ಸೋಮವಾರಪೇಟೆ ನ.7 NEWS DESK : ಕಿರಗಂದೂರು ಗ್ರಾಮದ ಜನತಾಕಾಲನಿಯ ಶ್ರೀ ಮಂಜುನಾಥ ಸ್ವಸಹಾಯ ಸಂಘದ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ ವಿಷನ್ಸ್ಪ್ರಿಂಗ್ ಫೌಂಡೇಶನ್ ಸಂಸ್ಥೆ ತಜ್ಞರು ನೇತ್ರಪರೀಕ್ಷೆ ನಡೆಸಿದರು. 114 ಮಂದಿ ಪರೀಕ್ಷೆ ಮಾಡಿಸಿಕೊಂಡರು. 80 ಮಂದಿಗೆ ಸ್ಥಳದಲ್ಲೇ ಕನ್ನಡಕ ವಿತರಿಸಲಾಯಿತು. ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಅದರಲ್ಲೂ ಕೂಲಿ ಕಾರ್ಮಿಕರು ಕಣ್ಣಿನ ಅರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ದೃಷ್ಟಿ ಮಂಕಾದ ಸಂದರ್ಭ ಪರೀಕ್ಷೆ ಮಾಡಿಸಿಕೊಂಡು ಕನ್ನಡಕ ಹಾಕಿಕೊಂಡರು ಸಮಸ್ಯೆ ಬಗೆಹರಿಯುತ್ತದೆ. ಎಲ್ಲಾ ಕಾಲನಿಗಳಲ್ಲಿ ವರ್ಷಗೊಮ್ಮೆಯಾದರೂ ಉಚಿತ ಶಿಬಿರಗಳು ನಡೆದರೆ ಬಡವರಿಗೆ, ವೃದ್ಧರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು. ಫೌಂಡೇಶನ್ನ ಸಿಬ್ಬಂದಿಗಳಾದ ಆಶಿಶ್ ಚೌದರಿ, ಅಮಿತ್ ಕುಮಾರ್, ಪುಷ್ಪೇಂದ್ರಯಾದವ್ ಸಂಘದ ಕಾರ್ಯದರ್ಶಿ ಟಿ.ಜೆ.ಗೋಪಾಲ್, ನಾವು ಪ್ರತಿಷ್ಠಾನದ ಪಿ.ಬಿ.ಪೊನ್ನಪ್ಪ ಇದ್ದರು.
ಲೇಖಕ: admin
ಮಡಿಕೇರಿ ನ.7 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯಿಕ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಮಾಡುವ ಮೂಲಕ ಕನ್ನಡ ಸಾಹಿತ್ಯದ ಪರಿಚಯವನ್ನು ವಿದ್ಯಾರ್ಥಿ ಗಳಿಗೆ ಮಾಡಿಕೊಡುತ್ತಿರುವುದು ಶ್ಲಾಘನೀಯ ಎಂದು ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಬೋಡಂಗಡ ಅಯ್ಯಪ್ಪ ನುಡಿದರು. ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀಮಂಗಲ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದಕನ್ನಡ ರಾಜ್ಯೋತ್ಸವ, ದತ್ತಿನಿಧಿ ಮತ್ತು ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದರು.ಮುಂದುವರೆದ ಅವರು ಕೊಡಗಿನ ಗಡಿಭಾಗವಾದ ಶ್ರೀಮಂಗಲ ಗ್ರಾಮದಲ್ಲಿ ಕನ್ನಡದ ಕಾರ್ಯಕ್ರಮಗಳ ಅವಶ್ಯಕತೆ ತುಂಬಾ ಇದ್ದು, ಗಡಿ ಪ್ರದೇಶದ ಎಲ್ಲಾ ಶಾಲೆಗಳಲ್ಲೂ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡಿ, ಸಾಹಿತ್ಯ ಪರಿಷತ್ತು ದತ್ತಿನಿಧಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ…
ವಿರಾಜಪೇಟೆ ನ.7 NEWS DESK : ಮಡಿಕೇರಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗುಂಪು ನೃತ್ಯ ಪ್ರದರ್ಶಿಸಿ, ಏಡ್ಸ್ ಭಾದಿತ ವ್ಯಕ್ತಿಗೆ ಬಳಸಿದ ಸೂಜಿಯನ್ನು ಇತರರು ಬಳಸುವುದರಿಂದ ಹೇಗೆ ಏಡ್ಸ್ ಹರಡುತ್ತದೆ, ಏಡ್ಸ್ ಹರಡದಂತೆ ವಹಿಸ ಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಹಾಗೂ ಏಡ್ಸ್ ಭಾದಿತರನ್ನು ಸಮಾಜದಲ್ಲಿ ಕೀಳಾಗಿ ನೋಡಬಾರದು, ನಮ್ಮಂತೆ ಮನುಷ್ಯರು ಸಮಾಜದಲ್ಲಿ ಅವರಿಗೂ ಸಮಾನವಾಗಿ ಬದುಕುವ ಹಕ್ಕನ್ನು ನೀಡಬೇಕೆಂಬುದನ್ನು ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ಪ್ರದರ್ಶಿಸಿ ಏಡ್ಸ್ ಕುರಿತು ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ವಿರಾಜಪೇಟೆ ಐಸಿಟಿಸಿ ಕೇಂದ್ರದ ಆಪ್ತ ಸಮಾಲೋಚಕರಾದ ಚಿಟ್ಟಿಯಪ್ಪ, ವಿರಾಜಪೇಟೆ ಖಾಸಗಿ ಬಸ್ ಚಾಲಕರ ಸಂಘದ ಅಧ್ಯಕ್ಷ ಕುಂಬೆಯಂಡ ಸುರೇಶ್, ಸದಸ್ಯರಾದ ಜ್ಯೂಡಿವ್ಯಾಜ್, ಮಂಜುನಾಥ್, ಕಾಲೇಜಿನ ಉಪನ್ಯಾಸಕರಾದ ಸೋಮಣ್ಣ ನಾಗರಾಜು, ಆಡಳಿತ ಸಿಬ್ಬಂದಿ ಹರೀಶ್ ಎನ್.ಎಸ್.ಎಸ್. ಘಟಕದ ಯೋಜನಾಧಿಕಾರಿ…
ಮಡಿಕೇರಿ ನ.7 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ನವೆಂಬರ್, 13 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಶಾಲನಗರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ NEWS DESK ನ.6 : ಕೊಡಗಿನ ಕ್ರೀಡಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕೊಡಗು ಪೊಲೀಸ್ ಇಲಾಖೆ ವತಿಯಿಂದ ಕೊಡಗು ಪೊಲೀಸ್ ಕ್ರಿಕೆಟ್ ಲೀಗ್ ಪಂದ್ಯಾವಳಿ ನ.9 ರಂದು ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಡಿವೈಎಸ್ಪಿ ಮಹೇಶ್ ಕುಮಾರ್ ಅವರ ಉಸ್ತುವಾರಿಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಮಾಸ್ಟರ್ ಕಾಪ್ಸ್, ಸೂಪರ್ ಕಾಪ್ಸ್, ಡೈನಾಮಿಕ್ ಕಾಪ್ಸ್, ವಿಕ್ಟರಿ ಕಾಪ್ಸ್ ಮತ್ತು ಡೇರಿಂಗ್ ಕಾಪ್ಸ್ ತಂಡಗಳ ನಡುವೆ ಪ್ರಶಸ್ತಿಗಾಗಿ ಸೆಣಸಾಟ ನಡೆಯಲಿದೆ. ಶನಿವಾರ ಬೆಳಿಗ್ಗೆ 7.30 ಗಂಟೆಗೆ ಕೊಡಗು ಪೊಲೀಸ್ 11 ಮತ್ತು ಕೊಡಗು ಮೀಡಿಯಾ ವಾರಿಯರ್ಸ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.
ಮಡಿಕೇರಿ NEWS DESK ನ.6 : ಕೊಡವ ಲ್ಯಾಂಡ್ ನಲ್ಲಿ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ತಡೆಯದಿದ್ದಲ್ಲಿ ಅತ್ಯಂತ ಸೂಕ್ಷ್ಮಾತಿ ಸೂಕ್ಷ್ಮ ಆದಿಮಸಂಜಾತ ಕೊಡವ ಕುಲದ ಅಸ್ತಿತ್ವಕ್ಕೆ ದಕ್ಕೆ ಬರಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಸಿಎನ್ಸಿ ವತಿಯಿಂದ ಬುಟ್ಟಂಗಾಲ ಜಂಕ್ಷನ್ ನಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವ್ಯಾಪಕವಾಗಿ ದುರ್ಬಳಕೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದಾಪುರದ ಸಾವಿರಾರು ಎಕರೆ ಕಾಫಿ ತೋಟ ಸೇರಿದಂತೆ ಕೊಡಗಿನ ವಿವಿಧೆಡೆ ಕೃಷಿಭೂಮಿಯಲ್ಲಿ ಬೃಹತ್ ನಗರ ನಿರ್ಮಿಸುವ ಹುನ್ನಾರ ನಡೆಯುತ್ತಿದೆ. ಬರಪೊಳೆ, ಕೊಂಗಣಪೊಳೆ, ಕಾವೇರಿ ನದಿಯ ಉಪ ನದಿಗಳಿಗೆ ಜೀವ ಸೆಲೆಯಾಗಿರುವ ಕೊಡವ ಲ್ಯಾಂಡ್ನ ಆಯಕಟ್ಟಿನ ಸ್ಥಳವಾದ ಪೆರುಂಬಾಡಿ, ಬಾಳುಗೋಡು, ನಾಂಗಾಲ, ಬುಟ್ಟಂಗಾಲದಲ್ಲ್ಲಿ 2020-21ರ ಭೂಸುಧಾರಣಾ ತಿದ್ದುಪಡಿ ಕಾಯ್ದೆ ದುರ್ಬಳಕೆಯಾಗುತ್ತಿದೆ. ಬಂಡವಾಳಶಾಹಿ, ರೆಸಾರ್ಟ್ ಮಾಫಿಯಾ ಹಾಗೂ ಟೌನ್ಶಿಪ್ ಧಣಿಗಳು,…
ವಿರಾಜಪೇಟೆ ನ.6 NEWS DESK : ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಮರ್ಥ ಕನ್ನಡಿಗರು ಸಂಸ್ಥೆ ವತಿಯಿಂದ ಮಡಿಕೇರಿ ನಗರ ಓಂಕಾರ ಸದನದಲ್ಲಿ ನಡೆದ “ನಿಮ್ಮ ಪ್ರತಿಭೆ-ನಮ್ಮ ವೇದಿಕೆ ನೃತ್ಯ ಸ್ಪರ್ಧೆಯಲ್ಲಿ, ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು ಭರತನಾಟ್ಯ, ಕನ್ನಡ ಹಾಡಿಗೆ ನೃತ್ಯ, ಹಾಗೂ ಜಾನಪದ ನೃತ್ಯ ಎಲ್ಲಾ ವಿಭಾಗ ದಲ್ಲಿ ಭಾಗವಹಿಸಿ ಬಹುಮಾನ ಪಡೆದುಕೊಂಡು ಸಮಗ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಸಂಸ್ಥೆಯ ವ್ಯವಸ್ಥಾಪಕರುಗಳಾದ ಗುರು ಹೇಮಾವತಿ ಕಾಂತ್ ರಾಜ್ ಹಾಗೂ ಗುರು ಕಾವ್ಯಶ್ರೀ ಕಾಂತ್ ರಾಜ್ ಹಾಗೂ ಪೋಷಕರು ಹಾಜರಿದ್ದರು.
ಪೊನ್ನಂಪೇಟೆ ನ.6 NEWS DESK : ಉನ್ನತ ಶಿಕ್ಷಣದಿಂದ ಸಾಮಾಜಿಕ ಸ್ಥಾನಮಾನ, ಸ್ವಾಭಿಮಾನದ ಬದುಕು ಗಳಿಸಲು ಸಾಧ್ಯ. ಜೊತೆಗೆ ಆರೋಗ್ಯಕರ ಮತ್ತು ಸಂಸ್ಕಾರಕ್ಕೆ ಸಮನಾಗಿರುವ ಉನ್ನತ ಶಿಕ್ಷಣದಿಂದ ಸಮಾಜದ ಸ್ವಾಸ್ಥ್ಯವೂ ಕಾಪಾಡಿಕೊಳ್ಳಬಹುದಾಗಿದೆ. ಆದ್ದರಿಂದ ಇದುವರೆಗೂ ಶಿಕ್ಷಣದಿಂದ ವಂಚಿತರಾಗಿದ್ದ ಹಿಂದುಳಿದ ಸಮುದಾಯದ ಪ್ರತಿಭಾವಂತರು ಹೆಚ್ಚು ಹೆಚ್ಚು ಸಿವಿಲ್ ಸರ್ವಿಸ್ ಪರೀಕ್ಷೆಗಳಿಗೆ ತಯಾರಾಗಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿವೃತ್ತ ಐ.ಪಿ.ಎಸ್. ಅಧಿಕಾರಿ ಯು.ನಿಸಾರ್ ಅಹಮದ್ ಹೇಳಿದರು. ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ) ಆಶ್ರಯದಲ್ಲಿ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಪ್ಯಾರಿಸ್ ಸಭಾಂಗಣದಲ್ಲಿ ನಡೆದ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2024 ವಿತರಣೆ ಮತ್ತು ಸನ್ಮಾನ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಆಧುನಿಕತೆ ಹಾಗೂ ತಂತ್ರಜ್ಞಾನದ ವೇಗದ ಜೊತೆಗೆ ಈಗ ಸ್ಪರ್ಧಾತ್ಮಕತೆಯೂ ಹೆಚ್ಚಿದೆ. ಹಾಗಾಗಿ ಈಗ ಒಬ್ಬ ವ್ಯಕ್ತಿ ಸದಾ ಹೊಸ ಹೊಸ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಇಂದಿದೆ. ಅದಕ್ಕಾಗಿ ತನ್ನ ಜೀವನದ ಯಾವುದೇ ಸಮಯದಲ್ಲೂ…
ಮಡಿಕೇರಿ ನ.6 NEWS DESK : ಕೊಡಗು ಜಿಲ್ಲೆಯ ಸುಂಟಿಕೊಪ್ಪ ವ್ಯಾಪ್ತಿಯ ಕಾಫಿ ತೋಟವೊಂದರಲ್ಲಿ ದೊರೆತ ಅರೆಸುಟ್ಟ ಮೃತದೇಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪದಡಿ ತನಿಖೆ ಎದುರಿಸಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಹರಿಯಾಣ ರಾಜ್ಯದ ಕಾರ್ನಲ್ ಗರುಂದ ನಿವಾಸಿ ಅಂಕೂರ್ ರಾಣ(30) ಎಂಬಾತನನ್ನು ಕೊಡಗು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತೆಲಾಂಗಣ ರಾಜ್ಯದಲ್ಲಿ ಸ್ಥಳ ಮಹಜರು ಮಾಡಲು ತೆರಳಿದ ಸಂದರ್ಭ ಮೂವರು ಆರೋಪಿಗಳಲ್ಲಿ ಅಂಕೂರ್ ರಾಣ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಹರಿಯಾಣ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಸತತ 6 ದಿನಗಳಿಂದ ಕಾರ್ಯಾಚರಣೆ ನಡೆಸಿ ರಾಜಸ್ಥಾನದ ಕೋಟಾ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ಪತಿಯನ್ನೇ ಕೊಲೆ ಮಾಡಲು ಸಂಚು ರೂಪಿಸಿದ ತೆಲಂಗಾಣ ರಾಜ್ಯದ ಯಾದಾದ್ರಿ ಜಿಲ್ಲೆಯ ಮೋಂಗಿರ್ ನಗರದ ನಿಹಾರಿಕಾ ತನ್ನ ಸ್ನೇಹಿತ ಹರಿಯಾಣ ಮೂಲದ ಅಂಕೂರ್ ರಾಣನ ಸಹಾಯ ಪಡೆದಿದ್ದಾಳೆ. ಡ್ರಾಪ್ ಮಾಡುವ ನೆಪದಲ್ಲಿ ಪತಿ ರಮೇಶ್ ಕುಮಾರ್ ನ ಕಾರಿನಲ್ಲಿ ಬಂದ ಇಬ್ಬರು ಉಪ್ಪಳ್-ಭುವನಗಿರಿ ನಡುವಿನ ಹೆದ್ದಾರಿಯ ಬಳಿ ಕಾರನ್ನು ಬದಿಗೆ…
ಮಡಿಕೇರಿ ನ.6 NEWS DESK : ವಿಧಾನಸಭೆಯ ಉಪಚುನಾವಣೆಯನ್ನು ಗೆಲ್ಲುವ ಏಕೈಕ ಉದ್ದೇಶದಿಂದ ಬಿಜೆಪಿ “ವಕ್ಫ್” ವಿಚಾರವನ್ನು ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿದೆ ಎಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಮುಸ್ಲಿಂ, ಕ್ರಿಶ್ಚಿಯನ್ ಹೆಸರೆತ್ತದೆ ಯಾವುದೇ ಚುನಾವಣೆಗೆ ಹೋಗಿಲ್ಲ, ಇದೀಗ ವಕ್ಫ್ ವಿಚಾರದಲ್ಲಿ ಸುಳ್ಳು ಆರೋಪಗಳನ್ನು ಮಾಡಿ ಕೋಮು ಭಾವನೆಯನ್ನು ಮೂಡಿಸುತ್ತಿದೆ ಎಂದು ಟೀಕಿಸಿದರು. ವಕ್ಫ್ ಆಸ್ತಿ ಎನ್ನುವುದು ಅಲ್ಲಾಹನ ಹೆಸರಿನಲ್ಲಿ ಧಾರ್ಮಿಕ ಭಾವನೆಗಳ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ದಾನ ಮಾಡಿರುವ ಜಾಗವಾಗಿದೆ. ಇದು ಸರ್ಕಾರದ ಸ್ವತ್ತಲ್ಲ, ರಾಜ್ಯ ವ್ಯಾಪಿ 1.25 ಲಕ್ಷ ಏಕರೆ ವಕ್ಫ್ ಆಸ್ತಿ ಇದೆ. ಇದರಲ್ಲಿ 1.02 ಲಕ್ಷ ಏಕರೆ ಒತ್ತುವರಿಯಾಗಿದ್ದು, ಇದೀಗ 23 ಸಾವಿರ ಏಕರೆಯಷ್ಟೆ ಬಾಕಿ ಉಳಿದಿದೆ. ಒತ್ತುವರಿ ಮಾಡಿಕೊಂಡಿರುವವರಿಗೆ ನೋಟಿಸ್ ನೀಡಿರುವ ಬಗ್ಗೆ ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದೆ. ವಕ್ಫ್ ಗೆ ಸಂಬಂಧಿಸಿದ ಆಸ್ತಿಯನ್ನು ಒತ್ತುವರಿಮಾಡಿಕೊಂಡು ಎಷ್ಟೇ ವರ್ಷಗಳಾಗಿದ್ದರು, ಅದನ್ನು…






