ಬೆಂಗಳೂರು ಜ.3 NEWS DESK : ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಬೆಂಗಳೂರಿಗೆ ಆಗಮಿಸಿದ್ದು, ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.
ಲೇಖಕ: admin
ಕಡಂಗ ಜ.3 NEWS DESK : ಮಡಿಕೇರಿ ತಾಲ್ಲೂಕಿನ ಅರಪಟ್ಟು ಗ್ರಾಮದ ಶ್ರೀ ಭಗವತಿ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ಚಂಡಿಕಾ ಹೋಮ, ಸುಹಾಸಿನಿ ಪೂಜೆ, ದ್ವದಶ ಮೂರ್ತಿ ಆರಾಧನೆ ಪೂಜೆಗಳು ನೆರವೇರಿತು. ಅರಪಟ್ಟು ಪೂದವಾಡ ಗ್ರಾಮಸ್ಥರು, ದೇವಸ್ಥಾನದ ತಕ್ಕರು, ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ 2008 ರಿಂದ ಶ್ರೀ ಭಗವತಿ ಶ್ರೀ ಪಟ್ಟೋಟು ಈಶ್ವರ ಶ್ರೀ ಮಂದಣ ಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠ ಜೀರ್ಣೋದ್ಧಾರ ಹಾಗೂ ಇನ್ನಿತರ ಕಾರ್ಯಗಳಲ್ಲಿ ಜ್ಯೋತಿಷ್ಯ ಸಲಹೆ ಸೂಚನೆಗಳನ್ನು ನೀಡುವುದರ ಮುಖಾಂತರ ದೇವಸ್ಥಾನದ ಅಭಿವೃದ್ಧಿಗೆ ಪಾತ್ರರಾದ ಕಕ್ಕಬ್ಬೆ ಅಮ್ಮಂಗೇರಿ ಕಣಿಯರ ಕುಟುಂಬದ ಜ್ಯೋತಿಷಿ ಹಾಗೂ ಶ್ರೀ ಇಗ್ಗುತ್ತಪ್ಪ ದೇವಸ್ಥಾನದ ಜ್ಯೋತಿಷಿಗಳಾದ ಶ್ರೀ ಶಶಿಕುಮಾರ್ ಪಂಡಿತ್ ಅವರಿಗೆ ಊರಿನವರು ಹಾಗೂ ಆಡಳಿತ ಮಂಡಳಿ ಸದಸ್ಯರು ದೇವಸ್ಥಾನದ ಸನ್ನಿಧಿಯಲ್ಲಿ ಸನ್ಮಾನಿಸಿ ಗೌರವಿಸಿದರು. ವರದಿ : ನೌಫಲ್
ಮಡಿಕೇರಿ ಜ.3 NEWS DESK : ಮದೆ-ಬೆಟ್ಟತ್ತೂರು-ಚೇರಂಬಾಣೆ ರಸ್ತೆ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಆದೇಶದ ಮೇರೆಗೆ ಈ ಕಾಮಗಾರಿ ನಡೆಸಲಾಗುತ್ತಿದ್ದು, ಗುಣಮಟ್ಟ ಕಾಯ್ದುಕೊಂಡು ಶೀಘ್ರವಾಗಿ ಕಾಮಗಾರಿಯನ್ನು ಮುಗಿಸಿಕೊಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ನಾಪೋಕ್ಲು ಜ.3 NEWS DESK : ಮರಂದೋಡ ಗ್ರಾಮದ ಕೊಡವ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷರಾದ ಅನ್ನಾಡಿಯಂಡ ದಿಲೀಪ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮರಂದೋಡ ಗ್ರಾಮದ ಕೊಡವ ಕುಟುಂಬಸ್ಥರು ವರ್ಷ ಪ್ರತಿ ನಡೆಸುವ ಪುತ್ತರಿ ಕೋಲ್ ಮಂದ್, ಈಡ್ ಮಂದ್ಗಳನ್ನು ಮುಂದಿನ ಯುವ ಪೀಳಿಗೆಗೆ ನಡೆಸಿಕೊಂಡು ಹೋಗುವಂತೆ ಕರೆ ನೀಡಲಾಯಿತು. ಪುತ್ತರಿ ಹಬ್ಬದಲ್ಲಿ ಮಂದ್ ಗೆ ತೆರಳುವಾಗ ಕೊಡವ ಸಂಪ್ರದಾಯದಲ್ಲಿ ಕಡ್ಡಾಯವಾಗಿ ಕುಪ್ಪಸ ಧರಿಸುವಂತೆ ನಿರ್ಣಯ ಮಾಡಲಾಯಿತು. ಮೃತಪಟ್ಟ ಸಂಘದ ಸದಸ್ಯರ ಕುಟುಂಬಕ್ಕೆ ರೂ.25,000 ನೀಡುವುದನ್ನು ರೂ. 30,000ಕ್ಕೆ ಹೆಚ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಮುಂದಿನ ಸಾಲಿಗೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಸಭೆಯಲ್ಲಿ ಸಂಘದ ಕಾರ್ಯದರ್ಶಿ ಮರ್ಚಂಡ ದೇವಯ್ಯ, ಆಡಳಿತ ಮಂಡಳಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯ ಚೋಯಮಾಡಂಡ ಹರೀಶ್ ಮೊಣ್ಣಪ್ಪ, ಮರ್ಚಂಡ ಗಣೇಶ್ ಪೊನ್ನಪ್ಪ, ಊರಿನ ತಕ್ಕರಾದ ಮರ್ಚಂಡ ಅಯ್ಯಪ್ಪ, ಮೇರಿಯಂಡ ಸೋಮಯ್ಯ, ಚೋಯಮಾಡಂಡ ಗಣಪತಿ, ಅನ್ನಾಡಿಯಂಡ ಗಣಪತಿ, ಮರ್ಚಂಡ ತಿಮ್ಮಯ್ಯ, ಚೋಯಮಾಡಂಡ ಪೂಣಚ್ಚ ಪುತ್ತರಿ ಹಬ್ಬದ ಆಚಾರ, ವಿಚಾರ,…
ಸುಂಟಿಕೊಪ್ಪ,ಜ.3 NEWS DESK : ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಜ.5 ರಂದು ಸಂಜೆ 6 ಗಂಟೆಗೆ ಶ್ರೀ ನಾಗದೇವರಿಗೆ ಆಶ್ಲೇಷ ಪೂಜೆಯನ್ನು ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಂ.ಸುರೇಶ್ ತಿಳಿಸಿದ್ದಾರೆ.
ಮಡಿಕೇರಿ ಜ.3 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ. ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನವಾಗಿದೆ. ಅರ್ಹತೆಗಳು :: ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನಿಗಧಿಪಡಿಸಿರುವ ವಾರ್ಷಿಕ ಆದಾಯ ಮಿತಿ:- ಪ್ರವರ್ಗ-1 ರೂ. 4.50 ಲಕ್ಷ, ಪ್ರವರ್ಗ-2ಎ, 3ಎ, 3ಬಿ ರೂ. 3.50 ಲಕ್ಷ ಮಿತಿಯಲ್ಲಿರಬೇಕು. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು. ವಿಶ್ವವಿದ್ಯಾಲಯ/ ಅಧಿಕೃತ ಸಂಸ್ಥೆಗಳಲ್ಲಿನ ಸಂಶೋಧನಾ ಮಾರ್ಗದರ್ಶನದಡಿ…
ಮಡಿಕೇರಿ ಜ.3 NEWS DESK : ವೃತ್ತಿಪರ ಶಿಕ್ಷಣ ಮೊದಲನೇ ವರ್ಷದಲ್ಲಿ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳಿಗೆ (ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರಿಯ ಸೈನಿಕ ಮಂಡಳಿಯಿಂದ ನೀಡುವ 2024-25 ನೇ ಸಾಲಿನ ಪ್ರಧಾನಮಂತ್ರಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.3 ರವರೆಗೆ ಕೇಂದ್ರೀಯ ಸೈನಿಕ ಮಂಡಳಿಯು ಮತ್ತೂಮ್ಮೆ ಅವಕಾಶ ಕಲ್ಪಿಸಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು (online.ksb.gov.in) ನಲ್ಲಿ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಜ.3 NEWS DESK : ಹಿರಿಯ ನಾಗರಿಕರ ವೇದಿಕೆ ಹಾಗೂ ಮಡಿಕೇರಿ ಲಯನ್ಸ್ ಸಂಸ್ಥೆಯ ಸಹಯೋಗದಲ್ಲಿ ಜ.10 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರ ತನಕ ಮಡಿಕೇರಿಯ ಲಯನ್ಸ ಕ್ಲಬ್ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ‘ಕಿವಿ ತಪಾಸಣಾ ಶಿಬಿರ’ ನಡೆಯಲಿದೆ ಎಂದು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರು ತಿಳಿಸಿದ್ದಾರೆ.
ಮಡಿಕೇರಿ NEWS DESK ಜ.2 : ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತುಂಜಯ ದೇವಾಲಯದಲ್ಲಿ ವಸ್ತç ಸಂಹಿತೆ ವಿಚಾರದಲ್ಲಿ ಉಂಟಾದ ಗೊಂದಲದ ಬಳಿಕ ಎರಡು ಸಮುದಾಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅವಹೇಳನ ಮಾಡುತ್ತಿರುವುದು ಕಂಡು ಬಂದಿದ್ದು, ತಪ್ಪಿತಸ್ಥರ ವಿರುದ್ಧ ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ಪಿ ಯಾವುದೇ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡುವುದು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಪ್ರತ್ಯೇಕ ದೂರುಗಳನ್ನು ಆಧರಿಸಿ ಅನುದೀಪು ಹಾಗೂ ಅಯ್ಯಪ್ಪ ಎಂಬಿಬ್ಬರ ವಿರುದ್ಧ ದೂರು ದಾಖಲಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದರು. ದೇವಾಲಯದ ವಿಚಾರದ ಕುರಿತು ಎರಡೂ ಸಮುದಾಯಗಳ ಮುಖಂಡರ ಜೊತೆಯಲ್ಲಿ ಶಾಂತಿಸಭೆ ನಡೆಸಿ ಪರಸ್ಪರ ಸಮಸ್ಯೆ ಪರಿಹರಿಸಿಕೊಳ್ಳುವಂತೆ ಈಗಾಗಲೇ ಸೂಚಿಸಲಾಗಿದೆ. ಎರಡೂ ಸಮುದಾಯದ ಮುಖಂಡರು…
ಮಡಿಕೇರಿ ಜ.2 NEWS DESK : ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕಾರ್ಯಾಗಾರವು ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮೈಸೂರು ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ಬೋಧಕರಾದ ಡಾ. ಜೆ.ಆರ್.ಪರಮೇಶ್ ಮಾಹಿತಿ ನೀಡಿ ಹವಾಮಾನ ಇಲಾಖೆಯು ಕಾಲ ಕಾಲಕ್ಕೆ ಹೊರಡಿಸುವ ಮುನ್ಸೂಚನೆಯ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿದ್ದಲ್ಲಿ ಪ್ರಾಕೃತಿಕ ವಿಕೋಪವನ್ನು ತಡೆಯಬಹುದಾಗಿದೆ ಎಂದರು. ಸ್ಥಳೀಯ ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನಿಯೋಜನೆ, ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಜೊತೆ ಸಮನ್ವಯತೆ ಸಾಧಿಸುವುದು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಿ, ಮಾಹಿತಿ ಹಂಚಿಕೊಳ್ಳುವುದು, ಹಾಗೆಯೇ ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚು ಹೆಚ್ಚು ಮಾಹಿತಿ ವಿನಿಮಯ ಮಾಡಿಕೊಳ್ಳುವುದು. ಹೀಗೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು. ಕಂದಾಯ, ಪೊಲೀಸ್, ಗೃಹರಕ್ಷಕ ದಳ, ಅಗ್ನಿಶಾಮಕ ದಳ ಹಾಗೆಯೇ ಸೆಸ್ಕ್, ಅರಣ್ಯ, ಪಂಚಾಯತ್ ರಾಜ್,…






