಶಿಸ್ತು, ಸಂಯಮವನ್ನು ಕಲಿಸುವುದರ ಜೊತೆಗೆ ಸೇವಾ ಮನೋಭಾವವನ್ನು ವೃದ್ಧಿಸುತ್ತದೆ. ಧೈರ್ಯ, ಸಾಹಸ, ನಿಷ್ಠೆ, ಪ್ರಾಮಾಣಿಕತೆ, ದೇಶಪ್ರೇಮವನ್ನು ಬೆಳೆಸುತ್ತದೆ. ಪರಿಶ್ರಮದಿಂದ ಗುರಿ ಸಾಧಿಸುವ ಚಾರಣವು ಜೀವನದ ಪಾಠವನ್ನು ಹೇಳುತ್ತದೆ. ಸಾಧನೆಗೆ ದೃಢ ನಿರ್ಧಾರ ಅಗತ್ಯ, ಚಾರಣ ಮಾಡುವ ಸಂದರ್ಭ ದೇಹಕ್ಕೆ ಆಯಾಸವಾಗಬಹುದು. ಆದರೆ ಸುತ್ತಮುತ್ತಲ ಹಸಿರ ಪರಿಸರ, ಬೆಟ್ಟಗುಡ್ಡ, ಮರಗಿಡಗಳು, ಸುಂದರವಾದ ಹೂವುಗಳು ಮತ್ತು ಪಕ್ಷಿಗಳನ್ನು…






