ಮಡಿಕೇರಿ ನ.8 NEWS DESK : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಅಜ್ಜಿ-ತಾತಂದಿರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಸಮಾಜ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಂಡುವಂಡ. ಪಿ.ಮುತ್ತಪ್ಪ ಮಕ್ಕಳ ಪ್ರತಿಭೆಗೆ ನಾವು ಪ್ರೋತ್ಸಾಹ ನೀಡಬೇಕು. ಪ್ರಸ್ತುತ ಸಮಾಜದಲ್ಲಿ ಮಕ್ಕಳು ಮುಂದೆ ಬರಬೇಕಾದರೆ ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು. ಶಾಲಾ ಪ್ರಾಂಶುಪಾಲರಾದ ಎಂ.ಜಿ.ಸವಿತಾ ಮಾತನಾಡಿ, ಮನೆಯಲ್ಲಿ ಅಜ್ಜಿ-ತಾತಂದಿರು ಇದ್ದರೆ ಮಕ್ಕಳು ಸಂಸ್ಕೃತಿಯ ಬಗ್ಗೆ ತಿಳುವಳಿಕೆಯನ್ನು ನೀಡಿ ಮಕ್ಕಳು ಸುಸಂಸ್ಕೃತರಾಗಿ ಬೆಳೆಯುವಲ್ಲಿ ಸಂಶಯವಿಲ್ಲ ಎಂದರು. ನಂತರ ಪುಟಾಣಿಗಳಿಗೆ ದಿನದ ಮಹತ್ವದ ಕುರಿತು ವಿವರಿಸಿದರು. ಕಾರ್ಯಕ್ರಮದ ಕುರಿತು ಅಜ್ಜಿ ತಾತಂದಿರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಅಧಿಕಾರಿ ಎನ್.ಎ.ಪೊನ್ನಮ್ಮ ಹಾಜರಿದ್ದರು. ಶಿಕ್ಷಕಿ ಬಿ.ಎಸ್.ಚಂದ್ರಾವತಿ ಪ್ರಾರ್ಥಿಸಿದರು. ಶಾಹಿರ. ಎಂ.ಹೆಚ್.ಶಾಹಿರ ಸ್ವಾಗತಿಸಿದರು. ವಿನ್ಯಾ ಉತ್ತಪ್ಪ ಮತ್ತು ಎಸ್.ಕೆ.ಕುಸುಮ ಕಾರ್ಯಕ್ರಮ ನಿರೂಪಿಸಿದರು. ಸಿ.ಮಿಥಿಲಾ ಪೊನ್ನಪ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಪುಟಾಣಿಗಳಿಗೆ ನೃತ್ಯ ಹಾಗೂ…
ಲೇಖಕ: admin
ಮಡಿಕೇರಿ ನ.8 NEWS DESK : 2023-24ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಕೊಡಗಿನ ಬಡ ವಿದ್ಯಾರ್ಥಿಗಳಿಂದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೂರ್ಗ್ ಓಲ್ಡ್ ಸ್ಟುಡೆಂಟ್ಸ್ ಅಸೋಸಿಯೇಷನ್ ವತಿಯಿಂದ ವಿದ್ಯಾರ್ಥಿ ವೇತನ – 2024ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು 00971567012123 ವಾಟ್ಸಾಪ್ ಸಂಖ್ಯೆಗೆ ಕೆಳಗೆ ನಮೂದಿಸಿದ ಮಾಹಿತಿ ಮತ್ತು ಸೂಕ್ತ ದಾಖಲಾತಿಗಳನ್ನು ಕಳುಹಿಸಲು ಸಂಘದ ಆಡಳಿತ ಮಂಡಳಿ ಕೋರಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11.11.2024 :: ಅಗತ್ಯವಿರುವ ದಾಖಲೆಗಳು :: ಶಾಲೆ/ಕಾಲೇಜು ಮುದ್ರೆಯೊಂದಿಗೆ ಮಾರ್ಕ್ಸ್ ಕಾರ್ಡ್, ಪಡಿತರ ಚೀಟಿ ಪ್ರತಿ, ವಿಳಾಸದೊಂದಿಗೆ ವಿದ್ಯಾರ್ಥಿ ಸಂಪರ್ಕ ಸಂಖ್ಯೆ, ವಿದ್ಯಾರ್ಥಿ ಇತ್ತೀಚಿನ ಫೋಟೋ, ಆದಾಯ ಪ್ರಮಾಣಪತ್ರ, 2023-24 ಪಿಯುಸಿ ಅಥವಾ ಇತರೆ ಶೈಕ್ಷಣಿಕ ಕೋರ್ಸ್ನ ಪ್ರವೇಶ ರಶೀದಿ :: ಮಂಡಳಿಯ ಕಾರ್ಯನಿರ್ವಾಹಕರು :: ಅಬ್ದುಲ್ಲಾ ಕೊಂಡಂಗೇರಿ (ಅಧ್ಯಕ್ಷರು), ಸೌರಭ್ ಗೋಣಿಕೊಪ್ಪ (ಉಪಾಧ್ಯಕ್ಷರು), ರಫೀಕ್ ಅಲಿ ಕುಂಜಿಲ (ಜಿ. ಕಾರ್ಯದರ್ಶಿ), ಶಾಫಿ ಕೊಟ್ಟಮುಡಿ…
ಮಡಿಕೇರಿ ನ.8 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಧ್ವಜ ದಿನಾಚರಣೆ ಹಾಗೂ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕು ಕಾರ್ಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜ ದಿನಾಚರಣೆಯ ಧ್ವಜ ಚೀಟಿಯನ್ನು ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ ಬಿಡುಗಡೆ ಮಾಡಿದರು. ಧ್ವಜ ಚೀಟಿಯನ್ನು ಬಿಡುಗಡೆಗೊಳಿಸಿದ ತಹಶೀಲ್ದಾರ್ ಕಿರಣ್ ಗೌರಯ್ಯ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಹಾಗೂ ದೇಶದ ಕುರಿತಾದ ಕರ್ತವ್ಯಗಳನ್ನು ತಿಳಿಹೇಳುವ ಮತ್ತು ಶಿಸ್ತು ಮೂಡಿಸಿ ಸೇವಾ ಮನೋಭಾವನೆ ಬೆಳೆಸುವ ಸಂಸ್ಥೆಯ ಕಾರ್ಯ ಮಾದರಿಯಾಗಿದೆ’ ಎಂದು ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಮ್ಮ 74 ನೇ ಸಂಸ್ಥಾಪನಾ ದಿನವನ್ನು ಅತ್ಯಂತ ಉತ್ಸಾಹ ಮತ್ತು ಉತ್ಸಾಹದಿಂದ ಆಚರಿಸಿದಾಗ ಸೌಹಾರ್ದತೆಯ ಮನೋಭಾವ ಮತ್ತು ಶ್ರೇಷ್ಠತೆಯ ಅನ್ವೇಷಣೆ ಸಾಧ್ಯ.ಇಂತಹ ಚಟುವಟಿಕೆಗಳು ಮತ್ತಷ್ಟು ವಿಸ್ತರಣೆಗೊಳ್ಳುವ ಮೂಲಕ ಸಮಾಜದಲ್ಲಿ ಸಾಮಾಜಿಕ ಕ್ರಾಂತಿ ಸಾಧ್ಯ ಎಂದರು. ಧ್ವಜ ದಿನಾಚರಣೆಯ…
ಸೋಮವಾರಪೇಟೆ ನ.8 NEWS DESK : ನಾವು ಪ್ರತಿಷ್ಠಾನ ಮತ್ತು ಸಿ.ಎಂ.ಸಿ.ಎ ಸಂಸ್ಥೆಯ ಸಹಯೋಗದಲ್ಲಿ ಪಂಚಾಯತ್ ರಾಜ್ ಇಲಾಖೆ ನಡೆಸುವ ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ಪರಿಣಾಮಾತ್ಮಕವಾಗಿ ನಡೆಸುವ ನಿಟ್ಟಿನಲ್ಲಿ ಪೂರ್ವ ತಯಾರಿಯ ಸಭೆ ಮಾಲಂಬಿ ವಾಲ್ಮೀಕಿ ಆಶ್ರಮಶಾಲೆಯಲ್ಲಿ ನಡೆಯಿತು. ಮಕ್ಕಳ ಹಕ್ಕುಗಳಲ್ಲಿ ಒಂದಾದ ಭಾಗವಹಿಸುವ ಹಕ್ಕಿನ ಮಹತ್ವ ಮತ್ತು ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳ ಧ್ವನಿಯ ಪ್ರಾಮುಖ್ಯತೆ, ಮಕ್ಕಳ ಕಾನೂನು ಕಾಯ್ದೆಗಳ ಅರಿವು ನಾವು ಪ್ರತಿಷ್ಠಾನದ ಸ್ವಯಂ ಸೇವಕರಾದ ಬಿ.ಕೆ.ಕುಮಾರಿ ಮಕ್ಕಳಿಗೆ ತಿಳಿಸಿಕೊಟ್ಟರು. ಶಾಲಾ ಶಿಕ್ಷಕರಾದ ವಿಜಯೇಂದ್ರ, ವೀಣಾ, ಮಂಜುಳಾ ಸುಮಾ, ಚೈತ್ರ, ಇಂದ್ರಾಣಿ ಇದ್ದರು.
ಮಡಿಕೇರಿ ನ.7 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ತಾಲ್ಲೂಕಿನ ಚೆಯ್ಯಂಡಾಣೆ ಗ್ರಾಮದ ನರಿಯಂದಡ ಅಯ್ಯಪ್ಪ ಯುವಕ ಸಂಘ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ’ವು ನವೆಂಬರ್ 10 ರಂದು ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ. ನಗರದ ಅಕಾಡೆಮಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಅರೆಭಾಷೆಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ನ.10 ರಂದು ಬೆಳಗ್ಗೆ 8.30 ಗಂಟೆಗೆ ಕಡಂಗ ಗಣಪತಿ ದೇವಸ್ಥಾನದ ಎದುರಿನಲ್ಲಿ ಮ್ಯಾರಥಾನ್ಗೆ ಚಾಲನೆ ನೀಡುವ ಮೂಲಕ ಉತ್ಸವ ಆರಂಭಗೊಳ್ಳಿದೆ ಎಂದರು. ನಂತರ ಬೆಳಗ್ಗೆ 9.30 ಗಂಟೆಗೆ ಧ್ವಜಾರೋಹಣ ಮತ್ತು ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ನರಿಯಂದಡ ಗ್ರಾ.ಪಂ.ಅಧ್ಯಕ್ಷರಾದ ಪೆಮ್ಮಂಡ ಕೌಶಿ ಕಾವೇರಮ್ಮ, ನೌಕಾದಳದ ನಿವೃತ್ತ ಸೇನಾನಿ ಪುದಿಯಮನೆ ಕೃಷ್ಣ, ಯವಕಪಾಡಿ ನಿವೃತ್ತ ಶಿಕ್ಷಕರಾದ…
ಗೋಣಿಕೊಪ್ಪ ನ.7 NEWS DESK : ಅರುವತ್ತೊಕ್ಲು ಸರ್ವದೈವತಾ ವಿದ್ಯಾಸಂಸ್ಥೆಯಲ್ಲಿ ಗೋಣಿಕೊಪ್ಪ ಸಮೂಹ ಸಂಪನ್ಮೂಲ ಕೇಂದ್ರ, ಸರ್ವದೈವತಾ ವಿದ್ಯಾ ಸಂಸ್ಥೆ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮಾನ್ವಯಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಗೋಣಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಕಲೋತ್ಸವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರವಿ ಉದ್ಘಾಟಿಸಿ ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಹೊರತರಲು ಪ್ರತಿಭಾ ಕಾರಂಜಿ ಸಹಕಾರಿಯಾಗಿದ್ದು, ಪೋಷಕರು ಹಾಗೂ ಶಿಕ್ಷಕರು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಆಮೂಲಕ ಉತ್ತಮ ಸಮಾಜವನ್ನು ನಿರ್ಮಿಸಲು ಮುಂದಾಗಬೇಕು ಎಂದರು. ವಿವಿಧ ಪ್ರಕಾರಗಳ ಕಲೆಗಳಲ್ಲಿ ಆಸಕ್ತಿ ತಾಳುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಾಧ್ಯವಿದೆ ಎಂದರು. ವಿವಿಧ ಕ್ಷೇತ್ರಗಳಲ್ಲಿ ವಿಭಿನ್ನವಾಗಿ ಪ್ರಯತ್ನಿಸುವ ಕಾರ್ಯ ನಡೆಯಬೇಕಾಗಿದೆ. ಸೃಜನಶೀಲಾ ಗುಣಗಳನ್ನ ಗುರುತಿಸಿ ಅದಕ್ಕೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ಕಾರ್ಯ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳಿಂದ ನಡೆಯುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರ್ವದೈವತಾ ವಿದ್ಯಾ ಸಂಸ್ಥೆ ಅಧ್ಯಕ್ಷ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ, ನಾವು…
ಬೆಂಗಳೂರು ನ.7 NEWS DESK : IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು, ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ. ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣ ರಾದರೆ ಅವರಿಗೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು. ಶಿಕ್ಷಣವೇ…
ಮಡಿಕೇರಿ ನ.7 NEWS DESK : ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೊಡಗಿನ ಅಪ್ಪಚೆಟ್ಟೋಳಂಡ ಮಧು ಮೊಣ್ಣಪ್ಪ ಸುಬೇದಾರ್ ಮೇಜನ್ ಆಗಿ ಬಡ್ತಿ ಹೊಂದಿದ್ದಾರೆ. ಪ್ರಸ್ತುತ ಚಂಡೀಗಡ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸುಮಾರು 26 ವರ್ಷಗಳ ಸೇವೆಯನ್ನು ಪರಿಗಣಿಸಿ ನ.1 ರಂದು ಮಧು ಮೊಣ್ಣಪ್ಪ ಅವರನ್ನು ಸುಬೇದಾರ್ ಮೇಜರ್ ಆಗಿ ಬಡ್ತಿಗೊಳಿಸಲಾಗಿದೆ. ಇವರು ಮೂಲತಃ ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೋಳಂಡ ರಾಜ ಭೀಮಯ್ಯ ಹಾಗೂ ಶಾಂತಿ ದಂಪತಿಯ ಪುತ್ರ.
ವಿರಾಜಪೇಟೆ ನ.7 NEWS DESK : ಕ್ರೀಡೆಯಲ್ಲಿ ಶಿಸ್ತು ಹಾಗೂ ಏಕತೆ ಮುಖ್ಯವಾಗಿದೆ ಎಂದು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ತಾತಂಡ ಜ್ಯೋತಿ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೈಂಟ್ ಆನ್ಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ, ಐಕ್ಯೂಎಸಿ ಮತ್ತು ಬಿಬಿಎ ವಿಭಾಗಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಉತ್ತಮವಾದ ಅವಕಾಶಗಳಿದ್ದು, ತಮಗೆ ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಪೋಷಕರನ್ನು ಗೌರವಿಸಬೇಕು ಎಂದರು. ಮಾತ್ರವಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಉತ್ತಮವಾಗಿ ವರ್ತಿಸುದರ ಜೊತೆಗೆ ಮಾದರಿ ಸಮಾಜವನ್ನು ನಿರ್ಮಿಸಿ ಎಂದು ಕರೆ ನೀಡಿದರು. ಆಟಗಾರರು ಶಿಸ್ತು ಬದ್ದವಾದ ಆಟವನ್ನು ಪ್ರದರ್ಶಿಸುವುದರ ಮೂಲಕ ಕಾಲೇಜಿಗೆ ಕೀರ್ತಿಯನ್ನು ತರಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ್ದ ಸೈಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪಿಯು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ಮಾತನಾಡಿ, ಕ್ರೀಡೆಗಳನ್ನು ಆಯೋಜಿಸುವುದರಿಂದ…
ಸೋಮವಾರಪೇಟೆ ನ.7 NEWS DESK : 512ನೇ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 85ಲಕ್ಷ ರೂ. ವೆಚ್ಚದ ನೂತನ ಕಟ್ಟಡವನ್ನು ಸಂಘದ ಅಧ್ಯಕ್ಷ ಹೆಚ್.ಆರ್.ಸುರೇಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಂಘದ ಸರ್ವ ಸದಸ್ಯರ ಕನಸ್ಸಿನ ನೂತನ ಕಟ್ಟಡ ಉದ್ಘಾಟನೆಯಾಗಿದೆ. ಕಳೆದ ಸಾಲಿನಲ್ಲಿ ಎಲ್ಲಾ ಸದಸ್ಯರು ತಮ್ಮ ಲಾಭಂಶದ ಒಂದಷ್ಟು ಭಾಗವನ್ನು ಸಂಘದ ಕಟ್ಟಡ ನಿರ್ಮಾಣಕ್ಕೆ ನೀಡಿದ್ದರು. ರೈತರ ಶ್ರೇಯೊಭಿವೃದ್ಧಿಗೆ ಸಂಘ ಕೆಲಸ ಮಾಡುತ್ತಿದೆ. ಸದಸ್ಯರಿಗೆ ಸಂಘದಿಂದ ಸಾಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಸದಸ್ಯರು ಕೂಡ ನಿಗದಿತ ಸಮಯದಲ್ಲಿ ಸಾಲವನ್ನು ಮರುಪಾವತಿ ಮಾಡುತ್ತಿರುವುದರಿಂದ ಉತ್ತಮ ಲಾಭಂಶವೂ ಸಿಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಮಮತ ಅಶೋಕ್, ಆಡಳಿತ ಮಂಡಳಿ ಸದಸ್ಯರಾದ ಎಸ್.ಬಿ.ಭರತ್ ಕುಮಾರ್, ಎನ್.ಎಸ್.ಪರಮೇಶ್, ಜಿ.ಪಿ.ಸುನೀಲ್, ವಿ.ಎನ್.ನಾಗರಾಜು, ಪುಷ್ಪಸುರೇಶ್, ಸುಮಿತ್ರ ಮಹೇಶ್, ವಾಣಿ ಶಿವಕುಮಾರ್, ಕೆ.ಜಿ.ದಿನೇಶ್, ಸಿ.ಇ.ವೆಂಕಟೇಶ್, ಜಿ.ಈ.ಸುರೇಶ್, ಸಿಇಒ ಎಂ.ಎಚ್.ಕಿರಣ್ ಮತ್ತು ಸಿಬ್ಬಂದಿ ವರ್ಗ ಇದ್ದರು.






