ಮಡಿಕೇರಿ ನ.6 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ ವಯ ಸಿಇಟಿ, ನೀಟ್ ಮುಖಾಂತರ) ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ, ಎಂಬಿಎ, ಎಂಸಿಎ ಮತ್ತು ಎಲ್ಎಲ್ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ “ಅರಿವು” (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್ ಸೈಟ್ https://kmdconline.karnataka.gov.in/ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್ನಲ್ಲಿ ಭರ್ತಿ ಮಾಡಿದ ಕೂಡಲೇ…
ಲೇಖಕ: admin
ಮಡಿಕೇರಿ ನ.6 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಉಚಿತವಾಗಿ ನಡೆಸುವ 13 ದಿನಗಳ ಸಿಸಿ.ಟಿ.ವಿ ಮತ್ತು ಸ್ಮೋಕ್ ಡಿಟೆಕ್ಟರ್ ಅಳವಡಿಕೆ ತರಬೇತಿ ಕಾರ್ಯಕ್ರಮವು ನ.19 ರಿಂದ ಡಿ.2 ವರೆಗೂ ನಡೆಯಲಿದ್ದು, ಕರ್ನಾಟಕ ರಾಜ್ಯದಲ್ಲಿನ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಸಂಪೂರ್ಣವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ…
ಮಡಿಕೇರಿ ನ.5 NEWS DESK : ಜಿಲ್ಲೆಯಲ್ಲಿ ಅಸುರಕ್ಷಿತ ಆಹಾರ ಪದಾರ್ಥಗಳನ್ನು ನಿಷೇಧಿಸಲು ಮತ್ತು ಮಾರಾಟ ಮಾಡುವುದನ್ನು ತಡೆಯಗಟ್ಟಲು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಅಂಕಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರ ದೂರು ಮತ್ತು ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳೊಂದಿಗೆ ವಿಧಾನ ಸೌಧ ಕಚೇರಿಯಲ್ಲಿ ತುರ್ತುಸಭೆ ನಡೆಸಿದ ಶಾಸಕರು, ಅಧಿಕಾರಿಗಳೊಂದಿಗೆ ದೂರಿನ ಕುರಿತು ಮಾಹಿತಿ ಪಡೆದರು. ಈ ಸಂದರ್ಭ ಮಾಹಿತಿ ನೀಡಿದ ಅಧಿಕಾರಿಗಳು ಕೊಡಗು ಜಿಲ್ಲೆ ಹಾಗೂ ಕೇರಳ ಜಿಲ್ಲೆ ಗಡಿಭಾಗವಾದ ಕುಟ್ಟ, ಮಾಕುಟ್ಟ ಮತ್ತು ಪೆರುಂಬಾಡಿ ವ್ಯಾಪ್ತಿಯಲ್ಲಿ ಕೇರಳದ ಆಹಾರ ಪದಾರ್ಥಗಳು ಸರಬರಾಜು ಆಗುತ್ತಿದ್ದು. ಆಹಾರ ಪದಾರ್ಥಗಳಲ್ಲಿ ತಯಾರಿಕಾ ದಿನಾಂಕ ಹಾಗೂ ತಯಾರಿಕೆ ಮಾಡುವವರ ವಿವರ ಆಹಾರ ಪದಾರ್ಥಗಳಲ್ಲಿ ಹೆಚ್ಚಿನ ಕೃತಕ ಬಣ್ಣಗಳನ್ನು ಸೇರಿಸಿರುವುದರ ಬಗ್ಗೆ 90 ಆಹಾರ ಪದಾರ್ಥಗಳನ್ನು ವಿಶ್ಲೇಷಣಿಗಾಗಿ (IADFAC) ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಯೋಗಾಲದ…
ಮಡಿಕೇರಿ ನ.5 NEWS DESK : ಖ್ಯಾತ ಸಾಹಿತಿ ಪಂಜೆ ಮಂಗೇಶರಾಯರ ಬದುಕು ಎಲ್ಲರಿಗೂ ಆದರ್ಶವಾಗಿದೆ ಎಂದು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಮಡಿಕೇರಿ ನಗರ ಸಭಾ ಸದಸ್ಯ ಬಿ.ವೈ.ರಾಜೇಶ್ ಹೇಳಿದರು. ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಯೋಗದೊಂದಿಗೆ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಪಂಜೆ ಮಂಗೇಶರಾಯರ ಬದುಕು ಬರಹ ಕುರಿತು ವಿಚಾರ ಸಂಕಿರಣ ಹಾಗೂ ಚಿತ್ರಕಲಾ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಂಗೇಶರಾಯರು ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿದ್ದಾರೆ. ಅವರ ಕೊಡುಗೆ ಅಪಾರವಾದುದು. ಮಡಿಕೇರಿಯ ಪದವಿ ಪೂರ್ವ ಕಾಲೇಜಿನಲ್ಲೂ ಮುಖ್ಯೋಪಾಧ್ಯಾಯರಾಗಿ ಸೇವೆ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ. ಅವರು ರಚಿಸಿರುವ ಹುತ್ತರಿ ಹಾಡು ಇಂದಿಗೂ ಪ್ರಸ್ತುತವಾಗಿದೆ. ಅವರ ಸರಳ ಜೀವನ ಆದರ್ಶಪ್ರಾಯವಾಗಿದೆ ಎಂದರು. ಸ್ನೇಹ ಸಿರಿ ಬಳಗದಿಂದ ಹಮ್ಮಿಕೊಳ್ಳುವ ಕಾರ್ಯಕ್ರಮಗಳಿಗೆ ಸಹಕಾರ ನೀಡುವದಾಗಿ ಹೇಳಿದರು. ಪ್ರಾಸ್ತಾವಿಕ ನುಡಿಗಳೊಂದಿಗೆ ವಿಚಾರ ಮಂಡನೆ ಮಾಡಿದ ಕನ್ನಡ…
ಮಡಿಕೇರಿ ನ.5 NEWS DESK : ಮಗುವನ್ನು ದತ್ತು ನೀಡುವುದು ಅಥವಾ ಪಡೆಯುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈರಸ್ವಾಮಿ ತಿಳಿಸಿದ್ದಾರೆ. ಅನಧಿಕೃತವಾಗಿ ದತ್ತು ನೀಡುವುದು ಹಾಗೂ ಪಡೆಯುವುದು ಶಿಕ್ಷಾರ್ಹ ಅಪರಾಧ. ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 80 ಹಾಗೂ 81 ರನ್ವಯ ಯಾವುದೇ ವ್ಯಕ್ತಿಯಾಗಲಿ ಅಥವಾ ಸಂಸ್ಥೆಯಾಗಲಿ ಯಾವುದೇ ಅನಾಥ/ ಪರಿತ್ಯಜಿಸಲ್ಪಟ್ಟ ಮಗುವನ್ನು ದತ್ತು ನೀಡುವುದು ಅಥವಾ ಪಡೆಯುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿ ಅಥವಾ ಸಂಸ್ಥೆಗೆ 5 ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಿಸಬಹುದಾಗಿದೆ. ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡುಬಂದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ. 08272-228800 ನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.
ಮಡಿಕೇರಿ ನ.5 NEWS DESK : ಕವಿಪ್ರನಿನಿ ಯಿಂದ 66/11 ಕೆವಿ ಆಲೂರು ಸಿದ್ದಾಪುರ ಉಪ ಕೇಂದ್ರದ 2024-25 ನೇ ಸಾಲಿನ 3ನೇ ತ್ರೈಮಾಸಿಕ ನಿರ್ವಹಣೆಯನ್ನು ಹಮ್ಮಿಕೊಂಡಿದ್ದು, ನ.6 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಕೂಡುರಸ್ತೆ, ಮಾಲಂಬಿ, ಮಾಲಂಬಿಬೆಟ್ಟ, ಹೊಸಗುತ್ತಿ, ಗಾರೆಗಟ್ಟ, ಬಡುವನಹಳ್ಳಿ, ಅಂಬಳ್ಳಿ, ಹೊನ್ನೇಕೊಪ್ಪಲು, ಸೀಗೆಮರೂರು, ಕೈಸರವಳ್ಳಿ, ಗೋಣಿಮರೂರು, ಗಣಗೂರು, ನಾಗಾವಲ, ಯಡಂಡೆ, ಉಂಜಿಗನಹಳ್ಳಿ, ಬಾಣಾವರ, ದೊಡ್ಡಳ್ಳಿ, ಕಣಗಾಲು, ಆಲೂರು ಸಿದ್ದಾಪುರ, ಕಂತೆಬಸವನಹಳ್ಳಿ, ಪಳರೆಬೂತು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರುಕೋರಿದ್ದಾರೆ.
ಸೋಮವಾರಪೇಟೆ ನ.5 NEWS DESK : ಸೋಮವಾರಪೇಟೆ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್.ಟಿ.ಮಹೇಶ್ ತಿಮ್ಮಯ್ಯ ಹಾಗೂ ಉಪಾಧ್ಯಕ್ಷರಾಗಿ ಬಿ.ಶಿವಪ್ಪ ಆಯ್ಕೆಯಾದರು. ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭ ನಿರ್ದೇಶಕರುಗಳಾದ ಹುಲ್ಲೂರಿಕೊಪ್ಪ ಮಾದಪ್ಪ, ರಾಘವ, ಶ್ರೀಕಾಂತ್, ಕೆ.ಬಿ.ಸುರೇಶ್, ವೆಂಕಪ್ಪ, ದರ್ಶನ್, ಶೋಭಿತ, ರೂಪ ಮತ್ತಿತರರು ಇದ್ದರು.
ಮಡಿಕೇರಿ ನ.5 NEWS DESK : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕೊಡಗು ಜಿಲ್ಲೆಯಲ್ಲಿ ಚುರುಕುಗೊಂಡಿದೆ. ಇದೇ ನ.20 ರವರೆಗೆ ಕೊಡಗು ಜಿಲ್ಲೆಯಾದ್ಯಂತ ಲಸಿಕಾ ಕಾರ್ಯಕ್ರಮ ನಡೆಯುತ್ತಿದ್ದು, ಈ ಸಂಬಂಧ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕರಾದ ಡಾ.ಪ್ರಸನ್ನ ಕುಮಾರ್ ಅವರು ಮಂಗಳವಾರ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ನಿಯಂತ್ರಣದ 6ನೇ ಸುತ್ತಿನ ಲಸಿಕಾ ಅಭಿಯಾನ ನಡೆಯುತ್ತಿದ್ದು, ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ದನ ಮತ್ತು ಎಮ್ಮೆಗೆ ಕಾಲುಬಾಯಿ ರೋಗ ಕಾಣಿಸಿಕೊಳ್ಳಲಿದ್ದು, ಸರ್ಕಾರದ ನಿರ್ದೇಶನದಂತೆ ಜಾನುವಾರುಗಳಿಗೆ ಲಸಿಕೆ ಹಾಕುವಂತೆ ಪಶುಪಾಲನೆ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ. ಕಾಲುಬಾಯಿ ರೋಗ ನಿಯಂತ್ರಿಸಲು ಜಾನುವಾರುಗಳಿಗೆ ಲಸಿಕೆ ನೀಡುವುದು ಅತ್ಯಗತ್ಯವಾಗಿದೆ. ಈ…
ಮಡಿಕೇರಿ ನ.5 NEWS DESK : ಪಡಿತರ ಚೀಟಿ ಹೊಂದಿರುವವರು ಕಡ್ಡಾಯವಾಗಿ ಜಾತಿ ಮತ್ತು ಆದಾಯ ದೃಢೀಕರಣ ಪತ್ರ ನೀಡಬೇಕೆಂದು ಕೆಲವು ನ್ಯಾಯಬೆಲೆ ಅಂಗಡಿಗಳು ಗ್ರಾಹಕರಲ್ಲಿ ಗೊಂದಲ ಸೃಷ್ಟಿಸುತ್ತಿವೆ ಎಂದು ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಆರೋಪಿಸಿದೆ. ನಗರದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಟ್ರೇಡ್ ಯೂನಿಯನ್ ನ ಪ್ರಮುಖರು ಸರ್ಕಾರದ ಆದೇಶದಂತೆ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಒತ್ತಾಯಿಸಿದರು. ಆಹಾರ ಇಲಾಖೆಯ ಯಾವುದೇ ಆದೇಶವಿಲ್ಲದಿದ್ದರೂ ಕೆಲವು ನ್ಯಾಯಬೆಲೆ ಅಂಗಡಿಗಳು ಜಾತಿ ಮತ್ತು ಆದಾಯ ದೃಢೀಕರಣ ಪತ್ರ ತರಬೇಕೆಂದು ಒತ್ತಡ ಹೇರುತ್ತಿವೆ. ಇದರಿಂದ ಬಡವರು ಹಾಗೂ ಕೂಲಿ ಕಾರ್ಮಿಕರು ಮುಂದಿನ ತಿಂಗಳಿನಿಂದ ಅಕ್ಕಿ ಮತ್ತಿತರ ದಿನಸಿ ಸಾಮಾಗ್ರಿ ದೊರೆಯುವುದಿಲ್ಲ ಎನ್ನುವ ಗೊಂದಲದಲ್ಲಿದ್ದು, ಆತಂಕಗೊಂಡಿದ್ದಾರೆ. ಆದ್ದರಿಂದ ಸರ್ಕಾರದ ಆದೇಶವನ್ನು ಮಾತ್ರ ಪಾಲಿಸುವಂತೆ ಮತ್ತು ಗ್ರಾಹಕರಲ್ಲಿ ಗೊಂದಲ ಸೃಷ್ಟಿಸದಂತೆ ನ್ಯಾಯಬೆಲೆ ಅಂಗಡಿಗಳಿಗೆ ಹಿರಿಯ ಅಧಿಕಾರಿಗಳು ನಿರ್ದೇಶನ…
ಮಡಿಕೇರಿ ನ.5 NEWS DESK : ಎಸ್.ಎನ್.ಡಿ.ಪಿ ನಂಜರಾಯಪಟ್ಟಣ ಶಾಖೆ ಮತ್ತು ಓಣಂ ಆಚರಣ ಸಮಿತಿಯ ಸಂಯುಕ್ತಾಶ್ರಯದಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಹಾಗೂ 5ನೇ ವರ್ಷದ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಹೊಸಪಟ್ಟಣದ ಸಮುದಾಯ ಭವನ ಮತ್ತು ಸಾರ್ವಜನಿಕ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಯಮಿ ಹಾಗೂ ಕಾಫಿ ಬೆಳೆಗಾರ ಟಿ.ಕೆ.ರಘು ಉದ್ಘಾಟಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಪೊನ್ನು ಮುತ್ತಪ್ಪನ್ ಕಲಾ ಸಮಿತಿಯ ಚಂಡೆವಾದ್ಯದೊಂದಿಗೆ ನಂಜರಾಯಪಟ್ಟಣದ ಎಸ್ಎನ್ಡಿಪಿ ನೂತನ ಶಾಖಾ ಸ್ಥಳದಿಂದ ಹೊರಟ ಶೋಭಾಯಾತ್ರೆಯು ಹೊಸಪಟ್ಟಣ ಗ್ರಾವದ ಶ್ರೀ ಮುತ್ತಪ್ಪ ದೇವಾಲಯಕ್ಕೆ ತೆರಳಿ ಪಯಂಗಿತ್ತಿ ಪೂಜೆ ನೆರವೇರಿಸಿದ ನಂತರ ಸಮುದಾಯ ಭವನದಲ್ಲಿ ಸಮಾಪ್ತಿಗೊಂಡಿತು. ನಂತರ ಓಣಂ ಸದ್ಯ (ವಿಶೇಷ ಭೋಜನ) ಸವಿದರು. ಎಸ್.ಎನ್.ಡಿ.ಪಿ ನಂಜರಾಯಪಟ್ಟಣ ಶಾಲೆಯ ಅಧ್ಯಕ್ಷ ಟಿ.ಟಿ.ನವೀನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಸಿದ್ದಾಪುರ ಯೂನಿಯನ್ ಎಸ್ಎನ್ಡಿಪಿ ಅಧ್ಯಕ್ಷ ವಿ.ಕೆ.ಲೋಕೇಶ್, ಹಿಂದೂ ಮಲಯಾಳಿ ಸಮಾಜಗಳ ಒಕ್ಕೂಟದ ಅಧ್ಯಕ್ಷ…






