ಮಡಿಕೇರಿ ನ.4 NEWS DESK : ಭಾಗಮಂಡಲದ ಜಾನ್ ಡಾನ್ಸ್ ಗ್ಯಾಲರಿ ನೃತ್ಯ ಸಂಸ್ಥೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಕವಿತೆ, ಕವನಗಳೊಂದಿಗೆ ತಮ್ಮ ಅನಿಸಿಕೆಯನ್ನು ಹಂಚಿಕೊಳ್ಳುತ್ತಾ ಕನ್ನಡ ಪ್ರೇಮವನ್ನ ಮೆರೆದರು. ಜಾನ್ ಡಾನ್ಸ್ ಗ್ಯಾಲರಿಯ ಮುಖ್ಯ ತರಬೇತುದಾರ ಪೃಥ್ವಿ ನಾಯ್ಕ್, ಸಹ ತರಬೇತುದಾರರಾದ ಬೃಂದಾ ಕವನ್, ನಿರ್ದೇಶಕ ನಾಗರಾಜ್ ಮಕ್ಕಳ ಪೋಷಕರು ಹಾಜರಿದ್ದರು.
ಲೇಖಕ: admin
ಮಡಿಕೇರಿ ನ.4 NEWS DESK : ಹೋಬಳಿ ಮಟ್ಟದಲ್ಲಿ ಸಮುದಾಯ ಕೖಷಿಕ ಗುಂಪುಗಳನ್ನು ಪ್ರಾರಂಭಿಸುವ ಮೂಲಕ ಆಯಾ ವಲಯಗಳಲ್ಲಿರುವ ಕಾಫಿ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದು ಗುಣಮಟ್ಟ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ವಿನೂತನ ಯೋಜನೆ ಭಾರತೀಯ ಕಾಫಿ ಮಂಡಳಿ ಮುಂದಿದೆ ಎಂದು ಮಂಡಳಿಯ ಮುಖ್ಯ ಕಾಯ೯ನಿವ೯ಹಣಾಧಿಕಾರಿ ಮತ್ತು ಕಾಯ೯ದಶಿ೯ ಡಾ.ಕೆ.ಜಿ.ಜಗದೀಶ್ ಹೇಳಿದರು. ನಗರದ ಕ್ರಿಸ್ಟಲ್ ಕೋಟ್೯ ಸಭಾಂಗಣದಲ್ಲಿ ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ ನ 145 ನೇ ವಾಷಿ೯ಕ ಮಹಾಸಭೆಗೆ ಉದ್ಘಾಟಿಸಿ ಮಾತನಾಡಿದ ಜಗದೀಶ್, ಕಾಫಿ ಬೆಳೆಯ ಗುಣಮಟ್ಟಕ್ಕೆ ಆದ್ಯತೆ ನೀಡಿದಾಗ ಭಾರತೀಯ ಕಾಫಿ ಬೆಳೆಗೆ ಎಂದಿಗೂ ಹಿನ್ನಡೆಯಾಗಲಾರದು, ಈ ನಿಟ್ಟಿನಲ್ಲಿ ಕಾಫಿ ಬೆಳೆಯ ಗುಣಮಟ್ಟ ಕಾಪಾಡುವ ದೖಷ್ಟಿಯಿಂದ ಪ್ರತೀ ಹೋಬಳಿಯಲ್ಲಿಯೂ 100 ಕೖಷಿಕರನ್ನೊಳಗೊಂಡ ಸಮುದಾಯ ಗುಂಪನ್ನು ಪ್ರಾರಂಭಿಸಿ, ಅವರು ಬೆಳೆದ ಕಾಫಿಯನ್ನು ಸಂಗ್ರಹಿಸಿ ಅದರ ಗುಣಮಟ್ಟದ ಬಗ್ಗೆ ( ಕಾಫಿ ಕಪ್ಪಿಂಗ್ ಸ್ಕೋರ್ ) ಪ್ರಯೋಗಾಲಯದಿಂದ ಮಾಹಿತಿ ಪಡೆಯಲಾಗುತ್ತದೆ, ಗುಣಮಟ್ಟ ಹೆಚ್ಚಳವಾಗಬೇಕೆಂದಾದಲ್ಲಿ ಯಾವ ರೀತಿ ಗುಣಮಟ್ಟ ಹೆಚ್ಚಳ ಮಾಡಬಹುದು ಎಂಬ…
ಮಡಿಕೇರಿ ನ.4 NEWS DESK : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ನ.6 ರಂದು ಮಧ್ಯಾಹ್ನ 2 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಸಾರ್ವಜನಿಕ ಭಕ್ತಾಧಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.
ಮಡಿಕೇರಿ ನ.4 NEWS DESK : ರಾಷ್ಟ್ರೀಯ ಶಿಶು ಕಲ್ಯಾಣ ಸಂಸ್ಥೆಯ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಇನ್ನರ್ವೀಲ್, ರೋಟರಿ ಮಿಸ್ಟಿಹಿಲ್ಸ್, ಲಯನ್ಸ್ ಕ್ಲಬ್ ಹಾಗೂ ರೆಡ್ಕ್ರಾಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನ.18 ರಂದು ‘ರಾಷ್ಟ್ರೀಯ ವರ್ಣಚಿತ್ರ ಸ್ಪರ್ಧೆ’ ನಡೆಯಲಿದೆ. ಹೆಸರು ನೋಂದಾಯಿಸಲು ನ.15 ಕೊನೆಯ ದಿನವಾಗಿದೆ. ಸ್ಪರ್ಧಾ ವಿವರ ಮತ್ತು ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಚೇತನ ಚಿಲುಮೆ (ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹತ್ತಿರ) ಇಲ್ಲಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ. 9880985939, 9480745776 ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.
ಮಡಿಕೇರಿ ನ.4 NEWS DESK : ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ `ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ’ಯು ನ.10 ಮತ್ತು 11 ರಂದು ಕೊಡಗು ಜಿಲ್ಲೆಯ ಐದು ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಸಂಚರಿಸಲಿದ್ದು, ಕನ್ನಡ ರಥಯಾತ್ರೆಯನ್ನು ಬರಮಾಡಿಕೊಳ್ಳುವ ಸಂಬಂಧ ಜಿಲ್ಲಾ, ತಾಲ್ಲೂಕು ಹಾಗೂ ಸ್ಥಳೀಯ ಸಂಸ್ಥೆಗಳು, ವಿವಿಧ ಸರ್ಕಾರೇತರ ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕೋರಿದ್ದಾರೆ. ಕನ್ನಡ ಜ್ಯೋತಿ ರಥಯಾತ್ರೆ ಬರಮಾಡಿಕೊಳ್ಳುವ ಸಂಬಂಧ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಯು ನ.10 ರಂದು ಬೆಳಗ್ಗಿನ ವೇಳೆ ಸಂಪಾಜೆಗೆ ಆಗಮಿಸಲಿದ್ದು, ಎಲ್ಲರೂ ಸೇರಿ ಬರಮಾಡಿಕೊಳ್ಳಬೇಕಿದೆ. ನಂತರ ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಆಗಮಿಸಲಿದೆ. ನಂತರ ಪೊನ್ನಂಪೇಟೆಗೆ ತೆರಳಲಿದೆ. ಬಳಿಕ ನ.11 ರಂದು ಪೊನ್ನಂಪೇಟೆಯಿಂದ ಪಾಲಿಬೆಟ್ಟ-ಸಿದ್ದಾಪುರ ಮಾರ್ಗ ಕುಶಾಲನಗರ ತಲುಪಿ, ಕನ್ನಡ ಕಂಠ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಬಳಿಕ ಸೋಮವಾರಪೇಟೆ…
ಮಡಿಕೇರಿ NEWS DESK ನ.4 : ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಮಂಡಳಿಯನ್ನು ಬಳಸಿಕೊಂಡು ರಾಜ್ಯ ವ್ಯಾಪಿ ಬಡವರ್ಗದ ಮಂದಿಯ ಭೂಮಿಯನ್ನು ಕಬಳಿಸುವ ಪ್ರಯತ್ನಕ್ಕೆ ಮುಂದಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿತು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು ವಕ್ಫ್ ನಿಯಮಗಳನ್ನು ಬದಲಿಸಬೇಕೆಂದು ಒತ್ತಾಯಿಸಿದರು. ಹಲವಾರು ವರ್ಷಗಳಿಂದ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ಜಾಗದ ಆರ್ಟಿಸಿಯಲ್ಲಿ “ವಕ್ಫ್ ಆಸ್ತಿ” ಎಂದು ನಮೂದಿಸಿ ಬಡ ರೈತರಿಗೆ ನೋಟಿಸ್ ನೀಡುತ್ತಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೆಂದೂ ಕಾಣದಷ್ಟು ಇಂಧನ ಬೆಲೆ ಹೆಚ್ಚಳವಾಗಿದೆ. ವಿವಿಧ ತೆರಿಗೆಗಳನ್ನು ಹೆಚ್ಚಿಸುವ ಮೂಲಕ ಜನರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ಬಡವರ್ಗದ ಹಿತಕ್ಕಾಗಿ ಇರುವ ವಾಲ್ಮೀಕಿ ಕಲ್ಯಾಣ ನಿಗಮದ ಹಗರಣ ಸೇರಿದಂತೆ, ಸ್ವತಃ ಸಿಎಂ ಅವರೆ ಸಿಲುಕಿಕೊಂಡಿರುವ ಮುಡಾ…
ಮಡಿಕೇರಿ ನ.4 NEWS DESK : ಚನ್ನಪಟ್ಟಣ ತಾಲ್ಲೂಕು ವಕೀಲರ ಸಂಘದಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಸಂಘದ ಕಚೇರಿಗೆ ಭೇಟಿ ನೀಡಿದ ಸಂದರ್ಭ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಎ.ಎಸ್.ಪೊನ್ನಣ್ಣರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಕೆಪಿಸಿಸಿ ಕಾನೂನು ಘಟಕದ ಸೂರ್ಯ ಮುಕುಂದರಾಜ್ ಮತ್ತಿತರ ಪ್ರಮುಖರು ಹಾಜರಿದ್ದದರು.
ಮಡಿಕೇರಿ ನ.4 NEWS DESK : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪಿ.ಕೆ.ವೆಂಕಟೇಶ್ ಪ್ರಸನ್ನ ಉದ್ಘಾಟಿಸಿದರು. ಹಿರಿಯ ಕವಿಗಳಾದ ಮೂಕಳೆರ ಟೈನಿ ಪೂಣಚ್ಚ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಕಾನಡ್ಕ ಡೀನ ದೇವಯ್ಯ ಪ್ರಾಸ್ತವಿಕ ನುಡಿಗಳನ್ನಾಡಿದರು. ಕವಿಗೋಷ್ಠಿಯಲ್ಲಿ 26 ಕವಿಗಳು ಭಾಗವಹಿಸಿದ್ದು, ಕನ್ನಡ ನಾಡು -ನುಡಿ ಸಂಸ್ಕೃತಿ ಯ ಬಗ್ಗೆ,ಕವನಗಳನ್ನು ವಾಚಿಸಿದರು.ಯಶಿಕ ದೇವಯ್ಯ ಕಾನಡ್ಕ ಪ್ರಾರ್ಥನಾ ನೃತ್ಯ ಮಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಎ.ವಿದ್ಯಾರ್ಥಿನಿಯಾರಾದ ವೃಂದ ನಿರೂಪಣೆ ಮಾಡಿದರು. ಶ್ವೇತಾ ಅತಿಥಿಗಳನ್ನು ಸ್ವಾಗತಿಸಿದರು. ಕವಿಗೋಷ್ಠಿಯಲ್ಲಿ ಕವಿಗಳಿಗೆ ಗೌರವಪೂರ್ವಕವಾಗಿ ಕನ್ನಡ ರಾಜ್ಯೋತ್ಸವದ ಶಾಲನ್ನು ಹಾಕಿ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ಹಾಗೂ ಪುಸ್ತಕವನ್ನು ನೀಡಿ ಗೌರವಿಸಲಾಯಿತು.
ಮಡಿಕೇರಿ ನ.4 NEWS DESK : ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ಸಂಪ್ರದಾಯದಂತೆ ನಡೆಸಿಕೊಂಡು ಬರುತ್ತಿರುವ “ವಿಷ್ಣುಮೂರ್ತಿ ಕೋಲ” (ಚಾಮುಂಡಿ)ವು ನ.8 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ “ವಿಷ್ಣುಮೂರ್ತಿ ಕೋಲ” ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಕೋರಿದ್ದಾರೆ.
ಮಡಿಕೇರಿ ನ.4 NEWS DESK : ನಗರದ ತನಲ್ ನೆರಳಿನ ಮನೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ತನಲ್ ಆಶ್ರಮ ವಾಸಿಗಳು ಹಬ್ಬದ ಪ್ರಯುಕ್ತ ಮಣ್ಣಿನ ಹಣತೆಯನ್ನು ಹಚ್ಚಿ, ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ಹಿರಿಯ ನಿರಾಶ್ರಿತರ ಪಾಲಿಗೆ ಆಶಾ ಕಿರಣವಾಗಿರುವ ಮಡಿಕೇರಿಯ ತನಲ್ ಆಶ್ರಮದಲ್ಲಿ ಪ್ರತಿಯೊಂದು ಹಬ್ಬ ಹರಿ ದಿನಗಳನ್ನು ಆಚರಿಸುವ ಮೂಲಕ ನೊಂದ ಜೀವಗಳ ಮನಸುಗಳಿಗೆ ಸಂತಸ ತುಂಬುತ್ತದೆ ಎಂದು ತನಲ್ ಪ್ರಮುಖರು ತಿಳಿಸಿದರು.






