ನಾಪೋಕ್ಲು ಡಿ.18 NEWS DESK : ಧಾನ್ಯಲಕ್ಷ್ಮಿಯನ್ನು ಮನೆಗೆ ಬರಮಾಡಿಕೊಳ್ಳುವ ಪುತ್ತರಿ ಹಬ್ಬವನ್ನು ನಾಲ್ಕುನಾಡು ವ್ಯಾಪ್ತಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಾಂಪ್ರದಾಯಿಕ ಆಚರಣೆಗಳೊಂದಿಗೆ ವಿವಿಧ ದೇವಾಲಯ, ಐನ್ ಮನೆ, ಕೊಡವ ಸಮಾಜಗಳಲ್ಲಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಕ್ಕಬ್ಬೆಯ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಹಬ್ಬದ ಮೊದಲ ಪೂಜೆ ನಡೆಯಿತು. ಬಳಿಕ ನಾಡಿನಲ್ಲೆಡೆ ಭತ್ತದ ಕದಿರಿಗೆ ಸಾಂಪ್ರದಾಯಿಕ ಪೂಜೆ ನೆರವೇರಿತು. ಪಾಡಿ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವಾಲಯದ ಸುತ್ತಮುತ್ತಲಿನ ಅಮ್ಮಂಗೇರಿಯ ವಿವಿಧ ಕುಟುಂಬಗಳ ಮಹಿಳೆಯರು ತಳಿಯಕ್ಕಿಬೊಳಕ್ ಹಿಡಿದು ದೇವಾಲಯಕ್ಕೆ ಪ್ರದಕ್ಷಣೆ ಮಾಡಿ ಆಗಮಿಸಿದರು. ನಂತರ ದುಡಿಕೊಟ್ ಪಾಟ್ನ್ನು ಕುಡಿಯರ ಮುತ್ತಪ್ಪ, ಜೀವನ್ ದೇವಯ್ಯ ಮತ್ತು ಬಳಗ ನೆರವೇರಿಸಿದರು. ದೇವರ ಸನ್ನಿಧಿಯಲ್ಲಿ ಪೊಗೇರ ಉಲ್ಲಾಸ್ ನಾಡಿನ ಮಳೆ, ಬೆಲೆ, ಸುಭಿಕ್ಷಗಾಗಿ ಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅಮ್ಮಂಗೇರಿಯ ಜ್ಯೋತಿಷ್ಯರು ಈ ಹಿಂದೆ ನಿರ್ಧರಿಸಿದಂತೆ ಅಂಬಲವಾಸಿ ಸುಬ್ರಮಣಿ ಅವರು ಬೆಳ್ಳಿಯ ಬಿಂದಿಗೆಯೊಂದಿಗೆ ಗದ್ದೆ ಕಡೆ ಸಾಗಿ ಪೊಗೇರ ಅಪ್ಪಣ್ಣ ಅವರ ಗದ್ದೆಯಲ್ಲಿ ಕದಿರಿಗೆ ಪೂಜೆ ನೆರವೇರಿಸಿ ಕದಿರನ್ನು…
ಲೇಖಕ: admin
ನಾಪೋಕ್ಲು ಡಿ.18 NEWS DESK : ಮೈಸೂರು ಗೌಡ ಸಮಾಜದಲ್ಲಿ ಕೊಡಗಿನ ಸಾಂಪ್ರದಾಯಿಕ ಸುಗ್ಗಿಹಬ್ಬ ಹುತ್ತರಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಆಚರಿಸಲಾಯಿತು. ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಹಾಗೂ ಚೆರಿಯಮನೆ ಉಮೇಶ್ ಅವರ ನೇತೃತ್ವದಲ್ಲಿ ಕದಿರು ತೆಗೆಯಲಾಯಿತು. ಸಮುದಾಯ ಬಂಧುಗಳಿಗೆ ಸಮಾಜದ ಸಭಾಂಗಣದಲ್ಲಿ ನೆರೆ ಮತ್ತು ಕದಿರು ವಿತರಿಸಲಾಯಿತು. ಇದಕ್ಕೂ ಮೊದಲು ಕಾರ್ಯಕ್ರಮಕ್ಕೆ ಆಗಮಿಸಿದ ಪ್ರತಿಯೊಬ್ಬರಿಗೂ ತಂಬಿಟ್ಟು ಪ್ರಸಾದ ವಿತರಿಸಲಾಯಿತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭರತನಾಟ್ಯ, ಸುಗ್ಗಿಕುಣಿತ, ಹುತ್ತರಿಹಾಡು ಮೊದಲಾದವು ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಸಮಾಜದ ಪದಾಧಿಕಾರಿಗಳಾದ ಕುದುಪಜೆ ಚಂದ್ರಶೇಖರ್, ಪೊನ್ನೆಟ್ಟಿ ನಂದ, ನಡುಮನೆ ಚಂಗಪ್ಪ, ನಡುಬೆಟ್ಟಿ ಲಕ್ಷ್ಮಣ, ನಿರ್ದೇಶಕರಾದ ಪಟ್ಟಡ ಶಿವಕುಮಾರ್, ಕೊಂಬಾರನ ಸುಬ್ಬಯ್ಯ, ಹೊಸೂರು ರಾಘವಯ್ಯ, ಕುಂಟುಪುನಿ ರಮೇಶ್, ಪಾಣತ್ತಲೆ ವಸಂತ, ತೋಟಂಬೈಲು ಇಂದಿರಾ, ಕುಂಟುಪುನಿ ಶೀಲಾ, ಸಮಾಜದ ಮಾಜಿ ಅಧ್ಯಕ್ಷ ತೋಟಂಬೈಲ್ ಮನೋಹರ್, ಕುದುಪಜೆ ಕುಶಾಲಪ್ಪ, ಮಾಜಿ ಸೈನಿಕ ಸಂಘದ ಅಧ್ಯಕ್ಷ ಚಂಡಿರ ಬಸಪ್ಪ, ಹೂಟ್ಕಳ್ಳಿ ಗೌಡ ಸಂಘದ ಅಧ್ಯಕ್ಷ ಪೊನ್ನಚ್ಚನ ಅಪ್ಪಯ್ಯ, ಕೊಡಗು ಗೌಡ…
ಚೆಟ್ಟಳ್ಳಿ ಡಿ.18 NEWS DESK : ಚೆಟ್ಟಳ್ಳಿ ಕೊಡವ ಸಮಾಜದ ವತಿಯಿಂದ ಚೆಟ್ಟಳ್ಳಿಯ ಮಂಗಳ ಸಭಾಂಗಣದಲ್ಲಿ ಸಂಭ್ರಮದ ಪುತ್ತರಿ ನಮ್ಮೆರ ಊರೊರ್ಮೆ ಕೂಟ ನಡೆಯಿತು. ತಳಿಯತಕ್ಕಿದೀಪ ಹಿಡಿದ ಮಹಿಳೆಯರು, ದುಡಿಕೊಟ್ಟ್ ಹಾಡಿನೊಂದಿಗೆ ಸಮಾಜದ ಅಧ್ಯಕ್ಷ ಮುಳ್ಳಂಡ ರತ್ತು ಚಂಗಪ್ಪ ಕುತ್ತಿಹಿಡಿದು ಸಾಂಪ್ರದಾಯಿಕವಾಗಿ ಸಭಾಂಗಣಕ್ಕೆ ಬರುವಾಗ ಮುಳ್ಳಂಡ ಪ್ರೇಮಾ ಅಯ್ಯಪ್ಪ ಅಕ್ಕಿಹಾಕಿ ಸ್ವಾಗತಿಸಿದರು. ಸಮಾಜದ ಉಪಾದ್ಯಕ್ಷರು ಹಾಗೂ ಹಿರಿಯರಾದ ಬಿದ್ದಂಡ ಮಾದಯ್ಯ, ರಾಧಮಾದಯ್ಯ ದಂಪತಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾಜದ ನಿದೇರ್ಶಕಿ ಮುಳ್ಳಂಡ ಮಾಯಮ್ಮ ತಮ್ಮಯ್ಯ ಪ್ರಾರ್ಥಿಸಿದರು. ಜೋಮಾಲೆ ಪೊಮ್ಮಕ್ಕಡ ಕೂಟದಿಂದ ಉಮ್ಮತಾಟ್, ಕೋಲಾಟ್ ಹಾಗೂ ವಾಲಗತಾಟ್ ಪ್ರದರ್ಶನ, ಕೊಡವ ಹಾಡುಗಾರಿಕೆ ನಡೆಯಿತು. ಪುರುಷರಿಗೆ ಹಾಗೂ ಮಹಿಳೆಯರಿಗೆ ಒಳಂಗಣ ಕ್ರೀಡೆ ನಡೆಯಿತು. ಮಧ್ಯಾಹ್ನ ಕಾರ್ಯಕ್ರಮ ಅಂಗವಾಗಿ ಊರಿನ ಹಿರಿಯರು ಹಾಗೂ ವಾಯುಪಡೆಯ ನಿವೃತ್ತ ಸೇನಾನಿ ಪುತ್ತರಿರ ಗಣೇಶ್ ಭೀಮಯ್ಯ ಗುರುಕಾರೋಣರಿಗೆ ಮೀದಿನೀರಿಟ್ಟು ಎಲ್ಲರಿಗೂ ಒಳಿತನ್ನು ಮಾಡಲೆಂದು ಪ್ರಾರ್ಥಿಸಿದರು. ಊರೊರ್ಮೆ ಕೂಟದ ಅಂಗವಾಗಿ ತಂಬಿಟ್ಟು ಹಾಗೂ ವಿಶೇಷ ಭೋಜನವನ್ನು ಏರ್ಪಡಿಸಲಾಗಿತ್ತು. ಮಹಿಳೆಯರು ಗದ್ದೆಯಿಂದ ತಂದ ಭತ್ತವನ್ನು…
ಮಡಿಕೇರಿ NEWS DESK ಡಿ.18 : ಸಂಪೂರ್ಣವಾಗಿ ಹದಗೆಟ್ಟಿರುವ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ರಸ್ತೆಯನ್ನು ಡಾಂಬರೀಕರಣಗೊಳಿಸಬೇಕೆAದು ಒತ್ತಾಯಿಸಿ ಗಾಳಿಬೀಡು, ಕಾಲೂರು, ವಣಚಲು, ಕೂಟುಹೊಳೆ, ಕೆ.ನಿಡುಗಣೆ ಹಾಗೂ ಹೆಬ್ಬೆಟ್ಟಗೇರಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮೂರನೇ ಮೈಲು ಜಂಕ್ಷನ್ ಬಳಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಬಂದು ಲಿಖಿತ ಭರವಸೆ ನೀಡುವಲ್ಲಿಯವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು. ಗಾಳಿಬೀಡು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಕಳೆದ ಹಲವು ವರ್ಷಗಳಿಂದ ಡಾಂಬರೀಕರಣವಾಗಿಲ್ಲ. ಹೊಂಡ ಗುಂಡಿಗಳಿoದ ಕೂಡಿರುವ ರಸ್ತೆಗೆ ತೇಪೆ ಹಾಕುವ ಕಾರ್ಯ ಮಾತ್ರ ನಡೆಯುತ್ತಿದೆ. ಈಗಲೂ ತೇಪೆ ಹಾಕುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದು, ಇದನ್ನು ಗ್ರಾಮಸ್ಥರು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು. ಹದಗೆಟ್ಟ ರಸ್ತೆ ಕಾಲೂರು, ವಣಚಲು, ಕೂಟುಹೊಳೆ, ಕೆ.ನಿಡುಗಣೆ, ಹೆಬ್ಬೆಟ್ಟಗೇರಿ, ಪ್ರಾಕೃತಿಕ ವಿಕೋಪದ ನೆರೆ ಸಂತ್ರಸ್ಥರ ಮನೆಗಳಿಗೆ ಹಾಗೂ ಮಡಿಕೇರಿ ನಗರವನ್ನು ಸಂಪರ್ಕಿಸುವ ರಸ್ತೆಯಾಗಿದೆ. ಈ ಭಾಗದಲ್ಲೇ ಜನಪ್ರಿಯ ಪ್ರವಾಸಿತಾಣ ಮಾಂದಲ್ ಪಟ್ಟಿ ಮತ್ತು ಹಲವು ಪ್ರತಿಷ್ಠಿತ ರೆಸಾರ್ಟ್ಗಳಿವೆ. ನಿತ್ಯ ಸಾವಿರಾರು ವಾಹನಗಳ…
ಮಡಿಕೇರಿ ಡಿ.18 NEWS DESK : ಹಲವಾರು ವರ್ಷಗಳಿಂದ ಹಾಕತ್ತೂರು ಗ್ರಾಮಸ್ಥರ ಬೇಡಿಕೆಯಾಗಿದ್ದ ಶಾಲಾ ಆಟದ ಮೈದಾನದ ಅಗಲೀಕರಣ ಕಾರ್ಯವು ಆರಂಭಗೊಂಡಿದ್ದು, ಶಾಸಕ ಎ.ಎಸ್.ಪೊನ್ನಣ್ಣ ಅವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಕತ್ತೂರು ಮೈದಾನದಲ್ಲಿ ನಡೆದ ಹಾಕತ್ತೂರು ಪ್ರೀಮಿಯರ್ ಲೀಗ್ ನ ವೇದಿಕೆಯಲ್ಲಿ ಮೈದಾನದ ಅಭಿವೃದ್ಧಿಗಾಗಿ ಅನುದಾನ ನೀಡುವ ಆಶ್ವಾಸನೆ ನೀಡಿದ್ದ ಶಾಸಕರು ನುಡಿದಂತೆ ನಡೆದು ಹಾಕತ್ತೂರು ಮೈದಾನದ ಕಾಮಗಾರಿಗೆ 20 ಲಕ್ಷ ಅನುದಾನ ನೀಡಿ ಕೆಲಸ ಕಾರ್ಯಗಳು ಇದೀಗ ಆರಂಭಗೊಂಡಿದೆ. ಗ್ರಾಮಸ್ಥರು ನುಡಿದಂತೆ ನಡೆದ ಶಾಸಕರಿಗೆ ಧನ್ಯವಾದ ತಿಳಿಸಿದ್ದಾರೆ.
ಜಮ್ಮು NEWS DESK ಡಿ.18 : ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಥುವಾ ಜಿಲ್ಲೆಯ ಶಿವನಗರ ಪ್ರದೇಶದ ಮನೆಯೊಂದರಲ್ಲಿ ಇದ್ದವರು ಮಲಗಿದ್ದಾಗ ದಟ್ಟ ಹೊಗೆ ತುಂಬಿಕೊoಡು, ಮನೆಯೊಳಗೆ ಬೆಂಕಿ ಕಾಣಿಸಿಕೊಂಡಿದೆ. ನಸುಕಿನ ಜಾವ 2.30ರ ಸುಮಾರಿಗೆ ಈ ಅಗ್ನಿ ಅವಘಡ ನಡೆದಿದೆ.
ಸುಂಟಿಕೊಪ್ಪ ಡಿ.18 NEWS DESK : ಮಾದಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಎಂ.ಜಿ.ಸೋಮಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾದಾಪುರ ಗ್ರಾ.ಪಂ ಅಧ್ಯಕ್ಷರಾಗಿದ್ದ ಮನುಬಿದ್ದಪ್ಪ ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನವು ಸಾಮಾನ್ಯ ಪುರುಷರ ಮೀಸಲಾತಿ ನಿಗದಿಯಾಗಿದ್ದು, ಮರುವಂಡ ಜಾಲಿ ಸೋಮಣ್ಣ ಹಾಗೂ ಕೆ.ಎ.ಲತೀಫ್ ನಾಮಪತ್ರ ಸಲ್ಲಿಸಿದರು. ಕೊನೆಯ ಹಂತದಲ್ಲಿ ಕೆ.ಎ.ಲತೀಫ್ ನಾಮಪತ್ರ ಹಿಂಪಡೆದಿದ್ದರಿಂದ ಚುನಾವಣಾ ಅಧಿಕಾರಿಯಾಗಿದ್ದ ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಎಂ.ಜಿ.ಸೋಮಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿದರು. ಮಾದಾಪುರ ಗ್ರಾ.ಪಂ.ಉಪಾಧ್ಯಕ್ಷ ಸುರೇಶಭಾವೆ, ಸದಸ್ಯರುಗಳಾದ ಕೆ.ಎ.ಲತೀಪ್, ಮನುಬಿದ್ದಪ್ಪ, ನಿರೂಪ, ಪಿ.ಡಿ.ಅಂತೋಣಿ(ತಂಗಚ್ಚ), ಮಾನಸ, ದಮಯಂತಿ, ಕೆ.ಸಿಶೀಲ, ಗಿರೀಶ, ಜೆರ್ಮಿ, ಭಾಗಿರಥಿ ಹಾಗೂ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನ, ಕಾರ್ಯದರ್ಶಿ ಅನಿತಾ, ಸಿಬ್ಬಂದಿಗಳಾದ ರವಿ, ಪ್ರೀತಿ ಉಪಸ್ಥಿತರಿದ್ದರು.
ಸಿದ್ದಾಪುರ ಡಿ.18 NEWS DESK : ನೆಲ್ಲಿಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಮುತ್ತಪ್ಪನ ಪುತ್ತರಿ ವೆಳ್ಳಾಟಂ ಶ್ರದ್ಧಾಭಕ್ತಿಯಿಂದ ನಡೆಯಿತು. ರಾತ್ರಿ ದೇವಾಲಯದ ಗದ್ದೆಯಿಂದ ಧಾನ್ಯಲಕ್ಷ್ಮಿಯ ಕದಿರು ತೆಗೆದು ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಹಂಚಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಅನ್ನ ಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ದೇವಾಲಯದ ಅಧ್ಯಕ್ಷ ಪಾಲಚಂಡ ಚೀಯಣ್ಣ, ಕಾರ್ಯದರ್ಶಿ ರಾಜನ್, ಉಪಾಧ್ಯಕ್ಷ ದಾಸನ್, ಎಸ್ಎನ್ಡಿಪಿ ಅಧ್ಯಕ್ಷ ವಿ.ಕೆ.ಲೋಕೇಶ್, ಮಾಜಿ ಕಾರ್ಯದರ್ಶಿ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕುಶಾಲನಗರ ಡಿ.18 NEWS DESK : ಕುಶಾಲನಗರ ಪಟ್ಟಣ ಒಳಚರಂಡಿ ಯೋಜನೆ ಕಾಮಗಾರಿ ಸದ್ಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಕುಶಾಲನಗರ ಪುರಸಭೆ ಸದಸ್ಯರಾದ ಡಿ.ಕೆ.ತಿಮ್ಮಪ್ಪ ತಿಳಿಸಿದ್ದಾರೆ. ಕಾವೇರಿ ಮಹಾ ಆರತಿ ಬಳಗದ ವತಿಯಿಂದ ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಸಹಯೋಗದೊಂದಿಗೆ ಹುಣ್ಣಿಮೆ ಅಂಗವಾಗಿ ನಡೆದ 167 ನೆಯ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪುರಸಭೆ ವತಿಯಿಂದ ಈಗಾಗಲೇ ಪಟ್ಟಣ ವಿವಿಧ ಬಡಾವಣೆಗಳಲ್ಲಿ ನೇರವಾಗಿ ನದಿಗೆ ಸೇರುತ್ತಿದ್ದ ಕಲುಷಿತ ನೀರನ್ನು ನೈಸರ್ಗಿಕವಾಗಿ ಯು ಜಿ ಡಿ ಕೊಳವೆಗಳ ಮೂಲಕ ಹಾಯಿಸಿ ನದಿ ನೇರವಾಗಿ ಕಲುಷಿತಗೊಳ್ಳುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಹಿಂದಿನ ಶಾಸಕ ಎಂ ಪಿ ಅಪ್ಪಚ್ಚು ರಂಜನ್ ಹಾಗೂ ಈಗಿನ ಕ್ಷೇತ್ರ ಶಾಸಕರಾದ ಡಾ ಮಂತರ್ ಗೌಡ ಒಳಚರಂಡಿ ಯೋಜನೆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿದ್ದು ಸದ್ಯದಲ್ಲೇ ಯೋಜನೆ ಪೂರ್ಣಗೊಂಡು ನದಿ ಕಲುಷಿತ ಮತ್ತು ಪಟ್ಟಣದ ಸ್ವಚ್ಛತೆಯ ಗುರಿ ಈ ಮೂಲಕ ಸಾಧನೆ ಸಾಧ್ಯವಾಗಲಿದೆ ಎಂದರು. ನಿರಂತರವಾಗಿ ಜೀವನದಿ ಕಾವೇರಿಗೆ…
ಮಡಿಕೇರಿ ಡಿ.18 NEWS DESK : 2024-25ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://sevasindhu.karnataka.gov.in ಆಗಿದೆ. ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ : ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುವುದು. ಘಟಕ ವೆಚ್ಚ ರೂ.1 ಲಕ್ಷ, ಸಹಾಯಧನ ರೂ. 50 ಸಾವಿರ, ಸಾಲ ರೂ. 50 ಸಾವಿರ. ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ : ಸ್ವಾವಲಂಬಿತ ಸಾರಥಿ ಯೋಜನೆಯಡಿ ಫುಡ್ಕಾರ್ಟ್ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕ್ಗಳ ಸಹಯೋಗದೊಂದಿಗೆ ಯೋಜನೆ ಅನುಷ್ಟಾನ. ಸಾಲದ ಮೊತ್ತಕ್ಕೆ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ. ಉಳಿದ ಮೊತ್ತ…






