ಮಡಿಕೇರಿ ನ.2 NEWS DESK : ಮಲಯಾಳಿಗರ ಸಂಸ್ಕೃತಿ, ಸಂಪ್ರದಾಯದ ಅನಾವರಣದೊಂದಿಗೆ ಮಡಿಕೇರಿಯಲ್ಲಿ ಓಣಾಘೋಷಂ ಹಾಗೂ ಓಣಂ ಸಧ್ಯ ಕಾರ್ಯಕ್ರಮ ನಡೆಯಿತು. ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ಹಿಂದೂ ಮಲಯಾಳಿ ಸಮಾಜ ಮಡಿಕೇರಿ ಘಟಕದ ವತಿಯಿಂದ ಓಣಂ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಲಯಾಳಿಗರು ಒಂದಾಗಿ ಸಂಭ್ರಮಿಸಿದರು. ಕೇರಳದ ಸಾಂಪ್ರದಾಯಿಕ ನೃತ್ಯಗಳು, ಹಾಡು ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಭ್ರಮಕ್ಕೆ ಮೆರುಗು ನೀಡಿದವು. ಇದರೊಂದಿಗೆ ಹಬ್ಬದ ಸಧ್ಯ (ಭೋಜನ) ಸವಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಓಣಂ ಅದ್ಭುತ ಐತಿಹ್ಯ, ಸಂಪ್ರದಾಯ ಹೊಂದಿರುವ ಹಬ್ಬವಾಗಿದೆ. ಸಾರ್ವಜನಿಕವಾಗಿ ಹಬ್ಬ ಆಚರಣೆ ಮೂಲಕ ಜನಾಂಗವನ್ನು ಒಗ್ಗಟ್ಟಿಸುವ ಕೆಲಸವಾಗುತ್ತಿದೆ. ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ರೀತಿಯ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಎಲ್ಲಿದ್ದರೂ ಸಂಸ್ಕೃತಿ, ಸಂಪ್ರದಾಯ ಮರೆಯಬಾರದು ಎಂದು ಕರೆ ನೀಡಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದೂ ಸಮಾಜದಲ್ಲಿ ವಿವಿಧ ಆಚಾರ, ವಿಚಾರ, ಪದ್ಧತಿಗಳಿವೆ. ಆದರೆ ವಿವಿಧತೆಯಲ್ಲಿ ಏಕತೆಯನ್ನು…
ಲೇಖಕ: admin
ಸುಂಟಿಕೊಪ್ಪ ನ.1 NEWS DESK : ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿ, ಪರಂಪರೆ ಮತ್ತು ಜನತೆ ಎಲ್ಲಾದರಲ್ಲಿಯೂ ಒಂದು ದಿಮಂತ ಶಕ್ತಿಯನ್ನು ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡಿದ್ದು, ಐತಿಹಾಸಿಕ ಸಾಂಸ್ಕೃತಿಕ ಶ್ರೀಮಂತಿಕೆಯಿಂದ ಇಡೀ ವಿಶ್ವದ ಗಮನಸೆಳೆದ ನಾಡು ಕರ್ನಾಟಕ ಎಂದು ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಸುನಿತಾ ಗಿರೀಶ್ ಬಣ್ಣಿಸಿದ್ದಾರೆ. ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೇರವೇರಿಸಿ ಮುಖ್ಯ ಭಾಷಣ ಮಾಡಿದ ಅವರು, ಕರ್ನಾಟಕದಂತಹ ಪುಣ್ಯಭೂಮಿ ತಪಸ್ಸಿನ ಭೂಮಿಯಲ್ಲಿ ಜನಸಿ ಬಾಳುತ್ತಿರುವವರು ನಮ್ಮ ಸುದೈವ ಮತ್ತು ಪೂರ್ವ ಜನ್ಮದ ಪುಣ್ಯಫಲವೆಂದು ವರ್ಣಿಸಿದರು. ಇಂತಹ ನಾಡು, ನುಡಿ, ಸಂಸ್ಕೃತಿಗಾಗಿ ಕನ್ನಡ ನಾಡಿನ ಏಕೀಕರಣಕ್ಕಾಗಿ ಹೋರಾಡಿದಂತಹ ಮಹಾನು ಚೇತನಗಳನ್ನು ಸ್ಮರಿಸಿಕೊಳ್ಳುತ್ತಾ ಅವರಿಗೆ ನುಡಿ ನಮನ ಸಲ್ಲಿಸಿ ಶಿರಬಾಗಿ ನಮಿಸುವುದು ನಮ್ಮ ಆದ್ಯ ಕರ್ತವ್ಯ ಎಂದರು. ಕನ್ನಡ ಭಾಷೆ, ನಾಡು, ನುಡಿಯ ಬಗ್ಗೆ ಅಪಾರವಾದ ಸಾಧನೆ ಮಾಡಿದವರು ರಾಜ್ಯಕ್ಕೆ ಹೆಸರು ತಂದವರು ವಿಶ್ವಮಟ್ಟದಲ್ಲಿ ಹೆಸರು ತಂದವರು…
ವಿರಾಜಪೇಟೆ ನ.2 NEWS DESK : ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಕನ್ನಡ ಭಾಷಾ ವಿಭಾಗ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ “ನುಡಿನೃತ್ಯ ಸಂಭ್ರಮ” ಕಾರ್ಯಕ್ರಮ ನಡೆಯಿತು. ಕನ್ನಡ ಭಾಷಾ ವಿಭಾಗ ಹಾಗೂ ಸಾಹಿತ್ಯ ಸಂಘ ಮತ್ತು ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಕಾಲೇಜಿನಲ್ಲಿ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಕನ್ನಡ ಭಾಷಾ ವಿಭಾಗದ ಮುಖ್ಯಸ್ಥ ಅರ್ಜುನ್ ಮೌರ್ಯ ನಗಾರಿ ಬಾರಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಕನ್ನಡ ವಿದ್ಯಾರ್ಥಿ ಬಳಗದ ಎಲ್ಲಾ ವಿದ್ಯಾರ್ಥಿಗಳಿಂದ ಕೋಟಿ ಕಂಠ ಗಾಯನ ನಡೆಯಿತು. ನಂತರ ಪದವಿ ವಿಭಾಗದ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು ಅವರು ಸೈಂಟ್ ಆನ್ಸ್ ನುಡಿನೃತ್ಯ ಸಂಭ್ರಮದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು. ಕನ್ನಡ ಬಳಗದ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಜೇಶ್ ಪದ್ಮನಾಭ, ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಬಿ.ಡಿ.ಹೇಮ, ಕನ್ನಡ…
ಮಡಿಕೇರಿ ನ.2 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ದೇಶದ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ 40ನೇ ಪುಣ್ಯಸ್ಮರಣೆ, ಕೇಂದ್ರದ ಮಾಜಿ ಉಪ ಪ್ರಧಾನಿ ದಿ.ಸರದಾರ್ ವಲ್ಲಭಬಾಯಿ ಪಟೇಲ್ರ 149ನೇ ಜನ್ಮದಿನಾಚರಣೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ದಿ.ಅಪ್ಪಯ್ಯ ಗೌಡರ 187ನೇ ಸಂಸ್ಮರಣಾ ದಿನವನ್ನು ಆಚರಿಸಲಾಯಿತು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಹನೀಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು, ದೇಶದ ಅಪ್ರತಿಮ ಮಹಿಳೆ ಎಸಿಕೊಂಡ ಇಂದಿರಾಗಾಂಧಿ ಅವರ ವ್ಯಕ್ತಿತ್ವ, ಸಾಧನೆ, ಹಿರಿಮೆ ಮತ್ತು ಬಡ ಹಾಗೂ ಶೋಷಿತ ವರ್ಗಕ್ಕೆ ಅವರು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಜಿಲ್ಲಾ ಗ್ಯಾರೆಂಟಿ ಸಮಿತಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಹಂಸ, ಮೂಡ ಅಧ್ಯಕ್ಷ ರಾಜೇಶ್ ಎಲ್ಲಪ್ಪ, ಕಾಂಗ್ರೆಸ್ ಮುಖಂಡರುಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಭಾಗಮಂಡಲ NEWS DESK ನ.1 : ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಪ್ರಾಂಶುಪಾಲ ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಭಾಗಮಂಡಲ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುನೀಲ್ ಪತ್ರವೋ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗಮಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳನ ರವಿ, ಕುಂದಚೇರಿ ಪಂಚಾಯಿತಿ ಸದಸ್ಯ ಹಾರಿಸ್, ಕುಯ್ಯಮುಡಿ ಮನೋಜ್, ನಿಲಯ ಪಾಲಕ ದೀಪಕ್ ಕೆ.ಕೆ, ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಬೆಳಗ್ಗೆ ಶಾಲೆಯ ವತಿಯಿಂದ ತಾಯಿ ಭುವನೇಶ್ವರಿ ದೇವಿಯ ಕಲಾಕೃತಿಯೊಂದಿಗೆ ಆಕರ್ಷಕ ಜಾಥಾ ನಡೆಯಿತು. ಕನ್ನಡ ಶಿಕ್ಷಕ ರಘು ನಿರೂಪಿಸಿದರು. ಭಾಗಮಂಡಲ ವಿನಾಯಕ ಟ್ರಸ್ಟ್ ವತಿಯಿಂದ ಮಕ್ಕಳಿಗೆ ಸಿಹಿ ಹಂಚಲಾಯಿತು.
ಮಡಿಕೇರಿ NEWS DESK ನ.1 : ಮಡಿಕೇರಿ ನಗರದ ಓಂಕಾರ್ ಆಟೋ ಚಾಲಕರ ಸಂಘದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಹಿರಿಯರಾದ ಬಿ.ಬಿ.ಮಾದಮ್ಮಯ್ಯ, ಗೌರಮ್ಮ ದಂಪತಿ ಹಾಗೂ ಓಂಕಾರ್ ಜನರೇಟರ್ಸ್ ನ ಮಾಲೀಕ ತಿಮ್ಮಯ್ಯ ಅವರು ಧ್ವಜಾರೋಹಣದ ನಂತರ ಕನ್ನಡ ಸಂದೇಶ ನೀಡಿದರು. ಸಂಘದ ಪದಾಧಿಕಾರಿಗಳಾದ ಯತೀಶ್, ವಿಜಯ್, ಸುನಿಲ್, ಆದಿ, ಕಾರ್ತಿಕ್, ಮೋಹನ್, ಸುಂದರ್, ಹರ್ಷಿತ್, ಹೇಮರಾಜ್, ಬಡೆಸಾಹೇಬ್ ಮತ್ತಿತರರು ಹಾಜರಿದ್ದು ಸಿಹಿಹಂಚಿ ಸಂಭ್ರಮಿಸಿದರು.
ಮಡಿಕೇರಿ NEWS DESK ನ.1 : ಕಾಂಕ್ರಿಟ್ ಯಂತ್ರದಲ್ಲಿ ಕೈಕಳೆದುಕೊಂಡ ಹರೀಶ್ ಶೇಷಪ್ಪ ಅವರ ನೆರವಿಗೆ ಮಡಿಕೇರಿಯ ಗುಬ್ಬಿ ಸ್ಟುಡಿಯೋ ಮುಂದೆ ಬಂದಿದೆ. ಹರೀಶ್ ಅವರ ಪುತ್ರಿಯ ವಿದ್ಯಾಭ್ಯಾಸಕ್ಕಾಗಿ ನಗರದಲ್ಲಿ ಸಂಗ್ರಹಿಸಿದ 81 ಸಾವಿರ ರೂಪಾಯಿಗಳನ್ನು ಗುಬ್ಬಿ ಸ್ಟುಡಿಯೋದ ಪ್ರಮುಖರು ಹರೀಶ್ ಕುಟುಂಬಕ್ಕೆ ಹಸ್ತಾಂತರಿಸಿದರು. ನಗರದ ವಿಜಯ ವಿನಯಕ ದೇವಸ್ಥಾನದ ಬಳಿಯಿಂದ ಆರ್ಥಿಕ ನೆರವು ಸಂಗ್ರಹ ಕಾರ್ಯ ಆರಂಭಗೊಂಡಿತು. ನಗರಸಭಾ ಸದಸ್ಯೆ ಸವಿತಾ ರಾಕೇಶ್, ಶಕ್ತಿ ದಿನ ಪತ್ರಿಕೆಯ ಉಪಸಂಪಾದಕ ಸಂತೋಷ್ ಕುಡೆಕಲ್, ಶೋಭಾ ಮುತ್ತಪ್ಪ, ಗಾನವಿ, ಅಕ್ಷಯ್ ಎಸ್ ಎಮ್ ಗ್ರಾಫಿಕ್ಸ್, ಹರ್ಷಿತ ಶೆಟ್ಟಿ, ಜಯಶ್ರೀ ಕುಯ್ಯಮುಡಿ, ಅನಿತಾ, ದೀಕ್ಷಿತ್, ಜಾನ್ಸನ್, ರಂಜಿತ್ ಮ್ಯಾಡಿ, ಸುರೇಶ್ ಕುಲಾಲ್, ಕಿರಣ್, ಉದಯ, ರಂಜಿತ್ ಶೆಟ್ಟಿ, ವಿನಯ್ ಗುಬ್ಬಿ ಹಾಜರಿದ್ದರು. ನಗರದ ವಿವಿಧೆಡೆ ತೆರಳಿ ದಾನಿಗಳಿಂದ ಹಣ ಸಂಗ್ರಹಿಸಲಾಯಿತು. ಸಂಜೆ ವೇಳೆಗೆ 81 ಸಾವಿರ ರೂ. ಸಂಗ್ರಹವಾಯಿತು. ಗುಬ್ಬಿ ಸ್ಟುಡಿಯೋದ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೈಸೂರು NEWS DESK ನ.1 : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ತಾರಾಲಯಕ್ಕೆ ಇಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ಕಾಸ್ಮೊಸ್ ಯೋಜನೆಯ ಪ್ರಗತಿಯನ್ನು ಪರಾಮರ್ಶಿಸಿದರು. ಈ ಅತ್ಯಾಧುನಿಕ ಸೌಲಭ್ಯವನ್ನು ಭಾರತೀಯ ಖಗೋಳ ವಿಜ್ಞಾನ ಸಂಸ್ಥೆ ನಿರ್ಮಿಸಿದ್ದು, ಇದು ವಿಶ್ವದ ಮೊದಲ ಗುಮ್ಮಟಾಕಾರದ ಎಲ್.ಇ.ಡಿ ಪ್ಲಾನೆಟೋರಿಯಮ್ ನ ನೆಲೆಯಾಗಿದೆ. ಈ ಪ್ಲಾನಿಟೋರಿಮ್ ನಿರ್ಮಾಣಗೊಳ್ಳುತ್ತಿರುವ ಸ್ಥಳವನ್ನು ಯದುವೀರ್ ಅವರ ತಾತನವರಾದ ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಬಳುವಳಿಯಾಗಿ ನೀಡಿದ್ದು ಪ್ರಸ್ತುತ ಇದನ್ನು ಶ್ರೀ ಜಯಚಾಮರಾಜ ಉನ್ನತ ಶಿಕ್ಷಣ ಕೇಂದ್ರ ಎಂದು ಕರೆಯಲಾಗುತ್ತದೆ. ಈ ಕಾಸ್ಮೊಸ್ ಸೆಂಟರ್ ಶಿಕ್ಷಣ, ತರಬೇತಿ, ಉನ್ನತ ಕೌಶಲ್ಯವನ್ನು ಸಬಲೀಕರಣಗೊಳಿಸಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಉನ್ನತ-ತಂತ್ರಜ್ಞಾನದ ಕೇಂದ್ರವಾಗಿ ರ್ಯನಿರ್ವಹಿಸುತ್ತದೆ. ಕೇಂದ್ರದ ಗೌರವಾನ್ವಿತ ವಿತ್ತ ಸಚಿವರಾದ ಶ್ರೀಮತಿ ನಿರ್ಮಾಣ ಸೀತಾರಾಮನ್ ಅವರ ಬೆಂಬಲದಿಂದ ಈ ದೂರದರ್ಶಿತ್ವದ ಯೋಜನೆಯನ್ನು ಕಾರ್ಯರೂಪಗೊಳಿಸಲಾಗುತ್ತಿದೆ.
ಚನ್ನಪಟ್ಟಣ NEWS DESK ನ.1 : ಕರ್ನಾಟಕ ಉಪಚುನಾವಣೆಯಲ್ಲಿ ಪ್ರತಿಷ್ಠೆಯ ಕಣವೆಂದೇ ಪರಿಗಣಿಸಲ್ಪಟ್ಟಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿರುಸಿನ ಪ್ರಚಾರ ಕೈಗೊಂಡರು. ಹೊಡಿಕೆ ಹೊಸಹಳ್ಳಿ ಗ್ರಾಮದಲ್ಲಿ ಮತದಾರರ ಮನವೊಲಿಸುವ ಪ್ರಯತ್ನ ಮಾಡಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಮಡಿಕೇರಿ NEWS DESK ನ.1 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಕೊಡವ ಕ್ವೆಸ್ಟ್ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು 2ನೇ ರಾಜ್ಯಗಳ ಮರು-ಸಂಘಟನೆ ಆಯೋಗವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಧರಣಿ ನಡೆಸಿದ ಪ್ರಮುಖರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಹಿರಿಯ ಆರ್ಥಿಕ ತಜ್ಞ, ಕೇಂದ್ರದ ಮಾಜಿ ಕಾನೂನು ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಪ್ರತಿಪಾದಿಸಿರುವಂತೆ 2ನೇ ರಾಜ್ಯಗಳ ಮರು-ಸಂಘಟನೆಯ ಆಯೋಗ ರಚನೆಗೆ ಕ್ರಮ ಕೈಗೊಳ್ಳಬೇಕು. ಸಿಎನ್ಸಿಯಿಂದ ಮಂಡಿಸಲಾದ ನಮ್ಮ ಸಂವಿಧಾನದ ಆರ್ಟಿಕಲ್ 244, 371 R/w 6ನೇ ಮತ್ತು 8ನೇ ಶೆಡ್ಯೂಲ್ನ ಅಡಿಯಲ್ಲಿ ಭೂ-ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಕ್ವೆಸ್ಟ್ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು 2 ನೇ ರಾಜ್ಯಗಳ ಮರು-ಸಂಘಟನೆ ಆಯೋಗದ ಅಗತ್ಯವಿದೆ. ಈ ಕುರಿತು ಸಿಎನ್ಸಿ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸುತ್ತಿದೆ. ಕೊಡವರ ಹಿತಾಸಕ್ತಿ ರಕ್ಷಿಸಲು ಸಂವಿಧಾನದ…






