ಮಡಿಕೇರಿ ನ.22 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎ.ಎಲ್.ಜಿ ಕ್ರೆಸೆಂಟ್ ಶಾಲೆ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್ ಹಾಗೂ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಸಂಯುಕ್ತ ಆಶ್ರಯದಲ್ಲಿ ನ.23 ರಂದು ಮಡಿಕೇರಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ ನಡೆಯಲಿದೆ. ನಗರದ ಮಹದೇವಪೇಟೆಯ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಎಲ್ ಜಿ ಕ್ರೆಸೆಂಟ್ ಶಾಲೆಯ ಅಧ್ಯಕ್ಷ ನಿಜಾಮುದ್ದಿನ್ ಸಿದ್ದೀಖ್ , ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ, ಕೊಡಗು ಜಿಲ್ಲಾ ಕ.ಸಾ.ಪ. ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್…
ಲೇಖಕ: admin
ಮಡಿಕೇರಿ ನ.22 NEWS DESK : ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ತಾಯಿ ಗಂಗಮ್ಮ ನಿಧನಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಸಂತಾಪ ಸೂಚಿಸಿದರು. ಸ್ವಾಮೀಜಿಯವರಿಗೆ ಕರೆ ಮಾಡಿ ಸಂತಾಪ ಸೂಚಿಸಿದ ಶಾಸಕರು ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಭಗವಂತ ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು.
ಮಡಿಕೇರಿ ನ.21 NEWS DESK : ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿ.1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆದೇಶದಂತೆ 2024-25 ನೇ ಸಾಲಿಗೆ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಡಿ.1 ರಿಂದ ಆರಂಭವಾಗಲಿದ್ದು, ಈ ಅವಕಾಶವನ್ನು ರೇತರು ಬಳಸಿಕೊಳ್ಳುವಂತೆ ಮನವಿ ಮಾಡಿದರು. ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಯನ್ನು ಖರೀದಿ ಏಜೆನ್ಸಿ ಯನ್ನಾಗಿ ಸರಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯಲಿದೆ ಎಂದು ಅವರು ತಿಳಿಸಿದರು. ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್ 1 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು,…
ಬೆಂಗಳೂರು ನ.21 NEWS DESK : ಪಡಿತರ ಚೀಟಿ ಪರಿಷ್ಕರಣೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ, ‘ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ, ಬಿಪಿಎಲ್, ಎಪಿಎಲ್ ಕಾರ್ಡ್ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 1,50,59,431 ಕಾರ್ಡ್ಗಳಿವೆ. ಮುಖ್ಯಮಂತ್ರಿಗಳು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಎಲ್ಲಾ (ಬಿಪಿಎಲ್) ಕಾರ್ಡ್ಗಳನ್ನು ಮರುಸ್ಥಾಪಿಸಬೇಕು ಎಂದು ನಿರ್ಧಾರ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸದ್ಯ 1,02,509 ಕಾರ್ಡ್ಗಳನ್ನು ಪರಿಷ್ಕರಣೆ ಮಾಡಿದ್ದೇವೆ. ಉಳಿದ ಎಲ್ಲ ಬಿಪಿಎಲ್ , ಎಪಿಎಲ್ ಕಾರ್ಡ್ಗಳನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮಡಿಕೇರಿ ನ.21 NEWS DESK : ಗಾಯಾಳುವಿನ ಜೀವ ಸಂರಕ್ಷಣೆ ಮತ್ತು ರೋಗಿಗೆ ಅನಿವಾಯ೯ತೆಯಾದ ಸಂದಭ೯ದಲ್ಲಿ ನೀಡಲ್ಪಡುವ ರಕ್ತವನ್ನು ದಾನವಾಗಿ ನೀಡುವ ಮಹತ್ವದ ಸೇವೆ ಕೈಗೊಳ್ಳುವ ರಕ್ತದಾನಿಗಳೇ ನಿಜವಾದ ಸೂಪರ್ ಹೀರೋಗಳಾಗಿದ್ದಾರೆ ಎಂದು ರೋಟರಿ ಮಿಸ್ಟಿ ಹಿಲ್ಸ್ ನಿದೇ೯ಶಕ ಅನಿಲ್ ಹೆಚ್.ಟಿ. ಅಭಿಪ್ರಾಯಪಟ್ಟಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆಯ 7ನೇ ವಾಷಿ೯ಕೋತ್ಸವ ಕಾಯ೯ಕ್ರಮವನ್ನು ಸಸಿಗೆ ನೀರೆರೆದು ಉದ್ಘಾಟಿಸಿದ ಅನಿಲ್ ಹೆಚ್.ಟಿ, ಸಮಾಜಮುಖಿಯಾದ ಮಾನವನಿಗೆ ಎಲ್ಲಾ ರೀತಿಯಲ್ಲಿಯೂ ತೃಪ್ತಿ ನೀಡಬಲ್ಲ ಕಾಯ೯ವಾಗಿ ರಕ್ತದಾನದಂಥ ಸೇವೆ ಕಂಡುಬರುತ್ತದೆ, ರಕ್ತದಾನದ ಮೂಲಕ ದಾನಿಯು ಮತ್ತೊಂದು ಜೀವವನ್ನು ಸಂರಕ್ಷಿಸುತ್ತಾನೆ, ಈ ನಿಟ್ಟಿನಲ್ಲಿ ದೇವರು ಕೂಡ ಮೆಚ್ಚುವ ಕೆಲಸ ಮಾಡಿ, ರಕ್ತವನ್ನು ಸಕಾಲಿಕವಾಗಿ ಪಡೆದು ಜೀವ ಉಳಿಸಿಕೊಳ್ಳುವವನ ಪಾಲಿಗೂ ದಾನಿ ದೇವರಂತೆ ಕಾಣುತ್ತಾನೆ, ರಕ್ತದಾನಿಗಳೇ ಈ ಸಮಾಜದಲ್ಲಿ ನಿಜವಾದ ಸೂಪರ್ ಹೀರೋಗಳಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು. ಜಗತ್ತು ಆಧುನಿಕ ತಂತ್ರಜ್ಞಾನಗಳ ನೆರವಿನಿಂದ ಎಷ್ಟೇ ಮುಂದುವರೆದಿದ್ದರೂ ಇಂದಿಗೂ ಕೃತಕ ರೀತಿಯಲ್ಲಿ ರಕ್ತವನ್ನು ಉತ್ಪಾದಿಸಲು ಸಾಧ್ಯವಿಲ್ಲ, ಹೀಗಾಗಿಯೇ ರಕ್ತಕ್ಕೆ…
ಮಡಿಕೇರಿ ನ.21 NEWS DESK : ಮಡಿಕೇರಿಯ ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನ.24 ರಂದು ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಡಿಕೇರಿಯ ಚೇತನ ಚಿಲುಮೆ ಸಭಾಂಗಣದಲ್ಲಿ ಚುನಾವಣೆ ನಡೆಯಲಿದ್ದು, ಟ್ರಾವಲ್ ಜಾನ್ಸನ್ ಪಿಂಟೋ ಸೇರಿದಂತೆ ಹಲವರು ಕಣದಲ್ಲಿದ್ದಾರೆ. ಹಿಂದುಳಿದ ವರ್ಗ (ಪ್ರವರ್ಗ-ಬಿ) ಟ್ರಾವಲ್ ಜಾನ್ಸನ್ ಪಿಂಟೋ, ಮಹಿಳಾ ವರ್ಗ ನೀತಾ ಕೆ.ಜಿ(ಜೋಸ್ನಾ), ಪ್ಲವೀಯಾ ಪ್ರಮೀಳಾ ಡಿಸೋಜ, ಸಾಮಾನ್ಯ ವರ್ಗ ಮಡಿಕೇರಿಯ ಗಾಡ್ವಿನ್ ಪ್ರಮೋದ್ ಮಸ್ಕರನೇಸ್ (ಪಮ್ಮಿ), ವಿ.ಜೆ.ಟೋನಿ, ಪೌಲೋಸ್ ಕೆ.ಕೆ.(ಜಾನ್ಸನ್), ವಿರಾಜಪೇಟೆಯ ಮರ್ವಿನ್ ಲೋಬೋ, ಕುಶಾಲನಗರದ ಎ.ಜಿ.ಯೇಸುದಾಸ್, ಸೋಮವಾರಪೇಟೆ ವಿ.ಎ.ಲಾರೆನ್ಸ್, ಮಡಿಕೇರಿಯ ಸ್ಯಾಮ್ಯೂವೆಲ್ ಜೆ. ಇನ್ನೂ ಅನೇಕರು ಸ್ಪರ್ಧೆಯಲ್ಲಿದ್ದಾರೆ. ಇಲ್ಲಿ ಸೂಚಿಸಿರುವ ಅಭ್ಯರ್ಥಿಗಳಿಗೆ ಮತ ನೀಡಿ ಜಯಶೀಲರನ್ನಾಗಿ ಮಾಡುವಂತೆ ಜಾನ್ಸನ್ ಪಿಂಟೋ ಮನವಿ ಮಾಡಿದ್ದಾರೆ.
ಮಡಿಕೇರಿ ನ.21 NEWS DESK : ವಿರಾಜಪೇಟೆ ತಾಲ್ಲೂಕು ಮೈದಾನದಲ್ಲಿ ನಡೆದ ಕಲ್ಲುಬಾಯ್ಸ್ ಕಲ್ಲುಬಾಣೆ ಲೈಕ್ಸ್ ಫ್ಯಾಶನ್ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ನಿಯೋನ್ ಎಫ್.ಸಿ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸುವುದರ ಮೂಲಕ ಅತ್ಯಾಕರ್ಷಕ ಟ್ರೋಫಿಯೊಂದಿಗೆ ಒಂದು ಲಕ್ಷದ 25 ಸಾವಿರ ರೂ ನಗದು ತಮ್ಮದಾಗಿಸಿಕೊಂಡರು. ಜಿದ್ದಾಜಿದ್ದಿನಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ನಿಯೋನ್ ಎಫ್.ಸಿ ತಂಡವು ಕೊಡಗಿನ ಬಲಿಷ್ಠ ತಂಡವಾದ ಮಿಡ್ ಸಿಟಿ ಸುಂಟ್ಟಿಕೊಪ್ಪ ತಂಡವನ್ನು ಎದುರಿಸಿತು. ಎರಡು ತಂಡವು ಫೈನಲ್ ಪಂದ್ಯದಲ್ಲಿ 1-1 ಗೋಲುಗಳನ್ನು ಬಾರಿಸಿ ಸಮಬಲ ಸಾಧಿಸಿತು. ಅಂತಿಮವಾಗಿ ಪೆನಾಲ್ಟಿ ಶೂಟೌಟ್ ನಲ್ಲಿ 2-1 ಗೋಲುಗಳ ಅಂತರದಿಂದ ನಿಯೋನ್ ಎಫ್.ಸಿ ಗೆಲುವು ಸಾಧಿಸಿತು. ಇದಕ್ಕೂ ಮೊದಲು ನಡೆದ ಮೊದಲನೇ ಸೆಮಿಫೈನಲ್ ಪಂದ್ಯವು ನಿಯೋನ್ ಎಫ್.ಸಿ ಅಮ್ಮತ್ತಿ ಹಾಗೂ ಟ್ರೆಡೀಶನಲ್ ಟ್ರೂರಿಸಮ್ ತಂಡಗಳ ನಡುವೆ ನಡೆಯಿತು. ಎರಡು ತಂಡಗಳು ಯಾವುದೇ ಗೋಲುಗಳಿಸದೆ ಸಮಬಲ ಸಾಧಿಸಿತು. ಪೆನಾಲ್ಟಿ ಶೂಟೌಟ್ ನಲ್ಲಿ ಕೂಡ ಎರಡು ತಂಡಗಳು 5-5 ಗೋಲುಗಳನ್ನು ಬಾರಿಸಿ ಸಮಬಲ ಸಾಧಿಸಿತು. ಅಂತಿಮವಾಗಿ…
ಮಡಿಕೇರಿ ನ.21 NEWS DESK : ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ನ.23 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನಿಡ್ತ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಮತ್ತು ಚೆಟ್ಟಳ್ಳಿ, ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಮತ್ತು ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಎಲ್ಲಾ ವಿಧದ ಮದ್ಯ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿರುವ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅದಿಭೋಗದಾರರು ಮತ್ತು ಸಂದರ್ಭಾನುಸಾರ ಮುಚ್ಚತಕ್ಕದ್ದು ಹಾಗೂ ಮೊಹರು…
ನವದೆಹಲಿ ನ.21 NEWS DESK : ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಅವರು ಮಾತನಾಡಿದರು. ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ಪಶುಸಂಗೋಪನಾ ಸಚಿವನಾಗಿದ್ದು, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಯಿತು ಎಂದರು. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ :: …
ಕುಶಾಲನಗರ ನ.21 NEWS DESK : ಚಿಕ್ಲಿಹೊಳೆ ಜಲಾಶಯದ ಬಳಿ ಇರುವ ಕಟ್ಟೆಹಾಡಿಯಲ್ಲಿ ಹಾಡಿಯ ನಿವಾಸಿಗಳು ಗ್ರಾಮ ಸಭೆ ನಡೆಸಿ ಗ್ರಾಮ ಅರಣ್ಯ ಸಮಿತಿಯನ್ನು ರಚಿಸಿದರು. ತಲಾ ತಲಾಂತರಗಳಿAದ ಕಾಡಿನಲ್ಲಿ ವಾಸ ಮಾಡಿಕೊಂಡು ಬರುತ್ತಿರುವ ಆದಿವಾಸಿಗಳನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಗಿರಿಜನ ಮುಖಂಡರು ಒತ್ತಾಯಿಸಿದರು. ಕಟ್ಟೆಹಾಡಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿ ಜೆ.ಎ.ಅಪ್ಪು, ಉಪಾಧ್ಯಕ್ಷರಾಗಿ ಜೆ.ಆರ್.ಗೌರಿ, ಕಾರ್ಯದರ್ಶಿಯಾಗಿ ಜೆ.ಎಸ್.ಚಂದ್ರಿಕಾ, ಸಮಿತಿಯ ಸದಸ್ಯರಾಗಿ ಅಪ್ಪಣ್ಣ, ಪಾಪು, ಸುನಿಲ್, ರವಿ, ಜೆ.ಕೆ.ಶಿವು, ಜೆ.ಪಿ.ಅಣ್ಣಯ್ಯ, ಜೆ.ಎಂ.ರಮೇಶ್, ಜೆ.ಆರ್.ಸುರೇಶ, ಜೆ.ಎಸ್.ಅಶೋಕ್, ಜೆ.ಎ.ಪುಟ್ಟರಾಜು, ಜೆ.ಎ.ರೂಪ ಹಾಗೂ ಜೆ.ಬಿ.ರಾಜು ಆಯ್ಕೆಯಾದರು. ಈ ಸಂಬAಧಿತ ಕಟ್ಟೆಹಾಡಿ ಗ್ರಾಮ ಅರಣ್ಯ ಸಮಿತಿಯ ನಾಮಫಲಕವನ್ನು ಗಿರಿಜನ ಮುಖಂಡರಾದ ಆರ್.ಕೆ.ಚಂದ್ರು ಹಾಗೂ ಜೆ.ಎಸ್.ಕಾಳಿಂಗ ಉದ್ಘಾಟಿಸಿದರು. ಬಳಿಕ ಮಾತನಾಡಿದ ಮುಖಂಡರು ಅನುಸೂಚಿತ ಬುಡಕಟ್ಟು ಹಾಗೂ ಇತರೇ ಪಾರಂಪರಿಕ ಅರಣ್ಯವಾಸಿಗಳ ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ ಅಧಿನಿಯಮದಡಿ ಅರಣ್ಯ ಸಮಿತಿಯನ್ನು ಮೊದಲ ಬಾರಿಗೆ ಕಟ್ಟೆಹಾಡಿಯಲ್ಲಿ ಆರಂಭಿಸಲಾಗಿದೆ. ಪರಿಸರ ಸಂರಕ್ಷಣೆಯ ಸೋಗಿನಲ್ಲಿ, ಹುಲಿ ಸಂರಕ್ಷಿತ ಯೋಜನೆಗಳ ನೆಪದಲ್ಲಿ ತಲಾ…






