ಲೇಖಕ: admin

ನಾಪೋಕ್ಲು ನ.21 NEWS DESK : ಮಡಿಕೇರಿ ತಾಲ್ಲೂಕು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ “ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ” ಎಂಬ ವಿಷಯದ ಕುರಿತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ನಡೆಯಿತು. ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಹಕಾರ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಸಹಕಾರ ಸಂಘಗಳ ಪಾತ್ರ ಹಾಗೂ ಉದ್ದೇಶಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಉತ್ತಮವಾಗಿ ವಿಷಯ ಮಂಡನೆ ಮಾಡಿದರು. ಸ್ಪರ್ಧಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಬಹುಮಾನ ಹಾಗೂ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಅಶೋಕ ಪೆರುಮುಂಡ, ನಿರ್ದೇಶಕರುಗಳಾದ ಪ್ರಮೀಳಾ ಬಂಗಾರಕೋಡಿ, ಪುಷ್ಪಾವತಿ ಯಾಪಾರೆ, ಎನ್.ವಿ.ಶೇಷಪ್ಪ, ಪಿ.ಟಿ.ಜಯರಾಮ, ಗ್ರಾ.ಪಂ ಸದಸ್ಯರಾದ ಉದಯಚಂದ್ರ ಕುಂಬಳಚೇರಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ…

Read More

ದೆಹಲಿ ನ.21 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ನಬಾರ್ಡ್ ನೆರವು ಕಡಿತಗೊಳಿಸದಂತೆ ಮನವಿ ಮಾಡಿದರು. ಕಳೆದ ಸಾಲಿನಲ್ಲಿ ನಬಾರ್ಡ್ ನೆರವು 5400 ಕೋಟಿ ರೂ ಗಳಷ್ಟಿದ್ದು, ಈ ಬಾರಿ 2400 ಕೋಟಿ ರೂಗಳಿಗೆ ಕಡಿತಗೊಳಿಸಲಾಗಿದೆ.  ಈ ಕುರಿತು ನಿರ್ಮಲಾ ಸೀತಾರಾಮನ್ ಅವರ ಗಮನ ಸೆಳೆದು ಈ ವ್ಯತ್ಯಾಸವನ್ನು ಸರಿಪಡಿಸಲು ಕೋರಿದರು. ಈ ನಿಯೋಗದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಸಚಿವರಾದ ಬೈರತಿ ಸುರೇಶ್,  ಚೆಲುವರಾಯಸ್ವಾಮಿ, ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು ಹಾಗೂ ಶಾಸಕರು ಉಪಸ್ಥಿತರಿದ್ದರು.

Read More

ನಾಪೋಕ್ಲು ನ.21 NEWS DESK : ಪ್ರತಿಭಾ ಸಂಗಮ ಸ್ಪರ್ಧೆಯಲ್ಲಿ ಮರ್ಕಝುಲ್ ಹಿದಾಯ ಕೊಟ್ಟಮುಡಿ ಮದರಸವು ಪಾಲ್ಗೊಂಡು ಫಸ್ಟ್ ರನ್ನರ್ ಅಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ. ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ ನಾಪೋಕ್ಲು ವಲಯದ ವತಿಯಿಂದ ಕುಂಜಿಲ ಗ್ರಾಮದ ರೌಳತುಲ್ ಉಲೂಂ ಮದರಸದಲ್ಲಿ ನಡೆದ ಪ್ರತಿಭಾ ಸಂಗಮ ಕಾರ್ಯಕ್ರಮದಲ್ಲಿ ಒಟ್ಟು ಹತ್ತು ಮದರಸಗಳ 40 ಸ್ಪರ್ಧೆಗಳಲ್ಲಿ 250ಕ್ಕೂ ಅಧಿಕ ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ನ.21 NEWS DESK : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆದ ಜಿಲ್ಲಾಮಟ್ಟದ ಸಾಂಸ್ಕೃತಿಕ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದೇವಂಗೋಡಿ ಭವಿತ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳ ಸಾಧನೆಗೆ ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ಕಾಲೇಜಿನ ಪ್ರಾಂಶುಪಾಲ ದಾಯನ ರಾಮಕೃಷ್ಣ ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ನ.21 NEWS DESK : ಪತ್ರಕರ್ತ ಹಾಗೂ ಮಾಧ್ಯಮ ಕ್ಷೇತ್ರಕ್ಕೆ ಕಾಲಿಡುವ ತುಡಿತ ಉಳ್ಳವರು ಸಾಮಾಜಿಕ ಬದ್ಧತೆ, ಕಳಕಳಿಯನ್ನು ಹೊಂದಿರುವುದು ಅತ್ಯಗತ್ಯ ಎಂದು ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರ ಪ್ರತಿಪಾದಿಸಿದರು. ನಗರದ ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಎಫ್.ಎಂ.ಕೆ.ಎಂ.ಸಿ. ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಮಾಧ್ಯಮ ಮಾಹಿತಿ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.  ಕಲೆ, ಕೌಶಲ್ಯ, ವಿಶೇಷ ಆಸಕ್ತ್ತಿ ಇದ್ದರೆ ಮಾತ್ರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ನೆಲೆಯೂರಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಾಗಲೇ ಕ್ಷೇತ್ರದ ಕುರಿತು ಅಭಿರುಚಿ ಬೆಳೆಸಿಕೊಳ್ಳಬೇಕು. ನಿತ್ಯ ಪತ್ರಿಕೆ ಓದಬೇಕು. ಸುದ್ದಿ ವಾಹಿನಿಗಳನ್ನು ಗಮನಿಸಬೇಕು. ಜಾಗತಿಕ ವಿದ್ಯಮಾನಗಳ ಬಗ್ಗೆ ಅರಿತುಕೊಳ್ಳಬೇಕು. ಈ ರೀತಿಯ ಕಾರ್ಯಾಗಾರ ಹಾಗೂ ಪ್ರಾಯೋಗಿಕ ಕಲಿಕೆ ವಿದ್ಯಾರ್ಥಿಗಳ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಿಸಿದರು. …

Read More

ಗಯಾನಾ ನ.21 NEWS DESK  : ಗಯಾನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಯಾನಾ ಅಧ್ಯಕ್ಷರು ಮತ್ತು ಕುಟುಂಬಸ್ಥರೊಂದಿಗೆ ʼತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವʼ (ಏಕ್ ಪೇಡ್ ಮಾ ಕೆ ನಾಮ್) ಅಭಿಯಾನದಲ್ಲಿ ಪಾಲ್ಗೊಂಡರು.

Read More

  ವಿರಾಜಪೇಟೆ ನ.21 NEWS DESK : ಕನ್ನಡ ಕಾರ್ಯಕ್ರಮಗಳು ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೆ ಪ್ರತಿದಿನ ಕನ್ನಡ ಪರವಾದ ಕಾರ್ಯಕ್ರಮಗಳು ಜರುಗಬೇಕು. ಕನ್ನಡವನ್ನು ಅಭಿವೃದ್ದಿಪಡಿಸುವಂತಾಗಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ ಸಂಗಪ್ಪ ಅಲೂರ ಅಭಿಪ್ರಾಯ ವ್ಯಕ್ತಪಡಿಸಿದರು. ಸೈಂಟ್ ಆನ್ಸ್ ಪದವಿ ಕಾಲೇಜು ಕನ್ನಡ ಭಾಷಾ ವಿಭಾಗ ಸಾಹಿತ್ಯ ಸಂಘ ಕನ್ನಡ ವಿದ್ಯಾರ್ಥಿ ಬಳಗ ಮತ್ತು ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜು ಸಭಾಂಗಣದಲ್ಲಿ ನಡೆದ ನುಡಿನೃತ್ಯ ಸಂಭ್ರಮ -24 ಮತ್ತು ಪುರಾತನ ವಸ್ತುಗಳ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಸಾವಿರಾರು ವರ್ಷಗಳ ಇತಿಹಾಸ ಇರುವ ಕನ್ನಡ ಭಾಷೆಯು ಧೀಮಂತ ಭಾಷೆಯಾಗಿದೆ. ಕನ್ನಡ ಭಾಷೆಗೆ ಹಲವಾರು ಖ್ಯಾತನಾಮ ಕವಿಗಳು ತಮ್ಮದೇಯಾದ ಶೈಲಿಯಲ್ಲಿ ಭಾಷೆಯನ್ನು ಧೀಮಂತಗೊಳಿಸಿದ್ದಾರೆ. ಅದೇ ರೀತಿ ಕನ್ನಡ ಸಾಹಿತ್ಯಕ್ಕೆ ವಿಶ್ವ ಮನ್ನಣೆಯನ್ನು ಗಳಿಸಿಕೊಟ್ಟಿದ್ದಾರೆ.  ಪ್ರಸ್ತುತವಾಗಿ ರಾಜ್ಯದ ಬೃಹತ್ ನಗರಗಳಲ್ಲಿ ಕನ್ನಡ ಭಾಷೆಯನ್ನಾಡಲು ಹಿಂಜರಿಕೆ ವ್ಯಕ್ತವಾಗುತ್ತಿದೆ. ಕಾರಣ…

Read More

ಮಡಿಕೇರಿ ನ.21 NEWS DESK : ಪ್ರಸಕ್ತ (2024-25) ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ನ.29 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.

Read More

ಮಡಿಕೇರಿ ನ.21 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‍ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.5 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://bcwd.karnataka.gov.in/ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಪ್ರವರ್ಗ-2ಎ, 3ಎ, 3ಬಿ ರೂ. 8 ಲಕ್ಷ ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಹಾಗೂ ಷರತ್ತು ನಿಬಂಧನೆಗೆ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಿ ಕಚೇರಿ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ನ.21 NEWS DESK : ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯು ನೆರವಂಡ ಉಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಮಿತಿಗೆ ಒಟ್ಟು 17 ಕಡತಗಳನ್ನು ಮಂಡಿಸಿದ್ದು, ಈ ಪೈಕಿ 16 ಕಡತಗಳನ್ನು ಮಂಜೂರಾತಿಗೆ ಶಿಫಾರಸ್ಸು ಮಾಡಿ ಆಕ್ಷೇಪಣೆ ಅವಧಿಗೆ ಸಲ್ಲಿಸಲಾಯಿತು. ಸದಸ್ಯರಾದ ತುಳಸಿ ಗಾಂಧಿ ಪ್ರಸಾದ್, ಕೇಟೋಳಿ ಮೋಹನ್ ರಾಜ್, ಎಚ್.ಬಿ.ರಘು, ಸದಸ್ಯ ಕಾರ್ಯದರ್ಶಿಯಾದ ತಹಶೀಲ್ದಾರ್ ಪ್ರವೀಣ್ ಕುಮಾರ್ ಪಿ.ಸಿ., ಜಿಲ್ಲಾ ಭೂಮಿ ಸಮಾಲೋಚಕರು ಹಾಗೂ ಕಂದಾಯ ಅಧಿಕಾರಿಗಳು ಹಾಜರಿದ್ದರು.

Read More